Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಶ್ರೀ ಸತ್ಯ ಸಾಯಿ ಜನ್ಮ ಶತಮಾನೋತ್ಸವದ ಅಂಗವಾಗಿ ಶ್ರೀ ಸತ್ಯ ಸಾಯಿ ಪ್ರೇಮವಾಹಿಸಿ ರಥವು ಇಂಡಿಗೆ ಏ.೧೩ ರಂದು ಬರಲಿದೆ ಎಂದು ಸಂಯೋಜಕರು ಶ್ರೀ ಸತ್ಯ ಸಾಯಿ ಮಹಿಳಾ ಸೇವಾ ಸಮಿತಿ ಗಂಗಾ ಗಲಗಲಿ ತಿಳಿಸಿದ್ದಾರೆ.ಅಂದು ಮಹಾವೀರ ವೃತ್ತದಿಂದ ಮೆರವಣೆಗೆ ನಡೆಯಲಿದ್ದು ವಾಧ್ಯ ಮೇಳ ಘೋಷಣೆಯೊಂದಿಗೆ ಸಾಯಿ ಗಾಯತ್ರಿ ಸಾಯಿ ಭಜನೆ ವೇಷದಾರಿಗಳು ಬಾಲ ವಿಕಾಸ ಮಕ್ಕಳಿಂದ ಮಹಿಳೆಯರ ಕೋಲಾಟ ಕುಂಭಮೇಳ ಆರತಿ ಮಂಗಳ ದ್ರವ್ಯ ಮತ್ತು ವಿವಿಧ ಭಕ್ಷ ಭೋಜನಗಳಿಂದ ರಥದ ಭವ್ಯವಾದ ಮೆರವಣೆಗೆ ನಡೆಯಲಿದೆ ಎಂದರು.ನಂತರ ಭಕ್ತಾದಿಗಳಿಗೆ ಸೀರೆ ಮತ್ತು ಮಹಾಪ್ರಸಾದ ವಿತರಣೆ ಮಾಡಲಾಗುವದು ಎಂದು ತಿಳಿಸಿದ್ದಾರೆ.ರಥವು ಪುಟಪುರ್ತಿಯಿಂದ ಹೊರಟು ಬಾಗಲಕೋಟ, ವಿಜಯಪುರಕ್ಕೆ ಏ. ೧೦ ರಂದು ಆಗಮಿಸಲಿದೆ. ಮುದ್ದೇಬಿಹಾಳ,ಹೂವಿನ ಹಿಪ್ಪರಗಿ, ಮನಗೂಳಿ, ಮುಳವಾಡ, ವಿಜಯಪುರ ಉಮರಾಣಿ ಅಂಜುಟಗಿ ಮಾರ್ಗವಾಗಿ ಇಂಡಿಗೆ ಆಗಮಿಸಿ ನಂತರ ರಾಮನಳ್ಳಿ,ಕೊರಳ್ಳಿ ಸಿಂದಗಿ ಮಾರ್ಗವಾಗಿ ಕಲಬುರಗಿ ಜಿಲ್ಲೆಗೆ ಹೊರಡಲಿದೆ ಎಂದರು.ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದು ಪುನೀತರಾಗಲು ಗಲಗಲಿ ವಿನಂತಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಧಾರ್ಮಿಕ ಕಾರ್ಯಕ್ರಮಗಳು ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿಯನ್ನು ನೀಡುತ್ತವೆ. ಪುರಾಣ ಪ್ರವಚನ ಆಲಿಸುವುದರಿಂದ ಮನಸ್ಸು ಶುದ್ಧಗೊಳ್ಳುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ನಗರದ ನಂದಿಕೋಲ್ ಓಣಿಯಲ್ಲಿ ಶ್ರೀ ಮಲ್ಲಿಕಾರ್ಜುನ ಜಾತ್ರೆ ಮಹೋತ್ಸವ ನಿಮಿತ್ತ ಹಮ್ಮಿಕೊಂಡ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಪುರಾಣ ಪ್ರವಚನ ಮಂಗಲೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ದೇವರು, ಧರ್ಮ, ಆಚಾರ-ವಿಚಾರ, ಸಂಪ್ರದಾಯ, ಸಂಸ್ಕೃತಿ, ಸಂಸ್ಕಾರ, ಮಾನವೀಯ ಮೌಲ್ಯಗಳಿಂದ ಕೂಡಿದ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವಲ್ಲಿ ಪುರಾಣ, ಸತ್ಸಂಗ ಕಾರ್ಯಕ್ರಮಗಳು ಅತ್ಯವಶ್ಯಕ. ಮಾನವ ತನ್ನ ಬದುಕಿನ ಜಟಾಪಟಿಯ ಮದ್ಯೆಯೂ ಜೀವನ ಪವಿತ್ರಗೊಳಿಸಲು ಆಧ್ಯಾತ್ಮಿಕ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಶರಣ-ಶರಣೆಯರ, ಮಹಾತ್ಮರ ಜೀವನ ಚರಿತ್ರೆಗಳನ್ನು ಆಲಿಸುವ ಮೂಲಕ ಸನ್ಮಾರ್ಗದತ್ತ ಸಾಗಬೇಕು ಎಂದರು.ಈ ವೇಳೆ ಕಾರ್ಯಕ್ರಮದ ಸಾನಿಧ್ಯ ವಹಿಸಿದ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯ ಆಶೀರ್ವಚನ ನೀಡಿದರು.