Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ನಮ್ಮ ಮಕ್ಕಳಧಾಮದ ವಿದ್ಯಾರ್ಥಿ ಮಣಿಕಂಠ ಕಡಕೋಳ ಅಂಡರ್-೧೯, ಟಿ-೨೦ ಕ್ರಿಕೆಟ್ ಚಾಂಪಿಯನ್‌ಶಿಪ್-೨೦೨೫ಕ್ಕಾಗಿ ಕರ್ನಾಟಕ ರಾಜ್ಯ ತಂಡಕ್ಕೆ ಅಯ್ಕೆಯಾಗಿದ್ದಾನೆ.ಸರ್ದಾರ್ ವಲ್ಲಭಭಾಯಿ ಪಟೇಲ ಅಖಿಲ ಭಾರತ ಅಂತರರಾಜ್ಯ ಟಿ-೨೦ ಕ್ರಿಕೆಟ್ ಚಾಂಪಿಯನ್‌ಶಿಪ್- ೨೦೨೫ನ್ನು ಗುಜರಾತ ಕ್ರಿಕೆಟ್ ಮಂಡಳಿ ಹಾಗೂ ಡಿಸಿಸಿಎನ್ ನವಸಾರಿ ಆಯೋಜಿಸುತ್ತಿದೆ.ವಿದ್ಯಾರ್ಥಿ ಆಯ್ಕೆಗೆ ಮಕ್ಕಳಪರ ಚಿಂತಕ ವಾಸುದೇವ ತೋಳಬಂದಿ, ಉಜ್ವಲ ಸಂಸ್ಥೆ ನಿರ್ದೇಶಕಿ ಸುನಂದಾ ತೋಳಬಂದಿ, ಧಾಮದ ಮುಖ್ಯಶಿಕ್ಷಕ ರಾವುತ ಮರಬಿ ತರಬೇತುದಾರ ಶ್ರೀಕಾಂತ ಕಾಖಂಡಕಿ ಅಭಿನಂದಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಲೇಖನ- ಬಸವರಾಜ್ ಹೂಗಾರ್ನಿಕಟ ಪೂರ್ವ ಜಿಲ್ಲಾಧ್ಯಕ್ಷರುಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾವಿಜಯಪುರ ಜಿಲ್ಲೆಮೊ: 9740207097 ಉದಯರಶ್ಮಿ ದಿನಪತ್ರಿಕೆ ಕೇರಳದ ಚುನಾವಣಾ ರಾಜಕೀಯದಲ್ಲಿ ಈ ಬಾರಿ ಒಂದು ಮಹತ್ವದ ಸಂದೇಶ ಸ್ಪಷ್ಟವಾಗಿ ಮೂಡಿಬಂದಿದೆ. ವರ್ಷಗಳಿಂದ ಒಂದೇ ವಂಶ, ಒಂದೇ ಗುಂಪು, ಒಂದೇ ಚಿಂತನೆಗೆ ಸೀಮಿತವಾಗಿದ್ದ ಕೇರಳ ರಾಜಕೀಯಕ್ಕೆ ಬಿಜೆಪಿ ಯುವಶಕ್ತಿಯ ಮೂಲಕ ಸವಾಲು ಹಾಕಿದೆ. ಇದು ಕೇವಲ ಚುನಾವಣಾ ಪ್ರಯೋಗವಲ್ಲ; ಇದು ರಾಜಕೀಯ ಸಂಸ್ಕೃತಿಯನ್ನು ಬದಲಾಯಿಸುವ ಕ್ರಾಂತಿಕಾರಿ ಹೆಜ್ಜೆ.ಬಿಜೆಪಿ ಯಾವತ್ತೂ ಹೇಳುತ್ತಾ ಬಂದಿರುವ “Party With Difference” ಎಂಬ ಮಾತು ಈ ಬಾರಿ ಕೇವಲ ಘೋಷಣೆಯಾಗಿರಲಿಲ್ಲ ಅದು ಕಾರ್ಯರೂಪಕ್ಕೆ ಬಂದಿದೆ. ರಾಜಕೀಯ ಅನುಭವವೇ ಇಲ್ಲದ, ಸರಳ ಕುಟುಂಬಗಳಿಂದ ಬಂದ ಯುವಕ ಯುವತಿಯರಿಗೆ, ಸಾಮಾನ್ಯ ಜನರ ನಡುವೆ ಬದುಕು ಕಟ್ಟಿಕೊಂಡ ಸಹೋದರ ಸಹೋದರಿಯರಿಗೆ ಟಿಕೆಟ್ ನೀಡುವ ಮೂಲಕ, ಬಿಜೆಪಿ ಕೇರಳ ಒಂದು ಸ್ಪಷ್ಟ ಸಂದೇಶ ನೀಡಿದೆ.ರಾಜಕೀಯವು ಸಿರಿವಂತರ ಸ್ವತ್ತಲ್ಲ, ಅದು ಸಾಮಾನ್ಯ ಕಾರ್ಯಕರ್ತನ ಸೇವೆಯ ವೇದಿಕೆ.