Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕ ಬಸನಗೌಡ ಯತ್ನಾಳ ಅವರ ನೇತೃತ್ವದಲ್ಲಿ ವಿಜಯಪುರದಲ್ಲಿ ನಡೆಯುತ್ತಿರುವ ವಕ್ಫ ನಿಗಮದ ನೀತಿಯನ್ನು ವಿರೋಧಿಸಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಗುರುವಾರ ಬೇಟಿ ನೀಡಿದ ಉತ್ತರ ಕನ್ನಡ ಜಿಲ್ಲೆಯ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಅಧ್ಯಕ್ಷ ಶಿವರಾಮ್ ಗಾoವಕರ ಬೆಂಬಲ ಸೂಚಿಸಿದ್ದಾರೆ.ಈ ವೇಳೆ ಮಾತನಾಡಿದ ಅವರು, ವಕ್ಫ ನಿಗಮದ ವಿರುದ್ಧ ಯತ್ನಾಳ ಅವರು ಹೂಡಿದ ಈ ಹೋರಾಟ ಅರ್ಥಪೂರ್ಣವಾದುದು, ಇದಕ್ಕೆ ನಾಡಿನ ಸಮಸ್ತರ ಬೆಂಬಲವಿದೆ. ಇಂತಹ ಕೊಳಕು ನೀತಿಯನ್ನು ಹೋಗಲಾಡಿಸಲು ಹೋರಾಟಗಾರರು ಕಸಬರಿಗೆಯಂತೆ ಆಗಬೇಕು. ಕೊಳೆ ಉಳಿಯದಂತೆ ಇದನ್ನು ಗುಡಿಸಿದಾಗ ಇದು ಸ್ವಚ್ಛ ವಾಗುತ್ತದೆ. ಆ ಕಾರ್ಯವನ್ನು ವಿಜಯಪುರದಲ್ಲಿ ಯತ್ನಾಳ ಅವರು ಮಾಡುತ್ತಿದ್ದಾರೆ. ನಮ್ಮದೇಶ ನೆಲ, ಜಲ, ಭೂಮಿಗೆ ತೊಂದರೆ ಕೊಡುವವರನ್ನು ಇಲ್ಲಿಂದ ಓಡಿಸಲು ಮತ್ತೆ ಛಲೇ ಜಾವ್ ಚಳುವಳಿ ನಡೆಸಬೇಕಾಗುತ್ತದೆ. ಈ ಕಾರ್ಯಕ್ಕೆ ನಮ್ಮ ಉತ್ತರ ಕನ್ನಡ ಜಿಲ್ಲೆಯ ಭಾರತೀಯ ಕಿಸಾನ್ ಸಂಘದ ಬೆಂಬಲ ಹೋರಾಟಕ್ಕೆ ಸದಾ ಇರುತ್ತದೆ ಎಂದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಗಡಿ ಹೋರಾಟ ಸಮಿತಿ, ಬೆಂಗಳೂರು, ಈ ಸಮಿತಿಗೆ ವಿಜಯಪುರ ಜಿಲ್ಲಾ ಅಧ್ಯಕ್ಷರಾಗಿ ಬಸವರಾಜ ನಂ ಬಾಗೇವಾಡಿ, ಸಾ, ಉತ್ನಾಳ ಇವರನ್ನು ಆಯ್ಕೆ ಮಾಡಲಾಗಿದೆಯಂದು ಸಂಸ್ಥಾಪಕ ರಾಜ್ಯ ಅಧ್ಯಕ್ಷ ಪ್ರೊ,ಬಿ, ಕೆ,ರಾ, ರಾವ್ ಬೈಂದೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬಾಗಲಕೋಟ ಜಿಲ್ಲಾ ಹೊನಲು ಬೆಳಕಿನ ಕಬ್ಬಡ್ಡಿ ಚಾಂಪಿಯನ್ ಟ್ರೋಫಿ | ಮೂವತ್ತೆರಡು ತಂಡಗಳು ಭಾಗಿ | ಕಬಡ್ಡಿ ಪ್ರೇಮಿಗಳಿಗೆ ಭರಪೂರ ಮನರಂಜನೆ ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಹೊನಲು ಬೆಳಕಿನ ಬಾಗಲಕೋಟ ಜಿಲ್ಲಾ ಕಬ್ಬಡ್ಡಿ ಚಾಂಪಿಯನ್ ಟ್ರೋಫಿಯು ಈ ಭಾಗದ ಕಬ್ಬಡ್ಡಿ ಪ್ರೇಮಿಗಳಿಗೆ ಭರಪೂರ ಮನರಂಜನೆ ನೀಡಿತು.ಇಲ್ಲಿನ ಪಿಕೆಪಿಎಸ್ ಆವರಣದಲ್ಲಿ ಓಂ ಪ್ರಭುಲಿಂಗೇಶ್ವರ ಯುವಕರ ಕ್ರೀಡಾ ಸಂಘ ಹಾಗೂ ಬಾಗಲಕೋಟ ಜಿಲ್ಲಾ ಅಮೆಚೂರ್ ಕಬ್ಬಡ್ಡಿ ಅಸೋಶಿಯೇಷನ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಪ್ರೋ ಕಬ್ಬಡ್ಡಿ ಮಾದರಿಯ ಪಂದ್ಯಾವಳಿಯಲ್ಲಿ ಭಾಗವಹಿಸಿದ ಮೂವತ್ತೆರಡು ತಂಡಗಳು ಅತ್ಯತ್ತಮ ಪ್ರದರ್ಶನ ನೀಡುವುದರೊಂದಿಗೆ ನೆರೆದ ಸಾವಿರಾರು ಸಂಖ್ಯೆಯ ಪ್ರೇಕ್ಷಕರನ್ನು ರಂಜಿಸಿದವು.