ಸಾನಿಧ್ಯವನ್ನು ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯ, ಮಾಜಿ ಶಾಸಕ ಶರಣಪ್ಪ ಸುಣಗಾರ, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಅಶೋಕ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ತಾಳಿಕೋಟಿ ತಾಲೂಕಿನ ಮೂಕಿಹಾಳ ಗ್ರಾಮದ ರೈತರ ಜಮೀನನ್ನು ಚಿಮ್ಮಲಗಿ ಏತ ನೀರಾವರಿಯ ಪೂರ್ವ ಕಾಲುವೆಗೆ ಸ್ವಾಧೀನಪಡಿಸಿಕೊಂಡು ಹಲವು ವರ್ಷಗಳಾದರೂ ಇದುವರೆಗೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತರು ಗುರುವಾರ ಆಲಮಟ್ಟಿಯ ವಿಶೇಷ ಭೂಸ್ವಾಧೀನಾಧಿಕಾರಿ (ಎಸ್‌ಎಲ್‌ಒ) ಎಂ.ಬಿ. ನಾಗಠಾಣ ಅವರಿಗೆ ಮನವಿ ಸಲ್ಲಿಸಿದರು.ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕೃಷ್ಣಾ ಮೇಲ್ದಂಡೆ ಯೋಜನೆ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಚಿಮ್ಮಲಗಿ ಪೂರ್ವ ಕಾಲುವೆಗೆ ಮೂಕಿಹಾಳ ರೈತರ ಜಮೀನು ಹೆಚ್ಚುವರಿಯಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಇರುವ ಅಲ್ಪಸ್ವಲ್ಪ ಜಮೀನಿನಲ್ಲೂ ಕಾಲುವೆ ಹೋದ ಮೇಲೆ ಪರಿಹಾರ ನೀಡದಿದ್ದರೆ ರೈತ ಬದುಕುವುದಾದರೂ ಹೇಗೆ? ಎಂದು ಪ್ರಶ್ನಿಸಿದರು.ಪರಿಹಾರ ನೀಡಬೇಕು. ಇಲ್ಲದಿದ್ದರೆ ಆಲಮಟ್ಟಿ ಎಸ್‌ಎಲ್‌ಒ ಕಚೇರಿ ಮುಂದೆ ಮೂಕಿಹಾಳ ಸೇರಿದಂತೆ ಇತರೆ ಏತ ನೀರಾವರಿ ವ್ಯಾಪ್ತಿಯ ರೈತರನ್ನು ಸೇರಿಸಿಕೊಂಡು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.”ಕೂಡಲೇಏ.೧೨ರಂದು ರೈತರ ಸಭೆ:ಮನವಿ ಸ್ವೀಕರಿಸಿದ ಎಸ್‌ಎಲ್‌ಒ ಎಂ.ಬಿ. ನಾಗಠಾಣ ಅವರು,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬ -೨೭ನೇ ಸಾಲಿನ ಜಿಲ್ಲಾ ಬಾಲಭವನದ ವತಿಯಿಂದ ೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಏ.೧೦ ರಿಂದ ೨೪ ರವರೆಗೆ ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧:೩೦ ಗಂಟೆಯವರೆಗೆ ನಡೆಯಲಿದೆ. ಮಕ್ಕಳ ಸೃಜನಾತ್ಮಕತೆ, ಕೌಶಲ್ಯಾಭಿವೃದ್ಧಿ ಮತ್ತು ಮನರಂಜನೆಗಾಗಿ ಚಿತ್ರಕಲೆ, ನೃತ್ಯ, ಕರಾಟೆ ಹಾಗೂ ಕರಕುಶಲ ಕಲೆ ಚಟುವಟಿಕೆಗಳು ಶಿಬಿರದಲ್ಲಿ ಏರ್ಪಡಿಸಿದೆ. ಕಚೇರಿ ವೇಳೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಜಿಲ್ಲಾ ಬಾಲಭವನ, ಮನಗೂಳಿ ರಸ್ತೆ, ವಿಜಯಪುರ ಅವರನ್ನು ಮೊ.೭೭೬೦೪೦೨೨೩೯ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಾನವ ಕಲ್ಯಾಣ ಹಾಗೂ ಇಡೀ ಸಮಾಜ ಒಂದಾಗಿ ಬಾಳಬೇಕು ಎಂಬುವುದೇ ಪಂಚಪೀಠಗಳ ಆಶಯವಾಗಿದೆ. ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಭಗವತ್ಪಾದರು ಹೇಳಿದರು.