Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ನಾನು ಯಾವುದೇ ಸಾರ್ವಜನಿಕ ಆಸ್ತಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿಲ್ಲ. ಹಾಗೊಂದು ವೇಳೆ ಮಾಡಿಕೊಂಡಿದ್ದೆ ಆಗಿದ್ದರೆ ಪಟ್ಟಣದ ಅತಿಕ್ರಮಿತ ಜಾಗೆಯನ್ನು ತೆರವುಗೊಳಿಸುವ ಕಾರ್ಯ ನನ್ನಿಂದ ಮಾಡಲಾಗುತ್ತಿರಲಿಲ್ಲ. ನಾನೇ ತಪ್ಪಿತಸ್ಥನಾಗಿದ್ದರೆ ಈ ಕಾರ್ಯ ಮಾಡಲು ನನಗೆ ಧೈರ್ಯವಾದರೂ ಎಲ್ಲಿಂದ ಬರುತ್ತಿತ್ತು? ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು.ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿನಾಕಾರಣ ರಾಜಕೀಯ ಪ್ರೇರಿತವಾಗಿ ಯಾವುದೇ ಆರೋಪ ಮಾಡುವುದು ಸರಿಯಲ್ಲ. ಪುರಸಭೆಯ ನನ್ನ ಕಾರ್ಯವೈಖರಿಯ ಕುರಿತಾಗಿ ಪ್ರಶ್ನಿಸಿದರೆ ನಾನು ಅದಕ್ಕೆ ಉತ್ತರ ಕೊಡಬಲ್ಲೆ. ಅದನ್ನು ಬಿಟ್ಟು ನನ್ನ ವೈಯಕ್ತಿಕ ಹಾಗೂ ಕುಟುಂಬದ ವಿರುದ್ಧ ಆರೋಪ ಮಾಡುವುದು ಎಷ್ಟು ಸರಿ? ನನ್ನ ವಿರುದ್ಧ ದಿನಕ್ಕೊಂದು ಆರೋಪ, ಸಿಬ್ಬಂದಿಗಳಿಗೆ ಕಿರುಕುಳ ಕೊಡುವುದಲ್ಲದೇ, ಯಾವುದೇ ಸಾಕ್ಷಿ ಪುರಾವೆಗಳಿಲ್ಲದೇ ನನ್ನ ವಿರುದ್ಧ ಪ್ರಕರಣ ದಾಖಲಿಸುವ ಹಾಗೂ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.ಪಟ್ಟಣದ ೮೫೩/*/೧ರ ಕ್ಷೇತ್ರದ ೪ಎಕರೆ ೬ಗುಂಟೆ ಜಮೀನನ್ನು ಕಾನೂನಿ…

