Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕೊಲ್ಹಾರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಬೃಹತ್ ಹಿಂದೂ ಸಮ್ಮೇಳನ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಹುಟ್ಟು ಇಲ್ಲದ, ಸಾವು ಬರದ ಮೃತ್ತ್ಯುಂಜಯವಾದ ಧರ್ಮವೇ ಸನಾತನ ಹಿಂದೂ ಧರ್ಮವಾಗಿದ್ದು, ಇದು ವಿಶ್ವದ ಶ್ರೇಷ್ಠ ಧರ್ಮವಾಗಿದ್ದು ಸಿಂಧೂ ನಾಗರಿಕತೆಯ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಪ್ರಮುಖ ಧಾಮೋದರಜಿ ಹೇಳಿದರು.ಪಟ್ಟಣದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಳೀಯ ಘಟಕದ ವತಿಯಿಂದ ಆಯೋಜಿಸಲಾದ ಬೃಹತ್ ಹಿಂದೂ ಸಮ್ಮೇಳನದಲ್ಲಿ ಬೌದ್ಧಿಕ ಪ್ರಮುಖರಾಗಿ ಮಾತನಾಡಿದ ಅವರು, ಭಾರತಭೂಮಿ ತ್ಯಾಗ, ಆಶ್ರಯ ಮತ್ತು ಸಂಸ್ಕಾರ ನೀಡುವ ಪವಿತ್ರ ನೆಲವಾಗಿದ್ದು ವಿಶ್ವಕ್ಕೆ ಮಾದರಿ ರಾಷ್ಟ್ರವಾಗಿದೆ ಎಂದರು.ಗುರು ಪರಂಪರೆ ಹಾಗೂ ಧರ್ಮ ಮಾರ್ಗದ ಮೂಲಕ ಗುರುಕುಲ ಪದ್ಧತಿಯ ಶಿಕ್ಷಣ ವ್ಯವಸ್ಥೆಯಿಂದ ಜ್ಞಾನ, ಆರೋಗ್ಯ ಹಾಗೂ ವಿಜ್ಞಾನ ತಿಳುವಳಿಕೆಯನ್ನು ನೀಡುವ ಶೈಕ್ಷಣಿಕ ಕೇಂದ್ರಗಳಲ್ಲಿ ಮಕ್ಕಳಿಗೆ ಉತ್ತಮ ವಿದ್ಯೆ ದೊರಕುವಂತಾಗಬೇಕು ಎಂದು ಹೇಳಿದರು.ಸಾಮಾಜಿಕ ಸಾಮರಸ್ಯದ ಮೂಲಕ ಜಾತಿ ಪದ್ದತಿಯನ್ನು ಹೋಗಲಾಡಿಸಿ ಎಲ್ಲರೂ ಭಾರತಮಾತೆಯ ಮಕ್ಕಳು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ಹಿಂದೂ ಧರ್ಮದ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ರಾಜ್ಯಾದ್ಯಂತ ಸೂರ್ಯನ ತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ತೇವಾಂಶ ಕಡಿಮೆಯಾಗಿ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗಿರುವುದರಿಂದ ಮನುಷ್ಯರು ಮಾತ್ರವಲ್ಲದೆ, ಮೂಕಪ್ರಾಣಿ ಮತ್ತು ಪಕ್ಷಿಗಳು ನೀರಿಲ್ಲದೆ ತತ್ತರಿಸುತ್ತಿರುವ ಕಠಿಣ ಪರಿಸ್ಥಿತಿ ಕಂಡು ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ಇಲ್ಯಾಸ್ ಪಟೇಲ್ ಅವರು ಪ್ರಾಣಿ-ಪಕ್ಷಿಗಳಿಗೆ ನೀರುಣಿಸುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.