Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಡಾ.ಬಿ.ಆರ್.ಅಂಬೇಡ್ಕರ್ ನಗರ ವಸತಿ ಯೋಜನೆ ಅಡಿಯಲ್ಲಿ ಅನಧಿಕೃತವಾಗಿ ಬರೋಬ್ಬರಿ ೫೪ ಜನರನ್ನು ನೇರವಾಗಿ ನಮೂನೆ-೪ಬಿಯಲ್ಲಿ ಹೆಸರು ಸೇರ್ಪಡೆ ಮಾಡಿರುವುದು ತನಿಖೆಯಲ್ಲಿ ಕಂಡು ಬಂದಿದೆ. ಈ ಸಂಬಂಧ ವಸತಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಖ್ಯಾತಪ್ಪ ಎಂ.ಕುಂಬಾರ ಎಂಬುವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಫಲಾನುಭವಿಗಳ ಬದಲಾಗಿ ಹಿಂದುಳಿದ ವರ್ಗಗಳ ಪ್ರವರ್ಗ-೨(ಎ) ಸೇರ್ಪಡೆ ಮಾಡಿರುವ ಸಂಬಂಧ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಲಿಖಿತ ರೂಪದ ಹೇಳಿಕೆಗೆ ಯಾವುದೇ ರೀತಿಯ ಸೂಕ್ತ ದಾಖಲೆಗಳನ್ನು ಒದಗಿಸಿದ ಕಾರಣ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಮಾನತ್ತುಗೊಳಿಸಿದ್ದಾರೆ. ಪತ್ರಕರ್ತ ಶಿವಾನಂದ ಬಿ.ಆಲಮೇಲ ಅವರು ಈ ಪ್ರಕರಣದ ಕುರಿತು ದೂರು ಸಲ್ಲಿಸಿದ್ದರು. ಈ ಸಂಬಂಧ ಜಿಲ್ಲಾ ನಗರಾಭಿವೃದ್ಧಿ ಕೋಶದ ವಸತಿ ವಿಭಾಗದ ನಗರ ಮಟ್ಟದ ತಾಂತ್ರಿಕಕೋಶದ ತಜ್ಞರು ಸಿಂದಗಿ ಪುರಸಭೆಯ ವಸತಿ ಯೋಜನೆಗೆ ಸಂಬಂಧಿಸಿದಂತೆ ಪರಿಶೀಲಿಸಿ ವರದಿ ಸಲ್ಲಿಸಿದ್ದಾರೆ. ಅದರಲ್ಲಿ ೨೦೨೧-೨೨ನೇ ಸಾಲಿಗೆ ಸಿಂದಗಿ ಪುರಸಭೆಗೆ ಹೆಚ್ಚುವರಿಯಾಗಿ ಡಾ.ಬಿ.ಆರ್ ಅಂಬೇಡ್ಕರ್ ನಗರ ವಸತಿ ಯೋಜನೆ ಅಡಿಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಸ್ತೆಯ ಮೇಲೆ ಅನಧಿಕೃತವಾಗಿ ಶೆಡ್ಡುಗಳನ್ನು ನಿರ್ಮಿಸಿಕೊಳ್ಳುವ್ಯದರಿಂದ ನಗರ ಸೌಂದರ್ಯೀಕರಣಕ್ಕೂ ಮಾರಕ, ಸರಾಗ ಸಂಚಾರಕ್ಕೂ ಅಡ್ಡಿ. ಅಲ್ಲದೇ ಪುರಸಭೆಯ ಬೋಕ್ಕಸಕ್ಕೂ ಅಪಾರ ಹಾನಿಯಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಹೇಳಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಶಾಸಕರು ಅತಿಕ್ರಮಣದಿಂದ ತೆರವಾದ ಅಂಗಡಿಕಾರರಿಗೆ ಪರಿಹಾರ ಹಾಗೂ ಪರ್ಯಾಯ ಸ್ಥಳದ ವ್ಯವಸ್ಥೆ ಮಾಡಬೇಕು ಎಂದು ಅಭಿಪ್ರಾಯ ಪಡುತ್ತಾರೆ. ಆದರೆ ಈ ಹಿಂದೆ ತಾಲೂಕು ಸಾರ್ವಜನಿಕ ಕ್ರೀಡಾಂಗಣವನ್ನು ನಿರ್ಮಿಸುವಾಗ ಅಲ್ಲಿ ವಾಸವಿದ್ದ ಸಾಕಷ್ಟು ಬಡ ಕುಟುಂಬಗಳ ವಸತಿಗಳನ್ನು