Author: editor.udayarashmi@gmail.com

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ | ಬೆಳಗಾವಿ ಕಲಾಪದಲ್ಲಿ ಗುಡುಗಿದ ಸಿದ್ದರಾಮಯ್ಯ | ಸಿಎಂ ಕಾಲೆಳೆದ ವಿಪಕ್ಷ ಬೆಂಗಳೂರು: ರಾಜ್ಯ ಆಡಳಿತಾರೂಢ ಕಾಂಗ್ರೆಸ್ ನ ಸಿಎಂ ಕುರ್ಚಿ ಕದನ ಇಂದು ಬೆಳಗಾವಿ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದೆ. ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ವಿಚಾರವಾಗಿ ಆರಂಭವಾದ ಮಾತು ಸಿಎಂ ಕುರ್ಚಿ ಗದ್ದಲದ ಮಾತಿನ ಚಕಮಕಿಯೊಂದಿಗೆ ನಿಂತಿತು.ಮಂಗಳವಾರ ಬೆಳಗಾವಿ ಸದನ ಕಲಾಪದಲ್ಲಿ ಆಗಿದ್ದೇನು?ವಿಧಾನಸಭೆಯಲ್ಲಿ ಅನುದಾನ ಹಂಚಿಕೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷದ ಶಾಸಕ ಕುಣಿಗಲ್ ರಂಗನಾಥ್ ಅವರೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಡೆಗೆ ಬೆರಳು ತೋರಿಸಿ, ಮಧುಗಿರಿಗೆ 100 ಕೋಟಿ ಅನುದಾನ ಕೊಡುತ್ತೀರಿ, ಆದರೆ ನನ್ನ ಕ್ಷೇತ್ರಕ್ಕೆ ಏಕೆ ಅನುದಾನ ನೀಡುತ್ತಿಲ್ಲ? ನನ್ನ ಕ್ಷೇತ್ರಕ್ಕೆ ಹಿಂದೆ ಮಂಜೂರಾಗಿದ್ದ ಒಂದು ಸಾವಿರ ಕೋಟಿ ಅನುದಾನವನ್ನು ತಡೆ ಹಿಡಿಯಲಾಗಿದೆ ಎಂದು ಆಕ್ರೋಶದಿಂದ ಪ್ರಶ್ನಿಸಿದರು. ರಂಗನಾಥ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರೆಂದೇ ಗುರುತಿಸಿಕೊಂಡಿದ್ದು, ಅವರ ಈ ಪ್ರಶ್ನೆಯು ಸದನದಲ್ಲಿ ಸಿಎಂ ಕುರ್ಚಿ ಕಾದಾಟದ…

