Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದು ಮತ ಮತಗಳ ಮಧ್ಯದಲ್ಲಿ ಅತೃಪ್ತ ವಾತಾವರಣ ಉಂಟಾಗುತ್ತಿದೆ. ಇಂತಹ ಅತೃಪ್ತ ವಾತಾವರಣವನ್ನು ಹೋಗಲಾಡಿಸಬೇಕಾದರೆ ಭಗವದ್ಗೀತೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಶ್ರೀಮದ್ ಮಜ್ಜಗದ್ಗುರು ಶಂರರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಸಂಸ್ಥಾನ ಮಠದ ಪೀಠಾಧೀಶರಾದ ಶ್ರೀಮದ್ ಗಂಗಾಧರೇಂದ್ರಸರಸ್ವತಿ ಮಹಾಸ್ವಾಮಿಗಳು ಹೇಳಿದರು.ಪಟ್ಟಣದ ಭೀಮಾಶಂಕರ ಮಠದಲ್ಲಿ ಶಿರಸಿಯ ಶ್ರೀ ಸರ್ವಜ್ಷೇಂದ್ರ ಸರಸ್ವತಿ ಪ್ರತಿಷ್ಠಾನದ ವತಿಯಿಂದ ಜರುಗಿದ ಸಿಂದಗಿ ಶ್ರೀ ಭಗವದ್ಗೀತಾ ಅಭಿಯಾನ ಹಾಗೂ ಪೂರ್ವಭಾವಿ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಧರ್ಮದ ಆತ್ಮವೇ ಆಧ್ಯಾತ್ಮ. ಭಗವದ್ಗೀತೆ ಆಧ್ಯಾತ್ಮ ಆತ್ಮ. ಹಾಗಾಗಿಯೇ ಮೋದಿಜಿಯವರು ಹೊರ ದೇಶದ ನಾಯಕರುಗಳಿಗೆ ಭಗವದೀತೆಯ ಕೃತಿ ಅರ್ಪಣೆ ಮಾಡುವ ಪರಿಪಾಠ ಹಾಕಿಕೊಂಡಿದ್ದಾರೆ. ಇದರಿಂದಾಗಿ ವಿದೇಶಿಯರಿಗೂ ಭಗವದ್ಗೀತೆಯ ಮಹತ್ವ ಅರಿಯಲು ಸಹಾಯವಾಗುತ್ತದೆ. ಅಲ್ಲದೇ ಜಗತ್ತಿನ ಎಲ್ಲ ಭಾಷೆಗಳಲ್ಲಿ ಭಾಷಾಂತರಗೊಂಡ ಕೆಲವೇ ಗ್ರಂಥಗಳಲ್ಲಿ ಭಗವದ್ಗೀತೆ ಪ್ರಥಮ ಸಾಲಿನಲ್ಲಿ ನಿಲ್ಲುತ್ತದೆ. ಸಿಂದಗಿಯ ಭೀಮಾಶಂಕರ ಮಹಾರಾಜರು ೩೦೦ ವರ್ಷಗಳ ಹಿಂದೆಯೇ ಆದಿಲ್ ಶಾಹಿ ಕಾಲದಲ್ಲಿ ತಮ್ಮ ದಿವ್ಯ ಶಕ್ತಿಯ ತಪ್ಪಿಸಿನ ಮೂಲಕ ಪರಿಕಿಯರ…
ಚನ್ನಪಟ್ಟಣ ಉಪ ಚುನಾವಣೆ | ಯೋಗೇಶ್ವರ್ ಹರಕೆಯ ಕುರಿ | ನಿಖಿಲ್ ಗೆಲುವು ಸ್ಪಷ್ಟ | ಕಾರ್ಯಕರ್ತರ ಅಭಿಪ್ರಾಯಗಳನ್ನು ನಿರ್ಲಕ್ಷಿಸಿದ ಕಾಂಗ್ರೆಸ್ ಬೆಂಗಳೂರು: ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಸಿ. ಪಿ. ಯೋಗೇಶ್ವರ್ ಹರಕೆಯ ಕುರಿಯಾಗಲಿದ್ದು, ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ನಿಶ್ಚಿತ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬಿಜೆಪಿ ಹಾಗೂ ಜೆಡಿಎಸ್ ಒಮ್ಮತದಿಂದ ಘೋಷಿಸಿದ್ದೇವೆ. ಜೆಡಿಎಸ್ ಅಭ್ಯರ್ಥಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲು ಕಾರ್ಯಕರ್ತರ ಸಭೆ ನಡೆಸಿದೆ. ಆದರೆ ಕಾಂಗ್ರೆಸ್ ತನ್ನ ಕಾರ್ಯಕರ್ತರ ಅಭಿಪ್ರಾಯಗಳನ್ನು ನಿರ್ಲಕ್ಷಿಸಿ ಸಿ.