Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಡಚಣ: ಇಂಡಿ ತಾಲೂಕಿನ ಝಳಕಿ ಠಾಣಾ ವ್ಯಾಪ್ತಿಯಲ್ಲಿ ಬರುವ ಬಳ್ಳೊಳ್ಳಿ ಗ್ರಾಮದಲ್ಲಿ ರವಿವಾರ ತಡರಾತ್ರಿ ಯುವ ಕಳ್ಳರು 8 ಮನೆಗಳಿಗೆ ನುಗ್ಗಿ ಸರಣಿ ಗಳ್ಳತನ ನಡೆಸಿ, ಓಮಿನಿ ವ್ಯಾನ ವಾಹನದಲ್ಲಿ ಪರಾರಿಯಾದ್ದಾರೆ ಎಂದು ಝಳಕಿ ಠಾಣಾಧಿಕಾರಿ ಮಂಜುನಾಥ ತೀರಕನ್ನವರ ತಿಳಿಸಿದರು.ಬಳ್ಳೊಳ್ಳಿ ಗ್ರಾಮದ ಬಡ ಜನರು ಕಬ್ಬಿನ ಕಟಾವಕ್ಕೆ, ಇಟಿಂಗಿ ಭಟ್ಟಿಗಳಿಗೆ ದುಡಿಯಲು ಹೊಗಿದ್ದು ಅಂತಹ ಬಡವರ ಮನೆಗಳಿಗೆ ಸುಮಾರು ರಾತ್ರಿ 1:30 ರಿಂದ 2:30 ರ ಸಮಯದಲ್ಲಿ ಸುಮಾರು 8 ಮನೆಗಳ ಬೀಗ ಒಡೆದಿದ್ದಾರೆ, ಗ್ರಾಮದ ಸಿ. ಸಿ ಕ್ಯಾಮರಾ ಒಂದರಲ್ಲಿ ನಾಲ್ಕು ಜನ ಯುವಕರು, ಕೈಯಲ್ಲಿ ಮಾರಕಾಸ್ತ್ರಗಳೊಂದಿಗೆ ರಸ್ತೆಯಲ್ಲಿ ತಿರುಗಾಡುವ ದೃಶ್ಯ ಕಂಡುಬಂದಿದೆ, ಆದರೆ ಸರಿಯಾದ ಸಾಕ್ಷಿಗಳು ಮತ್ತು ಪುರಾವೇಗಳನ್ನು ಕಲೆ ಹಾಕಲು ಪೋಲಿಸರು ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಬಳ್ಳೊಳ್ಳಿ ಗ್ರಾಮದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಝಳಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ಕಾರ್ಯಾಚರಣೆ ನಡೆಸಲಾಗುತ್ತಿದೆ,ಮನೆಯಲ್ಲಿ ಇಲ್ಲದ ಸಮಯ ನೋಡಿ,ದುಡಿಯಲು ಹೊಗಿರುವವರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: 79ನೇ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಮಾಮ್ಸ ಸ್ಕೆಟ್ ಅಕಾಡೆಮಿ ವತಿಯಿಂದ ಆಲ್ ಇಂಡಿಯಾ ಸ್ಕೇಟಿಂಗ್ ತರಬೇತಿದಾರರ ಸಂಘಟನೆ ಆಯೋಜಿಸಿದ್ದ 79 ನಿಮಿಷಗಳ ನಿರಂತರ ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನಲ್ಲಿ ನಗರದ ಪ್ರತಿಷ್ಠಿತ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ ನಿರ್ಮಿಸಿದ್ದಾರೆ.ವಿಜಯಪುರದ ನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ 22 ನಾನಾ ನಗರಗಳಲ್ಲಿ 572 ವಿದ್ಯಾರ್ಥಿಗಳು ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದರು. ಅದರ ಫಲಿತಾಂಶ ಈಗ ಪ್ರಕಟವಾಗಿದೆ.