Read More

ಉದಯರಶ್ಮಿ ದಿನಪತ್ರಿಕೆ ಹೊನವಾಡ: ಶಿಕ್ಷಕರಾದ ಎಸ್ ಎ ವಾಲಿಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘‘ಪ್ರಸ್ತುತ ಯುವಕರು ದುಶ್ಚಟಗಳಿಗೆ ಬಲಿಯಾಗುವ ಮೂಲಕ ಭವಿಷ್ಯದ ಸುಂದರ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಇಂತಹ ಚಟಗಳಿಗೆ ದಾಸರಾಗದೆ ಉತ್ತಮ ಬದುಕು ರೂಪಿಸಿಕೊಳ್ಳಬೇಕು,’’ ಎಂದರು.ತಿಕೋಟಾ ತಾಲ್ಲೂಕಿನ ಹೊನವಾಡಗ್ರಾಮದ ಬಸವಂತರಾಯ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ದುಶ್ಚಟ ಮುಕ್ತ ಸಮಾಜದ ನಿರ್ಮಾಣ ನಮ್ಮೆಲ್ಲರ ಹೊಣೆ ಎಂಬ ಧ್ಯೇಯದೊಂದಿಗೆ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಕುರಿತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ಧರ್ಮಸ್ಥಳದ ಸಂಸ್ಥೆಯ ಹೊನವಾಡ ವಲಯದ ಮೇಲ್ವಿಚಾರಕರಾದ ಕಿಶೋರ ತೋರಸ್ಕರ ಪ್ರಾಸ್ತಾವಿಕ ವಾಗಿ ಮಾತನಾಡಿದರು.ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ. ದುಶ್ಚಟಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾ ಬೀರುತ್ತದೆ. ಸಹವಾಸ ದೋಷಾ, ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಚಟ ಒಮ್ಮೆ ಆರಂಭವಾದರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆ ಗಮನಕೊಡದೆ ಮಧುಮೇಹ, ರಕ್ತದೊತ್ತಡ ಮುಂತಾದವು ಆರೋಗ್ಯದ ಮೇಲೆ ಇಂದು ದುಷ್ಪರಿಣಾಮ ಬೀರುತ್ತಿರುವುದು ಸಾಮಾನ್ಯವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ನಗರದ ದರಬಾರ ಸಂಸ್ಥೆಯ ಉಪಾಧ್ಯಕ್ಷ ಕೆ.ಜಿ.ದೇಶಪಾಂಡೆ ಹೇಳಿದರು.ನಗರದ ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾವರ್ಧಕ ಸಂಘದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟದ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿದ ಅವರು, ಹಾಗಾಗದೆ ಮಕ್ಕಳಿಗೆ ದೈಹಿಕ ಶಿಕ್ಷಕರು ಪ್ರತಿನಿತ್ಯ ವ್ಯಾಯಾಮ, ಯೋಗ, ಕಬಡ್ಡಿ, ಖೋ-ಖೋ ಮುಂತಾದ ಕ್ರೀಡೆಯನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕ ವಾತಾವರಣ ಶಾಲೆಯಲ್ಲಿ ಮೂಡಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದ ಅವರು, ಮೊಬೈಲ್ ಸಾಮಾಜಿಕ ಜಾಲತಾಣಗಳಿಂದ ದೂರವಿರುವಂತೆ ಶಿಕ್ಷಕರು, ಪಾಲಕರು ಹಾಗೂ ಮಕ್ಕಳ ಭವಿಷ್ಯತ್ತಿಗಾಗಿ ತಮ್ಮ ಜವಾಬ್ದಾರಿ ಮೆರೆಯಬೇಕಾಗಿದೆ ಎಂದರಲ್ಲದೆ ಮನಸ್ಸಿನ ಏಕಾಗ್ರತೆಗೆ ಒಳ್ಳೆ ಪುಸ್ತಕ ಓದುವುದು, ಸತ್ಸಂಗದ ಸುವಿಚಾರ ಮತ್ತು ದಾರ್ಶನಿಕರ ತತ್ವ ಜ್ಞಾನ ಸುಭಾಷಿತಗಳನ್ನು ಮಕ್ಕಳೊಂದಿಗೆ ವಿನಿಮಯ ಮಾಡಿಕೊಂಡು ಸೈದ್ಧಾಂತಿಕ…

Read More

ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ ಹಾಗೂ ಅಲೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಅವರಿಗೆ ದೊರಕುವ ಸವಲತ್ತು ಒದಗಿಸಿ ಎಂದು ಜಿಲ್ಲಾಧಿಕಾರಿ ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ ಸಮುದಾಯದವರ ಅಭಿವೃದ್ಧಿಗಾಗಿ ಯೋಜನೆಗಳ ಅನುಷ್ಠಾನಗೊಳಿಸುವ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈ ಜನಾಂಗದವರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಿಸಿ ಅನುಷ್ಟಾನಗೊಳಿಸುತ್ತಿದ್ದು, ಅವರಿಗೆ ದೊರಕಿಸಬೇಕಾದ ಸೌಲಭ್ಯ-ಸವಲತ್ತುಗಳನ್ನು ತಲುಪಿಸಲು ಕ್ರಮವಹಿಸಿ. ಈ ಜನಾಂಗದ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಪಡೆಯಲು ಉತ್ತೇಜನೆ ನೀಡಬೇಕು. ಶಿಕ್ಷಣದ ಪ್ರಾಮುಖ್ಯತೆ ಕುರಿತು ಅರಿವು ತಿಳುವಳಿಕೆ ನೀಡಬೇಕು. ಜನಾಂಗದ ಆರ್ಥಿಕ ಅಭಿವೃದ್ಧಿಗಾಗಿ ಮೂಲಭೂತ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹಲವಾರು ಯೋಜನೆಗಳನ್ನು ಅರ್ಹರಿಗೆ ತಲುಪಿಸಿ ಅವರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಸುವಂತೆ ಅವರು ಹೇಳಿದರು.…