ಪಿ. ಯೋಗೇಶ್ವರ ಅವರನ್ನು ಆಯ್ಕೆ ಮಾಡಿದೆ. ಪಕ್ಷದ ಬಂಡಾಯವನ್ನು ಪರಿಹರಿಸುತ್ತೇನೆ ಎಂದು ಡಿಸಿಎ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಆದರೆ ಈಗ ಕಾಂಗ್ರೆಸ್ ಕಾರ್ಯಕರ್ತರು ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸುತ್ತಿದ್ದಾರೆ ಎಂದರು.ಎಸ್ಸಿ/ಎಸ್ಟಿ…
ಗದಗ-ಡಂಬಳ ತೋಂಟದಾರ್ಯ ಮಠದ ಜಗದ್ಗುರು ಡಾ.ತೊಂಟದ ಸಿದ್ದರಾಮ ಮಹಾಸ್ವಾಮೀಜಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗ್ರಾಮೀಣ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸದಾ ಶಿಕ್ಷಣಕ್ಕೆ ಹೆಚ್ಚು ಪ್ರಾಧ್ಯಾನ್ಯತೆ ನೀಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೊಸ ಕಾಯಕಲ್ಪ ಕೊಟ್ಟವರು ಲಿಂ.ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳು ಎಂದು ಗದಗ-ಡಂಬಳ ತೋಂಟದಾರ್ಯ ಮಠದ ಜಗದ್ಗುರು ಡಾ.ತೊಂಟದ ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು.ಪಟ್ಟಣದ ಊರಿನ ಹಿರಿಯಮಠದಲ್ಲಿ ಭಾವೈಕ್ಯತೆ ವೇದಿಕೆಯಲ್ಲಿ ಶುಕ್ರವಾರ ಗದಗ-ಡಂಬಳದ ನಿರಂಜನ ಜಗದ್ಗುರು ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ೬ನೆಯ ಪುಣ್ಯ ಸ್ಮರಣೆ, ಮರಣವೇ ಮಹಾನವಮಿ ಆಚರಣೆ ಹಾಗೂ ಪ್ರೊ. ಬಿ.ಆರ್.ಪೊಲೀಸಪಾಟೀಲ ರಚಿತ ಉರಿಯ ಗದ್ದುಗೆ ಪುಸ್ತಕ ಲೋಕಾರ್ಪಣೆ ಸಮಾರಂಭದ ಪಾವನ ಸಾನಿಧ್ಯ ವಹಿಸಿ ಮಾತನಾಡಿ, ಲಿಂಗೈಕ್ಯೆ ಶ್ರೀಗಳು ಸಾಮಾನ್ಯರಲ್ಲೂ ಓದಿನ ಅಭಿರುಚಿ ಬೆಳೆಸಿದವರು. ಅನ್ನ, ಅಕ್ಷರ ಮತ್ತು ಪುಸ್ತಕ ದಾಸೋಹಿ ಮೂರ್ತಿಯಾಗಿ ನಿರಂತರ ಸಮಾಜ ಸೇವೆ ಮಾಡಿದವರು. ಆತ್ಮ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಕಾಯಕಗಳನ್ನು ತಮ್ಮ ಬದುಕಿನುದ್ದಕ್ಕೂ ನಡೆಸಿಕೊಂಡು ಬಂದವರು.