Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜಿಲ್ಲೆಯ ಅರಕೇರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಇಂಡಿ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿ ಕುಪ್ರೇಂದ್ರ ಯಂಪುರೆ ೧೫೦೦ಮೀ. ಓಟದಲ್ಲಿ ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರು, ದೈಹಿಕ ಶಿಕ್ಷಕರು, ಸಿಬ್ಬಂದಿಯ ವರ್ಗ, ಪಾಲಕರು ಹಾಗೂ ಶಾಲೆಯ ವಿದ್ಯಾರ್ಥಿಗಳು ಅಭಿನಂದಿಸಿ ಮುಂದೆ ನಡೆಯುವ ರಾಜ್ಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಗೆಲುವು ಸಾದಿಸಲಿ ಎಂದು ಶುಭ ಹಾರೈಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಓತಿಹಾಳ ಪಿಕೆಪಿಎಸ್ ಸಂಘದಲ್ಲಿ ಹಣ ದುರುಪಯೋಗ ಮಾಡಿಕೊಂಡು ಇಲಾಖೆಯಿಂದ ಸಾಬೀತಾಗಿ ಸಂಘದಿಂದ ವಜಾಗೊಂಡ ಮಾಜಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಅಂಬಣ್ಣ ಶಂ. ಹೂಗಾರ ಅವರನ್ನು ಕಾನೂನು ಬಾಹಿರವಾಗಿ ನೇಮಕ ಮಾಡಿಕೊಂಡ ಸದ್ಯದ ಆಡಳಿತ ಮಂಡಳಿಯವರು ಇವರನ್ನು ವಜಾಗೊಳಿಸಬೇಕು ಎಂದು ಬಾಬು ನಾಟೀಕಾರ ಆಗ್ರಹಿಸಿದರು.ತಾಲೂಕಿನ ಓತಿಹಾಳ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆವರಣದಲ್ಲಿ ಹಮ್ಮಿಕೊಂಡ ಅನಿರ್ಧಿಷ್ಠಾವದಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಕಾನೂನು ಬಾಹಿರವಾಗಿ ಅವರನ್ನು ನೇಮಕ ಮಾಡಿಕೊಂಡ ವ್ಯವಸ್ಥೆಯ ವಿರುದ್ಧ ಶಿಸ್ತಿನ ಕ್ರಮಕೈಗೊಳ್ಳಬೇಕು ಎಂಬ ಉದ್ದೇಶದಿಂದ ಈ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಇಲಾಖೆ ನಮ್ಮ ಧರಣಿ ಸತ್ಯಾಗ್ರಹಕ್ಕೆ ಒಗೊಟ್ಟು ಕಾನೂನಾತ್ಮಕವಾಗಿ ಸೂಕ್ತ ನ್ಯಾಯವನ್ನು ಒದಗಿಸಬೇಕು ಎಂದರು.ಈ ವೇಳೆ ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಾದ ಅಶೋಕ ಮಣೂರ, ಸೋಮಣ್ಣ ಪೂಜಾರಿ, ಭೀಮರಾಐ ಮಕಣಾಪೂರ, ನೀಲಮ್ಮ ನಾಕೆತ್ತಿನ, ಸಂಗಮ ಕೊರಬು, ಸಿದ್ದಮ್ಮ ನಾಟೀಕಾರ, ಗ್ರಾಮ ಪಂಚಾಯತ್ ಸದಸ್ಯರಾದ ಸುವರ್ಣಾ ಮಕಣಾಪೂರ, ಜಗದೀಶ ಮಾಲೇಗಾರ, ಮಲ್ಲು ನಾಕೆತ್ತಿನ,…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾದರ್ಶಗಳ ತಳಹದಿಯ ಮೇಲೆ ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಅವರು ಹೇಳಿದ ತತ್ವ ಸಿದ್ಧಾಂತ ಹಾಗೂ ಕ್ರಾಂತಿ ಹೋರಾಟದ ತೇರನ್ನು ತಂದು ಬಿಟ್ಟಿದ್ದೇನೆ ಎಂದು ಜಿಲ್ಲಾ ಪ್ರಧಾನ ಸಂಚಾಲಕ ಸಂಜು ಕಂಬಾಗಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಸಿಂದಗಿ, ಆಲಮೇಲ ತಾಲೂಕಿನ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆಮಾಡಿ ಮಾತನಾಡಿದ ಅವರು, ಹೋರಾಟದ ತೇರನ್ನು ಎಲ್ಲರೂ ಒಂದುಗೂಡಿ ಎಳೆಯುವ ಕಾರ್ಯವಾಗಬೇಕು. ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕರ ಆಸೆಯಂತೆ ನೂತನ ಪದಾಧಿಕಾರಿಗಳು ತಾಲೂಕಿನಾದ್ಯಂತ ಸಂಚರಿಸಿ ಬಡವ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ, ದಿನ-ದಲಿತರ ಪರವಾಗಿ ಧ್ವನಿ ಎತ್ತುವ ಕಾರ್ಯ ನಿಮ್ಮಿಂದಾಗಬೇಕು ಎಂದರು.ಈ ವೇಳೆ ಕ.ದ.ಸಂ.ಸ (ಅಂಬೇಡ್ಕರವಾದ) ಸಿಂದಗಿ ತಾಲೂಕಿನ ಪ್ರಧಾನ ಸಂಚಾಲಕರಾಗಿ ಸಿದ್ದು ಪೂಜಾರಿ, ಸಂಘಟನಾ ಸಂಚಾಲಕರನ್ನಾಗಿ ಸಂತೋಷ ಭಾಸ್ಕರ್, ಖಜಾಂಚಿಯಾಗಿ ಶಿವು ಬಡಿಗೇರ, ಸಹ ಸಂಚಾಲಕರನ್ನಾಗಿ ಯಲ್ಲು ಮಿರಗಿ, ಪರಶುರಾಮ ನಾಲ್ಕಮಾನ, ಶಿವಕುಮಾರ ಶರ್ಮಾ, ಏಕನಾಥ ಕಟ್ಟಿಮನಿ, ಅಶೋಕ ಭಜಂತ್ರಿ ಆಸೀಫ್…

