Author: editor.udayarashmi@gmail.com

ಬಾಲಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಬಾಲಕಿಯರ ಬಾಲ ಮಂದಿರ ಹಾಗೂ ಸರ್ಕಾರಿ ಬಾಲಕರ ಬಾಲ ಮಂದಿರಕ್ಕೆ ಗುರುವಾರ ಸಂಜೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಾಲ ಮಂದಿರಗಳ ಮೂಲಭೂತ ಸೌಕರ್ಯ ಪರಿಶೀಲಿಸಿದ ಅವರು, ಬಾಲ ಮಂದಿರದಲ್ಲಿರುವ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಯಾವುದೇ ಕಾರಣಕ್ಕೂ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಶೌಚಾಲಯಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಸ್ನಾನಕ್ಕೆ ಬಿಸಿ ನೀರು, ಉತ್ತಮ ಆಹಾರ ಸೇರಿದಂತೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಮಕ್ಕಳಿಗೆ ಒದಗಿಸಬೇಕು. ಕೌಶಲ್ಯತೆಯನ್ನು ಹೆಚ್ಚಿಸಲು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಾಲಮಂದಿರದ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಮಕ್ಕಳಯೋಗ ಕ್ಷೇಮ ವಿಚಾರಿಸಿದರು.ಸತತ ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು.…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ, ಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ದಾಂಪತ್ಯ ಎಂಬುದು ಕೇವಲ ಹೂವಿನ ಹಾಸಿಗೆಯಲ್ಲ.. ಸಮಾಜ ಒಪ್ಪಿದ ರೀತಿಯಲ್ಲಿ ಒಂದು ಜೋಡಿ ಗಂಡು ಹೆಣ್ಣು ಮದುವೆ ಎಂಬ ಸುಮಧುರ ಬಂಧದಲ್ಲಿ ಒಂದಾಗಿ ಬದುಕಿನಲ್ಲಿ ಮುಂದೆ ಸಾಗುತ್ತಾರೆ. ಸುಖದಲ್ಲಿ ದುಃಖದಲ್ಲಿ ಜೊತೆಯಾಗಿ ಸಾಗುವ ದಂಪತಿಗಳ ಬದುಕಿನಲ್ಲಿ ಸಾಕಷ್ಟು ತೊಂದರೆಗಳು, ನೋವುಗಳು, ಆರ್ಥಿಕ ಪಡಿಪಾಟಲುಗಳು, ಸಂತಸ, ದುಃಖ ಹೀಗೆ ಹತ್ತು ಹಲವಾರು ಕಂತೆಗಳು ಇರುತ್ತವೆ. ಜೀವನ ನಮ್ಮೆಡೆಗೆ ಎಸೆಯುವ ಪ್ರತಿ ಸವಾಲಿಗೂ, ಪ್ರತಿ ಸಂಕಷ್ಟದ ಗಳಿಗೆಗೂ, ಪ್ರತಿಯೊಂದು ಒತ್ತಡಭರಿತ ತೊಂದರೆಗಳನ್ನು ದಂಪತಿಗಳು ಎದುರಿಸಲೇಬೇಕಾಗುತ್ತದೆ.ಆದರೆ ಜೀವನದ ಎಲ್ಲಾ ಸುಖ ದುಃಖಗಳಲ್ಲಿ ನಿಮಗೆ ಹೆಗಲು ಕೊಟ್ಟು ಎಲ್ಲವನ್ನು ನೀಗಿಸಿಕೊಂಡು ಹೋಗುವ ಸಂಗಾತಿ ಇದ್ದರೆ ಬದುಕು ಭಾರವೆನಿಸುವುದಿಲ್ಲ.