Read More

ನಂದರಗಿ ಗ್ರಾಮದ ಸಭೆಯಲ್ಲಿ ಕೃಷಿ ಉಪನಿರ್ದೇಶಕ ಚಂದ್ರಕಾಂತ ಪವಾರ ಮಾಹಿತಿ ಉದಯರಶ್ಮಿ ದಿನಪತ್ರಿಕೆ ಇಂಡಿ: ಕೃಷಿ ಪರಿಸರದ ಮೂಲ ಸೆಲೆ ಭೌತಿಕ ರಾಸಾಯನಿಕ ಜೈವಿಕ ಗುಣಧರ್ಮಗಳಿಂದ ರಚಿತವಾದ ಮಣ್ಣು ವಿಜ್ಞಾನದ ವಿಸ್ಮಯವನ್ನು ಸಾರುವ ಜ್ಞಾನ ನಿರಂತರವಾಗಿರಲಿ ಎಂದು ಕೃಷಿ ಉಪನಿರ್ದೇಶಕ ಚಂದ್ರಕಾಂತ ಪವಾರ ಹೇಳಿದರು.ತಾಲೂಕಿನ ನಂದರಗಿ ಗ್ರಾಮದಲ್ಲಿ ಸಿದ್ದಪ್ಪ ಸಾತಪ್ಪ ಪೂಜಾರಿ ಇವರ ಹೊಲದಲ್ಲಿ ರೈತರಿಗೆ ಅಮೃತ ರೈತ ಸಂಸ್ಥೆಗಳ ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ ಮಣ್ಣು ನೀರು ಮತ್ತು ಸಸ್ಯ ಅಂಗಾಂಶ ಪರೀಕ್ಷೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.ಅಸ್ವಾಭಾವಿಕ ದಬ್ಬಾಳಿಕೆ, ಅವೈಜ್ಞಾನಿಕ ನಿರ್ವಹಣೆ ಮತ್ತು ಹವಾಮಾನ ಬದಲಾವಣೆಯಿಂದಾಗಿ ಮಣ್ಣು ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ವಿನಾಶದಕೊನೆಯ ಹಂತ ತಲುಪಿರುವದನ್ನು ಗಂಭೀರವಾಗಿ ಪರಿಗಣಿಸಿ ಮಣ್ಣು ಉಳಿಸುವ ಕಾರ್ಯಕ್ರಮದಿಂದ ಕೃಷಿ ಬಲಪಡಿಸಬೇಕಾಗಿದೆ ಎಂದರು.ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ಮಾತನಾಡಿ, ಮಣ್ಣಿನ ರಚನೆ, ವರ್ಗೀಕರಣ, ಮತ್ತು ಫಲವತ್ತತೆ ಆಧಾರದ ಮೇಲೆ ನಿರ್ವಹಣಾ ಕ್ರಮ ಅಳವಡಿಸಿಕೊಳ್ಳುವ ಮೂಲಕ ಕೃಷಿಯನ್ನು ಸುಸ್ಥಿರ…

Read More

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕ ಮಹೇಶ ಪೋತದಾರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕರಾದ ಮಹೇಶ ಪೋತದಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ನಗರದ ಸಾವಿತ್ರಿಬಾಯಿ ಫುಲೆ ಬಾಲಕಿಯರ ವಸತಿ ನಿಲಯದಲ್ಲಿ ಆಯೋಜಿಸಿದ್ದ ನೂತನವಾಗಿ ಪರಿಚಯಿಸಲಾದ ನಿಲಯ ಪೋರ್ಟಲ್ ಅನುಷ್ಠಾನ ತರಬೇತಿ ಕಾರ್ಯಾಗಾರ ಹಾಗೂ ಸಿಬ್ಬಂದಿಗಳ ಸಭೆಯಲ್ಲಿ ಅವರು ಮಾತನಾಡಿದರು.ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಅವರು ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಫಲಿತಾಂಶ ಸುಧಾರಣೆಯನ್ನು ಸಾಧಿಸಲು ವಿಶೇಷ ನೀಲನಕ್ಷೆ ತಯಾರಿಸಿ, ನೀಡಿರುವ ನಿರ್ದೇಶನ ಹಾಗೂ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ಕ್ರಮ ಕೈಗೊಳ್ಳಲು ಅವರು ಸೂಚನೆ ನೀಡಿದರು.ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಾದ ಬಯೋಮೆಟ್ರಿಕ್ ಹಾಜರಾತಿ, ಆಹಾರ ತಯಾರಿಕೆ ಹಾಗೂ ಹಂಚಿಕೆಯಲ್ಲಿ ಪಾರದರ್ಶಕತೆ ಕುರಿತ ಪೋಟೋಗಳನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವುದು, ವಸತಿ ನಿಲಯಗಳ ಮೆಂಟರಗಳ ಭೇಟಿ, ವಸತಿ…

