Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಣಿ ಚನ್ನಮ್ಮ ವಿವಿ ಚಸ್ ಚಾಂಪಿಯನ್ಶೀಪ್ ಪಂದ್ಯಾವಳಿಯಲ್ಲಿ ಎಸ್ಬಿ ಕಲಾ ಹಾಗೂ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಅಭಿಷೇಕ ರಾಠೋಡ ವಿಶ್ವವಿದ್ಯಾಲಯ ಬ್ಲೂ ಆಗಿ ಹೊರ ಹೊಮ್ಮಿದ್ದಾರೆ. (ಪುರುಷ ವಿಭಾಗದಲ್ಲಿ) ಅದರಂತೆ ವಿದ್ಯಾರ್ಥಿನಿಯರಾದ ಪ್ರೇಮಾಂಜಲಿ ಬಿರಾದಾರ, ದೀಪಾ ವಾಲಿಕಾರ ಅವರ ತಂಡ(ಮಹಿಳಾ ವಿಭಾಗದಲ್ಲಿ) ತೃತೀಯ ಸ್ಥಾನ ಪಡೆದುಕೊಂಡು ಸಾಧನೆ ಮಾಡಿದ್ದಾರೆ.ಮಹಾವಿದ್ಯಾಲಯಕ್ಕೆ ಕಿರ್ತೀ ತಂದಿರುವ ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆ ಆಡಳಿತ ಅಧಿಕಾರಿ ಪ್ರೊ.ವಿ.ಎಸ್.ಬಗಲಿ, ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ, ದೈಹಿಕ ನಿರ್ದೇಶಕ ಎಸ್.ಕೆ.ಪಾಟೀಲ ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೂರಾರು ಚಲನಚಿತ್ರಗಳಿಗೆ ಪೋಸ್ಟರ ಡಿಸೈನ್ ಮೂಲಕವೆ ಜೀವಕಳೆ ತುಂಬಿ ಪ್ರೇಕ್ಷಕರನ್ನು ಸೆಳೆದು ಚಿತ್ರಗಳ ಯಶಸ್ಸಿಗೆ ಕಾರಣರಾಗುತ್ತಿರುವ ತೆರೆಮರೆಯ ಚಲನಚಿತ್ರ ಪ್ರಚಾರ ಕಲಾವಿದ ‘ದೇವು’ ಅವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಬೆಂಗಳೂರಿನ ಕಲಾಗ್ರಾಮ ಸಂಸ್ಕೃತಿಕ ಭವನದಲ್ಲಿ ನವಂಬರ್ ೨೯ರಂದು ಹಮ್ಮಿಕೊಂಡಿರುವ ಸಮಾರಂಭದಲ್ಲಿ ದೇವು ಅವರ ಚಲನಚಿತ್ರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಬೆಂಗಳೂರಿನ ಕಲಾಭೂಮಿ ಪ್ರತಿಷ್ಠಾನ, ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.ಈ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗೌರವ ಕಾರ್ಯದರ್ಶಿ ಸುಂದರ್ ರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಸುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ತಿಳುವಳಿಕೆ ಹೊಂದಿ, ಸುರಕ್ಷತೆ ಕಾಪಾಡಿಕೊಳ್ಳಬೇಕು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಹೇಳಿದರು.ಭಾರತ ಸರ್ಕಾರದ ಪೆಟ್ರೋಲಿಯಂ ಮಂತ್ರಾಲಯ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಬಿಪಿಸಿಎಲ್ ಹಾಗೂ ಎಚ್ ಪಿಸಿಎಲ್ ಆಯಿಲ್ ಕಂಪನಿ ಗಳ ಸಹಯೋಗದಲ್ಲಿ ರವಿವಾರ ಹೊಟೇಲ್ ಮಧುವನ ಇಂಟರ್ ನ್ಯಾಷನಲ್ನಲ್ಲಿ ನಡೆದ ನಮ್ಮ ಅಡುಗೆ ನಮ್ಮ ಜವಾಬ್ದಾರಿ -೨೦೨೪ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ಯಾಸ್ ಬಳಸುವುದು ಪರಿಸರ ಸ್ನೇಹಿಯಾಗಿದೆ. ಇದರಿಂದ ಸಮಯ ಹಾಗೂ ಶ್ರಮ ಉಳಿತಾಯವಾಗುತ್ತದೆ. ಗ್ಯಾಸ್ ಸಿಲಿಂಡರ್ ಸ್ಟವ್ ಬಳಸುವಾಗ ಏನಾದರೂ ಸಣ್ಣ ಪುಟ್ಟ ತೊಂದರೆಗಳು ಕಂಡು ಬಂದರೆ ಸ್ವಯಂ ದುರಸ್ತಿಗೆ ಬದಲಿಗೆ ಗ್ಯಾಸ್ ಏಜೆನ್ಸಿ ಹಾಗೂ ಸಿಬ್ಬಂದಿಗೆ ಮಾಹಿತಿ ನೀಡಿ ಅದರ ದುರಸ್ತಿಗೆ ಕ್ರಮವಹಿಸಬೇಕು ಎಂದು ಹೇಳಿದರು.ಎಚ್.ಮಮದಾಪುರ ನಿರೂಪಿಸಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ,…
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಇತ್ತೀಚಿಗೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆದ ೪೩ ನೇ ಬಾಲಕ ಮತ್ತು ಬಾಲಕಿಯರ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ಐದನೇ ಸೆಮಿಸ್ಟರ್ ವಿದ್ಯಾರ್ಥಿ ಶಬ್ಬೀರ ಅಹ್ಮದ್ ಶಹಾಬಾದಿ ಅವರು ಭಾಗವಹಿಸಿ ಹೈ ಜಂಪ್ನಲ್ಲಿ ಪ್ರಥಮ ಸ್ಥಾನ ಪಡೆದು ಅಂತರ ವಿಶ್ವ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾನೆ. ಅಷ್ಟೇ ಅಲ್ಲ ಇದೇ ವಿದ್ಯಾರ್ಥಿಯೂ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಭಾಗವಹಿಸಿ ಮೂರನೇ ಸ್ಥಾನ ಪಡೆದು ಕಾಲೇಜಿನ ಕಿರ್ತಿ ಹೆಚ್ಚಿಸಿದ್ದಾನೆ.