Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಕ್ಷಯ ತೃತೀಯ ಪ್ರಯುಕ್ತ ಏ.೨೦ ರಂದು ಜಿಲ್ಲೆಯಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಬಾಲ್ಯ ವಿವಾಹ ಜರುಗಿಸಿದಲ್ಲಿ, ಅದು ಬಾಲ್ಯವಿವಾಹ ನಿಷೇಧ ಕಾಯ್ದೆ-೨೦೦೬ರನ್ವಯ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.ಜಿಲ್ಲೆಯ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಇತರ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯವಿವಾಹ ನಿಷೇಧ ಎಂಬ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಬಾಲ್ಯ ವಿವಾಹವನ್ನು ನಡೆಸುವ, ನಿರ್ದೇಶಿಸುವ ಅಥವಾ ಪ್ರಚೋದಿಸುವ ಯಾವುದೇ ವ್ಯಕ್ತಿ ಕಾನೂನು ಪ್ರಕಾರ ಸಮಾನವಾಗಿ ಹೊಣೆಗಾರರಾಗುತ್ತಾರೆ.ವಿವಾಹ ಸಮಾರಂಭವನ್ನು ನಡೆಸುವ ಪುರೋಹಿತರು, ಅದನ್ನು ಏರ್ಪಡಿಸುವ ಸಂಬಂಧಿಕರು, ಸುಗಮಗೊಳಿಸುವ ಆಯೋಜಕರು ಸೇರಿದಂತೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲರೂ ಬಾಲ್ಯವಿವಾಹ ನಿಷೇಧ ಕಾಯ್ದೆಯ ಚೌಕಟ್ಟಿನಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ. ಈ ಸಂಬಂಧ ಕ್ರಿಮಿನಲ್ ಪಿಟಿಷನ್ ಸಂಖ್ಯೆ ೧೬೦೫/೨೦೨೬ರಲ್ಲಿ ಗೌರವಾನ್ವಿತ ಉಚ್ಚ ನ್ಯಾಯಾಲಯ, ಬೆಂಗಳೂರು ಸ್ಪಷ್ಟ ಆದೇಶ ಹೊರಡಿಸಿದೆ.ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳಲ್ಲಿನ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಲ್ಯ ವಿವಾಹ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ವಿಜಯಪುರ ಇವರ ಸಹಯೋಗದಲ್ಲಿ, ಏ.೧೫ರ ಬೆಳಿಗ್ಗೆ ೧೦ ಗಂಟೆಗೆ ನಗರದ ಬಾಗಲಕೋಟ ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಅವರಣದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.ಈ ಸಂದರ್ಶನದಲ್ಲಿ ಪ್ರತಿಷ್ಠಿತ ಕಂಪನಿಯಾದ . SUZLON Energy Ltdಭಾಗವಹಿಸಿ, ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ಭಾರತದಾದ್ಯಂತ ಅಭ್ಯರ್ಥಿಗಳನ್ನುಆಯ್ಕೆ ಮಾಡಿಕೊಳ್ಳಲಿದೆ.ಡಿಪ್ಲೋಮಾ ಪದವಿಯಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಮತ್ತು ಕಮ್ಯುನಿಕೇಶನ್ ಆಟೋಮೊಬೈಲ್ ಪೂರೈಸಿದ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ತಮ್ಮ ಸ್ವ-ವಿವರ (ಖesume) ಮತ್ತು ವಿದ್ಯಾರ್ಹತೆ ಸಂಬಂಧಿತ ಮೂಲ ದಾಖಲಾತಿಗಳು ಹಾಗೂ ನೆರಳಚ್ಚು (ಝೆರಾಕ್ಸ್) ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗುವಂತೆಯೂ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ ೯೭೪೧೬೫೦೫೬೮ ಹಾಗೂ ೯೯೪೫೦೦೦೭೯೩ ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಾಲತವಾಡ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ೨೦೨೫-೨೬ನೆಯ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.