ಈ ವಿದ್ಯಾರ್ಥಿಗಳಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ನ ಮೂರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ವಿಜಯಪುರದ ಒಟ್ಟು 14 ವಿದ್ಯಾರ್ಥಿಗಳು 79 ನಿಮಿಷಗಳ ಕಾಲ ತಡೆರಹಿತ ಸ್ಕೇಟಿಂಗ್ ಮಾಡಿ ಈ ದಾಖಲೆಯಲ್ಲಿ ಹೆಸರು ದಾಖಲಿಸಿದ್ದಾರೆ. ಏಳನೇ ತರಗತಿಯ ವಿದ್ಯಾರ್ಥಿನಿ ಅಲ್ವಿನಾ ಪಟೇಲ, ಆರನೇ ತರಗತಿಯ ವಿದ್ಯಾರ್ಥಿ ಜೈನ್ ಬಾಗವಾನ, ಎಂಟನೇ ತರಗತಿ ವಿದ್ಯಾರ್ಥಿನಿ ಹೀರಾ ಮೆಹತಾ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚಿನ ದಿನಗಳಲ್ಲಿ ಹುರುಕು ಅಂದರೆ ಕಜ್ಜಿ(ಸ್ಕೇಬೀಸ್) ರೋಗದ ಅವಾಂತರ ಹೆಚ್ಚಾಗಿದ್ದು, ರೋಗಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಕಾಲೇಜಿನ ಚರ್ಮ ರೋಗ ವಿಭಾಗದಲ್ಲಿ ಡಿಸೆಂಬರ್ 20 ರಿಂದ ಡಿಸೆಂಬರ್ 24ರ ವರೆಗೆ ಉಚಿತ ತಪಾಸಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಈ ಚರ್ಮರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಸಾರ್ಕೊಪ್ಟಸ್ ಸ್ಕೇಬೈ ಎಂಬ ಪರಾವಲಂಬಿ ಜೀವಜಂತುವಿನಿಂದ ಬರುವ ಸಾಂಕ್ರಾಮಿಕ ಕಾಯಿಲೆ ಇದಾಗಿದೆ. ರಾತ್ರಿ ವೇಳೆಯಲ್ಲಿ ವಿಪರೀತ ತುರಿಕೆ ಉಂಟಾಗುತ್ತದೆ. ದೇಹದ ಎಲ್ಲ ಸಂದುಗಳಲ್ಲಿ ಈ ಕಾಯಿಲೆ ಕಂಡು ಬರುತ್ತದೆ. ಒಬ್ಬರಿಂದ ಒಬ್ಬರಿಗೆ ಬಹುಬೇಗ ಈ ರೋಗ ಹರಡುತ್ತಿದೆ. ಆಸ್ಪತ್ರೆಯ ಚರ್ಮರೋಗ ವಿಭಾಗದಲ್ಲಿ ಪ್ರತಿದಿನ ಈ ರೋಗದಿಂದ ಬಳಲುತ್ತಿರುವ ವಿದ್ಯಾರ್ಥಿಗಳು ಚಿಕಿತ್ಸೆಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಸಂದೇಶ ಬಂದಿದ್ದು, ಪೊಲೀಸರು ತೀವ್ರ ತಪಾಸಣೆ, ಪರಿಶೀಲನೆ ನಡೆಸಿದರು.ಮಂಗಳವಾರ ಬೆಳಗ್ಗೆ 6:58ರ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿಗೆ ಇ-ಮೇಲ್ ಮೂಲಕ ಸಂದೇಶ ಸ್ವೀಕೃತವಾಗಿದ್ದು, ಅದರಲ್ಲಿ ಕಾರ್ಯಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಒಡ್ಡಿಯಲಾಗಿದೆ.ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಗಳು, ಸಿಬ್ಬಂದಿ ತಕ್ಷಣವೇ ಶ್ವಾನ ದಳದೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿದರು.ನಗರ ವಲಯದ ಡಿವೈಎಸ್ಪಿ, ಡಿಎಆರ್ ಡಿವೈಎಸ್ಪಿ, ಸಿಪಿಐ ಹಾಗೂ ಗೋಲಗುಂಬಜ್ ಠಾಣೆಯ ಪಿಎಸ್ಐ ಸೇರಿ ಹಿರಿಯ ಅಧಿಕಾರಿಗಳು ಸಹ ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿದರು.ಆದ್ದರಿಂದ ಸಿಬ್ಬಂದಿ ಹಾಗೂ ಸಾರ್ವಜನಿಕರು ಯಾವುದೇ ರೀತಿಯ ಭಯ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಲೇಖನ- ಡಾ ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಅವರು ಕನ್ನಡ ನಾಡಿನ ಶೈಕ್ಷಣಿಕ ಮತ್ತು ಸಾಹಿತ್ಯಕ ಪ್ರಪಂಚದಲ್ಲಿ ಪ್ರಸಿದ್ಧ ಹೆಸರಾಗಿದ್ದಾರೆ. ಆಡಳಿತ ಶಿಕ್ಷಣ ಅಧ್ಯಾತ್ಮ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ನಾಮಾಂಕಿತರೆನಿಸಿದ ಪ್ರೊ ಎಸ್ ಎಸ್ ಮಾಳವಾಡ ಅವರು ದೇಶ ಕಂಡ ಶ್ರೇಷ್ಠ ಆಡಳಿತಗಾರರು ಮತ್ತು ಅಧ್ಯಾತ್ಮಜೀವಿಗಳು.ಪ್ರೊ.ಮಾಳವಾಡ ಅವರ ಪತ್ನಿ ಶಾಂತಾದೇವಿ ಮಾಳವಾಡ ಅವರು ಸಹಾ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿದವರಾಗಿದ್ದು ಈ ದಂಪತಿಗಳು ತಮ್ಮ ಮಹತ್ವದ ಕೊಡುಗೆಗಳಿಗಾಗಿ ಕನ್ನಡ ನಾಡಿನ ಪ್ರಾತಃಸ್ಮರಣೀಯರೆನಿಸಿದ್ದಾರೆ.ಪ್ರಾಧ್ಯಾಪನ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಮಹಾನ್ ಹೆಸರಾದ ಸ. ಸ ಮಾಳವಾಡರು ಧಾರವಾಡ ಜಿಲ್ಲೆಯ ಮೆಣಸಗಿಯಲ್ಲಿ ನವೆಂಬರ್ 14, 1910ರ ವರ್ಷದಲ್ಲಿ ಜನಿಸಿದರು. ತಂದೆ ಸಂಗನ ಬಸಪ್ಪನವರು ಮತ್ತು ತಾಯಿ ಕಾಳಮ್ಮನವರು.ಮಾಳವಾಡರ ಪ್ರಾರಂಭಿಕ ಶಿಕ್ಷಣವು ಗೋವನ ಕೊಪ್ಪ, ಗುಳೇದಗುಡ್ಡ, ಬಾಗಲಕೋಟೆ, ವಿಜಾಪುರಗಳಲ್ಲಿ ನೆರವೇರಿತು. ಉನ್ನತ ವ್ಯಾಸಂಗವನ್ನು ಧಾರವಾಡದಲ್ಲಿ ನಡೆಸಿದ ಅವರು ಎಂ. ಎ ಪದವೀಧರರಾದ ಮೇಲೆ ಕೆಲಕಾಲ ಮಾಧ್ಯಮಿಕ ಕಾಲೇಜು ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಂತರದಲ್ಲಿ ಧಾರವಾಡದ ಕರ್ನಾಟಕ…