ವಿದ್ಯಾರ್ಥಿಯ ಸಾಧನೆಗೆ ಪ್ರಾಚಾರ್ಯ ಮಾಣಿಕರಾವ್ ಕುಲಕರ್ಣಿ ಮಾತನಾಡಿ, ವಿಶ್ವವಿದ್ಯಾಲಯದ ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿ ಹೈ ಜಂಪ್ನಲ್ಲಿ ಪ್ರಥಮ ಸ್ಥಾನ ಪಡೆದು ಅಂತರ ವಿಶ್ವವಿದ್ಯಾಲಯಕ್ಕೆ ಆಯ್ಕೆಯಾಗಿರುವುದು ಅತ್ಯಂತ ಖುಷಿ ತಂದಿದೆ ಎಂದರು.ದೈಹಿಕ ಶಿಕ್ಷಣ ವಿಭಾಗದ ಡಾ.ಕವಿತಾ ರಾಠೋಡ ಮಾತನಾಡಿ, ಕಲಬುರಗಿಯ ವಿಶ್ವವಿದ್ಯಾಲಯದಲ್ಲಿ ನಡೆದ ಸ್ಪರ್ಧೆಯಲ್ಲಿ ಹೈ ಜಂಪ್ನಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಓಡಿಸ್ಸಾ ರಾಜ್ಯದಲ್ಲಿ ನಡೆಯಲಿರುವ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು.ವಿದ್ಯಾರ್ಥಿಯ ಅಮೋಘ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಸಮಾನ ಆಸಕ್ತಿ ಸಹಕಾರ ಮನೋಭಾವಗಳು ಸಂಘ ಸ್ಥಾಪನೆಯ ಪ್ರಧಾನ ಅಂಶ. ಇದರ ಕಾರ್ಯ ನಿರ್ವಹಣೆಯಲ್ಲಿ ನಿರ್ದೀಷ್ಟ ಪಾತ್ರಗಳ ಹಾಗೂ ಸ್ಥಾನಮಾನಗಳ ಹಂಚಿಕೆಯ ಮೂಲಕ ಮಾಡುವ ಪ್ರಕ್ರಿಯೆ ಎಂದು ಭೀಮ ಸರಕಾರ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಮತ್ತು ರಾಜ್ಯಾಧ್ಯಕ್ಷ ಪರಸುರಾಮ ಚಲವಾದಿ ಹೇಳಿದರು.ಪಟ್ಟಣದಲ್ಲಿ ನಡೆದ ಭೀಮ ಸರಕಾರ ಸಂಘಟನೆಯ ಪದಾಧಿಕಾರಿಗಳ ಆಯ್ಕೆಯ ಸಮಾರಂಭದಲ್ಲಿ ಮಾತನಾಡುತ್ತಿದ್ದರು.ಬಾಬಾಸಾಹೇಬ ಅಂಬೇಡಕರರವರು ಶಿಕ್ಷಣ ಸಂಘಟನೆ ಮತ್ತು ಹೋರಾಟದ ಮೂಲಕ ಜನರಿಗೆ ಪ್ರೇರಣೆ ನೀಡಿದರು. ಸಂವಿಧಾನ ನೀಡಿ ಬಡವರನ್ನು ಮೇಲೆ ಎತ್ತುವ ಕಾರ್ಯ ಮಾಡಿದರು. ಅವರ ಮಾರ್ಗದಲ್ಲಿ ನಾವೆಲ್ಲರೂ ಸಾಗಿ ಅವರ ಕನಸು ನನಸಾಗಬೇಕಿದೆ ಎಂದರು.ಪ್ರೊ ಎಂ.ಆರ್.ದೊಡಮನಿ ಮಾತನಾಡಿ ಗ್ರಾಮ ಮತ್ತು ತಾಲೂಕಿನಲ್ಲಿ ಇರುವ ಸಮಸ್ಯೆಗೆ ಸ್ಪಂದಿಸಬೇಕಾಗಿದೆ. ಸಮಾಜ ಸುಧಾರಣೆ ಮತ್ತು ಸರಕಾರದಿಂದ ಬರುವ ಸವಲತ್ತುಗಳನ್ನು ಬಡವರಿಗೆ ತಲುಪಿಸುವ ಕಾರ್ಯ ಮಾಡಬೇಕಾಗಿದೆ. ಅಂಬೇಡಕರರವರು ತಮ್ಮ ಜೀವನ ಅನೇಕ ಕಷ್ಟ ಅನುಭವಿಸಿ ಸಂವಿಧಾನ ರಚಿಸಿದ್ದು ಅದರ ಸವಲತ್ತು ಎಲ್ಲರಿಗೂ ತಲುಪಿಸಬೇಕಾಗಿದೆ ಎಂದರು.ನಗರ ಘಟಕದ ಅಧ್ಯಕ್ಷ ಸೋಮಶೇಖರ ಶಹಾಪುರ…
ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ ಮಾಳಿವಿಜಯಪುರ: ಉತ್ತರ ಕರ್ನಾಟಕದ ಜಾತ್ರೆಗಳು ವಿಶೇಷತೆಯಿಂದ ಕೂಡಿರುತ್ತವೆ. ಅದರಲ್ಲಿ ಛಟ್ಟಿ ಅಮಾವಾಸ್ಯೆಯ ಸಂದರ್ಭದಲ್ಲಿ ನಡೆಯುವ ವಿಜಯಪುರ ಜಿಲ್ಲೆಯ ಅರಕೇರಿ ಜಾಲಗೇರಿ ಭಾಗದ ಮುಮ್ಮಟ್ಟಿಗುಡ್ಡದ ಅಮೋಘಸಿದ್ದೇಶ್ವರನ ಜಾತ್ರೆಗೆ ಉತ್ತರ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟç ಸೇರಿದಂತೆ ವಿವಿಧೆಡೆಯಿಂದ ನೂರಾರ ಪಲ್ಲಕ್ಕಿಗಳ ಭೇಟಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯಿತು. ಈ ವೇಳೆ ಭಕ್ತರು ಕ್ವಿಂಟಾಲ್ಗಟ್ಟಲೇ ಭಂಡಾರ ಪಲ್ಲಕ್ಕಿಗಳ ಮೇಲೆ ಎರಚಿದ್ದರಿಂದ ಇಡೀ ಅಮೋಘ ಸಿದ್ದೇಶ್ವರ ದೇವಾಸ್ಥಾನದ ೧೦೦ ಎಕರೆ ಪ್ರಾಂಗಣ ಭಂಡಾರಮಯವಾಗಿತ್ತು. ಈ ಜಾತ್ರೆಯನ್ನು ಭಂಡಾರದೊಡೆಯನ ಜಾತ್ರೆ ಎಂದೇ ಕರೆಯಲಾಗುತ್ತದೆ.ಕೈಲಾಸವಾಸಿಯಾಗಿದ್ದ ಅಮೋಘ ಸಿದ್ದೇಶ್ವರ, ಶಿವ-ಪಾರ್ವತಿಯರ ಸೇವಕರಾಗಿದ್ದರು. ಅಮೋಘ ಸಿದ್ಧೇಶ್ವರನ ಸೇವೆಗೆ ಶಿವ-ಪಾರ್ವತಿಯರು ಮೆಚ್ಚುಗೆ ವ್ಯಕ್ತಪಡಿಸಿ, ವಿಶೇಷ ಭಕ್ತಿ ಕರುಣಿಸಿ ಭೂಲೋಕಕ್ಕೆ ಬಂದ ಅಮೋಘ ಸಿದ್ದೇಶ್ವರ ಲೋಕ ಕಲ್ಯಾಣಕ್ಕಾಗಿ ಶ್ರಮಿಸಿದ್ದರಂತೆ.ಸಾವಿರಾರು ವರ್ಷಗಳ ಹಿಂದೆ ಅರಕೇರಿ ಜಾಲಗೇರಿ ಗ್ರಾಮದ ಮಧ್ಯೆದ ಮುಮ್ಮಟ್ಟಿಗುಡ್ಡದಲ್ಲಿ ನೆಲೆಸಿರುವ ಅಮೋಘ ಸಿದ್ದೇಶ್ವರ ಹಲವು ಪವಾಡಗಳ ಮೂಲಕ ಭಕ್ತರ ಉದ್ಧಾರ ಮಾಡುತ್ತಿದ್ದಾರೆ. ಭಕ್ತರ ಕಷ್ಟ ಪರಿಹರಿಸೋ ಪವಾಡ ಪುರುಷರಾಗಿದ್ದಾರೆ ಎಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಕ್ಷೇತ್ರ ಕೆಂಗೆರಿ ಮುರಗೋಡದಲ್ಲಿ ಶ್ರೀ ಶಿವ ಚಿದಂಬರ ಮಹಾಸ್ವಾಮೀಗಳ ೨೬೬ ನೇ ಅವತಾರ ಜಯಂತಿ ಶೈವಾಗಮೋಕ್ಷ ಮಹೋತ್ಸವ ಡಿಸೆಂಬರ್೦೭.