ಬತ್ತಿದ ಕೆರೆ ಬಾವಿಗಳು ಕಂಗಾಲಾದ ಜೀವಿಗಳು ಹಿಂದೆ ಹಳ್ಳ, ಕೊಳ್ಳಗಳು, ಕೆರೆ, ಕುಂಟೆಗಳು ಸಮೃದ್ಧವಾಗಿರುತ್ತಿದ್ದವು. ಆದರೆ ಇಂದು ನಗರೀಕರಣ ಹಾಗೂ ಮಳೆಯ ಅಭಾವದಿಂದ ಜಲಮೂಲಗಳು ಬರಿದಾಗಿವೆ. ಬಿಸಿಲಿನ ಝಳಕ್ಕೆ ಹಾರಾಡುವ ಹದ್ದು, ಕಾಗೆ, ಪಾರಿವಾಳಗಳು ಬಸವಳಿದು ನೆಲಕ್ಕೆ ಬೀಳುತ್ತಿವೆ. ಇಂತಹ ಸಂದಿಗ್ಧ ಸಮಯದಲ್ಲಿ ಇಲ್ಯಾಸ್ ಪಟೇಲ್ ಅವರ ಈ ಸೇವೆ ಪ್ರಕೃತಿ ಸಂರಕ್ಷಣೆಗೆ ದೊಡ್ಡ ಕೊಡುಗೆಯಾಗಿದೆ.ಸದಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಪಟೇಲ್ ಅವರು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಈ ಸೇವೆಯನ್ನು ಆರಂಭಿಸಿದ್ದು ಸಾರ್ವಜನಿಕರು ಬಳಸಿ ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸಿ, ಅವುಗಳನ್ನು ಮರುಬಳಕೆ ಮಾಡಿ ಅವುಗಳಲ್ಲಿ ನೀರು ತುಂಬಿಸಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಬಲಿಷ್ಠಗೊಂಡಿದ್ದು, ಬಡಜನರ ಜೀವನದಲ್ಲಿ ನೆಮ್ಮದಿ ಮೂಡಿದೆ ಎಂದು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕೊಲ್ಹಾರ ತಾಲೂಕು ಅಧ್ಯಕ್ಷ ಸಂತೋಷ್ ಗಣಾಚಾರಿ ಹೇಳಿದರು.ತಾಲೂಕು ಪಂಚಾಯಿತಿ ವತಿಯಿಂದ ತಾಲೂಕಿನ ಹಳೇರೊಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಬುಧವಾರ ಆಯೋಜಿಸಿದ್ದ ‘ಪಂಚ ಗ್ಯಾರಂಟಿ ಯೋಜನೆಗಳ ಅರಿವು’ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಹಿಳೆಯರು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿಯಲು ಅವಕಾಶ ಕಲ್ಪಿಸಿದೆ. ಪಂಚ ಗ್ಯಾರಂಟಿ ಯೋಜನೆಗಳು ಅದರಲ್ಲಿ ಪ್ರಮುಖವಾಗಿದ್ದು, ಬಡವರು ಹಾಗೂ ಮಹಿಳೆಯರ ಬದುಕಿಗೆ ಸಹಕಾರಿಯಾಗಿವೆ ಎಂದು ಹೇಳಿದರು.ಪಂಚ ಗ್ಯಾರಂಟಿ ಯೋಜನೆಗಳಿಂದ ಯಾರಾದರೂ ವಂಚಿತರಾಗಿದ್ದರೆ ಸೂಕ್ತ ದಾಖಲೆಗಳನ್ನು ಸಲ್ಲಿಸಿದರೆ ಸಮಸ್ಯೆ ಪರಿಹರಿಸಲಾಗುವುದು ಎಂದರು.ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಭಾರತಿ ಹಡಪದ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ನೆರವು…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿ | ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಬುಧವಾರ ಸ್ಪಷ್ಪಪಡಿಸಿದ್ದಾರೆ.