Read More

ಸಾರ್ವಜನಿಕರಲ್ಲಿ ಪರ-ವಿರೋಧದ ಚರ್ಚೆ | ಆಡಳಿತ ಪಕ್ಷ ಮತ್ತು ವಿಪಕ್ಷಗಳ ಕೆಸರೆರಚಾಟ | ಪರಸ್ಪರರ ಮೇಲೆ ಗೂಬೆ ಕೂರಿಸುವ ಕಾರ್ಯ ಉದಯರಶ್ಮಿ ದಿನಪತ್ರಿಕೆ ವರದಿ: ಮಹಾಂತೇಶ ನೂಲಾನವರಸಿಂದಗಿ: ವಕ್ಪ್ ಆಸ್ತಿ ವಿವಾದ ರಾಜ್ಯಾದ್ಯಂತ ಜನಮನದಲ್ಲಿ ಆಕ್ರೋಶ, ಆತಂಕ ಉಂಟುಮಾಡಿದೆ. ಜನ ಸಾಮಾನ್ಯರ, ರೈತರ, ಮಠಗಳ, ಗೋಮಾಳಗಳ, ದೇವಸ್ಥಾನಗಳ, ಬಯಲು ಪ್ರದೇಶಗಳ ಆಸ್ತಿದಾರರಿಗೆ ಅವರಿಗರಿವಿಗಿಲ್ಲದೇ ಪಹಣಿ ಉತಾರಿಯ ಕಾಲಂ ೧೧ರಲ್ಲಿ ವಕ್ಪ್ ಆಸ್ತಿ ಎಂದು ನಮೂದಿಸಲ್ಪಟ್ಟಿದ್ದು ಆತಂಕಕ್ಕೀಡು ಮಾಡಿದೆ. ಇದರ ಪರ ಹಾಗೂ ವಿರೋಧದ ಮಾತುಗಳು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಕೆಸರೆರಚಾಟ, ಒಬ್ಬರು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಕಾರ್ಯ ನಿರಂತರ ನಡೆದಿದೆ. ಇದರ ಮಧ್ಯ ಮಠಾಧೀಶರ ನೇತೃತ್ವದಲ್ಲಿ ಭಾರತೀಯ ಕಿನಾಸ್ ಸಂಘ, ರೈತ ಸಂಘಗಳು ರೈತರ ಪರವಾಗಿ ಬ್ಯಾಟಿಂಗ್ ನಡೆಸಿವೆ. ಮತ್ತೊಂದೆಡೆ ಕೆಲವು ಮುಸ್ಲಿಂ ನಾಯಕರು ಪತ್ರಿಕಾಗೋಷ್ಠಿ, ಸಭೆಗಳನ್ನು ಆಯೋಜಿಸಿ ವಕ್ಪ್ ಮಂಡಳಿಯು ಹಕ್ಕು ಸಾಧಿಸಲು ನೊಟೀಸ್ ನೀಡಿದ ಆಸ್ತಿಯ ಪರಭಾರೆಯ ಕುರಿತು ಸಮಜಾಯಿಷಿ ನೀಡಿ ತೇಪೆ ಹಚ್ಚಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವ್ಯಕ್ತಿಯ ಸನ್ನಡತೆಯನ್ನು ಜಾರಿ ತರುವುದೇ ಭಗವದ್ಗೀತೆ. ದಾರಿ ತಪ್ಪುವಂತಹ ಯೋಚನಾ ಲಹರಿಯನ್ನು ಸರಿಪಡಿಸಲು ಭಗವದ್ಗೀತೆ ಅತ್ಯವಶ್ಯಕ ಎಂದು ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಪ್ರೇರಣಾ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಶಿರಸಿಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ, ಸಿಂದಗಿ ಭಗವದ್ಗೀತಾ ಅಭಿಯಾನ ಸಮಿತಿ ಹಾಗೂ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ೨೦೨೪-ಭಗವದ್ಗೀತಾ ಅಭಿಯಾನ ಉದ್ಘಾಟನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಈ ವೇಳೆ ಮಾಜಿ ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿ, ಮಕ್ಕಳಲ್ಲಿ ಸ್ಪಷ್ಟ ಉಚ್ಚಾರಣೆ ಬರಬೇಕೆಂದರೆ ಭಗವದ್ಗೀತೆಯನ್ನು ಓದಬೇಕು. ವಿದ್ಯಾರ್ಥಿಗಳು ಶ್ಲೋಕ. ಪಠಣ ಲಯವಾಗಿ ಅಳವಡಿಸಿಕೊಳ್ಳಬೇಕು. ವಚನದೊಂದಿಗೆ ಮಕ್ಕಳು ಭಗವದ್ಗೀತೆಯನ್ನು ಓದಿ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.ಇದೇ ಸಂದರ್ಭದಲ್ಲಿ ಸಿಂದಗಿ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಅಧ್ಯಕ್ಷ ಶ್ರೀಶೈಲಗೌಡ…

