Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಪಿ.ಕೆ ನಗರದ ಅಂಗನವಾಡಿ ನಂ-೧ ರ ಕಾರ್ಯಕರ್ತೆ ಶಾಂತಾ ಮಾಮನಿ ತಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಇಲ್ಲಿನ ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಮ್ಮ ಬೆಂಬಲಿಗರೊಂದಿಗೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಮೂರು ದಿನಗಳನ್ನು ಪೂರೈಸಿ ನಾಲ್ಕನೇ ದಿನಕ್ಕೆ ಕಾಲಿರಿಸಿದೆ.ಧರಣಿ ಸ್ಥಳದಲ್ಲಿ ಹೋರಾಟಗಾರ್ತಿ ಮಾಮನಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಇಲಾಖೆಯಿಂದಲೇ ಅನ್ಯಾಯವಾಗಿದ್ದು ಹೋರಾಟ ನಡೆದು ಮೂರು ದಿನಗಳು ಕಳೆದರೂ ಸೌಜನ್ಯಕ್ಕೂ ಯಾರೊಬ್ಬ ಅಧಿಕಾರಿಯೂ ಬಂದು ಭೇಟಿ ನೀಡಿಲ್ಲ. ನನಗೆ ಸೂಕ್ತ ನ್ಯಾಯ ಸಿಗುವವರೆಗೂ ನಾನು ಧರಣಿ ಕೈಬಿಡೊಲ್ಲ ಎಂದು ಕಣ್ಣೀರಿಡುತ್ತ ಹೇಳಿದರು.ಈ ವೇಳೆ ರಾಜಶ್ರೀ ಮಮದಾಪೂರ, ವಿದ್ಯಾ ಮುರಾಳ, ಎಸ್.ಎ.ಹುನಶ್ಯಾಳ, ಸಾಹೆಬ್ಬೀ ಕೆಸರಟ್ಟಿ, ನಿಂಬಕ್ಕ ಕಾಳಾಪೂರ, ಶ್ವೇತಾ ಚಟ್ಟರಕಿ, ಜುಲೇಖಾ ದಾಂಡಿಯಾ, ಗಂಗಮ್ಮ ಬಿರಾದಾರ, ನಿಂಗಮ್ಮ ವಡಗೇರಿ, ಎಸ್.ಎಚ್.ಇನಾಮದಾರ ಸೇರಿದಂತೆ ಮತ್ತೀತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಇದೇ ದಿ. ೧೬ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಪ್ರಯುಕ್ತ ‘ಬದಲಾಗುತ್ತಿರುವ ಪತ್ರಿಕೋದ್ಯಮದ ಸ್ವರೂಪ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ನಗರದ ಸಿಕ್ಯಾಬ್ ಎ.ಆರ್.ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಚ್.ಕೆ.ಯಡಹಳ್ಳಿ ಕಾರ್ಯಕ್ರಮ ಉದ್ಘಾಟಿಸಿ ‘ಬದಲಾಗುತ್ತಿರುವ ಪತ್ರಿಕೋದ್ಯಮದ ಸ್ವರೂಪ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತ ರುದ್ರಪ್ಪ ಆಸಂಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಓಂಕಾರ ಕಾಕಡೆ ವಹಿಸಲಿದ್ದು, ಸಮಾರಂಭದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಡಾ.ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ 11 ಸರ್ಕಾರಿ ಶಾಲೆಗಳಿಗೆ ಪೀಠೋಪಕರಣಗಳು ಹಾಗೂ ಕಲಿಕಾ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿರುವ ಮುಂಬೈನ ತಪತಿದಾಸ್ ಮತ್ತು ತುಳಸಿದಾಸ್ ವಜ್ರದಾಸ್ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಗಳಾದ ಸಂದೀಪ ಮರ್ಚಂಟ್ಸ್ ದಂಪತಿಗಳನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಬುಧವಾರ ಸನ್ಮಾನಿಸಿ, ಅಭಿನಂದನಾ ಪತ್ರ ನೀಡಿದರು.ವಿಜಯಪುರ ನಗರಾದ್ಯಂತ ಸಂಚರಿಸಿದ ಮರ್ಚಂಟ್ಸ್ ದಂಪತಿಗಳು, ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರು ಅಭಿವೃದ್ಧಿಪಡಿಸಿರುವ ರಸ್ತೆಗಳು, ಉದ್ಯಾನವನಗಳು, ಓಪನ್ ಜಿಮ್, ಸುಂದರ ಬೀದಿ ದೀಪಗಳು, ಪುತ್ಥಳಿಗಳ ಸ್ಥಾಪನೆ ಸೇರಿದಂತೆ ಮತ್ತಿತರೆ ಅಭಿವೃದ್ಧಿ ಕಾರ್ಯಗಳ ಕುರಿತು ಹಾಗೂ ಶಾಸಕರ ಅಧ್ಯಕ್ಷತೆಯ ಸಿದ್ದೇಶ್ವರ ಸಂಸ್ಥೆಯ ರಾಮನಗೌಡ ಬಾ.ಪಾಟೀಲ ಯತ್ನಾಳ ಗೋ ರಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿ ಮಾಡಿರುವ ಅತ್ಯುತ್ತಮ ವ್ಯವಸ್ಥೆ ಬಗ್ಗೆ ಶ್ಲಾಘನೀಯ ವ್ಯಕ್ತಪಡಿಸಿದರು.ಟ್ರಸ್ಟ್ನ ವಿಜಯಪುರ ಸಂಯೋಜಕ ವಿಶ್ವನಾಥ ಸಿಂದಗಿ, ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ರಾಜಶೇಖರ ಕುರಿಯವರ, ಯುವ ಮುಖಂಡ ಯೋಗೀಶ ನಡುವಿನಕೇರಿ ಸೇರಿದಂತೆ ಮತ್ತಿತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಬಾರ್ಕಲೇಸ್ ಇವರ ಸಹಯೋಗದಲ್ಲಿ ದಿನಾಂಕ ೨೦-೧೧-೨೦೨೪ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ನಗರದ ಲಿಂಗದ ಗುಡಿ ರಸ್ತೆಯಲ್ಲಿರುವ ಖೇಡ ಕಾಲೇಜು ಆವರಣದಲ್ಲಿ ಸ್ಥಳೀಯ ಖಾಸಗಿ ಹಾಗೂ ರಾಜ್ಯದ ಪ್ರತಿಷ್ಠಿತ ಎಂ.ಎನ್.ಸಿ. ಕಂಪನಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ‘ಉದ್ಯೋಗ ಮೇಳ’ ಆಯೋಜಿಸಲಾಗಿದೆ.ಈ ಮೇಳದಲ್ಲಿ ವಿಶೇಷಚೇತನರು ವiತ್ತು ಸಾಮಾನ್ಯ ಅಭ್ಯರ್ಥಿಗಳು ಭಾಗವಹಿಸಬಬಹುದಾಗಿದೆ. ಈ ಉದ್ಯೋಗ ಮೇಳದಲ್ಲಿ ವಿಶೇಷ ಚೇತನರಿಗೆ ಪ್ರತ್ಯೇಕ ಸಂದರ್ಶನ ವ್ಯವಸ್ಥೆ ಮಾಡಲಾಗಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ. ಡಿಪ್ಲೋಮಾ, ಹಾಗೂ ಯಾವುದೇ ಪದವಿ ಪಾಸಾದಂತಹ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಶಾಲಾ ದಾಖಲಾತಿಗಳು, ಆಧಾರ ಕಾರ್ಡ, ಬಾಯೋಡೆಟಾಗಳ ೫ ಸೆಟ್ ಝರಾಕ್ಸನೊಂದಿಗೆ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. ೯೧೪೮೧೫೭೮೮೮ / ೯೯೪೫೦೦೦೭೯೩ ಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೈಸೂರಿನಲ್ಲಿ ಇತ್ತೀಚೆಗೆ ನಡೆದ ೧೫ನೇ ರಾಜ್ಯ ಮಟ್ಟದ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಜಿಲ್ಲೆಯ ಕ್ರೀಡಾ ಶಾಲೆ-ನಿಲಯದ ಕ್ರೀಡಾಪಟುಗಳು ೦೨ ಬಂಗಾರ, ೦೩ ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಪಡೆದು ಸಾಧನೆಗೈದಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ತಿಳಿಸಿದ್ದಾರೆ.೧೪ ವರ್ಷ ವಯೋಮಿತಿಯ ೧೦ ಕಿ.ಮೀ. ವೈಯಕ್ತಿಕ ಟೈಮ್ ಟ್ರಾಯಲ್ಸ್ನಲ್ಲಿ ಕರಿಷ್ಮಾ ತಟಗಾರ ಬೆಳ್ಳಿ ಪದಕ, ೧೬ ವರ್ಷ ವಯೋಮಿತಿಯ ೧೫ ಕಿ.ಮೀ. ವೈಯಕ್ತಿಕ ಟೈಮ್ ಟ್ರಾಯಲ್ಸ್ನಲ್ಲಿ ಜ್ಯೋತಿ ರಾಠೋಡ ಬಂಗಾರ ಪದಕ, ಕೊಕಿಲಾ ಬೆಳ್ಳಿ ಪದಕ ಹಾಗೂ ದೀಪಿಕಾ ಫಡತರೆ ಕಂಚಿನ ಪದಕ, ೧೮ ವರ್ಷ ವಯೋಮಿತಿಯ ೨೦ ಕಿ.ಮೀ. ವೈಯಕ್ತಿಕ ಟೈಮ್ ಟ್ರಾಯಲ್ಸ್ನಲ್ಲಿ ಶ್ರೀಶೈಲ ವೀರಾಪುರ ಬಂಗಾರ ಹಾಗೂ ಶ್ರೀನಿವಾಸ ರಜಪೂತ ಬೆಳ್ಳಿ ಪದಕ ಪಡೆದಿದ್ದಾರೆ.ಮುಂಬರುವ ೨೦೨೪ರ ಡಿಸೆಂಬರ್ ೪ ರಿಂದ ೭ರಂದು ಓರಿಸ್ಸಾ ರಾಜ್ಯದ ಪುರಿಯಲ್ಲಿ ನಡೆಯುವ ೨೯ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಸ್ಪರ್ಧೆಗೆ ರಾಜ್ಯ ತಂಡದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿ ಮತ್ತು ಡೆಲ್ ಟೆಕ್ನಾಲಜಿ ಮತ್ತು ಶಿಕ್ಷಣ ಪೌಂಡೇಶನ್ ಇವರ ಸಹಯೋಗದಲ್ಲಿ ನ.೧೩ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅರಿವು ಕೇಂದ್ರಗಳ ಗ್ರಂಥಾಲಯ ಮೇಲ್ವಿಚಾರಕರಿಗೆ “ನಾಯಕತ್ವ ಹಾಗೂ ಕೌಶಲ್ಯಾಭಿವೃದ್ಧಿ” ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಬಿ. ಎಸ್. ರಾಠೋಡ ಅವರು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಬಡ ಮಕ್ಕಳ ಇಚ್ಛಾ ಶಕ್ತಿಗೆ ಅನುಗುಣವಾಗಿ ಗ್ರಾಮೀಣ ಮಕ್ಕಳ ಶಿಕ್ಷಣದ ಗುಣಮಟ್ಟ ಉತ್ತಮಗೊಳಿಸುವ ನಿಟ್ಟಿನಲ್ಲಿ ಪಠ್ಯದಲ್ಲಿರುವ ವಿಷಯಗಳನ್ನು ಮಾತ್ರ ತಿಳಿಯದೆ ಸ್ಪರ್ಧಾತ್ಮಕ ಜ್ಞಾನದ ಬಗ್ಗೆಯೂ ಕೂಡ ಗಮನ ಹರಿಸುವಂತೆ ಅವರನ್ನು ಜಾಗೃತಗೊಳಿಸಬೇಕು. ಇದಕ್ಕೆ ಪೂರಕವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಐ.ಎ.ಎಸ್, ಐ.ಪಿ.