Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ದೇಶದಲ್ಲಿ ಧರ್ಮವಿಲ್ಲದಿದ್ದರೆ ಭಾರತ ಉಳಿಯುವದಿಲ್ಲ, ಧರ್ಮಕ್ಕೆ ಧೇಶದಲ್ಲಿ ಮಹತ್ವದ ಸ್ಥಾನವಿದೆ. ಧರ್ಮದ ಆತ್ಮ ಆದ್ಯಾತ್ಮ. ಧರ್ಮದ ಸಾರ ಆದ್ಯಾತ್ಮ, ಜೀವನವು ಪರಮಾತ್ಮನ ಕಡೆಗೆ ಸಾಗುವ ಮಾರ್ಗ, ಧರ್ಮದಲ್ಲಿ ಆದ್ಯಾತ್ಮ ಮುಖ್ಯ ಮತ್ತು ಆದ್ಯಾತ್ಮದ ಆತ್ಮ ಭಗವದ್ಗೀತೆಯಾಗಿದೆ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನದ ಪೂಜ್ಯ ಗಂಗಾಧರೇಂದ್ರ ಸರಸ್ವತಿ ಶ್ರೀಗಳು ಹೇಳಿದರು.ಅವರು ಶುಕ್ರವಾರ ಪಟ್ಟಣದ ಶಂಕರ ಪಾರ್ವತಿ ಮಂಗಲ ಕಾರ್ಯಾಲಯದಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲಿ ಪ್ರತಿಷ್ಠಾನದಿಂದ ನಡೆದ ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ಮಾನವನಿಗೆ ನಕಾರಾತ್ಮಕ ಚಿಂತನೆಗಳಾದ ಮನೋರೋಗ, ಮಧುಮೇಹ ರಕ್ತದ ಒತ್ತಡ, ಮತ್ತು ಹೃದಯ ಕಾಯಿಲೆ ಬರುತ್ತಿದ್ದು ಸಕಾರಾತ್ಮಕ ಚಿಂತನೆಗಳಿಗಾಗಿ ಭಗವದ್ಗೀತೆ ಓದುವದರಿಂದ ಬರುತ್ತದೆ ಎಂದರು.ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಡಾ.ಸ್ವರೂಪಾನಂದ ಶ್ರೀಗಳು ಮಾತನಾಡಿ, ಬಹುಸಂಖ್ಯಾತ ಹಿಂದೂಗಳಿಗೆ ನಮ್ಮ ಧರ್ಮ ಗ್ರಂಥ ಯಾವುದು ಎಂಬುದೇ ಗೊತ್ತಿಲ್ಲ, ವಿವಿಧ ಧರ್ಮದವರು ಅವರ ಧರ್ಮ ಗ್ರಂಥವನ್ನು ಪಾಲಿಸುತ್ತಾರೆ, ಪಠಿಸುತ್ತಾರೆ, ಆದರೆ ಹಿಂದೂ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಾಂಕ್ರಾಮಿಕ ರೋಗಗಳ ಮುನ್ನೆಚ್ಚರಿಕೆಯಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರಿಂದ ನಿರಂತರ ಲಾರ್ವ್ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ತಾಲೂಕಾ ಆರೋಗ್ಯ ಅಧಿಕಾರಿ ಡಾ.ಸತೀಶ ತಿವಾರಿ ಹೇಳಿದರು.ಪಟ್ಟಣದ ಹೊರಪೇಟೆ ಗಲ್ಲಿಯಲ್ಲಿ ಶುಕ್ರವಾರ ಲಾರ್ವ ಸಮೀಕ್ಷೆ ಚಾಲನೆ ವೇಳೆ ಅವರು ಮಾತನಾಡಿದರು.ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳಾದ ಹೂವಿನ ಕುಂಡ, ಬೀಸಾಕಿದ ಟೈರ್, ಹಳೆಯ ಎಣ್ಣೆಯ ಡ್ರಮ್, ನೀರು ಸಂಗ್ರಹಿಸುವ ತೊಟ್ಟಿ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಎಚ್ಚರಿಕೆ ವಹಿಸಬೇಕು ಎಂದರು.ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಸಮೀಕ್ಷೆಗೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರು ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಬೇಟಿಗೆ ಬಂದಾಗ ಸಹಕರಿಸಬೇಕು. ನೀರಿನ ತಾಣಗಳನ್ನು ಭದ್ರವಾಗಿ ಮುಚ್ಚಿಡಬೇಕು. ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು. ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿದರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು. ಸಮೀಕ್ಷಗೆ ಪುರಸಭೆಯಿಂದ ಬೇಕಾಗುವ ಎಲ್ಲ ರೀತಿಯ ಸಹಕಾರ ನೀಡಲು ನಾವು ಸಿದ್ಧ ಎಂದರು.ಈ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ತಂಗಡಗಿಯ ಕೃಷ್ಣಾ ನದಿಯ ದಡದಲ್ಲಿ ಅಪರಿಚಿತ ಮಹಿಳೆಯ ಶವವೊಂದು ಶುಕ್ರವಾರ ಪತ್ತೆಯಾಗಿದೆ.ಅಂದಾಜು ೪೫ ರ ವಯಸ್ಕ ಮಹಿಳೆ ಹಳದಿ ಬಣ್ಣದ ಸೀರೆ, ಕಡುಕೆಂಪು (ಮೆರುನ್) ಬಣ್ಣದ ಜಂಪರ್ ತೊಟ್ಟಿದ್ದು ಯಾರದಾದರೂ ಮನೆಯಲ್ಲಿ ಕಾಣೆಯಾಗಿದ್ದರೆ ಮುದ್ದೇಬಿಹಾಳ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಿಸೆಂಬರ್ 22 ರಂದು ವೃಕ್ಷೋಥಾನ್ ಹೆರಿಟೇಜ್ ರನ್- 2024 ಆಯೋಜನೆ ಹಿನ್ನೆಲೆಯಲ್ಲಿ ಕೋರ್ ಕಮಿಟಿ ಪದಾಧಿಕಾರಿಗಳು ಗುರುವಾರ ನಗರದ ಜಿಓಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಈ ಸಭೆಯಲ್ಲಿ ಮಾತನಾಡಿದ ಡಾ.ಮಹಾಂತೇಶ ಬಿರಾದಾರ, ಹೆರಿಟೇಜ್ ರನ್ ಆಯೋಜನೆ ಉದ್ದೇಶ ಪ್ರವಾಸೋದ್ಯಮ ಮತ್ತು ಪರಿಸರ ಸಂರಕ್ಷಣೆ ಕುರಿತು ಜಿಲ್ಲೆಯ ಜನರಿಗೆ ಆಗಲಿರುವ ಅನುಕೂಲಗಳ ಕುರಿತು ಮಾಹಿತಿ ನೀಡಿದರು. ಅಲ್ಲದೇ, ಜಿಲ್ಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅವರ ನೀರಾವರಿ ಯೋಜನೆಗಳಿಂದ ಪ್ರಕೃತಿಯಲ್ಲಿ ಉಂಟಾಗಿರುವ ಬದಲಾವಣೆ, ರೈತರು ಮತ್ತು ಜನಸಾಮಾನ್ಯರಬದುಕಿನಲ್ಲಿ ಆಗಿರುವ ಆರ್ಥಿಕ ಸುಧಾರಣೆ ಕುರಿತು ಎಳೆ ಎಳೆಯಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ್ ಅಧ್ಯಕ್ಷ ಅರ್ಜುನ ಲಮಾಣಿ, ಸಚಿವ ಎಂ.ಬಿ.ಪಾಟೀಲ ಅವರ ದೂರದೃಷ್ಟಿಯ ಫಲವಾಗಿ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದೆ. ಈಗ ಆಯೋಜಿಸಲಾಗಿರುವ ಹೆರಿಟೇಜ್ ರನ್ ಗೆ ಸಕಲ ರೀತಿಯಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷ ಅಶೋಕ ಚನ್ನಬಸುಗೋಳ, ನಿರ್ದೇಶಕರಾದ ಹಣಮಂತ ಕೊಣದಿ, ಚಂದ್ರಶೇಖರ ಜತ್ತಿ, ಉಮೇಶ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ರುದ್ರಪ್ಪ ಆಸಂಗಿ ಅವರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಿಜಯಪುರ ವತಿಯಿಂದ ಸನ್ಮಾನಿಸಲಾಯಿತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಿಜಯಪುರ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಅವರು ಶಾಲು ಹೊದಿಸಿ ಸನ್ಮಾನಿಸಿ, ಗೌರವಿಸಿದರು.ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಸುರೇಶ ಅಂಬಿಗೇರ, ನಿವೃತ್ತ ವಾಹನ ಚಾಲಕ ಜಿ.ಬಿ.