Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಅಕ್ಕಮಹಾದೇವಿ ಮಹಿಳಾ ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ.ಓಂಕಾರ ಕಾಕಡೆ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಬಗೆಯ ಕೌಶಲ್ಯಗಳನ್ನು ಸಂಪೂರ್ಣವಾಗಿ ರೂಢಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗಾಗಿ ಗುರುವಾರ ಆಯೋಜಿಸಿದ್ದ ಟೆಲಿವಿಷನ್ ಸ್ಟುಡಿಯೋ ಭೇಟಿ ಮತ್ತು ಟೆಲಿವಿಷನ್ ಕಾರ್ಯಕ್ರಮ ನಿರೂಪಣೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ತಕ್ಷಣ ಕೆಲಸ ಸಿಗುವ ಕ್ಷೇತ್ರ ಈಗ ಮಾಧ್ಯಮ ಕ್ಷೇತ್ರವಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಹಲವಾರು ಅವಕಾಶಗಳು ನಿಮ್ಮ ಮುಂದೆ ಇವೆ. ಈ ಮಾಧ್ಯಮ ಕೌಶಲ್ಯಗಳನ್ನು ಕರಗತ ಮಾಡಿಕೊಂಡರೆ ಮಾತ್ರ ಸುಲಭವಾಗಿ ನೀವು ವೃತ್ತಿ ಬದುಕನ್ನು ರೂಪಿಸಿಕೊಳ್ಳಬಹುದು. ನಿಮ್ಮ ಸಾಮರ್ಥ್ಯ ಮತ್ತು ಕೌಶಲ್ಯದಿಂದ ಮಾತ್ರ ಉತ್ತಮ ಟಿವಿ ಆಂಕರ್…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಾಲೂಕಿನ ಅಮರಗೋಳ ಗ್ರಾಮದ ಸವಿತಾ ಅಮರಗೋಳ ಕಾಣೆಯಾದ ವಿದ್ಯಾರ್ಥಿನಿ. ಗ್ರಾಮದ ತಮ್ಮ ಮನೆಯಿಂದ ಮುದ್ದೇಬಿಹಾಳದ ಕಾಲೇಜಿಗೆ ಹೋಗಿ ಬರುವದಾಗಿ ಹೇಳಿ ಹೋದವಳು ಮನೆಯಿಂದ ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾಳೆ ಎಂದು ಸವಿತಾಳ ತಂದೆ ಬಸಪ್ಪ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿಎಲ್.ಡಿ.ಇ ಆಸ್ಪತ್ರೆಯ ಕಂಪೌಂಡದಿಂದ ಮಲ್ಲಿಕಾರ್ಜುನ ಆಶ್ರಮದ (ಜ್ಞಾನಯೋಗಾಶ್ರಮ) ಹಿಂದಿನ ರಸ್ತೆಯ ಮೂಲಕ ಸಿದ್ಧಾರೂಢ ಮಠದವರೆಗೆ ಮಾದರಿ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ೨೦೨೩-೨೪ನೇ ಸಾಲಿನ ಸಿ.ಆರ್.ಎಫ್ ಯೋಜನೆಯಡಿ ರೂ.