Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿರಕ್ತಮಠದ ಪರಿಸರ ಕುಟೀರದಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ರಕ್ತ ಸಂಬಂಧಗಳಿಗಿಂತಲೂ ಮಿಗಿಲಾದದ್ದು ಸ್ನೇಹ ಸಂಬಂಧ, ಇಂದು ಸಾಂಧರ್ಬಿಕವಾಗಿ ದೂರವಾಗಿರುವ ಆತ್ಮೀಯ ಸಂಬಂಧಗಳನ್ನು ಸ್ನೇಹ ಸಮ್ಮಿಲನದಂತಹ ಕಾರ್ಯಕ್ರಮಗಳು ಬೆಸೆಯಲು ಸೇತುವೆಯಾಗಿವೆ ಎಂದು ಚಿಮ್ಮಡ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.ಗ್ರಾಮದ ವಿರಕ್ತಮಠದ ಪರಿಸರ ಕುಟೀರ ಆಶ್ರಮದಲ್ಲಿ ಮಹಾಲಿಂಗಪುರದ ಎಸ್ಸಿಪಿ ಪ್ರೌಢಶಾಲೆಯ ೧೯೮೬-೮೭ನೇ ಸಾಲಿನ ವಿದ್ಯಾರ್ಥಿಗಳು ಭಾನುವಾರ ಹಮ್ಮಿಕೊಂಡ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು ಇಂದಿನ ಯಾಂತ್ರೀಕೃತ ಬದುಕಿನಲ್ಲಿ ರಕ್ತ ಸಂಬಂಧಗಳ ಮಧ್ಯೆ ಕಾಲ ಕಳೆಯಲು ಸಾಧ್ಯವಾಗದೆ ಮೊಬೈಲ್ನೊಂದಿಗೆ ಕಾಲ ಕಳೆಯುವಂತಾಗಿರುವುದು ವಿಪರ್ಯಾಸ, ಕೆಲವು ಸಮಯವನ್ನಾದರೂ ಮೀಸಲಿಟ್ಟು ಕುಟುಂಬ ಹಾಗೂ ಸಂಬಂಧಗಳಿಗೆ ಸಮಯ ಕೊಡಬೇಕಿದೆ ಎಂದರು.ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ಶ್ರೀಕಾಂತ ಮಾಳಿ, ಶುಭಾಂಗಿಣಿ ಇಂಡಿಕರ, ಮಹಾನಂದಾ ಗೊಂಬಿ, ಹನಮಂತ ಶಿರೋಳ, ಪ್ರಭು ನೇಸೂರ, ಶಿವಲಿಂಗ ಟಿರಕಿ ಮಾತನಾಡಿದರು. ಮನೋಹರ ಶಿರೋಳ, ಶಿವಾನಂದ ಬಾಗೇವಾಡಿ, ಪಾರ್ವತಿ ಸೋರಗಾವಿ, ಶಂಕರ ಹೊಸಕೋಟಿ, ವಿವೇಕಾನಂದ ಕಡಪಟ್ಟಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಐದುನೂರು ವರ್ಷಗಳ ಹಿಂದೆಯೇ ‘ಕುಲ ಕುಲ ಎಂದು ಹೊಡೆದಾಡದಿರಿ’ ಎನ್ನುವ ಮೂಲಕ ಕನಕದಾಸರು ವರ್ಣಾಶ್ರಮ ವ್ಯವಸ್ಥೆ ಸೃಷ್ಟಿಸಿರುವ ಜಾತಿ ನರಕವನ್ನು ದಿಟ್ಟತನದಿಂದ ಪ್ರಶ್ನಿಸಿದ್ದರು. ಜಾತಿ ಪದ್ದತಿಯನ್ನು ಪ್ರಶ್ನಿಸಿ ಆತ್ಮಾವಲೋಕನಕ್ಕೆ ಕರೆಕೊಟ್ಟ ಸಂತ ಕನಕದಾಸರನ್ನು ಇಂದು ನೆನೆಯೋಣ. ಅವರ ತೊರಿದ ದಾರಿಯಲ್ಲಿ ಸಾಗೋಣ ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಇ.ಡಿ.ಲಮಾಣಿಯವರು ಹೇಳಿದರು.ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಕನಕದಾಸರ ಜಯಂತಿ’ ಕಾರ್ಯಕ್ರಮದ ಅಧ್ಯಕ್ಷತೆ ಮಹಿಸಿ ಮಾತನಾಡಿದ ಅವರು. ಸಮಾಜದ ಮೇಲು, ಕೀಳು, ಜಾತಿ, ಮತ ಸಿದ್ಧಾಂತದ ವಿರುದ್ಧ ಪ್ರತಿಭಟನಾ ನೆಲೆಗಟ್ಟಿನಲ್ಲಿ ಕನಕದಾಸ ಸಾಹಿತ್ಯಕ್ಕೆ ವೈಚಾರಿಕ ಪ್ರಭೆ ತಂದರು. ಅವರು ಸಾರಿದ ತತ್ವಾದರ್ಶಗಳು ಇಂದಿಗೂ ಪ್ರಸ್ತುತ, ಅವರ ನೀಡಿದ ಆದರ್ಶ ನಮಗೆಲ್ಲರಿಗೂ ದಾರಿದೀಪವಾಗಲಿ ಎಂದರು.ಈ ವೇಳೆಯಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಂ.ಎಲ್.ಚವ್ಹಾಣ್ರವರು ಮಾತನಾಡುತ್ತ. ಕನಕದಾಸರು ಕೇವಲ ಕುರುಬ ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಬದಲಿಗೆ ಎಲ್ಲಾ ಜಾತಿಗೆ ಸೇರಿದ ದಾಸರಾದರು.…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬೆಂಗಳೂರಿನ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆಯಿಂದ ಕೊಡಮಾಡುವ ಹೆಮ್ಮೆಯ ಕರ್ನಾಟಕ ರತ್ನ ಪ್ರಶಸ್ತಿಗೆ ಪಟ್ಟಣದ ಲಾಡ್ಲೇಸಾಬ ನಾಯ್ಕೋಡಿ ಭಾಜನರಾಗಿದ್ದು ನ೧೭ ರಂದು ಬೆಂಗಳೂರಿನ ಮಹಾರಾಣಿ ಕಾಲೇಜು ಬಳಿ ಇರುವ ಭಾರತ ಸ್ಕೌಟ್ಸ್ ಆಂಡ್ ಗೈಡ್ಸ್ ಅಡಿಟೋರಿಯಂ ನಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತೇಲುವ ಸ್ಥಿತಿಯಲ್ಲಿ ಮಹಿಳೆ ಮತ್ತು ಹೆಣ್ಣು ಮಗುವಿನ ಶವಗಳು ಬಾವಿಯೊಳಗೆ ಪತ್ತೆಯಾದ ಘಟನೆ ತಾಲೂಕಿನ ಹಂಡರಗಲ್ಲ ಗ್ರಾಮದಲ್ಲಿ ಸೋಮವಾರ ವರದಿಯಾಗಿದೆ.ಮೃತ ದುರ್ದೈವಿಗಳನ್ನು ರಿಯಾನಾ ಇನಾಮದಾರ(೨೫) ಮತ್ತು ಅಮೀರಾ ಇನಾಮದಾರ(೫) ಎಂದು ಗುರುತಿಸಲಾಗಿದೆ. ಮೃತರು ತಾಯಿ ಮತ್ತು ಮಗಳು ಎನ್ನಲಾಗುತ್ತಿದೆ. ಕಳೆದ ೨ ವರ್ಷಗಳಿಂದ ಪತಿಯನ್ನು ಬಿಟ್ಟು ತವರು ಮನೆಗೆ ಬಂದಿದ್ದ ರಿಯಾನಾ ಮಾನಸಿಕವಾಗಿ ನೊಂದಿದ್ದಳು ಎಂದು ಕೇಳಿಬಂದಿದೆ. ಘಟನೆಯ ಹಿನ್ನೆಲೆ ಸಂಶಯಾಸ್ಪದವಾಗಿದ್ದು ಸತ್ಯಾ ಸತ್ಯತೆ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಕ್ತ ಕನಕದಾಸರ 537 ನೇ ಜಯಂತಿಯಂಗವಾಗಿ ಸೋಮವಾರ ಭಕ್ತ ಕನಕದಾಸ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಬಿ. ಹೊಸಮನಿ ಅವರು ಮಾತನಾಡಿ, ಕನ್ನಡ ನಾಡು ಕಂಡ ಶ್ರೇಷ್ಠ ಕೀರ್ತನಕಾರ. ಕವಿಯಾಗಿದ್ದ ಕನಕದಾಸರು ಮಹಾಜ್ಞಾನಿಯೂ ಆಗಿದ್ದರು.ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಸಮಾನತೆ, ಅಜ್ಞಾನಗಳನ್ನು ತೊಲಗಿಸಲು ಶ್ರಮಿಸಿದರು ಎಂದು ಹೇಳಿದರು.