ತೆರವುಗೊಳಿಸಲಾಯಿತು. ಆ ಸಂದರ್ಭದಲ್ಲಿ ವಿರೋಧ ಪಕ್ಷದವರು ಅಭಿವೃದ್ಧಿ ದೃಷ್ಟಿಯಿಂದ ವಿರೋಧ ವ್ಯಕ್ತಪಡಿಸಲಿಲ್ಲ. ಆಗ ನೀವೆಷ್ಟು ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಹಾಗೂ ವಾಸಕ್ಕೆ ಸೂರುಗಳನ್ನು ಒದಗಿಸಿಕೊಟ್ಟಿದ್ದೀರಿ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರುಮಾಜಿ ಶಾಸಕರ ಕಳೆದ ೧೩ವರ್ಷಗಳ ಆಡಳಿತ ಅವಧಿಯಲ್ಲಿ ಮತಕ್ಷೇತ್ರದ್ಲಲಿ ಎಷ್ಟು ಅನುದಾನ ತಂದಿದ್ದಾರೆ, ಎಷ್ಟು ಅಭಿವೃದ್ಧಿ ಕಾರ್ಯಮಾಡಿದ್ದಾರೆ ಎನ್ನುವುದನ್ನು ಪುರಾವೆ ಸಹಿತ ಕೊಡಬೇಕು. ಈಗಿನ…

Read More

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ | ಒಟ್ಟು 44 ಕೋಟಿ ರೂ. ದಂಡ | ಶಾಸಕ ಸ್ಥಾನಕ್ಕೆ ಕುತ್ತು | ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಬೆಂಗಳೂರು: 2009-10ರ ಅವಧಿಯಲ್ಲಿ ಬೇಲೆಕೇರಿ ಬಂದರಿನಿಂದ ವಶಪಡಿಸಿಕೊಂಡ ಕಬ್ಬಿಣದ ಅದಿರನ್ನು ಕಳ್ಳತನ ಮಾಡಿ ಅಕ್ರಮವಾಗಿ ರಫ್ತು ಮಾಡಿದ್ದಕ್ಕಾಗಿ ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ಮೊತ್ತದ ದಂಡವನ್ನು ವಿಧಿಸಿದೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 24 ರಂದು ಕಾರವಾರದ 58 ವರ್ಷದ ಶಾಸಕ ಮತ್ತು ಇತರ ಆರು ಆರೋಪಿಗಳನ್ನು ದೋಷಿ ಎಂದು ಘೋಷಿಸಿತ್ತು.ಎರಡು ಬಾರಿ ಎಂಎಲ್ಎ ಆಗಿರುವ ಸೈಲ್ ಶಿಕ್ಷೆಗೆ ಗುರಿಯಾಗಿರುವುದರಿಂದ ವಿಧಾನಸಭೆ ಸದಸ್ಯತ್ವ ಕಳೆದುಕೊಳ್ಳುವ ಭೀತಿ ಇದೆ.ಶ್ರೀ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ, ಸೈಲ್ ಕಳ್ಳತನ, ಕ್ರಿಮಿನಲ್ ಪಿತೂರಿ ಮತ್ತು ವಂಚನೆ ಆರೋಪದ ಮೇಲೆ ಶಿಕ್ಷೆಗೊಳಗಾದರು.ಬಳ್ಳಾರಿಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ 11,312…

Read More

ತಪ್ಪು ಮಾಹಿತಿ ರವಾನೆ | ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ವಕ್ಫ್ ಆಸ್ತಿ ಇಂದಿಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ರವಾನೆಯಾಗುತ್ತಿದ್ದು, ಯಾವುದೇ ತಪ್ಪು ವದಂತಿಗಳಿಗೆ ರೈತರು-ಆಸ್ತಿ ಮಾಲೀಕರು ಕಿವಿಗೊಡದಂತೆ ಮನವಿ ಮಾಡಿಕೊಂಡ ಜಿಲ್ಲಾಧಿಕಾರಿಗಳು ಯಾವುದೇ ವ್ಯಕ್ತಿಯ, ಖಾಸಗಿ ಆಸ್ತಿಯನ್ನು ವಕ್ಫ್ ಮಂಡಳಿಗೆ ವರ್ಗಾಯಿಸಲಾಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸ್ಪಷ್ಠನೆ ನೀಡಿದ್ದಾರೆ.೧೯೭೪ರಲ್ಲಿ ವಕ್ಫ್ ಮಂಡಳಿಯಿಂದ ಹೊರಡಿಸಿದ ಗೆಜೆಟ್ ನೋಟಿಫಿಕೇಶನ್ ಪ್ರಕಾರ ಇರುವ ಆಸ್ತಿಗಳನ್ನು ಕಂದಾಯ ದಾಖಲೆಗಳಲ್ಲಿ ಇಂದೀಕರಣಕ್ಕಾಗಿ ಪಟ್ಟಿ ಒದಗಿಸಲಾಗಿದ್ದು, ಇದರನ್ವಯ ಖಾತೆ ಬದಲಾವಣೆಗೆ ದಾಖಲಾತಿಗಳನ್ನು ಪರಿಶೀಲನೆ ನಡೆಸಿ, ಸಾಮಾನ್ಯವಾಗಿ ಯಾವುದೇ ಒಂದು ಆಸ್ತಿಯ ಹಕ್ಕು ಬದಲಾವಣೆಯಲ್ಲಿ ಕೈಗೊಳ್ಳುವ ಕ್ರಮಗಳ ಪ್ರಕಾರವೇ ಈ ವಕ್ಪ್ ಆಸ್ತಿ ಇಂದೀಕರಣಕ್ಕಾಗಿ ಸಂಬಂಧಪಟ್ಟ ರೈತರು ಅಥವಾ ಮಾಲೀಕರಿಗೆ ನೋಟಿಸ್ ನೀಡಲಾಗುತ್ತಿದ್ದು, ಆಸ್ತಿ ಮಾಲೀಕರು- ರೈತರು ಯಾವುದೇ ಕಾರಣಕ್ಕೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಹೊಂದಿರುವುದಿಲ್ಲ. ಯಾವುದೇ ಖಾಸಗಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ೧೯೮೮-೮೯ನೇ ಸಾಲಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ಪಟ್ಟಣದ ೧೦೦೮ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಭಾನುವಾರ(ಇಂದು) ಬೆಳಿಗ್ಗೆ ೧೧ ಘಂಟೆಗೆ ಜರುಗಲಿದೆ.ಸ್ಥಳೀಯ ಸದಯ್ಯನಮಠದ ವೀರಗಂಗಾಧರಶ್ರೀಗಳು ಸಾನಿಧ್ಯ ವಹಿಸಲಿದ್ದಾರೆ. ನಿವೃತ್ತ ಶಿಕ್ಷಕ ಪಿ.ಎಸ್.ಮಿಂಚನಾಳ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಪ್ರಾಚಾರ್ಯ ಎಸ್.ಬಿ..ಮಿರ್ಜಿ ಉದ್ಘಾಟಕರಾಗಿ ಆಗಮಿಸಲಿದ್ದು, ನಿವೃತ್ತ ಶಿಕ್ಷಕರಾದ ಬಿ.ಜಿ.ಅರಳಿಮಟ್ಟಿ, ಬಿ.ಸಿ.ಹಿರೇಮಠ, ಅತಿಥಿಗಳಾಗಿ ವ್ಹಿ.ಎಂ.ಪಾಟೀಲ, ಗಿರೀಶ ಕುಲಕರ್ಣಿ, ಪಿ.ಸಿ.ತಳಕೇರಿ, ಮಾನಂದಾ ಕುಂಬಾರ ಹಾಗೂ ಸ್ನೇಹಿತರ ಬಳಗದ ಎಲ್ಲ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಸುಧೀರ ಈಳಗೇರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ದೇವರಹಿಪ್ಪರಗಿ ತಾಲ್ಲೂನಿಂದ ಶಿಕ್ಷಕರ ಕ್ಷೇತ್ರದಿಂದ ಸಿ.ಬಿ.