ಲೇಖನ- ಜಯಶ್ರೀ ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನಗೇನೂ ದೊರೆಯುತ್ತಿಲ್ಲ ಇತರರಿಗೆ ಸಲೀಸಾಗಿ ಅವರು ಬಯಸಿದ್ದು ಸಿಗುತ್ತಿದೆ. ಎಂದು ಹೆಚ್ಚಿನ ಸಂದರ್ಭಗಳಲ್ಲಿ ನಮಗೆ ಅನ್ನಿಸುವುದು. ಬಯಸಿದ್ದನ್ನು ಪಡೆಯಬೇಕಾದರೆ ಮಾಡಬೇಕಾಗಿರುವುದು ಏನು? ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಹೊರಟರೆ ಅಳವಡಿಸಿಕೊಳ್ಳಲೇಬೇಕಾದ ಕೆಲ ಗುಣಗಳ ಪಾತ್ರ ಎದ್ದು ಕಾಣುತ್ತದೆ. ಅದರಲ್ಲಿ ಅತಿ ಮುಖ್ಯವಾದುದು ಸ್ವಯಂ ಶಿಸ್ತು. ಅಯ್ಯೋ! ಪ್ರತಿಯೊಂದರಲ್ಲೂ ಶಿಸ್ತು ಪಾಲಿಸಬೇಕು ಎನ್ನುವ ಹಿರಿಯರ ಮಾತು ಕೇಳಿ ಕೇಳಿ ಸುಸ್ತಾಗಿದ್ದೇವೆ ಎನ್ನುತ್ತಿರೇನು? ಶಿಸ್ತು ಪಾಲಿಸದಿದ್ದರೆ ಸಣ್ಣ ಪುಟ್ಟದನ್ನು ಪಡೆಯಲು ಸಾಧ್ಯವಿಲ್ಲ. ಮೌರಿನ್ ಡೌಡ್ ಹೇಳಿದ ಪ್ರಕಾರ” ನಿಮಗೆ ಅರ್ಹತೆ ಇರುವುದಕ್ಕಿಂತ ಕಡಿಮೆ ಲೆಕ್ಕಾಚಾರಕ್ಕೆ ನೀವು ಒಪ್ಪಿಕೊಂಡ ತಕ್ಷಣ ನೀವು ಕೇಳಿದ್ದಕ್ಕಿಂತಲೂ ಕಡಿಮೆ ದೊರೆಯುತ್ತದೆ.” ನಾವು ಎಷ್ಟರ ಮಟ್ಟಿಗೆ ಅರ್ಹರು ಎನ್ನುವುದನ್ನು ತಿಳಿದುಕೊಳ್ಳುವುದು ಪ್ರಮುಖವಾಗಿದೆ. ಸ್ವಯಂ ಶಿಸ್ತು ಎಂದರೆ..?ಶಿಸ್ತು ಎಂದರೆ ನಮಗೆ ನಾವು ಕಠಿಣತಮವಾಗಿ ನಡೆದುಕೊಳ್ಳುವುದಲ್ಲ. ಅದೊಂದು ಕ್ರಮಬದ್ಧ ನಡುವಳಿಕೆ. ‘ಸ್ವಯಂ ನಿಯಂತ್ರಣವೇ ಸ್ವಯಂ ಶಿಸ್ತು.’ನಮ್ಮ ದೌರ್ಬಲ್ಯಗಳನ್ನು ಜಯಿಸುವುದೇ ಸ್ವಯಂ ಶಿಸ್ತು.’ ಸ್ವಯಂ ಶಿಸ್ತಿಲ್ಲದ…
ಸ್ಪೀಕರ್ಗೆ ಯು.ಟಿ. ಖಾದರ್ ರಿಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಪತ್ರ | ಬೆಳಗಾವಿ: ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸುವಂತೆ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೋಮವಾರ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಕೋರಿದ್ದಾರೆ.ಸ್ಪೀಕರ್ ಅವರಿಗೆ ಬರೆದ ಪತ್ರದಲ್ಲಿ, ರಾಜ್ಯಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಚರ್ಚಿಸಿ ಅವುಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.