Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ. ಎಲ್. ಡಿ. ಇ ಸಂಸ್ಥೆ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ಇಂದಿನಿಂದ 60 ದಿನಗಳವರೆಗೆ ಕಾಲ ಕಿಡ್ನಿ ಸಂಬಂಧಿಸಿದ ರೋಗಿಗಳಿಗೆ ಉಚಿತ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ ಎಂದು ಪ್ರಾಚಾರ್ಯ ಡಾ.ಸಂಜಯ ಕಡ್ಲಿಮಟ್ಟಿ ತಿಳಿಸಿದ್ದಾರೆ.ದಿ.21ಅಕ್ಟೋಬರ್ ನಿಂದ ದಿ.21 ಡಿಸೆಂಬರ್ ವರೆಗೆ ಬೆ.9 ರಿಂದ ಸಂ.4 ಗಂಟೆಯವರೆಗೆ ಹೆಚ್ಚಿನ ಕ್ರೀಯಾಟೆನಿನ್ ಹೊಂದಿರುವ ರೋಗಿಗಳಿಗೆ ವಿಶೇಷ ಸಲಹೆ ಮತ್ತು ಚಿಕಿತ್ಸೆಯನ್ನು ಈ ಶಿಬಿರದಲ್ಲಿ ಉಚಿತವಾಗಿ ನೀಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಡಾ.ಅಶ್ವಿನಿ ಸಜ್ಜನವರ ಮೊ.ನಂ: 7406737888, 8073853981 ಸಂಪರ್ಕಿಸಬಹುದು ಎಂದು ಪ್ರಾಚಾರ್ಯ ಡಾ.ಕಡ್ಲಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಜಿಫೆಸ್ಟ್ ಸಮ್ಮೇಳನಗಳು ಪರೀಕ್ಷೆ ತಯಾರಿಯಲ್ಲಿರುವ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯ ಸಮಕುಲಪತಿ ಡಾ. ಅರುಣ ಇನಾಮದಾರ ಹೇಳಿದರು.ಡೀಮ್ಡ್ ವಿವಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗ ಮತ್ತು ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಅ.18 ಶುಕ್ರವಾರ ನಡೆದ ಸ್ನಾತಕೋತ್ತರ ಪದವಿ ಪ್ರಾಯೋಗಿಕ ಪರೀಕ್ಷೆ ಆಧಾರಿತ ಮುಂದುವರೆದ ವೈದ್ಯಕೀಯ ಶಿಕ್ಷಣ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.ಇಂಥ ಸಮ್ಮೇಳನಗಳಲ್ಲಿ ಅನುಭವಿ ಮತ್ತು ನುರಿತ ಪ್ರಾಧ್ಯಾಪಕರು ಭಾಗವಹಿಸುವುದರಿಂದ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಸಂದೇಹಗಳನ್ನು ನಿವಾರಿಸಿಕೊಳ್ಳಲು ಅನುಕೂಲವಾಗುತ್ತವೆ. ಇತ್ತೀಚಿನ ದಿನಗಳಲ್ಲಿ ನಮ್ಮ ಮಹಾವಿದ್ಯಾಲಯದಲ್ಲಿ ವಿಶಿಷ್ಠ ಮತ್ತು ನವೀನ ಪ್ರಾಯೋಗಿಕ ಸಮ್ಮೇಳನ ಹಾಗೂ ಕಾರ್ಯಕ್ರಮಗಳು ನಡೆಯುತ್ತಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕರ್ನಾಟಕ ರಾಜ್ಯದ ಖ್ಯಾತ ವೈದ್ಯಕೀಯ ಲೇಖಕ ಹಾಗೂ ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜಿನ ಸಹಾಯಕ ಡೀನ್ ಡಾ. ರಾಜಗೋಪಾಲ ಶೆಣೈ ಅವರು…
ವಿವಿಧ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಚಿವ ಎಂ.ಬಿ.ಪಾಟೀಲ ಅವರ ನೀರಾವರಿ ಯೋಜನೆಗಳು ಕೃಷಿ ಮತ್ತು ರೈತರ ಬದುಕಿಗೆ ಭದ್ರತೆ ನೀಡಿವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 32 ಲಕ್ಷ ವೆಚ್ಚದಲ್ಲಿ ಮತ್ತು ಹೊಕ್ಕುಂಡಿಯಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಈ ಮುಂಚೆ ಈ ಭಾಗದಲ್ಲಿನ ಜನ ಕುಡಿಯುವ ನೀರು ಕೇಳುತ್ತಿದ್ದರು. ಆದರೆ, ಈಗ ಸಕ್ಕರೆ ಕಾರ್ಖಾನೆ ಸ್ಪಾಪಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದಾರೆ. ಸಚಿವ ಎಂ.