Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಕೀರ್ತನೆಗಳ ಹರಿಕಾರ ಭಕ್ತ ಕನಕದಾಸರ ಚರಿತ್ರೆ ಆವಣಿ೯ನೀಯವಾಗಿದೆ.ಅವರ ಸಕಲ ಚಿಂತನೆಗಳ ತತ್ವಸಾರಗಳು ಇಡೀ ಮನುಕುಲಕ್ಕೆ ಬೆಳಕಾಗಿವೆ.ಮನು ತತ್ವದ ಒಳಗಣ್ಣು ತೆರೆಸಿವೆ. ಜ್ಞಾನೋದಯದ ರಸವೋನ್ಪತಿ ಉಣಬಡಿಸಿದ್ದು, ಅವು ಬದುಕಿನ ಉನ್ಮಾದಕ್ಕೆ ಬೆಳಕಾಗಿವೆ ಎಂದು ಪ್ರಭಾರ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ ಅಭಿಪ್ರಾಯಿಸಿದರು.ಅವರು ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಸೋಮವಾರ ದಾಸ ಶ್ರೇಷ್ಟ ಕನಕದಾಸರ ಜಯಂತಿ ಅಂಗವಾಗಿ ಕನಕರ ಹಾಗೂ ಕನ್ನಡ ಕುಲಗುರು ಲಿಂ,ತೋಂಟದ ಡಾ.ಸಿದ್ದಲಿಂಗ ಪೂಜ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಸಮಾಜದ ಹಿಂದುಳಿದ ಕುಟುಂಬದಲ್ಲಿ ಜನಿಸಿ ತಮ್ಮ ವೈಚಾರಿಕ ಕೃತಿಗಳ ಮೂಲಕ ಗುರುತಿಸಿಕೊಂಡಿರುವ ಕನಕರು ಶ್ರೇಷ್ಠ ವಿದ್ವಾಂಸರು. ಜಾತಿ,ಮತ, ಕುಲ, ಗೋತ್ರಗಳಿಗೆ ಅಂಟಿಕೊಳ್ಳದೇ ಮನುಕುಲದ ದಿವ್ಯತೆಗೆ ಮಹತ್ವವನ್ನು ನೀಡಿದ್ದಾರೆ. ತಮ್ಮದೇ ಬುದ್ದಿವಂತಿಕೆ, ಚುರುಕತನದ ಆಲೋಚನಾ ಲಹರಿಯ ಪ್ರಜ್ಞೆಯಿಂದ ಸಾಹಿತ್ಯ, ಕೃತಿಗಳ ಮೂಲಕ ಅನ್ಯೋನ್ಯ ಸಂದೇಶಗಳನ್ನು ಸಮಾಜದ ಒಳಿತಿಗೆ ಕನಕರು ನೀಡಿದ್ದಾರೆ ಎಂದರು.ಕವಿಯಾಗಿ,ಕೀರ್ತನಗಾರರಾಗಿ, ದಾಸರಾಗಿ ಪ್ರಫುಲ್ ವೈಚಾರಿಕತೆ ಪ್ರಜ್ಞೆಯೊಂದಿಗೆ ಕನ್ನಡ ಭಾಷೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಬೆಳಗಾವಿಯಲ್ಲಿ ಡಿ.೧೦ ರಂದು ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ ೨ ಎ ಸೇರ್ಪಡೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದೆಂದು ಪಂಚಮಸಾಲಿ ಸಮಾಜದ ಜಗದ್ಗುರು ಜಯಮೃತ್ಯುಂಜಯ ಶ್ರೀಗಳು ಹೇಳಿದರು.ಪಟ್ಟಣದ ಅಕ್ಕಮಹಾದೇವಿ ಸಹಕಾರ ಸೌಹಾರ್ಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅತೀ ಹೆಚ್ಚು ದಿನಗಳ ಕಾಲ ಪಂಚಮಸಾಲಿ ಸಮಾಜ ೨ ಎ ಸೇರ್ಪಡೆ ಆಗ್ರಹಿಸಿ ಹೋರಾಟ ನಡೆದಿದೆ.ಪಂಚಮಸಾಲಿ ಸಮಾಜದ ಬೇಡಿಕೆ ದೇಶದ ಗಮನ ಸೆಳೆದಿದೆ. ೨೦೨೧ ರಿಂದ ಹೋರಾಟ ನಡೆದಿದೆ. ಆದರೂ ಈವರೆಗೆ ಬೇಡಿಕೆ ಈಡೇರಿಲ್ಲ. ಇಲ್ಲಿಯವರೆಗೂ ಸ್ಪಂದಿಸಿಲ್ಲ. ಕಳೆದ ಬಾರಿ ಬಿಜೆಪಿ ಸರಕಾರವಿದ್ದಾಗ ಪಂಚಮಸಾಲಿ ಸಮಾಜವನ್ನು ೨ ಎ ಸೇರ್ಪಡೆ ಬದಲಾಗಿ ೨ಡಿ ಮಾಡಿದರು. ಅದು ಬೇಕಾಗಿಲ್ಲ, ಹೀಗಾಗಿ ೨ ಎ ಸೇರ್ಪಡೆಗೆ ಹೋರಾಟ ಮುಂದು ವರೆದಿದೆ.ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮಾತುಕತೆಗೆ ಕರೆದಿಲ್ಲ. ವಿಧಾನಸಭೆಯಲ್ಲಿ ಚರ್ಚೆ ನಡೆದಿಲ್ಲ, ಹೀಗಾಗಿ ರಾಜ್ಯದ ವಕೀಲರು ಬೆಳಗಾಂವಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿ ಗಮನ ಸೆಳೆದಿದ್ದರು ಎಂದರು.ರಾಜ್ಯ…