ಡಿಸೆಂಬರ್ 8 ರಂದು ಬೆಳಗಾವಿಯಲ್ಲಿ ಪ್ರಾರಂಭವಾದ ಅಧಿವೇಶನ ಈ ತಿಂಗಳ 19 ರವರೆಗೆ ನಡೆಯಲಿದೆ. “ಡಿಸೆಂಬರ್ 8 ರಿಂದ 19 ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನವನ್ನು ನಡೆಸಲು ನಿರ್ಧರಿಸಲಾಗಿತ್ತು ಆದರೆ ಕೆಲವು ಕಾರಣಗಳಿಂದಾಗಿ, ಅಧಿವೇಶನವನ್ನು 2 ದಿನಗಳವರೆಗೆ ಕಡಿಮೆ ಮಾಡಲಾಗಿದೆ” ಎಂದು ಅಶೋಕ್ ಹೇಳಿದರು.ಹಾಲಿ ಶಾಸಕರಾದ ಎಚ್.ವೈ. ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಡಿಸೆಂಬರ್ 8 ಮತ್ತು 15 ರಂದು ಸದನವನ್ನು ಮುಂದೂಡಲಾಗಿದೆ.ರಾಜ್ಯಕ್ಕೆ ಸಂಬಂಧಿಸಿದಂತೆ ಅನೇಕ ಜ್ವಲಂತ ಸಮಸ್ಯೆಗಳಿವೆ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಬೆಂಗಳೂರು ಹಾಗೂ ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ, (ಟೆಕ್ಸಾಕ್) ಬೆಂಗಳೂರ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು (ರ್ಯಾಂಪ್) ಯೋಜನೆಯಡಿಯಲ್ಲಿ ಟ್ರೆಡ್ಸ್ ಯೋಜನೆಯ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ಇತ್ತಿಚಿಗೆ ನಗರದ ಹೋಟೆಲ್ ಮಧುವನ ಇಂಟರ್ ನ್ಯಾಷನಲ್, ನಡೆಯಿತು.ಜಿಲ್ಲಾ ಅಗ್ರಣೀಯ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾದ, ಸಿದ್ದಯ್ಯ ಬಿ. ಇವರು ಮಾತನಾಡಿ, ಎಂ.ಎಸ್.ಎಂ.ಇ. ಗಳಿಗೆ ಬ್ಯಾಂಕಿನಿಂದ ದೊರೆಯುವ ಯೋಜನೆಗಳ ಮತ್ತು ಬ್ಯಾಂಕ ಮೂಲಕ ಸಾಲ ಪಡೆಯುವಲ್ಲಿ ಸಮಸ್ಯೆಗಳು ಎದುರಾದಲ್ಲಿ ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು.ವಿಜಯಪುರದ ಎಸ್.ಎಂ.ಇ. ಶಾಖೆಯ ಭಾರತೀಯ ಸ್ಟೇಟ್ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾದ ಶ್ರೀಶೈಲಯ್ಯ ಹೆಚ್. ಗಲಗಲಿ ಇವರು ಮಾತನಾಡಿ, ಟ್ರೆಡ್ಸ್ ಯೋಜನೆಯಲ್ಲಿ ಎಂ.ಎಸ್.ಎಂ.