೬ ಕೋಟಿ ಅನುದಾನ ಮಂಜೂರಿಸಲಾಗಿದ್ದು, ಟೆಂಡರ್ ಕೂಡ ಆಹ್ವಾನಿಸಲಾಗಿದೆ. ಆದಷ್ಟು ಶೀಘ್ರವಾಗಿ ರಸ್ತೆ ಅಭಿವೃದ್ಧಿಗೊಳ್ಳಲಿದೆ ಎಂದು ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿದ್ಧಾರೂಢ ಮಠದ ರಸ್ತೆ ಹಾಳಾಗಿದ್ದರಿಂದ ಸಾರ್ವಜನಿಕರಿಗೆ ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ಅಡೆತಡೆ ಉಂಟಾಗಿರುವುದು ಗಮನಕ್ಕೆ ಬಂದ ತಕ್ಷಣ ಖುದ್ದಾಗಿ ರಸ್ತೆಯನ್ನು ಪರಿಶೀಲಿಸಿ, ಆದಷ್ಟು ಶೀಘ್ರವಾಗಿ ರಸ್ತೆ ಅಭಿವೃದ್ಧಿಗೊಳಿಸುವ ಭರವಸೆ ನೀಡಿದ್ದೆ. ಅದರಂತೆ, ಇದೀಗ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಹಾಗೂ ನಗರದ ಅಂಧವನ್ನು ಹೆಚ್ಚಿಸಲು ಅನುದಾನ ಮಂಜೂರಿಸಲಾಗಿದೆ.ಈಗಾಗಲೇ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮಾರ್ಗ, ಸುಭಾಸಚಂದ್ರ ಬೋಸ್ ಮಾರ್ಗ, ಅಟಲ್ ಬಿಹಾರಿ ವಾಜಪೇಯಿ ಮಾರ್ಗ, ಮಹಾರಾಣಾ ಪ್ರತಾಪ ಮಾರ್ಗ, ಜಿಲ್ಲಾ ಪಂಚಾಯಿತಿ ಕಚೇರಿ ಮಾರ್ಗ ಸೇರಿದಂತೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಸಾರ್ವಜನಿಕರು ಕಟ್ಟಿರುವ ತೆರಿಗೆ ಹಣ, ಎಲ್ಲಿಗೆ ಹೋಗುತ್ತಿದೆ? ನಗರದಲ್ಲಿ ಕೆಲ ದಿನಗಳ ಹಿಂದಷ್ಟೇ ಹದಗೆಟ್ಟ ಚರಂಡಿ ವ್ಯವಸ್ಥೆಯಿಂದ ವಾರ್ಡ್ ನಂಬರ್ ೨೪ರಲ್ಲಿ ಒಂದು ಮಗು ಜೀವವನ್ನೇ ಕಳೆದುಕೊಂಡು ಹಾಗೂ ಆಶ್ರಮ ರಸ್ತೆಯ ಹತ್ತಿರ ತಡೆಗೋಡೆ ಇಲ್ಲದ ಕಾರಣ ಕಳೆದ ವರ್ಷ ಮೂರು ಮಕ್ಕಳು ಜೀವ ಕಳೆದುಕೊಂಡರೂ ಕೂಡ ಮಹಾನಗರ ಪಾಲಿಕೆ ಗಾಢ ನಿದ್ರೆಯಿಂದ ಹೊರ ಬಂದಿಲ್ಲ ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಹಾನಗರ ಪಾಲಿಕೆಯು ಅವಶ್ಯವಿರುವ ಸ್ಥಳಗಳಲ್ಲಿ ಸೂಕ್ತ ಡ್ರೈನೇಜ್ ವ್ಯವಸ್ಥೆ, ತಡೆಗೋಡೆಗಳು, ಅತಿಕ್ರಮಣಗೊಂಡ ರಾಜ ಕಾಲುವೆಗಳನ್ನು ಸ್ವಚ್ಛತೆ, ರಸ್ತೆಗಳು, ಬೀದಿ ದೀಪಗಳು ಜನತೆಗೆ ಅತೀ ಅವಶ್ಯವಿರುವ ಕೆಲಸ ಕಾರ್ಯಗಳನ್ನು ಮಾಡದೇ ಮೂಲಭೂತ ಸೌಕರ್ಯಗಳನ್ನು ಒದಗಿಸುವದು ಬಿಟ್ಟು, ಬಬಲೇಶ್ವರ ನಾಕಾದಲ್ಲಿ ಇಬ್ರಾಹಿಂ ಆದಿಲ್ ಶಾಹಿ ವೃತ್ತದ ಹೆಸರಿನಲ್ಲಿ ಹಾಗೂ ಹಾಸಿಂಪಿರ್ ದರ್ಗಾ ಹತ್ತಿರ (ಆರ್ಚ್ಗಳನ್ನು) ಕಮಾನುಗಳನ್ನು ನಿರ್ಮಿಸಲು ರೂ.೪೦ ಲಕ್ಷ (ನಲವತ್ತು ಲಕ್ಷ)ಗಳ ಟೆಂಡರ್ ಕರೆದು, ಸಾರ್ವಜನಿಕರು ಕಟ್ಟಿರುವ ತೆರಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ (ಸೂಕ್ಷ್ಮ ನೀರಾವರಿ) ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕಗಳ ನಿರ್ವಹಣೆ ಮತ್ತು ಗುಣ ನಿಯಂತ್ರಣ ಕುರಿತು ಅ.