ಗಡಗಿ ಹಾಗೂ ನಾಗೇಶ ನಾಗೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ತಾಲ್ಲೂಕು ಶಿಕ್ಷಕರ ಸಂಘ ಹಾಗೂ ಐವರು ಹಿರಿಯ ಶಿಕ್ಷಕರ ಸಮಿತಿಯು ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆಮಾಡಿತು. ಒಬ್ಬರಿಗೆ ಒಂದು ಹುದ್ದೆ ಎನ್ನುವ ಅಲಿಖಿತ ನಿಯಮದಂತೆ ಹಿರಿಯ ಶಿಕ್ಷಕರ ಸಮ್ಮುಖದಲ್ಲಿ ಶಿಕ್ಷಕರ ಸಂಘದ ಪ್ರಧಾನಕಾರ್ಯದರ್ಶಿ ಹುದ್ದೆ ಹಾಗೂ ನಿರ್ದೇಶಕ ಸ್ಥಾನಕ್ಕೆ ಸಿ.ಬಿ.ಗಡಗಿ ರಾಜೀನಾಮೆ ನೀಡಿದರು. ಅದರಂತೆ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಹಾಗೂ ನಿರ್ದೇಶಕ ಸ್ಥಾನಕ್ಕೆ ನಾಗೇಶ ನಾಗೂರ ರಾಜೀನಾಮೆ ನೀಡಿ ನೌಕರರ ಸಂಘದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು. ಅವಿರೋಧ ಆಯ್ಕೆಗೆ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಚ್.ವಾಲೀಕಾರ ಸಹಕರಿಸುವುದರ ಜೊತೆಗೆ ಇಬ್ಬರು ಪದಾಧಿಕಾರಿಗಳು ನೀಡಿದ ರಾಜೀನಾಮೆ ಪತ್ರಗಳನ್ನು ಸ್ವೀಕರಿಸಿದರು.ನಿವೃತ್ತ ಶಿಕ್ಷಕರಾದ ಪಿ.ಎಸ್.ಮಿಂಚನಾಳ, ಎಂ.ಎಚ್.ಪಟೇಲ, ಎಸ್.ಜಿ.ತಾವರಖೇಡ, ಕೆ.ಕೆ.ಭಾವಿಮನಿ, ಶಿಕ್ಷಕರಾದ ಎ.ವೈ.ನಾಯ್ಕೋಡಿ, ಪಿ.ಸಿ.ತಳಕೇರಿ, ದಾನು ರಾಠೋಡ, ಕೆ.ವ್ಹಿ.ಬಿರಾದಾರ, ರವೀಂದ್ರ ಕೋಟಿನ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ನರೇಗಾ ಯೋಜನೆಯ ೨೦೨೫-೨೬ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುತ್ತಿದ್ದು, ಗ್ರಾಮಸ್ಥರು ತಮಗೆ ಬೇಕಾದ ವೈಯಕ್ತಿಕ ಬೇಡಿಕೆ ಸಲ್ಲಿಸಬಹುದು ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ ಹೇಳಿದರು.ತಾಲ್ಲೂಕಿನ ಕೊಂಡಗೂಳಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಜರುಗಿದ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು. ಅಕ್ಟೋಬರ್ ೨ರಿಂದ ೩೧ರವರೆಗೆ ತಾಲ್ಲೂಕಿನ ೧೪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ ಎಂದರುಐಇಸಿ ಸಂಯೋಜಕ ಸಿದ್ದು ಕಾಂಬಳೆ ಮಾತನಾಡಿ, ನರೇಗಾ ಯೋಜನೆ ಅಡಿಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು, ಒಂದು ವರ್ಷದಲ್ಲಿ ೧೦೦ ದಿನಗಳ ಕೆಲಸ ನೀಡಲಾಗುವುದು ಒಂದು ದಿನಕ್ಕೆ ೩೪೯ ರೂಪಾಯಿ ಕೂಲಿ ನೀಡಲಾಗುತ್ತಿದೆ. ಇವುಗಳ ಲಾಭ ಪಡೆದು ಕೊಳ್ಳಬೇಕು ಎಂದರು.ಗ್ರಾಮ ಕಾಯಕಮಿತ್ರ ನಜೀರಾಬೇಗಂ ಆಹೇರಿ, ಶ್ರೀಶೈಲ್ ಕವಿ, ಹುಸೇನಸಾಬ್ ಸೊಲ್ಲಾಪುರ, ಈರಪ್ಪ ಕುರಮಲ್ಲಪ್ಪಗೋಳ, ಸೋಮಶೇಖರ್…

