Author: editor.udayarashmi@gmail.com

ವ್ಯವಸ್ಥಿತ, ಸುಸೂತ್ರ ಹಾಗೂ ಪಾರದರ್ಶಕ ಪರೀಕ್ಷೆಗೆ ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇದೇ ಮಾರ್ಚ್ ೧೮ ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪಾರದರ್ಶಕ, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ನಡೆಸಬೇಕೆಂದು ಪರೀಕ್ಷೆಗೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ ನೀಡಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮದಿರದಲ್ಲಿ ಮಂಗಳವಾರ ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿ ಹಾಗೂ ನಿರ್ವಹಣೆ ಕುರಿತ ಸಲಹೆ ನೀಡಿದರು.ಸಿಸಿಟಿವಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಪರಿಶೀಲನೆ ನಡೆಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ತನ್ಮೂಲಕ ಪರೀಕ್ಷೆಯ ಪಾವಿತ್ರ‍್ಯತೆ ಕಾಯ್ದುಕೊಳ್ಳಬೇಕು ಎಂದರು.ಬಿಇಒ, ತಹಶೀಲ್ದಾರ್ ಅವರು ತಾಲೂಕಿನಲ್ಲಿ ಸಭೆ ನಡೆಸಿ ಅಗತ್ಯ ಸೂಚನೆ ನೀಡಬೇಕು. ಮೈಕ್ರೊ ಪ್ಲ್ಯಾನಿಂಗ್ ಮಾಡಿಕೊಳ್ಳಬೇಕು ಪರೀಕ್ಷಾ ಪ್ರಕ್ರಿಯೆಯಲ್ಲಿ ಲೋಪ-ದೋಷಗಳಾಗಬಾರದು. ಆರೋಗ್ಯ ಇಲಾಖೆಯಿಂದ ಅಗತ್ಯ ಸಿಬ್ಬಂದಿ…

Read More

ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ. ಮಹಿಳೆಯರು ಇಂದು ವಿಜ್ಞಾನ ಕ್ಷೇತ್ರವೂ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಪುರುಷರಿಗೆ ಸರಿಸಮಾನಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿಯ (ದಕ್ಷಿಣ) ಅಧ್ಯಕ್ಷೆ ಡಾ.ಮೀನಾ ಚಂದಾವರಕರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ-೨೦೨೬ ಉದ್ಘಾಟಿಸಿ ಅವರು ಮಾತನಾಡಿದರು.‘ಕೊಟ್ಟರೆ ಪಡೆಯಬಹುದು’ ಎಂಬ ತತ್ವದೊಂದಿಗೆ, ಕುಟುಂಬ ಮತ್ತು ಸಮಾಜದಲ್ಲಿ ಪುರುಷರ ಸಹಕಾರದಿಂದ ಮಹಿಳೆಯರು ಇಂದು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಒಳ್ಳೆಯತನವೆಂಬುದು ಎಂದಿಗೂ ವಿಫಲವಾಗದ ಹೂಡಿಕೆ ಎಂದು ಹೇಳಿದ ಅವರು, ಸದಾ ದಯಾಳು ಮತ್ತು ಸಹಾಯ ಮನೋಭಾವದಿಂದ ಬದುಕಬೇಕು, ಪ್ರಾರ್ಥನೆ ಮಾಡುವ ಕೈಗಳಿಗಿಂತ ಸಹಾಯ ಮಾಡುವ ಕೈಗಳು ಮಹತ್ತರವಾದವು. ಜೀವನದಲ್ಲಿ ತೃಪ್ತಿ, ಸಂತೋಷ ಮತ್ತು ಆಧ್ಯಾತ್ಮಿಕ ಶಕ್ತಿ ಅಗತ್ಯವಾಗಿದ್ದು, ‘ಪ್ರತಿ ದಿನವೂ ಮಹಿಳಾ ದಿನವೇ’ ಎಂದರು.