ತಾಟೆ, ಸಂಗಮೇಶ ಡಿಗ್ಗಿ, ಮಹಾಂತೇಶ ಪಾಟೀಲ, ಶಿವಾನಂದ ಹಿಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿ.ಪಂ. ಸಿಇಓ ರಿಷಿ ಆನಂದ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ “ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (ಡಿಡ್ಲಬೂಎಸ್‌ಎಂ) ಸಮಿತಿಯ ಸಭೆ ಹಾಗೂ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಒಟ್ಟು ೧೦೧೬ ಜನವಸತಿ-ಗ್ರಾಮಗಳಿಗೆ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಸದರಿ ಯೋಜನೆಯಡಿ ೫೭೭ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಹಾಗೂ ೪೩೯ ಕಾಮಗಾರಿಗಳು ಪ್ರಗತಿ ಹಂತದಲ್ಲಿರುತ್ತವೆ. ಸದರಿ ಯೋಜನೆಯಡಿ ಒಟ್ಟು ೪.೬೪ ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳಗಳನ್ನು ಅಳವಡಿಸುವ ಗುರಿ ಹೊಂದಿದ್ದು, ಅವುಗಳಲ್ಲಿ ಈಗಾಗಲೇ ೩.೨೪ ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕವನ್ನು ಒದಗಿಸಲಾಗಿದೆ. ಬಾಕಿ ಉಳಿದ ೧.೪೦ ಲಕ್ಷ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲಾನಾ ಅಜಾದ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಮೌಲಾನಾ ಅಜಾದ ಅವರ ಜನ್ಮ ದಿನದ ಪ್ರಯುಕ್ತ ‘ರಾಷ್ಟ್ರೀಯ ಶಿಕ್ಷಣ ದಿನ’ ಕಾರ್ಯಕ್ರಮ ಇದೇ ದಿ.೧೧ ರಂದು ಮಧ್ಯಾಹ್ನ ೩.೦೦ ಗಂಟೆಗೆ ವಿವಿಯ ಡಾ.ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಜರುಗಲಿದೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಸುರೇಶ ಸಮ್ಮಸಗಿ ಭಾಗವಹಿಸಲಿದ್ದು, ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ವಹಿಸಲಿದ್ದಾರೆ ಎಂದು ಮೌಲಾನಾ ಅಜಾದ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಗುಲಾಬ ರಾಠೋಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ಕಂದಗಲ್ ಹಣಮಂತ್ರಾಯ ರಂಗ ಮಂದಿರದಲ್ಲಿ ದಿನಾಂಕ : ೧೦-೧೧-೨೦೨೪ ರಂದು ಸಾಯಂಕಾಲ ೫.೩೦ ಗಂಟೆಗೆ ಖ್ಯಾತ ಚಲನಚಿತ್ರನಟಿ, ಹಿನ್ನೆಲೆ ಗಾಯಕ ಹಾಗೂ ಹಿರಿಯ ರಂಗಭೂಮಿ ಕಲಾವಿದೆಯಾದ ಶ್ರೀಮತಿ ಬಿ.ಜಯಶ್ರೀ ಹಾಗೂ ಅವರ ತಂಡದ ಕರಿಮಾಯಿ ರಂಗಭೂಮಿ ನಾಟಕವನ್ನು ಹಮ್ಮಿಕೊಳ್ಳಲಾಗಿದೆ.ಈ ಕರಿಮಾಯಿ ರಂಗಭೂಮಿ ನಾಟಕವನ್ನು ವಿಜಯಪುರದಲ್ಲಿ ಜಿಲ್ಲಾ ಯುವ ಪರಿಷತ್, ಎಸ್.ಪಿ. ಎಂಟರಪ್ರೈಜಿಸ್, ಮತ್ತು ಇವೆಂಟ್ರ ಇಂಟರನ್ಯಾಷನಲ್ ಇವರ ಆಶ್ರಯದಲ್ಲಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ನಗರದ ರಂಗಾಸಕ್ತರು, ಸಾರ್ವಜನಿಕರು, ಸಾಹಿತಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ರಂಗಭೂಮಿ ನಾಟಕವನ್ನು ಆಶ್ವಾಧೀಸಬೇಕೆಂದು ಜಿಲ್ಲಾ ಯುವ ಪರಿಷತ್ ಅಧ್ಯಕ್ಷರಾದ ಶರಣು ಸಬರದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶರಣು ಸಬರದ ನಂ. ೯೪೮೮೩೪೫೧೨೩ ಮೋಹನ ಕಟ್ಟಿಮನಿ ನಂ. ೮೯೭೧೩೧೦೦೦೮ ಹಾಗೂ ಪ್ರಕಾಶ ಮಠ ನಂ. ೯೭೪೦೫೮೨೦೦೯ ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೨- ೨೦೨೪ ಸಾಲಿನಲ್ಲಿ ವಿಜಯಪುರ ತಾಲೂಕಿನಲ್ಲಿ ಕೃಷಿ ಇಲಾಖೆಯಡಿ ನರೇಗಾ ಯೋಜನೆಯ ದುರ್ಬಳಕೆ ಹಾಗೂ ಭ್ರಷ್ಟಾಚಾರ ಆಗಿರುವ ಆರೋಪ ಕೇಳಬರುತ್ತಿದೆ, ಅಂತಹ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಿ ಆಗಿರುವ ನಷ್ಟವನ್ನು ಸರ್ಕಾರದ ಖಜಾನೆಗೆ ದಂಡದೊಂದಿಗೆ ಭರಿಸಬೇಕು ಹಾಗೂ ಅವರ ಬೆಂಬಲಕ್ಕೆ ನಿಂತ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾ ಪಂಚಾಯಿತ ಉಪ ಕಾರ್ಯದರ್ಶಿಗಳು ವಿಜಯಕುಮಾರ ಅಜೂರ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ವಿಜಯಪುರ ತಾಲೂಕಿನ ಕೃಷಿ ಇಲಾಖೆಗೆ ಸಂಬಂಧಿಸಿದ ೨೦೨೨, ೨೦೨೩, ೨೦೨೪ ನೇ ಸಾಲಿನಲ್ಲಿ ನರೇಗಾ ಯೋಜನೆಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ರೈತರಿಗೆ ಹಾಗೂ ಸರ್ಕಾರಕ್ಕೆ ಅನ್ಯಾಯವೆಸಗಿರುವ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅವರು ಹೇಳುತ್ತಿರುವುದು ನೋಡಿದರೆ ಇದರಲ್ಲಿ ಇಲಾಖೆಯ ಎಲ್ಲಾ ಅಧಿಕಾರಿಗಳು ಶಾಮೀಲಾಗಿರುವುದು ಕಂಡು ಬರುತ್ತದೆ. ಅಂತಹ ರೈತ ವಿರೋಧಿ ಅಧಿಕಾರಿಗಳನ್ನು ಕೂಡಲೇ ಕೆಲಸದಿಂದ…

Read More

ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ತಾಲ್ಲೂಕಿನ ಕನಮುಚನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಶಾಲಾ ಶಿಕ್ಷಣ ಇಲಾಖೆಯ ಸಹನಿರ್ದೇಶಕಿ ಮತ್ತು ಶಿಕ್ಷಕರ ಸರಕಾರಿ ಶಿಕ್ಷಣ ಮಹಾವಿದ್ಯಾಲಯ ಜಮಖಂಡಿಯ ಪ್ರಾಚಾರ್ಯ ಮಂಗಲಾ ನಾಯಕ ಗುರುವಾರ ಭೇಟಿ ನೀಡಿ‌ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿದರು.ಶಾಲಾ ಆವರಣದಲ್ಲಿ ವಿಧ್ಯಾರ್ಥಿಗಳು ಗುಂಪು ಅಧ್ಯಯನ ಮಾಡುತ್ತಿರುವದನ್ನು ವೀಕ್ಷಣೆ ಮಾಡಿದರು. ಶಾಲಾ ಸಿಬ್ಬಂದಿ ವರ್ಗದವರಿಗೆ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಸಲಹೆ ಸೂಚನೆ ನೀಡಿ ಮಾರ್ಗದರ್ಶನ ಮಾಡಿದರು. ಶಾಲಾ ಪರಿಸರ ಕಂಡು ಶಾಲೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.ಉಪನ್ಯಾಸಕಿ ಎ. ಕೆ. ಕೋರಿಗೇರಿ, ಮಹೇಶ ಜೋಶಿ, ಜತ್ತಿ, ಮುಖ್ಯ ಶಿಕ್ಷಕ ಆರ್.ವಿ.ಹೊಸೂರ ಹಾಗೂ ಶಾಲಾ ಸಿಬ್ಬಂದಿ ಇದ್ದರು.

Read More