೧೨.೨೦೨೪ ರಂದು ನಡೆಯಲಿದ್ದು, ಈ ಉತ್ಸವದಲ್ಲಿ ಪಾಲ್ಗೊಳ್ಳಲು ಬಸವ ನಾಡು ವಿಜಯಪುರದಿಂದ ೨೬ ನೇ ವರ್ಷದ ಭಕ್ತರು ಪಾದಯಾತ್ರೆ ಬೆಳೆಸಿದರು.ಪ್ರತಿವರ್ಷ ಈ ಮಹೋತ್ವಸ ನಡೆಯುತ್ತಿದೆ. ಇದರ ಅಂಗವಾಗಿ ಶ್ರೀ ಚಿದಂಬರೇಶ್ವರ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ವಿಜಯಪುರ ಚಿದಂಬರ ದೇವಸ್ಥಾನದಿಂದ ಶ್ರೀ ಕ್ಷೇತ್ರ ಮುರಗೋಡಕ್ಕೆ ಪಾದಯಾತ್ರೆಯಲ್ಲಿ ಭಕ್ತರು ತೆರಳಿದರು. ವಿಜಯಪುರ ನಗರದಿಂದ ಹಲಗಣಿ, ಮುದೋಳ, ಯರಗಟ್ಟಿ, ಹಲಕಿ ಕ್ರಾಸ್ ಮೂಲಕ ದಿನಾಂಕ ೬.೧೨.೨೦೨೪ ರಂದು ಈ ಯಾತ್ರಿಗಳು ಶ್ರೀ ಕ್ಷೇತ್ರ ತಲುಪಲಿದ್ದಾರೆ.ಈ ಪಾದಯಾತ್ರೆಯಲ್ಲಿ ಸಂಚಾಲಕ ರಾಘವೇಂದ್ರ ಜೋಶಿ, ಸಹ ಸಂಚಾಲಕ ಸುಧೀಂದ್ರ ಕುಲಕರ್ಣಿ, ವೆಂಕಟೇಶ ಜೋಶಿ, ಸಚಿನ ಆಚಾರ್ಯ, ಕೃಷ್ಣಾ ಜೋಶಿ, ಶೇಷಗಿರಿ, ಚಿದಂಬರ ಜೋಶಿ ರೊಳ್ಳಿ, ವೆಂಕಟೇಶ ಜೋಶಿ ನಂದವಾಡಗಿ, ವಿಜಯ ಜೋಶಿ, ಸಂಜು ಕುಲಕರ್ಣಿ ಬರಡೋಲ, ವೆಂಕಟೇಶ ಕುಲಕರ್ಣಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಚಿದಂಬರ…
ಉದಯರಶ್ಮಿ ದಿನಪತ್ರಿಕೆ. ದೇವರಹಿಪ್ಪರಗಿ: ಟಿಪ್ಪರ್ ಬೈಕ್ಗೆ ಗುದ್ದಿ ಸವಾರನ ತಲೆಯ ಮೇಲೆ ಹಾಯ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡ ಘಟನೆ ಪಟ್ಟಣದಲ್ಲಿ ಭಾನುವಾರ ಜರುಗಿದೆ.ಪಟ್ಟಣದ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ ೫೦ ರ ಮೇಲೆ ಭವಾನಿ ಭಾಂಡೆ ಅಂಗಡಿ ಹತ್ತಿರ ಈ ಘಟನೆ ಜರುಗಿದೆ. ಘಟನೆಯಲ್ಲಿ ಆಲಮೇಲ ತಾಲ್ಲೂಕಿನ ಕಕ್ಕಳಮೇಲಿ ಗ್ರಾಮದ ಸಂಗಮೇಶ ಸಾಹೇಬಣ್ಣ ಮಾಲಿಪಾಟೀಲ(೨೮) ಎಂಬ ವ್ಯಕ್ತಿ ಬೈಕ್ ಸವಾರನಾಗಿದ್ದು, ಟಿಪ್ಪರ ಗಾಲಿಯಡಿ ಸಿಕ್ಕು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಧರೆಪ್ಪ ಜಗದೇವಪ್ಪ ಮಾಲಿಪಾಟೀಲ ಗಾಯಗೊಂಡಿದ್ದಾನೆ.