ಇದೇ ಸಂದರ್ಭದಲ್ಲಿ ಕರ್ನಾಟಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೆಣ್ಣು ಮಕ್ಕಳು ದೈಹಿಕವಾಗಿ ಸಬಲರಾಗಿದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಬಾಟ್ ಇಂಡಿಯಾ ಐಟಿಡಿ ವಿಜಯಪುರ, ಮತ್ತು ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯ ಹಾಗೂ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಥೈರಾಯಿಡ್ ತನಿಖಾ ಪರೀಕ್ಷಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಹಾಗೂ ನಿಯಮಿತ ವ್ಯಾಯಾಮದ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಆರೋಗ್ಯದ ಕುರಿತು ಜಾಗೃತಿ ಹೆಚ್ಚಾಗುತ್ತದೆ ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಯೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಆಯುಷ್ಮಾನ್ ಭಾರತ ಯೋಜನೆ ಹಾಗೂ ಏಂಜಲ್ ಕಾರ್ಡ್ (ಕೇಂದ್ರ ಬ್ಯಾಂಕ್) ಮುಂತಾದ ಸೌಲಭ್ಯಗಳನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ವಿಜಯಪುರದ ಅಬಾಟ್ ಇಂಡಿಯಾ ಐಟಿಡಿ ಥೆರಫಿ ಬಿಜಿನೆಸ್ ವ್ಯವಸ್ಥಾಪಕ ರಾಮಕೃಷ್ಣ ಡಗೆ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪುಷ್ಪಾ ಹಿರೇಮಠ,…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬೇಸಿಗೆಯಲ್ಲಿ ಜನರಿಗೆ ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆಯಾಗಿದೆ ಎಂದು ಬಿಜೆಪಿ ಧುರೀಣ ಬಸನಗೌಡ ಪಾಟೀಲ(ಯಡಿಯಾಪೂರ) ಹೇಳಿದರು.ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದ ಆವರಣದಲ್ಲಿ ಭಾನುವಾರ ರೇಣುಕಾಚಾರ್ಯ ಜಯಂತಿ ಅಂಗವಾಗಿ ‘ಸಾರ್ವಜನಿಕರಿಗಾಗಿ ಅರವಟ್ಟಿಗೆ’ ಗೆ ಚಾಲನೆ ನೀಡಿ ಮಾತನಾಡಿದರು. ಈ ಬಾರಿ ಬೇಸಿಗೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಅರವಟ್ಟಿಗೆ ಆರಂಭಿಸಿರುವುದು ಉತ್ತಮ ಕಾರ್ಯವಾಗಿದೆ ಎಂದರು.ಕೋಕಟನೂರ ಮಡಿವಾಳೇಶ್ವರ ಸ್ವಾಮೀಜಿ ಮಾತನಾಡಿ, ಕುಡಿಯುವ ನೀರನ್ನು ಸಾರ್ವಜನಿಕರಿಗೆ ಪೂರೈಸುವುದರ ಜೊತೆಗೆ ಪಶು, ಪಕ್ಷಿಗಳಿಗೂ ಒದಗಿಸಿ ಮಾನವೀಯತೆ ಮೆರೆಯಲು ಪ್ರತಿಯೊಬ್ಬರು ಮುಂದಾಗಬೇಕು. ತಮ್ಮ ಪ್ರತಿ ಮನೆಯ ಮುಂದಿನ ಗಿಡಗಳಲ್ಲಿ ನೀರು ಇಟ್ಟು ಪಕ್ಷಿಗಳಿಗೆ ನೀರು ಉಣಿಸಿ ಪುಣ್ಯ ಕಟ್ಟಿಕೊಳ್ಳಿ ಎಂದರು.ಸ್ಥಳೀಯ ಜಡಿಮಠದ ಜಡಿಸಿದ್ದೇಶ್ವರಶ್ರೀ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಸಂಕ್ಷಿಪ್ತವಾಗಿ ಮಾತನಾಡಿದರು.