ಪಟ್ಟಣದ ಜಡಿಮಠ ದ್ವಾರಬಾಗಿಲು ನಿರ್ಮಾಣಕ್ಕೆ ಗುರುವಾರ ಚಾಲನೆ ನೀಡುವುದರ ಮೂಲಕ ಆಶೀರ್ವಚನ ನೀಡಿ ಮಾತನಾಡಿದರು. ದೇವರಹಿಪ್ಪರಗಿ ಪಟ್ಟಣದಲ್ಲಿ ಐದು ಮಠಗಳಿದ್ದು ಅವುಗಳ ಪೀಠಾಧ್ಯಕ್ಷರ ನೇತೃತ್ವದಲ್ಲಿ ಇಲ್ಲಿ ವೀರಶೈವ ಧರ್ಮ, ಪರಂಪರೆ ಬೆಳವಣಿಗೆಯಲ್ಲಿ ನಿರತವಾಗಿವೆ. ಅವರ ಮಾರ್ಗದರ್ಶನದಲ್ಲಿ ಪಂಚಪೀಠಾಧಿಪತಿಗಳಿಗೆ ಸಂದರ್ಭನುಸಾರವಾಗಿ ಗೌರವ ನೀಡಲಾಗಿದೆ. ಇಂದಿನ ದಿನಮಾನಗಳಲ್ಲಿ ಬಹಳಷ್ಟು ಕಡೆ ಧರ್ಮ, ಪರಂಪರೆ, ಆದರ್ಶಗಳನ್ನು ದೂರತಳ್ಳಿ ಸ್ವಾರ್ಥಕ್ಕಾಗಿ ಸಮಾಜವನ್ನು ಒಡೆಯುವಂತ ಮತ್ತು ಜನರ ಭಾವನೆಗಳನ್ನು ಕೆಡಿಸುವಂತ ಕೆಲಸ ನಡೆಯುತ್ತಿದೆ. ಅದಕ್ಕೆ ಯಾರು ಅವಕಾಶ ಕೊಡದೇ ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎನ್ನುವಂತೆ ಬಾಳಬೇಕಾಗಿದೆ. ಮಾನವ, ಮಾನವೀಯ ಸಂಬಂಧಗಳನ್ನು ಬೆಸೆಯುವಂತ ಸಮಾಜ ಕಟ್ಟಬೇಕಾಗಿದೆ. ಎಲ್ಲರಿಗೂ ಶುಭವಾಗಲಿ ಎಂದರು.ಜಡಿಮಠ ಜಡಿಸಿದ್ಧೇಶ್ವರಶ್ರೀಗಳು ಮಾತನಾಡಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮ ಸಮಾಜದ ಹರಿಕಾರ, ಎಲ್ಲರಿಗೂ ಸಮಬಾಳು ಎನ್ನುವ ತತ್ವದಲ್ಲಿ ಅಸ್ಪೃಶ್ಯತೆ ವಿರುದ್ಧ ಹೋರಾಟ ಮಾಡಿ ಜಗತ್ತಿನ ಶ್ರೇಷ್ಠ ಸಂವಿಧಾನ ನೀಡಿದ ಹೆಮ್ಮೆಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಇದೇ ದಿ. ೧೧ ರಿಂದ ೧೪ ರವರೆಗೆ ಅಂಬೇಡ್ಕರ್ ಹಬ್ಬ-೨೦೨೬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೈದ್ಯ ಡಾ. ಬಾಬು ರಾಜೇಂದ್ರ ನಾಯಕ್ ಹೇಳಿದರು.ನಗರದ ಖಾಸಗಿ ಹೋಟೆಲನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತದ ಸಂವಿಧಾನ ಜಗತ್ತಿನ ಶ್ರೇಷ್ಠ ಗ್ರಂಥ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರ ಮನೆ -ಮನಗಳಿಗೂ ತಲುಪಿಸಬೇಕು. ಅವರ ಜಯಂತಿ ಕೇವಲ ಕಾರ್ಯಕ್ರಮವಾಗದೆ ಅವರ ವಿಚಾರ ಧಾರೆಗಳನ್ನು, ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಬಾಬಾ ಸಾಹೇಬ್ ಅಂಬೇಡ್ಕರ್ ಕೇವಲ ಜಯಂತಿ ಆಚರಣೆಗೆ ಸಿಮಿತವಾಗಿಲ್ಲ ಅವರು ಸರ್ವ ವ್ಯಾಪಿ, ಆ ನಿಟ್ಟಿನಲ್ಲಿಯೇ ಅಂಬೇಡ್ಕರ್ ಜಯಂತಿ ಇದೊಂದು ಸಂಗಮವಾಗಿದೆ. ಬಸವ ಬುದ್ದ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮೆಲಕು ಹಾಕುವ ವಿಶೇಷ ಕಾರ್ಯಕ್ರಮವೇ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಕುಬಕಡ್ಡಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನೀರಿನ ಹೊಂಡದಲ್ಲಿ ಬಿದ್ದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಗುರುವಾರ ನಡೆದಿದೆ.