ಎಸ್ಸೆಸ್ಸೆಲ್ಸಿ ಪಾಸಾದ ಹಾಗೂ ಪಿಯುಸಿ ಅನುತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಹೊಸದಿಲ್ಲಿಯ ಎನ್ ಸಿವಿಟಿಯಿಂದ ಸಂಯೋಜನೆಯಾದ ೨ ವರ್ಷಗಳ ಮತ್ತು ಹೊಸದಾಗಿ ಟಾಟಾ ಉದ್ಯೋಗದಡಿ ಪ್ರಾರಂಭ ಮಾಡಲಾಗುವ ಪ್ರತಿಷ್ಟಿತ ಕೋರ್ಸ್ ಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಕಾಲೇಜ್ ಗೆ ಖುದ್ದಾಗಿ ಭೇಟಿ ಮಾಡಿ ಆಫ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ವಿಶೇಷವಾಗಿ ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಭಾರ ಪ್ರಾಚಾರ್ಯರಾದ ಪೂಜಪ್ಪ ಪೂಜಾರಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ನಾಲತವಾಡ, ರಾಜ್ಯ ಕೈಗಾರಿಕಾ ತರಬೇತಿ ಸಂಸ್ಥೆ, ಮೊಬೈಲ್ ಸಂಖ್ಯೆ :೯೯೮೬೧೨೩೮೯೩,೯೦೦೮೬೯೨೨೭೦,೯೯೦೨೮೩೫೬೨೬, ೯೯೮೦೨೩೦೭೧೦ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಮಹಿಳೆಯರ ಸುರಕ್ಷತೆ ಹಾಗೂ ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ‘ಅಕ್ಕಪಡೆ’ (ಮಹಿಳಾ ಪೊಲೀಸ್ ತಂಡದ) ವತಿಯಿಂದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಕಿರುಕುಳ ತಡೆಗಟ್ಟಲು ಮತ್ತು ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಲು ನಿಟ್ಟಿನಲ್ಲಿ ಈ ಅಭಿಯಾನವನ್ನು ನಡೆಸಲಾಯಿತು.ತುರ್ತು ಸಂದರ್ಭಗಳಲ್ಲಿ ಮಹಿಳೆಯರು ನೆರವು ಪಡೆಯಲು 112 ಸಹಾಯವಾಣಿಗೆ ಕರೆ ಮಾಡುವಂತೆ ಕ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಿದರು.ಪ್ರಯಾಣಿಕರ ಲಗೇಜುಗಳ ಭದ್ರತೆ, ಅಪರಿಚಿತರು ನೀಡುವ ತಿಂಡಿ-ತಿನಿಸುಗಳನ್ನು ಸೇವಿಸನೆ. ಅನುಮಾನಾಸ್ಪದ ವ್ಯಕ್ತಿಗಳು ಓಡಾಟ. ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿಯನ್ನ ಅಕ್ಕಾ ಪಡೆಯ ತಂಡದ ಸದಸ್ಯರು ಮಾಡಿದ್ರು.ಮಹಿಳೆಯರು ಮತ್ತು ಮಕ್ಕಳು ಸಾರ್ವಜನಿಕ ಸ್ಥಳಗಳಲ್ಲಿ ನಿರ್ಭಯವಾಗಿ ಸಂಚರಿಸಬೇಕು. ಯಾವುದೇ ತೊಂದರೆಯಾದಲ್ಲಿ ಸಂಕೋಚ ಪಡದೆ ಅಕ್ಕಪಡೆಯನ್ನು ಅಥವಾ ಹತ್ತಿರದ ಪೊಲೀಸ್ ಸಿಬ್ಬಂದಿಯನ್ನು ಸಂಪರ್ಕಿಸಬೇಕು ಎಂದು ತಂಡದ ಅಧಿಕಾರಿಗಳು ಈ ಸಂದರ್ಭದಲ್ಲಿ ಮನವಿ ಮಾಡಿದರು.ಈ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ…

