Author: editor.udayarashmi@gmail.com

ಅ.೨೬ಹಾಗೂ೨೭ರಂದು ಗ್ರಾಮ ಆಡಳಿತ ಅಧಿಕಾರಿ ಸ್ಪರ್ಧಾತ್ಮಕ ಪರೀ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅಕ್ಟೋಬರ್ ೨೬ ಹಾಗೂ ೨೭ ರಂದು ನಡೆಯುವ ಗ್ರಾಮ ಆಡಳಿತ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ಗುರುವಾರ ನಗರದ ಪಿಡಿಜೆ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅ.೨೬ ರಂದು ಜಿಲ್ಲೆಯ ೦೯ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅ.೨೭ರಂದು ೮೦ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಗೆ ನಿಯೋಜಿತ ಮಾರ್ಗಾಧಿಕಾರಿಗಳು, ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಓಎಂಆರ್ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಪಡೆದುಕೊಂಡು ನಿಗದಿತ ಸಮಯದಲ್ಲಿ ಹಸ್ತಾಂತರ ಮಾಡಬೇಕು. ಪರೀಕ್ಷೆ ಮುಗಿದ ನಂತರ ಜಿಲ್ಲಾ ಖಜಾನೆಗೆ ಮರಳಿ ತಲುಪಿಸುವುದು ಸೇರಿದಂತೆ ಪರೀಕ್ಷಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಂಡು ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅವರು ಸೂಚನೆ ನೀಡಿದರು.ಅ.೨೬ ರಂದು ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆಗೆ ಪ್ರತಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಹಳೆಯ ತರಕಾರಿ ಮಾರುಕಟ್ಟೆಯ ಬಳಿಯ ಶ್ರೀ ಖಾಸ್ಗತೇಶ್ವರ ಮಠದಲ್ಲಿ ಅ.೨೬ ರಂದು ಸಂಜೆ ೫ಕ್ಕೆ ದ.ರಾ ಬೇಂದ್ರೆಯವರ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಖಾಸ್ಗತೇಶ್ವರ ಮಠದ ಶರಣೆ ತಾಯಿ ನೀಲಮ್ಮನವರು ವಹಿಸಲಿದ್ದು, ಗಣ್ಯ ವ್ಯಾಪಾರಿ ಬಸವರಾಜ ಮೋಟಗಿ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಬಿ.ಎಂ.ಹಿರೇಮಠರು ಉಪಸ್ಥಿತರಿರಲಿದ್ದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೋ.ಐ.ಬಿ.ಹಿರೇಮಠರು ಉಪನ್ಯಾಸ ನೀಡಲಿದ್ದು ಮುಖ್ಯ ಅತಿಥಿಗಳಾಗಿ ತಾಪಂ ಮಾಜಿ ಅಧ್ಯಕ್ಷ ವಾಯ್.ಎಚ್.ವಿಜಯಕರ, ಗಣ್ಯ ವ್ಯಾಪಾರಸ್ಥರಾದ ಅಬ್ದುಲ್‌ಗಫಾರ ಮಕಾನದಾರ, ವಾಸುದೇವ ಶಾಸ್ತ್ರಿ, ಎಂ.ಎಸ್.ಬಿರಾದಾರ, ಅಶೋಕ ಚಟ್ಟೇರ, ಶಿಕ್ಷಕಿಯರಾದ ಸರೋಜಾ ಕೋರಿ, ಸುಮಲತಾ ಸಜ್ಜನ ಆಗಮಿಸಲಿದ್ದು, ಶಿಕ್ಷಕರಾದ ಸಿದ್ದನಗೌಡ ಬಿರಾದಾರ, ಪ್ರಭುಗೌಡ ರೆಡ್ಡಿ, ಸಿ.ಜಿ.ನಾಗರಾಳ ಕಾರ್ಯಕ್ರಮವನ್ನು ನಿರ್ವಹಿಸಲಿದ್ದಾರೆ.

Read More

೬೮ನೆಯ ಧಮ್ಮಚಕ್ರ ಪರಿವರ್ತನ ದಿನಾಚರಣೆ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬುದ್ಧ ಎಂದರೆ ದೇವರಲ್ಲ, ಬುದ್ಧ ಎಂದರೆ ಅರಿವಿನ, ಜ್ಞಾನದ ಬೆಳಕು. ಮೂಢ ನಂಬಿಕೆಗಳಿಂದ ಹೊರಬಂದು ಅರಿವಿನ ಭಾರತ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದರು.ಬುದ್ಧವಿಹಾರ ನಿರ್ಮಾಣ ಸಮಿತಿಯ ಆಶ್ರಯದಲ್ಲಿ ಇಂದು ನಗರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೮ನೆಯ ಧಮ್ಮಚಕ್ರ ಪರಿವರ್ತನ ದಿನಾಚರಣೆ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.೨೫೦೦ ವರ್ಷಗಳ ಹಿಂದೆ ಜೂಜಾಟ, ಸುರಾಪಾನ, ಪ್ರಾಣಿಬಲಿ ಮುಂತಾದ ಅನಿಷ್ಟಗಳ ಮೂಲಕ ಸಮಾಜವು ನೈತಿಕವಾಗಿ ಅಧಃಪತನಗೊಂಡಿದ್ದ ಮತ್ತು ದೇವರನ್ನು ಒಲಿಸಿಕೊಳ್ಳಲು ಮೌಢ್ಯವೆಂಬ ಅಂಧಃಕಾರದಲ್ಲಿ ಮುಳುಗಿದ್ದ ಸಮಯದಲ್ಲಿ ಬುದ್ಧನೆಂಬ ಹೊಸ ಬೆಳಕೊಂದು ಮೂಡಿಬಂತು. ಭಗವಾನ ಬುದ್ಧರು ದೇವರು, ಆತ್ಮ, ಪುನರ್ಜನ್ಮಗಳನ್ನು ನಿರಾಕರಿಸಿದರು. ಕರ್ಮಸಿದ್ಧಾಂತವನ್ನು ಒಪ್ಪಿಕೊಳ್ಳಲಿಲ್ಲ. ಬುದ್ಧನ ಧಮ್ಮದಲ್ಲಿ ದೇವರಿಗೆ ಸ್ಥಾನವಿಲ್ಲ, ನೈತಿಕತೆಗೆ ಸ್ಥಾನವಿದೆ ಎಂದು ಹೇಳಿದರು.ಸಾನಿಧ್ಯ ವಹಿಸಿದ್ದ ಭಂತೆ ಡಾ.ಶಾಕು ಬೋಧಿಧಮ್ಮ ಮಾತನಾಡಿ, ಶತಮಾನಗಳಿಂದ ಶೋಷಣೆಗೊಳಗಾಗಿರುವ…

Read More

ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ಕುರಿತು ತೀವ್ರ ಕಾಳಜಿ ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ನಿಗದಿತ ಕನಿಷ್ಠ ವೇತನ ಪಾವತಿ, ಜೀವ ವಿಮೆ ಸೌಲಭ್ಯ, ಉಪಹಾರ, ಸುರಕ್ಷತಾ ಪರಿಕರಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮ್ಯಾನ್ಯುವೆಲ್ ಸ್ಕಾö್ಯವೆಂರ‍್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ ೨೦೧೩ರ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪೌರಕಾರ್ಮಿಕರು, ಸ್ವಚ್ಛತಾ ಕೆಲಸಗಾರರಿಗೆ ಅತ್ಯುತ್ತಮ ಗುಣಮಟ್ಟದ ಪರಿಕರ ಹಾಗೂ ಸಮವಸ್ತç ಒದಗಿಸಬೇಕು. ಪೌರಕಾರ್ಮಿಕರಿಗೆ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸುವಂತೆ ಸುರಕ್ಷಾ ಕಿಟ್-ಪರಿಕರ ಬಗ್ಗೆ ತರಬೇತಿ ಹಮ್ಮಿಕೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಖಾಯಂ ನೇರಪಾವತಿ-ಗುತ್ತಿಗೆ ಆಧಾರದ ಇರುವವರಿಗೆ ಕಡ್ಡಾಯವಾಗಿ ಇಎಸ್‌ಐ, ಪಿಎಫ್ ವಿಮೆ ಸೌಲಭ್ಯ ದೊರಕಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.