…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯ ಯಾವುದೇ ಕಾಲಕ್ಕೂ ನಿಲ್ಲಿಸುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು. ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರವನ್ನು ಸುಂದರಗೊಳಿಸಲು ಪಣತೊಟ್ಟಿರುವೆ. ಇದರಲ್ಲಿ ಯಾವುದೇ ಗೂಡಂಗಡಿಗಳನ್ನು ತೆರವುಗೊಳಿಸಲು ಯಾರಿಗೂ ಒತ್ತಾಯ ಮಾಡಿಲ್ಲ. ಎಲ್ಲರೂ ಸ್ವಯಂ ಪ್ರೇರಣೆಯಿಂದ ತೆರವುಗೊಳಿಸುತ್ತಿದ್ದಾರೆ. ಆದರೆ ಮಾಜಿ ಶಾಸಕ ರಮೇಶ ಭೂಸನೂರ ಮತ್ತು ಸಂತೋಷ ಪಾಟೀಲ್ ಅವರು ತಿಳುವಳಿಕೆ ಉಳ್ಳವರು, ಅವರ ಈ ರೀತಿಯ ವರ್ತನೆ ಸರಿಯಲ್ಲ. ಜಿಲ್ಲಾಧಿಕಾರಿಗಳು ತೆರವುಗೊಳಿಸಲು ಅನುಮತಿ ನೀಡಿಲ್ಲ ಎಂದು ಹೇಳುವ ಅವರು ಡಿಸಿ ಅವರು ತೆರವುಗೊಳಿಸಬಾರದೆಂದು ಹೇಳಿದ್ದು ಪುರಾವೆ ಏನಾದರೂ ಇದ್ದರೆ ತೋರಿಸಬೇಕು. ನಾನು ಜಿಲ್ಲಾಧಿಕಾರಿಗಳ ಬಳಿ ಪರವಾನಿಗೆ ಕೇಳಲು ಹೋದಾಗ ಸ್ಥಳೀಯವಾಗಿ ಅಭಿವೃದ್ಧಿಪರ ಚಟುವಟಿಕೆಗಳಿಗೆ ನಮ್ಮ ಅನುಮತಿ ಬೇಕಾಗಿಲ್ಲ, ಸ್ಥಳೀಯವಾಗಿ ಇಲ್ಲಿಯ ವ್ಯವಸ್ಥೆಯನ್ನು ಸುಧಾರಣೆ ಮಾಡಲು ನೀವು ಸ್ವನಿರ್ಧಾರ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ ಎಂದರು.೨೦ವರ್ಷದಿಂದ ಬಸ್ ನಿಲ್ದಾಣದ ಎದುರಿರುವ ಚರಂಡಿ ತುಂಬಿಹೋಗಿತ್ತು. ಅದನ್ನು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೀಪಾವಳಿ ಹಬ್ಬ ಸನಿಹದಲ್ಲಿ ಅವರಿಗೆ ಒಂದು ಮಾತು ಕೇಳದೆ ಅವರ ಗೂಡಂಗಡಿಗಳನ್ನು ಏಕಾಏಕಿ ಜೆಸಿಬಿ ಹಚ್ಚಿ ತೆರವುಗೊಳಿಸುತ್ತಿರುವುದು ಖಂಡನೀಯ. ಇದನ್ನು ಕೂಡಲೇ ನಿಲ್ಲಿಸಬೇಕೆಂದು ಮಾಜಿ ಶಾಸಕ ರಮೇಶ ಭೂಸನೂರ ಆಗ್ರಹಿಸಿದರು.ಪಟ್ಟಣದ ತಾಲೂಕು ಆಡಳಿತ ಕಚೇರಿ ಮುಂಭಾಗದಲ್ಲಿ ಬೀದಿಬದಿಯ ವ್ಯಾಪಾರಸ್ಥರ ಹಿತರಕ್ಷಣೆ ವೇದಿಕೆಯ ವತಿಯಿಂದ ಬೀದಿಬದಿ ವ್ಯಾಪಾರಸ್ಥರ ಹಾಗೂ ಸಾರ್ವಜನಿಕರು ಗೂಡಂಗಡಿಗಳನ್ನು ತೆರವುಗೊಳಿದಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿ ಮಾತನಾಡಿದ ಅವರು, ತಹಶೀಲ್ದಾರ್ ಅವರು ಗೂಡಂಗಡಿಕಾರನ್ನು ಹಾಗೂ ಪುರಸಭೆಯ ಅಧಿಕಾರಿಗಳ ಸಮ್ಮುಖದಲ್ಲಿ ಒಂದು ಸಭೆಯನ್ನು ಮಾಡಿ ನ್ಯಾಯ ಒದಗಿಸಿ ಅವರ ನೋವುಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.