Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಲ್ಲಿನ ಕಣಿಯಿಂದಾಗಿ ಕೋಲಾರ ಬ್ರೀಡ್ಜ್ ಅಪಾಯದಲ್ಲಿ | ರೈತರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಕೋಲಾರನ ಸರ್ವೇ ನಂಬರ ೭೧೮ರಲ್ಲಿ ಕಲ್ಲಿನ ಕಣಿಯಿಂದಾಗಿ ಸುತ್ತಮುತ್ತಲಿನ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಹಾಗೂ ಸಮೀಪದಲ್ಲಿರುವ ರಾಜ್ಯದ ಎರಡನೇ ಅತಿ ದೊಡ್ಡ ಸೇತುವೆಗೆ ಕೂಡಾ ಅನಾಹುತ ಸಂಭವಿಸಬಹುದು, ಆದ್ದರಿಂದ ಕೂಡಲೇ ಈ ಕಲ್ಲಿನ ಕ್ವಾರಿಯನ್ನು ಬಂದ್ ಮಾಡಬೇಕೆಂದು ಕೋಲಾರ ಭಾಗದ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ತಾಲೂಕಾ ಅಧ್ಯಕ್ಷ ಸೋಮು ಬಿರಾದಾರ ಅವರು, ಇಲ್ಲಿ ದೊಡ್ಡ ದೊಡ್ಡ ಕಲ್ಲುಗಳನ್ನು ಬ್ಲಾಸ್ಟ್ ಮಾಡುವುದರಿಂದ ಅಕ್ಕಪಕ್ಕದ ರೈತರ ಜಮೀನುಗಳಲ್ಲಿ ವಾಸಿಸುವ ಗುಡಿಸಲು ಹಾಗೂ ಮನೆಗಳ ಮೇಲೆ ಬೀಳುತ್ತಿದ್ದು, ಇದರಿಂದ ಸಾರ್ವಜನಿಕರು ಭಯದಲ್ಲಿ ಬದುಕುವಂತಾಗಿದೆ, ಕೊಲಾರ ಬ್ರೀಜ್ ಕೂಡಾ ಸಮೀದಲ್ಲಿ ಇರುವುದುರಿಂದ ಈ ಕ್ವಾರಿಯನ್ನು ಬಂಧ ಮಾಡಬೇಕು ಜೊತೆಗೆ ಈ ಭಾಗದಲ್ಲಿ ಮುಂದೆಕೂಡಾ ಯಾರಿಗೂ ಅನುಮತಿ ನೀಡಬಾರದು ಎಂದರು.ಜಿಲ್ಲಾಧ್ಯ್ಯಕ್ಷ ಸಂಗಮೇಶ ಸಗರ ಅವರು ಮಾತನಾಡುತ್ತಾ, ಕೂಡಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು…
ವಿಜಯಪುರ ಜಿಲ್ಲೆಯ ಮಠಾಧೀಶರಿಂದ ರೈತರ ಉಳಿವಿಗಾಗಿ ವಕ್ಫ್ ಮಂಡಳಿ ರದ್ದು ಮಾಡಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶದಲ್ಲಿ ವಕ್ಫ್ ಮಂಡಳಿಯಿಂದಾಗಿ ರೈತರು, ಸಾರ್ವಜನಿಕರ ಮೇಲೆ ಆಗುತ್ತಿರುವ ಅನ್ಯಾಯವನ್ನು ತಡೆಯಲು ಸಂಪೂರ್ಣ ವಕ್ಫ್ ಮಂಡಳಿಯನ್ನೆ ರದ್ದುಗೊಳಿಸಿ, ಇಲ್ಲಿಯವರೆಗೂ ಆಗಿರುವ ಗೆಜೇಟನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಜಿಲ್ಲೆಯ ಮಠಾಧೀಶರು ಹಾಗೂ ರೈತರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.