Author: editor.udayarashmi@gmail.com

’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿ, ಮೊ:೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ “ಸಮಯ ನೋಡಲು ಸಮಯವಿಲ್ಲ. ಯಾವುದಕ್ಕೂ ಪುರುಸೊತ್ತಿಲ್ಲ. ದಿನದ ೨೪ ಗಂಟೆ ಸಾಲುತ್ತಿಲ್ಲ. ಕುಟುಂಬ, ಮನರಂಜನೆ,ವಿಶ್ರಾಂತಿ, ನೆಮ್ಮದಿಯಂತೂ ಕನಸಿನ ಮಾತಾಗಿದೆ” ಅನ್ನೋ ಮಾತುಗಳು ದಿನಾಲು ಕಿವಿಗೆ ಬೀಳುತ್ತಲೇ ಇರುತ್ತವೆ. ಸಮಯ ಮತ್ತು ಸಮುದ್ರದ ಅಲೆ ಯಾರಿಗಾಗಿಯೂ ಕಾಯುವುದಿಲ್ಲ ಎನ್ನುವ ಮಾತನ್ನು ನಾವೆಲ್ಲ ಕೇಳಿದ್ದೇವೆ. ಹಾಗೆ ನೋಡಿದರೆ ಸಮಯ ನಿರ್ವಹಣೆಯೇ ಜೀವನ ಅನ್ನುವಷ್ಟು ಸಮಯ ಮಹತ್ವದ್ದಾಗಿದೆ. ಒಮ್ಮೆ ಕಳೆದು ಹೋದರೆ ಮರಳಿ ಪಡೆಯಲಾಗದಂತಹ ಸಂಪತ್ತು. ಅದಕ್ಕೆ ಸಮನಾದುದು ಯಾವುದು ಇಲ್ಲ. ಜಗತ್ತಿನ ಅತಿ ಶ್ರೀಮಂತ ವ್ಯಕ್ತಿ ಏನೆಲ್ಲವನ್ನೂ ಕೊಳ್ಳಬಹುದು ಆದರೆ ಸಮಯವನ್ನು ಕೊಳ್ಳಲಾರ. ಯಾರ ಕೈಗೂ ಸಿಗದೇ ಓಡುವ ವಸ್ತು ಎಂದರೆ ಸಮಯ. ಅದರ ನಿರ್ವಹಣೆ ಗೊತ್ತಿರುವವನು ಅಸಾಧ್ಯವಾಗಿರುವುದನ್ನು ಸಾಧ್ಯವಾಗಿಸಬಲ್ಲ. ಜೀವನದ ಎಲ್ಲ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಮಯದ ಮೌಲ್ಯವನ್ನು ಅರ್ಥ ಮಾಡಿಕೊಳ್ಳಬೇಕು.ಸಮಯ ನಿರ್ವಹಣೆ ಎಂದರೆ..?ಸರಿಯಾದ ಚಟುವಟಿಕೆಗಳಿಗೆ ಸರಿಯಾದ ಸಮಯವನ್ನು ನಿಗದಿಪಡಿಸುವುದು. ಸೀಮಿತ ಸಮಯದಲ್ಲಿ…

Read More

ಹಗಲು ೭ ಘಂಟೆ ತ್ರಿಫೆಸ್, ರಾತ್ರಿ ಸಿಂಗಲ್ ಫೆಸ್ ಕರೆಂಟ್ ಕೊಡಲು ರೈತ ಸಂಘ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನಲ್ಲಿ ಹಗಲು ೭ ಘಂಟೆ ತ್ರೀ ಫೆಸ್ ಹಾಗೂ ರಾತ್ರಿ ಹೊತ್ತು ಸಿಂಗಲ್ ಫೆಸ್ ಕರೆಂಟ್ ಕೊಡಬೇಕು ಜೊತೆಗೆ ಹಲವಾರು ಕಡೆಗಳಲ್ಲಿ ಹಳೆಯ ಕಂಬ ಹಾಗೂ ವಾಯರ್‌ಗಳನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹೊನ್ನುಟಗಿ ಹೆಸ್ಕಾಂ ಉಪ ವಿಭಾಗಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಯಿತುಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡುತ್ತಾ, ಹುಬ್ಬಳ್ಳಿ ಹೆಸ್ಕಾಂ ವಿದ್ಯುತ್ ಇಲಾಖೆಯಿಂದ ಸರಿಯಾಗಿ ಕರೆಂಟ್ ಹಾಕದಿರುವ ಕಾರಣ ಆಕ್ಟೋಬರ್ ೧೦ ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹುಬ್ಬಳ್ಳಿ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ಮಾಡಿರುವ ಪ್ರತಿಫಲವಾಗಿ ಹೆಸ್ಕಾಂ ಎಂ.ಡಿ ಅವರು ಇನ್ನುಮುಂದೆ ವಿದ್ಯುತ್ ಸಮಸ್ಯೆಯಾಗದಂತೆ ಅಧಿಕೃತ ಆದೇಶ ಹೊರಡಿಸಿರುತ್ತಾರೆ.ಆದರೆ ಪ್ರಸ್ತುತ ದಿನಮಾನಗಳಲ್ಲಿ…

Read More

ಮೋರಟಗಿಯಿಂದ ಅರಕೇರಿವರೆಗೆ ದೀಡ್ ನಮಸ್ಕಾರ | ಯುವ ಮುಖಂಡನ ೧೨೦ ಕಿ.ಮೀ. ಕಠಿಣ ಯಾತ್ರೆ ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ದು ಕೆರಿಗೊಂಡಮೋರಟಗಿ: ಮುಸ್ಲಿಂ ಯುವ ಮುಖಂಡರೊಬ್ಬರು ಹಿಂದೂ ದೇವರಿಗೆ ಹೊತ್ತ ಹರಕೆಯನ್ನು ತೀರಿಸುವ ಮೂಲಕ ಸಮಾಜಕ್ಕೊಂದು ಸೌಹಾರ್ದ ಸಂದೇಶ ಸಾರುತ್ತಿದ್ದಾರೆ.ಇದು ಸಣ್ಣ ಹರಕೆಯಲ್ಲ, ಐದು ದಿನಗಳ ಕಠಿಣ ದೇಹದಂಡನೆ. ಈ ಹರಕೆಗೆ ಎಲ್ಲ ಸಮಾಜದ ೬೦ಕ್ಕೂ ಹೆಚ್ಚು ಜನ ಸಾಥ್ ನೀಡಿದ್ದಾರೆ.ಪಟ್ಟಣದ ಕಾಂಗ್ರೆಸ್ ಯುವ ಮುಖಂಡ ಯುಸೂಫ್ ಯಾಕೂಬ್ ಸಾಬ್ ಮುಲ್ಲಾ ಹರಕೆ ಹೊತ್ತವರು.ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಿಂದಗಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದರೆ ಪಟ್ಟಣದಿಂದ ಅರಕೇರಿ ಗುಡ್ಡದಲ್ಲಿರುವ ಭಂಡಾರದ ಒಡೆಯ ಅಮೋಘಸಿದ್ಧೇಶ್ವರ ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರ ಹಾಕಿ ಹರಕೆ ತೀರಿಸುವುದಾಗಿ ಯುಸೂಫ್ ಹರಕೆ ಹೊತ್ತಿದ್ದರು. ಪಟ್ಟಣದಿಂದ ಈ ದೇವಸ್ಥಾನ ೧೨೦ ಕಿ.ಮೀ.ದೂರದಲ್ಲಿದ್ದು, ಬುಧವಾರ ಬೆಳಗ್ಗೆ ಪಟ್ಟಣದ ಕನ್ನಯ್ಯ ಮುತ್ಯಾ ದೇವಸ್ಥಾನದಿಂದ ಹರಕೆ ಯಾತ್ರೆ ಆರಂಭಿಸಿದ್ದಾರೆ. ಪ್ರತಿ ದಿನ ಅಂದಾಜು ೨೫ ಕಿ.