ಇತರ ಪಕ್ಷಗಳು ಗೆಲುವಿನ ಲೆಕ್ಕಾಚಾರಕ್ಕೆ ಮಾತ್ರ ಸೀಮಿತಗೊಂಡಾಗ, ಬಿಜೆಪಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮನೆಗಳ ಇ-ಸ್ವತ್ತು (ಗಣಕೀಕೃತ ಉತಾರಿ)ಗಾಗಿ ಪಟ್ಟಣದ ಕೆಲವು ವಾರ್ಡ ನಿವಾಸಿಗಳು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ ಶೆಟ್ಟಿ ಬಣ)ಪದಾಧಿಕಾರಿಗಳೊಂದಿಗೆ ಸೇರಿ ಪ್ರತಿಭಟನೆ ಕೈಗೊಂಡು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪಟ್ಟಣದ ಟಿಪ್ಪು ವೃತ್ತದಲ್ಲಿ ಸೋಮವಾರ ಸಭೆ ಸೇರಿದ ೦೫,೦೮,೧೨,೧೬,೧೭ ನೇ ವಾರ್ಡುಗಳ ನಿವಾಸಿಗಳು ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳ ನೇತೃತ್ವದಲ್ಲಿ ಗಣಕೀಕೃತ ಉತಾರೆಗಾಗಿ ಆಗ್ರಹಿಸಿ ಮೆರವಣಿಗೆ ಹೊರಟು ಮೊಹರೆ ಹಣಮಂತ್ರಾಯ ವೃತ್ತ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಪಟ್ಟಣ ಪಂಚಾಯತಿ ತಲುಪಿ ಆವರಣದಲ್ಲಿ ಧರಣಿ ಕುಳಿತು ಪ್ರತಿಭಟನೆ ಕೈಗೊಂಡರು.ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಮಾತನಾಡಿ, ವಾರ್ಡಿನಲ್ಲಿ ಹಲವು ವರ್ಷಗಳಿಂದ ಸಾವಿರಾರು ಕುಟುಂಬಗಳು ಮನೆ ಕಟ್ಟಿಸಿ ವಾಸವಾಗಿದ್ದಾರೆ ಅವರ ಮನೆಗಳಿಗೆ ಇ-ಸ್ವತ್ತು ಉತಾರಿ ಪಟ್ಟಣ ಪಂಚಾಯತಿಯಿAದ ನೀಡಬೇಕು. ಉತಾರಿ ನೀಡುವವರೆಗೆ ನಾವು ಕದಡುವದಿಲ್ಲ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ ಅಹ್ಮದ ಪಟೇಲ ಅವರಿಗೆ ಆಗ್ರಹಿಸಿದರು.ಕರವೇ ರಾಜ್ಯ ಉಪಾಧ್ಯಕ್ಷ ಬಸವರಾಜ ತಾಳಿಕೋಟಿ, ತಾಲ್ಲೂಕು ಅಧ್ಯಕ್ಷ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಅತಿವೃಷ್ಠಿ, ಮಳೆ ಹಾನಿ, ಕೀಟ ಬಾಧೆ, ಗೊಬ್ಬರ ಬೆಲೆ ಹೆಚ್ಚಳ, ಕೂಲಿ ಕಾರ್ಮಿಕರ ಸಮಸ್ಯೆ ನಡುವೆ ಇಂಡಿ ತಾಲೂಕಿನ ರೈತರು ಕಬ್ಬು ಬೆಳೆದಿದ್ದು ಉತ್ತಮ ಆದಾಯ ನಿರೀಕ್ಷೆಯಲ್ಲಿದ್ದಾರೆ. ತಾಲೂಕಿನ ಹಿರೇಬೇವನೂರ ಸಕ್ಕರೆ ಕಾರ್ಖಾನೆ, ಭೀಮಾಶಂಕರ ಕಾರ್ಖಾನೆ ಮತ್ತು ನಾದ ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬೆಲೆ ನಿಗದಿ ಪಡಿಸಿದ್ದು ಮೂರು ಸಾವಿರ ರೂ ಪ್ರತಿ ಕ್ವಿಂಟಾಲಗೆ ನೀಡುತ್ತಿದ್ದಾರೆ. ಆದರೂ ರೈತರು ಪಕ್ಕದ ಮಹಾರಾಷ್ಟ್ರ ಕಾರ್ಖಾನೆಗಳತ್ತ ಮುಖ ಮಾಡುತ್ತಿದ್ದು ಇದರಿಂದ ರಾಜ್ಯಕ್ಕೆ ತೆರಿಗೆ ನಷ್ಟವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಬಿ.ಕಂಬೋಗಿ ತಿಳಿಸಿದ್ದಾರೆ.ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕಬ್ಬು ಬೆಳೆದಿರುವ ಇಂಡಿ ತಾಲೂಕಿನಲ್ಲಿ ಮೂರು ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿವೆ. ಕಳೆದ ಮೂರು ವರ್ಷದಿಂದ ಪ್ರತಿ ದಿನ ಮೂರು ಸಾವಿರ ಟನ್ ಪ್ರತಿ ದಿನ ಪ್ರತಿ ಕಾರ್ಖಾನೆ ನುರಿಸುತ್ತಿದೆ. ಆದರೂ ಮಹಾರಾಷ್ಟ್ರದ ರಾಜ್ಯಕ್ಕೆ ಕಬ್ಬು ಸಾಗಿಸುತ್ತಿದ್ದಾರೆ.ಮಹಾರಾಷ್ಟ್ರದಲ್ಲಿ ಕಬ್ಬು ಹಂಗಾವು ಆರಂಭವಾಗಿದ್ದು ನ. ೧ ರಿಂದ ಕಾರ್ಖಾನೆಯ ಕಬ್ಬು ನುರಿಸುತ್ತಿದೆ.…

Read More

ಭಾವರಶ್ಮಿ ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ “ಗುರುರ್ ಬ್ರಹ್ಮ ಗುರುರ್ ವಿಷ್ಣು ಗುರುರ್ ದೇವೋ ಮಹೇಶ್ವರಃಗುರು ಸಾಕ್ಷಾತ್ ಪರ ಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ “ಇದರ ಅರ್ಥ”ಗುರುವು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರ ಸಾಕಾರವಾಗಿದ್ದು, ಸ್ವತಃ ಪರಬ್ರಹ್ಮನೇ ಆಗಿರುವ ಗುರು ಅಜ್ಞಾನವೆಂಬ ಕತ್ತಲಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ಕೊಂಡೊಯುತ್ತಾನೆ” ಎಂಬುದಾಗಿದೆ. ಅಂದರೆ ಶಿಕ್ಷಕ ಶಿಕ್ಷಣದ ಮುಖ್ಯಭಾಗ ಎಂಬುದನ್ನು ಮರೆಯುವಂತಿಲ್ಲ.ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಹೇಳಿಕೊಡಲು ನಿಯೋಜನೆಗೊಂಡ ಎಲ್ಲರೂ ಔಪಚಾರಿಕವಾಗಿ ಶಿಕ್ಷಕರೆ. ಅದನ್ನು ಅವರು ಮಾಡಿಯೇ ಮಾಡುತ್ತಾರೆ. ಏಕೆಂದರೆ ಅಲ್ಲೊಂದು ಕಟ್ಟುಪಾಡು, ಬದ್ಧತೆ ಇರುತ್ತದೆ. ಆದರೆ ಗುರುವಾಗುವ ಹಂತ ಬೆಣ್ಣೆಯಿಂದ ತುಪ್ಪವಾದಂತೆ. ತುಪ್ಪದ ಶುದ್ಧತೆ, ಅದನ್ನು ಕೆಡಲು ಬಿಡುವುದಿಲ್ಲ.