Read More

ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಜಿಲ್ಲಾ ಮಟ್ಟದ 2024-25 ನೇ ಸಾಲಿನ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಬಬಲೇಶ್ವರ ತಾಲ್ಲೂಕಿನ ಕೆಂಗಲಗುತ್ತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಿಂದಗಿ ತಾಲೂಕಿನ ಕೊರವಾರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಶಾಲೆಯ ತಂಡವು ತಮ್ಮ ಉತ್ಕೃಷ್ಟ ಆಟದ ಮೂಲಕ ಎಲ್ಲರ ಗಮನ ಸೆಳೆಯಿತು. ಕಳೆದ ಹತ್ತು ವರ್ಷಗಳಿಂದ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ನಿರಂತರವಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗುತ್ತಿರುವುದು ಈ ಶಾಲೆಯ ವಿಶೇಷ ಸಾಧನೆಯಾಗಿದೆ.”ನಮ್ಮ ವಿದ್ಯಾರ್ಥಿನಿಯರು ಕ್ರೀಡೆಯಲ್ಲಿ ತೋರಿದ ಆಸಕ್ತಿ ಮತ್ತು ಪರಿಶ್ರಮ ಅಭಿನಂದನೀಯ. ಈ ಸಾಧನೆ ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿದಾಯಕವಾಗಿದೆ” ಎಂದು ತರಬೇತುದಾರ ಹಣಮಂತ ಕಾತರಕಿ ಹಾಗೂ ಸಿಆರ್ಪಿ ಕೆ.ಕೆ.ಅಸ್ಕಿ ಸಂತಸ ವ್ಯಕ್ತಪಡಿಸಿದರು.ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲು ತಂಡವು ಈಗ ಸಜ್ಜಾಗುತ್ತಿದೆ. ಕ್ರೀಡಾ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ತಮ್ಮ ಅಭ್ಯಾಸವನ್ನು ತೀವ್ರಗೊಳಿಸಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಧಿಕಾರಿಗಳು, ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ೨೦೨೨-೨೩ನೇ ಸಾಲಿನ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ೨೩ ಸಿವಿಲ್ ಮತ್ತು ೭ ವಿದ್ಯುತ್ ಕಾಮಗಾರಿಗಳಿಗಾಗಿ ವಿಡಿಎ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆದುಕೊಂಡು, ಟೆಂಡರ್ ಕರೆದು, ಬಿಡ್ ಓಪನ್ ಆಗಿ ಗುತ್ತಿಗೆದಾರರಿಗೆ ಕಾಮಗಾರಿ ಆದೇಶವನ್ನು ನೀಡಿದ ಮೇಲೆ, ತಡೆ ಹಿಡಿಯಲಾದ ರೂ.೬.