Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಹಾಗೂ ಸಾಹಿತಿ ಡಾ. ಸಿದ್ದು ಸಾವಳಸಂಗ ಅವರು ತಮ್ಮ ಮನೆಯಲ್ಲಿ ಸೋಮವಾರ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ತಮ್ಮ ಮೂರನೇ ಕವನ ಸಂಕಲನ “ಗೋಧೂಳಿ ಗಂಧ” ಕೃತಿ ಬಿಡುಗಡೆ ಮಾಡಿದರು.ಪುಸ್ತಕ ಬಿಡುಗಡೆ ಮಾಡಿದ ಕಾವ್ಯಶ್ರೀ ಎಸ್.ಸಾವಳಸಂಗ ಮಾತನಾಡಿ, “ಗ್ರಂಥಗಳು ಅಮೂಲ್ಯ ಸಂಪತ್ತು ಇದ್ದಂತೆ. ಸಹೃದಯ ಓದುಗರು ಅವುಗಳನ್ನು ಕೊಂಡು ಓದಿ, ಲೇಖಕರಿಗೆ ಪ್ರೋತ್ಸಾಹಿಸಿ ತನ್ಮೂಲಕ ಕನ್ನಡ ಸಾಹಿತ್ಯವನ್ನು ಬೆಳೆಸಬೇಕು. ಕವಿ ಬರೆದ ಕೃತಿಗಳು ಜನಸಾಮಾನ್ಯರನ್ನು ತಲುಪಿದಾಗ ಮಾತ್ರ ಕವಿಯ ಬರವಣಿಗೆಯ ಶ್ರಮ ಸಾರ್ಥಕವಾಗುತ್ತದೆ” ಎಂದು ಹೇಳಿದರು.ಕೃತಿಯ ಲೇಖಕ ಡಾ.ಸಿದ್ದು ಸಾವಳಸಂಗ ಸನ್ಮಾನ ಸ್ವೀಕರಿಸಿ ಮಾತನಾಡಿ, “ಗೋಧೂಳಿ ಗಂಧ ಇದು ನನ್ನ ಮೂರನೆಯ ಕವನ ಸಂಕಲನ. ಇದು ಅನೇಕ ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತದೆ. ಗ್ರಂಥಗಳು ಕಪಾಟನ್ನು ಅಲಂಕರಿಸದೆ ಜನರ ಮನವನ್ನು ಮುಟ್ಟಬೇಕು ಹಾಗೂ ತಟ್ಟಬೇಕು. ಕವಿ ತನ್ನ ಮನಸ್ಸಿಗೆ ಹೊಳೆದದ್ದನ್ನು ಬರೆಯುತ್ತಾರೆ. ಆದರೆ ಅದರ ನಿಜವಾದ ವಿಮರ್ಶಕರೆಂದರೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಬೋಸಲೆ ಪೆಟ್ರೋಲ್ ಪಂಪ್ ಬಳಿ ಇರುವ ಪಾನ್ಶಾಪ್ ಅದುರು ಮಧ್ಯಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಶಿವಾನಂದ ಲಾಡ ಮೇಲೆ ಪ್ರಕರಣ ದಾಖಲಾಗಿದ್ದು ಈತ ಯಾವುದೇ ಲೈಸನ್ಸ್ ವ, ಪರವಾನಗೆ ಹೊಂದದೆ ತನ್ನ ಪಾನ್ಶಾಪ್ ಎದುರು ಗ್ಲಾಸು, ನೀರು ಹಾಗೂ ತಿನಿಸು ಕೊಟ್ಟು ಮಧ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಾಗ ಸಿಕ್ಕಿದ್ದು ಈ ಬಗ್ಗೆ ಪಿಎಸ್ಐ ಸಂಜೀವ ತಿಪರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಧಾರವಾಡದಲ್ಲಿ ಪಂ.ಪುಟ್ಟರಾಜ ಸಾಹಿತ್ಯೋತ್ಸವದಲ್ಲಿ ಚನ್ನವೀರ ಶ್ರೀ ಆಗ್ರಹ ಉದಯರಶ್ಮಿ ದಿನಪತ್ರಿಕೆ ಧಾರವಾಡ: ಡಾ.ಪಂಡಿತ ಪುಟ್ಟರಾಜ ಕವಿ ಗವಾಯಿಗಳವರು, ಕನ್ನಡ, ಹಿಂದಿ ಮತ್ತು ಸಂಸ್ಕೃತದಲ್ಲಿ÷ ವಿವಿಧ ಪ್ರಕಾರದ ಸಾಹಿತ್ಯ ರಚಿಸಿದ್ದು, ಸರಕಾರವೇ ಪೂಜ್ಯರ ಸಮಗ್ರ ಸಾಹಿತ್ಯ ಸಂಪುಟ ಪ್ರಕಟಿಸಿ ಅವರ ಸಾಹಿತ್ಯ, ಜನ ಸಾಮಾನ್ಯರಿಗೆ ತಲುಪಿಸುವ ಕೆಲಸ ಮಾಡಲಿ ಎಂದು ಕಡಣಿ ಸಂಸ್ಥಾನ ಹಿರೇಮಠದ ವೇ. ಚನ್ನವೀರ ಸ್ವಾಮಿಗಳು ಗದಗ ಇವರು ಸರಕಾರಕ್ಕೆ ಒತ್ತಾಯಿಸಿದರು.