Read More

ಎಸ್‌ಸಿಪಿ/ ಟಿಎಸ್‌ಪಿ ಪ್ರಗತಿ ಪರಿಶಿಲನಾ ಸಭೆ | ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯಡಿ ನಿಗದಿತ ಅವಧಿಯಲ್ಲಿ ಯೋಜನೆಯ ಅನುದಾನ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಹಾಗೂ ಎಸ್‌ಸಿಪಿ/ಟಿಎಸ್‌ಪಿ ಸಭೆಗೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಖುದ್ದು ಹಾಜರಿರಬೇಕು. ಯೋಜನೆಗೆ ನಿಗದಿ ಪಡಿಸಿದ ಅನುದಾನ ಲ್ಯಾಪ್ಸ್ ಆಗದಂತೆ ಕ್ರಿಯಾ ಯೋಜನೆ ರೂಪಿಸಿಕೊಂಡು ನಿಗದಿತ ಕಾಲಾವಧಿಯೊಳ್ಳಗೆ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯಡಿಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದ ಯೋಜನೆಗಳಡಿ ನಿಗದಿತ ಯೋಜನೆಗಳ ಪ್ರಗತಿ ಸಾಧಿಸಲು ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು, ಅತ್ಯಂತ ಜವಾಬ್ದಾರಿಯಿಂದ ಯೋಜನೆ ಅನುಷ್ಠಾನಗೊಳಿಸಬೇಕು. ಅರ್ಹ…