ಬುಧವಾರ ನಡೆದ ಫಿನಾಲೆಯಲ್ಲಿ ಸೊರಗಾವಿಯ ಮಾರುತೇಶ್ವರ ಕಬ್ಬಡ್ಡಿ ತಂಡ ವಿಜಯಶಾಲಿಯಾಗುವುದರೊಂದಿಗೆ ಜಿಲ್ಲಾ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು.ರಾತ್ರಿ ನಡೆದ ಸಮಾರೋಪ ಸಮಾರಂಭದಲ್ಲಿ ಬಹುಮಾನ ಹಾಗೂ ಟ್ರೋಫಿ ವಿತರಣಾ ಕಾರ್ಯಕ್ರಮ ನಡೆಯಿತು.ಸಮಾರಂಭದ ಸಾನಿಧ್ಯವನ್ನು ಬಂಡಿಗಣಿ ನೀಲಮಾನಿಕ ಮಠದ ದಾನೇಶ್ವರ ಶ್ರೀಗಳು ವಹಿಸಿದ್ದರು, ಅದ್ಯಕ್ಷತೆಯನ್ನು ಹಣಮಂತ ಕೊಣ್ಣೂರ ವಹಿಸಿದ್ದರು ಕಾರ್ಯಕ್ರಮದ…
ದೇಶದಲ್ಲಿ ವಕ್ಫ್ ಕಾಯ್ದೆ ಸಂಪೂರ್ಣ ರದ್ದು ಮಾಡಿ ರೈತರನ್ನು ಉಳಿಸಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ವಕ್ಪ್ ಬೋರ್ಡ್ ಕಾಯ್ದೆಯಿಂದ ರೈತರಿಗೆ ಆಗುತ್ತಿರುವ ತೊಂದರೆ ಕುರಿತು ವೀಕ್ಷಿಸಿ ರೈತರು, ಸಾರ್ವಜನಿಕರು, ಸ್ವಾಮೀಜಿಗಳಿಂದ ಮನವಿ ಸ್ವೀಕರಿಸಲು ಆಗಮಿಸಿದ ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಹಾಗೂ ಸಂಸದ ತೇಜಸ್ವಿ ಸೂರ್ಯ ರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮನವಿ ಸಲ್ಲಿಸಲಾಯಿತು.ಈ ವೇಳೆ ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ದೇಶದಲ್ಲಿ ವಕ್ಫ್ ಕಾಯ್ದೆ ಸಂಪೂರ್ಣ ರದ್ದು ಮಾಡಿ ದೇಶದ ರೈತರನ್ನು ಉಳಿಸಬೇಕು ಎಂದು ಆಗ್ರಹಿಸಿದರು.ಈಗಾಗಲೇ ವಿಜಯಪುರದಿಂದ ಆರಂಭವಾದ ಈ ಹೋರಾಟ ರಾಜ್ಯದ 31 ಜಿಲ್ಲೆಗಳಲ್ಲಿ ಹಾಗೂ ದೇಶದ ಎಲ್ಲ ರಾಜ್ಯಗಳಲ್ಲಿ ಕೂಡ ಹಬ್ಬಿಕೊಂಡಿದೆ. ಇದು ಹೀಗೆ ಮುಂದುವರೆದರೆ ದೊಡ್ಡಮಟ್ಟದ ರೈತ ಕ್ರಾಂತಿ ಆಗಲಿದೆ ಎಂದು ಎಚ್ಚರಿಸಿದರು.ಈ ವೇಳೆ ರೈತ ಸಂಘದಉಪಾಧ್ಯಕ್ಷ ವೀರೇಶ್ ಗೊಬ್ಬುರ್, ಜಿಲ್ಲಾ ಸಂಚಾಲಕ, ರಾಮನಗೌಡ ಪಾಟೀಲ್ ಬ್ಯಾಲ್ಯಾಳ ಹಾಗೂ ರಾಜ್ಯ ಯುವ ಘಟಕದ ಸಂಚಾಲಕ ಸಿದ್ಧನಗೌಡ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗ್ರಾಫಿಕ್ ಡಿಸೈನಿಂಗ್ ಕೋರ್ಸ್ಗೆ ಪ್ರವೇಶ ಪಡೆದುಕೊಳ್ಳಲು ನವೆಂಬರ್ ೧೫ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ವಿದ್ಯಾರ್ಥಿನಿಯರು ನೇರವಾಗಿ ವಿಭಾಗದ ಮುಖ್ಯಸ್ಥರನ್ನು ಭೇಟಿ ಮಾಡಿ ಪ್ರವೇಶ ಪಡೆದುಕೊಳ್ಳಬಹುದಾಗಿದೆ.