Read More

ಜನಮನ ಗೆದ್ದ ಹಾಲೋಕುಳಿ | ಯುವಕರಿಂದ ಶಿಳ್ಳೆ, ಕೇಕೆಗಳ ಸುರಿಮಳೆ | ಸಾವಿರಾರು ಜನರಿಂದ ವೀಕ್ಷಣೆ ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ: ಅಲ್ಲಿ ಸಾವಿರಾರು ಜನರು ಜಮಾಯಿಸಿದ್ದರು. ಕೆಲವರು 52 ಅಡಿ ಎತ್ತರ ಕಂಬವನ್ನು ಎರಲು ಸಿದ್ಧರಾಗಿ ನಿಂತಿದ್ದರು. ಮೈನವಿರೇಳಿಸುವ ಈ ಸಾಹಸದಲ್ಲಿ ಕೆಲವರು ಕಂಬ ಏರಲು ಹೋಗಿ ಬೀಳುತ್ತಿದ್ದರೆ, ಮತ್ತೆ ಕೆಲವರು ಎದ್ದು ಗುರಿ ಮುಟ್ಟಲು ಹರಸಾಹಸ ನಡೆಸುತ್ತಿದ್ದರು. ಕೊನೆಗೆ ಒಬ್ಬ ಗುರಿತಲುಪುತಿದ್ದಂತೆ ಚಪ್ಪಾಳೆˌ ಸಿಳ್ಳೆˌ ಕೇಕೆಗಳ ಸುರಿಮಳೆಯಾಯಿತು.ಇದು ಗ್ರಾಮ ಆರಾಧ್ಯ ದೈವ ಮಾರುತೇಶ್ವರ ಜಾತ್ರೆ ನಿಮಿತ್ತ ಸೋಮವಾರ ನಡೆದ ಹಾಲೋಕುಳಿಯ ಝಲಕ್, ಜಾತ್ರೆ ನಿಮಿತ್ತ ಮೂರು ದಿನ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಹಾಲೋಕುಳಿ ವಿಶೇಷವಾಗಿ ಗಮನ ಸೆಳೆಯಿತು.ಏನಿದು ವಿಶೇಷ: ದೇವಸ್ಥಾನ ಎದುರು 52 ಅಡಿ ಎತ್ತರದ ಕಂಬವನ್ನು ನೆಟ್ಟು ಅದರ ಮೇಲೆ ವ್ಯಕ್ತಿಯನ್ನು ಕೂಡಿಸಲಾಗಿತ್ತು. ಈ ಕಂಬಕ್ಕೆ ಜಾರುವ ಪದಾರ್ಥ ಲೇಪಿಸಲಾಗಿತ್ತು. ಸ್ಪರ್ಧೆಗೆ ಬಂದ ಯುವಕರು ಈ ಕಂಬ ಹತ್ತಿ ಮೇಲೆ ಕುಳಿತ ವ್ಯಕ್ತಿಯನ್ನು ಕೆಳಗೆ…

Read More

ವಿಜಯಪುರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮಿ ತುಂಗಳ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಹತ್ವದ ಈ ಹಿಂದಿನ ದಿನಗಳಲ್ಲಿ ಚರ್ಚೆ ಬಂದಾಗ ಮಸೂದೆಯ ಪ್ರತಿಯನ್ನೇ ಹರಿದು ಹಾಕಿದ್ದರು, ಮಹಿಳೆಯಿಂದ ಆಡಳಿತ ಅಸಾಧ್ಯ ಎನ್ನುವ ಮನೋಭಾವನೆ ಇತ್ತು, ಆದರೆ ಮಹಿಳೆ ಸಬಲಳು, ಆಕೆ ಆಡಳಿತ ನಡೆಸಲು ಸಮರ್ಥಳು ಎಂಬ ಸಕಾರಾತ್ಮಕ ಭಾವ ಮೂಡಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಯಶಸ್ವಿಯಾಗಿದ್ದು, ನಾರಿಶಕ್ತಿ ವಂದನ್ ಕಾಯ್ದೆಯ ಮೂಲಕ ಶಾಸನ ಸಭೆಗಳಲ್ಲಿ ಮಹಿಳಾ ಮೀಸಲಾತಿಗೆ ಅಪೂರ್ವ ಹೆಜ್ಜೆ ಇರಿಸಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮಿ ತುಂಗಳ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ಮಹಿಳೆಯನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಅವರು ಅನೇಕ ಕಾರ್ಯಕ್ರಮ ಕೈಗೊಂಡರು, ಬೇಟಿ ಬಚಾವೋ ಬೇಟಿ ಪಡಾವೋ, ಉದ್ಯೋಗದಲ್ಲಿ ಮಹಿಳೆಯ ಸಿಂಹಪಾಲು ಹೀಗೆ ನಾನಾ ರೀತಿಯ ಕ್ರಮಗಳಿಂದಾಗಿ ಸ್ತ್ರೀ ಶಕ್ತಿ ಇನ್ನಷ್ಟೂ ಬಲಗೊಳ್ಳಲು ಸಾಧ್ಯವಾಗಿದೆ ಎಂದರು.ಮಹಿಳಾ…

Read More