ನಗರದ ಆಹಾರ ಭವನದಲ್ಲಿ IOC ,BPC,HPC,GAIL ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾತನಾಡಿದ ಸಚಿವರು, ಅರಬ್ ರಾಷ್ಟ್ರಗಳಾದ ಯುಎಸ್ಎ , ಗಲ್ಪ್ ರಷ್ಯಾದ ದೇಶಗಳಿಂದ ನಮ್ಮ ದೇಶಕ್ಕೆ ಅನಿಲ ಉತ್ಪನ್ನಗಳನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ದದ ಕಾರಣದಿಂದ ಅನಿಲದ ವೆಸೆಲ್ (ಶಿಪ್ ಗಳಿಗೆ) ಹಾನಿ ಉಂಟಾದ ಹಿನ್ನಲೆಯಲ್ಲಿ ನಮಗೆ ಅನಿಲ ಸಮಸ್ಯೆ ಉಂಟಾಗಿದ್ದು ಗ್ರಾಹಕರು ಯಾವುದೆ ಆತಂಕಕ್ಕೆ ಒಳಗಾಗಬಾರದು ಎಂದರು.ಜನರು ಆತಂಕ ಪಡಬೇಕಾಗಿಲ್ಲ. ಕೇಂದ್ರ ಸರ್ಕಾರದ ಸೂಚನೆಯಂತೆ ಒಂದು ಕುಟುಂಬದ ಬಳಕೆಗೆ 25 ದಿನಕ್ಕೆ…
ಒಳಮೀಸಲಾತಿ ಹಂಚಿಕೆ ಮಾಡಿದ ನಂತರವೇ ನೇಮಕಾತಿ ಭರ್ತಿ ಮಾಡಲು ಆಗ್ರಹ | ಬೆಂಗಳೂರಿನ ಪ್ರತಿಭಟನೆಯಲ್ಲಿ ಭಾಗಿ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಹಂಚಿಕೆ ಮಾಡಿದ ನಂತರವೇ ನೇಮಕಾತಿ ಭರ್ತಿ ಮಾಡಬೇಕು ಎಂದು ಬಿಗಿಪಟ್ಟು ಹಿಡಿದಿರುವ ಮಾದಿಗ ಸಮುದಾಯ ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ಒಳಮೀಸಲಾತಿ ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆರುವ ನಿಟ್ಟಿನಲ್ಲಿ ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕಿನ ಮಾದಿಗ ಸಮುದಾಯದ ಮುಖಂಡರು ಸಭೆ ನಡೆಸಿ, ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ ಎರಡು ತಾಲೂಕಿನ ಮಾದಿಗ ಸಮುದಾಯದ ಜನರು ಭಾಗವಹಿಸಿ, ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಯಿತು.ಒಳಮೀಸಲಾತಿ ಗೊಂದಲವನ್ನು ಬಗೆಹರಿಸುವರೆಗೂ 56,432 ಹುದ್ದೆಗಳ ನೇಮಕ ಪ್ರಕ್ರಿಯೆ ಆರಂಭಿಸಬಾರದು. ವಿಶೇಷ ಸಂಪುಟ ಸಭೆಯಲ್ಲಿ ಆಂಧ್ರಪ್ರದೇಶ, ತೆಲಂಗಾಣ ಮಾದರಿಯಲ್ಲೇ ಒಳಮೀಸಲಾತಿ ಸಮರ್ಪಕ ಅನುಷ್ಠಾನದ ನಿರ್ಧಾರ ಕೈಗೊಂಡು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಚನ ಕಲ್ಯಾಣ ಎಂಬ ಅಹೋರಾತ್ರಿ ಒಂಬತ್ತು ಗಂಟೆ ಅವಧಿಯ ನಾಟಕ ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಏರ್ಪಡಿಸಲು ಉದ್ದೇಶಿಸಿದ್ದು, ನುರಿತ ಹಾಗೂ ಆಸಕ್ತ ಯುವಕ-ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು, ಗಾಯಕರಿಂದ ಅರ್ಜಿ ಅಹ್ವಾನಿಸಲಾಗಿದೆ.