Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ), ಜಮಖಂಡಿಯಲ್ಲಿ ನಾಟಕ ಮತ್ತು ರಂಗಭೂಮಿ ಕಲೆ ವಿಭಾಗದ ಅಡಿಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವಾಗಿ “ಮಧುರಚೆನ್ನ” ಕುರಿತ ಏಕವ್ಯಕ್ತಿ ನಾಟಕ ಪ್ರದರ್ಶನ ಭರ್ಜರಿಯಾಗಿ ನಡೆಯಿತು.ಮೈಸೂರಿನ ಕವಿತಾ ಕಲಾ ತಂಡವು 20ನೇ ಶತಮಾನದ ಪ್ರಸಿದ್ಧ ಕವಿ ಮಧುರಚೆನ್ನ ಅವರ ಜೀವನ ಮತ್ತು ಸಾಹಿತ್ಯ ಸಾಧನೆಯನ್ನು ಆಧರಿಸಿದ ಈ ನಾಟಕವನ್ನು ಅತ್ಯಂತ ಮನೋಜ್ಞವಾಗಿ ಪ್ರದರ್ಶಿಸಿತು. ನಾಟಕದ ಪ್ರಸ್ತುತಿಯನ್ನು ಮಧುರಚೆನ್ನ ಅವರ ಮೊಮ್ಮಗನಾದ ಜಗದೇವ ಗಲಗಲಿ ಅವರು ಭಾವಪೂರ್ಣವಾಗಿ ನಿರ್ವಹಿಸಿ ಪ್ರೇಕ್ಷಕರ ಮನತನಿಸಿತು.ಈ ನಾಟಕದ ರಚನೆ ಮತ್ತು ನಿರ್ದೇಶನವನ್ನು ಗಣೇಶ ಅಮಿನಗಡ ಅವರು ಸಮರ್ಥವಾಗಿ ಮಾಡಿದ್ದು, ಸಂಗೀತ ಸೇವೆಯನ್ನು ಬಿ.ಆರ್. ಬನಸೋಡೆ ಅವರು ನೀಡಿದರು. ನಾಟಕದ ಪ್ರತಿಯೊಂದು ಅಂಗವೂ ಪ್ರೇಕ್ಷಕರಿಗೆ ಆಕರ್ಷಕ ಅನುಭವವನ್ನು ನೀಡಿತು.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತು ನೀಡಬೇಕು. ಯಾವುದೇ ಅಡೆತಡೆ ಇಲ್ಲದೆ ನೀರು ಪೂರೈಸಲು ಗಮನ ಹರಿಸಬೇಕು. ಬೇಸಿಗೆ ಮುಗಿಯುವವರೆಗೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿದ್ದು ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಶೋಕಕುಮಾರ ರಾಠೋಡ ರವರು ಹೇಳಿದರು.ಗುರುವಾರದಂದು ರೇವತಗಾಂವ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯಕ್ಕೆ ಧಿಡೀರ ಭೇಡಿ ನೀಡಿ ಮಾತನಾಡಿದ ಅವರು. ಲಕ್ಷಾಂತರ ರೂ.ಗಳ ವೆಚ್ಚಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದರೂ ಸಹ ರೇವತಗಾಂವ, ಹಾಲಳ್ಳಿ ಹಾಗೂ ಶಿರಾಡೋಣ ಗ್ರಾಮಗಳಲ್ಲಿ ಜನರ ಬಳಕೆಗೆ ಉಪಯೋಗವಿಲ್ಲದಂತಾಗಿದೆ. ಸಂಬಂಧಪಟ್ಟ ಗುತ್ತಿಗೆದಾರರು ಶುದ್ಧ ಕುಡಿಯುವ ನೀರಿನ ಘಟಕಗಳು ಹಸ್ತಾಂತರವನ್ನು ಮಾಡಿದ್ದರೂ ಅವುಗಳನ್ನು ಸಮಪರ್ಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದೀರಿ? ತಕ್ಷಣವೇ ದುರಸ್ಥಿಗೊಳಿಸಿ ಶುದ್ಧ ಕುಡಿಯುವ ನೀರನ್ನು ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಿ ಎಂದು ಸೂಚಿಸಿದರು.ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಲಭ್ಯವಿರುವ ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಿ.…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ಕಡಣಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಈರಮ್ಮ ಬಸವರಾಜ್ ಪಡಶೆಟ್ಟಿ ಹಾಗೂ ಬಸವರಾಜ ಪಡಶೆಟ್ಟಿ ಅವರ ಸುಪುತ್ರಿ ಕುಮಾರಿ ಐಶ್ವರ್ಯ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.90 ಪ್ರತಿಶತ ಫಲಿತಾಂಶ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ.ಕಡುಬಡತನದಲ್ಲಿ ಜನಿಸಿದ ಐಶ್ವರ್ಯ ಅವರ ತಂದೆ ಬಸವರಾಜ ಕೂಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಾರೆ. ಇವರಿಗೆ ಸ್ವಂತ ಜಮೀನು ಕೂಡ ಇರುವುದಿಲ್ಲ. ಇಂಥ ಕಷ್ಟದ ಕುಟುಂಬದಲ್ಲಿ ಜನಿಸಿರುವ ಐಶ್ವರ್ಯ ಕಷ್ಟಪಟ್ಟು ಸಾಧನೆ ಮಾಡಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾಳೆಈ ವಿದ್ಯಾರ್ಥಿನಿಯು 1 ನೇ ತರಗತಿಯಿಂದ 7ನೇ ತರಗತಿವರೆಗೆ ಬಡ ರೇಖೆ ಗಳಿಗಿಂತ ಕಡಿಮೆ ಇರುವ ವಿದ್ಯಾರ್ಥಿಗಳ ಆಯ್ಕೆಯಲ್ಲಿ ಆರ್ ಟಿ ಇ ಆಯ್ಕೆಯಾಗಿ ಆಲಮೇಲ ಆಯ್. ಕೆ .ರಾಯಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದು 8 ತರಗತಿಯಿಂದ 10ನೇ ತರಗತಿಯವರೆಗೆ ಸಿಂದಗಿ ತಾಲೂಕಿನ ಗುಬ್ಬೆ ವಾಡ ಗ್ರಾಮದ ಮುರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದು ಪಿ ಯು ಸಿ ಅಭ್ಯಾಸವನ್ನು…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ್ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರತಿ ಸಮಸ್ಯೆಗೂ ಒಂದು ಪರಿಹಾರವಿದೆ ಎಂಬ ವಿಶ್ವಾಸ ಮನುಷ್ಯನಲ್ಲಿ ಮೂಡಲು ಕಾರಣ ಆತನ ಜ್ಞಾನದ ಬುನಾದಿ ಮತ್ತು ಆತ ತನ್ನ ಕೆಲಸದಲ್ಲಿ ಇಟ್ಟಿರುವ ನಂಬಿಕೆ.ಮನುಷ್ಯನಿಗೆ ಆತ್ಮವಿಶ್ವಾಸ ಬರುವುದು ಆತ ಸಮಸ್ಯೆ ಗಳನ್ನು ನೋಡುವ ಮತ್ತು ಅವುಗಳನ್ನು ಎದುರಿಸುವ ರೀತಿಯಲ್ಲಿ. ಸಮಸ್ಯೆಯನ್ನು ಕಂಟಕ ಎಂದು ನೋಡಿದಾಗ ಮನುಷ್ಯ ಬೇಸರಕ್ಕೊಳ್ಳಗಾಗುತ್ತಾನೆ ಬದಲಾಗಿ ಸಮಸ್ಯೆಯನ್ನು ಸವಾಲಾಗಿ ಭಾವಿಸಿ ಅದರ ಪರಿಹಾರಗಳನ್ನು ಯೋಚಿಸಿದಾಗ ಸಮಸ್ಯೆಗಳು ಸುಲಭವಾಗಿ ಪರಿಹರಿಸಲ್ಪಡುತ್ತವೆ. ಮತ್ತೆ ಕೆಲ ಜನರು ಪರಿಹಾರದಲ್ಲೂ ಸಮಸ್ಯೆಗಳನ್ನು ಹುಡುಕುವರು.