Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಜಾತಿಗಳ ಶ್ರೇಣೀಕೃತ ವ್ಯವಸ್ಥೆಯನ್ನು ಅಳಿಸಿ ಮಾನವ ಕುಲವೊಂದೇ ಎಂದು ಎಷ್ಟೇ ಪ್ರತಿಪಾದಿಸುತ್ತಾ ಬಂದಿದ್ದರೂ ಶ್ರೇಣೀಕೃತ ವ್ಯವಸ್ಥೆ ಅಳಿಯುತ್ತಿಲ್ಲ ಎಂದು ಎಸ್.ಆರ್.ವಿಭೂತಿ ಹೇಳಿದರು.ಸೋಮವಾರ ಇಲ್ಲಿನ ಹನುಮಾನ್ ದೇವಾಲಯದ ಆವರಣದಲ್ಲಿ ಶ್ರೀ ರೇವಣಸಿದ್ದೇಶ್ವರ ಹಾಲುಮತ ಕ್ಷೇಮಾಭಿವೃದ್ಧಿ ಸಂಸ್ಥೆಯವತಿಯಿಂದ ನಡೆದ ಸಂತಶ್ರೇಷ್ಠ ಕನಕದಾಸ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಜಾತಿ ವ್ಯವಸ್ಥೆ ತೊಲಗಿಸಲು ಬಸವಣ್ಣನವರು ಇವನಾರವ ಇವನಾರವ ಎನ್ನದಿರಿ ಇವ ನಮ್ಮವ ಎನ್ನಿರಿ ಎಂದು ಹೇಳಿದ್ದರೆ ಸಂತಶ್ರೇಷ್ಠ ಕನಕದಾಸ ಅವರು ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಎಂದು ಹೇಳಿದ್ದಾರೆ. ಅಂಥ ಮಹಾನ್ ಚೇತನಗಳ ಆಶಯದಂತೆ ಆಲಮಟ್ಟಿಯ ರೇವಣಸಿದ್ದೇಶ್ವರ ಸಂಸ್ಥೆಯವರೂ ಕೂಡ ಇಲ್ಲಿರುವ ಎಲ್ಲಾ ಜಾತಿ ಜನಾಂಗದವರನ್ನು ಕರೆದು ಎಲ್ಲಾ ಧರ್ಮದವರಿಗೆ ಸಂತಶ್ರೇಷ್ಠ ಕನಕದಾಸ ಅವರ ವ್ಯಕ್ತಿತ್ವದ ಪರಿಚಯ ಮಾಡುವದರೊಂದಿಗೆ ಸವರ್ಣೀಯ, ದಲಿತ, ಹಿಂದು-ಮುಸ್ಲಿಂ ಕ್ರೈಸ್ತ ಎನ್ನದೇ ಎಲ್ಲರಿಗೂ ಸಮಾನ ವೇದಿಕೆ ಕಲ್ಪಿಸಿರುವುದು ಸಂತಸದಾಯಕಯವಾಗಿದೆ ಎಂದು ಬಣ್ಣಿಸಿದರು.ವಿಶ್ರಾಂತ ಸಹಾಯಕ ಅಭಿಯಂತರ ಎ.ಎ.ಬಿಲ್ವಾಡ್ ಹಾಗೂ ಗ್ರಾಪಂ. ಮಾಜಿಸದಸ್ಯ ಎಚ್.ಎಫ್.ಕಟ್ಟಿಮನಿ ಮಾತನಾಡಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷೋಥಾನ್ ಹೆರಿಟೇಜ್ ರನ್-2024ಕ್ಕೆ ನೋಂದಣಿ ಕಾರ್ಯ ಭರದಿಂದ ಸಾಗಿದ್ದು, ಹಿರಿಯ ನಾಗರಿಕರೂ ಕೂಡ ನೋಂದಣಿ ಮಾಡಿಸುವ ಮೂಲಕ ಇತರರಿಗೆ ಸ್ಪೂರ್ತಿಯಾಗಿದ್ದಾರೆ.ಉಡುಪಿ ಕಟಪಾಡಿಯವರಾದ ಮತ್ತು ಹಾಲಿ ಪಂಚಕಲ್ ನಿವಾಸಿಯಾಗಿರುವ 73 ವರ್ಷದ ಸುಲತಾ ಕಾಮತ ಈ ಬಾರಿಯೂ ವೃಕ್ಷೋಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳುತ್ತಿದ್ದು ಗಮನ ಸೆಳೆದಿದ್ದಾರೆ.