ನಗರದ ಬಸವೇಶ್ವರ ವೃತ್ತದಿಂದ ಪಾದಯಾತ್ರೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಮನವಿ ಸಲ್ಲಿಸಿ ನಾಡಿನ ಯಾವ ರೈತರಿಗೂ ಹಾಗೂ ಸಾರ್ವಜನಿಕರಿಗೆ ಅನ್ಯಾಯವಾಗಬಾರದು, ಮಠಾಧೀಶರು ಯಾವಾಗಲೂ ರೈತರಪರ ಕಾಳಜಿ ಉಳ್ಳವರು, ಯಾವೊಬ್ಬ ರೈತರಿಗೆ ಅನ್ಯಾಯವಾದರೂ ನಾವೂ ಸಹಿಸುವುದಿಲ್ಲ, ಕೂಡಲೇ ವಕ್ಫ್ಗೆ ಸಂಬಂಧಿಸಿದಂತೆ ಎಲ್ಲ ಕೆಲಸಗಳನ್ನು ಕೂಡಲೇ ನಿಲ್ಲಿಸಬೇಕು, ಇಲ್ಲವಾದಲ್ಲಿ ರೈತರ ದೊಡ್ಡ ಕ್ರಾಂತಿಯಲ್ಲಿ ನಾವೂ ಪಾಲ್ಗೊಳುತ್ತೆವೆ ಎಂದು ಸಿಂದಗಿಯ ಸಾರಂಗಮಠದ ಪ್ರಭು ಸಾರಂಗದೇವರು ಹೇಳಿದರು.ಇದೇ ವೇಳೆ ತಡವಲಗ ಸ್ವಾಮೀಜಿ ಮಾತನಾಡಿ, ಇಡೀ ದೇಶದಲ್ಲಿ ವಕ್ಫ್ ಮಂಡಳಿಯ ಕುತಂತ್ರದಿಂದಾಗಿ ರೈತರು, ಸಾರ್ವಜನಿಕರು ಬೀದಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭೂತ್ನಾಳ ಕೆರೆ ಮತ್ತು ಬೇಗಂ ತಾಲಾಬ್ ಬಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕೈಗೊಳ್ಳಲಾಗಿರುವ ಅಭಿವೃದ್ಧಿ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಒದಗಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಶನಿವಾರ ಬೆಳಿಗ್ಗೆ ಕರಾಡದೊಡ್ಡಿ ಮಾನವ ನಿರ್ಮಿತ ಅರಣ್ಯ ಪ್ರದೇಶ, ಭೂತನಾಳ ಕೆರೆ, ಐತಿಹಾಸಿಕ ಬೇಗಂ ಕೆರೆಗಳಿಗೆ ಅವರು ಭೇಟಿ ನೀಡಿದರು.ಮೊದಲಿಗೆ ಭೂತ್ನಾಳ ಕೆರೆಯ ಹಿಂಭಾಗದಲ್ಲಿರುವ ಕರಾಡದೊಡ್ಡಿ ಮಾನವ ನಿರ್ಮಿತ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ ಅವರು ಅಲ್ಲಿ ನಿರ್ಮಿಸಲಾಗುತ್ತಿರುವ ಲಾನ್, ಉದ್ಯಾನ ಮತ್ತೀತರ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಅಲ್ಲದೇ, ಕೆರೆಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಗ್ರೀಲ್ ಮತ್ತು ತಂತಿಬೇಲಿ ಅಳವಡಿಸುವ ಮೂಲಕ ಸುರಕ್ಷತೆಗೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮೊಬೈಲ್ ಮೂಲಕ ದೂರವಾಣಿ ಕರೆ ಮಾಡಿ ಸೂಚನೆ ನೀಡಿದರು.