Author: editor.udayarashmi@gmail.com

೩೪ ಅಂಗನವಾಡಿಗಳನ್ನು ಆಕರ್ಷಕ ಅಂಗನವಾಡಿ ಕೇಂದ್ರಗಳಾಗಿ ಅಭಿವೃದ್ಧಿ | ಜಿಪಂ ಸಿಇಓ ರಿಷಿ ಆನಂದ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಮಾದರಿ ಅಂಗನವಾಡಿಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ೩೪ ಅಂಗನವಾಡಿಗಳನ್ನು ಮಾದರಿ ಹಾಗೂ ಆಕರ್ಷಕ ಅಂಗನವಾಡಿ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಗ್ರಾಮೀಣ ಮಟ್ಟದ ಮಕ್ಕಳ ಶೈಕ್ಷಣಿಕ ಜೀವನದ ಅಡಿಪಾಯವು ಅತ್ಯಂತ ಸದೃಢವಾಗುವುದರ ಜೊತೆಗೆ ಮಕ್ಕಳ ಹಾಜರಾತಿಯ ನಿರಂತರತೆಯನ್ನು ಕಾಯ್ದುಕೊಂಡು ಮಕ್ಕಳ ಸ್ನೇಹಿ ಕೇಂದ್ರಗಳನ್ನಾಗಿಸುವುದಾಗಿದೆ. ಆಟೋಟಗಳಲ್ಲಿ ಪ್ರೋತ್ಸಾಹ ದೊರೆತು ದೈಹಿಕ ಹಾಗೂ ಮಾನಸಿಕ ಸದೃಢತೆ ಬೆಳೆಸುವುದಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಎಲ್ಲಾ ೩೪ ಅಂಗನವಾಡಿ ಕೇಂದ್ರಗಳಿಗೆ ಕಡ್ಡಾಯವಾಗಿ ಬಾಲ ಸ್ನೇಹಿ ಪೇಂಟಿಂಗ್, ಬಯೋಫೆನ್ಸಿಂಗ್, ಪೌಷ್ಟಿಕ ಕೈತೋಟ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ…

