Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಎಜುಕೇಶನ್ ಅಸೋಸಿಯೇಷನ್ ಎಂದು ಮರುನಾಮಕರಣ | ಅಧ್ಯಕ್ಷ ಎಂ.ಬಿ.ಪಾಟೀಲ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಸ್ಥೆಯ ಜನಸೇವೆಯನ್ನು ರಾಷ್ಟ್ರವ್ಯಾಪಿ ವಿಸ್ತರಿಸುವ ಸದುದ್ದೇಶದಿಂದ ಬಿಜಾಪುರ ಲಿಂಗಾಯತ ಡಿಸ್ಟ್ರೀಕ್ಡ್ ಎಜುಕೇಶನ್ ಅಸೋಸಿಯೇಷನ್ ಹೆಸರನ್ನು ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಎಜುಕೇಶನ್ ಅಸೋಸಿಯೇಷನ್ ಎಂದು ಬದಲಾಯಿಸಲು ಇಂದು ರವಿವಾರ ನಡೆದ ಬಿ.ಎಲ್.ಡಿ.ಇ ಸಂಸ್ಥೆಯ ಸರ್ವ ಸದಸ್ಯರ ವಿಶೇಷ ಸಭೆಯಲ್ಲಿ ಒಕ್ಕೊರಲಿನಿಂದ ಅನುಮೋದನೆ ನೀಡಲಾಗಿದೆ.ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.ಸಭೆಯಲ್ಲಿ ಮಾತನಾಡಿದ ಎಂ. ಬಿ. ಪಾಟೀಲ ಅವರು, 1910ರಲ್ಕಿ ವಿಜಯಪುರದಲ್ಲಿ ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೆಶನಲ್ ಅಸೋಸಿಯೇಷನ್ ಪ್ರಾರಂಭವಾಗಿತ್ತು. ಈಗ ವಿಜಯಪುರ ಜಿಲ್ಲೆ ವಿಭಜನೆಯಾಗಿದೆ. ಸಂಸ್ಥೆಯ ವತಿಯಿಂದ ಬೆಂಗಳೂರಿನ ಹೃದಯ ಭಾಗದಲ್ಲಿ ರೂ. 300 ಕೋ. ವೆಚ್ಚದಲ್ಲಿ ಜಮೀನು ಖರೀದಿಸಲಾಗಿದೆ. ಮುಂಬರುವ ದಿನಗಲ್ಲಿ ಅಲ್ಲಿ ನಾನಾ ಕಾಲೇಜುಗಳನ್ನು ಪ್ರಾರಂಭಿಸುವ ಉದ್ದೇಶವಿದೆ. ಈ ಮೂಲಕ ಸಂಸ್ಥೆಯ ಕಾರ್ಯ ವ್ಯಾಪ್ತಿಯನ್ನು ರಾಜ್ಯಕ್ಕೆ ವಿಸ್ತರಿಸಲಾಗುತ್ತಿದೆ. ಭವಿಷ್ಯದಲ್ಲಿ ಸಂಸ್ಥೆಯ…
ಹೊನವಾಡದಲ್ಲಿ ವಕ್ಫ್ ಆಸ್ತಿ ಬರೀ 11 ಎಕರೆ | ಅನವಶ್ಯಕ ಗೊಂದಲ ಸೃಷ್ಟಿ | ಆತಂಕ ಬೇಡವೆಂದ ಸಚಿವ ಎಂ.ಬಿ.ಪಾಟೀಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಕುರಿತಂತೆ ಕೆಲ ಜನಪ್ರತಿನಿಧಿಗಳು ಅನವಶ್ಯಕವಾಗಿ ಗೊಂದಲ ಸೃಷ್ಟಿ ಮಾಡಿ, ಚರ್ಚೆ ಹುಟ್ಟುಹಾಕಿದ್ದು ಇದಕ್ಕೆಲ್ಲ ಇತಿಶ್ರಿ ಹಾಡಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ರವಿವಾರ ನಗರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಉಪವಿಭಾಗಾಧಿಕಾರಿಗಳು ಮತ್ತು ತಹಸಿಲ್ದಾರರು ಇರಲಿದ್ದು, ಈ ಸಮಿತಿಯು ೧೯೬೪ ರಿಂದ ೧೯೭೪ ರವರೆಗಿನ ಜಿಲ್ಲೆಯ ಎಲ್ಲ ವಕ್ಫ್ ಆಸ್ತಿಗಳ ಭೂದಾಖಲೆಗಳನ್ನು ಪರಿಶೀಲನೆ ಮಾಡಲಿದೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ ವಕ್ಫ್ ೧೪೨೦೧ ಎಕರೆ ಆಸ್ತಿ ಹೊಂದಿತ್ತು. ಅದರಲ್ಲಿ ೧೧೮೩೫ ಎಕರೆ ಆಸ್ತಿಯನ್ನು ಸರಕಾರ ಈಗಾಗಲೆ ಹಂಚಿಕೆ ಮಾಡಿದೆ. ೧೪೫೯ ಎಕರೆ ಇಂದೀಕರಣ ಮಾಡಬೇಕಿದೆ. ಈಗ ವಕ್ಫ್ ಹೆಸರಿನಲ್ಲಿರುವುದು ೭೭೩…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ತಂಡದ ನಾಯಕ (Pಒಅ) ಹಾಗೂ ಜಲಧಾರೆ ಯೋಜನೆಯ ಗುತ್ತಿಗೆದಾರರು ಇವರೊಂದಿಗೆ ಅ.೨೫ರಂದು ಜಿಲ್ಲಾ ಪಂಚಾಯತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯು ನಡೆಯಿತು.ವಿಜಯಪುರ ಜಿಲ್ಲೆಯಲ್ಲಿ ಶಾಶ್ವತ ಕುಡಿಯುವ ನೀರಿನ ಜಲಧಾರೆ ಯೋಜನೆಯನ್ನು ರಾಜ್ಯ ಸರ್ಕಾರದಿಂದ ಮೊದಲ ಹಂತದಲ್ಲಿಯೇ ಅನುಮೋದನೆ ನೀಡಲಾಗಿದೆ. ಇದರ ಉದ್ದೇಶ ಎಲ್ಲ ಗ್ರಾಮೀಣ ಜನವಸತಿಗಳಿಗೆ ಪ್ರತಿ ವ್ಯಕ್ತಿಗೆ ತಲಾ ೫೫ ಲೀಟರನಂತೆ (ಐPಅಆ) ಯಂತೆ ಆಲಮಟ್ಟಿ ಮತ್ತು ನಾರಾಯಣಪೂರ ಜಲಾಶಯದ ಹಿನ್ನೀರನ್ನು ಶುದ್ಧಿಕರಿಸಿ ಪೂರೈಸುವುದಾಗಿರುತ್ತದೆ.ವಿಜಯಪುರ ಜಿಲ್ಲೆಯ ವಿಜಯಪುರ, ಇಂಡಿ ಮತ್ತು ಬಸವನ ಬಾಗೇವಾಡಿ ತಾಲೂಕಿನ ೭೦೨ ಜನವಸತಿಗಳ ಹಾಗೂ ೫ ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯಾಗಿರುತ್ತದೆ ಹಾಗೂ ಮುದ್ದೇಬಿಹಾಳ ತಾಲೂಕು ಮತ್ತು ಸಿಂದಗಿ ತಾಲೂಕಿನ ೩೪೩ ಜನವಸತಿಗಳ ಹಾಗೂ ೬ ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯಾಗಿದ್ದು,…
ಉದಯರಶ್ಮಿ ದಿನಪತ್ರಿಕೆ ಇಂಡಿ: ‘ಯುವಕರ ಸ್ವಾವಲಂಬಿ ಬದುಕಿಗೆ ವೃತ್ತಿಪರ ತರಬೇತಿ ಅವಶ್ಯವಾಗಿದ್ದು, ಇಂದಿನ ತ್ವರಿತ-ಬದಲಾಗುತ್ತಿರುವ ಆರ್ಥಿಕ ಸನ್ನಿವೇಶದಲ್ಲಿ ಮುಂದಿನ ಪೀಳಿಗೆಗೆ ನಿರ್ದಿಷ್ಟ ವಿಶೇಷ ಕೌಶಲ್ಯಗಳನ್ನು ಒದಗಿಸುವುದು ಅತ್ಯಗತ್ಯ’ ಎಂದು ಇಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೋ. ಆರ್ ಎಸ್ ರಮೇಶ ಹೇಳಿದರು.