ಸ್ವಸ್ಥ ಸಮಾಜದ ನಿರ್ಮಾಣ ಉತ್ತಮ ಶಿಕ್ಷಕರ ಸಮರ್ಪಣಾಭಾವದಿಂದ ಸಾಧ್ಯ ಎಂಬುದನ್ನು ಯಾವ ಶಿಕ್ಷಕರೂ ಮರೆಯುವಂತಿಲ್ಲ. ಹಿಂದೆ ಮರದ ಕೆಳಗೆ ಪಾಠಮಾಡುವ ʼಗುರುಕುಲʼ ವ್ಯವಸ್ಥೆ ಇತ್ತು. ಇಂದು ʼಗುರುಕುಲʼ ಎಂಬ ಹೆಸರಿನ ಶಾಲಾ-ಕಾಲೇಜುಗಳು ಇವೆ. ಮೊದಲಿಗೆ ಮರದ ನೆರಳಿನಲ್ಲಿ ಗುರುಕುಲ ಇತ್ತು. ಇಂದು ಗುರುಕುಲದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಕೆಪಿಸಿಸಿ ಖಜಾಂಚಿಯಾಗಿ ಸುದೀರ್ಘ ಅವಧಿಗೆ ಕೆಲಸ ಮಾಡಿರುವ ಅವರು, ಪಕ್ಷ ಸಂಘಟನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಬಾಪೂಜಿ ಶಿಕ್ಷಣ ಸಂಸ್ಥೆ ಮೂಲಕ ದಾವಣಗೆರೆ ಜಿಲ್ಲೆ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಳಲು ಕಾರಣರಾಗಿದ್ದಾರೆ. ಅವರ ಅಗಲಿಕೆಯಿಂದ ಸಾರ್ವಜನಿಕ ಕ್ಷೇತ್ರಕ್ಕೆ ಅಷ್ಟೇ ಅಲ್ಲ, ಶಿಕ್ಷಣ ಕ್ಷೇತ್ರಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.ದಾವಣಗೆರೆ ಜಿಲ್ಲೆಯ ಪ್ರಗತಿ ಅವರ ದೂರದೃಷ್ಟಿಗೆ ಸಾಕ್ಷಿಯಾಗಿದೆ. ಸಚಿವರಾಗಿ, ಲೋಕಸಭಾ ಸದಸ್ಯರಾಗಿ ಅವರ ಕೊಡುಗೆ ಅನನ್ಯ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವ ಶಿವಾನಂದ ಪಾಟೀಲ ಪ್ರಾರ್ಥಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸಂತಾಪ ಸೂಚಿಸಿದ್ದಾರೆ.ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರ ಸೇವೆ, ಸಂಘಟನೆಗೆ ನೀಡಿದ ನಾಯಕತ್ವ ಮತ್ತು ಸಮಾಜಕ್ಕೆ ಸಲ್ಲಿಸಿದ ಅಮೂಲ್ಯ ಕೊಡುಗೆಗಳು ಸದಾ ಸ್ಮರಣೀಯ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಮತ್ತು ಸಮಾಜಕ್ಕೆ ಅಪಾರ ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.