ಒಬ್ಬರಿಗೊಬ್ಬರು ಜೊತೆಯಾಗಿಬದುಕಿನ ಎಲ್ಲ ಬವಣೆಗಳನ್ನು ನೀಗಿಕೊಂಡು ಒಬ್ಬರಿಗೊಬ್ಬರು ಆಸರೆಯಾಗುತ್ತಾರೆ, ಚೈತನ್ಯ ಶಕ್ತಿಯಾಗುತ್ತಾರೆ.ಒಬ್ಬರಿನ್ನೊಬ್ಬರ ಭಾರವನ್ನು ಹೊರುವ ಮೂಲಕ ಪ್ರೀತಿಯ ನವ ಪರಿಭಾಷೆಯನ್ನು ಬರೆಯುತ್ತಾರೆ. ಹಲವಾರು ಬಾರಿ ಸೋತರೂ ಜೊತೆಯಾಗಿ ಗೆಲ್ಲುತ್ತಾರೆ. ಒಬ್ಬರಿಗೊಬ್ಬರು ಪರಸ್ಪರ ಸಹಾಯವಾಗಿ ಬದುಕುತ್ತಾರೆ. ಜೀವನದ ಕಠಿಣ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಿಸೆಂಬರ ೨ ರಂದು ಇವಣಗಿ ಗ್ರಾಮದಲ್ಲಿ ನಡೆಯುವ ಬಸವನಬಾಗೇವಾಡಿ ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಸಿದ್ಧರಾಮ ಬಿರಾದಾರ ಅವರನ್ನು ಬಸವ ಜನ್ಮಭೂಮಿ ಪ್ರತಿಷ್ಠಾನ ಹಾಗೂ ಕನ್ನಡ ಪುಸ್ತಕ ಪರಿಷತ್ತಿನ ಪದಾಧಿಕಾರಿಗಳು ವಿಜಯಪುರದ ಅವರ ನಿವಾಸದಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಪ್ರತಿಷ್ಠಾನದ ಸಂಚಾಲಕ, ಸಾಹಿತಿ ಮುರುಗೇಶ ಸಂಗಮ ಮಾತನಾಡಿ, ಬಸವೇಶ್ವರರು ಜನಿಸಿ ಓಡಾಡಿದ ಬಸವನಬಾಗೇವಾಡಿಯ ನೆಲವೆ ಪಾವನ ಭೂಮಿ. ಈ ಪವಿತ್ರ ಕ್ಷೇತ್ರಕ್ಕೆ ಸಮೀಪದ ಇವಣಗಿ ಗ್ರಾಮ ಒಂದು ಸುಕ್ಷೇತ್ರ. ಇಂಥ ಪಾವನ ಪರಿಸರದಲ್ಲಿ ಜರುಗಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯ ಸ್ಥಾನ ಸಾಹಿತಿ ಸಿದ್ಧರಾಮ ಬಿರಾದಾರ ಅವರಿಗೆ ಒಲಿದು ಬಂದಿರುವುದು ಸಂತಸದ ಸಂಗತಿ.ಮನಗೂಳಿ ಪಟ್ಟಣದ ಬಿರಾದಾರ ಅವರು ಉಕ್ಕಲಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದು, ಸಾಹಿತ್ಯ ಕೃಷಿ ಮಾಡುತ್ತ ಖುಷಿಯಾಗಿದ್ದಾರೆ. ಇವರ ೧೧ ಕೃತಿಗಳು ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಣೆಯಾಗಿದ್ದು ಹಿರಿಯ ಸಾಹಿತಿಗಳ…

Read More

ಸಾರ್ವಜನಿಕರಲ್ಲಿ ತೀವ್ರ ಕುತೂಹಲ | ಹಲವು ಸದಸ್ಯರಿಗೆ ಪ್ರವಾಸ ಭಾಗ್ಯ ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಇಲ್ಲಿನ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುಧ್ಧ ಅವಿಶ್ವಾಸ ವ್ಯಕ್ತಪಡಿಸಿ ಹಲವು ಸದಸ್ಯರಿಂದ ಜಮಖಂಡಿ ಉಪ ವಿಭಾಗಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಸೂಚನೆ ಪರ್ಯಾಲೋಚಿಸಲು ಶನಿವಾರ (ನ.