ಈ ವೇಳೆ ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ವ್ಯಾಪಾರಿಗಳ ಹೊಟ್ಟೆಯ ಮೇಲೆ ಹೊಡೆಯುತ್ತಿರುವುದು ಸರಿಯಲ್ಲ. ಈ ದುಸ್ಸಾಹಾಸಕ್ಕೆ ಇಳಿದ ಕಾಂಗ್ರೆಸ್ ಪಕ್ಷದ ನಡೆ ನಾಚಿಕೆಗೇಡು ಸಂಗತಿ ಎಂದು ಹರಿಹಾಯ್ದರು.ಪೀರು ಕೆರೂರ್, ಶಿವಕುಮಾರ ಬಿರಾದಾರ, ಕಾಶಿಮ್ ಬೇಕಿನಾಳ,ಈ ವೇಳೆ ಶ್ರೀಶೈಲ ಚಳ್ಳಗಿ, ಪೀರು ಕೆರೂರ ಹಾಗೂ…
ಮೇಳಾದಲ್ಲಾದ ಅಫಘಾತಕ್ಕೆ ಜಿಲ್ಲಾಡಳಿತ ಹೊಣೆ :ಭೀಮ್ ಸರ್ಕಾರ ಉದಯರಶ್ಮಿ ದಿನಪತ್ರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂಡಿಯಾ ಬಿಗ್ಗೇಷ್ಟ್ ಅಂಡರ್ ವಾಟರ್ ಫಿಶ್ ಟ್ಯುನಲ್ ಎಕ್ಸಪೊ ಎಕ್ಸಬೀಷನ್ ಕಂಪನಿ ನಡೆಸುವ ಮೇಳಾದಲ್ಲಿ ಆದ ಅಫಘಾತಕ್ಕೆ ಜಿಲ್ಲಾಡಳತವೇ ಹೊಣೆ ಎಂದು ಭೀಮ್ ಸರಕಾರ ಸಂಘಟನೆಯು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು,ಮನವಿಯಲ್ಲಿ ಮೇಳಾದಲ್ಲಿ ಅ.೨೦ ರವಿವಾರದಂದು ನಡೆದ ಅಪಘಾತದಲ್ಲಿ ಬಸವನ ಬಾಗೇವಾಡಿ ತಾಲೂಕಾ ಇಂಗಳೇಶ್ವರ ಗ್ರಾಮದ ಹಾಲಿ ವಸ್ತಿ ನಿಡಗುಂದಿ ಪಟ್ಟಣದ ನಿಖಿತಾ ಅರವಿಂದ ಬಿರಾದಾರ (೧೮) ಸಾವಿಗೀಡಾಗಿದ್ದು, ಜಿಲ್ಲಾಡಳಿತವೇ ನೇರ ಹೊಣೆಗಾರಿಯಾಗಿರುತ್ತದೆ. ಏಕೆಂದರೆ, ಇದಕ್ಕೆ ಅಧಿಕೃತವಾದ ಪರವಾನಿಗೆಯನ್ನು ಜಿಲ್ಲಾಡಳಿತ ನೀಡದಿರುವುದು, ಏಕೆಂದರೆ, ಈ ಸದರ ಕಂಪನಿ ನಡೆಸುವ ಮೇಳಾಕ್ಕೆ ಪೂರ್ವದಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗೆ ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡಿರುವ ಕುರಿತು ನಮ್ಮ ಸಂಘಟನೆಯು ಲಿಖಿತ ಮನವಿ ಮೂಲಕ ಕೇಳಿಕೊಂಡಿತ್ತು, ನಿರಾಕ್ಷೇಪಣಾ ಪತ್ರ ಹಾಗೂ ಪರವಾನಿಗೆ ನೀಡಿದರ ಬಗ್ಗೆ ಅಧಿಕಾರಿಗಳು ನಮ್ಮ ಗಮನಕ್ಕೆ ತರದೆ ಇರುವದು ಸಂಶಯಕ್ಕೆ ಕಾರಣವಾಗಿದ್ದು, ಸದರ ಕಂಪನಿಯು ಅಧಿಕೃತ…