ಆರು ತಿಂಗಳ ಈ ಕೋರ್ಸ್ಗೆ ಪ್ರವೇಶ ಪಡೆದುಕೊಳ್ಳಲು ಪಿಯುಸಿ ಪಾಸಾಗಿರಬೇಕು. ಆರು ತಿಂಗಳ ಈ ಕೋರ್ಸ್ನಲ್ಲಿ ವಿದ್ಯಾರ್ಥಿನಿಯರಿಗೆ ಗ್ರಾಫಿಕ್ ವಿನ್ಯಾಸ ಮತ್ತು ವಿನ್ಯಾಸದ ಅಂಶಗಳ ಬಗ್ಗೆ ತರಬೇತಿ ನೀಡಲಾಗುವುದು. ಅಲ್ಲದೇ ವಿವಿಧ ಗ್ರಾಫಿಕ್ ವಿನ್ಯಾಸದ ಸಾಫ್ಟ್ವೇರ್ಗಳನ್ನು ಪರಿಚಯಿಸುವುದು ಮತ್ತು ವೈವಿಧ್ಯಮಯ ಮುದ್ರಣ ವಿನ್ಯಾಸಗಳನ್ನು ರಚಿಸುವಲ್ಲಿ ಪ್ರಾಯೋಗಿಕ ಅನುಭವವನ್ನು ಒದಗಿಸುವುದು ಹಾಗೂ ವಿಭಾಗದಲ್ಲಿ ಲಭ್ಯವಿರುವ ಮಾಧ್ಯಮ ತಂತ್ರಜ್ಞಾನಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವುದು ಈ ಕೋರ್ಸ್ನ ಉದ್ದೇಶವಾಗಿದೆ.ಈ ಸರ್ಟಿಫಿಕೇಟ್ ಕೋರ್ಸ್ನಲ್ಲಿ ವಿದ್ಯಾರ್ಥಿನಿಯರಿಗೆ ಗ್ರಾಫಿಕ್ಸ್ ವಿನ್ಯಾಸದ ಮೂಲ ತತ್ವಗಳು, ಗ್ರಾಫಿಕ್ಸ್ ವಿನ್ಯಾಸ ಮಾಡಲು ಅಗತ್ಯವಿರುವ ಕಂಪ್ಯೂಟರ್ ಜ್ಞಾನ, ಗ್ರಾಫಿಕ್ಸ್ ವಿನ್ಯಾಸಕ್ಕೆ ಬಳಸುವ ಸಾಫ್ಟ್ವೇರ್ಗಳ ಪರಿಚಯ, ಗ್ರಾಫಿಕ್ಸ್ ವಿನ್ಯಾಸದ ಪ್ರಕ್ರಿಯೆ, ತಂತ್ರಗಳು, ಬಣ್ಣಗಳ ಬಳಕೆ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾರತೀಯ ಜನತಾ ಪಕ್ಷವು ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿ ಸಂರಕ್ಷಣೆ ಮಾಡುವುದಾಗಿ ಹೇಳಿತ್ತು. ಆದರೆ, ಈಗ ಆ ಪಕ್ಷದ ಮುಖಂಡರು ವಕ್ಫ್ ಹೋರಾಟ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಶಾಸಕ ಪ್ರೊ. ರಾಜು ಆಲಗೂರ ವಾಗ್ದಾಳಿ ನಡೆಸಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ವಕ್ಫ್ ಆಸ್ತಿ ಸಂರಕ್ಷಣೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಪ್ರಶ್ನೆ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಈಗ ವಕ್ಫ್ ಹೋರಾಟದಲ್ಲಿ ಭಾಗಿಯಾಗುವ ಯಾವ ನೈತಿಕತೆಯೂ ಇಲ್ಲ. ವಕ್ಪ್ ಆಸ್ತಿ ಸಂರಕ್ಷಣೆ ಮತ್ತು ಅತೀಕ್ರಮಣ ತೆರವು ಸೇರಿದಂತೆ ಅನೇಕ ರೀತಿಯಲ್ಲಿ ವಕ್ಫ್ ಗೆ ಪೂರಕವಾಗಿ ಶೋಭಾ ಕರಂದ್ಲಾಜೆ ಅವರು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರ ಇಲಾಖೆಯ ಸಚಿವರಿಗೆ ಪ್ರಶ್ನೆಗಳನ್ನು ಕೇಳಿದ್ದರು. ಈಗ ವಕ್ಫ್ ಕಾಯಿದೆ ರದ್ದುಗೊಳಿಸುವ ಹೋರಾಟದಲ್ಲಿ ಭಾಗಿಯಾಗಿರುವುದು ಅವರಿಗೆ ಶೋಭೆ ತರುವ ವಿಷಯವಲ್ಲ ಎಂದು ಹೇಳಿದರು.