Read More

ಗುರು-ಶಿಷ್ಯ ಪರಂಪರೆಯ ಬೆಸುಗೆ | ಮತ್ತಿಷ್ಟು ನವತನದ ಚೈತನ್ಯ | ದೃಶ್ಯಕಾವ್ಯ ಪುಷ್ಟಿಕರವಾಗಿ ಸೃಷ್ಟಿಸಿದ ಕಾಣಿಕೆ ಉದಯರಶ್ಮಿ ದಿನಪತ್ರಿಕೆ ವರದಿ: ಗುಲಾಬಚಂದ ಆರ್.ಜಾಧವಚಿಕ್ಕಪಡಸಲಗಿ: ಅಕ್ಷರ ಕಲಿಸಿದ ಗುರುವಿಗೆ ಶಿಷ್ಯ ಬಳಗದ ಸಮೂಹ ಅರಮನೆಯೊಂದನ್ನು ಕಾಣಿಕೆ ರೂಪದಲ್ಲಿ ಕೊಡುಗೆಯಾಗಿ ನೀಡಿ ಔದಾರ್ಯತೆ ಮೆರೆದಿದೆ. ಅದು ಅಂತಿಂಥಹ ಕಾಣಿಕೆ ಅಲ್ಲ! ಮಹಾರಾಜರ ನಾಮಾಂಕಿತದಲ್ಲಿರುವ ಭವ್ಯ ಅರಮನೆ ಕೊಡುಗೆ ಎಂಬುದು ಗಮನಾರ್ಹ !ಹೌದು! ಈ ಐತಿಹ್ಯಯುಳ್ಳ ಅರಮನೆಯನ್ನೇ ತಮ್ಮ ಮೆಚ್ಚಿನ ಗುರುವಿಗೆ ಕಾಣಿಕೆಯಾಗಿ ನೀಡಿದವರು ಹಳೆಯ ವಿದ್ಯಾರ್ಥಿಗಳು ಎಂಬುದು ಇಲ್ಲಿ ಸತ್ಯ! ಯಾಮಾರಿಸುವ ಕಾಲಘಟ್ಟಿನ ಈ ನವರಂಗಿನ ದುನಿಯಾದಲ್ಲಿ ಅರಮನೆ ಕಾಣಿಕೆ ನೀಡುವರು ಉಂಟೇ? ನಂಬಲೇ ಬೇಕು ! ಗುರು-ಶಿಷ್ಯರ ಪರಂಪರೆಯ ಬೆಸುಗೆಯಲ್ಲಿ ಈ ಪ್ರೀತಿಯ ಅರಮನೆ ಕಾಣಿಕೆ ರೂಪದಲ್ಲಿ ಮೈದೇಳಿದೆ! ಶಹಜಾನ್ ಸವಿನೆನಪಿಗಾಗಿ ತಾಜಮಹಲ್ ಕಟ್ಟಿಸಿದವರ ಸ್ಪೂತಿ೯ಯದುರಿಗಿರುವಾಗ ನಾಲ್ಕಕ್ಷರ ಕಲಿಸಿದ ಗುರುವಿಗೆ ಅರಮನೆಯನ್ನೇ ಕೊಡುಗೆಯಾಗಿ ನೀಡಿದ್ದಾರೆ ಎಂಬುದರಲ್ಲಿ ಅಚ್ಚರಿಯೆನ್ನಿಲ್ಲ! ಪ್ರೀತಿ ಮಾಯೆ- ಅಭಿಮಾನ ಛಾಯೆ ಉಮ್ಮಳಿಸಿದೆ ಇಲ್ಲಿ!ಸಹೃದಯತೆಯ ಪರಮ ಪವಿತ್ರ “ಗುರು-ಶಿಷ್ಯ” ಪರಂಪರೆಯ ಬಾಂಧವ್ಯಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂಗವಿಕಲ ನೌಕರರ ವಿವಿಧ ಬೇಡಿಕೆ ಈಡೆರಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರಿಗೆ ಅಂಗವಿಕಲ ನೌಕರ ಸಂಘದಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಮಾತನಾಡಿ, ರಾಜ್ಯದ ಏಳನೇ ವೇತನ ಆಯೋಗದ ಶಿಫಾರಸ್ಸಿನಂತೆ ಶೇ. 6ರಷ್ಟು (ರಾಜ್ಯ ಸರ್ಕಾರಿ ಅಂಗವಿಕಲ ನೌಕರರಿಗೆ) ಪ್ರಯಾಣ ಭತ್ಯೆಯ ಆದೇಶವನ್ನು ಸರ್ಕಾರವು ಕೂಡಲೇ ಹೊರಡಿಸುವುದು. ಅಂಗವಿಕಲ ಸರ್ಕಾರಿ ನೌಕರರಿಗೆ ವೇತನ ಆಯೋಗ ನೀಡಿದ ಎಲ್ಲಾ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೊಳಿಸುವುದು. ಸರ್ವೋಚ್ಛ ನ್ಯಾಯಾಲಯದ ತೀರ್ಪಿನಂತೆ ಅಂಗವಿಕಲ ನೌಕರರಿಗೆ ಕೇಂದ್ರ ಸರ್ಕಾರವು ಡಿಸೆಂಬರ್ 28, 2023ರಂದು ಎ, ಬಿ, ಸಿ, ಮತ್ತು ಡಿ ವೃಂದದ ಹುದ್ದೆಗಳಿಗೆ ಬಡ್ತಿಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದೆ. ಅದರಂತೆ ಕರ್ನಾಟಕ ಸರ್ಕಾರವು ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಮಾತ್ರ ಬಡ್ತಿಯಲ್ಲಿ ಮೀಸಲಾತಿ ನೀಡಿರುತ್ತದೆ. ಅದೇ ರೀತಿಯಾಗಿ ಎ ಮತ್ತು ಬಿ ವೃಂದದ ಹುದ್ದೆಗಳಿಗೂ ಬಡ್ತಿಯಲ್ಲಿ ಮೀಸಲಾತಿಯನ್ನು ಕಲ್ಪಿಸಿ ಶೀಘ್ರವಾಗಿ ಆದೇಶವನ್ನು…