ಬಿ.ಪಾಟೀಲರು ಕೈಗೊಂಡ ನೀರಾವರಿ ಯೋಜನೆಗಳಿಂದಾಗಿ ಈ ಭಾಗದಲ್ಲಿ ರೈತರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ಬಿಟ್ಟು ಈಗ ಕೃಷಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ತಮ್ಮ ಜಮೀನುಗಳಲ್ಲಿ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಇದರಿಂದಾಗಿ ಕೃಷಿ ಮತ್ತು ಅನ್ನದಾತರ ಬದುಕಿಗೆ ಭದ್ರತೆ ಸಿಕ್ಕಂತಾಗಿದೆ ಎಂದು ಅವರು ಹೇಳಿದರು.ಇದೇ…
ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಎಚ್ಸಿಜಿ ಕ್ಯಾನ್ಸರ್ ಸೆಂಟರ್ ವತಿಯಿಂದ ಬೈಕಥಾನ್ ಆಯೋಜನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಸ್ತನಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್ಸಿಜಿ ಕ್ಯಾನ್ಸರ್ ಸೆಂಟರ್ ವತಿಯಿಂದ “ಪಿಂಕ್ ವುಮೆನ್ಸ್” ಶೀರ್ಷಿಕೆಯಡಿ ಬೈಕಥಾನ್ ಆಯೋಜಿಸಿತ್ತು.ಸ್ತನಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್ ಕೆ.ಆರ್. ರಸ್ತೆಯ ಎಚ್ಸಿಜಿ ಕ್ಯಾನ್ಸರ್ ಕೇಂದ್ರದಿಂದ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು. 180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್ಗಳು ಈ ಬೈಕಥಾನ್ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್ಗೂ ಮುನ್ನ, ಜುಂಬಾ ಸೆಷನ್, ಮೈಕಲ್ ಜಾಕ್ಸನ್ ಅವರ “ಡೇಂಜರಸ್” ಪ್ರೇರಿತಗೊಂಡ ಸ್ಟೆಪ್ಸ್ ಹಾಕುವ ಮೂಲಕ ಸ್ತನ ಕ್ಯಾನ್ಸರ್ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.ಎಚ್ಸಿಜಿ ಮುಖ್ಯ…
ನಾವು ಕೋಲಾರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದೇವೆ | ಎಂಎಲ್ಸಿ ಸಿ.ಪಿ. ಯೋಗೇಶ್ವರ್ ಅವರೇ ಅಭ್ಯರ್ಥಿಯಾಗಲಿದ್ದಾರೆ | ಬಿಜೆಪಿ ವಕ್ತಾರ ಅಶ್ವತ್ಥನಾರಾಯಣಗೌಡ ಸುದ್ದಿಗೋಷ್ಠಿ ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಒಮ್ಮತದ ಅಭ್ಯರ್ಥಿಯ ಬಗ್ಗೆ ವಿಷಯಗಳು ಗೊಂದಲಕ್ಕೊಳಗಾಗುತ್ತಿದ್ದಂತೆ, ಬಿಜೆಪಿ ಈಗ ಜೆಡಿಎಸ್ ವಿರುದ್ಧ ಪ್ಲಾನ್ ಆರಂಭಿಸಿದೆ.2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದ ಕೋಲಾರ ಲೋಕಸಭಾ ಕ್ಷೇತ್ರವನ್ನು 2024ರಲ್ಲಿ ಜೆಡಿಎಸ್ಗೆ ನೀಡಲಿಲ್ಲವೇ? ಹೀಗಾಗಿ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವಂತೆ ಜೆಡಿಎಸ್ಗೆ ಒತ್ತಾಯಿಸುತ್ತೇವೆ ಎಂದು ಬಿಜೆಪಿ ವಕ್ತಾರ ಅಶ್ವತ್ಥನಾರಾಯಣಗೌಡ ಹೇಳಿದ್ದಾರೆ. ರಾಮನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, 2019 ರ ಲೋಕಸಭೆ ಚುನಾವಣೆಯಲ್ಲಿ ಅಶ್ವತ್ಥನಾರಾಯಣಗೌಡರು 6,71,338 ಮತಗಳನ್ನು ಗಳಿಸಿದ್ದರು. ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿಕೆ ಸುರೇಶ್ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಿದ್ದ ಗೌಡರು ಕಠಿಣ ಪೈಪೋಟಿ ನೀಡಿದ್ದರು, 8,78,258 ಮತ ಗಳಿಸಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನೂ ಒಳಗೊಂಡಿದೆ.ಕೋಲಾರದ ಸಂಸದರಾಗಿದ್ದ…