ಅವರು ಡಾ. ಪಂ.ಪುಟ್ಟರಾಜ ಸೇವಾ ಸಮಿತಿಯು ೨೦ ಅಕ್ಟೋಬರ್ ೨೦೨೪ ರಂದು ಧಾರವಾಡದ ರಂಗಾಯಣದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಪಂ. ಪುಟ್ಟರಾಜ ಸಾಹಿತ್ಯೋತ್ಸವ-೨೪ ಸಮಾರಂಭದ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಪಂ.ಪುಟ್ಟರಾಜರ ಹುಟ್ಟು ಹಬ್ಬ ಆಚರಣೆಗೆ ಸರಕಾರ ಚಾಲನೆ ನೀಡಲಿ ಎಂದು ಒತ್ತಾಯಿಸಿದರು.ಕ.ವಿ.ವಿ.ಲಲಿತಕಲಾ ಹಾಗೂ ಸಂಗೀತ ಮಹಾವಿದ್ಯಾಲಯದ ಸಹಾಯಕ ಉಪನ್ಯಾಸಕ, ಸಾಹಿತಿ ಡಾ, ಎ.ಎಲ್.ದೇಸಾಯಿ, ದಾರವಾಡ ಇವರು ಪೂಜ್ಯರ ಸಮಗ್ರ ಸಾಹಿತ್ಯ ಸೇವೆಯ ಕುರಿತು ಮಾತನಾಡಿ, ಪಂ.ಪಂಚಾಕ್ಷರಿ ಗವಾಯಿಗಳವರ ನಾಟಕ ರಂಗಾಯಣದ ಮೂಲಕ ಪ್ರಯೋಗವಾಗಬೇಕು. ಈ ಕೆಲಸ ಧಾರವಾಡದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಹೊನವಾಡ ಗ್ರಾಮದ ೮೯ಕ್ಕೂ ಹೆಚ್ಚು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಣೆ ಮಾಡುತ್ತಿರುವುದರಿಂದ ಆಗುತ್ತಿರುವ ಅನ್ಯಾಯಕ್ಕೆ, ನ್ಯಾಯ ಕಲ್ಪಿಸುವಂತೆ ಕೋರಿ ರೈತರು ತಮ್ಮ ದಾಖಲೆಗಳೊಂದಿಗೆ ನಗರ ಶಾಸಕರ ಸಾರ್ವಜನಿಕರ ಸಂಪರ್ಕ ಕಾರ್ಯಾಲಯಕ್ಕೆ ಶನಿವಾರ ಮನವಿ ಪತ್ರ ಸಲ್ಲಿಸಿದ್ದಾರೆ.ಹೊನವಾಡ ಗ್ರಾಮದ ನಿವಾಸಿಗಳು ನಾಲ್ಕೈದು ತಲೆಮಾರುಗಳಿಂದ ಸಾಗುವಳಿ ಮಾಡುತ್ತ ಬಂದಿರುವ ಸರ್ವೇ ನಂಬರ್ ೭೩೦, ೭೬೩, ೭೬೪, ೭೬೫, ೭೬೬/೧, ೭೬೯, ೭೭೦, ೭೭೧, ೭೭೨, ೭೭೩, ೭೭೪, ೭೭೬, ೭೭೭, ೭೮೯, ೭೯೯, ೮೦೦/೨, ೮೦೧, ೮೦೨, ೮೦೩, ೮೦೪, ೮೦೫, ೮೦೬/೧, ೮೦೭, ೮೦೯/೧, ೮೧೨/೨, ೮೧೩, ೮೧೪, ೭೬೦, ೭೬೧, ೭೬೨, ೭೬೭, ೭೬೮, ೭೯೦, ೭೬೨/೨, ೭೭೫/೧, ೮೦೬/೨, ೮೦೯/೨, ೮೧೨/೧, ೭೭೫/೨, ೭೭೫/೩, ೭೭೫/೪, ೭೭೫, ೭೫೭/೨ಎ, ೭೫೭/೨ಬಿ, ೭೫೭/ಬಿ, ೭೭೮, ೭೭೯, ೭೮೦, ೭೮೧, ೭೮೨, ೭೮೩, ೭೮೪, ೭೮೫, ೭೮೬, ೭೮೭, ೭೯೧, ೭೯೨, ೭೯೩, ೭೯೪,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತರರು ಸಿ.ಬಿ.