ಪಂಚಾಚಾರ್ಯ ಕಲ್ಯಾಣ ಭವನದ ಅಧ್ಯಕ್ಷ ಬಸಯ್ಯ ಮಲ್ಲಿಕಾರ್ಜುನಮಠ, ಬಂಡೆಪ್ಪ ಬಿರಾದಾರ(ದಿಂಡವಾರ), ಸೋಮಶೇಖರ ಹಿರೇಮಠ, ಸಂಗನಗೌಡ ಪಾಟೀಲ, ರಾಮಯ್ಯ ನಾಶೀಮಠ, ವಿರೇಶ ಮಠಪತಿ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೊಂಡಗೂಳಿ ಹಾಗೂ ಹಂಚಲಿ ಗ್ರಾಮ ವ್ಯಾಪ್ತಿಯಲ್ಲಿ ಕಾಲುವೆ ಕಾಮಗಾರಿ ಮಾಡದ ಕುರಿತು ಇಂಡಿ ಕೃಷ್ಣಾ ಮೇಲ್ದಂಡೆ ಯೋಜನಾ ಕಛೇರಿ ಅಧಿಕಾರಿಗಳಿಗೆ ರೈತರು ಮನವಿ ಸಲ್ಲಿಸಿದರು.ತಾಲ್ಲೂಕಿನ ಕೊಂಡಗೂಳಿ ಹಾಗೂ ಹಂಚಲಿ ಗ್ರಾಮಗಳ ರೈತರು ಸೋಮವಾರ ಇಂಡಿ ಪಟ್ಟಣದ ಕೃಷ್ಣಾ ಮೇಲ್ದಂಡೆ ಯೋಜನಾ ಕಚೇರಿಗೆ ತೆರಳಿ ತಮ್ಮ ಸಮಸ್ಯೆ ಕುರಿತು ಗಮನ ಸೆಳೆದರು. ಈ ಸಂದರ್ಭದಲ್ಲಿ ಟಿ.ಎಸ್.ಹೆಬ್ಬಾಳ ಮಾತನಾಡಿ, ಜಮೀನಿನಲ್ಲಿ ೩ ವರ್ಷಗಳ ಹಿಂದೆಯೇ ಕಾಲುವೆಗಾಗಿ ಜಮೀನುಗಳನ್ನು ವಶಪಡಿಸಿಕೊಳ್ಳುವ ನೋಟೀಸು ನೀಡಿ ನಂತರ ಗುತ್ತಿಗೆದಾರರು ಅಧಿಕಾರಿಗಳ ಅನುಮತಿ ಪಡೆಯದೆ ಕಾಲುವೆ ಕಾಮಗಾರಿಗಾಗಿ ಜಮೀನುಗಳನ್ನು ಬೇಕಾಬಿಟ್ಟಿ ಅಗೆದಿರುತ್ತಾರೆ. ಸದ್ಯದ ಸ್ಥಿತಿಯಲ್ಲಿ ಕಾಮಗಾರಿಯು ಇಲ್ಲ, ಗುತ್ತಿಗೆದಾರರು ಇಲ್ಲ. ಭೂಮಿ ಕಳೆದುಕೊಂಡ ರೈತರಿಗೆ ಸರಕಾರದಿಂದ ಕಾಲುವೆ ಕಾಮಗಾರಿ ಅವಾರ್ಡ್ ಪ್ರತಿಯೂ ಇಲ್ಲ, ಪರಿಹಾರವೂ ಇಲ್ಲ, ಉಳುಮೆ ಮಾಡಲು ಜಮೀನು ಇಲ್ಲದಾಗಿ ಸಂಪೂರ್ಣವಾಗಿ ಹಾಳಾಗಿದ್ದು ರೈತರಿಗೆ ಆರ್ಥಿಕವಾಗಿ ನಷ್ಟವಾಗಿದೆ.ರೈತರ ಈ ಸಮಸ್ಯೆಗಳ ಬಗ್ಗೆ ದೇವರ ಹಿಪ್ಪರಗಿ ತಾಲ್ಲೂಕಿನ ಎಲ್ಲಾ ರಾಜಕಾರಣಿಗಳು ಮೌನ ವಹಿಸಿರುವುದರಿಂದ ಹಲವಾರು ರೈತರು…

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಮಡಿವಾಳ ಸಮುದಾಯವು ಹಿಂದುಳಿದಿದ್ದು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಸಮಾಜ ಯಾವ ದೃಷ್ಟಿಕೋನದಿಂದ ನೋಡಿದರೂ ಮುಂದುವರಿದಿಲ್ಲ. ಸಮಾಜ ಮುಖ್ಯವಾಹಿಗೆ ಸೇರಲು ಪರಿಶಿಷ್ಟ ಜಾತಿಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಾಲೂಕು ವೀರ ಮಡಿವಾಳ ಸಂಘದ ಅಧ್ಯಕ್ಷ ಎಲೆ ಹುಂಡಿ ಚಂದ್ರು ಶೆಟ್ಟಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಮಡಿವಾಳ ಜನಾಂಗ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ದೇಶದ 17 ರಾಜ್ಯಗಳಲ್ಲಿ ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿಸಲಾಗಿದೆ . ಅದರಂತೆ ರಾಜ್ಯದಲ್ಲೂ ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿಸಿ, ಶಿಕ್ಷಣ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕು. ದುಡಿದು ತಿನ್ನುವ ಪ್ರಾಮಾಣಿಕ ಸಮಾಜ ಇದಾಗಿದ್ದು, ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯ ನೀಡುವುದಾದರೆ ಈ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ. ಸರಕಾರದ ಸೌಲಭ್ಯ ಪಡೆಯಲು ಮಡಿವಾಳ ಸಮುದಾಯವನು ಪರಿಶಿಷ್ಟ ಜಾತಿಗೆ ಸೇರಿಸಲೇಬೇಕಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಮಡಿವಾಳರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕೆ. ಬಿ. ಎಸ್ ನಂಬರ 28 ಟ್ರೇಝರಿ ಕಾಲನಿ ಶಾಲೆಯಲ್ಲಿ ಮ‌ಂಗಳವಾರ ನೂತನ ಎಸ್.ಡಿ. ಎಂ.ಸಿ ರಚನೆ ಮಾಡಲಾಯಿತು.ಎಸ್. ಡಿ.ಎಂ. ಸಿ ಅಧ್ಯಕ್ಷರಾಗಿ ಬಸವರಾಜ ಬಡಿಗೇರ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಉಮಾ ಕಾಂಬಳೆ ಅವರು ಆಯ್ಕೆಯಾದರು. ಈ ಸಂದರ್ಭದಲ್ಲಿ ವಾರ್ಡ್ ನಂಬರ 35ರ ಮಹಾನಗರ ಪಾಲಿಕೆಯ ಸದಸ್ಯರಾದ ರಾಜಶೇಖರ ಕುರಿ, ಶಿಕ್ಷಣ ಸಂಯೋಜಕ ಎ. ಕೆ.ದಳವಾಯಿ, ಸಿ. ಆರ್. ಪಿ ಬಸವರಾಜ ಪಡಗಾನೂರ, ಹಿಂದಿನ ಎಸ್. ಡಿ‌. ಎಂ. ಸಿ ಸದಸ್ಯರು, ಎಲ್ಲ ಮಕ್ಕಳ ಪಾಲಕ ಪೋಷಕರು ಭಾಗವಹಿಸಿದ್ದರು.ನೂತನವಾಗಿ ಆಯ್ಕೆಯಾದ ಎಸ್. ಡಿ. ಎಂ. ಸಿ ಅಧ್ಯಕ್ಷರಿಗೂ ಉಪಾಧ್ಯಕ್ಷರು ನಮ್ಮ ಶಾಲೆಯ ಪರವಾಗಿ ಅಭಿನಂದಿಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆ ಇಂದು ಎಲ್ಲ ರಂಗದಲ್ಲಿಯೂ ಉನ್ನತವಾದ ಸಾಧನೆಯ ನಗೆ ಬೀರಿದ್ದಾಳೆ ಎಂದು ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಿಗೇರಿ ಹೇಳಿದರು.ವಿಜಯಪುರದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಸಹಯೋಗದಲ್ಲಿ ಆಯೋಜಿಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆ ಅಂದು ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದಳು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸ್ವ ಸ್ವಾಮರ್ಥ್ಯದ ಮೇಲೆ ಇಂದು ಎಲ್ಲ ರಂಗದಲ್ಲಿಯೂ ಸಾಧನೆ ತೋರಿದ್ದಾಳೆ, ವಿಮಾನ ನಡೆಸುವ ಜೊತೆಗೆ ಅಂತರಿಕ್ಷ ನೌಕೆಯನ್ನೂ ಸಹ ಸಮರ್ಥವಾಗಿ ಚಲಾಯಿಸುವ ಮಟ್ಟಕ್ಕೆ ಬೆಳೆದಿದ್ದಾಳೆ, ಪ್ರತಿ ಬಾರಿಯ ಫಲಿತಾಂಶದಲ್ಲಿಯೂ ಬಾಲಕಿಯರ ಮೇಲುಗೈ ಸಾಧಿಸುತ್ತಿದ್ದಾರೆ, ತೊಟ್ಟಿಲು ತೂಗುವ ಕೈ ವಿಶ್ವವನ್ನೇ ಆಳಬಲ್ಲದು ಎಂಬುದನ್ನು ನಿರೂಪಿಸಿದ್ದಾಳೆ ಎಂದರು.