Read More

ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಅನಿರ್ದಿಷ್ಟಾವಧಿ ಧರಣಿ | ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಜಿಗಜಿಣಗಿ ಭಾಗಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾನೂನು ಬಾಹಿರವಾಗಿ ರೈತರ, ಸಂಘ-ಸಂಸ್ಥೆಗಳ, ಮಠ ಮಾನ್ಯಗಳ ಜಮೀನು, ಅಲ್ಲದೇ ಸರ್ಕಾರಿ ಜಮೀನು, ಇತ್ಯಾದಿ ಆಸ್ತಿಗಳ ಉತಾರೆಯಲ್ಲಿ ವಕ್ಪ್ ಆಸ್ತಿ ಎಂದು ಎಂಟ್ರಿ ಮಾಡಿರುವುದನ್ನು ತಕ್ಷಣ ತೆಗೆದು ಹಾಕುವುದು, ವಕ್ಫ್ ಕಾಯ್ದೆಯನ್ನೇ ದೇಶದಿಂದ ಕೊತ್ತೊಗೆಯುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಹೊರಾಂಗಣದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ 3ನೇ ದಿನಕ್ಕೆ ಕಾಲಿರಿಸಿದ್ದು, ಮಂಗಳವಾರ ಜಿಲ್ಲೆಯ ವಿವಿಧ ಗ್ರಾಮಗಳ ರೈತರು, ವಿವಿಧ ಸಮುದಾಯದವರು, ಸಮಘ-ಸಂಸ್ಥೆಯವರು ಬೆಂಬಲ ವ್ಯಕ್ತಪಡಿಸಿದರು.ಜಿಲ್ಲೆಯ ವಿವಿಧ ಭಾಗಗಳಿಂದ ಧರಣಿ ಸ್ಥಳಕ್ಕೆ ತಂಡೋಪ ತಂಡವಾಗಿ ಆಗಮಿಸಿ, ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ರಾಜ್ಯ ಸರ್ಕಾರ ರೈತರ ಜಮೀನನ್ನು ಕಬಳಿಸುವ ಹುನ್ನಾರ ನಡೆಸಿದ್ದು, ಯಾವುದೇ ಕಾರಣಕ್ಕೂ ನಾವು ಅವಕಾಶ ನೀಡುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದರು.ವಿವಿಧ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರಸಕ್ತ ಸಾಲಿನ (೨೦೨೪-೨೫) ಸ್ನಾತಕೋತ್ತರ ಮತ್ತು ವ್ಯಾಲ್ಯು ಆಡೆಡ್ ಡಿಪ್ಲೋಮಾ/ಅಡ್ವಾನ್ಸ್ ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಖಾಲಿ ಉಳಿದ ಸೀಟುಗಳ ಭರ್ತಿಗಾಗಿ ನವೆಂಬರ್ ೧೫ರ ವರೆಗೆ ಪ್ರವೇಶಾತಿ ಪಡೆಯಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಅವರು ತಿಳಿಸಿದ್ದಾರೆ.ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮಹಿಳಾ ಅಧ್ಯಯನ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಸಮಾಜ ಕಾರ್ಯ, ಎಂ.ಎಸ್‌ಸಿ ಇನ್ ಬಯೋಇನ್ಫರ‍್ಮೆಟಿಕ್ಸ್, ಬಯೋಟೆಕ್ನಾಲಜಿ, ಭೌತಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಸಂಖ್ಯಾಶಾಸ್ತç, ಆಹಾರ ಸಂಸ್ಕರಣೆ ಮತ್ತು ಪೋಷಣೆ, ಔಷಧೀಯ ರಸಾಯನಶಾಸ್ತ್ರ, ಮತ್ತು ಎಂಎಡ್, ಎಂಪಿಎಡ್, ಬಿಪಿಎಡ್, ಸಂಗೀತ ವಿಷಯಗಳ ಸ್ನಾತಕೋತ್ತರ ಕೋರ್ಸ್ಗಳಿಗೆ ಮತ್ತು ಪಿಜಿಡಿಸಿಯಲ್ಲಿ ಸೀಟುಗಳು ಲಭ್ಯವಿವೆ. ನವೆಂಬರ್ ೧೫ರ ವರೆಗೆ ಈ ಕೋರ್ಸ್ಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು.ಈ ಮೇಲೆ ಹೇಳಿರುವ ಮಹಿಳಾ ವಿಶ್ವವಿದ್ಯಾನಿಲಯದ ಯಾವುದೇ ವಿಭಾಗಗಳಲ್ಲಿ ಪ್ರವೇಶ ಪಡೆಯಲು ಈಗಾಗಲೇ ಯುಯುಸಿಎಂಎಸ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿಯ ಜಿಲ್ಲೆಯ ೧೩ ಗ್ರಾಮಗಳಲ್ಲಿ ನವೆಂಬರ್ ೮ ರಂದು ಬೆಳಿಗ್ಗೆ ೧೧ ಗಂಟೆಗೆ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ನವೆಂಬರ ೮ರ ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ಉಪ ವಿಭಾಗಾಧಿಕಾರಿ ನಿಡಗುಂದಿ ತಾಲೂಕಿನ ಯಲಗೂರ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ, ಇಂಡಿ ಉಪ ವಿಭಾಗಾಧಿಕಾರಿ ಇಂಡಿ ತಾಲೂಕಿನ ಬೂದಿಹಾಳ ಗ್ರಾಮದ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.ವಿಜಯಪುರ ಗ್ರೇಡ್ ೨ ತಹಶೀಲ್ದಾರ ಅವರು ವಿಜಯಪುರದ ವಾರ್ಡ್ ನಂಬರ್ ೩ರ ಓಂ ಗಣಪತಿ ದೇವಸ್ಥಾನ, ಸಿಂಧೆ ಕಾಲೋನಿ ಭಾವಸಾರ ನಗರದಲ್ಲಿ, ತಿಕೋಟಾ ಗ್ರೇಡ್ ೨ ತಹಶೀಲ್ದಾರ ಅವರು ಹರನಾಳದ ಶ್ರೀ ವಿಠ್ಠಲ ಮಂದಿರದಲ್ಲಿ, ಬಬಲೇಶ್ವರ ಗ್ರೇಡ್ ೨ ತಹಶೀಲ್ದಾರ ಅವರು ಧನ್ಯಾಳದ ಮಳೇಸ್ವಾಮಿ ದೇವಸ್ಥಾನದಲ್ಲಿ, ಬಸವನ ಬಾಗೇವಾಡಿ ಗ್ರೇಡ್ ೨ ತಹಶೀಲ್ದಾರ ಅವರು ನರಸಲಗಿಯ…