ಉದಯರಶ್ಮಿ ದಿನಪತ್ರಿಕೆ ಇಂಡಿ: ‘ಸಮಾಜಕ್ಕೆ ಮಾರಕವಾಗಿರುವ ತಂಬಾಕು ಸೇವನೆ ಬಗೆಗಿನ ಅಪಾಯಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಿದೆ. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕು’ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಂಡ ‘ತಂಬಾಕು ಸೇವನೆಯ ದುಷ್ಪರಿಣಾಮಗಳು’ ಕುರಿತ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ನಿರಂತರ ತಂಬಾಕು ಸೇವನೆಯಿಂದ ಹೃದಯಾಘಾತ, ಪಾರ್ಶ್ವವಾಯು, ಕ್ಯಾನ್ಸರ್ನಂತಹ ರೋಗಗಳು ಬರುತ್ತವೆ.ನಮ್ಮ ಶರೀರದ ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸಿಬಿಡುತ್ತದೆ. ಸಂಶೋಧನೆಗಳ ಪ್ರಕಾರ ಜಗಿದು ತಿನ್ನುವ ತಂಬಾಕು ಅತ್ಯಂತ ಅಪಾಯಕಾರಿ. ಹಾಗಾಗಿ ತಂಬಾಕು ಸೇವನೆ ತ್ಯಜಿಸಬೇಕು ಎಂದು ಹೇಳಿದರು.ಇಂಡಿ ಎಸ್ ಬಿ ಆಯ್ ಬ್ಯಾಂಕ್ ಕೃಷಿ ಕ್ಷೇತ್ರ ಅಧಿಕಾರಿ ಪ್ರಕಾಶ ಗುಜ್ಜಲಕರ ಮಾತನಾಡಿ, ಯುವಕರು ಗುಟಕಾ, ಸಿಗರೇಟು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಿ ಸುಂದರ ಬದುಕನ್ನು ಹಾಳುಮಾಡಿಕೊಳ್ಳುತ್ತಿರುವದು ದುರದೃಷ್ಟಕರ. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ನಾಗರಿಕರ ಸಹಕಾರ ಬಹುಮುಖ್ಯ ಎಂದರು.ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಕನ್ನಡ ಭಾಷೆಗೆ ಪ್ರಥಮ ಆದ್ಯತೆ ಇದೆ. ಅದಕ್ಕಾಗಿ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಪ್ರಥಮವಾಗಿ ಬರೆದಿರಬೇಕು ಹಾಗೂ ನಾಮಫಲಕದಲ್ಲಿ ಶೇ 60 ರಷ್ಟು ಕನ್ನಡ ಭಾಷೆಯ ದೊಡ್ಡ ಅಕ್ಷರದಲ್ಲಿ ಕಣ್ಣಿಗೆ ಕಾಣುವಂತೆ ಕಡ್ಡಾಯವಾಗಿ ಅಳವಡಿಸಿಬೇಕು ಎಂದು ಸರಕಾರ ಮಾರ್ಗಸೂಚಿ ಇದೆ.ಒಂದು ವೇಳೆ ಮಾರ್ಗಸೂಚಿ ಬಗ್ಗೆ ನಿರ್ಲಕ್ಷ್ಯ ತೋರಿದರೆ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಖಡಕ ಎಚ್ಚರಿಕೆ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ನೀಡಿದರು.