ಮೀ. ದೂರ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಜಗತ್ತಿಗೆ ಸಾರಿರುವ ದೇಶ, ನಮ್ಮ ಸಂವಿಧಾನ ರಚನೆಯ ಸಂದರ್ಭದಲ್ಲಿ ರಚನಾ ಸಮಿತಿಯವರು ಜಗತ್ತಿನಾದ್ಯಂತ ಸುತ್ತಾಡಿ ಅಲ್ಲಿನ ಸಂವಿಧಾನಗಳನ್ನು ಅದ್ಯಯನ ಮಾಡಿ ಅವುಗಳಲ್ಲಿರುವ ಉತ್ತಮ ಅಂಶಗಳನ್ನು ಕ್ರೂಡಿಕರಿಸಿ ನಮ್ಮ ದೇಶದ ಘನತೆ ಗೌರವ ಎತ್ತಿಹಿಡಿಯುವ ಜಗತ್ತಿನ ಅತಿದೊಡ್ಡ ಸಂವಿಧಾನ ರಚಿಸಿದ್ದಾರೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.ಮಂಗಳವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಮತ್ತು ಸಿ.ವ್ಹಿ.ರಾಮನ್ ವಿಜ್ಞಾನ ಪದವಿ ಪೂರ್ವ ಕಾಲೇಜು, ಇಂಡಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ “ಸಂವಿಧಾನ ದಿನ” ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಈ ಸಂವಿಧಾನದ ಕುರಿತು ಸದನದಲ್ಲಿ ಚರ್ಚಿಸುವ ಸಮಯದಲ್ಲಿ ಕ್ಲಿಷ್ಟಕರವಾದ ಸಂದರ್ಭದಲ್ಲಿ, ಕ್ಲಿಷ್ಟಕರವಾದ ಸಮಸ್ಯೆಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಮಾತ್ರ ಉತ್ತರ ನೀಡುತ್ತಿದ್ದರು. ಸಂವಿಧಾನ ಹೇಗೆ ಅನ್ವಯಿಸುತ್ತೆ ಅಂದರೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಥಿಮ್ ಸಾಂಗ್ ನಲ್ಲಿರುವಂತೆ ನೀರಿನಂತೆ ನ್ಯಾಯ ಎಲ್ಲರಿಗೂ,…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಭಾರತ ಭಾವೈಕ್ಯತೆಯಲ್ಲಿ ಏಕತೆಯನ್ನು ಸಾರುವ ದೇಶವಾಗಿರುವುದರ ಜೊತೆಗೆ ಧಾರ್ಮಿಕತೆ, ಸಂಪ್ರದಾಯ, ಸಂಸ್ಕೃತಿ, ಆಚರಣೆಗಳಿಗೂ ಇಲ್ಲಿ ತನ್ನದೇ ಆದ ಮಹತ್ವಗಳಿವೆ. ಪ್ರತಿಯೊಂದು ಧರ್ಮದವರು ಶ್ರದ್ಧೆ ಸಂಪ್ರದಾಯಗಳಿಂದ ತಮ್ಮ ತಮ್ಮ ಹಬ್ಬಗಳ ಆಚರಣೆಯನ್ನು ನಡೆಸುತ್ತಾರೆ ಎಂದು ಉಜೈನಿ ಜಗದ್ಗುರು ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.ಅವರು ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ಕಾರ್ತಿಕ ಮಾಸದ ಜೋಡಗುಡಿಯ ಶ್ರೀ ಮರುಳಸಿದ್ದೇಶ್ವರ ದೇವರ ಜಾತ್ರೆಯ ನಿಮಿತ್ತವಾಗಿ ಹಮ್ಮಿಕೊಂಡಿದ್ದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.