Read More

ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆಯ ಸುಧಾರಣಾ ವಿಷಯಾಧಾರಿತ ಕಾರ್ಯಗಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅತಿವೃಷ್ಟಿ-ಅನಾವೃಷ್ಟಿ, ಬೆಂಕಿ ಅವಘಡಗಳಂತಹ ಪ್ರಾಕೃತಿಕ ವಿಕೋಪ ಸಂಭವಿಸುವ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ತರಬೇತಿ ಹೊಂದುವುದು ಅಗತ್ಯವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು.ಅವರು ನಗರದ ಟಕ್ಕೆ ರಸ್ತೆಯಲ್ಲಿರುವ ಜಿಲ್ಲಾ ತರಬೇತಿ ಸಂಸ್ಥೆಯ ಸಭಾ ಭವನದಲ್ಲಿ ಆಡಳಿತ ತರಬೇತಿ ಸಂಸ್ಥೆ ಮೈಸೂರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆಯ ಸುಧಾರಣಾ ವಿಷಯಾಧಾರಿತ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.ಅನಿರೀಕ್ಷಿತವಾಗಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪಗಳನ್ನು ನಿರ್ವಹಿಸಲು, ತುರ್ತು ಪರಿಹಾರೋಪಾಯಗಳನ್ನು ಹೇಗೆ ಕಾರ್ಯರೂಪಕ್ಕೆ ತರಬಹುದು ಎಂಬುದರ ಬಗ್ಗೆ ಮುಂಚಿತವಾಗಿಯೇ ರೂಪುರೇಷೆ ಸಿದ್ಧಪಡಿಸಿಕೊಂಡಿರಬೇಕು. ವಿದ್ಯುತ್ ಅವಘಡ, ಪ್ರವಾಹದಂತಹ ಯಾವುದೇ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣಾ ಸಿಬ್ಬಂದಿ ತಮ್ಮ ಪ್ರಾಣ ಪಣಕ್ಕಿಟ್ಟು ರಕ್ಷಣೆಗೆ ಮುಂದಾಗುತ್ತಾರೆ. ಈ ಸಂದರ್ಭದಲ್ಲಿ ಹಲವು ಇಲಾಖೆಗಳು ಸಮನ್ವಯ ಸಾಧಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡು…

Read More

ಅನ್ಯಾಯಕ್ಕೊಳಗಾದವರ ಅಹವಾಲು ಸ್ವೀಕಾರ | ವಕ್ಫ್ ಕಾಯ್ದೆ ತಿದ್ದುಪಡಿ ಜಂಟಿ ಸಂಸದೀಯ ಸಮಿತಿ ಚೇರಮನ್ ಆಗಮನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜಿಲ್ಲಾಧಿಕಾರಿ ಕಚೇರಿ ಹೊರಾಂಗಣದಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ಅನಿರ್ಧಿಷ್ಟ ಅವಧಿ ಅಹೋರಾತ್ರಿ ಧರಣಿ ಸ್ಥಳಕ್ಕೆ ಇದೇ ನ. 7 ರಂದು ಬೆಳಿಗ್ಗೆ 10.30 ಗಂಟೆಗೆ ವಕ್ಫ್ ಕಾಯ್ದೆ ತಿದ್ದುಪಡಿ ಜಂಟಿ ಸಂಸದೀಯ ಸಮಿತಿ (ಜಾಯಿಂಟ್ ಪಾರ್ಲಿಮೆಂಟರಿ ಕಮಿಟಿ) ಚೇರಮನ್ ಜಗದಾಂಬಿಕಾ ಪಾಲ್ ರವರ ತಂಡ ಆಗಮಿಸಿ, ಅನ್ಯಾಯಕ್ಕೆ ಒಳಗಾದವರಿಂದ ಅಹವಾಲು ಸ್ವೀಕರಿಸಲಿದೆ ಎಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದ್ದಾರೆ.ಈ ಕುರಿತು ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅದಾಲತ್ ನಡೆಸಿ, ನೀಡಿರುವ ಮೌಖಿಕ ಆದೇಶದಂತೆ ರೈತರ, ದೇವಸ್ಥಾನಗಳ, ಮಠ-ಮಾನ್ಯಗಳ, ಸರ್ಕಾರಿ, ಇತ್ಯಾದಿ ಜಮೀನು/ಆಸ್ತಿಗಳ ಉತಾರೆಯಲ್ಲಿ ಕಾನೂನು ಬಾಹಿರವಾಗಿ ವಕ್ಫ್ ಆಸ್ತಿ ಎಂದು ಎಂಟ್ರಿ ಮಾಡಿದಲ್ಲದೆ, ಹಲವರಿಗೆ…

Read More

ಸಂಪುಟ ಸಚಿವರಿಗೆಲ್ಲ ಉಪಚುನಾವಣೆ ಉಸ್ತುವಾರಿ | ಆಡಳಿತ ಯಂತ್ರ ಸ್ಥಗಿತ | ಬೆಳೆ ಪರಿಹಾರ ಬಿಡುಗಡೆಗೆ ಆಗ್ರಹ ಉದಯರಶ್ಮಿ ದಿನಪತ್ರಿಕೆ ಕಾಂಗ್ರೆಸ್, ಬಿಜೆಪಿ ನಾಯಕರು ವಕ್ಫ್ ಬೋರ್ಡ್ ಆಸ್ತಿ ವಿವಾದವನ್ನು ಜ್ವಲಂತವಾಗಿರಿಸಿ ರಾಜಕೀಯ ಲಾಭ ಪಡೆಯುವ ದುರಾಲೋಚನೆ ಬಿಡಲಿ, ರೈತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿ ಎಂದು ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹಿಸಿದರು.ನಗರದಲ್ಲಿ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ ಅವರು, ವಕ್ಫ್ ಆಸ್ತಿ ವಿವಾದವನ್ನು ಜ್ವಲಂತವಾಗಿರಿಸಿ ರಾಜಕೀಯ ಲಾಭ ಪಡೆಯಲು ಎರಡು ಪಕ್ಷಗಳು ಹವಣಿಸುತ್ತಿವೆ. ವಕ್ಫ್ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಕಾಲಕ್ಕನುಗುಣವಾಗಿ ನವೀಕರಿಸದೆ ಗೊಂದಲಗಳನ್ನು ಸೃಷ್ಟಿಸಲಾಗಿದೆ. ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ, ಸಂಪುಟ ಸಚಿವರಿಗೆಲ್ಲ ಉಪಚುನಾವಣೆ ಉಸ್ತುವಾರಿ ಹೊರಿಸಲಾಗಿದೆ. ರಾಜ್ಯದ ಆಡಳಿತ ಯಂತ್ರವೇ ಸ್ಥಗಿತಗೊಂಡಿದೆ. ಆದರೆ ಇದನ್ನು ವಕ್ಫ್ ಬೋರ್ಡ್ ಆಸ್ತಿ ವಿವಾದದ ಮೂಲಕ ಮರೆ ಮಾಚಲು ಪ್ರಯತ್ನಗಳು ನಡೆಯುತ್ತಿವೆ. ಸಚಿವ ಜಮೀರ್ ಅಹ್ಮದ್ ಖಾನ್ ಪರಿಸ್ಥಿತಿ ಅವಲೋಕಿಸಿ ರೈತರಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಬೇಕೆ ವಿನಃ ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು…

Read More