Read More

ಕನಕದಾಸರ ಕಂಚಿನ ಪ್ರತಿಮೆಗೆ ವೈಯಕ್ತಿಕ ೫ಲಕ್ಷ ರೂ. ದೇಣಿಗೆ ವಾಗ್ದಾನ ನೀಡಿದ ಶಾಸಕ ಮನಗೂಳಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಭಕ್ತಿ ಮಾರ್ಗದಿಂದ ಭಗವಂತನನ್ನು ಕಾಣಲು ಸಾಧ್ಯ ಎಂದು ತೋರಿಸಿಕೊಟ್ಟ ಭಕ್ತ ಕನಕದಾಸರನ್ನು ನೆನೆಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದಲ್ಲಿ ನಡೆದ ಕನಕದಾಸ ಜಯಂತಿಯಲ್ಲಿ ಶಾಸಕ ಆಶೋಕ ಮನಗೂಳಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಭಕ್ತಿ ಮಾರ್ಗದಿಂದ ದೇವರನ್ನು ಒಲಿಸಿಕೊಂಡ ಕನಕದಾಸರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ಅವರ ಆದರ್ಶ, ತತ್ವ ಸಿದ್ದಾಂತ, ಸಂದೇಶಗಳನ್ನು ಬದುಕಿನದುದ್ದಕ್ಕೂ ಅಳಚಡಿಸಿಕೊಳ್ಳಬೇಕು. ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದ ದಾರ್ಶನಿಕ, ಮಹಾನ್ ಕವಿ ಮತ್ತು ಭಕ್ತಿಯ ಸಾಮ್ರಾಜ್ಯವನ್ನು ಕಟ್ಟಿದವರು ಕನಕದಾಸರು. ಸಂತರ, ಶರಣರ, ದಾರ್ಶನಿಕರ ತತ್ವ ಸಿದ್ದಾಂತಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸುವ ಕಾರ್ಯ ನಡೆಯಬೇಕು. ನಾಡಿನ ಹರಿದಾಸ ಪರಂಪರೆ ಬೆಳಗಿಸಲು ಕನಕದಾಸರು ಜಾತಿ-ಮತ, ಮೇಲು-ಕೀಳು ಭಾವನೆ ಬದಿಗೆ ಸರಿಸಿ ಭಕ್ತಿ ಪರಂಪರೆಯ ಮೂಲಕ ದಾಸ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ. ನೂತನವಾಗಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗಾಗಿ ಪಟ್ಟಣ ಹಾಗೂ ತಾಲ್ಲೂಕಿನ ಎಲ್ಲ ಕನ್ನಡಾಭಿಮಾನಿಗಳು ಹಾಗೂ ಸಾಹಿತ್ಯಾಸಕ್ತರು ಹಾಗೂ ಪರಿಷತ್ ಕೈಗೊಳ್ಳುವ ಎಲ್ಲ ಕ್ರಮಗಳಿಗೆ ತಾಲ್ಲೂಕು ಆಡಳಿತದ ಸಹಕಾರವಿದೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚಿಗೆ ಜರುಗಿದ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ೨ನೇ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಸಾಹಿತ್ಯ ಸಮ್ಮೇಳನದ ರೂಪುರೇಷೆಗಳನ್ನು ಪರಿಷತ್ತಿನ ವಿವಿಧ ಸಮಿತಿಗಳು ಸಿದ್ಧಪಡಿಸಲಿ ನಾವು ಅಗತ್ಯ ನೆರವು ನೀಡಲು ಸಿದ್ಧ ಎಂದರು.ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಸಮ್ಮೇಳನದ ಪೂರ್ವತಯಾರಿಗಾಗಿ ಇನ್ನೂ ಹಲವು ಸಭೆಗಳು ಜರುಗುತ್ತವೆ. ಸಾಹಿತ್ಯ ಸಮ್ಮೇಳನ ಯಾವುದೇ ಜಾತಿ, ಮತ, ವರ್ಗ, ಸಮುದಾಯಕ್ಕೆ ಸೀಮಿತವಾಗಿಲ್ಲ. ಇದು ಎಲ್ಲ ಕನ್ನಡ ಮನಸ್ಸುಗಳ ಜಾತ್ರೆ. ಆದ್ದರಿಂದ ಮುಂದಿನ ಎಲ್ಲ ಸಭೆಗಳಲ್ಲಿ ಪ್ರತಿಯೊಬ್ಬರು ಭಾಗವಹಿಸಿ ತಮ್ಮ ವಿಚಾರ, ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಬೇಕು ಎಂದರು.ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ…

Read More

ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮನುಷ್ಯರನ್ನು ಗೌರವಿಸುವಂತಹ ಬಹುದೊಡ್ಡ ಪ್ರೇರಕ ಶಕ್ತಿ ಕನಕದಾಸರು. ಇಡೀ ಜೀವನ ಮನುಕುಲಕ್ಕೆ ಆದರ್ಶಮಯ ವಿಚಾರಗಳನ್ನು, ಸಮಾಜಮುಖಿ ಚಿಂತನೆಗಳನ್ನು ತತ್ವಾದರ್ಶಗಳನ್ನ ನೀಡಿದ ಸಂತ ಶ್ರೇಷ್ಠ ಕನಕದಾಸರ ಆದರ್ಶ-ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಂತ, ಸತ್ಪುರುಷರು ಈ ಮನುಕುಲದ ಉದ್ದಾರಕರು ಹಾಗೂ ಸುಧಾರಕರು ಕತ್ತಲೆಯನ್ನು ಕಳೆದು ಅಂತರಂಗದ ತಿಳುವಿನ ಒಳಗಣ್ಣನ್ನು ತೆರೆಸಿದ ಶ್ರೇಷ್ಠ ಸತ್ಪುರುಷರು. ವಿವಿಧ ಸಂತರಿಗೆ ಗೌರವ ಸಲ್ಲಿಸುವ ಉದ್ದೇಶದೊಂದಿಗೆ ವಿವಿಧ ಸಂತರ ಜಯಂತಿ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಿದ್ದಿ ಸಮಾಜಮುಖಿ ಚಿಂತನೆಗಳನ್ನು ನೀಡಿದ ಕನಕದಾಸ, ಬುದ್ಧ,…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಸಿದ್ದೇಶ್ವರ ಶ್ರೀಗಳು ತಮ್ಮ ಆದ್ಯಾತ್ಮೀಕ ಪ್ರವಚನಗಳಿಂದ ಭಕ್ತರನ್ನು ಸನ್ಮಾರ್ಗಕ್ಕೆ ಕರೆದುಕೊಂಡು ಹೋಗಿ ಅವರ ಜೀವನವನ್ನು ಪಾವನಗೊಳಿಸುತ್ತಿದ್ದರು ಎಂದು ಬಸವನ ಬಾಗೇವಾಡಿಯ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಚಡಚಣದ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ಕಳೆದ ಹದಿನೈದು ದಿನಗಳಿಂದ ನಡೆಯುತ್ತಿರುವ ಅಮೃತಾನಂದ ಶ್ರೀಗಳು ಆದ್ಯಾತ್ಮಿಕ ಪ್ರವಚನದ ಮುಕ್ತಾಯ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿ ಅವರು ಮಾತನಾಡಿದರು.