Read More

ಸ್ಕೇಟಿಂಗ್ ಕ್ರೀಡಾಪಟುಗಳಿಗೆ ಸನ್ಮಾನ | ಅತೀ ಹೆಚ್ಚು ಬಂಗಾರ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಪಡೆದ ಅಕಾಡೆಮಿ ವಿದ್ಯಾರ್ಥಿಗಳು ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜಿಲ್ಲಾ ರೋಲರ್ ಸ್ಕೇಟಿಂಗ್‌ ಅಸೋಶಿಯೇಷನ್‌ ವತಿಯಿಂದ ವಿಜಯಪುರದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ ಹಾಗೂ ಕಂಚು ಪದಕಗಳನ್ನು ಪಡೆದುಕೊಂಡ ಮುದ್ದೇಬಿಹಾಳ ತಾಲೂಕಿನ ಏಕಲವ್ಯ ರರ‍್ಸ್ ಸ್ಕೇಟಿಂಗ್ ಅಕಾಡೆಮಿಯ ಕ್ರೀಡಾಪಟುಗಳಿಗೆ ಅಕಾಡೆಮಿವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಕ್ರೀಡಾಪಟುಗಳನ್ನು ಸನ್ಮಾನಿಸಿ ಗೌರವಿಸಿ, ಸಮಾಜ ಸೇವಕ, ಕಾಂಗ್ರೇಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಮಕ್ಕಳನ್ನು ವಿನೂತನವಾದ ಕ್ರೀಡೆಗಳಲ್ಲಿ ಭಾಗಿಯಾಗಿಸುವಲ್ಲಿ ಏಕಲವ್ಯ ರರ‍್ಸ್ ಸ್ಕೇಟಿಂಗ್ ಅಕಾಡೆಮಿ ಪರಿಶ್ರಮ ಸಾಕಷ್ಟಿದೆ. ಹಿಂದೆ ಕೇವಲ ಕ್ರಿಕೇಟ್, ಕಬ್ಬಡ್ಡಿ ಹಾಗೂ ಕರಾಟೆ ಕ್ರೀಡೆಗಳಲ್ಲಿ ನಮ್ಮ ಮಕ್ಕಳು ಭಾಗಿಯಾಗುವುದನ್ನು ನೋಡುತ್ತಿದ್ದೇವು. ಆದರೆ ಏಕಲವ್ಯ ರರ‍್ಸ್ ಸ್ಕೇಟಿಂಗ್ ಅಕಾಡೆಮಿವತಿಯಿಂದ ನಮ್ಮ ಮಕ್ಕಳಿಗೆ ಸ್ಕೇಟಿಂಗ್ ಹಾಗೂ ಏರ್‌ಗನ್ ಕ್ರೀಡೆಯಲ್ಲಿ ಭಾಗಿಯಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹ ಅಕಾಡೆಮಿಯನ್ನು ರಚಿಸಿರುವ ಶಿವುಕುಮಾರ ಶಾರದಳ್ಳಿ ಅವರ ಸಾಧನೆ ಅಮೋಘವಾದದ್ದು ಎಂದರು.ಚಿಂತಕ ಅರವಿಂದ ಕೊಪ್ಪ ಮಾತನಾಡಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರಕ್ಕೆ ಆಲಮಟ್ಟಿ ಹಿನ್ನೀರಿನಿಂದ ಸಗಟು ನೀರು ಸರಬರಾಜು ಮಾಡುವ ಪಿ.ಎಸ್.ಸಿ ಕೊಳವೆ ಮಾರ್ಗವನ್ನು ಬದಲಾಯಿಸಿ ಎಂ.ಎಸ್ ಪೈಪ್ ಅಳವಡಿಸುವ ಕಾಮಗಾರಿಗೆ ರೂ.50.13 ಕೋಟಿ ಗಳಿಗೆ ಆಡಳಿತಾತ್ಮಕ ಅನುಮೋದನೆ ದೊರಕಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು. ಹಾಗೂ ನಗರಕ್ಕೆ ಅಗತ್ಯವಿರುವ 3ನೇ ಹಂತದ ಯೋಜನೆ ಅನುಷ್ಠಾನಕ್ಕಾಗಿ ಸರ್ವೇ ಕಾರ್ಯಕ್ಕೆ ಹಣ ಭರಣಾ ಮಾಡಲು ಮಹಾನಗರ ಪಾಲಿಕೆಗೆ ಕೋರಲಾಗಿದೆ ಎಂದು ಸರ್ಕಾರ ತಿಳಿಸಿದೆ.ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು, ಬೃಹತ್ತಾಗಿ ಬೆಳೆಯುತ್ತಿರುವ ವಿಜಯಪುರ ಮಹಾನಗರವು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಹಾಗೂ ಭವಿಷ್ಯತ್ತಿನ ದಿನಗಳಲ್ಲಿ ಇಡೀ ಮಹಾನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೊರುವ ಕುರಿತಂತೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ 962ರ ಮೂಲಕ ಸರ್ಕಾರದ ಗಮನಸೆಳೆದಿದ್ದರು.ಕೊಲ್ಹಾರದಿಂದ ವಿಜಯಪುರ ನಗರಕ್ಕೆ ಸಗಟು ನೀರು ಸರಬರಾಜು ಮಾಡುವ ಪಿ.ಎಸ್.ಸಿ ಕೊಳವೆ ಮಾರ್ಗದಲ್ಲಿ ಪದೇ ಪದೇ ಪೈಪ್ ಗಳು ಒಡೆದು ಅನಾವಶ್ಯಕವಾಗಿ ಸಾಕಷ್ಟು ನೀರು ಸೋರಿಕೆ ಆಗುವುದಲ್ಲದೆ, ದುರಸ್ತಿಗಾಗಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಜಿಲ್ಲೆಯ ಇಬ್ಬರು ಸಚಿವರು ಮತ್ತು ಶಾಸಕರು ಪಕ್ಷಾತೀತವಾಗಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಹರೀಶ ಎಂಟಮಾನ ಆಗ್ರಹಿಸಿದರು.ಮಂಗಳವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ವಿಜಯಪುರ ಜಿಲ್ಲೆಗೆ ಮಂಜೂರಾಗಿರುವ ವೈದ್ಯಕೀಯ ಕಾಲೇಜು ಖಾಸಗೀಕರಣ ಕೈಬಿಟ್ಟು ಸರಕಾರಿ ವೈದ್ಯಕೀಯ ಕಾಲೇಜಾಗಿಯೆ ಪ್ರಾರಂಭಿಸಬೇಕು ಎಂದು ಕಳೆದ 90 ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು ಅವರ ಹೋರಾಟಕ್ಕೆ ಜಿಲ್ಲೆಯ ವಿವಿದ ಸಂಘಟನೆಗಳು ಬೆಂಬಲಿಸಿವೆ. ಹಾಗೆ ವಿವಿಧ ಸಂಘಟನೆಗಳಿಂದ ವಿನೂತನವಾಗಿ ಜಿಲ್ಲೆಯಾದ್ಯಂತ ಹೊರಾಟ ಮಾಡಿದ್ದು ಇದೆಲ್ಲವನ್ನು ಮನಗಂಡಂತ ಜಿಲ್ಲೆಯ ಸಚಿವರು, ಶಾಸಕರು ಹೋರಾಟಕ್ಕೆ ಬೆಂಬಲಿಸಿ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹಾಗೂ ಇನ್ನೋರ್ವ ಸಚಿವರಾದ ಶಿವಾನಂದ ಪಾಟೀಲ ಮತ್ತು ವಿಜಯಪುರ ನಗರ ಶಾಕ ಬಸನಗೌಡ ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ಸರಕಾರಕ್ಕೆ ಒತ್ತಾಯಿಸಿ ಸರಕಾರಿ ವೈದ್ಯಕೀಯ ಕಾಲೇಜು ಆರಂಬಿಸಬೇಕು. ಒಂದು ವೇಳೆ ನಿಷ್ಕಾಳಜಿ ತೋರಿದರೆ ಜಿಲ್ಲೆಯ ಸಚಿವರು ಶಾಸಕರು…

Read More