೨೧ರಿಂದ ೨೩ರವರೆಗೆ ಜಿಲ್ಲೆಯ ವಿಸ್ತರಣಾಧಿಕಾರಿಗಳಿಗೆ ತರಬೇತಿ ಜರುಗಿತು.ತರಬೇತಿ ಕಾರ್ಯಕ್ರಮವನ್ನು ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ರೂಪಾ ಎಲ್. ಅವರು ಉದ್ಘಾಟಿಸಿ ಮಾತನಾಡಿ, ತರಬೇತಿಯಲ್ಲಿ ಭಾಗವಹಿಸಿದ ವಿಸ್ತರಣಾಧಿಕಾರಿಗಳು ಸೂಕ್ಷ್ಮ ನೀರಾವರಿ ಘಟಕಗಳು ಹಾಗೂ ಟಾರ್ಪಲಿನ್ಗಳ ಗುಣಮಟ್ಟ ಪರಿಶೀಲನೆ, ಪರೀಕ್ಷಾ ಮಾದರಿ ತೆಗೆಯುವ ವಿಧಾನ ಕುರಿತು ಮಾಹಿತಿ ಪಡೆಯುವ ಮೂಲಕ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.ಮೈಸೂರಿನ ಸಿಪೆಟ್ ಸಂಸ್ಥೆಯ ಅಧಿಕಾರಿಗಳಾದ ಡಾ.ಶ್ರೀಕಾಂತ, ರಘು ಹಾಗೂ ಬಾಲರಾಜ ರಂಗರಾವ್, ಜೈನ್ ಇರಿಗೇಷನ್ ಸಿಸ್ಟಮ್ಸ್ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕ ಎಂ.ಕೆ.ಬಿರಾದಾರ, ಪ್ರಭಾಕರ ಯಾಳವಾರ ಅವರು ಸೂಕ್ಷ್ಮ ನೀರಾವರಿ ಅಳವಡಿಕೆಯ ಮಹತ್ವ, ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಉಪ ಕೃಷಿ ನಿರ್ದೇಶಕ ಪ್ರಕಾಶ ಚವ್ಹಾಣ, ಚಂದ್ರಕಾಂತ ಪವಾರ, ಸಹಾಯಕ ಕೃಷಿ ನಿರ್ದೇಶಕರಾದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಮೀನುಗಾರರಿಗೆ ಪ್ರೊತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಮತ್ಸ್ಯವಾಹಿನಿ ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಆಯ್ಕೆಯಾದವರು ಮೀನುಗಾರಿಕೆ ಇಲಾಖೆಗೆ ಸಾಮಾನ್ಯ ವರ್ಗದವರು ೧ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ-ಮಹಿಳೆಯರು ೫೦ ಸಾವಿರ ರೂ. ಭದ್ರತಾ ಠೇವಣಿ ಒದಗಿಸಬೇಕು ಹಾಗೂ ಮಾಸಿಕ ೩ ಸಾವಿರ ರೂ. ವಾಹನ ಬಾಡಿಗೆ ಪಾವತಿಸಬೇಕಾಗಿರುತ್ತದೆ.ಅರ್ಜಿ ಸಲ್ಲಿಸಲು ದಿನಾಂಕ : ೧೫-೧೧-೨೦೨೪ ಕೊನೆಯ ದಿನವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ವಿಜಯಪುರ ಮೊ:೯೮೪೫೯೨೭೧೧೦, ಮೀನುಗಾರಿಕೆ ಸಹಾಯಕ ನಿರ್ದೇಶಕರು ಮುದ್ದೇಬಿಹಾಳ ಮೊ: ೯೮೮೦೨೧೦೫೦೫ ಇವರನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿ ದೀಪಗಳ ದುರಸ್ತಿ, ರಸ್ತೆ ಮೇಲೆ ಕಸ ಗುಡಿಸುವಿಕೆ, ಸ್ವಚ್ಛತೆ, ಒಳಚರಂಡಿ ದುರಸ್ತಿ, ಚರಂಡಿಯಲ್ಲಿನ ಹೂಳು ತೆಗೆಯುವುದು, ಸತ್ತ ಪ್ರಾಣಿಗಳ ಸ್ಥಳಾಂತರ ಸೇರಿದಂತೆ ಪಾಲಿಕೆಗೆ ಸಂಬಂಧಿಸಿದ ದೂರು-ಸಮಸ್ಯೆಗಳಿಗೆ ಸಾರ್ವಜನಿಕರು ಪಾಲಿಕೆ ಕಚೇರಿಗೆ ಬಂದು ದೂರು ಕೊಡುವ ಬದಲಿಗೆ ಸಹಾಯವಾಣಿ ಸಂಖ್ಯೆ : ೦೮೩೫೨-೨೨೨೪೭೪೭ಗೆ ಕರೆ ಮಾಡಿ ದೂರನ್ನು ನಮೂದಿಸಿದ್ದಲ್ಲಿ ಪರಿಶೀಲಿಸಿ ತುರ್ತಾಗಿ ಕ್ರಮ ವಹಿಸಲಾಗುವುದು. ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಯ ಸದುಪಯೋಗ ಪಡೆದುಕೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಮಾಹಿತಿ, ದೌರ್ಜನ್ಯ ಪ್ರಕರಣಗಳ ಕುರಿತು ಅರಿವು ಹಾಗೂ ಅಸ್ಪಶೃತೆ ನಿವಾರಣೆ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅ.೨೮ರಂದು ಬೆಳಿಗ್ಗೆ ೧೦-೩೦ರಿಂದ ೩-೩೦ರವರೆಗೆ ಏರ್ಪಡಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಗ್ರಾಮೀಣ-ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಹಾಗೂ ಉಪ ವಿಭಾಗ ಮಟ್ಟದ ಜಾಗೃತಿ ಸಮಿತಿ ಸದಸ್ಯರುಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜಿಲ್ಲಾ-ತಾಲೂಕಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು ೧೯೭೭ರ ನಿಯಮ ೫ ಮತ್ತು ೨೬(೨) ಹಾಗೂ ೧೨(ಎ) (ಬಿ) ಮತ್ತು (ಸಿ) ರನ್ವಯ ೭ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ದಿನಾಂಕ : ೦೫-೧೧-೨೦೨೪ರ ಸಂಜೆ ೫:೩೦ರೊಳಗೆ ಅವಶ್ಯಕ ದೃಢೀಕೃತ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
*ಉದಯರಶ್ಮಿ ದಿನಪತ್ರಿಕೆ* ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು ೧೯೭೭ ರ ನಿಯಮ ೫ ಮತ್ತು ೨೬(೨) ಹಾಗೂ ೧೨(ಎ) (ಬಿ) ಮತ್ತು (ಸಿ) ರನ್ವಯ ೭ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ದಿನಾಂಕ : ೦೫-೧೧-೨೦೨೪ರ ಸಂಜೆ ೫:೩೦ರೊಳಗೆ ಅವಶ್ಯಕ ದೃಢೀಕೃತ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