ನಂತರ ಇದೇ ಕೆರೆಯ ಬಳಿ ಕೆಬಿಜೆಎನ್ಎಲ್ ಆಲಮಟ್ಟಿ ಅರಣ್ಯ ವಿಭಾಗದ ನರ್ಸರಿಗೆ ಭೇಟಿ ನೀಡಿದ…
– ಪ್ರೊ.ಶಾರದಾ ಎಸ್.ಪಾಟೀಲ್ ( ಮೇಟಿ)ಬಾದಾಮಿ ಉದಯರಶ್ಮಿ ದಿನಪತ್ರಿಕೆ “ಕೊಡೆವಿಡಿಯೆ, ಕುದುರೆಯ ದೃಢವುಳ್ಳ ರಾವುತನೇರೆ,ಕೊಡೆ -ಕೋಟಿ ಶೂರರು ಹನ್ನಿಬ್ಬರಯ್ಯ.ಚಂದ್ರಕಾಂತದ ಗಿರಿಯ ಗಜ ಬಂದು ಮೂದಲಿಸೆಅರಿದು ಕೊಲುವೊಡೆ ರಿಪುಗಳ ಕಲಿತನವ ನೋಡಾ.ಆವಿಗೆಯಲೊದವಿದ ಪುತ್ತಳಿಯ ರೂಹಿನಂತಾಯಿತ್ತುಕೂಡಲ ಸಂಗಮದೇವಾ ನಿಮ್ಮ ಹೆಸರಿಲ್ಲದ ಹೆಸರು”*ಇದು ಬಸವಣ್ಣನವರ, “ಸಂಸಾರಹೇಯಸ್ಥಲ” ದ ವಚನ ಮಾಯೆಯ ವಿಲಾಸದಲ್ಲಿ ರೂಪಗೊಂಡವುಗಳೇ ದೇಹ, ಮನಸ್ಸು ಮತ್ತು ಶಬ್ದಾದಿ ವಿಷಯಯಂಗಳು ಅವು ತನಗೆಯೇ ಎಂದು ಭ್ರಮಿಸುತ್ತಾನೆ. ಈ ಭ್ರಮೆ ಯೇಸಂಸಾರ. ಈ ಭ್ರಮೆಯು ಆತ್ಮನಿಗೆ ತರವಲ್ಲ, ಹೇಯ. ಇದನ್ನು ತಿರಸ್ಕರಿಸದಿದ್ದರೆ ಆತ್ಮನು ಸ್ವಸ್ಥನಾಗಲಾರ. ಸ್ಥಲ ಅಂದರೆ -ಪ್ರಜ್ಞಾ ಭೂಮಿಕೆ ; ಶಿವಾಭಿವ್ಯಕ್ತಿಯ ಮನೊಸ್ಥಿತಿ.ಈ ವಚನಕ್ಕೆ ಈಗಾಗಲೇ ಮೂರು ಪ್ರಾಚೀನ ಟೀಕೆಗಳು ಬಂದಿರುವವು. ಅರ್ಥದೃಷ್ಟಿಯಿಂದ ಸಮರ್ಪಕವಾಗಿಲ್ಲ. ಎಂದು ಖ್ಯಾತ ಸಂಶೋಧಕರೂ ವಿದ್ವಾ೦ಸಕರೂ ಆದ ಡಾಕ್ಟರ್ ಎಂ.ಎಂ.ಕಲಬುರ್ಗಿಯವರ ಅಭಿಪ್ರಾಯ. ಆಧುನಿಕ ವಿದ್ವಾ೦ಸರಿಗೂ ಇದು ಸವಾಲಾಗಿ ನಿಂತಿದೆ.ಓದುಗರು ತಮ್ಮ, ತಮ್ಮ ಚಿಂತನೆಗಳಿಂದ ಹೊಸ ಅರ್ಥ ಕೊಡಬಹುದು, ಹಾಗಂದೇ ಈ ವಚನವನ್ನು ನಿರ್ವಚನೆನಗಾಗಿ ಇಲ್ಲಿ ಎತ್ತಿಕೊಳ್ಳಲಾಗಿದೆ.ಇಲ್ಲಿ ಮೂರು ವಾಕ್ಯಗಳಿವೆ, ಮೊದಲಿನ ವಾಕ್ಯಗಳು…