ಅವರು ಶನಿವಾರದಂದು ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ತರಬೇತಿ ಸಂಸ್ಕೃತಿಯು ನಿರಂತರ ಕಲಿಕೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. ಇದು ನಿರಂತರ ಸುಧಾರಣೆಗೆ ಕಾರಣವಾಗುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಹಿರೇರೂಗಿ ಯುಬಿಎಸ್ ಶಾಲಾ ಶಿಕ್ಷಕ ಸಂತೋಷ ಬಂಡೆ ಮಾತನಾಡಿ,ವೃತ್ತಿಪರ ತರಬೇತಿಯು ಯುವ ವಿದ್ಯಾರ್ಥಿಗಳಿಗೆ ಉದ್ಯೋಗಕ್ಕೆ ಸಿದ್ಧರಾಗಲು ಸಹಕರಿಸಿ, ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಪ್ರೇರಣೆಯಾಗುತ್ತದೆ. ದೇಶದ ಆರ್ಥಿಕ ಬೆಳವಣಿಗೆಗೆ ಧನಾತ್ಮಕವಾಗಿ ಕೊಡುಗೆ ನೀಡುವತ್ತ ಯುವಸಮೂಹ ಗಮನಹರಿಸಬೇಕು ಎಂದು ಹೇಳಿದರು.ತರಬೇತಿ ಸಂಸ್ಥೆಯ ಪ್ರಭಾರಿ ಪ್ರಾಚಾರ್ಯ ಪಿ ವೈ ರಜನೀಕರ ಅಧ್ಯಕ್ಷತೆ ವಹಿಸಿ ಮಾತನಾಡಿ,‘ಘಟಿಕೋತ್ಸವ ಎನ್ನುವುದು ಸಂಭ್ರಮಾಚರಣೆಯಲ್ಲ. ಬದುಕು ರೂಪಿಸುವ ಕಾಲ. ನಿಮ್ಮ ಮೇಲೆ…
ಬಸವನ ಅಗಲಿಕೆಗೆ ಕಂಬನಿಯ ಅಶ್ರುದರ್ಪಣ | ಶ್ರೀಗಳು, ರೈತರ ಸಮ್ಮುಖದಲ್ಲಿ ಗೌರವಯುತ ಅಂತಿಮ ಸಂಸ್ಕಾರ ಉದಯರಶ್ಮಿ ದಿನಪತ್ರಿಕೆ – ಇಲಾಹಿ ಇ. ಜಮಖಂಡಿ ಚಿಮ್ಮಡ: ಬಹುತೇಕ ರೈತರು ತಮ್ಮ ಕೃಷಿ ಕಾಯಕಗಳಿಗೆ ಬೆನ್ನೆಲುಬಾಗಿ ದುಡಿಯುವ ಆಕಳು, ಎಮ್ಮೆ, ಎತ್ತುಗಳು ದುಡಿಯಲು ಅಸಹಾಯಕ ಸ್ಥಿತಿ ತಲುಪಿದಾಗ ಅವುಗಳನ್ನು ಕಸಾಯಿಖಾನೆಗೋ ಅಥವಾ ಗೋಶಾಲೆಗೋ ಸಾಗಿಸಿ ಕೈತೊಳೆದುಕೊಂಡು ಬಿಡುತ್ತಾರೆ ಆದರೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ರೈತ ಪರಪ್ಪಾ ರಾಮಪ್ಪಾ ಪಾಲಭಾವಿಯವರು ನಿಸ್ಸಹಾಯಕ ಆಕಳು, ಎತ್ತುಗಳನ್ನು ಮನೆಯ ಸದಸ್ಯರಂತೆ ಸಾಕಿ, ಸಲಹಿ ಅವು ಅಗಲಿದಾಗ ಗೌರವಯುತವಾಗಿ ಅಂತಿಮ ಸಂಸ್ಕಾರ ನೆರವೇರಿಸುವ ಮೂಲಕ ಇತರ ರೈತರಿಗೆ ಮಾದರಿಯಾಗಿದ್ದಾರೆ.ಸುಮಾರು ಇಪ್ಪತ್ನಾಲ್ಕು ವರ್ಷಗಳ ಹಿಂದೆ ಖರೀದಿಸಿದ ಎತ್ತೊಂದು ಗುರುವಾರ ಸಂಜೆ ವಯೋಸಹಜ ಅಸುನೀಗಿದಾಗ ತಮ್ಮ ಬಾಗದ ರೈತರಿಗೆಲ್ಲ ಕರೆ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಆಹ್ವಾನ ನೀಡಿ ಶ್ರೀ ಪ್ರಭು ಮಹಾಸ್ವಾಮಿಜಿ, ಶ್ರೀ ಜನಾರ್ಧನ ಮಹಾರಾಜರು ಹಾಗೂ ನೂರಾರು ಜನ ರೈತರ ಸಮ್ಮುಖದಲ್ಲಿ ಗೌರವಯುತವಾಗಿ ಅಂತ್ಯ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಕೊಡಮಾಡುವ ” ಜಾನಪದ ಪ್ರಪಂಚ ” ಪ್ರಶಸ್ತಿಯನ್ನು ಬೆಂಗಳೂರಿನ ಸೇಂಟ್ ಕ್ಲಾರೆಟ್ ಕಾಲೇಜು ಸಭಾಂಗಣದಲ್ಲಿ ಕ ಜಾ ಪ ರಾಜ್ಯಾಧ್ಯಕ್ಷ ಡಾ ಎಸ್ ಬಾಲಾಜಿಯವರ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಣಮಾಪುರ ಹಲಗೆಮಜಲು ಕಲಾವಿದ ಗಂಗಾಧರ ಬಡಿಗೇರನಿಗೆ ನೀಡಿ ಗೌರವಿಸಲಾಯಿತು.