ರಾಜ್ಯಶಾಸ್ತ್ರ ವಿಭಾಗದ ಡಾ. ಹೆಚ್. ಎಂ. ನಾಟಿಕಾರ, ಕನ್ನಡ ವಿಭಾಗದ ಶ್ರೀಶೈಲ ಬಳವಾಟ, ಡಾ. ಬಾನು, ನಿರ್ವಹಣಾ ಶಾಸ್ತ್ರ ವಿಭಾಗದ ಡಾ. ಅಮಿತ್ ಮಿರ್ಜಿ, ಇತಿಹಾಸ ವಿಭಾಗದ ವಿಜಯಲಕ್ಷ್ಮೀ, ಡಾ. ಪ್ರಶಾಂತ ನಾಯಕ, ದೈಹಿಕ ಶಿಕ್ಷಣ ನಿರ್ದೇಶಕ ರೇಣುಕಾ ಅಂಬಲಿ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿ ನಿಯೋಜಿತ ಭಕ್ತ ಕನಕದಾಸ ವೃತ್ತದಲ್ಲಿ ಹಾಲುಮತ ಸಮಾಜ ಬಾಂಧವರು ಭಕ್ತ ಕನಕದಾಸ ಜಯಂತಿಯಂಗವಾಗಿ ಸೋಮವಾರ ಕನಕದಾಸ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕನಕದಾಸ ಜಯಂತಿಯನ್ನು ಆಚರಿಸುವ ಮೂಲಕ ಕನಕದಾಸರಿಗೆ ನಮನಗಳನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಶಿವಾನಂದ ಈರಕಾರ ಮುತ್ಯಾ, ಮುತ್ತು ಒಡೆಯರ, ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲೂಕಾಧ್ಯಕ್ಷ ರಾಜಶೇಖರ ಆಸಂಗಿ, ಮುಖಂಡರಾದ ಸಂಗಮೇಶ ಓಲೇಕಾರ, ಸಂಗಪ್ಪ ವಾಡೇದ, ಮಲ್ಲಿಕಾರ್ಜುನ ಅಂಬಳನೂರ, ಮಲ್ಲಿಕಾರ್ಜುನ ಶೇಬಗೊಂಡ, ಮಹೇಶ ಹಿರೇಕುರಬರ, ಎಲ್.ಬಿ.ಕಂದಗಲ್ಲ, ಅಪ್ಪು ವಾಡೇದ, ಮಲ್ಲಪ್ಪ ಗುಂಡಳ್ಳಿ, ಸಿದ್ದಪ್ಪ ಹಿರೇಕುರಬರ, ಕರೆಯಪ್ಪ ಬಂಚೋಡಿ, ವೀರಭದ್ರ ತೋಟದ, ಮುದುಕಪ್ಪ ಕಲ್ಯಾಣಿ, ಬಸವಂತಯ್ಯ ಗುರುವಿನ, ಶಿವಣ್ಣ ಮಸ್ಕನಾಳ, ಸುಭಾಸ ಬೂದಿಗೋಳಿ, ಶಿವಾನಂದ ವಾಡೇದ, ರೇಣುಕಾ ಅಂಬಳನೂರ, ಬೌರಮ್ಮ ಬೂದಿಗೋಳಿ, ಗೀತಾ ವಾಡೇದ, ಯಲ್ಲಮ್ಮ ಕಲ್ಯಾಣಿ, ರತ್ನಾಬಾಯಿ ಕಲ್ಯಾಣಿ, ಸುನಂದಾ ವಾಡೇದ, ಕಾಶೀಬಾಯಿ ಹಿರೇಕುರಬರ, ಸವಿತಾ ಕಲ್ಯಾಣಿ, ದೊಡ್ಡಪ್ಪನವರ ಸೇರಿದಂತೆ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಸೋಮವಾರ ಹಮ್ಮಿಕೊಂಡಿದ್ದ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಕ್ತ ಕನಕದಾಸ ಭಾವಚಿತ್ರಕ್ಕೆ ಗ್ರೇಡ್-೨ ತಹಸೀಲ್ದಾರ ಜಿ.ಎಸ್.ನಾಯಕ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ಜಿ.ವ್ಹಿ.ಕಿರಸೂರ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಶಿರಸ್ತೇದಾರ ಬಿ.ಆರ್.ಪೋಲೇಶಿ, ಭೂದಾಖಲೆ ಇಲಾಖೆಯ ಕಲಾದಗಿ, ಪುರಸಭೆ ಮುಖ್ಯಾಧಿಕಾರಿ ಅಪ್ರೋಜ್ಅಹ್ಮದ ಪಟೇಲ, ಸಮಾಜ ಕಲ್ಯಾಣ ಇಲಾಖೆಯ ದಪ್ಪೇದಾರ, ವಿರೇಶ ಗೂಡ್ಲಮನಿ, ಖಜಾನೆ ಇಲಾಖೆಯ ಮನೋಜ ಪಾಟೀಲ, ಶಿಕ್ಷಣ ಇಲಾಖೆಯ ಎಂ.