ಕಳೆದ 30 ವರ್ಷದಿಂದ ದೇಶ ವಿದೇಶಗಳ ನಾನಾ ಭಾಗಗಳಲ್ಲಿ ನಡೆದ ಮ್ಯಾರಾಥಾನ್ ಗಳಲ್ಲಿ ಪಾಲ್ಗೋಂಡಿರುವ ಸುಲತಾ ಕಾಮತ, ತಿಂಗಳಲ್ಲಿ ಕನಿಷ್ಠ ಮೂರ್ನಾಲ್ಕು ಮ್ಯಾರಾಥಾನ್ ಗಳಲ್ಲಿ ಓಡುವ ಮೂಲಕ ಮ್ಯಾರಾಥಾನ್ ಪಟುಗಳಲ್ಲಿ ಮನೆಮಾತಾಗಿದ್ದಾರೆ. ಈವರೆಗೆ ಸುಮಾರು 1200ಕ್ಕೂ ಹೆಚ್ಚು ಚಿನ್ನ, ಬೆಳ್ಳಿ, ರಜತ ಪದಕಗಳನ್ನೂ ಜಯಿಸಿರುವ ಇವರು ವಿಜಯಪುರ ವೃಕ್ಷೋಥಾನ್ ನಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.73ನೇ ಇಳಿ ವಯಸ್ಸಿನಲ್ಲಿಯೂ ಸ್ವಾವಲಂಬಿ ಬದುಕು ಸಾಗಿಸುತ್ತಿರುವ ಅವರು, ತಮ್ಮೂರಿನಲ್ಲಿ ನೀರಿನ ವ್ಯಾಪಾರ ಮಾಡುತ್ತ ಕ್ಯಾನ್ ಗಳನ್ನೂ ಎತ್ತಿ ವಾಹನದಲ್ಲಿ ಹಾಕುತ್ತ ಆರೋಗ್ಯವನ್ನು ಸದೃಢವಾಗಿಸಿಕೊಂಡಿದ್ದಾರೆ.ಇವರು ಭಾರತವಷ್ಟೇ ಅಲ್ಲ, ಸಿಂಗಪೂರ, ಮಲೇಷ್ಯಾ…
ಸಂತ ಸೇವಾಲಾಲ್ ಮತ್ತು ಜಗದಂಬಾ ದೇವಸ್ಥಾನ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಯಕ ಮತ್ತು ಭಕ್ತಿಗೆ ಹೆಸರಾಗಿರುವ ಬಂಜಾರಾ ಸಮಾಜ ತಮ್ಮ ಕಲೆ, ಸಂಸ್ಕೃತಿ, ಉಡುಪಿನ ಇತಿಹಾಸವನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ತಿಕೋಟಾ ತಾಲೂಕಿನ ಕ್ಷೇತ್ರದ ಹಂಚಿನಾಳ ಎಲ್.ಟಿ- 3 ರಲ್ಲಿ ಶ್ರೀ ಸಂತ ಸೇವಾಲಾಲ್ ಮತ್ತು ಜಗದಂಬಾ ದೇವಸ್ಥಾನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಬಂಜಾರಾ ಸಮುದಾಯದ ಜನ ಶ್ರಮಜೀವಿಗಳಾಗಿದ್ದು, ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ವಗಳಡಿ ಜೀವನ ಸಾಗಿಸುತ್ತಿದ್ದಾರೆ. ಶ್ರಮಪಟ್ಟು ದುಡಿದು ಅದರಿಂದ ಬರುವ ಹಣವನ್ನು ಶ್ರದ್ಧಾಭಕ್ತಿಯಿಂದ ದುರ್ಗಾದೇವಿ, ಸೇವಾಲಲ, ಹಾಮುಲಾಲ ಸೇರಿದಂತೆ ನಾನಾ ದೇವಸ್ಥಾನಗಳ ಜಾತ್ರೆಗಳಲ್ಲಿ ಪಾಲ್ಗೋಂಡು ದಾಸೋಹದಲ್ಲಿ ಪಾಲ್ಗೋಳ್ಳುತ್ತಾರೆ. ಜೊತೆಗೆ ತಮ್ಮ ಇತಿಹಾಸ, ಸಂಸ್ಕೃತಿ, ಕಲೆ ಉಡುಪನ್ನು ಈಗಲೂ ಮುಂದುವರೆಸಿಕೊಂಡು ಬಂದಿದ್ದು ಅದನ್ನು ಎತ್ತಿ ಹಿಡಿಯುವ ಕೆಲಸವನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಹೇಳಿದರು.ವಿಶಿಷ್ಠವಾಗಿರುವ ಬಂಜಾರಾ ಕಲೆ, ಸಂಸ್ಕೃತಿ, ಕಸೂತಿ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಾಸ ಶ್ರೇಷ್ಟ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಆರ್.ಎಂ.ಮಿರ್ದೆ ಮಾತನಾಡಿ, ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಕನಕದಾಸ ಪಾತ್ರ ಅನನ್ಯವಾಗಿದೆ. ಅವರ ವಿಚಾರಧಾರೆಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕವೆಂದು ಹೇಳಿದರು.