೩೫ ಕೋಟಿ ಮೊತ್ತದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು, ಆದಷ್ಟು ಶೀಘ್ರವಾಗಿ ಭೂಮಿಪೂಜೆ ನೆರವೇರಿಸಿ, ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಕಾಮಗಾರಿಗಳನ್ನು ತಡೆ ಹಿಡಿಯಲಾಗಿತ್ತು. ಹೊಸ ಸರ್ಕಾರ ರಚನೆಯಾದ ನಂತರ ನಮ್ಮ ಸರ್ಕಾರದ ಅವಧಿಯಲ್ಲಿ ಅನುಮೋದನೆಗೊಂಡ ಹಾಗೂ ಪ್ರಾರಂಭವಾಗದ ಎಲ್ಲಾ ಕಾಮಗಾರಿಗಳನ್ನು ತಡೆಹಿಡಿದು ಆದೇಶಿಸಿದ್ದರಿಂದ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳು ನೆನಗುದಿಗೆ ಬಿದ್ದಿದ್ದವು. ಅಧಿವೇಶನದಲ್ಲಿ ಈ ಕುರಿತಂತೆ ಪ್ರಶ್ನಿಸಿ, ಕಾಮಗಾರಿ ಆರಂಭಿಸಲು ಒತ್ತಾಯಿಸಲಾಗಿತ್ತು. ಇದರಿಂದ ಈ ಕೆಳಕಂಡ ಕಾಮಗಾರಿಗಳ ಟೆಂಡರ್…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣವು ಮೊದಲಿನಿಂದಲೂ ಕಲೆ, ಸಾಹಿತ್ಯ, ವ್ಯಾಪಾರ ಹಾಗೂ ಧಾರ್ಮಿಕ ಭಾವನೆಗಳಿಂದ ಶ್ರೀಮಂತವಾದ ಊರು. ವೇದಾಂತಕೇಸರಿ ಪೂಜ್ಯ ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳು ಈ ಗ್ರಾಮದಲ್ಲಿ ಮೂರ್ಮೂರು ತಿಂಗಳವರೆಗೆ ನೀಡಿದ ಪ್ರವಚನದ ಜ್ಞಾನ-ಸುಧೆಯಿಂದ ಪಾವನವಾದ ನೆಲವಿದು. ಅವರ ಆಶೀರ್ವಾದದಿಂದಲೇ ಅನೇಕ ಸಂಘ-ಸಂಸ್ಥೆಗಳು ಜೀವ ತಳೆದವು. ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ನಮ್ಮ ಚಡಚಣದಲ್ಲೇ ಶಿಕ್ಷಣ ಪಡೆದದ್ದು ಕೂಡಾ ಅಮರ ಇತಿಹಾಸ. ಪೂಜ್ಯನೀಯರ ಅಮೃತ ಕೃಪಾಶೀರ್ವಾದ ದೊರೆತಿರುವುದು ನಮ್ಮೆಲ್ಲರ ಸೌಭಾಗ್ಯವೇ ಸರಿ.ಅಮೃತಾನಂದ ಸ್ವಾಮಿಗಳವರು ಬಾಲ್ಯದಲ್ಲಿಯೇ ಅಧ್ಯಾತ್ಮಿಕ ಸಾಧನೆಯಲ್ಲಿ ಆಸಕ್ತಿ ಹೊಂದಿದವರು. ಅವರ ತೀವ್ರವಾದ ಪಾರಮಾರ್ಥದ ಹಂಬಲ ತಮ್ಮ 14ನೇ ಕಿರಿಯ ವಯಸ್ಸಿನಲ್ಲಿಯೆ ತಂದೆ-ತಾಯಿ, ಬಂಧು-ಬಳಗ ಎಲ್ಲವನು ಪರಿತ್ಯಜಿಸಿ ವಿಜಯಪುರ ಜ್ಞಾನ ಯೋಗಾಶ್ರಮಕ್ಕೆ ಕರೆ ತಂದಿತು.ಜ್ಞಾನಯೋಗಿ ಸಿದ್ದೇಶ್ವರ ಅಪ್ಪಗಳವರ ಸೇವೆ ಮಾಡುತ್ತಾ ಅವರ ಮಾರ್ಗದರ್ಶನದಲ್ಲಿ ಉಪನಿಷತ್ತುಗಳು, ಭಗವದ್ಗೀತೆ, ಭಾರತೀಯ ದರ್ಶನಗಳು, ವಚನಶಾಸ್ತ್ರ ಮೊದಲಾದ ಗ್ರಂಥಗಳ ಅಧ್ಯಯನ ಗೈದವರು. ಮತ್ತು ಯೋಗ ಸಾಧನೆಯಲ್ಲಿ ನೈಪುಣ್ಯರು. ಏಕಕಾಲದಲ್ಲಿ ಒಂದು ಲಕ್ಷ ಜನರನ್ನು ಸೇರಿಸಿ ಯೋಗ…

Read More