ರೈತರ ಜಮೀನು ಯಾವ ಕಾರಣಕ್ಕೂ ವಕ್ಫ ಗೆ ಹೋಗಲು ಬಿಡುವುದಿಲ್ಲ ಎಂದು ನಾವು ಸಹ ಬದ್ದತೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ೧ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ೨೦೨೪-೨೫ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್-೧೦ ರವರೆಗೆ ವಿಸ್ತರಿಸಲಾಗಿದೆ.ಅರ್ಹರು ಅರ್ಜಿಯನ್ನು ಆನ್ಲೈನ್ www.ssp.postmatric.karnataka.gov.in ಮೂಲಕ ನವೆಂಬರ್,೧೦ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೨೦/೧೧೦/೧ಕೆವಿ ಬಸವನ ಬಾಗೇವಾಡಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ೧೧ಕೆವಿ ಬ್ಯಾಂಕ್ ೨ ಮೇಲೆ ಬರುವ ೧೧ಕೆವಿ ಮಾರ್ಗಗಳ ಬ್ರೇಕರ್ ಬದಲಿಸುವ ಕಾರ್ಯವನ್ನು ಕೈಗೊಳ್ಳುವುದರಿಂದ ಸದರಿ ಬ್ಯಾಂಕ್ ೧ ಮತ್ತು ೨ ಮೇಲೆ ಬರುವ ೧೧ಕೆವಿ ಕರಿಹಾಳ ಐಪಿ, ನಾಗೂರ ಐಪಿ, ಟಕ್ಕಳಕಿ ಐಪಿ, ಜೈನಾಪುರ ಐಪಿ ಮತ್ತು ಡಬಡಬಿ ಐಪಿ ಮಾರ್ಗಗಳ ಮೇಲೆ ದಿನಾಂಕ ೮-೧೧-೨೦೨೪ ರಿಂದ ೯-೧೧-೨೦೨೪ರವರೆಗೆ ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಬಸವನ ಬಾಗೇವಾಡಿ ಹೆಸ್ಕಾಂ ನ ಕಾರ್ಯನಿರ್ವಾಹಕ ಅಭಿಯಂತರ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾನ್ಯ ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ.ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು.ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:೧೮೦೦-೪೨೫-೯೩೩೯ ಅಥವಾ ಸಹಾಯವಾಣಿ ೧೯೬೭ಕ್ಕೆ ಬೆಳಿಗ್ಗೆ ೧೦.೦೦ ಗಂಟೆಯಿಂದ ಸಂಜೆ ೫.೩೦ ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರಾದೇಶಿಕ ಕೇಂದ್ರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ೨೦೨೪-೨೫ನೇ ಸಾಲಿನ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸಗಳಿಗೆ ಪ್ರವೇಶ ಪಡೆಯಲು ನವೆಂಬರ್ ೧೫ ಕೊನೆಯ ದಿನವಾಗಿದೆ.ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೯೪೮೩೬೨೮೨೬೭, ೯೪೮೩೯೨೦೦೬೫, ೭೮೯೨೫೫೦೦೫೩ ಹಾಗೂ ೯೧೧೦೨೫೬೭೩೮ ಮತ್ತು ನಗರದ ಆಕಾಶವಾಣಿ ಕೇಂದ್ರದ ಎದುರಿಗೆ, ವಿ.ಎಸ್.ಜಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