ನಗರ ಸ್ವಚ್ಛತೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಕೆಲವೊಂದು ಕಡೆ ತಾತ್ಕಾಲಿಕ ಹಾಗೂ ಖಾಯಂ ವ್ಯಾಪಾರಸ್ಥರು ಪಟಾಕಿ ಮಾರಾಟ ಮಾಡಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಪಟಾಕಿ ಮಾರಾಟಗಾರರು ಸೋಮವಾರದೊಳಗೆ ಜಿಲ್ಲಾಡಳಿತಕ್ಕೆ ದಾಖಲಾತಿಗಳನ್ನು ಸಲ್ಲಿಸಿ ಪರವಾನಿಗೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದ್ದಾರೆ.ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಜಿಲ್ಲೆಯ ವಿವಿಧ ಪಟಾಕಿ ವ್ಯಾಪಾರಸ್ಥರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ತಾಲೂಕಾ ಮಟ್ಟದಲ್ಲಿ ತಹಶೀಲ್ದಾರ ಅವರು ಜಂಟಿ ಸಮೀಕ್ಷಾ ನಡೆದ ಪರವನಿಗೆಗೆ ಶಿಫಾರಸು ಮಾಡಬೇಕು. ವ್ಯಾಪಾರಸ್ಥರು ಪಟಾಕಿಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ಹಾಕಲು ಪ್ರತ್ಯೇಕ ಜಾಗ ಗುರುತಿಸಬೇಕು. ಎಲ್ಲಾ ವ್ಯಾಪಾರಸ್ಥರು ಸುರಕ್ಷಿತ ವಿಧಾನಗಳನ್ನು ಅಳವಡಿಸಿಕೊಂಡಿರುವುದನ್ನು ಖಾತ್ರಿಪಡಿಸಿಕೊಂಡು ಪರವಾನಿಗೆಗೆ ಸಂಬಂಧಿಸಿದ ಅಧಿಕಾರಿಗಳು ಶಿಫಾರಸ್ಸು ಮಾಡಬೇಕು. ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಾರಾಟವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಬಗ್ಗೆ ನಾಳೆಯೇ ಎಲ್ಲಾ ತಾಲೂಕಿನಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ಸಮಿತಿ ರಚಿಸಿಕೊಂಡು ಪಟಾಕಿ ವ್ಯಾಪಾರಸ್ಥರ…

Read More

ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಹಳೆ ಶಿಷ್ಯ ಬಳಗದ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಗುರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಹೃದಯಸ್ಪಶಿ೯ ಸನ್ಮಾನಿಸಿ ಗೌರವಿಸಿದರು.