ವ್ಹಿ.ಗಬ್ಬೂರ, ತಹಸೀಲ್ದಾರ ಕಚೇರಿಯ ಸಿಬ್ಬಂದಿಗಳಾದ ಬಸವರಾಜ ದಾನಿ, ಮಂಜು ಹಳ್ಳೂರ,ಆರ್.ವ್ಹಿ.ಘಾಟಗೆ, ನಿರ್ಮಲಾ ಪೂಜಾರಿ, ಅನಿತಾ ಪಾಟೀಲ ಇತರರು ಇದ್ದರು. ಭಾಗವಹಿಸದ ಹಾಲುಮತ ಸಮುದಾಯ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನು ಹೊರತು ಪಡಿಸಿದರೆ ಹಾಲುಮತ ಸಮಾಜ ಬಾಂಧವರಾಗಲಿ, ಬೇರೆ ಸಮಾಜ ಬಾಂಧವರಾಗಲಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾಗಲಿ, ವಿವಿಧ ಮುಖಂಡರಾಗಲಿ ಯಾರೊಬ್ಬರೂ ಭಾಗವಹಿಸಿರಲಿಲ್ಲ. ಹಾಲುಮತ ಸಮಾಜದ ಮುಖಂಡರು ಪಟ್ಟಣದಲ್ಲಿ ಭಕ್ತ ಕನಕದಾಸ ವೃತ್ತ ನಿರ್ಮಾಣ ಕಾಮಗಾರಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಕ್ತ ಕನಕದಾಸ ಜಯಂತಿಯಂಗವಾಗಿ ಸೋಮವಾರ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕನಕದಾಸ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡಾ.ವೈ.ಬಿ.ನಾಯಕ ಮಾತನಾಡಿ, ಸಾಹಿತ್ಯ ಮತ್ತು ಸಮಾಜ ಸುಧಾರಣೆಯಲ್ಲಿ ಭಕ್ತ ಕನಕದಾಸರ ಕೊಡುಗೆ ಅಪಾರವಾಗಿದೆ. ಕನಕದಾಸರು ಕನ್ನಡ ಸಾಹಿತ್ಯಕ್ಕೆ ಅಮೂಲ್ಯವಾದ ರಾಮಧಾನ್ಯ ಚರಿತೆ, ಮೋಹನ ತರಂಗಿಣಿ, ನಳಚರಿತೆ ಕೃತಿಗಳನ್ನು ನೀಡುವ ಮೂಲಕ ಸಾಹಿತ್ಯ ಲೋಕದ ಶ್ರೀಮಂತಿಕೆಯನ್ನು ಹೆಚ್ಚಿಸಿದ್ದಾರೆ. ಸಮಾಜದಲ್ಲಿ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಗಾಗಿ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜಕ್ಕೆ ಸಂದೇಶ ಸಾರಿದ್ದಾರೆ. ಕನಕದಾಸರು ನೀಡಿದ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕೆಂದರು.ಈ ಸಂದರ್ಭದಲ್ಲಿ ಬಿ.ಎಂ.ಸಾಲವಾಡಗಿ, ಪ್ರೊ.ದಿಲೀಪಕುಮಾರ, ಎಂ.ಕೆ.ಯಾದವ, ಪಿ.ಎಸ್.ನಾಟೀಕಾರ, ಎಸ್.ಜೆ.ಸೂರ್ಯವಂಶಿ, ಆರ್.ಎಂ.ಮುಜಾವರ, ಬೋಧಕೇತರ ಸಿಬ್ಬಂದಿಯವರಾದ ಎಲ್.ಆರ್.ರಾಠೋಡ, ಭೀಮು ಸಿಂಧೆ, ಬಸವರಾಜ ಮುದ್ದೇಬಿಹಾಳ, ಮಾರುತಿ ಕನಸೆ ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಅಂತರಾಷ್ಟ್ರೀಯ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿರುವ ಹಾನಗಲ್ ಸದಾಶಿವ ಸ್ವಾಮೀಜಿಯವರ ದೇವಸ್ಥಾನದಲ್ಲಿ ಸೋಮವಾರ ಹಾನಗಲ್ ಸದಾಶಿವ ಸ್ವಾಮೀಜಿಯವರ ೪೧ ನೇ ಪುಣ್ಯಸ್ಮರಣೆಯನ್ನು ಭಕ್ತರು ಶ್ರದ್ಧಾ-ಭಕ್ತಿಯಿಂದ ಆಚರಿಸಿದರು.