ಚಿಕ್ಕಲಗಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ, ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸಹಾಯಕ ಸಂಚಾರ ವ್ಯವಸ್ಥಾಪಕರು ಜೆ,ಕೆ. ಹುಗ್ಗೆನ್ನವರ್, ಕಾರ್ಮಿಕ ಇಲಾಖೆಯ ಸಜ್ಜನ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾರಾಷ್ಟ್ರದ ಜತ್ತ ತಾಲೂಕಿನ ಹುಲುಜಂತಿ ಗ್ರಾಮದಲ್ಲಿ ದಿನಾಂಕ ೨೮-೧೦-೨೦೨೪ರಿಂದ ೦೩-೧೧-೨೦೨೪೭ರವರೆಗೆ ಶ್ರೀ ಮಾಳಿಂಗರಾಯ ದೇವರ ಜಾತ್ರೆ ಜರಗುವ ನಿಮಿತ್ಯ ಕಕರಸಾ ವಿಜಯಪುರ ನಿಗಮದಿಂದ ಹೆಚ್ಚುವರಿ ಬಸ್ಗಳ ಕಾರ್ಯಚರಣೆ ಮಾಡಲಾಗುವುದು ಎಂದು ಕಕರಸಾ ನಿಗಮ ವಿಜಯಪುರದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ೧ಘಟಕದ ವ್ಯವಸ್ಥಾಪಕರು(ಮೊ.೭೭೬೦೯೯೨೨೬೩), ಇಂಡಿ ಘಟಕದ ವ್ಯವಸ್ಥಾಪಕರು(ಮೊ.೭೭೬೦೯೯೨೨೬೫), ಮುದ್ದೇಬಿಹಾಳ ಘಟಕದ ವ್ಯವಸ್ಥಾಪಕರು(ಮೊ.೭೭೬೦೯೯೨೨೬೭), ಬಸವನ ಬಾಗೇವಾಡಿ ಘಟಕದ ವ್ಯವಸ್ಥಾಪಕರು(ಮೊ.೭೭೬೦೯೯೨೨೬೯), ವಿಜಯಪುರ ೨ ಘಟಕದ ವ್ಯವಸ್ಥಾಪಕರು(ಮೊ.೭೭೬೦೯೯೨೨೬೪), ಸಿಂದಗಿ ಘಟಕದ ವ್ಯವಸ್ಥಾಪಕರು(ಮೊ.೭೭೬೦೯೯೨೨೬೬), ತಾಳಿಕೋಟೆ ಘಟಕದ ವ್ಯವಸ್ಥಾಪಕರು(ಮೊ.೭೭೬೦೯೯೨೨೬೮), ಕೇಂದ್ರ ಬಸ್ ನಿಲ್ದಾಣದ ದೂ.೦೮೩೫೨-೨೫೧೩೪೪, ಮೊ.೭೭೬೦೯೯೨೨೫೮ಕ್ಕೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ವಿಜಯಪುರದಲ್ಲಿ ನಡೆದ ಪೊಲೀಸ್ ಹುತ್ಮಾತರ ದಿನಾಚರಣೆಯಲ್ಲಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಒತ್ತಡ ನಡುವೆಯೂ ಜನರ ಸುರಕ್ಷತೆಗೆಗಾಗಿ ಹಗಲಿರುಳೆನ್ನದೆ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕರ್ತವ್ಯ ನಿಷ್ಠೆ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ ಹೇಳಿದರು.ಸೋಮವಾರ ನಗರದ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ, ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.ಭಧ್ರತೆಯಲ್ಲಿ ಪ್ರಮುಖ ಪಾತ್ರವಹಿಸಿ ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಬದ್ಧತೆಯಿಂದ ಬಲಿದಾನದಂತಹ ಘಟನೆಗಳು ಜರುಗುತ್ತಿವೆ. ಬಲಿದಾನಗೈದ ಪೊಲೀಸರ ಶ್ರಮ ನೆನೆಯಬೇಕಾಗಿದೆ ಎಂದು ಅವರು ಹೇಳಿದರು.ಜಿಲ್ಲಾಧಿಕಾರಿ ಟಿ.ಭೂಲನ್ ಮಾತನಾಡಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಅವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು…
ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ವಿಜಯದಶಮಿ ಉತ್ಸವದಲ್ಲಿ ಪ್ರಾಂತ ಸಂಪರ್ಕ ಪ್ರಮುಖ ಸುಧೀರಸಿಂಗ್ ಘೋರ್ಪಡೆ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೋಲೆಕ್ಸ, ಹುಬ್ಲಾಟ್ ಮೊದಲಾದ ವಿದೇಶಿಗರ ಬ್ರ್ಯಾಂಡ್ ಗಳನ್ನೇ ಪ್ರತಿಷ್ಠೆಯಾಗಿಸುವ ಮನೋಭಾವದಿಂದ ಹೊರಬಂದು ಸ್ವದೇಶಿ ಭಾವ ಜಾಗೃತವಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಂಪರ್ಕ ಪ್ರಮುಖ ಸುಧೀರಸಿಂಗ್ ಘೋರ್ಪಡೆ ಹೇಳಿದರು.ವಿಜಯಪುರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ವತಿಯಿಂದ ನಡೆದ ವಿಜಯದಶಮಿ ಉತ್ಸವವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘ ನೂರು ವಸಂತಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಪಂಚ ಪರಿವರ್ತನೆ ಸೂತ್ರದೊಂದಿಗೆ ಬದಲಾವಣೆಗೆ ಸಂಕಲ್ಪ ಮಾಡಿದೆ ಎಂದರು.ಸ್ವದೇಶಿ ಬಟ್ಟೆ ಒಂದೇ ದಿನದ ಆಚರಣೆಯಾಗಬಾರದು, ಗೋ ಆಧಾರಿತ ಕೃಷಿ ಕೇಂದ್ರಿತ ಸ್ವದೇಶಿ ಚಿಂತನೆ, ವಿದೇಶಿ ವಸ್ತುಗಳ ವ್ಯಾಮೋಹದಿಂದ ದೂರವಾಗಬೇಕಿದೆ ಎಂದರು.ಪರಿಸರದಲ್ಲಿ ಪರಿವರ್ತನೆ ಹಾಗೂ ಸಂರಕ್ಷಣೆ, ಸಾತ್ವಿಕ ಆಹಾರ ಪದ್ದತಿ, ಕುಟುಂಬ ವ್ಯವಸ್ಥೆ ಹಾಗೂ ಶಿಕ್ಷಣ ವ್ಯವಸ್ಥೆಗೆ ಸನಾತನ ಸಂಸ್ಕೃತಿಯ ಸ್ಪರ್ಶ ಹೀಗೆ ಅನೇಕ ಪರಿವರ್ತನೆಯ ಸಂಕಲ್ಪವನ್ನು ಸಂಘ ಮಾಡಿದೆ ಎಂದರು.ನಿವೃತ್ತ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಯುವಜನಾಂಗ ದೇಶಿಯವಾದ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಮಹತ್ವ ನೀಡಬೇಕು ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಹೇಳಿದರು.ಪಟ್ಟಣದಲ್ಲಿ ಗೆಳೆಯರ ಬಳಗದಿಂದ ಇತ್ತೀಚಿಗೆ ಜರುಗಿದ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.ಭಾರತೀಯ ಯುವಜನತೆ ಈಗೀಗ ಕ್ರಿಕೆಟ್, ಟೆನಿಸ್, ಪುಟ್ಬಾಲ್ನಂತ ಕ್ರೀಡೆಗಳತ್ತ ಹೆಚ್ಚಾಗಿ ಗಮನ ಹರಿಸುತ್ತಿದ್ದಾರೆ. ಆದರೆ ಇವುಗಳು ಮನರಂಜನೆ ಮಾತ್ರ ನೀಡಬಹುದು ವಿನಹಃ ದೈಹಿಕ ಬೆಳವಣಿಗೆಗಳನ್ನಲ್ಲ. ಆದ್ದರಿಂದ ಮಾನಸಿಕ, ದೈಹಿಕ ಬೆಳವಣಿಗೆಗೆ ಪೂರಕವಾದ ಗ್ರಾಮೀಣ ಕ್ರೀಡೆಗಳೆನಿಸಿದ ಕುಸ್ತಿ, ಕಬಡ್ಡಿಯಂತ ಆಟಗಳ ಕುರಿತು ಗಮನ ನೀಡಬೇಕು ಎಂದರು.