ಇಲ್ಲಿನ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಅಮೋಘ ಸೇವೆ ಸಲ್ಲಿಸಿ ಇತ್ತೀಚೆಗೆ ವಯೋಸೇವಾ ನಿವೃತ್ತಿ ಹೊಂದಿರುವ ಬಸವರಾಜ ಅನಂತಪೂರ ದಂಪತಿಗಳಿಗೆ ಶಾಲೆಯ ಹಳೆ ಶಿಷ್ಯರು ಶಾಲು ಹೊದಿಸಿ ಸನ್ಮಾನಿಸಿದರಲ್ಲದೇ ಬಿನ್ನವತ್ತಳೆ ನೀಡಿ ಗೌರವಾರ್ಪಣೆ ಸಲ್ಲಿಸಿ ಧನ್ಯತಾಭಾವ ಮೆರೆದರು.ಬಸವರಾಜ ಅನಂತಪೂರ ಮಕ್ಕಳ ಪಾಲಿನ ಅಚ್ಚುಮೆಚ್ಚಿನ ಗುರುಜಿ. ಅವರ ಕೈಯಲ್ಲಿ ಶಿಸ್ತು ಬದ್ದತೆಯ ಕ್ರೀಡಾಸಕ್ತಿ ಬೆಳೆಸಿಕೊಂಡಿದ್ದ 2006-07 ಹಾಗೂ 2008-09 ನೇ ಸಾಲಿನ ವಿದ್ಯಾರ್ಥಿಗಳು ಜಮಖಂಡಿಯಲ್ಲಿರುವ ತಮ್ಮ ಮೆಚ್ಚಿನ ಗುರುಜಿ ಮನೆಗೆ ತೆರಳಿ ಸನ್ಮಾನ ಕೈಂಕರ್ಯ ಕೈಗೊಂಡು ಪರಮ ಪವಿತ್ರತೆಯ “ಗುರು-ಶಿಷ್ಯರ” ನಿಷ್ಕಲ್ಮಶತೆಯ ಪ್ರೀತಿಭಾವವನ್ನು ಅನ್ಯೋನ್ಯತೆ ಪರಿಮಳದಲ್ಲಿ ಸಾಕ್ಷೀಕರಿಸಿದರು.ಮಕ್ಕಳ ಕಲಿಕಾ ಸಮಯದಲ್ಲಿ ಅನಂತಪೂರ ಗುರುಜಿ ಆಟೋಟಗಳ ಜ್ಞಾನಧಾರೆ ಕರುಣಿಸಿ ಕ್ರೀಡಾ ತಂತ್ರಜ್ಞಾನದ ಕೌಶಲ್ಯ ಅಂಕುರಗೊಳಿಸಿದ್ದಾರೆ. ಹೀಗಾಗಿ ಮಕ್ಕಳಿಗೆ ಅವರೆಂದರೆ ಎಲ್ಲಿಲ್ಲದ ಪ್ರೀತಿ, ಗೌರವ. ಶಿಸ್ತಿನ ಸಿಪಾಯಿಗಳಾಗಿ ಚೇತೋಹಾರದ…

Read More

ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಸ್ವಾತಂತ್ರ್ಯದ ಕಹಳೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ತೋರಿದಂತಹ ಕೆಚ್ಚೆದೆಯ ದೈತ್ಯಾಕಾರದ ಧೈರ್ಯ, ಸಾಹಸ ಮಹಿಳಾ ಲೋಕಕ್ಕೆ ಆದರ್ಶತನದ ಸ್ಪೂತಿ೯ಯಾಗಿದೆ ಎಂದು ಪ್ರಭಾರ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ ಹೇಳಿದರು.ಇಲ್ಲಿನ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ವೀರವನಿತೆ ರಾಣಿ ಚೆನ್ನಮ್ಮನ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬ್ರಿಟಿಷ್‌ ಆಳ್ವಿಕೆಯ ಕಾಯ್ದೆಗಳನ್ನು ಪ್ರಬಲವಾಗಿ ವಿರೋಧಿಸಿದ ಚೆನ್ನಮ್ಮ ಸ್ವಾತಂತ್ರ್ಯದ ಕಿಚ್ಚು ಸೃಷ್ಟಿಸಿದ ಅಪ್ರತಿಮ ಧೀರ, ದಿಟ್ಟ ಮಹಿಳೆಯಾಗಿ ಗೌರವದಿಂದ ಮಿನುಗಿದ್ದಾರೆ.ಅವರು ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿಯಾಗಿ ಗೈದ ಶೌರ್ಯ, ಹೋರಾಟ ಎಂದೂ ಮರೆಯಲಾಗದು ಅವುಗಳು ಈಗ ಐತಿಹಾಸಿಕ ಪುಟಗಳಲ್ಲಿ ಸೇರಿವೆ. ಸ್ವಾಭಿಮಾನಿ ಚೆನ್ನಮ್ಮನಾಡು-ನುಡಿ ಉಳಿವಿಗಾಗಿ ಹಗಲಿರುಳು ತಪಿಸಿ ದೇಶ ಪ್ರೇಮ ಮೆರೆದಿದ್ದಾರೆ. ಜೀವದ ಹಂಗನ್ನು ತೊರೆದು ಪರಾಕ್ರಮದ ಭಾವದಿಂದ ತಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸಿ ಜನಮನದಲ್ಲಿಂದು ಚೆನ್ನಮ್ಮ ಅಜರಾಮರವಾಗಿ ಉಳಿದಿದ್ದಾರೆ ಎಂದು ಜಾಲೋಜಿ ಸ್ಮರಿಸಿದರು.