ಎಸ್, ಇಂಜಿನಿಯರಿಂಗ್ ಹೀಗೆ ಅನೇಕ ಪರೀಕ್ಷೆಗಳಿಗೆ ಓದಲು ಸಹಾಯಕವಾಗುವಂತೆ ಗ್ರಾಮ ಪಂಚಾಯತಿ ವತಿಯಿಂದ ವಿವಿಧ ಪುಸ್ತಕಗಳನ್ನು ಗ್ರಂಥಾಲಯದಲ್ಲಿ ಇರಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಗ್ರಂಥಾಲಯಗಳಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಡಿಜಿಟಲ್ ಪರಿಕರಗಳಾದ ಟಿವ್ಹಿ, ಮೊಬೈಲ್ ಗಳನ್ನು ಪೂರೈಸಲಾಗಿದೆ. ಈ ಕುರಿತು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ಉಪ ಚುನಾವಣೆ ನಡೆಯಲಿದ್ದು, ಕಾನೂನು ಸುವ್ಯಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮತದಾನ ನಡೆಯುವ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಸುತ್ತಮುತ್ತಲಿನ ೧೦೦ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯತಿಯ ಅರಳದಿನ್ನಿ ಹಾಗೂ ಚಿಮ್ಮಲಗಿ ಗ್ರಾಮ ಪಂಚಾಯತಿಯ ಚಿಮ್ಮಲಗಿ,ಇಂಡಿ ತಾಲೂಕಿನ ಸಾಲೋಟಗಿ ಹಾಗೂ ಖೇಡಗಿ ಗ್ರಾಮ ಪಂಚಾಯತ್, ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮ ಪಂಚಾಯಿತಿಯ ನಾಗರಾಳ ಹುಲಿ, ಮುತ್ತಗಿ ಹಾಗೂ ಬ್ಯಾಕೋಡ ಗ್ರಾಮ ಪಂಚಾಯತಿಯ ಜಯವಾಡಗಿ ಹಾಗೂ ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ ಗ್ರಾಮ ಪಂಚಾಯತಿಯ ಕಾತ್ರಾಳ, ವಿಜಯಪುರ ತಾಲೂಕಿನ ಕನ್ನೂರ, ನಾಗಠಾಣ, ಜುಮನಾಳ ಹಾಗೂ ಹೊನಗನಹಳ್ಳಿ ಗ್ರಾಮ ಪಂಚಾಯತಿಗೆ, ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯತಿಗೆ, ತಾಳಿಕೋಟೆ ತಾಲೂಕಿನ ಹಿರೂರ ಗ್ರಾಮ ಪಂಚಾಯತಿಯ ತಮದಡ್ಡಿ, ಚಡಚಣ ತಾಲೂಕಿನ ಲೋಣಿ ಬಿ.ಕೆ ಮತ್ತು ಚಡಚಣ ತಾಲೂಕಿನ ಹತ್ತಳ್ಳಿ ಕ್ಷೇತ್ರಕ್ಕೆ,…

Read More

ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರ ಆಡಳಿತಾತ್ಮಕ ಅಹವಾಲು ಸ್ವೀಕಾರ ಸಭೆಗೆ ಚಾಲನೆ ನೀಡಿದ ಎಂಎಲ್ಸಿ ಸುನೀಲಗೌಡ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಸ್ಯೆಗಳನ್ನು ಆಲಿಸಿ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪರಿಹಾರ ಒದಗಿಸಲು ನಿಮ್ಮ ಧ್ವನಿಯಾಗಿ ಸರಕಾರದ ಗಮನ ಸೆಳೆಯುವುದಾಗಿ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಬುಧವಾರ ನಗರದಲ್ಲಿ ನಡೆದ ವಿಜಯಪುರ ತಾಲೂಕಿನಲ್ಲಿ ಬರುವ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಆಡಳಿತಾತ್ಮಕ ಅಹವಾಲು ಸ್ವೀಕಾರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಗೌರವಧನ ಕಡಿಮೆಯಿದ್ದು, ಈ ಸಮಸ್ಯೆಯ ಕುರಿತು ಹೋರಾಟ ನಡೆಸಿದ ಪರಿಣಾಮ ಗೌರವಧನವನ್ನು ಸ್ವಲ್ಪ ಹೆಚ್ಚಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರಿಗೆ ಪಿಂಚಣಿ, ಉಚಿತ ಬಸ್ ಪಾಸ್ ಮತ್ತು ಟೋಲ್ ಗಳಲ್ಲಿ ಶುಲ್ಕದಿಂದ ವಿನಾಯಿತಿ ನೀಡಲು ಕೂಡ ಸರಕಾರದ ಗಮನ ಸೆಳೆಯುತ್ತೇನೆ. ಜಲಜೀವನ ಮಿಷನ್ ಯೋಜನೆಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಧೂಳಖೇಡ ಗ್ರಾಮದ ಶ್ರೀ ಗುರು ಚಂದ್ರಶೇಖರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ಕವನ ಪದ್ಯವಾಚನ ಸ್ಪರ್ಧೆಯಲ್ಲಿ ಓಂ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವಿಠೋಬಾ ಕರಂಡೆ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ ಧಾರ್ಮಿಕ ಪಠನದಲ್ಲಿ ಆಸಾದುಲ್ಲಾ ಖಾಟಿಕ ದ್ವಿತೀಯ ಸ್ಥಾನ ಪಡೆದಿದ್ದಾನೆ ಎಂದು ಮುಖ್ಯ ಶಿಕ್ಷಕ ಸುರೇಶ ಜಂತಿ ತಿಳಿಸಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಓಂ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷ ಎಸ್ ಎಸ್ ಹಾವಿನಾಳ, ಆಡಳಿತ ಮಂಡಳಿ ಹಾಗೂ ಶಾಲಾ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಇಲ್ಲಿಯ ಹಿರಿಯ ಕಾದಂಬರಿಕಾರ ಸಿದ್ದರಾಮ ಉಪ್ಪಿನ ಮತ್ತು ಅವರ ಬಾಳ‌ ಸಂಗಾತಿ‌ ಕವಯತ್ರಿ‌ ರೇವತಿ ಅವರು ವಿಜಯಪುರದ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಬಿ.ಎಂ.ಪಾಟೇಲ ವ್ಯೆದ್ಯಕೀಯ ಮಹಾವಿದ್ಯಾಲದ ಅಂಗರಚನಾಶಾಸ್ತೃ ವಿಭಾಗಕ್ಕೆ‌‌ ಈರ್ವರು ತಮ್ಮ ದೇಹದಾನ‌ ಒಮ್ಮಿಲೇ ಮಾಡಿರುವರು.ಸಂಸ್ಥೆಯ ಪ್ರಾಚಾರ್ಯ/ ಕಾರ್ಯದರ್ಶಿ ಜಿ.ಎಂ‌. ಪಾಟೀಲ ಮತ್ತು‌ ಆರ್.ಪಿ.ಮೆಳ್ಳಿ‌ಅವರ ಸಮ್ಮುಖದಲ್ಲಿ ಈ ಜನೋಪಯೋಗಿ ಸಫಲ ಕಾರ್ಯ ‌ ಮಾಡಿದ್ದು ಒಳ್ಳೆಯ ಶ್ಲಾಘನೀಯವಾಗಿದೆ.ಈ ದೇಹದಾನದ ಹುಟ್ಟು ಹಾಕಿದವರು ಪೂಜ್ಯ ‌ಸಿದ್ದೇಶ್ವರ ಶ್ರೀಗಳು ‌ಎಂಬುದು ಸದಾ ಸ್ಮರಣೀಯವಾಗಿದೆ.ಉಪ್ಪಿನ ಕುಟುಂಬದ ಸಾಕ್ಷಿಯಾಗಿ ಅವರ ಆಪ್ತ‌ ರಾಜಶೇಖರ ಭೋವಿ ಹಾಗೂ ಅವರ ಮಗ, ಪತ್ರಕರ್ತ ಶಿವಕುಮಾರ್ ಪ್ರೀತ್ಯಾಧರ ಸಮ್ಮತಿ ತೋರಿಸಿರುವರು.

Read More