Read More

ರೈತರಿಗೆ ಹಣ ಪಾವತಿಯಲ್ಲಿ ವಿಳಂಬ ಮಾಡುವಂತಿಲ್ಲ | ಕಾರ್ಖಾನೆಗಳ ಮೇಲೆ ಕಠಿಣ ಕ್ರಮದ ಎಚ್ಚರಿಕೆ | ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿರುವ ಎಲ್ಲ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಹಂಗಾಮಿಗೆ ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು. ಬಸವೇಶ್ವರ ಸಕ್ಕರೆ ಕಾರ್ಖಾನೆ ಕಬ್ಬು ಒದಗಿಸಿದ ರೈತರಿಗೆ ಬಿಲ್ಲು ಪಾವತಿಯಲ್ಲಿ ವಿಳಂಬ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕಬ್ಬು ನುರಿಸುವುದು ಸೇರಿದಂತೆ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಬಸವೇಶ್ವರ ಸಕ್ಕರೆ ಕಾರ್ಖಾನೆಗೆ ಕಬ್ಬು ನುರಿಸುವುದು ತಡೆಹಿಡಿಯಲಾಗಿದೆ ಎಂದು ತಿಳಿಸಿದ ಅವರು, ಉಳಿದಂತೆ ಎಲ್ಲ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯ ಆರಂಭಿಸಿ, ಕಬ್ಬು ಒದಗಿಸಿದ ರೈತರಿಗೆ ಯಾವುದೇ ವಿಳಂಬ ಮಾಡದೇ ನಿಗದಿತ ೧೪…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ವಿವಿಧ ಕಾರಣಗಳಿಂದ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ವೇಳಾಪಟ್ಟಿಯನ್ನು ನಿಗದಿಪಡಿಸಿದ್ದಾರೆ.ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯತಿಯ ಅರಳದಿನ್ನಿ ಹಾಗೂ ಚಿಮ್ಮಲಗಿ ಗ್ರಾಮ ಪಂಚಾಯತಿಯ ಚಿಮ್ಮಲಗಿ ಪು.ಕೆ. ಕ್ಷೇತ್ರಕ್ಕೆ, ಇಂಡಿ ತಾಲೂಕಿನ ಸಾಲೋಟಗಿ ಹಾಗೂ ಖೇಡಗಿ ಗ್ರಾಮ ಪಂಚಾಯತ್, ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮ ಪಂಚಾಯಿತಿಯ ನಾಗರಾಳ ಹುಲಿ, ಮುತ್ತಗಿ ಹಾಗೂ ಬ್ಯಾಕೋಡ ಗ್ರಾಮ ಪಂಚಾಯತಿಯ ಜಯವಾಡಗಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಲಾಗಿದೆ.ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ ಗ್ರಾಮ ಪಂಚಾಯತಿಯ ಕಾತ್ರಾಳ ಕ್ಷೇತ್ರಕ್ಕೆ, ವಿಜಯಪುರ ತಾಲೂಕಿನ ಕನ್ನೂರ, ನಾಗಠಾಣ, ಜುಮನಾಳ ಹಾಗೂ ಹೊನಗನಹಳ್ಳಿ ಗ್ರಾಮ ಪಂಚಾಯತಿಗೆ, ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯತಿಗೆ, ತಾಳಿಕೋಟೆ ತಾಲೂಕಿನ ಹಿರೂರ ಗ್ರಾಮ ಪಂಚಾಯತಿಯ ತಮದಡ್ಡಿ, ಚಡಚಣ ತಾಲೂಕಿನ ಲೋಣಿ ಬಿ.ಕೆ. ಮತ್ತು ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪ ಚುನಾವಣೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ತಾಳಿಕೋಟೆ ತಾಲೂಕಿನ ಸಾಸನೂರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ಮಾಡಿ, ಕಾಮಗಾರಿಗಳನ್ನು ವ್ಯಸ್ಥಿತವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.ಸಾಸನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಬನೂರ ಗ್ರಾಮಕ್ಕೆ ಜಿ.ಪಂ ಭೇಟಿ ನೀಡಿದ ಅವರು, ಗ್ರಾಮದ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಕುಡಿಯುವ ನೀರು, ರಸ್ತೆ, ಸ್ವಚ್ಚತೆ ಹಾಗೂ ಚರಂಡಿ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗ್ರಾಮದ ಕೊಳಚೆ ನೀರು ಹರಿದು ಹೋಗುವತ್ತ ಚರಂಡಿ ವ್ಯವಸ್ಥೆ ಮತ್ತು ಸಿ.ಸಿ ರಸ್ತೆಗಳನ್ನು ಮಹಾತ್ಮಗಾಂಧಿ ನರೇಗಾ ಯೋಜನೆ ಮತ್ತು ೧೫ನೇ ಹಣಕಾಸು ಯೋಜನೆಗಳಡಿ ಕ್ರಿಯಾ ಯೊಜನೆ ಅನುಮೋದನೆ ಪಡೆದು, ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ತಾಂತ್ರಿಕ ಸಿಬ್ಬಂದಿಗೆ ಸೂಚಿಸಿದರು.ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಸಂವಾದ ನಡೆಸಿ, ಶಾಲೆಯಲ್ಲಿ ಜಲ ಜೀವನ ಮಿನ್ ಯೋಜನೆಯಡಿ ವಿದ್ಯಾರ್ಥಿಗಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರದ ಓಐಒ-(National Level Institutional Monitor)ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಸೂಚನೆಯಂತೆ ಗಾಂಧಿ ಗ್ರಾಮ ರೂರಲ್ ಇನ್ಸ್ಟಿಟ್ಯೂಟ್ ತಮಿಳುನಾಡು ಅಧಿಕಾರಿಗಳಾದ ಡಾ ಎ.ಆರ್.ಮಣಿ ಹಾಗೂ ಇ.ಆರ್. ಕೆ ರೋಸಿವ್ ಇವರು ನ.೬ರಂದು ವಿಜಯಪುರ ಜಿಲ್ಲೆಗೆ ಭೇಟಿ ನೀಡಿ, ವಿಜಯಪುರ ಜಿಲ್ಲೆಯ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು.ವಿಜಯಪುರ ಜಿಲ್ಲೆಯ ೦೪ ತಾಲ್ಲೂಕುಗಳಾದ ಚಡಚಣ, ಬಸವನ ಬಾಗೇವಾಡಿ, ಇಂಡಿ ಹಾಗೂ ದೇವರ ಹಿಪ್ಪರಗಿ ತಾಲ್ಲೂಕುಗಳಲ್ಲಿ ಆಯ್ಕೆ ಮಾಡಲಾದ ೧೦ ವಿವಿಧ ಗ್ರಾಮ ಪಂಚಾಯತಿಗಳಿಗೆ ದಿನಾಂಕ: ೦೭-೧೧-೨೦೨೪ ರಿಂದ ೧೧-೧೧-೨೦೨೪ರ ವರೆಗೆ ಭೇಟಿ ನೀಡಲಿದ್ದು, ಕೇಂದ್ರ ಪ್ರಾಯೋಜಕತ್ವ ಯೋಜನೆಗಳ ಅನುಷ್ಠಾನ ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಓಖಐಒ), ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ (Pಒಂಙ-ಉ), ನ್ಯಾಷನಲ್ ಸೀಶಿಯಲ್ ಅಸಿಸ್ಟನ್ಸ್ ಪ್ರೊಗ್ರಾಮ್ ( NSAP), SAGY, PMKSY, DILRMP, DDU-GKY RSETI/RUDSET, SVAMITVAಯೋಜನೆಗಳು, ಕೃಷಿ ಇಲಾಖೆಯ ಅರ್ಹ ಫಲಾನುಭವಿಗಳ ಜೊತೆಗೆ…