ಗುರುವಾರ ನಗರದ ಪ್ರಮುಖ ರಸ್ತೆಯಲ್ಲಿರುವ ಅಂಗಡಿ ಮುಂಗಟ್ಟುಗಳ ನಾಮಫಲಕವನ್ನು ಆಡಳಿತ ಸೌಧದಿಂದ ಪರಿಶೀಲನೆ ಪ್ರಾರಂಭಿಸಿ ಬಸವೇಶ್ವರ ವೃತ್ , ಅಂಬೇಡ್ಕರ್ ವೃತ್ ಹಾಗೂ ಮಹಾವೀರ ವೃತ್ ದ ವರೆಗೆ ತೆರಳಿ ನಮ್ಮ ಭಾಷೆಯ ಅಳಿವು, ಉಳುವಿನಲ್ಲಿ ನಿಮ್ಮ ಪಾತ್ರ ಬಹಳ ಮುಖ್ಯವಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವ್ಯಾಪಾರಸ್ಥರು ವರ್ತಕರು ತಮ್ಮ ಅಂಗಡಿಗಳ ಮೇಲೆ ಶೇಕಡಾ 60% ಕನ್ನಡ ಭಾಷೆಯನ್ನು ಕಡ್ಡಾಯವಾಗಿ ನಾಮಫಲಕದಲ್ಲಿ ಅಳವಡಿಸಲು ಸೂಚಿಸಿದರು.ಈ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಭಗವಂತನೊಡನೆ ಸಂಪರ್ಕ ಸಾಧನೆಯ ವಿಧಾನವೇ ಯೋಗವಾಗಿದೆ ಎಂದ ಖ್ಯಾತ ಯೋಗ ಗುರು ನಿರಂಜನ ಸ್ವಾಮೀಜಿ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜು ಆವರಣದಲ್ಲಿ ಶುಕ್ರವಾರ ಆರಂಭಗೊಂಡ ಹಿಮಾಲಯನ್ ಧ್ಯಾನಯೋಗ ಹಾಗೂ ಸಾಮೂಹಿಕ ಭಜನೆ ಮತ್ತು ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಯೋಗ ಮತ್ತು ಪ್ರವಚನಗಳು ನಮ್ಮ ದೈನಂದಿನ ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತವೆ ಎಂದು ಹೇಳುತ್ತಾ ಸುಮಾರು ಒಂದು ಗಂಟೆ ಕಾಲ ಯೋಗದ ತರಬೇತಿ ನೀಡಿದರು.ನಿವಾಳಖೇಡ ಗ್ರಾಮದ ಶ್ರೀಸಿದ್ಧಕೃಪಾ ಮಲ್ಲಿಕಾರ್ಜುನ ಮಹಾಂತಮಠದ ಬಸವಾನಂದ ಸ್ವಾಮೀಜಿ ಹಾಗೂ ಸ್ಥಳೀಯ ಪರದೇಶಿಮಠದಶ್ರೀ ಮಾತನಾಡಿದರು.ರಾಮಪುರ ಆರೂಢಮಠದ ಶ್ರೀಗಳು ಸಾನಿಧ್ಯ ವಹಿಸಿದ್ದರು.ಕಾರ್ಯಕ್ರಮದಲ್ಲಿ ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರ ತಜ್ಞ ಪ್ರಭುಗೌಡ ಲಿಂಗದಳ್ಳಿ (ಚಬನೂರ), ಸಿಂದಗಿ ಪಟ್ಟಣದ ಧುರೀಣರಾದ ಅಶೋಕ ಅಲ್ಲಾಪೂರ, ಡಾ. ಮಹಾಂತೇಶ ಹಿರೇಮಠ ಹಾಗೂ ದೇವರಹಿಪ್ಪರಗಿ ತಾಲ್ಲೂಕು ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ , ಪಂಚಾಕ್ಷರಿ ಮಿಂಚನಾಳ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ೨೦೨೪-೨೫ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡು (Accriditation Card) , ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ…