೧೮ ರಿಂದ ೪೦ ವರ್ಷ ವಯೋಮಿತಿಯಲ್ಲರುವ, ರಂಗ ಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಅದ್ಯತೆ ನೀಡಲಾಗುವುದು.ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ ೨೦ ರೊಳಗಾಗಿ ಸದಸ್ಯ ಕಾರ್ಯದರ್ಶಿಗಳು, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ,ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-೫೬೦೦೫೬ ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ತಲುಪುವಂತೆ ಅಥವಾ ಇಮೇಲ್ ವಿಳಾಸ: kanakaresearchcentre@gmail.com ದ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳವರೆಗೆ ಪೂರ್ಣಕಾಲಿಕವಾಗಿ ತರಬೇತಿ-ಪ್ರದರ್ಶನಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿದೆ. ಅರ್ಜಿ ನಮೂನೆಯನ್ನು ಇಲಾಖೆಯ ವೆಬ್ ಸೈಟ್ kannadasiri.karnataka.gov.in ನಲ್ಲಿ ಪಡೆಯಬಹುದು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:೯೪೪೮೫೩೮೬೨೦ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ರಾಜ್ಯ ಹಾಗೂ ಕೇಂದ್ರ ಸರಕಾರಗಳಲ್ಲಿ ದೀರ್ಘಕಾಲದಿಂದ ಖಾಲಿ ಉಳಿದಿರುವ ಸರಕಾರಿ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಜಮಖಂಡಿಯ ಉಪವಿಭಾಗಾಧಿಕಾರಿಗಳ ಕಾರ್ಯಾಲಯದ ಎದುರುಗಡೆ ಯುವ ಅಧಿವೇಶನ ಆಯೋಜಿಸಲಾಯಿತು.ಈ ಅಧಿವೇಶನದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ ಉದ್ಯೋಗಾ ಕಾಂಕ್ಷಿ ಯುವಕರು ಹಾಗೂ ಚಿಂತಕರು ಭಾಗವಹಿಸಿ, ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬ, ಖಾಲಿ ಹುದ್ದೆಗಳ ಹೆಚ್ಚಳ, ಪರೀಕ್ಷಾ ವ್ಯವಸ್ಥೆಯ ಅಸಮರ್ಪಕತೆ ಸೇರಿದಂತೆ ಹಲವು ಪ್ರಮುಖ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಿದರು.ರಾಜ್ಯದ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.84 ಲಕ್ಷ ಸರಕಾರಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ಕೇಂದ್ರ ಸರಕಾರದ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 9.64 ಲಕ್ಷ ಹುದ್ದೆಗಳನ್ನು ಕೂಡ ಶೀಘ್ರದಲ್ಲಿ ಭರ್ತಿ ಮಾಡಬೇಕು. ಕೆಪಿಎಸ್ಸಿ, ಕೆಇಎ, ಕೆಎಸ್ಪಿ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ನೇಮಕಾತಿ ಪ್ರಾಧಿಕಾರಗಳು ಪ್ರತಿ ವರ್ಷ ಖಾಲಿ ಹುದ್ದೆಗಳ ವಿವರ ಮತ್ತು ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಪ್ರಕಟಿಸಿ ನಿಗದಿತ ವೇಳಾಪಟ್ಟಿಯಂತೆ ನೇಮಕಾತಿ ಪ್ರಕ್ರಿಯೆ…
ಬಿ. ಎಲ್. ಡಿ. ಇ. ನೂತನ ಕಲಾಮಹಾವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಪುರುಷ ಪ್ರಧಾನ ಸಮಾಜದಲ್ಲಿ ಎಂಥದ್ದೇ ಸಮಸ್ಯೆಗಳು ಎದುರಾದರು ಅವುಗಳನ್ನು ನೀಗಿಸುವ ಶಕ್ತಿ ಮಹಿಳೆಗೂ ಇದೆ ಎಂದು ಶಿಕ್ಷಕಿ-ಸಾಹಿತಿ ಕೆ. ಸುನಂದಾ ಅವರು ಹೇಳಿದರು.ಪಟ್ಟಣದ ಬಿ. ಎಲ್. ಡಿ. ಇ. ನೂತನ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಮಹಿಳೆ ಆದವಳು ಎಂದಿಗೂ ದುರ್ಬಲಳಲ್ಲ. ಅವಳು ಪುರುಷನಷ್ಟೇ ಸರಿ ಸಮಾನವಾದ ಎಲ್ಲ ರೀತಿಯ ಕೆಲಸ ಕಾರ್ಯಗಳು ಮಾಡುವ ಅಲ್ಲದೆ, ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕುವ ಹಾಗೂ ಸವಾಲುಗಳನ್ನು ಎದುರಿಸುವ ಧೀಶಕ್ತಿ ಅವಳಲ್ಲಿದೆ. ಹೆಣ್ಣು ಕುಟುಂಬದ ಅಥವಾ ಅಡುಗೆ ಮನೆಗೆ ಮಾತ್ರ ಸೀಮಿತಳಲ್ಲ. ಇವತ್ತು ಜಗತ್ತಿನ ಎಲ್ಲಾ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುವ ಮೂಲಕ ಸೈ ಎನಿಸಿಕೊಂಡಿದ್ದಾಳೆ. ಯುವತಿಯರಾದ ನೀವು ತಮ್ಮ ವಿದ್ಯಾಭ್ಯಾಸದೊಂದಿಗೆ ಎದುರಾಗುವ ಎಲ್ಲ ರೀತಿಯ ಶೈಕ್ಷಣಿಕ ಸಮಸ್ಯೆಗಳಾಗಲಿ, ಕೌಟುಂಬಿಕ ಸಮಸ್ಯೆಗಳಾಗಲಿ, ಸಾಮಾಜಿಕ ಸಮಸ್ಯೆಗಳಾಗಲಿ, ಇವೆಲ್ಲವುಗಳಿಗೂ ಧೈರ್ಯದಿಂದ ಎದುರಿಸುವ…
ವಿಜಯಪುರದಲ್ಲಿ ಮಹಿಳಾ ಪತ್ರಕರ್ತೆಯರಿಂದ ಎಡಿಸಿ ಡಾ.ಔದ್ರಾಮ ಅವರಿಗೆ ಮನವಿ ಮೂಲಕ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ವಾರ್ತಾಧಿಕಾರಿಯವರ ವಿರುದ್ಧ ಇತ್ತೀಚೆಗೆ ಕೇಳಿಬಂದಿರುವ ಆಪಾದನೆಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ಪರಿಶೀಲನೆ ನಡೆಸಿ ವಾಸ್ತವ ಸ್ಥಿತಿಯನ್ನು ಅರಿತುಕೊಳ್ಳುವಂತೆ ಆಗ್ರಹಿಸಿ ಜಿಲ್ಲೆಯ ಮಹಿಳಾ ಸಂಪಾದಕಿಯರು ಹಾಗೂ ಮಹಿಳಾ ಪತ್ರಕರ್ತೆಯರು ಜಿಲ್ಲಾಧಿಕಾರಿಗಳಿಗೆ ಬುಧವಾರ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಮೂಲಕ ಮನವಿ ಸಲ್ಲಿಸಿದ್ದಾರೆ.