ನನ್ನ ಸಂಬಂಧಿಯೂ ಆಗಿದ್ದ ಅವರು, ಕಾಂಗ್ರೆಸ್ ಪಕ್ಷದ ಕಟ್ಟಾಳುಗಳಾಗಿ ಪಕ್ಷದಲ್ಲಿ ತಳಮಟ್ಟದಿಂದ ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಬಾಪುಜಿ ಶಿಕ್ಷಣ ಸಂಸ್ಥೆಯನ್ನು ಅತ್ಯಂತ ಎತ್ತರಕ್ಕೆ ಕಟ್ಟಿ ಬೆಳೆಸಿದವರು. ದೊಡ್ಡ ದಾನಿಗಳಾಗಿದ್ದ ಅವರು, ಶ್ರೀಶೈಲ ಕ್ಷೇತ್ರ ಅಭಿವೃದ್ಧಿಗೆ ಮತ್ತು ಉಳವಿ ಕ್ಷೇತ್ರದ ಅಭಿವೃದ್ಧಿಗೆ, ಗುಡ್ಡಾಪುರ ದಾನಮ್ಮ ಕ್ಷೇತ್ರದ ಅಭಿವೃದ್ಧಿಗೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕ್ಷೇತ್ರದಲ್ಲಿ ಏಕಲವ್ಯ ಶಾಲೆ ಸ್ಥಾಪಿಸುವ ಮೂಲಕ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ವಸತಿಯುತ ಶಿಕ್ಷಣ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಬೇಕೆಂದು ತಾಲ್ಲೂಕಿನ ನಾದ ಗ್ರಾಮದ ತಾ.ಪಂ ಸದಸ್ಯ ಸಿದ್ದಪ್ಪ ತಳವಾರ ಭಾನುವಾರ ಮಾತನಾಡಿದರು.ಇಂಡಿ ನಗರದಲ್ಲಿ ತಳವಾರ ಸೇವಾ ಸಮಿತಿ (ಟಿಎಸ್ಎಸ್) ಹಾಗೂ ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ ಜಂಟಿಯಾಗಿ ನಡೆಸಿರುವ ಜಾಗೃತಿ ಸಭೆಯಲ್ಲಿ ಹೇಳಿದರು.ತೆನಹಳ್ಳಿ ತಾ.ಪಂ ಸದಸ್ಯ ಸಿದ್ದಪ್ಪ ನಾಟೀಕಾರ ಮಾತನಾಡಿ, ಯಾವುದೇ ಒಂದು ಸಮಾಜ ಮುಖ್ಯ ಭೂಮಿಕೆಯಲ್ಲಿ ಬರಬೇಕಾದರೆ ಶಿಕ್ಷಣ ಅವಶ್ಯಕ. ಆದರೆ ಇಂಡಿ ವಿಧಾನ ಸಭಾ ಮತಕ್ಷೇತ್ರದಲ್ಲಿ ಸುಮಾರು ಒಟ್ಟು 35 ಸಾವಿರ ಕ್ಕಿಂತಲೂ ಹೆಚ್ಚಿರುವ ತಳವಾರ, ಹರಿಣಶಿಕಾರಿ,ಬೇಡ,ಬೇಡರ, ವಾಲ್ಮೀಕಿ ಸಮಾಜದ, ಪರಿಶಿಷ್ಟ ಪಂಗಡದ ಜನರ ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಾಲೆ ಇಲ್ಲವಾದರೆ ಅವರ ಪರಿಸ್ಥಿತಿ ಏನಾಗಬಾರದು ಹೇಳಿ. ಅದಕ್ಕಾಗಿ ಈ ಎಲ್ಲಾ ಸಮುದಾಯದ ಜನರ ಪರವಾಗಿ ಒಕ್ಕೂರಲಿನಿಂದ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಏಕಲವ್ಯ ಶಾಲೆಯನ್ನು ಸ್ಥಾಪಿಸಲು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆರೋಗ್ಯಕರ ಮತ್ತು ಕಾಂತಿಯುತ ಚರ್ಮವನ್ನು ಪಡೆಯಲು ಜನರು ಪ್ರತಿದಿನ ಸೇವಿಸುವ ಆಹಾರ ಮತ್ತು ಪಾನೀಯಗಳು ಹೆಚ್ಚು ಪ್ರಭಾವವನ್ನು ಬೀರುತ್ತವೆ ಎಂದು ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಹೇಳಿದರು.ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಪೂಜ್ಯಶ್ರೀ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ ಹಾಗೂ ಶಹಾಪುರ ಚರ್ಮರೋಗ ಹಾಗೂ ಕಾಂತಿವರ್ಧಕ ಚಿಕಿತ್ಸಾಲಯ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಚಿಕಿತ್ಸಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಶೇಷವಾಗಿ ಬೆಳಿಗ್ಗೆ ಚರ್ಮದ ಆರೈಕೆಯಲ್ಲಿ ತೊಡಗಿಕೊಂಡರೆ ಇದು ನಿಮ್ಮ ಚರ್ಮದ ಮೇಲೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದರು.ಈ ವೇಳೆ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ಅನಾರೋಗ್ಯಕರ ಮತ್ತು ಒತ್ತಡದ ಜೀವನ ಶೈಲಿಯಿಂದಾಗಿ ದೇಹವು ವೇಗವಾಗಿ ವಯಸ್ಸಾಗುತ್ತದೆ. ನಯವಾದ ಚರ್ಮಕ್ಕಾಗಿ ಪ್ರಾಣಾಯಾಮದೊಂದಿಗೆ ಸ್ವಲ್ಪ ಆಸನ ಮಾಡುವುದರಿಂದ ಚರ್ಮವು ಹೊಳೆಯುತ್ತದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಚರ್ಮರೋಗ ತಜ್ಞೆ ಡಾ.ಅಪೂರ್ವ ರಮೇಶ ಶಹಾಪುರ ಮಾತನಾಡಿ, ಚರ್ಮದಲ್ಲಿ ತುರಿಕೆ, ಕಜ್ಜಿಗಳು ಕಾಣಿಸಿಕೊಂಡ ತಕ್ಷಣವೇ ಎಲ್ಲರೂ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.ಶಿಬಿರದಲ್ಲಿ ೨೦೭ಜನ ಉಚಿತವಾಗಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹುಬ್ಬಳ್ಳಿಯ ಕೆ.ಎಲ್.ಇ ಟೆಕ್ನಾಲಜಿಕಲ್ ವಿಶ್ವವಿದ್ಯಾಲಯದ ಅಡಿ ನಡೆಯುವ ೨೦೨೪-೨೫ನೆಯ ಸಾಲಿನ ಪರೀಕ್ಷೆಯಲ್ಲಿ ಎಮ್.ಟೆಕ್ ವಿಭಾಗದ ವಿದ್ಯಾರ್ಥಿ ಶಿವರಾಜ ಹಿರೇಮಠ ರಾಜ್ಯಕ್ಕೆ ಮೂರನೆಯ ರ‍್ಯಾಂಕ್ ಪಡೆದುಕೊಂಡು ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿಯ ಕಠಿಣ ಪರಿಶ್ರಮ, ಪ್ರಾಧ್ಯಾಪಕರ ಅತ್ಯುತ್ತಮ ಭೋಧನೆ ರ‍್ಯಾಂಕ್ ಪಡೆದುಕೊಳ್ಳಲು ಸಾಧ್ಯವಾಗಿದೆ. ಇವರ ಸಾಧನೆಗೆ ಬೋಧಕ-ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗೆ ಶುಭ ಕೋರಿದ್ದಾರೆ.

Read More