ನಮ್ಮಲ್ಲಿರುವ ಜ್ಞಾನ ಮತ್ತು ನಾವು ವಸ್ತು ವಿಷಯಗಳಲ್ಲಿ ಹೊಂದಿರುವ ವಿಶ್ವಾಸ ಮತ್ತು ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಕೈಗೊಳ್ಳುವ ಚಟುವಟಿಕೆಗಳು ನಮಗೆ ಸವಾಲನ್ನು ಪರಿಹರಿಸಲು ಶಕ್ತಿಯನ್ನು ನೀಡುತ್ತವೆ.ಆದರೆ ಸಂತೋಷದ ವಿಷಯವೆಂದರೆ ಇತ್ತೀಚಿನ ದಿನಗಳಲ್ಲಿ ಎಲ್ಲರೂ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕುವ ಮತ್ತು ಅವುಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಯಶಸ್ವಿಯಾಗುತ್ತಿದ್ದಾರೆ. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದ್ದೇ ಇದೆ ಎಂಬ ನಂಬಿಕೆ ಜನರಲ್ಲಿ ಕ್ರಮೇಣ ಹೆಚ್ಚಾಗುತ್ತಿದೆ.…

Read More

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-574198ದೂ: 9742884160 ಉದಯರಶ್ಮಿ ದಿನಪತ್ರಿಕೆ ಇಂದಿನ ಯುದ್ಧಗಳು ಕೇವಲ ಬಂದೂಕುಗಳ ಮೂಲಕ ನಡೆಯುವ ಬದಲು ಇಡೀ ಮನುಕುಲವನ್ನೇ ಕ್ಷಣಾರ್ಧದಲ್ಲಿ ನಾಶಪಡಿಸುವಂಥ ಅಪಾಯಕಾರಿ ಅಣ್ವಸ್ತ್ರಗಳು ಮತ್ತು ಜೈವಿಕ ಅಸ್ತ್ರಳಂತಹ ಸಮೂಹನಾಶಕ ಅಸ್ತ್ರಗಳನ್ನು ಪ್ರತೀ ದೇಶಗಳು ಒಗ್ಗೂಡಿಸಿ ಇಟ್ಟುಕೊಂಡಿವೆ. ಎಲ್ಲಾದರೂ ವಿವೇಚನೆ ಇಲ್ಲದೇ ಅವುಗಳನ್ನು ಪ್ರಯೋಗಿಸಿದರೆ ಅದರಿಂದ ಶತಮಾನದ ಹಿಂದೆ ಜಪಾನಿನಲ್ಲಿ ಆಗಿರುವ ಯುದ್ಧದ ಭೀಕರತೆಗಿಂತಲೂ ಹಲವು ಪಟ್ಟು ಹೆಚ್ಚಿನ ಪ್ರಮಾಣದ ನಾಶವಾಗುವುದು ದಿಟ. ಇಂತಹ ದುರಂತಕ್ಕೆ ಕಾರಣವಾಗುವ ಯುದ್ಧಕ್ಕೆ ಕೈಹಾಕುವ ಮೊದಲು ಯುದ್ಧದಾಹಿ ದೇಶಗಳು ತಮ್ಮ ದೇಶದ ನಾಗರಿಕರ ಮೇಲೆ ಆಗಬಹುದಾದ ಹಾನಿ ಮತ್ತು ದೇಶದ ಭವಿಷ್ಯದ ಕುರಿತು ಚಿಂತಿಸಬೇಕು. ಬರುವ ಸಮಸ್ಯೆಗಳಿಗೆ ಎಲ್ಲಕ್ಕೂ ಯುದ್ಧವೇ ಪರಿಹಾರ ಅಲ್ಲ ಎನ್ನುವುದನ್ನು ಗತಿಸಿರುವ ಯುದ್ಧ ಪರಿಣಾಮಗಳಿಂದ ಅರಿಯಬೇಕು.ಯುದ್ಧಗಳು ಯಥೇಚ್ಛ ಸಾವುನೋವು, ಆರ್ಥಿಕ ಕುಸಿತ, ಸಾಮಾಜಿಕ ಅಸ್ಥಿರತೆ ಮತ್ತು ಪರಿಸರ ವಿನಾಶವನ್ನು ಉಂಟುಮಾಡುವ ಮಾನವ ನಿರ್ಮಿತ ವಿಪತ್ತಾಗಿದೆ. ಇದು ತಲೆಮಾರುಗಳ ಕಾಲದವರೆಗೆ ಕಾಡುವ ಮಾನಸಿಕ…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ದ್ವಿತಿಯ ಪಿಯು ಫಲಿತಾಂಶ ಹೊರ ಬಂದಿದ್ದು ಪಟ್ಟಣದಲ್ಲಿರುವ ಪ್ರತಿಷ್ಠಿತ ರಾಯಲ್ ಪಬ್ಲಿಕ್ ವಿಜ್ಞಾನ ಮತ್ತು ಕಲಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದುಕೊಂಡು ಕಾಲೇಜಿನ ಗೌರವ ಹೆಚ್ಚಿಸಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳ ಪೈಕಿ ನಾಲ್ವರು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದು ೨೯ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ೧೩ ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ನಲ್ಲಿ ಪಾಸಾಗುವ ಮೂಲಕ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿ ಸುದೀಪ್ ಬಸವರಾಜ ರಾಠೋಡ ೫೫೨ ಅಂಕಗಳನ್ನು ಪಡೆದು ೯೨ ಪ್ರತಿಶತದೊಂದಿಗೆ ಪಾಸಾಗಿ ಕಾಲೇಜಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಶಭನಮ್ ಸಾಹೇಬ್‌ಪಟೇಲ್ ೫೪೩ ಅಂಕಗಳೊಂದಿಗೆ ೯೦.೫ ಪ್ರತಿಶತದೊಂದಿಗೆ ತೇರ್ಗಡೆಯಾಗಿ ಕಾಲೇಜಿಗೆ ದ್ವಿತಿಯ ಸ್ಥಾನ ಪಡೆದುಕೊಂಡಿದ್ದಾಳೆ. ಉಳಿದಂತೆ ಮಿಜ್ಬಾ ಅಶ್ಪಾಕ್ ೫೩೯ (೮೯.೮), ಸುಲೇಮನ್ ಮಹಿಬೂಬ್ ೫೧೦ (೮೫), ಅರುಣಕುಮಾರ ಶ್ರೀಶೈಲ್ ೫೦೪ (೮೪), ಐಶ್ವರ್ಯ ಮಲ್ಲಿನಾಥ ೫೦೨ (೮೩.೬), ಮಹಮ್ಮದ್ ಹಸೀಬ್ ೪೮೨ (೮೦.೩), ಅವಿನಾಶ ಬಸವರಾಜ ೪೭೮ (೭೯.೬) ಜಿಶಾನ್ ರಶೀದ್ ೪೭೧ (೭೮.೫), ಸುಫಿಯಾ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಕುಪಕಡ್ಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕೀರ್ತಿ ಶಿವಪ್ಪ ಹೊರಟ್ಟಿ ಅವರು 2025-26ನೇ ಸಾಲಿನ NMMS ಪರೀಕ್ಷೆಯಲ್ಲಿ 114 ಅಂಕಗಳನ್ನು ಪಡೆದು ಬಸವನ ಬಾಗೇವಾಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.ಕಳೆದ ಫೆಬ್ರವರಿ ತಿಂಗಳಲ್ಲಿ ನಡೆದ ಈ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಸರಕಾರಿ ಶಾಲೆಯ ವಿದ್ಯಾರ್ಥಿನಿಯಾಗಿ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ.ಅದೇ ಶಾಲೆಯ ಇತರೆ ವಿದ್ಯಾರ್ಥಿಗಳೂ ಉತ್ತಮ ಸಾಧನೆ ತೋರಿದ್ದು, ಗಾಯತ್ರಿ ಬಡಿಗೇರ 92, ಅಪೇಕ್ಷಾ ಕೋಲಕಾರ 86, ಮಲ್ಲಪ್ಪ ಬಿಜ್ಜರಗಿ 84, ಸಾಕ್ಷಿ ಮ್ಯಾಗೇಡಿ 81 ಹಾಗೂ ಲಕ್ಷ್ಮೀ ತಿಳಗುಳ 77 ಅಂಕಗಳನ್ನು ಪಡೆದುಕೊಂಡಿದ್ದಾರೆ.ಮಕ್ಕಳ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಸಮನ್ವಯಾಧಿಕಾರಿ ಸುನೀಲ ನಾಯಕ, NMMS ತಾಲೂಕು ನೋಡಲ್ ಅಧಿಕಾರಿ ಅನುಜಾ ಗುಬ್ಬಾ ಸೇರಿದಂತೆ ಶಾಲಾ ಅಧ್ಯಕ್ಷ ಮುರಗೇಶ ಹಳ್ಳಿ, ಮುಖ್ಯಗುರು ಸಿದ್ದಪ್ಪ ಕೋಟ್ಯಾಳ ಹಾಗೂ ಶಿಕ್ಷಕರಾದ ಹಣಮಂತ ಬಿರಾದಾರ, ಸಂಗಮೇಶ ಎಲಬಳ್ಳಿ, ಶಾಂತಪ್ಪ ನಾಗರಳ್ಳಿ,…