ಉದಯರಶ್ಮಿ ದಿನಪತ್ರಿಕೆ ಚಡಚಣ: ಸಿದ್ದೇಶ್ವರ ಶ್ರೀಗಳು ತಮ್ಮ ಆಧ್ಯಾತ್ಮಿಕ ಪ್ರವಚನಗಳ ಮುಖಾಂತರ ನಮ್ಮ ಅಜ್ಞಾನವನ್ನು ಕಳೆದು ನಮಗೆ ಸನ್ಮಾರ್ಗವನ್ನು ತೋರಿಸಿದ ಮಹಾನ್ ಸಂತರು ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.ಚಡಚಣದ ಸಂಗಮೇಶ್ವರ ದೇವಸ್ಥಾನದಲ್ಲಿ ದಿನಾಂಕ ೩.೧೧.೨೪ ರಿಂದ ೧೭.೧೧.೨೪ ರವರೆಗೆ ನಡೆಯಲಿರುವ ಅಮೃತಾನಂದ ಶ್ರೀಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಉಧ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.ಸಿದ್ದೇಶ್ವರ ಶ್ರೀಗಳ ಜ್ಞಾನ ದಾಸೋಹದ ಪಥವನ್ನು ಅಮೃತಾನಂದ ಶ್ರೀಗಳು ಮುಂದುವರಿಸಿಕೊಂಡು ಹೋಗುತ್ತಿರುವದು ಸ್ತುತ್ಯಾರ್ಹ ಎಂದು ಅವರು ಹೇಳಿದರು. ನಡೆದಾಡುವ ದೇವರೆಂದು ಹೆಸರು ಪಡೆದಿದ್ದ ಸಿದ್ದೇಶ್ವರ ಶ್ರೀಗಳು ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಆಧ್ಯಾತ್ಮವನ್ನು ತಿಳಿಸಿ ಜನರ ಬದುಕನ್ನು ಬದಲಿಸಿದ ಮಹಾನ ಸಂತರಾಗಿದ್ದರು ಎಂದು ಅವರು ಹೇಳಿದರು.ದಿವ್ಯ ಸಾನಿಧ್ಯವನ್ನು ವಹಿಸಿದ್ದ ಹತ್ತಳ್ಳಿಯ ಗುರು ಗುರುಪಾದೇಶ್ವರ ಶಿವಾಚಾರ್ಯರು ಮಾತನಾಡಿ ಚಡಚಣ ಆಧ್ಯಾತ್ಮಿಕ ಒಲವನ್ನು ಹೊಂದಿರುವ ಊರಾಗಿದ್ದು, ಸಿದ್ದೇಶ್ವರ ಶ್ರೀಗಳು ಶಾಲೆ ಕಲಿತ ಪುಣ್ಯ ಭೂಮಿಯಾಗಿದೆ ಇಲ್ಲಿ ಅಮೃತಾನಂದ ಶ್ರೀಗಳಿಂದ ಆದ್ಯಾತ್ಮೀಕ ಪ್ರವಚನ ಪ್ರಾರಂಭವಾಗಿದ್ದು ಸ್ತೂತ್ಯಾರ್ಹ ಎಂದು ಹೇಳಿದರು.ಭಾರತ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಬೀರಲಿಂಗೇಶ್ವರ ಐಕ್ಯ ಕ್ಷೇತ್ರವಾದ ಶಿರಾಡೋಣ ಗ್ರಾಮಕ್ಕೆ ಮಹಾರಾಷ್ಟ್ರ ಸೇರಿದಂತೆ ರಾಜ್ಯದಿಂದ ಸಹಸ್ರಾರು ಭಕ್ತರು ಭೇಟಿ ನೀಡುತ್ತಾರೆ. ಇಲ್ಲಿ ನೆಲೆ ನಿಂತಿರುವ ಬೀರಲಿಂಗೇಶ್ವರನ ಆರ್ಶೀವಾದ ಪಡೆದು ಭಕ್ತರು ಹುಲಜಂತಿಯ ಶಿವ-ಪಾರ್ವತಿಯರ ಮುಂಡಾಸ ನೋಡಲು ಭಕ್ತರು ತೆರಳುತ್ತಾರೆ. ಇಂತಹ ಯಾತ್ರಿಗಳಿಗೆ ತಂಗಲು ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸಿಲು ಸಹಕರಿಸುವಂತೆ ಮುಖ್ಯಮಂತ್ರಿಗಳಿಗೂ ಹಾಗೂ ಸಂಬಂಧಪಟ್ಟ ಸಚಿವರಿಗಳಿಗೂ ಕಾಗಿನೆಲೆ ಶ್ರೀಕನಕ ಗುರು ಪೀಠದ ತಿಂಥಿಣಿ ಬ್ರಿಜ್ ಶಾಖಾ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ಧರಾಮಾನಂದ ಶ್ರೀಗಳು ಮನವಿ ಮಾಡಿದರು.