Read More

ವಿಧಾನಮಂಡಲದ ಎಸ್ಸಿ-ಎಸ್ಟಿ ಸಮಿತಿಯಿಂದ ಜಿಲ್ಲೆಯ ಪ್ರಗತಿ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ನ.೧೫ರಂದು ಬಾಗಲಕೋಟೆ ಜಿಲ್ಲೆಗೆ ಆಗಮಿಸಿ, ಅಂದು ಬೆಳಿಗ್ಗೆ ವಿಜಯಪುರ ಜಿಲ್ಲೆಯಲ್ಲಿ ಎಸ್ಸಿ-ಎಸ್ಟಿ ಸಮುದಾಯದವರ ಅಭಿವೃದ್ದಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆ-ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮ-ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಮೂರು ದಿನಗಳೊಳಗಾಗಿ ಸಲ್ಲಿಸಬೇಕು. ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ವಿಧಾನಮಂಡಲ ಸಮಿತಿಯು ಬೆಳಗಾವಿ ವಿಭಾಗದಲ್ಲಿ ಅಧ್ಯಯನ ಪ್ರವಾಸ ಕೈಗೊಂಡು ಬಾಗಲಕೋಟೆಯಲ್ಲಿ ವಿಜಯಪುರ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಲಿದೆ. ಈ ಸಭೆಯಲ್ಲಿ ಇಲಾಖೆಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಾಮಾನ್ಯ ಕಾರ್ಯಕ್ರಮಗಳು ಮತ್ತು ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಳಡಿಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯವರ ಕಲ್ಯಾಣ ಕಾರ್ಯಕ್ರಮಗಳು…