ನವರಾತ್ರಿಯ ನಂತರ ಬರುವ ದೀಪಾವಳಿ ದೀಪಗಳ ಹಬ್ಬವಾಗಿದ್ದು, ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ಉದ್ದೇಶವನ್ನು ತಿಳಿಸುತ್ತದೆ. ಅಜ್ಞಾನದಿಂದ ಜ್ಞಾನದೆಡೆಗೆ ಸಾಗುವ ಪ್ರಯಾಣವನ್ನು ಸೂಚಿಸುತ್ತದೆ. ದೀಪಾವಳಿಯ ಹಬ್ಬದಂದು ಬರುವ ಕಾರ್ತಿಕ ಮಾಸ ಕೂಡ ತನ್ನದೇ ಆದ ಮಹತ್ವ ಹಾಗೂ ಐತಿಹಾಸಿಕ ಅಂಶಗಳಿಂದ ಉಲ್ಲೇಖಿತಗೊಂಡಿದೆ. ಕಾರ್ತಿಕ ಮಾಸದಲ್ಲಿ ದೀಪಗಳನ್ನು ಬೆಳಗಿಸುವವರು ತಮ್ಮ ಪೂರ್ವಜರ ಆಶೀರ್ವಾದ ಪಡೆಯುತ್ತಾರೆ ಎಂಬ ನಂಬಿಕೆ ಇದೆ. ಅಷ್ಟೇ ಅಲ್ಲ ಕಾರ್ತಿಕ ಮಾಸದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದಲ್ಲಿರುವ ಮೆಗಾ ಮಾರುಕಟ್ಟೆ ಕಟ್ಟಡದ ಮುಂಭಾಗ ಹಾಗೂ ಅದರ ಕಂಬಗಳಿಗೆ ಯಾವುದೇ ಬ್ಯಾನರ್ಗಳನ್ನು ಕಟ್ಟಬಾರದು ಎಂದು ಜಿಲ್ಲಾಧಿಕಾರಿಗಳು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಚೆಗೆ ಜಿಲ್ಲಾಧಿಕಾರಿಗಳು ಪಟ್ಟಣಕ್ಕೆ ಬಂದಾಗ ಮೆಗಾಮಾರುಕಟ್ಟೆ ಕಟ್ಟಡದ ಮುಂಭಾಗ ಇಲ್ಲವೇ ಅದರ ಕಂಬಗಳಿಗೆ ಯಾರೂ ಬ್ಯಾನರ್ ಅಳವಡಿಸದಂತೆ ಪುರಸಭೆ ಅಧಿಕಾರಿಗಳು ಗಮನಹರಿಸಬೇಕು. ಈ ಕುರಿತು ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವದನ್ನು ಕರವೇ ಖಂಡಿಸುತ್ತದೆ. ಮುಂಬರುವ ದಿನಗಳಲ್ಲಿ ಯಾರಾದರೂ ಮೆಗಾಮಾರುಕಟ್ಟೆ ಮುಂಭಾಗ, ಕಂಬಗಳಿಗೆ ಬ್ಯಾನರ್ ಅಳವಡಿಸಿದರೆ ಪುರಸಭೆ ಅಧಿಕಾರಿಗಳ ವಿರುದ್ದ ಕರವೇ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಲ್ಲಲ್ಲಿ ಜಿಆರ್ಜಿ೧೫೨ ತಳಿ ತೊಗರಿ ಬೆಳೆದ ರೈತರ ಜಮೀನುಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹೂ ಮತ್ತು ಕಾಯಿ ಉದುರುತ್ತಿರುವುದು ಕಂಡುಬಂದಲ್ಲಿ ರೈತ ಬಾಂಧವರು ಬೆಳೆ ವಿಮೆ ನೋಂದಣಿ ಮಾಡಿದ ರಶೀದಿ, ಜಿಪಿಎಸ್ ಪೋಟೋದೊಂದಿಗೆ ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರ ಇಲ್ಲವೇ ವಿಮಾ ಸಂಸ್ಥೆಯ ಪ್ರತಿನಿಧಿ ಮೊ.ಸಂಖ್ಯೆ ೯೬೩೨೧೦೫೪೭೬ ಸಂಖ್ಯೆ ಸಂಪರ್ಕಿಸಿ ಸಲ್ಲಿಸಬೇಕೆಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್. ಯರಝರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪುರುಷರು ಸಂತಾನ ಶಕ್ತಿಹರಣ ಶಸ್ತ್ರ ಚಿಕಿತ್ಸೆಯ ಬಗ್ಗೆ ಇರುವ ಮೂಢನಂಬಿಕೆಗಳಿAದ ಹೊರ ಬರಬೇಕಿದೆ ಎಂದು ಕ್ಷೆತ್ರ ಆರೋಗ್ಯ ಶಿಕ್ಷಣಾಧಿಕಾರಿ ಎ.