ಗೌರವ ಶಿಕ್ಷಕಿ ಸಹನಾ ಹತ್ತಳ್ಳಿ, ಶಿಕ್ಷಕ ಗುಲಾಬಚಂದ ಜಾಧವ ಮಾತನಾಡಿದರು.ಶಿಕ್ಷಕ ಲೋಹಿತ ಮಿಜಿ೯,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: “ಕ್ರಿ.ಶ ಒಂದನೇ ಶತಮಾನದಲ್ಲಿ ಚೀನಾದ ರೇಷ್ಮೆ ಬಟ್ಟೆಗಳಿಗೆ ಇಂದಿನ ಇರಾನ್ -ಇರಾಕ್ ನಲ್ಲಿ ಬಹುಬೇಡಿಕೆ. ಇದರಿಂದ ಚೀನಾ ಹಾಗೂ ಇರಾಕ್ -ಇರಾನ್ ಗಳ ನಡುವೆ ವ್ಯಾಪಾರ ಸಂಬಂಧ ವೃದ್ಧಿಯಾಯಿತು. ಈ ವಾಣಿಜ್ಯ ಚಟುವಟಿಕೆ ನಡೆಯುವ ರಸ್ತೆಮಾರ್ಗವನ್ನು “ಸಿಲ್ಕ್‌ ರೂಟ್”‌ ಎಂದು ಕರೆಯುತ್ತಾರೆ ಎಂದು ವಸುಧೇಂದ್ರ ಹೇಳಿದರು.ಬುಧವಾರ ಸಂಜೆ ನಗರದ ಶ್ರೀಕೃಷ್ಣ ವಾದಿರಾಜ ಮಠದಲ್ಲಿ “ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ” ಆಯೋಜನೆಯ ಮಾತುಕತೆ ಕಾರ್ಯಕ್ರಮದಲ್ಲಿ ಮಾತಾಡಿದ ಅವರು “ಸಂಸ್ಕೃತದ ವ್ಯರ್ತ್ಮ ಶಬ್ದದ ತದ್ಭವವಾದ ಬಟ್ಟೆಗೆ ಕನ್ನಡ ಭಾಷೆಯಲ್ಲಿ ವಸ್ತ್ರದ ಜೊತೆಗೆ ದಾರಿ ಎಂಬ ಇನ್ನೊಂದು ಅರ್ಥವೂ ಇದೆ” ಎಂದು ತಮ್ಮ ಹೊಸ ಕಾದಂಬರಿ “ರೇಷ್ಮೆ ಬಟ್ಟೆ” ಪುಸ್ತಕ ಕುರಿತು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ನಾರಾಯಣ ಬಾಬಾನಗರ ವಹಿಸಿದ್ದರು, ನಿರೂಪಣೆ ರಾಹುಲ್‌ ಮರಳಿ, ಸ್ವಾಗತ-ಪರಿಚಯ ಶ್ರೀರಂಗ ಕುಲಕರ್ಣಿ ಮಾಡಿದರು.ಶ್ರೀರಂಗ ಪುರಾಣಿಕ, ವಿವೇಕ ಕುಲಕರ್ಣಿ, ರವೀಂದ್ರ ಹಲ್ಯಾಳ, ಸುಧೀರ ಟಂಕಸಾಲಿ, ಬಿ ಎಸ್‌ ಕುಲಕರ್ಣಿ, ಸಂತೋಷ ಕಳಿಗುಡ್ಡ, ವರುಣ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದಿನನಿತ್ಯದ ಆಹಾರದಲ್ಲಿ ಆಯೋಡಿನ್ ಯುಕ್ತ ಉಪ್ಪನ್ನೆ ಬಳಸಿ ಆಯೋಡಿನ್ ಕೊರತೆಯ ನ್ಯೂನತೆಗಳನ್ನು ತಡೆಗಟ್ಟಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಅಪ್ಪಾಸಾಹೇಬ ಇನಾಮದಾರ ಹೇಳಿದರುಪಟ್ಟಣದ ರಾಂಪುರ ಪಿಎ ರಸ್ತೆಯಲ್ಲಿರುವ ಪ್ರೇರಣಾ ಪಬ್ಲಿಕ್ ಶಾಲೆಯಲ್ಲಿ ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಹಾಗೂ ಪ್ರೇರಣಾ ಪಬ್ಲಿಕ್ ಶಾಲೆ ಸಹಯೋಗದೊಂದಿಗೆ ಹಮ್ಮಿಕೊಂಡ ರಾಷ್ಟ್ರೀಯ ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಯೋಡಿನ್ ಯುಕ್ತ ಉಪ್ಪು ಮಕ್ಕಳ ಹಾಗೂ ಕುಟುಂಬದ ಆರೋಗ್ಯ ಸಂರಕ್ಷಕ. ಆಯೋಡಿನ್ ಯುಕ್ತ ಉಪ್ಪು ಬಳಸದಿದ್ದರೆ ಮಕ್ಕಳಲ್ಲಿ ಬುದ್ದಿಮಾಂದ್ಯತೆ ಕಂಡುಬರುತ್ತದೆ. ಕಲಿಕೆಯಲ್ಲಿ ಹಿಂದುಳಿಯುವಿಕೆ, ದೈಹಿಕ ಮತ್ತು ಮಾನಸಿಕ ವಿಕಲತೆ, ಕುಂಠಿತ ಬೆಳವಣಿಗೆ, ಮಕ್ಕಳಲ್ಲಿ ಕಿವುಡು ಮತ್ತು ಮೂಕತನ ಕಂಡುಬರುವುದು, ಮೆಳ್ಳಗಣ್ಣು ಹಾಗೂ ನಡಿಗೆಯಲ್ಲಿ ಲೋಪದೋಷಗಳು ಕಂಡುಬರುತ್ತದೆ. ವಿದ್ಯಾರ್ಥಿಗಳು ತಮ್ಮ ಕುಟುಂಬ ಹಾಗೂ ನೆರೆಹೊರೆಯವರಿಗೆ ಇದರ ಕುರಿತು ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡದರು.ಈ ವೇಳೆ ಜಿಲ್ಲಾ ಎಪಿಡೋಮೋಲೊಜಿಸ್ಟ ಡಾ.ಸುರೇಶ ಪಶ್ಚಾಪೂರ ಮಾತನಾಡಿ,…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಂಡ್ಯದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯೇತರರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎನ್ನುವ ವಿಚಾರ ಖಂಡಿಸಿ, ಮಾಧ್ಯಮರಂಗ ಫೌಂಡಶನ್ ವತಿಯಿಂದ ಗುರುವಾರ ತಾಲೂಕು ಆಡಳಿತ ಕಚೇರಿ ಮುಂದೆ ಹೋರಾಟ ನಡೆಸಲಾಯಿತು.ಮನವಿ ಸಲ್ಲಿಸಿ ಮಾಧ್ಯಮರಂಗ ಫೌಂಡೇಶನ್ ಅಧ್ಯಕ್ಷ, ಯುವ ಬರಹಗಾರ ನಾಗೇಶ ತಳವಾರ ಮಾತನಾಡಿ, ಕನ್ನಡ ನಾಡಿನ ಸಾಹಿತ್ಯಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ಸಾಹಿತ್ಯ ಪರಿಷತ್ ನಡೆಸುವ ಸಮ್ಮೇಳನಕ್ಕೆ ಗೌರವ ಘನತೆಯಿದೆ. ಈಗ ಚರ್ಚೆಗೆ ಗ್ರಾಸವಾಗಿರುವ ಸಾಹಿತ್ಯೇತರರನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮಾಡುವ ವಿಚಾರ ಸರಿಯಾದ ಕ್ರಮವಲ್ಲ. ಇದನ್ನು ನಾವು ವಿರೋಧಿಸುತ್ತೇವೆ ಎಂದರು.ಈ ವೇಳೆ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಧ ಅಧ್ಯಕ್ಷ ಪಂಡಿತ ಯಂಪೂರೆ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಸ್ಥಾನಕ್ಕೆ ಅದರದೆಯಾದ ಗೌರವವಿದೆ. ನಾಡಿಗೆ ಲೇಖಕರು ಕೊಡುಗೆ ದೊಡ್ಡದಿದ್ದು, ಅದೇ ಕ್ಷೇತ್ರದ ಸಾಧಕರನ್ನು ಹೊರತುಪಡಿಸಿ ಇತರರನ್ನು ಸರ್ವಾಧ್ಯಕ್ಷರನ್ನಾಗಿ ಮಾಡಬಾರದು ಎಂದರು. ಪತ್ರಕರ್ತ ನಿಂಗರಾಜ ಅತನೂರ…

Read More