Read More

ವಕ್ಫ್ ಆಸ್ತಿ ವಿವಾದ | ಹುಬ್ಬಳ್ಳಿ, ವಿಜಯಪುರಕ್ಕೆ JPC ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ | ರೈತರಿಂದ 500 ಅಹವಾಲು ಸ್ವೀಕಾರ ವಿಜಯಪುರ: ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಂಸದ ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ವಕ್ಪ್ ಕಾಯ್ದೆ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯು ಶುಕ್ರವಾರ ಸುಮಾರು 500 ಅಹವಾಲುಗಳನ್ನು ಆಲಿಸಿತು.ಹುಬ್ಬಳ್ಳಿ, ವಿಜಯಪುರ ಮತ್ತು ಬೆಳಗಾವಿಗೆ ಭೇಟಿ ನೀಡಿದ ಪಾಲ್, ರೈತರು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳ ಸದಸ್ಯರನ್ನು ಭೇಟಿ ಮಾಡುವ ಮೂಲಕ ವಕ್ಫ್ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಅಹವಾಲು ಸ್ವೀಕರಿಸಿದರು.ಈ ವೇಳೆ ತಮ್ಮ ಭೂಮಿಯನ್ನು ವಕ್ಫ್ ಮಂಡಳಿ ಆಸ್ತಿ ಎಂದು ಹೇಳಲಾಗುತ್ತಿದೆ ಎಂದು ವಿಜಯಪುರ, ಬೀದರ್, ಕಲಬುರಗಿ, ಹುಬ್ಬಳ್ಳಿ, ಬಾಗಲಕೋಟೆ ಮತ್ತು ಬೆಳಗಾವಿಯ ರೈತರಿಂದ ಸುಮಾರು 500 ಅಹವಾಲುಗಳನ್ನು ಜಗದಾಂಬಿಕಾ ಪಾಲ್ ಸ್ವೀಕರಿಸಿದರು ಎಂದು ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.ಸತ್ಯ ಶೋಧನೆ ಮತ್ತು ನೊಂದವರನ್ನು ಭೇಟಿ ಮಾಡಲು ರಾಜ್ಯಕ್ಕೆ ಭೇಟಿ ನೀಡಿದ್ದೇನೆ. ರೈತರು ಹಾಗೂ ವಿವಿಧ…