ಶಿರಾಡೋಣ ಗ್ರಾಮದಲ್ಲಿ ಗುರುವಾರದಂದು ಯಾತ್ರಿ ನಿವಾಸ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ನೆರವೇರಿಸಿ ಮಾತನಾಡಿದ ಅವರು. ರಾಜ್ಯದ ಯಾತ್ರಿಗಳಿಗೆ ತಂಗಲು ಯಾವುದೇ ವ್ಯವಸ್ಥೆ ಇಲ್ಲ. ಇಡೀ ವಿಶ್ವದಲ್ಲಿ ಭಾರತ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ನಮ್ಮ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದು ಮುಖ್ಯವಾಗಿದೆ ಎಂದರು.ಈ ಸಂದರ್ಭದಲ್ಲಿ ಮಾಜಿ ಶಿಕ್ಷಣ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥರವರು ಡೊಳ್ಳು ಭಾರಿಸುವ ಮೂಲಕ ವಿವಿಧ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರು ಶನಿವಾರ ಬೆಳಕಿನ ಹಬ್ಬ ದೀಪಾವಳಿಯ ಬಲಿಪಾಡ್ಯ ಹಬ್ಬವನ್ನು ಆಚರಣೆ ಮಾಡಿದರು. ಬೆಳಗ್ಗೆ ಬೇಗನೆ ಎದ್ದು ಸ್ನಾನಾದಿ ಕ್ರಿಯೆಯಾದ ನಂತರ ಪ್ರತಿಯೊಂದು ಮನೆಯಲ್ಲಿ ದೀಪಾವಳಿ ಪಾಡ್ಯದಂದು ಸಂಪ್ರದಾಯದಂತೆ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿದರು.ಪಾಡ್ಯ ಪೂಜೆ ನೆರವೇರಿದ ನಂತರ ಮನೆ ಮುಂದೆ ಪಾಂಡವರ ಪೂಜೆ ಮಾಡುವುದು ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯ. ಸಂಪ್ರದಾಯದಂತೆ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರು ತಮ್ಮ ಮನೆಗಳ ಮುಂದೆ ಪಾಂಡವರನ್ನು, ಗುಳ್ಳವ್ವರನ್ನು ಸೆಗಣಿಯಿಂದ ಮಾಡಿದ್ದು ಕಂಡುಬಂದಿತ್ತು. ಪಾಡ್ಯದಿನದಂದು ಜನರು ಕುಟುಂಬ ಸದಸ್ಯರೊಂದಿಗೆ ತಮ್ಮ ಇಷ್ಟದೇವರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದುಕೊಂಡರು. ವಿವಿಧ ದೇವಸ್ಥಾನಗಳಲ್ಲಿ ಹೆಚ್ಚು ಜನರು ದೇವರ ದರ್ಶನ ಪಡೆದುಕೊಂಡರು.