ವಿಜಯಪುರದಲ್ಲಿ ಶಾಸಕ ಹಾಗೂ ಜೆಎಸ್‌ಎಸ್ ಆಸ್ಪತ್ರೆಯ ಸಂಸ್ಥಾಪಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೆಟ್ರೋ ನಗರದಲ್ಲಿ ಒದಗಿಸಲಾಗಿರುವ ಆರೋಗ್ಯ ಸೇವೆಗಳನ್ನು ವಿಜಯಪುರದ ಜೆಎಸ್‌ಎಸ್ ಆಸ್ಪತ್ರೆಯಲ್ಲಿಯೇ ಒದಗಿಸಲಾಗುತ್ತಿದ್ದು, ಅದರ ಭಾಗವಾಗಿ ಅತ್ಯಾಧುನಿಕ ನವಜಾತ ಶಿಶುಗಳ ತೀವ್ರ ನಿಗಾ ಘಟಕ, ದಂತಗಳ ಆರೋಗ್ಯಕ್ಕೆ ಸಂಬಂಧಿಸಿದ ಮ್ಯಾಕ್ಸಿಲೋಫಿಷಿಯಲ್ ಶಸ್ತ್ರಚಿಕಿತ್ಸೆ ಸಹ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಜೆಎಸ್‌ಎಸ್ ಆಸ್ಪತ್ರೆಯ ಸಂಸ್ಥಾಪಕ ಬಸನಗೌಡ ಪಾಟೀಲ ಯತ್ನಾಳ ಪ್ರಕಟಿಸಿದರು.ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗುತ್ತಿರುವ ಆರೋಗ್ಯ ಸೇವೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ಅವರು, ವಿಜಯಪುರದಲ್ಲಿ ಎನ್‌ಐಸಿಯು ಘಟಕವನ್ನು ಆಧುನಿಕ ಸ್ಪರ್ಶದೊಂದಿಗೆ ಆರಂಭಿಸಲಾಗಿದ್ದು, ನವಜಾತ ಶಿಶುಗಳಿಗಳಿಗೆ ಸಕಲ ಆರೋಗ್ಯ ಸೌಲಭ್ಯಗಳು ದೊರಕಲಿವೆ, ೨೪ ಗಂಟೆಗಳ ನಿಯೋನೇಟಾಲಜಿಸ್ಟ್, ಮಲ್ಟಿಪಾರಾ ಮಾನಿಟರ್, ಬಬಲ್ ಸಿಪಿಎಪಿ ಸೌಲಭ್ಯ ಸೇರಿದಂತೆ ವೈದ್ಯಕೀಯ ರಂಗದಲ್ಲಿ ಅದರಲ್ಲೂ ನವಜಾತ ಶಿಶುಗಳ ಆರೋಗ್ಯ ರಕ್ಷಣೆಯಲ್ಲಿ ಆಧುನಿಕ ಸ್ಪರ್ಶ ನೀಡಲಾಗಿದೆ ಎಂದರು.ದಂತಗಳ ಆರೋಗ್ಯ ಸೇವೆ ಒದಗಿಸುವಲ್ಲಿಯೂ ಜೆಎಸ್‌ಎಸ್ ಮುನ್ನಡೆ ಇರಿಸಿದೆ, ಅತ್ಯಾಧುನಿಕ ದಂತ ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ವಿಶ್ವಭಾರತಿ ವಿದ್ಯಾವರ್ಧಕ ಸಂಸ್ಥೆಯ ಎಸ್.ಕೆ. ಬೆಳ್ಳುಬ್ಬಿ ವಿಜ್ಞಾನ ಪಿಯು ಕಾಲೇಜಿನಲ್ಲಿ ಈ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ದಾಖಲಾಗಿದೆ.ವಿಜ್ಞಾನ ವಿಭಾಗದಲ್ಲಿ ಪ್ರತಿಭಾ ಡೆಂಗಿ ಅವರು ಶೇಕಡಾ 97 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ್ದು, ದಾನಮ್ಮ ಹಿರೇಮಠ ಅವರು ಶೇಕಡಾ 96.25 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸುಮಿತ್ರಾ ವಂದಾಲ ಅವರು ಶೇಕಡಾ 93.25 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಒಟ್ಟು 25 ವಿದ್ಯಾರ್ಥಿಗಳಲ್ಲಿ 13 ಮಂದಿ ಡಿಸ್ಟಿಂಕ್ಷನ್, 11 ಮಂದಿ ಪ್ರಥಮ ದರ್ಜೆ ಹಾಗೂ 1 ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಕರ್ತವ್ಯನಿಷ್ಠೆಗೆ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಸಂ. ಬೆಳ್ಳುಬ್ಬಿ ಹಾಗೂ ಆಡಳಿತ ಮಂಡಳಿಯವರು, ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಸಂತೋಷ ವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ:: 2024-25ನೇ ಸಾಲಿನ ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ ಜಮಖಂಡಿಯ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ಮಾಡಿ ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಎಂ.ಎ. ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ ರೇಖಾ ದೊಡವಾಡ ಅವರು ಪ್ರಥಮ ರ್ಯಾಂಕ್‌ ಪಡೆದು ನಾಲ್ಕು ಬಂಗಾರದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ‘ಭಾರತೀಯ ಕಾವ್ಯಮೀಮಾಂಸೆ’ ವಿಷಯದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಆರತಿ ತಳವಾರ ಅವರು ಬಂಗಾರದ ಪದಕಕ್ಕೆ ಪಾತ್ರರಾಗಿದ್ದಾರೆ.ಇನ್ನೂ ಸವಿತಾ ಗುಡ್ಲಮನಿ ನಾಲ್ಕನೇ ರ್ಯಾಂಕ್ ಹಾಗೂ ಶೃತಿ ನಾವಿ ಐದನೇ ರ್ಯಾಂಕ್ ಪಡೆದು ಮಹಾವಿದ್ಯಾಲಯದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ.ಈ ಸಾಧನೆಗೆ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸುನಂದಾ ಎಸ್. ಶಿರೂರ, ಸಂಯೋಜಕರಾದ ಡಾ. ವೈ.ವೈ. ಕೊಕ್ಕನವರ, ಡಾ. ವಿ.ಆರ್. ದಳವಾಯಿ, ಡಾ. ಎಂ.ಎಂ. ಮಂಟೂರ ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗವು ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ತಿಳಿಸಿ ಶುಭಾಶಯ ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಮಾರುತಿ ದೇವರ ನೀರಓಕುಳಿ ಉತ್ಸವವು ರವಿವಾರ ಅತ್ಯಂತ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಜರುಗಿತು.ಬೆಳಿಗ್ಗೆಯಿಂದಲೇ ಗ್ರಾಮದ ಭಕ್ತರು ದೇವಸ್ಥಾನಕ್ಕೆ ಹರಿದುಬಂದು ವಿಶೇಷ ಪೂಜೆಗಳು, ಅಭಿಷೇಕ ಹಾಗೂ ಅಲಂಕಾರ ಸೇವೆಗಳಲ್ಲಿ ಭಾಗವಹಿಸಿದರು. ಮುಂಚೆಯ ದಿನ ಶನಿವಾರ ದೇವರ ಮೂರ್ತಿಗೆ ಗ್ರಾಮದೆಲ್ಲೆಡೆ ಭವ್ಯ ಮೆರವಣಿಗೆ ನಡೆಸಲಾಗಿದ್ದು, ಭಜನೆ, ಡೊಳ್ಳು-ತಾಸೆ ಹಾಗೂ ನೃತ್ಯಗಳೊಂದಿಗೆ ಉತ್ಸವಕ್ಕೆ ಮತ್ತಷ್ಟು ಕಳೆ ತಂದಿತು.ನೀರಓಕುಳಿ ಸಂಪ್ರದಾಯದಂತೆ ಪರಸ್ಪರ ನೀರು ಎರಚಿಕೊಂಡು ಸಂತೋಷ ವ್ಯಕ್ತಪಡಿಸಿದರು. ಈ ಸಂದರ್ಭ ಯುವಕರು, ಮಹಿಳೆಯರು ಹಾಗೂ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದರು.ಗ್ರಾಮದ ಹಿರಿಯರು ಹಾಗೂ ಮುಖಂಡರು ಪಾಲ್ಗೊಂಡು ಕಾರ್ಯಕ್ರಮಗಳ ಯಶಸ್ಸಿಗೆ ಸಹಕರಿಸಿದರು. ಎಲ್ಲರೂ ಸಮಾರಂಭದಲ್ಲಿ ಶಾಂತಿ, ಸೌಹಾರ್ದತೆಯ ಸಂದೇಶ ಸಾರಲಾಗಿತ್ತು, ಗ್ರಾಮದ ಏಕತೆ ಮತ್ತಷ್ಟು ಬಲವತ್ತಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.ಉತ್ಸವದ ಅಂಗವಾಗಿ ಅನ್ನಸಂತರ್ಪಣೆ ಕಾರ್ಯಕ್ರಮವೂ ಏರ್ಪಡಿಸಲಾಗಿದ್ದು, ನೂರಾರು ಭಕ್ತರು ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಪರಮಗೊಂಡ ದಾನಗೌಡˌ ಗುರಪಾದಯ್ಯ ಹಿರೇಮಠˌ ಚಂದಪ್ಪ ಕಡಕೋಳˌ ಸಿದ್ದಪ್ಪ ಮುತ್ತೂರˌ…

Read More