ರೆವರೆಂಡ್ ಫಾದರ್ ಜೋಸೆಫ್ ಎಸ್ ಸಾನಿಧ್ಯದಲ್ಲಿ, ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಕುಲಸಚಿವ ಶಹಜಹಾನ್ ಮುದಕವಿ ಉದ್ಘಾಟಿಸಿದರು. ಅಂತಾರಾಷ್ಟ್ರೀಯ ಜಾನಪದ ಕಲಾವಿದ ಡಾ ಅಪ್ಪಗೆರೆ ತಿಮ್ಮರಾಜು, ರಾಜ್ಯ ಸಹಕಾರಿ ಮಹಾಮಂಡಳದ ನಿಬಂಧಕ ಲಕ್ಷ್ಮೀಪತಯ್ಯ , ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಜಿಲ್ಲಾಧ್ಯಕ್ಷ ಪ್ರಕಾಶ ಮೂರ್ತಿ, ದತ್ತಿದಾನಿ ಸೌಭಾಗ್ಯ ಟಿ ಕೆ ಗೌಡ , ಕನ್ನಡ ಜಾನಪದ ಪರಿಷತ್ ಬೆಂಗಳೂರು ಜಿಲ್ಲಾಧ್ಯಕ್ಷರಾದ ಡಾ ರಾಜು ಗೂಂಡಾಪುರ , ಡಾ ರಿಯಾಜ್ ಪಾಷ ಮತ್ತು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಾರ್ಷಿಕೋತ್ಸವದ ನಿಮಿತ್ತ ಪಟ್ಟಣದಲ್ಲಿ ಶನಿವಾರ ಸಂಜೆ ನಡೆದ ಭವ್ಯ ಪಥಸಂಚಲನ ಆಕರ್ಷಣೀಯವಾಗಿತ್ತು.ಪಟ್ಟಣದ ಹುಡ್ಕೋ ಬಡಾವಣೆಯ ಗವಿಸಿದ್ದೇಶ್ವರ ಕ್ರೀಡಾ ಮೈದಾನದಿಂದ ಶುರುವಾದ ಪಥಸಂಚಲನ ನ್ಯಾಯಾಲಯದ ಹಿಂದಿನ ಈಶ್ವರ ದೇವಸ್ಥಾನ, ಎಸ್ಬಿಐ ಬ್ಯಾಂಕ್ ರಸ್ತೆ, ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತ, ವಾಲ್ಮೀಕಿ ವೃತ್ತ, ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ, ಛತ್ರಪತಿ ಶಿವಾಜಿ ವೃತ್ತ, ಸಿದ್ರಾಮೇಶ್ವರ ವೃತ್ತ, ನೇತಾಜಿ ಗಲ್ಲಿ, ಕುಂಬಾರ ಗಲ್ಲಿ, ಸರಾಫ್ ಬಜಾರ, ದ್ಯಾಮವ್ವ ದೇವಿ ದೇವಸ್ಥಾನ, ಮುಖ್ಯ ಬಜಾರ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಮಾರ್ಗವಾಗಿ ವಿಬಿಸಿ ಹೈಸ್ಕೂಲ್ ಮೈದಾನದವರೆಗೆ ಘೋಷದೊಂದಿದೆ ಸಂಘದ ಕಾರ್ಯರ್ತರು ಅತ್ಯಂತ ಶಿಸ್ತಿನಿಂದ ಭಗವಾಧ್ವಜಕ್ಕೆ ಗೌರವ ಸಲ್ಲಿಸುತ್ತ ಸಾಗಿದರು.