ಸಿದ್ದೇಶ್ವರ ಶ್ರೀಗಳು ನುಡಿದಂತೆ ನಡೆದ ಮಹಾನ ಸಂತರಾಗಿದ್ದರು. ಎಲ್ಲರನ್ನು ಪ್ರೀತಿಸುವ ಅವರ ಭಾವ ಅವರನ್ನು ನಡೆದಾಡುವ ದೇವರನ್ನಾಗಿಸಿದೆ. ಸಿದ್ದೇಶ್ವರ ಶ್ರೀಗಳು ಚಡಚಣದಲ್ಲಿ ಶಿಕ್ಷಣ ಕಲಿತಿರುವದು ಈ ಭಾಗದ ಭಕ್ತರ ಪುಣ್ಯವೆಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಸಿದ್ದೇಶ್ವರ ಶ್ರೀಗಳು ನಮ್ಮ ಭಾಗದ ಬಗ್ಗೆ ಪ್ರೀತಿ ಹೊಂದಿದ್ದರು ಎನ್ನುವದೆ ನಮಗೆ ಭಾಗ್ಯ ಎಂದು ಹೇಳಿದರು. ಪರಿಸರದ ಬಗ್ಗೆ ಕಾಳಜಿ, ಎಲ್ಲರನ್ನು ಪ್ರೀತಿಯಿಂದ ಕಾಣುವದು, ರೈತರ ಬಗ್ಗೆ ಗೌರವ ಹೊಂದುವದನ್ನು ಸಿದ್ದೇಶ್ವರ ಶ್ರೀಗಳು ತಮ್ಮ ಪ್ರವಚನಗಳಲ್ಲಿ ಹೇಳಿ ಸಮಾಜವನ್ನು ತಿದ್ದುವ ಕೆಲಸ ಮಾಡಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ೧೮ನೇ ಅಂತರ ಮಹಿಳಾ ಮಹಾವಿದ್ಯಾಲಯಗಳ ಅಥ್ಲೇಟಿಕ್ ೨೦೨೪-೨೦೨೫ ಕ್ರೀಡಾಕೂಟ ಇದೇ ನವೆಂಬರ್ ೨೦ ರಿಂದ ೨೨ ರವರೆಗೆ ಮೂರು ದಿನಗಳ ಕಾಲ ವಿವಿಯ ಕ್ರೀಡಾಂಗಣದಲ್ಲಿ ನಡೆಯಲಿದ್ದು ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ೪೦೦ಕ್ಕೂ ಹೆಚ್ಚು ಕ್ರೀಡಾಪಟುಗಳು ೧೯ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.ಇದೇ ಬುಧವಾರ ಆರಂಭವಾಗಲಿರುವ ೧೮ನೇ ಅಥ್ಲೇಟಿಕ್ ಕ್ರೀಡಾಕೂಟದ ಪೂರ್ವ ತಯಾರಿ ಭರದಿಂದ ಸಾಗಿದ್ದು, ಈ ಕ್ರೀಡಾಕೂಟದಲ್ಲಿ ವಿಜಯಪುರ, ಧಾರವಾಡ, ಬಾಗಲಕೋಟ, ಬೀದರ್, ಹೊಸಪೇಟೆ, ಕಲಬುರಗಿ, ಕೊಪ್ಪಳ, ಮಂಡ್ಯ ಹೀಗೆ ಬೇರೆ-ಬೇರೆ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ.ಕಳೆದ ವರ್ಷ ೧೭ನೇ ಅಥ್ಲೇಟಿಕ್ ಕ್ರೀಡಾಕೂಟವನ್ನು ಸಹ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದದ್ಯಾನಿಲಯದಲ್ಲಿಯೇ ಸಂಘಟಿಸಿದ್ದು, ಇದರಲ್ಲಿ ಕ್ರೀಡಾಪಟುಗಳು ೨ ಹೊಸ ದಾಖಲೆಗಳನ್ನು ಬರೆದಿದ್ದರು. ಈ ಬಾರಿಯು ಇನ್ನಷ್ಟು ದಾಖಲೆಗಳನ್ನು ಕ್ರೀಡಾಪಟುಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಎಂಸಿಎ ಕೋರ್ಸ್ಗೆ ಹಂಚಿಕೆಯಾಗಿ ಬಾಕಿ ಉಳಿದ ಸೀಟುಗಳಿಗಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ಎಂಸಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಈ (ನವೆಂಬರ್) ತಿಂಗಳ ೨೮ರ ವರೆಗೆ ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.kswu.ac.inಇಂದ ಪಡೆಯಬಹುದಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಕಾಲುವೆಗಳಿಗೆ ಹಿಂಗಾರು ಹಂಗಾಮಿಗೆ ಡಿ. ೯ ರಿಂದ ೨೦೨೫ ರ ಮಾ.೨೩ ರವರೆಗೆ ನೀರು ಹರಿಸಲಾಗುವುದು ಎಂದು ನೀರಾವರಿ ಸಲಹಾ ಸಮಿತಿಯ ಸಭೆಯ ಅಧ್ಯಕ್ಷ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.