Read More

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳು | ಸಚಿವ ಡಾ ಹೆಚ್.ಸಿ.ಮಹದೇವಪ್ಪ ಘೋಷಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: IIT/IIM/IISC /NITಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/STವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು ೧ ರಿಂದ ೨ ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇನ್ನು ಪಿಯುಸಿ ಪರೀಕ್ಷೆಯಲ್ಲಿ ೯೫ ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ ೨೫ ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ ೬೦% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ ೨೫…

Read More

ಮತದಾರ ಪಟ್ಟಿ ಪರಿಷ್ಕರಣೆ: ನಾಲ್ಕು ದಿನಗಳ ಕಾಲ ವಿಶೇಷ ಅಭಿಯಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಹೆಸರು ತೆಗೆದು ಹಾಕುವ ಕುರಿತು ನವೆಂಬರ್ ೯,೧೦ ಹಾಗೂ ೨೩ ಮತ್ತು ೨೪ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫-೩೦ಗಂಟೆಯವರೆಗೆ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ವಿಶೇಷ ಅಭಿಯಾನ ದಿನಗಳಂದು ಎಲ್ಲ ಬಿಎಲ್‌ಓಗಳು ತಮ್ಮ ಮತಗಟ್ಟೆಗಳಲ್ಲಿ ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಗತ್ಯ ನೆರವು ಒದಗಿಸಲಿದ್ದಾರೆ. ವಿಶೇಷ ಅಭಿಯಾನ ದಿನಗಳಂದು ಸಾರ್ವಜನಿಕರು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ, ವಗಾವಣೆ, ಹೆಸರು ತೆಗೆದು ಹಾಕುವುದು ಸೇರಿದಂತೆ ಈ ವಿಶೇಷ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನಹೊಂದಿದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ೧೨ ತಿಂಗಳ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ ಜಿಲ್ಲಾ ಕಚೇರಿಯಲ್ಲಿ ತಲಾ ಒಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ತರಬೇತಿಗೆ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಧ್ಯಮ ಅಕಾಡೆಮಿ ಮೂಲಕ ತರಬೇತಿ ಭತ್ಯೆ ನೀಡಲಾಗುವುದು.ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿದ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ೩೦-೧೧-೨೦೨೪ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಆವರಣ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು. ನಿಗದಿತ ಅರ್ಜಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-೨೦೧೫ ರ ಸೆಕ್ಷನ್ ೮೦ ಮತ್ತು ೮೧ರನ್ವಯ ೦೫ ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ೦೧ ಲಕ್ಷ ರೂಗಳ ದಂಡ ವಿಧಿಸಬಹುದಾಗಿದೆ. ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾಗಿದ್ದರೆ ಶಿಕ್ಷೆಯ ಅವಧಿ ೩ ವರ್ಷಗಳಿಗೆ ಕಡಿಮೆ ಇಲ್ಲದಂತೆ ೭ ವರ್ಷಗಳವರೆಗೆ ವಿಸ್ತರಣೆ ಮಾಡಬಹುದಾಗಿದೆ.೨೦೨೪ರ ನವೆಂಬರ್ ತಿಂಗಳನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆಯಾಗಿ ಆಚರಿಸಲಾಗುತ್ತಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಜಯಪುರ ಇವರ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಜಯಪುರ ದೂರವಾಣಿ ಸಂಖ್ಯೆ: ೦೮೩೫೨೨೯೫೨೬೧ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದಲ್ಲಿ ಗುರುವಾರ ನೋಟರಿಗಳ ದಿನಾಚರಣೆಯನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.ಈ ವೇಳೆ ನೋಟರಿಗಳಾದ ಎಂ.ಎ.ಮುದ್ದೇಬಿಹಾಳ, ಆರ್.ಬಿ.ಪಾಟೀಲ, ಎಸ್.ಎಸ್.ಮಾಲಗತ್ತಿ, ಎಲ್.ಎಸ್.ಮೇಟಿ, ಬಿ.ಎ.ನಾಡಗೌಡರ, ಎಸ್.ಎಚ್.ಲೊಟಗೇರಿ, ಹಿರಿಯ ವಕೀಲರುಗಳಾದ ಜೆ.ಎ.ಚಿನಿವಾರ, ಎಂ.ಎಚ್.ಹಾಲಣ್ಣವರ, ಬಿ.ಆರ್.ನಾಡಗೌರ, ಬಿ.ಎಸ್.ಬಿದರಕುಂದಿ, ಎಂ.ಎಚ್.ಕ್ವಾರಿ ನ್ಯಾಯವಾದಿಗಳಾದ ಎನ್.ಜಿ.ಕುಲಕರ್ಣಿ, ಚೇತನ ಶಿವಶಿಂಪಿ, ಎಸ್.ಬಿ.ಬಾಚಿಹಾಳ, ಬಿ.ವಾಯ್.ಮೇಟಿ ಸೇರಿದಂತೆ ಮತ್ತೀತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನದ ಸಹಯೋಗದಲ್ಲಿ ನಡೆಯುತ್ತಿರುವ ಭಗವದ್ಗೀತಾ ಅಭಿಯಾನದ ಹಿನ್ನೆಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ೧ ಸಾವಿರಕ್ಕೂ ಹೆಚ್ಚು ಭಗವದ್ಗೀತೆಯ ಪ್ರತಿಗಳನ್ನು ಉಚಿತವಾಗಿ ವಿತರಿಸಲಾಯಿತು.ಈ ವೇಳೆ ಅಭಿಯಾನದ ಕಾರ್ಯಾಧ್ಯಕ್ಷ ಉಮೇಶ ಕಾರಜೋಳ ಮಾತನಾಡಿ, ಭಗವದ್ಗೀತೆ ಮನುಷ್ಯನಿಗೆ ನೈತಿಕತೆ ಬೋಧಿಸುವ ದಿವ್ಯ ಗ್ರಂಥ. ಗೀತಾ ಸಾರವನ್ನು ತಿಳಿದುಕೊಂಡು ಬದುಕಿದರೆ ಇಡೀ ಬದುಕೇ ಧನ್ಯವಾಗುತ್ತದೆ. ಇಡೀ ಬದುಕಿನ ನಿಜಾರ್ಥವೇ ಭಗವದ್ಗೀತೆಯಲ್ಲಿ ಅಡಗಿದೆ‌. ಮಕ್ಕಳು ಬಾಲ್ಯದಲ್ಲಿಯೇ ಭಗವದ್ಗೀತೆಯ ತತ್ವಗಳನ್ನು ಅಳವಡಿಸಿಕೊಳ್ಳಲು ನೆರವಾಗಲು ಈ ಅಭಿಯಾನ ಸಂಘಟಿಸಲಾಗುತ್ತಿದೆ, ಮಕ್ಕಳು ಭಗವದ್ಗೀತೆಯನ್ನು ಓದುವ ಪರಿಪಾಠ ಅದರಲ್ಲಿರುವ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸುಂದರ ಜೀವನ ಹಾಗೂ ಭವಿಷ್ಯ ರೂಪಿಸಿಕೊಳ್ಳಬೇಕಿದೆ ಎಂದರು.ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಸಿದ್ಧಣ್ಣ ಸಕ್ರಿ, ಸಹಜಾನಂದ ದಂದರಗಿ, ಜಿಲ್ಲಾ ಯುವ ಪರಿಷತ್ ಜಿಲ್ಲಾಧ್ಯಕ್ಷ ಶರಣು ಸಬರದ, ರಾಜೇಶ್ವರಿ ಮೋಪಗಾರ,ಪರಸುರಾಮ ಕುಂಭಾರ, ಎಸ್ ಎಸ್ ಬೊಮ್ಮನಹಳ್ಳಿ, ವಿದ್ಯಾವತಿ ಅಂಕಲಗಿ, ರಾಜಶೇಖರ ಖೇಡಗಿ, ವಿನೋದ ಮಣೂರ, ವಿರೇಶ ಗೊಬ್ಬೂರ…

Read More