ಇ ಯವರಿಗೆ ಬರಬೇಕಾದ ಪಾವತಿಗಳನ್ನು ಹಣಕಾಸು ಸಂಸ್ಥೆಗಳ ಮೂಲಕ ತ್ವರಿತವಾಗಿ ನಗದು ಪಡೆಯಲು ಅನುಕೂಲವಾಗುವ ಒಂದು ಡಿಜಿಟಲ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಜನ್ಮ ದಿನದ ಅಂಗವಾಗಿ ಶನಿವಾರ ನಗರದ ಆರಾಧ್ಯದೈವ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ಎಂಜನಿಯರಿಂಗ್ ವ್ಯಾಸಂಗ ಮಾಡುತ್ತಿರುವ ತಂದೆ ಇಲ್ಲದ ಬಡ ಯುವಕ ಗಿರೀಶ್ ಗೌಡರ ಎಂಬಾತನ ಕಾಲೇಜು ಬ್ಯಾಂಕ್ ಖಾತೆಗೆ ಮಹಾನಗರ ಪಾಲಿಕೆ ವಾರ್ಡ್ ನಂ.22 ಸದಸ್ಯರಾದ ಪ್ರೇಮಾನಂದ ಬಿರಾದಾರ ಅವರು ವೈಯಕ್ತಿಕವಾಗಿ ರೂ.50 ಸಾವಿರ ಸಂದಾಯ ಮಾಡುವ ಮೂಲಕ ಆರ್ಥಿಕ ಸಹಾಯ ಮಾಡಿ ಬಡ ವಿದ್ಯಾರ್ಥಿ ವ್ಯಾಸಂಗಕ್ಕೆ ನೆರವಾಗಿದ್ದಾರೆ.ಸಿದ್ದೇಶ್ವರ ದೇವಸ್ಥಾನದ ಪೂಜೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ಶ್ರೀ ಎಂ.ಎಸ್.ಕರಡಿ, ಮುಖಂಡರಾದ ಚಂದ್ರು ಚೌದರಿ, ಬಸವರಾಜ ಬಿರಾದಾರ, ಶ್ರೀಶೈಲ ಕಣಮುಚನಾಳ, ಪ್ರಶಾಂತಗೌಡ ಬಿರಾದಾರ, ರಾಜಕುಮಾರ ಬಿರಾದಾರ ಮತ್ತಿತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ತಾವು ಕಲಿತ ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭಾನುವಾರ ₹ 50 ಸಾವಿರ ದೇಣಿಗೆ ಚಿಕ್ ನೀಡಿದ್ದಾರೆ.ಶಾಲೆಯ ಮುಖ್ಯಗುರುಗಳು ಹಾಗೂ ಎಸ್ಡಿಎಂಸಿ ಜಂಟಿ ಖಾತೆಗೆ ಸ್ಥಿರ ಠೇವಣಿಯಾಗಿ (ಎಪ್ ಡಿ) ಇಡಲು ಮುಖ್ಯಗುರುಗಳು ಹಾಗೂ ಶಾಲಾ ಎಸ್ಡಿಎಂಸಿ ಅಧ್ಯಕ್ಷರಿಗೆ ಚೆಕ್ ನೀಡಿದರು.ಶಾಲೆಯ ಜಂಟಿ ಖಾತೆಯಲ್ಲಿ ಇಟ್ಟ ಸ್ಥಿರ ಠೇವಣಿಯಿಂದ ಪ್ರತಿ ವರ್ಷ ಬರುವ ಬಡ್ಡಿ ಹಣವನ್ನು ಶಾಲೆಯ ಪ್ರತಿ ವರ್ಷದ ವಾರ್ಷಿಕ ಪರೀಕ್ಷೇಯಲ್ಲಿ ಏಳನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಧನ ಸಹಾಯ ಮಾಡಲು ಈ ಠೇವಣಿ ಹಣ ನೀಡಿದ್ದಾರೆ.ಈ ಸಂದರ್ಭದಲ್ಲಿ ಮುಖ್ಯಗುರುಮಾತೆ ಜಿ.ಎ.ಹಿರೇಮಠ, ಎಸ್ಡಿಎಂಸಿ ಅಧ್ಯಕ್ಷ ಶಿವಾನಂದ ಮೆಳ್ಳಿಗೇರಿ, ಬಾಬು ಛಲವಾದಿ, ಎಚ್. ಎಚ್. ಇಂಗಳಗಿ, ಸಿಆರ್ಪಿ ಶಿವು ಕಾಂಬಳೆ ಹಾಜರಿದ್ದರು.ಶಾಲೆಯ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ನೀಡಿದ ಪ್ರೋತ್ಸಾಹಕ್ಕೆ ವಿಜಯಪುರ ಗ್ರಾಮೀಣವಲಯದ…