ಈ ವೇಳೆಯಲ್ಲಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಉಷದೇವಿ.ಹಿರೇಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ೧೫ ನೇ ಶತಮಾನದಲ್ಲಿನ ಶ್ರೇಷ್ಟ ದಾಸ, ದಾರ್ಶನಿಕ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿದ ಮಹಾನ್ ಚೇತನರಾಗಿದ್ದಾರೆ. ದಾಸರು ತಮ್ಮ ಕೀರ್ತನೆ ಮೂಲಕ ಸಮಾಜದಲ್ಲಿನ ಅಸಮಾನತೆ, ಭಕ್ತಿ ಪಂಥ ಮತ್ತು ತಮ್ಮ ಕೀರ್ತನೆಗಳ ಮೂಲಕ ಕನ್ನಡ ದಾಸ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ವ್ಯಕ್ತಿ ಅದು ದಾಸರು ಎಂದು ಹೇಳಿದರು.ಈ ವೇಳೆಯಲ್ಲಿ ಮಹಾವಿದ್ಯಾಲಯದ ಬೋಧಕರು ಭಕ್ತಿ ಗೀತೆಗಳನ್ನು ಹಾಡಿ ಭಕ್ತಿ ಮರೆದರು.ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯ ಡ್ರಾ.ಅನಿಲ್ ನಾಯಕ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ.ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಶಾಲೆಯ ಪ್ರಾಚಾರ್ಯ ಡಾ. ಸೈಜು ನಾಯರ ಮತ್ತು ಶಾಲಾ ಆಡಳಿತಾಧಿಕಾರಿ ದೀಪಾ ಜಂಬೂರೆ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.10ನೇ ತರಗತಿ ವಿದ್ಯಾರ್ಥಿಗಳು ಕನಕದಾಸರ ಕೀರ್ತನೆಗಳನ್ನು ಹಾಡಿದರು.ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಾಡಿನ ಶ್ರೇಷ್ಠ ಸಂತ ಶ್ರೀ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಆರ್. ಎಂ. ಹೊನ್ನುಟಗಿ, ಡಿನ್ ರಾದ ಡಾ. ಆನಂದ ಅಂಬಲಿ, ಡಾ. ಎಸ್. ವಿ. ಪಾಟೀಲ, ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ, ಡೈರೆಕ್ಟರ್ ಆರ್ ಆ್ಯಂಡ್ ಡಿ ಸೆಲ್ ಡಾ. ಎಂ. ಎಂ. ಪಾಟೀಲ, ರಜಿಸ್ಟ್ರಾರ ಡಾ. ಆರ್. ವಿ. ಕುಲಕರ್ಣಿ, ಡೆಪುಟಿ ರಜಿಸ್ಟ್ರಾರ ಸತೀಶ ಪಾಟೀಲ, ಸಹಾಯಕ ರಜಿಸ್ಟ್ರಾರ ಡಾ. ಶ್ರೀಧರ ಬಗಲಿ, ಅವರು ಶ್ರೀ ಭಕ್ತ ಕನಕದಾಸ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಕಾರ್ಯಕ್ರಮದಲ್ಲಿ ವಿವಿಯ ಆನಂದ ಪಾಟೀಲ, ಈರಯ್ಯ ಮಠಪತಿ, ಮಹೇಶ ಶಿವಣಗಿ, ಪವನ ಹಡಪದ, ನಾಗೇಶ ತಳವಾರ ಮುಂತಾದವರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ನಾಡು ನುಡಿಯ ಮೂಲಕ ಜನಸಾಮಾನ್ಯರಲ್ಲಿ ಅನುಭವಗಳಿಂದ ಕೂಡಿದ ಚಿಂತನಾತ್ಮಕ ಉಪನ್ಯಾಸಗಳನ್ನು ನಡೆಸಿ ನಾವು ನೀವೆಲ್ಲ ಪುನೀತರಾಗುವಲ್ಲಿ ದತ್ತಿ ಗೋಷ್ಠಿಗಳ ಪಾತ್ರ ಮಹತ್ವದ್ದು ಆದರೆ, ದತ್ತಿ ಗೋಷ್ಠಿಗಳನ್ನು ನಡೆಸುವಲ್ಲಿ ದತ್ತಿ ದಾನಿಗಳ ಕಾಯ೯ ಶ್ಲಾಘನೀಯ ಎಂದು ಸರ್ಕಾರಿ ಪ್ರಥಮ ದಜೆ೯ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಲಕ್ಷ್ಮಿ ಮೋರೆ ಅಭಿಪ್ರಾಯಪಟ್ಟರು.ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ದಿ. ಪ್ರಭಾವತಿ ಮಲ್ಲಪ್ಪ ಪಟ್ಟಣಶೆಟ್ಟಿ ದತ್ತಿ. ದತ್ತಿ ದಾನಿಗಳು ಶ್ರೀ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಸಚಿವರು, ವಿಜಯಪುರ. ವಿಷಯ: ೧೨ನೇ ಶತಮಾನದ ಶರಣರ ಸಂದೇಶಗಳು. ಹಾಗೂ ಶ್ರೀಮತಿ ಶಾಂತಾಬಾಯಿ ಎಸ್ ಗುಂಡಳ್ಳಿ. ದತ್ತಿ ದಾನಿಗಳು ಶ್ರೀ ಶಾಂತಮಲ್ಲ ಹೊನ್ನಪ್ಪ ಗುಂಡಳ್ಳಿ, ವಿಜಯಪುರ. ವಿಷಯ: ವಚನ ಸಾಹಿತ್ಯದ ಕುರಿತು ಚಿಂತನೆ ಎಂಬ ಎರಡು ದತ್ತಿ ಗೋಷ್ಠಿಗಳ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ದತ್ತಿ ದಾನಿಗಳ ನಿಸ್ವಾರ್ಥ ಸೇವೆಯನ್ನು ಸ್ಮರಿಸುತ್ತಾ, ೧೨ನೇ ಶತಮಾನದ ಶರಣರು ಸಮ ಸಮಾಜದ ಚಿಂತಕರಾಗಿದ್ದರು ಎಂದರು.ಅಧ್ಯಕ್ಷತೆ ವಹಿಸಿದ್ದ…
ಉದಯರಶ್ಮಿ ದಿನಪತ್ರಿಕೆ ಹೊನವಾಡ: ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನೆ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಕರೆಯಲಾಗುತ್ತದೆ. ಸಾಹಿತ್ಯದ ಜೊತೆಗೆ ಸಂಗೀತಕ್ಕೂ ಒತ್ತುಕೊಟ್ಟ ಉಭಯ ಸಂತರು ದಾಸ ಪರಂಪರೆಯಲ್ಲಿ ಅಜರಾಮರರಾಗಿ ಉಳಿದವರು. ಅದರಲ್ಲಿ ಕನಕದಾಸರು ನಾಡು ಕಂಡ ಅಪ್ರತಿಮ ದಾಸರಾಗಿದ್ದು ದಾಸಶ್ರೇಷ್ಠ ಎಂದೆನಿಸಿಕೊಂಡವರು ಎಂದು ಶಾಲೆಯ ಸಹ ಶಿಕ್ಷಕ ಬಿ ಡಿ ಜತ್ತಿ ಹೇಳಿದರು.ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ ವಿದ್ಯಾಚೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕದಾಸರ 537ನೇ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.ಬಾಡ ಗ್ರಾಮ ಕನಕದಾಸರ ಜನ್ಮಭೂಮಿಯಾದರೆ, ಬ್ಯಾಡಗಿ ತಾಲೂಕಿನ ಕಾಗಿನೆಲೆ ಕನಕದಾಸರ ಕರ್ಮಭೂಮಿ. ವಿಜಯನಗರ ಅರಸರ ಆಡಳಿತದಲ್ಲಿ ದಂಡನಾಯಕನಾಗಿದ್ದ ತಿಮ್ಮಪ್ಪ ನಾಯಕನಿಗೆ ಚಿನ್ನ ಸಿಕ್ಕಿದ್ದರಿಂದ ಕನಕನಾಗುತ್ತಾನೆ. ನಂತರ ಯುದ್ಧದಲ್ಲಿ ಪಾಲ್ಗೊಂಡು ಅಲ್ಲಿ ಕಂಡ ಹಿಂಸೆಯಿಂದ ಕನಕ ಕನಕದಾಸರಾಗುತ್ತಾರೆ ಎಂದು ವ್ಹಿ ಎನ್ ಪೂಜಾರಿ ಹೇಳಿದರು.ಮುಖ್ಯ ಗುರುಗಳಾದ ಎನ್ ವಿ ಕೋಟಿ ಸಹ ಶಿಕ್ಷಕ ಎಸ್ ಎ ಮಾಲಗಾರ, ಶ್ರೀಮತಿ ಎಂ ಎಲ್ ಭೋಸ್ಲೆ, ಶ್ರೀಮತಿ ಎಸ್ ಎ ಮಲ್ಲಾಡ್, ಶ್ರೀಮತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕನಕದಾಸ ವೃತ್ತದಲ್ಲಿ ಸೋಮವಾರ ಸಂತ ಕನಕದಾಸರ ಜಯಂತ್ಯುತ್ಸವ ಅಂಗವಾಗಿ ದಾಸ ಮಾಣಿಕ್ಯ, ಸಮಾನತೆಯ ಹರಿಕಾರ, ಹರಿಗೆ ಒಲಿದ ಶತಾಯು, ಸಂತ ಶ್ರೇಷ್ಠ ಶ್ರೀ ಕನಕದಾಸ ರವರ ಪುತ್ಥಳಿಗೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕರಾದ ರಾಮನಗೌಡ ಬ.ಪಾಟೀಲ ಯತ್ನಾಳ ರವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
ಲೇಖನ:- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಹೀಗಿರುವಾಗ ಒಂದು ದಿನ ದೇವರಾಜ್ ಅವರು, ‘ಮಗನೇ ನಿನಗೆ ನಾನು ನನಗಿಷ್ಟವಾದ ಕುಟುಂಬದ ಒಂದು ಹುಡುಗಿಯನ್ನು ನೋಡಿ ನಿನಗೆ ಮದುವೆ ಮಾಡಬೇಕೆಂದು ನಿರ್ಧರಿಸಿದ್ದೇನೆ’ ಎಂದು ಹೇಳಿದರು. ಆಗ ಶ್ರವಣ್ ಇಲ್ಲಪ್ಪಾ ‘ನಾನು ಮದುವೆ ಆಗುವ ಹುಡುಗಿಯನ್ನು ನಾನೇ ಆಯ್ಕೆ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದ. ಆಗ ತಂದೆಯು, ‘ಹುಡುಗಿಯ ಆಯ್ಕೆಯನ್ನು ನೀನೇ ಮಾಡಿಕೊಳ್ಳುವುದಾದರೆ ಆ ಹುಡುಗಿ ಬಿಲ್ಗೇಟ್ಸ್ರ ಮಗಳೇ ಆಗಿರಬೇಕು’ ಎಂದು ಸವಾಲು ಹಾಕಿದರು. ಆಗ ಶ್ರವಣ್ ನಗುತ್ತಾ ‘ಸರಿಯಪ್ಪಾ, ಹಾಗೆಯೇ ಆಗಲಿ’ ಎಂದು ಆ ಸವಾಲನ್ನು ಸ್ವೀಕರಿಸಿದ. ಮರುದಿನವೇ ನನ್ನ ಮಾತೂ ಉಳಿಯಬೇಕು ಮಗನ ಆಸೆಯೂ ಈಡೇರಬೇಕು ಎಂಬ ಉದ್ದೇಶದಿಂದ ದೇವರಾಜ್ ಅವರು ನೇರವಾಗಿ ಬಿಲ್ಗೇಟ್ಸ್ರನ್ನು ಭೇಟಿ ಮಾಡಲು ನಿರ್ಧರಿಸಿದರು. ಬಿಲ್ಗೇಟ್ಸ್ರನ್ನು ಭೇಟಿ ಮಾಡಿದ ದೇವರಾಜ್, ‘ನಾನು ನಿಮ್ಮ ಮಗಳಿಗೆ ಮದುವೆ ಮಾಡಲು ಒಬ್ಬ ಹುಡುಗನನ್ನು ನೋಡಿದ್ದೇನೆ’ ಎಂದು ಹೇಳಿದರು.…