ಶನಿವಾರ ಆಲಮಟ್ಟಿಯ ಕೆಬಿಜೆಎಟಿಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಐಸಿಸಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.ಕಳೆದ ವರ್ಷ ಹಿಂಗಾರು ಹಂಗಾಮಿಗೆ ನೀರು ಹರಿಸಿರಲಿಲ್ಲ. ಆದರೆ ಈ ಬಾರಿ ನೀರಿನ ಲಭ್ಯತೆಯ ಕಾರಣ ರೈತರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಿಂಗಾರಿಗೆ ನೀರಬಂಧಿ ಪದ್ಧತಿಗೆ ಅನುಗುಣವಾಗಿ ನೀರು ಹರಿಸಲಾಗುತ್ತಿದೆ ಎಂದರು.ಆಲಮಟ್ಟಿ ಜಲಾಶಯದಲ್ಲಿ ೧೦೪ ಹಾಗೂ ನಾರಾಯಣಪುರದಲ್ಲಿ ೧೧ ಸೇರಿ ೧೧೫ ಟಿಎಂಸಿ ನೀರು ಜಿವಜಲವಿದೆ. ಇದರಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ೪೨.೨೫ ಟಿಎಂಸಿ ನೀರು ಹೆಚ್ಚಿಗೆ ಲಭ್ಯವಿದೆ.ಆಲಮಟ್ಟಿ ಜಲಾಶಯದ ಆಧೀನದ ಹಂತ-೧ ಹಂತ೨ ಕಾಲುವೆಗಳಿಗೆ ಹಾಗೂ ನಾರಾಯಣಪುರ ಎಡದಂಡೆ ಕಾಲುವೆಗೆ ನ.೨೦ ರವರೆಗೆ ನೀರು ಹರಿಸಲಾ ಗುತ್ತದೆ. ನ.೨೧ ರಿಂದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರದಲ್ಲಿ ಡಿಸೆಂಬರ್ 22 ರಂದು ಜರುಗಲಿರುವ ವೃಕ್ಷೋಥಾನ್ ಹೆರಿಟೇಜ್ ರನ್ ಗೆ ನೋಂದಣಿ ಮಾಡಲು ನವೆಂಬರ್ 30 ಕೊನೆಯ ದಿನವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಈ ಕೂಡಲೇ ಓಟದಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಕೋಟಿ ವೃಕ್ಷ ಅಭಿಯಾನ ಪ್ರತಿಷ್ಠಾನ ಸಂಚಾಲಕ ಡಾ. ಮುರುಗೇಶ ಪಟ್ಟಣಶೆಟ್ಟಿ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಸಸಿಗಳನ್ನು ನೆಟ್ಟು, ಮರಗಳನ್ನು ಬೆಳೆಸಲು ಪ್ರೋತ್ಸಾಹಿಸುವ ವಿಜಯಪುರ ಹಸಿರಿನ ಹಬ್ಬ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಕುರಿತ ಜನ ಜಾಗೃತಿ ಓಟದಲ್ಲಿ 18 ವಯಸ್ಸಿನ ಮೇಲ್ಪಟ್ಟ ಯುವಕರಿಂದ ವೃದ್ಧರಾಧಿಯಾಗಿ ಎಲ್ಲರೂ ನೋಂದಣಿ ಮಾಡಬಹುದಾಗಿದೆ. 5ಕಿ.ಮೀ, 10ಕಿ.ಮೀ, ಮತ್ತು 21ಕಿ.ಮೀ ಓಟದಲ್ಲಿ ಭಾಗವಹಿಸಲು ನೋಂದಣಿ ಮಾಡಬಹುದಾಗಿದೆ. ಈ ಓಟವನ್ನು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರಿಗೆ ಸಮರ್ಪಿಸಲಾಗಿದ್ದು, ಓಟದಲ್ಲಿ ಭಾಗವಹಿಸಿದ ಎಲ್ಲರಿಗೂ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಯುಳ್ಳ ಕಂಚಿನ ಪದಕ ನೀಡಲಾಗುವುದು. ಹಾಗೂ ಉತ್ತಮ ಗುಟಮಟ್ಟದ ಟಿ-ಶರ್ಟ್, ಓಟದ ಮಾರ್ಗದಲ್ಲಿ ಲಘು ಪಾನಿಯ ವ್ಯವಸ್ಥೆ ಮತ್ತು ಪೌಷ್ಟಿಕ ಉಪಹಾರದ ವ್ಯವಸ್ಥೆ ಇರುತ್ತದೆ. ಈ ಬಾರಿ 15 ಸಾವಿರ ಓಟಗಾರರು…

Read More