ವಿಜಯಪುರ ಜಿಲ್ಲೆಯ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಂಪಾದಕಿಯರು ಮತ್ತು ಮಹಿಳಾ ಪತ್ರಕರ್ತೆಯರು ಹಲವು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಸಮಾಜದ ಹಿತಕ್ಕಾಗಿ ಸತ್ಯಾಧಾರಿತ ಸುದ್ದಿಗಳನ್ನು ಪ್ರಕಟಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.ಜಿಲ್ಲಾ ವಾರ್ತಾಧಿಕಾರಿಯವರ ವಿರುದ್ಧ ಕೇಳಿಬಂದಿರುವ ಆರೋಪಗಳು ನಮ್ಮ ಗಮನಕ್ಕೆ ಬಂದಿದ್ದರೂ, ಇಲಾಖೆಯೊಂದಿಗೆ ದೀರ್ಘಕಾಲದಿಂದ ಸಂಪರ್ಕದಲ್ಲಿರುವ ನಮಗೆ ಅವರಿಂದ ಯಾವುದೇ ರೀತಿಯ ಅಸಭ್ಯ ವರ್ತನೆ ಅಥವಾ ಅಸಮರ್ಪಕ ನಡೆನುಡಿ ಕಂಡುಬಂದಿಲ್ಲ ಎಂದು ಮಹಿಳಾ ಪತ್ರಕರ್ತೆಯರು ಸ್ಪಷ್ಟಪಡಿಸಿದ್ದಾರೆ.ಪ್ರಸ್ತುತ ಜಿಲ್ಲಾ ವಾರ್ತಾಧಿಕಾರಿಯವರು ನಿಷ್ಠಾವಂತ ಹಾಗೂ ಕರ್ತವ್ಯನಿಷ್ಠ ಅಧಿಕಾರಿಯಾಗಿ ಪರಿಚಿತರಾಗಿದ್ದು, ಅವರು ಕಾರ್ಯನಿರ್ವಹಿಸಿದ ಸ್ಥಳಗಳಲ್ಲಿ ಉತ್ತಮ ಹೆಸರು…
ಲೇಖನ- ಡಾ.ಶಶಿಕಾಂತ ಪಟ್ಟಣರಾಮದುರ್ಗ – ಪುಣೆ ಉದಯರಶ್ಮಿ ದಿನಪತ್ರಿಕೆ ಬಸವೋತ್ತರ ಕಾಲದ ಹತ್ತೊಂಬತ್ತನೆಯ ಶತಮಾನದ ಮಹಾತಪಸ್ವಿ ಶ್ರೀ ಅಥಣಿಯ ಮುರುಗೇಂದ್ರ ಸ್ವಾಮಿಗಳ ಪಡಿನೆರಳು ಅವರ ಕೃಪಾಕಟಾಕ್ಷದಲ್ಲಿ ಲಿಂಗ ಹಸ್ತದ ಆಶೀರ್ವಾದದಿಂದ ಜಗವ ಬೆಳಗುವ ಧೈತ್ಯ ಚೇತನ ರಾಜಯೋಗಿ ಬೀಳೂರು ಗುರುಬಸವ ಸ್ವಾಮಿಗಳು.ಕಲಬುರ್ಗಿ ಸಮೀಪದ ಹತ್ತಿರವಿರುವ ಹಂಗರಗಿ ಎಂಬ ಊರು ಇದೆ. ಆ ಊರಿನ ಶ್ರೇಷ್ಠ ಸದ್ಗುಣ ಮಣಿಯಾದ ರಾಮನಗೌಡ ಮತ್ತು ಚೆನ್ನಮ್ಮ ಎಂಬ ಲಿಂಗಾಯತ ಬಣಜಿಗ ದಂಪತಿಗಳ ಉದರದಿಂದ ಜನಿಸಿ ಬಂದ ಶಿಶುವೇ ಶ್ರೀ ಗುರುಬಸವ ಶಿವಯೋಗಿಗಳು.1843ರಲ್ಲಿ ರಾಮನಗೌಡ ಮತ್ತು ಚೆನ್ನಮ್ಮನ ಉದರದಿಂದ ಜನಿಸಿದ ಮಗುವಿನ ಮೊದಲ ಹೆಸರು. ಈ “ಜೀವಪ್ಪ” ಎಂಬ ಮಗು ಬಡ ಕುಟುಂಬದಲ್ಲಿ ನಾಲ್ಕನೆಯವ. ಈ ಮಗು ಅತ್ಯಂತ ಚಿರದ್ರೂಪಿ, ಸುಗುಣ ಚಾಣಾಕ್ಷ ದಷ್ಟ ಪುಷ್ಟ ಚುರುಕಾಗಿದ್ದನು. ನೋಡುವವರ ಕಣ್ಮನಗಳನ್ನು ಸೆಳೆಯುವ ಆಕರ್ಷಕ ಬಾಲಕ ಜೀವಪ್ಪನದು. ಬಾಲ್ಯ ಮತ್ತು ಬಡತನಬಾಲಕ ಜೀವಪ್ಪನು ಉಂಡು ತಿಂದು ಅಡ್ಡಾಡುವ ವಯಸ್ಸಿನಲ್ಲಿ (4-5 ವರ್ಷ) ಹಂಗರಗಿ ಗ್ರಾಮದಲ್ಲಿ ಭೀಕರ ಬರಗಾಲ ಕಾಲಿಟ್ಟಿತು.…