Read More

ವಕ್ಫ್ ಆಸ್ತಿ ವಿವಾದ | ಶಾಸಕ ಬಸನಗೌಡ ಪಾಟೀಲ ನೇತೃತ್ವದ ಸತ್ಯಾಗ್ರಹ | 4ನೇ ದಿನಕ್ಕೆ ಕಾಲಿರಿಸಿದ ಆಹೋರಾತ್ರಿ ಧರಣಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾನೂನು ಬಾಹಿರವಾಗಿ ರೈತರ, ಸಂಘ-ಸಂಸ್ಥೆಗಳ, ಮಠ ಮಾನ್ಯಗಳ ಜಮೀನು, ಅಲ್ಲದೇ ಸರ್ಕಾರಿ ಜಮೀನು, ಇತ್ಯಾದಿ ಆಸ್ತಿಗಳ ಉತಾರೆಯಲ್ಲಿ ವಕ್ಪ್ ಆಸ್ತಿ ಎಂದು ಎಂಟ್ರಿ ಮಾಡಿರುವುದನ್ನು ತಕ್ಷಣ ತೆಗೆದು ಹಾಕುವುದು, ವಕ್ಫ್ ಕಾಯ್ದೆಯನ್ನೇ ದೇಶದಿಂದ ಕೊತ್ತೊಗೆಯುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಹೊರಾಂಗಣದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿರಿಸಿದೆ.3ನೇ ದಿನವಾದ ಬುಧವಾರದ ಧರಣಿಯಲ್ಲಿ ಭಾರತೀಯ ದ್ರಾವಿಡ ದಲಿತ ಸೇನೆಯ ರಾಜ್ಯಾಧ್ಯಕ್ಷ ರಮೇಶ ಚಲವಾದಿ ನೇತೃತ್ವದಲ್ಲಿ ಪದಾಧಿಕಾರಿಗಳು ಆಗಮಿಸಿ ಬೆಂಬಲ ನೀಡಿದರು. ಅದೇ ರೀತಿ ಡಾ.ಬಿ.ಆರ್.ಅಂಬೇಡ್ಕರ್ ಯುವ ಬ್ರಿಗೇಡ್ ಇಬ್ರಾಹಿಂಪುರ ಗೇಟ್ ವಿಜಯಪುರ ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಮಾರುತಿ ಬೂದಿಹಾಳ ನೇತೃತ್ವದಲ್ಲಿ ಆಗಮಿಸಿ ಬೆಂಬಲ ಸೂಚಿಸಿದರು. ವಿಠ್ಠಲ ರುಕ್ಮಿಣಿ ದೇವಸ್ಥಾನ ಅಭಿವೃದ್ಧಿ ಸಮಿತಿ…

Read More

ಕೋರ್ ಕಮಿಟಿ ಸಭೆಯಲ್ಲಿ ಡಾ.ಮಹಾಂತೇಶ ಬಿರಾದಾರ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷೋಥಾನ ಹೆರಿಜೇಟ್ ರನ್ ಈ ಬಾರಿ ಛಾಯಾಚಿತ್ರ ಸ್ಪರ್ಧೆ ಆಯೋಸಲು ನಿರ್ಧರಿಸಲಾಗಿದೆ.ಬುಧವಾರ ನಗರದಲ್ಲಿ ನಡೆದ ವೃಕ್ಷೋಥಾನ ಹೆರಿಟೇಜ್ ರನ್-2024 ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಡಾ. ಮಹಾಂತೇಶ ಬಿರಾದಾರ ಕಳೆದ ಬಾರಿಗಿಂತಲೂ ಈ ಬಾರಿ ಕಾರ್ಯಕ್ರಮವನ್ನು ಅತ್ಯುತ್ತಮವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಜಲ, ವೃಕ್ಷ, ಶಿಕ್ಷಣ, ಪ್ರಾಚೀನ ಸ್ಮಾರಕ ಸಂರಕ್ಷಣೆ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರ ಜೊತೆಗೆ ಓಟ ನಡೆಯುವ ದಿನ ಅತ್ತುತ್ತಮ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಲಾಗುವುದು. ಈ ಸ್ಪರ್ಧೆಯ ಕುರಿತು ಹೆಚ್ಚಿನ ಮಾಹಿತಿಯನ್ನು ನಂತರ ತಿಳಿಸಲಾಗುವುದು ಎಂದು ಹೇಳಿದರು.ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಎಲ್ಲ ಕಡೆಯಿಂದಲೂ ಓಟಗಾರರು ಫೋನ್ ಮೂಲಕ ಮತ್ತು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ. ವಿಶ್ವದ ಏಳು ಖ್ಯಾತ ಮ್ಯಾರಾಥಾನ್ ಗಳಲ್ಲಿ ಪಾಲ್ಗೊಂಡಿರುವ ಕ್ರೀಡಾಪಟುಗಳೂ ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ. ನಮ್ಮದು ಪರಿಸರ…

Read More