ಎಸ್.ತೇರದಾಳ ಹೇಳಿದರು.ಪಟ್ಟಣದ ಕಿಲ್ಲಾಗಲ್ಲಿಯ ಮಾರುತಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪುರುಷರ ಸಂತಾನ ಶಕ್ತಿಹರಣ ಶಸ್ತ್ರ ಚಿಕಿತ್ಸೆಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನ.೨೧ರಿಂದ ಡಿಸೇಂಬರ್ ೪ ರವರೆಗೆ ಸಪ್ತಾಹದ ಮೂಲಕ ಎನ್‌ಎಸ್‌ವಿ ಕುಟುಂಬ ಕಲ್ಯಾಣ ಯೋಜನೆ ಕುರಿತು ಪುರುಷ ಸಮುದಾಯದಲ್ಲಿ ಅರಿವು ಮೂಡಿಸಲಾಗುತ್ತಿದೆ. ಈ ಸಪ್ತಾಹದಲ್ಲಿ ಎನ್‌ಎಸ್‌ವಿ ಶಸ್ತ್ರಚಿಕಿತ್ಸೆ ಸೌಲಭ್ಯವನ್ನು ಎಲ್ಲ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಏರ್ಪಡಿಸಲಾಗಿ. ಹೆಚ್ಚಿನ ಸಂಖ್ಯೆಯಲ್ಲಿ ಪುರುಷರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸುತ್ತ ತಂಬಾಕು ಮುಕ್ತ ಯುವ ಅಭಿಯಾನ ೨.೦ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಪುರುಷರಿಗಾಗಿ ನೋ ಸ್ಕಾಲ್ ಪೆಲ್ ವ್ಯಾಸೆಕ್ಟಮಿ ಎಂಬ ವಿಧಾನ ವಿದ್ದು ಇದು ಸರಳ ಹಾಗೂ ವಿಶ್ವಾಸನೀಯ ಶಸ್ತ್ರ ಚಿಕಿತ್ಸೆ. ಈ ಹೊಸ ವಿಧಾನದಲ್ಲಿ ಗಾಯ, ಹೊಲಿಗೆ ಮಾಡಲಾಗವುದಿಲ್ಲ.…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಗ್ರಾಮದ ಬಾಲಾಜಿ ಶುಗರ್ಸ ಕಂಪನಿಯಲ್ಲಿ ಬುಧವಾರ ಕಬ್ಬು ಸಾಗಾಣಿಕೆ ಮಾಡುವ ವಾಹನಗಳ ಮಾಲೀಕರು ಮತ್ತು ಚಾಲಕರಿಗೆ ಪೊಲೀಸ್ ಇಲಾಖೆಯ ವತಿಯಿಂದ ಡಿವಾಯ್‌ಎಸ್‌ಪಿ ಬಲ್ಲಪ್ಪ ನಂದಗಾವಿ ನೇತೃತ್ವದಲ್ಲಿ ಸಂಚಾರಿ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಬ್ಬು ತುಂಬಿದ ವಾಹನಗಳು ರಸ್ತೆಯ ಅಪ್ ನಲ್ಲಿ ನಿಂತಾಗ ದೊಡ್ಡ ಕಲ್ಲುಗಳ ಸಹಾಯದಿಂದ ವಾಹನ ಹಿಂದೆ ಹೋಗದಂತೆ ಟ್ರಾö್ಯಕ್ಟರ್ ನ ಟ್ರಾಯಲಿಯನ್ನು ತಡೆಯಲಾಗಿರುತ್ತದೆ. ಆದರೆ ಟ್ರಾಯಲಿಯನ್ನು ದಾಟಿಸಿದ ಬಳಿಕ ಆ ಕಲ್ಲುಗಳನ್ನು ಅಲ್ಲಿಯೇ ಬಿಡುವದರಿಂದ ಅಪಘಾತಗಳಾಗುವ ಸಂಭವ ಹೆಚ್ಚಿದ್ದು ಅವುಗಳನ್ನು ಕಡ್ಡಾಯವಾಗಿ ರಸ್ತೆಯ ಪಕ್ಕದಲ್ಲಿ ಇರಿಸುವಂತೆ ಸೂಚಿಸಲಾಯಿತು. ಕಬ್ಬನ್ನು ಹೇರಿದ ಬಳಿಕ ಅದಕ್ಕೆ ಸೂಕ್ತವಾದ ಹಗ್ಗದಿಂದ ಬಿಗಿಯಾಗಿ ಕಟ್ಟುವಂತೆ, ವಾಹನದ ಹಿಂದೆ ಕಟ್ಟಾಯವಾಗಿ ರಿಫ್ಲೆಕಟ್ರ್ ಬ್ಯಾನರ್‌ಗಳನ್ನು ಅಳವಡಿಸುವಂತೆ, ರಸ್ತೆ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಸೂಚಿಸಲಾಯಿತು. ಫ್ಯಾಕ್ಟರಿಯ ಆಡಳಿತ ಮಂಡಳಿ, ವಾಹನಗಳ ಮಾಲೀಕರು ಮತ್ತು ಚಾಲಕರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ನೊಟೀಸು ನೀಡಲಾಯಿತು.ಈ ವೇಳೆ ಸಿಪಿಐ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಂಬಂಧ ಮುಖ್ಯವಲ್ಲ ಧರ್ಮವೇ ಪ್ರಧಾನ ಎನ್ನುವ ಆದರ್ಶ ಭಗವದ್ಗೀತೆಯ ತತ್ವದಲ್ಲಿ ಅಡಕವಾಗಿದೆ ಎಂದು ಸಾಹಿತಿ, ನಿವೃತ್ತ ಮುಖ್ಯಗುರು ಅಶೋಕ ಮಣಿ ಹೇಳಿದರು.ಪಟ್ಟಣದ ರೇವಣ ಸಿದ್ಧೇಶ್ವರ ಪ್ರೌಢ ಶಾಲೆಯಲ್ಲಿ ಶಿರಸಿಯ ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಯತಿವರೇಣ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಯೋಜಿಸಿರುವ ಭಗವದ್ಗೀತಾ ಅಭಿಯಾನ ಕರ್ನಾಟಕ-೨೦೨೪ ಸಂಬಂಧಿ ಶ್ಲೋಕ ಪಠಣ ಕೇಂದ್ರದಲ್ಲಿ ಅವರು ಮಾತನಾಡಿದರು.ರಾಮಾಯಣ, ಮಹಾಭಾರತದಂತಹ ಮಹಾಕಾವ್ಯಗಳಲ್ಲಿ ಅಧರ್ಮಕ್ಕೆ ಆದ ಅವನತಿಯನ್ನು ನೋಡಬಹುದಾಗಿದೆ. ಎಂತಹ ಕಠಿಣ ಪರಿಸ್ಥಿತಿಯನ್ನು ಎದುರಿಸದರೂ ಧರ್ಮ ಜಯವನ್ನೇ ಸಾಧಿಸಿದೆ. ಅಧರ್ಮದ ಕಾರ್ಯವನ್ನು ಮಾಡಬಾರದು. ಅಲ್ಲದೆ ಅಧರ್ಮಕ್ಕೆ ಎಂದೂ ಪ್ರೋತ್ಸಾಹ ಕೊಡಬಾದರು. ಜೀವನದ ಮೌಲ್ಯವನ್ನು ಎತ್ತಿ ಹಿಡಿಯುವುದು ಗೀತೆಯಾಗಿದೆ. ಸ್ತುತಿಗಳಿಂದ ಕ್ಲೇಶ ನಿವಾರಣೆ ಯಾಗುತ್ತದೆ ಎಂದರು.ಮುಖ್ಯಗುರು ಎಚ್.ಎನ್.ಇಟಗಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಅತೀ ಕಷ್ಟದ ಸಮಸ್ಯೆಗಳಿಗೆ ಸುಲಭದ ಮಾರ್ಗದಲ್ಲಿ ಪರಿಹಾರ ಭಗವದ್ಗೀತೆಯಲ್ಲಿದೆ. ಅದನ್ನು ಅರಿಯಬೇಕು ಎಂದರು.ಈ ಸಂದರ್ಭದಲ್ಲಿ ಅಭಿಯಾನದ ಸಂಚಾಲಕ ರಾಮಚಂದ್ರ ಹೆಗಡೆ, ಪ್ರಶಿಕ್ಷಕಿ ರಂಜಿತಾ ಹೆಗಡೆ ಶಿಕ್ಷಕರಾದ ಆರ್.ಎಸ್.ಲಮಾಣಿ.…

Read More