ಹಿಂದೂ ಭಗಿನಿಯರು ಗಲ್ಲಿಗಳನ್ನು ಸ್ವಚ್ಛಗೊಳಿಸಿ ರಂಗೋಲಿ ಹಾಕಿ ಪವಿತ್ರ ಭಗವಾಧ್ವಜಕ್ಕೆ ಗೌರವ ಸಲ್ಲಿಸಿದರೆ ಹಿಂದೂ ಬಾಂಧವರು ತಳಿರು ತೋರಣಗಳಿಂದ ರಸ್ತೆಗಳನ್ನು ಅಲಂಕರಿಸಿದ್ದರು. ಪಥಸಂಚಲನ ಗಲ್ಲಿಗಳಲ್ಲಿ ಆಗಮಿಸುತ್ತಿದ್ದಂತೆಗಣವೇಶಧಾರಿ ಸಂಘದ ಕಾರ್ಯಕರ್ತರಿಗೂ ಸೇರಿದಂತೆ ಭಗವಾಧ್ವಜಕ್ಕೆ ಪುಷ್ಪ ಸಮರ್ಪಿಸುವ ಮೂಲಕ ಗೌರವ ಸಲ್ಲಿಸಿದರು. ಹಲವರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಸರ್ಟಿಫೀಕೇಟ್ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಇದೇ ಅಕ್ಟೋಬರ್ ೨೮ರಂದು ಬೆಳಿಗ್ಗೆ ೧೦.೩೦ರಿಂದ ಕೌನ್ಸೆಲಿಂಗ್ ಆರಂಭವಾಗಲಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.ಮಹಿಳಾ ವಿವಿಯ ವಿವಿಧ ಕೋರ್ಸ್ಗಳಿಗೆ ಈಗಾಗಲೇ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿಯರು ದಿನಾಂಕ ೨೮ರಂದು ಅಗತ್ಯ ಮೂಲ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಿದ್ದು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ದಿನಾಂಕ ೨೯ ರಂದು ಸೂಪರ್ ನ್ಯೂಮರಿ ಕೋಟಾದ ಅಡಿಯಲ್ಲಿ ಪ್ರವೇಶ ಪಡೆದುಕೊಳ್ಳಬಹುದಾಗಿದ್ದು ದಿನಾಂಕ ೩೦ರಂದು ಸೆಲ್ಪ್ ಸಪೋರ್ಟಿಂಗ್ ಯೋಜನೆ ಅನ್ವಯ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಶಂಕರಗೌಡ ಸೋಮನಾಳ, ಕುಲಸಚಿವರು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರÀ- ೫೮೬೧೦೮. ದೂರವಾಣಿ ಸಂಖ್ಯೆ: ೦೮೩೫೨-೨೯೭೦೬೨, ೭೭೯೫೧೨೨೯೬೦, ೭೨೦೪೮೮೯೮೫೫ ಮತ್ತು ೯೯೦೧೮೨೭೬೯೬; ತಿebsiಣe: ತಿತಿತಿ.ಞsತಿu.ಚಿಛಿ.iಟಿ ಸಂಪರ್ಕಿಸಬಹುದಾಗಿದೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಬಹುತೇಕ ರಸ್ತೆ ಹಾಗೂ ಫುಟ್ ಪಾತ್ ಗಳ ಮೇಲೆ ಅಕ್ರಮವಾಗಿ ನಿರ್ಮಿಸಿದ್ದ ಗೂಡಂಗಡಿಗಳ ತೆರವು ಕಾರ್ಯಾಚರಣೆ ಶನಿವಾರ ಪುರಸಭೆ ಮುಖ್ಯಾಧಿಕಾರಿ ರಾಜಶೇಖರ ಅವರ ನೇತೃತ್ವದಲ್ಲಿ ಜರುಗಿತು.ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ರಾಜಶೇಖರ ಮಾತನಾಡಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತೆರವು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ವ್ಯಾಪಾರಸ್ಥರು ರಸ್ತೆ ಹಾಗೂ ಪುಟ್ ಪಾತ್ ಗಳನ್ನು ಆಕ್ರಮಿಸಿಕೊಂಡಿರುವ ಕಾರಣ ವಾಹನಗಳ ನಿಲುಗಡೆಗೆ ಹಾಗೂ ಪಾದಾಚಾರಿಗಳ ಸಂಚಾರಕ್ಕೆ ಅನಾನುಕೂಲವಾಗುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಗೂಡಂಗಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನಕೂಲ ಕಲ್ಪಿಸುವ ದೃಷ್ಟಿಯಿಂದ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ.ಈ ವೇಳೆ ಪುರಸಭೆ ಸಿಬ್ಬಂದಿ ಸಿದ್ದು ಅಂಗಡಿ, ಅಜರ್ ನಾಟಿಕಾರ್, ನಬಿರಸೂಲ್ ಉಸ್ತಾದ್, ಇಂದುಮತಿ ಮಣೂರ, ದಯಾನಂದ ಇವಣಿ ಸೇರಿದಂತೆ ಇನ್ನಿತರ ಸಿಬ್ಬಂದಿ ಇದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಸೌಂದರ್ಯೀಕರಣಕ್ಕೆ ಮುನ್ನುಡಿ ಬರೆದಿರುವ ಪುರಸಭೆ ಅಧ್ಯಕ್ಷರಿಗೂ ಸರ್ವ ಸದಸ್ಯರಿಗೂ, ಆಡಳಿತ ವರ್ಗಕ್ಕೂ, ಪೊಲೀಸ್ ಇಲಾಖೆಯ ಅಧಿಕಾರಿಗಳಿಗೂ ಮತ್ತು ಸಿಬ್ಬಂದಿಗಳಿಗೂ ಸಿಂದಗಿ ಯೋಜನಾ ಅಭಿವೃದ್ಧಿ ಪ್ರಾಧಿಕಾರವು ಅಭಿನಂದಿಸುತ್ತದೆ ಎಂದು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಕಾಂಬಳೆ ತಿಳಿಸಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಕ್ರಮವಾಗಿ ನೆಲೆಯೂರಿದ ಗೂಡಂಗಡಿಗಳ ತೆರವುಗೊಳಿಸಿದ ಪುರಸಭೆ ಕಾರ್ಯ ಅತ್ಯಂತ ಯೋಗ್ಯವಾದ ನಿರ್ಣಯ. ವಿಜಯಪುರ ಜಿಲ್ಲೆಯಯಲ್ಲಿಯೇ ಶಿಕ್ಷಣ, ವ್ಯಾಪಾರ ಕ್ಷೇತ್ರದಲ್ಲಿ ಅತ್ಯಂತ ಮುಂಚೂಣಿ ನಗರವೆಚಿದರೆ ಸಿಂದಗಿ. ಪಟ್ಟಣದ ರಸ್ತೆಗಳು ಅಕ್ರಮ ಒತ್ತುವರಿಯಿಂದ ನಗರ ಸೌಂದರ್ಯ ಮಾಸಿಹೊಗಿತ್ತು. ಅಭಿವೃದ್ಧಿ ಮತ್ತು ಸೌಂದರ್ಯದಿAದ ಹಿಂದುಳಿದಿತ್ತು. ಎಲ್ಲ ರಂಗಗಳಲ್ಲೂ ಮುಂದುವರೆದರು ಅಕ್ರಮ ಒತ್ತುವರಿಯ ಗೂಡಂಗಡಿಗಳ ಕಪ್ಪು ಚುಕ್ಕೆಯಾಗಿತ್ತು. ಆದರೆ ಈಗಿನ ಸಂದರ್ಭದಲ್ಲಿ ಮಾನ್ಯ ಪುರಸಭೆ ಅಧ್ಯಕ್ಷರು, ಸದಸ್ಯರು ಆಡಳಿತ ನಡೆಸಿದ ಕಾರ್ಯಾಚರಣೆಯ ಫಲದಿಂದ ರಸ್ತೆಗಳ ಅಗಲೀಕರಣಗೊಂಡು ಸುಂದರವಾದ ಫುಟ್ಪಾತ್ ಹಾಗೂ ಬೇಸಿಗೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಮರಗಳು ನೆಡುವ ಮುಖಾಂತರ ಮಿನಿ ಬಸ್ ನಿಲ್ದಾಣಗಳು ಸ್ಥಾಪಿಸುವ ಸಲುವಾಗಿ…