ಘಟನಾ ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಬಂದಾಳ ಮತ್ತು ಬೂದಿಹಾಳ ಗ್ರಾಮದ ಮದ್ಯದಲ್ಲಿರುವ ಕಾಲುವೆಯಲ್ಲಿ ಅಪರಿಚಿತ ಹೆಣ್ಣು (ಸು.೨೮-೩೨) ಮಗಳ ಶವ ಪತ್ತೆಯಾಗಿದ್ದು, ಶವದ ಬಲಗೈ ಮೇಲೆ ಯಲ್ಲಪ್ಪ ಎಂದು ಅಚ್ಚೆಯಿಂದ ಬರೆದಿದ್ದು ಇರುತ್ತದೆ. ಈ ಶವದ ಬಗ್ಗೆ ಯಾರಿಗಾದರೂ ಗುರುತು ಪತ್ತೆಯಾದಲ್ಲಿ ಸಿಂದಗಿ ಪಿಎಸ್ಐ ಅವರ ಈ ಕೆಳಗಿನ ದೂರವಾಣಿ ೯೪೮೦೮೦೪೨೫೭ ಸಂಖ್ಯೆಗೆ ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.
ಶ್ರೀ ಭಕ್ತ ಕನಕದಾಸರ ಜಯಂತೋತ್ಸವ | ಬಸವರಾಜ ಶ್ರೀಗಳ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜಗತ್ತಿಗೆ ಧರ್ಮದ ಬೆಳಕು ಚೆಲ್ಲಿದ್ದು ಕುರುಬ ಸಮಾಜ, ಸಮಾಜವನ್ನು ಜಾಗೃತಗೊಳಿಸಿ ಕನಕದಾಸರ ಸಾಹಿತ್ಯ ಮನೆ ಮನೆಗೆ ತಲುಪಿಸುವ ಕಾರ್ಯವಾಗಬೇಕು ಎಂದು ದಿವ್ಯ-ಸಾನಿಧ್ಯ ವಹಿಸಿದ ಮನಸೂರ ರೇವಣಸಿದ್ದೇಶ್ವರ ಮಹಾಮಠದ ಜಗದ್ಗುರು ಬಸವರಾಜ ದೇವರು ಮಹಾಸ್ವಾಮಿಗಳು ಹೇಳಿದರು.ಸಿಂದಗಿ ಪಟ್ಟಣದ ಸಾರಂಗಮಠದ ಆವರಣದಲ್ಲಿ ಹಾಲುಮತ ಸಮುದಾಯ ಹಮ್ಮಿಕೊಂಡ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಾನವ ಮೌಲ್ಯವನ್ನು ವಿಶ್ವಕ್ಕೆ ಬಿತ್ತಿದ ಮಾಹಾನ್ ಚೇತನ ಕನಕದಾಸರು. ದಾಸ ಸಾಹಿತ್ಯದಲ್ಲೇ ಶ್ರೇಷ್ಠರು. ಅವರ ಚಿಂತನೆಗಳು ನಮಗೆ ದಾರಿದೀಪ. ಅವರು ಹಾಕಿಕೊಟ್ಟ ಮಾರ್ಗ ವಿಶ್ವಕ್ಕೆ ಮಾದರಿಯಾಗಬೇಕು. ಯುವಕರು ದುಶ್ಚಟಗಳನ್ನು ಬದಿಗೊತ್ತಿ ಕನಕರ ಹಾದಿಯಲ್ಲಿ ನಡೆದು ಸುಂದರವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.ಈ ವೇಳೆ ಸಿ.ಎಂ.ಮನಗೂಳಿ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಮಾತನಾಡಿ, ಹಾಲುಮತ ಸಮುದಾಯ ಹಾಲಿನಷ್ಟೇ ಪವಿತ್ರವಾದುದ್ದು, ವಿಷ ಕೊಟ್ಟವರಿಗೂ ಹಾಲುಣಿಸುವ ಭಾವನೆ ಉಳ್ಳಂತ ಸಮಾಜ…