ಬೆಳಗ್ಗೆ ದೇವಸ್ಥಾನದಲ್ಲಿ ಹಾನಗಲ್ ಸದಾಶಿವ ಸ್ವಾಮೀಜಿಯವರ ಕರ್ತೃ ಗದ್ದುಗೆಗೆ ಹಾಗೂ ಅವರ ಪಾದುಕೆಗಳಿಗೆ ಬಸವೇಶ್ವರ ದೇವಸ್ಥಾನದ ಅರ್ಚಕ ಗೌರಿಶಂಕರ ಚರಂತಿಮಠ ಅವರು ರುದ್ರಾಭಿಷೇಕ, ವಿಶೇಷ ಪೂಜೆ ನೆರವೇರಿಸಿದರು. ಭಕ್ತರು ಕಾಯಿ-ಕರ್ಪೂರ ಅರ್ಪಿಸಿ ಸ್ವಾಮೀಜಿಯವರ ಕರ್ತೃ ಗದ್ದುಗೆ ಹಾಗೂ ಸ್ವಾಮೀಜಿಯವರ ಪಾದುಕೆಗಳ ದರ್ಶನ ಪಡೆದುಕೊಂಡರು.ಪೂಜೆ ನೆರವೇರಿದ ನಂತರ ಹಾನಗಲ್ ಸದಾಶಿವ ಸ್ವಾಮೀಜಿಯವರ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಎತ್ತಿನ ಬಂಡಿಯಲ್ಲಿ ಡೊಳ್ಳಿನ ಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಪಟ್ಟಣದಲ್ಲಿ ೧೯೮೩ ರ ನ. ೧೮ ರಂದು ಆರು ತಿಂಗಳಿಂದ ಸ್ಥಳೀಯ ವಿರಕ್ತಮಠದ ಮುರುಘೇಂದ್ರ ಸ್ವಾಮೀಜಿಯವರು ನಡೆಸಿಕೊಂಡು ಬಂದಿದ್ದ ಬಸವ ಪುರಾಣ ಮಂಗಲ ಹಾಗೂ ೬೩ ಪುರಾತನ ಶರಣರ ಮಂಟಪ ಮಹಾಪೂಜೆಗೆ ಹಾನಗಲ್ ಸದಾಶಿವ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವೀರಭದ್ರೇಶ್ವರ ನಗರದ ಉದ್ಯಾನವನದ ಹತ್ತಿರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ೨೦೨೪-೨೫ ನೇ ಸಾಲಿನಲ್ಲಿ ಮಂಜೂರಾದ ಡಿ.ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯವನ್ನು ಸಕ್ಕರೆ, ಕೃಷಿ ಮಾರುಕಟ್ಟೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ೧೦೦ ಸಂಖ್ಯಾಬಲದ ಒಟ್ಟು ೬೨ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಮಂಜೂರಾತಿ ದೊರಕಿದೆ. ಇದರಲ್ಲಿ ಬಸವನಬಾಗೇವಾಡಿಗೂ ಒಂದು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಮಂಜೂರಾತಿ ದೊರೆತಿದೆ. ಈ ಭಾಗದಲ್ಲಿರುವ ವಿದ್ಯಾರ್ಥಿನಿಯರಿಗೆ ಈ ವಸತಿ ನಿಲಯ ತುಂಬಾ ಅನುಕೂಲವಾಗಲಿದೆ. ವಿದ್ಯಾರ್ಥಿನಿಯರು ಈ ವಸತಿ ನಿಲಯದ ಸದುಪಯೋಗ ಪಡೆದುಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು. ಇಲಾಖೆಯ ಅಧಿಕಾರಿಗಳು ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈ ವಸತಿ ನಿಲಯವು…