ಮಾಜಿಶಾಸಕ ಶರಣಪ್ಪ ಸುಣಗಾರ ಮಾತನಾಡಿ, ಇಂದು ಗೆಳೆಯರ ಬಳಗದಿಂದ ಕೈಗೊಂಡಿರುವ ಕುಸ್ತಿ ಪಂದ್ಯಾವಳಿ ಅತ್ಯಂತ ಸಮಯೋಚಿತ. ಇಂತಹ ದೇಶಿಯ ಕ್ರೀಡಾಕೂಟಗಳು ಇಂದು ಅಗತ್ಯವಾಗಿವೆ ಎಂದರು.ಪಂದ್ಯಾವಳಿಯಲ್ಲಿ ಮಕ್ಕಳು ಸಹಿತ ಹಿರಿಯರು ಭಾಗವಹಿಸಿದ್ದು ವಿಶೇಷವಾಗಿತ್ತು. ಪೈನಲ್ ಪಂದ್ಯಾವಳಿಯ ಸಮಯದಲ್ಲಿ ತುಂತುರು ಮಳೆಯಿಂದ ಅಡಚಣೆಯಾದ ಕಾರಣ ಜೊತೆಗೆ ಫಲಿತಾಂಶ ಸಮನಾದ ಕಾರಣ ಇಬ್ಬರೂ ಸ್ಪರ್ಧಿಗಳಿಗೆ ಬಹುಮಾನದ ಮೊತ್ತವನ್ನು ಹಂಚಲಾಯಿತು.ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ರಾಜಕುಮಾರ ಸಿಂದಗೇರಿ,…
ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ & ೨೦೦ನೇ ವಿಜಯೋತ್ಸವ ಆಚರಣೆ ಅದ್ಧೂರಿಯಾಗಿ ಆಚರಿಸಲು ನಿರ್ಧಾರ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಹಾಗೂ ೨೦೦ನೇ ವಿಜಯೋತ್ಸವ ಆಚರಣೆಯನ್ನು ಭವ್ಯವಾದ ಮೆರವಣಿಗೆಯ ಮೂಲಕ ಅದ್ಧೂರಿಯಾಗಿ ಆಚರಿಸೋಣ ಎಂದು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಹೇಳಿದರು.ಪಟ್ಟಣದ ಇಂಡಿ ರಸ್ತೆಯ ದಾನಗೊಂಡ ಬಡಾವಣೆಯಲ್ಲಿ ಭಾನುವಾರ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಹಾಗೂ ೨೦೦ನೇ ವಿಜಯೋತ್ಸವ ಆಚರಣೆ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಜಯಂತ್ಯುತ್ಸವ ಹಾಗೂ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಂಚಮಸಾಲಿ ಸಮುದಾಯದ ಯುವಕರನ್ನು ಒಳಗೊಂಡು ಎಲ್ಲ ಪ್ರಮುಖರು ಭಾಗವಹಿಸಿ ಶೋಭೆ ತರುವಂತೆ ಮನವಿ ಮಾಡಿದರು.ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಮಾತನಾಡಿ, ಇಂದು ಎಲ್ಲ ಶರಣರು, ಮಹನೀಯರನ್ನು ಒಂದೊಂದು ಸಮುದಾಯಕ್ಕೆ ಸೀಮಿತಗೊಳಿಸುತ್ತಿರುವುದು ಖೇದಕರ. ಇಂಥ ರೂಢಿ ಬದಲಾಗಬೇಕು. ರಾಣಿ ಚನ್ನಮ್ಮ ದೇಶದ ಹೆಮ್ಮೆಯ ವೀರಮಾತೆ, ವೀರಮಾತೆಯ ಜಯಂತಿ ಹಾಗೂ ವಿಜಯೋತ್ಸವದಲ್ಲಿ ಎಲ್ಲರೂ ಭಾಗವಹಿಸುವಂತಾಗಬೇಕು ಎಂದರು.ತಾಲ್ಲೂಕು ಪಂಚಮಸಾಲಿ ಸಮಾಜದ…