೩೦) ಚಿಮ್ಮಡ ಗ್ರಾ.ಪಂ. ಕಾರ್ಯಾಲಯದಲ್ಲಿ ಸರ್ವ ಸದಸ್ಯರ ಸಭೆ ಕರೆಯಲಾಗಿದೆ.ಇಪ್ಪತ್ತೆಂಟು ಸದಸ್ಯಬಲದ ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕಳೆದ ಹದಿನೈದು ತಿಂಗಳ ಹಿಂದೆ ಬಿಜೆಪಿ ಬೆಂಬಲಿತ ೧೯ ಸದಸ್ಯರ ಬೆಂಬಲದೊಂದಿಗೆ ಶ್ರೀಮತಿ ಮಾಲಾ ಅಶೋಕ ಮೋಟಗಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರು.ನಂತರ ನಡೆದ ಆಂತರಿಕ ಬೆಳವಣಿಗೆಯಲ್ಲಿ ಮಾಲಾ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದರು, ೧೯/೯ ಪರ ವಿರೋಧ ಬಲವಿರುವ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ೧೯ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿ ಜಮಖಂಡಿ ಉಪ ವಿಭಾಗಾಧಿಕಾರಿ ಶ್ವೇತಾ ಮೋಹನ ಬಿರಡಿಕರರಿಗೆ ಮನವಿ ಸಲ್ಲಿಸಲಾಗಿದ್ದು, ಅವರು ವಿಶ್ವಾಸ ಮತಯಾಚನೆಗಾಗಿ ಶನಿವಾರ (ನ.೩೦) ಚಿಮ್ಮಡ ಗ್ರಾ.ಪಂ. ಕಾರ್ಯಾಲಯದಲ್ಲಿ ಸರ್ವ ಸದಸ್ಯರ ಸಭೆ ಕರೆಯಲಾಗಿದ್ದು ಈ ಸಂಬಂದ ನೋಟಿಸ್ ಜಾರಿ…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಅನೇಕರು ಆಳ್ವಿಕೆ ನಡೆಸಿದ ರಾಜ ಮನೆತನಗಳ ಸಾಂಸ್ಕೃತಿಕ ಇತಿಹಾಸವನ್ನು ಕುರಿತು ಮತ್ತು ಇಲ್ಲಿನ ಮೂಲ ಇತಿಹಾಸದ ಕುರಿತು ಅಧ್ಯಯನ ಅವಶ್ಯಕವಾಗಿದೆ ಎಂದು ವಿಭಾಗೀಯ ಪತ್ರಗಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಾ.ವೀರಶೆಟ್ಟಿ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಅಡಿಯಲ್ಲಿ ಇತಿಹಾಸ ವಿಭಾಗ ಮತ್ತು ಪತ್ರಗಾರ ಇಲಾಖೆ ವಿಭಾಗೀಯ ಕಚೇರಿಯ ಸಹಯೋಗದಲ್ಲಿ ನಡೆದ ಪತ್ರಗಾರ ಪರಿಚಯ ಉಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡುತ್ತಾ ಮೊಘಲರ ಆಳ್ವಿಕೆಯ ಕಾಲದ ಇತಿಹಾಸದ ದಾಖಲೆಗಳು ಪುಣೆ, ಮುಂಬೈನಲ್ಲಿವೆ, ನಿಜಾಮರ ಆಳ್ವಿಕೆಯ ಕಾಲದ ಇತಿಹಾದ ದಾಖಲೆಗಳು ಹೈದ್ರಾಬಾದ್‌ನಲ್ಲಿವೆ. ಕೆಲವು ದಾಖಲಾತಿಗಳು ಚೆನ್ನೈನಲ್ಲಿವೆ. ಇಷ್ಟಾಗಿಯೂ ೩೯ ವಿಭಾಗಗಳಿಗೆ ಸಂಬಂಧ ಪಟ್ಟ ೧೬ ಲಕ್ಷ ಕಡತಗಳೂ ಕಲಬುರಗಿಯಲ್ಲಿ ಲಭ್ಯವಿವೆ. ಇವುಗಳನ್ನು ವಿದ್ಯಾರ್ಥಿಗಳು ಸಂಶೋಧನೆಗಾಗಿ ಸಹಾಯ ಪಡೆದುಕೊಳ್ಳಬಹುದು. ಇನ್ನೂ ಹೆಚ್ಚಿನ ಇತಿಹಾಸ ಅರಿಯುವ ಸಲುವಾಗಿ ಸಂಶೋಧನೆಗಳು ಜಾರಿಯಲ್ಲಿವೆ ಎಂದು ಮಾಹಿತಿ ನೀಡಿದರು.ವಿರೇಂದ್ರ ಪಾಟೀಲ್ ಕಾಲೇಜು ಪ್ರಾಚಾರ್ಯ ಕೆ. ನಾರಾಯಣ ಮಾತನಾಡುತ್ತಾ…