Read More

ಗ್ರಾಮೀಣ ಪ್ರದೇಶಗಳಲ್ಲಿ ಕುಡಿವ ನೀರಿನ ಸಮಸ್ಯೆಗೆ ಸಂಪರ್ಕಿಸಿ | ಜಿಪಂ ಸಿಇಓ ರಿಷಿ ಆನಂದ ಪ್ರಕಟಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿಗದಿತ ಸಮಯದಲ್ಲಿ ಪರಿಹರಿಸಲು ಜಿಲ್ಲಾ ಪಂಚಾಯತ ಕಚೇರಿ, ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಕಚೇರಿ ಮತ್ತು ಜಿಲ್ಲೆಯ ಎಲ್ಲಾ ತಾಲೂಕಾ ಪಂಚಾಯತಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ.ಜಿಲ್ಲಾ ಪಂಚಾಯತ ಕಚೇರಿಯ ಸಹಾಯವಾಣಿ ಸಂಖ್ಯೆ ; ೦೮೩೫೨-೨೭೭೨೯೩, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿಯ ದೂ. ಸಂಖ್ಯೆ : ೦೮೩೫೨-೨೪೪೯೭೧, ಮದ್ದೇಬಿಹಾಳ ೦೮೩೫೬-೨೦೦೬೦೬, ತಾಳಿಕೋಟಿ ೦೮೩೫೬-೨೦೦೧೦೩, ಸಿಂದಗಿ ೦೮೪೮೮ ೨೨೧೭೭೨, ದೇವರ ಹಿಪ್ಪರಗಿ ೦೮೪೨೪-೨೦೦೧೧೪, ಆಲಮೇಲ ೦೮೪೮೮-೨೯೮೯೦೦, ವಿಜಯಪುರ ೦೮೩೫೨-೨೪೨೪೨೩, ಬಬಲೇಶ್ವರ ೦೮೩೫೫-೨೦೦೦೦೫, ತಿಕೋಟಾ ೦೮೩೫೨-೨೯೪೫೦೬. ಇಂಡಿ ೦೮೩೫೯-೨೦೦೦೨೬, ಚಡಚಣ ೯೪೮೦೮೩೧೭೧೮, ಬ.ಬಾಗೇವಾಡಿ ೦೮೩೫೮-೨೪೫೨೩೬, ನಿಡಗುಂದಿ ೦೮೪೨೬-೨೦೦೧೬೩, ಕೊಲ್ಹಾರ ೦೮೪೨೬-೨೦೦೧೦೩ ಈ ಸಹಾಯ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಸುಕ್ಷೇತ್ರ ಲಚ್ಯಾಣದಲ್ಲಿ ಶ್ರೀ ಶಂಕರಲಿಂಗ ಮಹಾ ರಥೋತ್ಸವ ಬುಧವಾರ ಸಂಜೆ ಮೂಲಾ ನಕ್ಷತ್ರ ಶುಭ ಮೂಹೂರ್ತದಲ್ಲಿ ನೆರೆದ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಸಂಭ್ರಮದಿಂದ ನೆರವೇರಿತು.ಬಂಥನಾಳದ ಪರಮಪೂಜ್ಯ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳು, ಯರನಾಳದ ಪೂಜ್ಯ ಶ್ರೀ ಗುರು ಸಂಗನಬಸವ ಶ್ರೀಗಳು, ಇಟಗಿ ಪೂಕ್ಯರು, ಶಿರವಾಳದ ಸೋಮನಿಂಗ ಮಹಾರಾಜರು, ಸೇರಿದಂತೆ ವಿವಿಧ ಪೂಜ್ಯರ ಸಾನಿಧ್ಯದಲ್ಲಿ ನಡೆದ ರಥೋತ್ಸವ ನೋಡಿ ಕಣ್ಣು ತುಂಬಿಕೊಳ್ಳಲು ನೆರೆಯ ರಾಜ್ಯ ಮಹಾರಾಷ್ಟ್ರ ಆಂಧ್ರಪ್ರದೇಶ ತೆಲಂಗಾಣ ಸೇರಿದಂತೆ ರಾಜ್ಯದ ನಾನಾ ಭಾಗದ ಸಹಸ್ರಾರು ಭಕ್ತರು ಆಗಮಿಸಿದರು. ರಥೋತ್ಸದ ಸಂದರ್ಭದಲ್ಲಿ ಭಕ್ತರು ಬಾಳೆಹಣ್ಣು ಉತ್ತತ್ತಿ ಖಾರಿಕ ರಥದ ಮೇಲೆ ಎಸೆದು ಭಕ್ತಿಯ ಸಮರ್ಪಿಸಿದರು.ರಥವು ಬಸವಣ್ಣ ಕಟ್ಟೆಯ ವರೆಗೆ ಚಲಿಸಿ ಮೂಲ ಸ್ಥಳ ತಲುಪಿತು.

Read More