ಮುಖ್ಯ ಅತಿಥಿಯಾಗಿದ್ದ ಉಷಾ ಹಿರೇಮಠ ಮಾತನಾಡಿ, ಮಹಿಳೆ ಅಪಾರ ಶಕ್ತಿವಂತಳು, ಕರುಣೆ, ವಾತ್ಸಲ್ಯ ದ ಪ್ರತಿರೂಪ, ಮಹಿಳೆಗೆ ಸಾಧನೆ ತೋರಲು ವೇದಿಕೆ ಬೇಕು, ಯಾವ ಸವಾಲನ್ನು ಆಕೆ ಸಮರ್ಥವಾಗಿ ನಿಭಾಯಿಸುವ ಗಟ್ಟಿತನ ಹೆಣ್ಣಿಗೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಪ್ರಕಾಶ ಚೌಧರಿ ಅವರ ಆಕ್ಷಪರ್ಡ ಚೌಧರಿ ಕೋಚಿಂಗ್ ಕ್ಲಾಸಿಸ್ ವಿದ್ಯಾರ್ಥಿಗಳು ೨೦೨೬-೨೭ನೇ ಸಾಲಿನ ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯಲ್ಲಿ (ಎಐಎಸ್‌ಎಸ್‌ಇಇ) ಪರೀಕ್ಷೆಯಲ್ಲಿ ಶೇ.೯೦ ರಷು ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ.ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ವಿವರ: ಅಶ್ವಿನಿ ಭಜಂತ್ರಿ, ಸಹನಾ ಕುಂಬಾರ, ತೃಪ್ತಿ ಚವ್ಹಾಣ, ಅಮೃತಾ ಕಟ್ಟಿಮನಿ, ಸಾಕ್ಷಿ ಮೂಲಿಮನಿ, ಮಧುಪ್ರೀಯಾ, ಶ್ರಾವಣಿ ಪೋಲಿಸ್‌ಪಾಟೀಲ, ಪ್ರೀತಮ ರಾಠೋಡ, ಅಮೀತ ಬಗಲಿ, ವಿಕಾಶ ಹಿರೇಮಠ, ಸಿದ್ದಾರ್ಥ ನಾಗಠಾಣ,, ಕಾರ್ತಿಕ ಚಟ್ಟರಕಿ, ರುಕ್ಮೀಣಿ ಅಂಕಲಗಿ, ವಿನಾಯಕ ಕಲಶೆಟ್ಟಿ, ಬಸವರಾಜ ನಾಯ್ಕೋಡಿ, ಪೃತ್ವಿರಾಜ ಮಾಶ್ಯಾಳ, ಸಮರ್ಥ ದೊಡಮನಿ, ಸಂಸ್ಕಾರ ಕೊಪ್ಲೆ ಅಧಿಕ ಅಂಕಗಳನ್ನು ಪಡೆದು ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಚಾಲಕ ಪ್ರಕಾಶ ಚೌಧರಿ, ಆಢಳಿತಾಧಿಕಾರಿ ಮಹಾಂತೇಶ ಚೌಧರಿ, ಮುಖ್ಯಗುರು ವಿಶ್ವನಾಥ ಯಾತನೂರ ಸೇರಿದಂತೆ ಸಿಬ್ಬಂಧಿ ಹರ್ಷ ವ್ಯಕ್ತಪಡೆಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜಕೀಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಮಹಿಳೆಯರು ಇನ್ನಷ್ಟು ಮುನ್ನಡೆಯಬೇಕು ಎಂದು ತಾಲೂಕು ದಂಡಾಧಿಕಾರಿ ಕರೇಪ್ಪ ಬೆಳ್ಳಿ, ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸ್ಪೂರ್ತಿ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಿಂದಗಿ ಇವರುಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರಕಾರಗಳು ಮಹಿಳೆಯರ ಏಳಿಗೆಗಾಗಿ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ ಅದರ ಸದುಪಯೋಗವನ್ನು ಎಲ್ಲ ಮಹಿಳೆಯರು ಪಡೆದುಕೊಂಡು ಸಬಲರಾಗಬೇಕು ಎಂದರು.ಸಿಂದಗಿ ನಗರದ ಗೋಲಗೇರಿ ರಸ್ತೆಯಲ್ಲಿರುವ ಡಾ.ಬಾಬು ಜಗಜೀವನರಾಮ್ ಭವನದಲ್ಲಿ ಸ್ಪೂರ್ತಿ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ಇವರುಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ರಶ್ಮಿ ನೂಲಾನವರ ಮಾತನಾಡಿ, ಹೆಣ್ಣು ಮಕ್ಕಳು ಸಾಮಾಜಿಕ ಹಾಗೂ ಆರ್ಥಿಕವಾಗಿ ಬೆಳೆದು ಸ್ವಾವಲಂಬಿಗಳಾಗಲು ಕುಟುಂಬದ ಬೆಂಬಲ ಮತ್ತು ಪ್ರೋತ್ಸಾಹ…

Read More