Read More

ರಾಷ್ಟ್ರೀಯ ಫ್ಲೋರೋಸಿಸ್ ತಡೆ ಜಾಗೃತಿ ಕಾರ್ಯಕ್ರಮ | ಶಾಲಾ ಮಕ್ಕಳಿಗೆ ಫ್ಲೋರೈಡ್ ಕುರಿತು ಅರಿವು ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಸೇವಿಸುವ ಆಹಾರ ಹಾಗೂ ಕುಡಿಯುವ ನೀರಿನಲ್ಲಿ ಅಗತ್ಯಕ್ಕಿಂತಲೂ ಹೆಚ್ಚು ಫ್ಲೋರೈಡ್ ಯುತ ಅಂಶ ಇದ್ದರೆ ಫ್ಲೋರೋಸಿಸ್ ವ್ಯಾಧಿ ಬಾಧಿಸಿ ದೇಹದ ಶರೀರಕ್ಕೆ ಆವರಿಸುತ್ತದೆ. ಇದರಿಂದ ಭಾಗಶಃ ದೇಹದ ಹಲವಾರು ಭಾಗಗಳಲ್ಲಿ ಗಂಭೀರ ಸ್ವರೂಪದ ದುಷ್ಪರಿಣಾಮಗಳು ತಲೆದೋರುತ್ತವೆ. ಬಗೆಬಗೆಯ ಸಮಸ್ಯೆಗಳು ಉಲ್ಬಣಗೊಂಡು ನರಳಾಟದ ಯಾತನೆಯಲ್ಲಿ ಬದುಕು ಕಳೆಯುವಂತೆ ಮಾಡುತ್ತದೆ. ಕಾರಣ ಫ್ಲೋರೈಡ್ ಅಂಶವನ್ನು ಹೊಂದಿರುವ ನೀರು, ಆಹಾರ ಸೇವನೆ ಬಗ್ಗೆ ಯುವಜನತೆ ಬಹು ಜಾಗರೂಕತೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಜಿಲ್ಲಾ ಸಮಾಲೋಚಕ ಡಾ.ಬಾಬುರಡ್ಡಿ ಕೆಂಗಲಗುತ್ತಿ ಹೇಳಿದರು.ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಜಿಲ್ಲಾ ಆಸ್ಪತ್ರೆ ಬಾಗಲಕೋಟೆ ಫ್ಲೋರೋಸಿಸ್ ಪ್ರಯೋಗಾಲಯ ಜಿಲ್ಲಾ ಸಮೀಕ್ಷಾ ಘಟಕದ ವತಿಯಿಂದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಾಗಲಕೋಟೆ ಇವರ ಆಶ್ರಯದಲ್ಲಿ…

Read More

ಬಿಜೆಪಿ ಬಣ ಸಂಘರ್ಷಕ್ಕೆ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಬೇಸರ | ಯತ್ನಾಳ್ & ಜಾರಕಿಹೊಳಿ ವಿರುದ್ಧ ಕಿಡಿ ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಬಿಜೆಪಿ ಪಕ್ಷಕ್ಕೆ ಇವತ್ತು ಒದಗಿಬಂದಿರುವ ಸ್ಥಿತಿ ಒಂದು ದುರಂತ ಹಾಗೂ ನೋವಿನ ಸಂಗತಿ ಎಂದು ರಾಜ್ಯದ ಬಿಜೆಪಿಯ‌ ಬಣ ಸಂಘರ್ಷಕ್ಕೆ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರ ಒಂದು ತಂಡ ನಡೆಸುತ್ತಿರುವ ಹೋರಾಟಕ್ಕಿಂತ ಪಕ್ಷದ ನಾಯಕರ ನಡುವಿನ ಭಿನ್ನಮತವೇ ಹೆಚ್ಚು ಸದ್ದು ಮಾಡುತ್ತಿದೆ. ಈ ಬಗ್ಗೆ ಹೈಕಮಾಂಡ್ ಗೆ ಎರಡು ಬಾರಿ ಪತ್ರ ಬರೆದರೂ ಅವರು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಹೇಳಿದರು.ತಮ್ಮ ಪತ್ರಗಳ ಹೊರತಾಗಿಯೂ ಪಕ್ಷದ ಹೈಕಮಾಂಡ್ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರಲ್ಲದೇ ಇನ್ನು ಮುಂದಾದರೂ ಪಕ್ಷದೊಳಗಿನ ಗುಂಪುಗಾರಿಕೆ ಬಗ್ಗೆ ಹೈಕಮಾಂಡ್‌ನ ಮೌನ ಮುರಿಯಬೇಕು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೨೦೨೪ನೆಯ ಸಾಲಿನ ಮುಂಗಾರು ಹಂಗಾಮಿನಲ್ಲಿ ತೊಗರಿ ಬೆಳೆ ವಿಮೆ ಪಾವತಿಸಿದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ಹಾನಿಯಾದ ರೈತರು ಅರ್ಜಿ ಸಲ್ಲಿಬಹುದು.ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಲ್ಲಲ್ಲಿ ತೊಗರಿ ಬೆಳೆ ಬೆಳೆದ ರೈತರ ಜಮೀನುಗಳಲ್ಲಿ ಹವಾಮಾನ ವೈಪರಿತ್ಯದಿಂದ ಹೂವು ಮತ್ತು ಕಾಯಿ ಉದುರುತ್ತಿರುವುದು ಕಂಡುಬಂದಲ್ಲಿ ಬೆಳೆ ವಿಮೆ ಪಾವತಿಸಿದ ರೈತರು ಮನವಿ ಅರ್ಜಿಯೊಂದಿಗೆ ಬೆಳೆ ವಿಮೆ ಪಾವತಿಸಿದ ರಶೀದಿ, ಬೆಳೆಯ ಜಿಪಿಎಸ್ ಭಾವಚಿತ್ರ ಹಾಗೂ ಮೋಬೈಲ್ ನಂಬರ್‌ನ್ನು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಗಳಾದ ಸಿಂದಗಿ ಭಾಗದ ರೈತರು ಪ್ರೀತಮ್ ಬಳಬಟ್ಟಿ, ದೇವರ ಹಿಪ್ಪರಗಿ ಭಾಗದ ರೈತರು ರಾಜೇಶ ಬ್ಯಾಲಾಳ ಹಾಗೂ ಆಲಮೇಲ ಭಾಗದ ರೈತರು ಮುತ್ತು ಬಳಬಟ್ಟಿ ಅವರನ್ನು ಸಂಪರ್ಕಿಸಬೇಕು. ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಹಾಗೂ ವಿಮಾ ಸಂಸ್ಥೆಯ ಪ್ರತಿನಿಧಿಯ ೭೦೧೯೦೪೯೬೯೨/೮೧೫೦೦೭೬೧೧೫/೯೩೫೩೩೮೧೧೬೨ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರ ಎಚ್.ವೈ.ಸಿಂಗೆಗೋಳ ಪತ್ರಿಕಾ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಳೆ ಬಂದರೆ ಸಿಂದಗಿ ನಗರದ ಸಂಗಮ್ ಬಾರ್ ಬಳಿಯ ಮುಖ್ಯ ರಸ್ತೆಯಲ್ಲಿನ ಅಂಗಡಿ ಮತ್ತು ಮನೆಗಳಲ್ಲಿ ನೀರು ಒಳಗಡೆ ತುಂಬಿದ್ದನ್ನು ಕಣ್ಣಾರೆ ಕಂಡಿದ್ದು ಇದೆ. ಹೀಗಾಗಿ ನಗರದ ಜನತೆಯ ಬಹುದಿನಗಳ ಬೇಡಿಕೆಯಾದ ಈ ಮುಖ್ಯ ರಸ್ತೆಯ ಕಾಮಗಾರಿ ಸಂತೋಷದಿಂದ ನೇರವೇರಿಸಿದ್ದೇವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸೋಂಪುರ ರಸ್ತೆಯ ಬಸವ ಮಂಟಪದ ಹತ್ತಿರ ಲೋಕೋಪಯೋಗಿ ಇಲಾಖೆ ಸಿಂದಗಿ ಉಪವಿಭಾಗ, ೨೦೨೪-೨೫ನೆಯ ಸಾಲಿನ ೫೦೫೪-೦೪-೩೩೭-೦-೦೧-೧೫೪ ಅಪೆಂಡಿಕ್ಸ್ ಯೋಜನೆಯ ಅಡಿಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಂಬಾ-ಸಿಂದಗಿ ವಾಯಾ ಬಂಥನಾಳ-ಚಾಂದಕವಟೆ-ಸೋಂಪುರ ಜಿಲ್ಲಾ ಮುಖ್ಯ ರಸ್ತೆ(ಸಿಂದಗಿ ಪಟ್ಟಣದ ಪರಿಮಿತಿ) ೧ಕೋಟಿ ೫೦ಲಕ್ಷ ರೂ. ಅನುದಾನದ ಸಿಸಿ ರಸ್ತೆ ಹಾಗೂ ಸಿಸಿ ಡ್ರೇನ್ ನಿರ್ಮಿಸುವ ಕಾಮಗಾರಿ ಭೂಮಿ ಪೂಜೆ ನೇರವೇರಿಸಿ ಮಾತನಾಡಿದರು.ಇಲ್ಲಿನ ನಿವಾಸಿಗಳಿಗೆ ಉತ್ತಮ ಗುಣಮಟ್ಟದ ರಸ್ತೆ ಮಾಡಿಕೊಡಬೇಕು ಎನ್ನುವ ದೃಷ್ಟಿಯಿಂದ ಈ ಕಾಮಗಾರಿಯ ಭೂಮಿ ಪೂಜೆಯನ್ನು ನೇರವೇರಿಸಲಾಗಿದೆ. ಪುರಸಭೆ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಪುರಸಭೆ ಸದಸ್ಯರು ಈ ೧ಕೋಟಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹಲವು ವರ್ಷಗಳಿಂದ ಅಂಚೆ ಇಲಾಖೆ ಕೇವಲ ಸಂವಹನ ಹಾಗೂ ಪತ್ರ ವ್ಯವಹಾರಗಳ ನಿರ್ವಹಣೆಗೆ ಮಾತ್ರ ಸೀಮಿತವಾಗಿತ್ತು. ಆದರೆ ಇಂದು ಅಂಚೆ ಇಲಾಖೆ ಬ್ಯಾಂಕ್‌ಗಳಂತೆ ಭ್ರಷ್ಟಾಚಾರ ರಹಿತ, ಸಾರ್ವಜನಿಕ ಆರ್ಥಿಕತೆ ವ್ಯವಹಾರಗಳ, ಜನಸ್ನೇಹಿ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಿಂದಗಿ ಅಂಚೆ ವಿಭಾಗದ ಮೇಲ್ವಿಚಾರಕ ಮನೋಹರ ಪೋಳ ಹೇಳಿದರು.ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಅಂಚೆ ಇಲಾಖೆ ವತಿಯಿಂದ ಹಮ್ಮಿಕೊಂಡ ಅಂಚೆ ಇಲಾಖೆ ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಅಂಚೆ ಇಲಾಖೆಯ ವಿವಿಧ ಯೋಜನೆಗಳ ಲಾಭ ಪಡದುಕೊಳ್ಳಬೇಕು. ಇಲಾಖೆಯಲ್ಲಿ ಮಕ್ಕಳಿಂದ ವೃದ್ಧರವರೆಗೆ ಅನೇಕ ಉಪಯುಕ್ತ ಯೋಜನೆಗಳಿವೆ. ಇಲಾಖೆ ಒಂದೇ ಸೂರಿನಡಿ ಗ್ರಾಹಕರಿಗೆ ಹಲವು ಸೇವೆಗಳನ್ನು ಒದಗಿಸುತ್ತವೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಗೋಲಗೇರಿ ಗೋಲ್ಲಾಳೇಶ್ವರ ದೇವಸ್ಥಾನದ ಧರ್ಮದರ್ಶಿ ಸಿದ್ದರಾಮಸಾಹು ದೇವರಮನಿ ಸಾನಿಧ್ಯ ವಹಿಸಿದ್ದರು. ಗೋಲಗೇರಿ ಗ್ರಾಮದ ಮುಖಂಡ ಬಸವರಾಜ ಮಾರಲಭಾವಿ, ಓಂಪ್ರಕಾಶ ಬಿರಾದಾರ, ಬಸನಗೌಡ ಮೇಲಿನಮನಿ, ಗೌಡಣ್ಣ ಬಜಂತ್ರಿ, ಮಡಿವಾಳ ನಾಯ್ಕೋಡಿ, ಕಲ್ಯಾಣಿ ಯಂಕಂಚಿ, ಪತ್ರಕರ್ತ ಮಲ್ಲು ಕೆಂಭಾವಿ, ಗೋಲ್ಲಾಳಪ್ಪ ಕರ್ನಾಳ, ಚನ್ನಬಸು ಪಟ್ಟಣಶೆಟ್ಟಿ, ಹುಸೇನ…

Read More