ಪಟ್ಟಣದ ಎರಡನೇ ವಾರ್ಡಿನ ನಿವಾಸಿಯಾದ ಈರಣ್ಣ ಸಂಗಪ್ಪ ಟಕ್ಕಳಕಿ (20) ಮೃತ ಯುವಕನಾಗಿದ್ದಾನೆ. ಕುಡಿಯುವ ನೀರು ತರಲು ತೆರಳಿದ್ದ ವೇಳೆ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ಕೊಲ್ಹಾರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಎಸ್. ಪಿಯು ಕಾಲೇಜಿನ ಮೂರು ಜನ ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವಿತೀಯ, ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿನಿ ಸಾನಿಕಾ ಮೆಟಗಾರ ಕಲಾ ವಿಭಾಗದಲ್ಲಿ 595 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದರೆ, ಅಕ್ಷತಾ ಚವ್ಹಾಣ 594 ಅಂಕ ಪಡೆದು ರಾಜ್ಯಕ್ಕೆ ತೃತೀಯ ಹಾಗೂ ಯುವರಾಜ ಬಗಲಿ 593 ಅಂಕ‌ ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ‌ ಸುನೀಲಗೌಡ ಪಾಟೀಲ, ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ, ಕಾಲೇಜಿನ ಪ್ರಾಚಾರ್ಯ ಜಿ. ಡಿ. ಅಕಮಂಚಿ ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ, ಅವರ ಮುಂದಿನ ಶಿಕ್ಷಣಕ್ಕೆ ಶುಭ ಹಾರೈಸಿದ್ದಾರೆ.

Read More

ಚಡಚಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಮುಕ್ತ ಕೋರ್ಸಗಳ ಮಹತ್ವ ತಿಳಿಸಿದ ಡಾ.ಮಂಜುಳಾ ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಜಯಪುರ ಜಿಲ್ಲೆಯ ಚಡಚಣದಲ್ಲಿರುವ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ “ತರಗತಿಯ ಆಚೆಗೆ ಮುಕ್ತ ಕೋರ್ಸಗಳು” ಕುರಿತು ಒಂದು ದಿನದ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.ಮುಕ್ತ ಮತ್ತು ಹೊಂದಿಕೊಳ್ಳುವ ಶೈಕ್ಷಣಿಕ ವೇದಿಕೆಗಳ ಮೂಲಕ ಸಾಂಪ್ರದಾಯಿಕ ತರಗತಿಯನ್ನು ಮೀರಿ ಕಲಿಕೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಕಾರ್ಯಾಗಾರದ ಮುಖ್ಯ ಉದ್ದೇಶವಾಗಿತ್ತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ಮಂಜುಳಾ (ಸಹಾಯಕ ಪ್ರಾಧ್ಯಾಪಕರು ಹಾಗೂ ಹಿರಿಯ ಗ್ರಂಥಪಾಲಕರು, ಬಿಎಲ್‌ಡಿಇ ಡಿಮ್ಡ್ ವಿಶ್ವವಿದ್ಯಾಲಯ, ವಿಜಯಪುರ)ಅವರು ಜ್ಯೋತಿ ಬೇಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೇ ನೀಡಿ ಮಾತನಾಡಿದ ಅವರು ಎಮ್‌ಓಓಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆನ್‌ಲೈನ್ ಪ್ರಮಾಣಪತ್ರ ಕೋರ್ಸಗಳು ಹಾಗೂ ಕೌಶಲ್ಯ ಆಧಾರಿತ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು. ಡಿಜಿಟಲ್ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ವಯಂ-ಗತಿಯ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.ಡಾ. ಎಸ್.ಎಸ್. ಚೋರಗಿ ತಮ್ಮ ಮುಖ್ಯ ಭಾಷಣದಲ್ಲಿ ಮುಕ್ತ ಕೋರ್ಸಗಳ ಸುಲಭ ಲಭ್ಯತೆ ಹಾಗೂ ಜಾಗತಿಕ…

Read More