ಪಾಂಡವರು ಅಜ್ಞಾತವಾಸ ಮುಗಿಸಿ ನಂತರ ಬನ್ನಿ ಗಿಡದಲ್ಲಿ ಅಡಗಿಸಿಟ್ಟಿದ್ದ ಆಯುಧಗಳನ್ನು ಪಾಡ್ಯದ ದಿನ ತೆಗೆದುಕೊಂಡು ಬಂದಿದ್ದರ ವಿಜಯೋತ್ಸವದ ಸಂಕೇತವಾಗಿ ಮನೆಯ ಮುಂದೆ ಪಾಡವರು ಕೌರವರನ್ನು ಸಂಹಾರ ಮಾಡಿದ ಚಿತ್ರ ಬಿಂಬಿಸುವಂತೆ ಸಗಣಿಯಿಂದ ಗೊಂಬೆಗಳನ್ನು ಮಾಡಿ ಹೂವುಗಳಿಂದ ಅಲಂಕರಿಸಿ ಪೂಜೆ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕರುನಾಡಿನಲ್ಲಿ ಕನ್ನಡ ಭಾಷೆ ಸಾರ್ವಭೌಮವಾಗಬೇಕಾದರೆ ಕನ್ನಡದ ಬಳಕೆ ಹೆಚ್ಚು ನಡೆಯಬೇಕಾದ ಅಗತ್ಯವಿದೆ ಎಂದು ತಾಲೂಕು ಕಸಾಪ ಮಾಜಿ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿದರು.ಪಟ್ಟಣದ ವಿರಕ್ತಮಠದಲ್ಲಿ ಕರುನಾಡು ಸಾಹಿತ್ಯ ಪರಿಷತ್ತು ಕರ್ನಾಟಕ ರಾಜ್ಯೋತ್ಸವದಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಪೂಜ್ಯರಿಗೆ ಬಿನ್ನವತ್ತಳೆ ಸಮರ್ಪಣೆ, ಕರುನಾಡು ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪ್ರದಾನ, ರುಬಿಯಾಬೇಗಂ ನದಾಫ್ ಅವರ ಏಳುಬೀಳಿನ ಹಾದಿ ಆತ್ಮಕಥನ ಕೃತಿ ಬಿಡುಗಡೆ ಹಾಗೂ ಪ್ರಭಾಕರ ಖೇಡದ ಅವರ ನಲವತ್ತರ ಬಾಲಕಿ ಕಥಾ ಸಂಕಲನ ಪುಸ್ತಕ ಪರಿಚಯ ಹಾಗೂ ಚುಟುಕು ಕವಿಗೋಷ್ಠಿಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಬೆಳವಣಿಗೆಗೆ ಕೇವಲ ರಾಜಧಾನಿ ಬೆಂಗಳೂರನ್ನು ಮುಂದಿಟುಕೊಳ್ಳಬಾರದು. ಕನ್ನಡ ಬಳಕೆ ವಿಶಾಲವಾಗುವಂತೆ ನೋಡಬೇಕಿದೆ. ರಾಜ್ಯದಲ್ಲಿ ಕನ್ನಡ ಶಾಲೆಗಳ ಅಭಿವೃದ್ಧಿ, ಕನ್ನಡ ಶಾಲೆಗಳಿಗೆ ಮಕ್ಕಳ ಸಂಖ್ಯೆ ಹೆಚ್ಚಳವಾಗುವಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಸರ್ಕಾರಿ ಶಾಲೆಗೂ ಖಾಸಗಿ ಶಾಲೆಗೂ ಸ್ಥಳ ದೂರ ಇರುವಂತೆ ಸರ್ಕಾರ ಗಮನ ಹರಿಸಬೇಕಿದೆ. ಕನ್ನಡ ಭಾಷೆ ಬೆಳವಣಿಗೆ ಕೇವಲ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಇಲ್ಲಿಯ ಜನಪದ ಗಾಯಕ ಬಸವರಾಜ ಸಂಗಪ್ಪ ಹಾರಿವಾಳ ಅವರಿಗೆ ಜನಪದ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಗುರುತಿಸಿ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಜರುಗಿದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ, ಗೃಹ ಮಂತ್ರಿ ಪರಮೇಶ್ವರ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ, ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ವಿವಿಧ ಗಣ್ಯರು, ಅಧಿಕಾರಿಗಳು ಉಪಸ್ಥಿತಿರಿದ್ದರು.
ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ಸತತ ೩೭ ವರ್ಷಗಳಿಂದ ಪಾದಯಾತ್ರೆಯ ಮೂಲಕ ಯಾತ್ರೆ ಕೈಗೊಂಡಿರುವ ಬಳ್ಳಾರಿ ಜಿಲ್ಲೆಯ ಹೆಚ್. ಓಬಳಾಪುರದ ಭಕ್ತಾಧಿಗಳು ಪಟ್ಟಣದ ಭಕ್ತರ ಊಟೋಪಚಾರದ ಸೇವೆಯ ನಂತರ ಪಂಢರಾಪುರಕ್ಕೆ ಪಾದಯಾತ್ರೆ ಬೆಳೆಸಿದರು.ಶನಿವಾರ ಸಾಯಂಕಾಲ ಪಟ್ಟಣಕ್ಕೆ ಆಗಮಿಸಿದ ಬಳ್ಳಾರಿ, ಭದ್ರಾವತಿ, ಸೇರಿದಂತೆ ವಿವಿಧ ಪ್ರದೇಶಗಳ ನೂರಾನಲ್ವತ್ತಕ್ಕೂ ಹೆಚ್ಚು ಯಾತ್ರಾರ್ಥಿಗಳು ಪಟ್ಟಣದ ಶಾಲಾ ಆವರಣದಲ್ಲಿ ಭದ್ರಾವತಿ ಗೋಂದಿಮಠದ ಶ್ರೀಸ್ವಾಮಿನಾಮ ದೇವಾನಂದ ಭಾರತಿ ನೇತೃತ್ವದಲ್ಲಿ ಕೀರ್ತನೆ, ಭಜನೆಗಳನ್ನು ನೆರವೇರಿಸಿ ವಾಸ್ತವ್ಯ ಹೂಡಿದರು.ಈ ಸಂದರ್ಭದಲ್ಲಿ ಪಟ್ಟಣದ ಸದ್ಭಕ್ತರು ಯಾತ್ರಾರ್ಥಿಗಳಿಗೆ ಸಾಯಂಕಾಲದ ಫಳಾರ, ರಾತ್ರಿ ಊಟ, ನೀರು, ಬಾಳೆಹಣ್ಣು ಸೇರಿದಂತೆ ಲೈಟ್ ಸೇವೆ ಒದಗಿಸಿದರು.ಪ್ರತಿ ವರ್ಷದ ಪಾದಯಾತ್ರೆ ಸಮಯಕ್ಕೆ ಪಟ್ಟಣದ ಜನತೆ ನೀಡುತ್ತಿರುವ ಸಹಕಾರ ಕುರಿತು ಪಾದಯಾತ್ರೆ ಸಮಿತಿಯ ಖಜಾಂಚಿ ರಮೇಶ ತೊಗರಿ ಮಾತನಾಡಿ, ಅಕ್ಟೋಬರ್ ೧೯ರಿಂದ ಬಳ್ಳಾರಿ ಜಿಲ್ಲೆಯ ಹೆಚ್. ಓಬಳಾಪುರದಿಂದ ಆರಂಭಗೊಂಡ ಈ ಯಾತ್ರೆಯಲ್ಲಿ ೬೫ ಮಹಿಳೆಯರು ಸೇರಿ ನೂರಾನಲ್ವತ್ತಕ್ಕೂ ಹೆಚ್ಚು ಜನರಿದ್ದು, ಸತತವಾಗಿ ೨೨ ದಿನಗಳ ಕಾಲುನಡಿಗೆಯಲ್ಲಿ ಸಾಗಿ ನವೆಂಬರ್ ೯ ಶನಿವಾರ…