ಇಂದು ಪೊಲೀಸ್ ಹುತಾತ್ಮ ದಿನಾಚರಣೆ (ಅ.21) ಪ್ರಯುಕ್ತ ಈ ವಿಶೇಷ ಲೇಖನ – ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ – ಗದಗ ಉದಯರಶ್ಮಿ ದಿನಪತ್ರಿಕೆ ಅದೊಂದು ದೊಡ್ಡ ರಾಜಕೀಯ ಕಾರ್ಯಕ್ರಮ. ಅಲ್ಲಿ ಬಂದೋಬಸ್ತಿಗಾಗಿ ಬಂದಿರುವ ನೂರಾರು ಸಾವಿರಾರು ಪೊಲೀಸರು ಮಂತ್ರಿ ಮಾಗಧರಿಗೆ ಎಸ್ಕಾರ್ಟ್ ಆಗಿ, ಜನರನ್ನು ನಿಯಂತ್ರಿಸಲು, ವಾಹನಗಳನ್ನು ಒಂದೆಡೆ ನಿಲ್ಲಿಸಲು, ಯಾವುದೇ ಅವಘಡಗಳಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ದರಾಗಿ ನಿಂತಿದ್ದಾರೆ. ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾದರೆ ಪೊಲೀಸ್ ಇಲಾಖೆಯವರು ಆರು ಗಂಟೆಗೆ ಎದ್ದು ನಿತ್ಯವಿಧಿಗಳನ್ನು ಪೂರೈಸಿ ತಿಂಡಿ ತಿಂದು ಸ್ಥಳಕ್ಕೆ ಬಂದೋಬಸ್ತಿಗಾಗಿ ಬಂದು ನಿಂತರೆ ಕಾರ್ಯಕ್ರಮ ಮುಗಿದು ಅತಿಥಿಗಳೆಲ್ಲ ತಮ್ಮ ಮನೆ ಸೇರಿದರೂ ಇವರ ಡ್ಯೂಟಿ ಮುಗಿದಿರುವುದಿಲ್ಲ. ಬಂದೋಬಸ್ತಿನ ಗಡಿಬಿಡಿಯಲ್ಲಿ ಎಷ್ಟೋ ಬಾರಿ ಊಟ ತಿಂಡಿಗಳ ಕಡೆ ಇವರ ಗಮನ ಹರಿಯೋದೆ ಇಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಇವರ ನಿಸರ್ಗ ಕರೆಗಳಿಗೆ ಯಾವುದೇ ರೀತಿಯಾದ ವ್ಯವಸ್ಥೆಗಳು ಇರುವುದಿಲ್ಲ.ದೇಶದ ಯಾವುದೇ ಭಾಗದಲ್ಲಿ ಯಾವುದೇ ರೀತಿಯ ಹರತಾಳ, ಗಲಾಟೆ, ಹಿಂಸಾಚಾರ, ದೊಂಬಿಯಂತಹ ಘಟನೆಗಳು ಜರುಗಿದರೂ…
ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಜಾಗೃತಿ ಜಾಥಾ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿರುವ ವಿವಿಧ ಸರ್ಕಾರಿ ಸೇರಿದಂತೆ ಖಾಸಗಿ ಕಚೇರಿ, ಶಾಲೆ, ಆಸ್ಪತ್ರೆ ಅಂಗಡಿ ಮುಂಗಟ್ಟುಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಪಲಕ ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳೊಂದಿಗೆ ರವಿವಾರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.ಬೆಳಿಗ್ಗೆ ೧೦ ಗಂಟೆಗೆ ನಗರದ ಸೋಲಾಪುರ ರಸ್ತೆಯಲ್ಲಿರುವ ಬಂಜಾರಾ ಕ್ರಾಸ್ದಿಂದ ಆರಂಭಿಸಿ, ಶಿವಾಜಿ ಸರ್ಕಲ್ ಮಾರ್ಗವಾಗಿ ಗಾಂಧಿ ವೃತ್ತದ ವರೆಗೂ ಜಾಥಾ ನೇರವೇರಿತು.ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಸರ್ಕಾರದ ಆದೇಶದಂತೆ ನಾಮಫಲಕಗಳು ಶೇ.೬೦ ರಷ್ಟು ಕನ್ನಡ ಭಾಷೆ ಒಳಗೊಂಡಿರಬೇಕು. ಶೇ.೪೦ ರಷ್ಟು ಉಳಿದ ಭಾಷೆಗಳನ್ನು ಬಳಸಲು ಅವಕಾಶವಿದ್ದು, ಇದೇ ಅಕ್ಟೋಬರ್ ೩೦ರೊಳಗೆ ಜಿಲ್ಲೆಯ ಎಲ್ಲ ನಾಮಫಲಕಗಳು ಕನ್ನಡ ಭಾಷೆಯನ್ನು ಒಳಗೊಂಡಿರಬೇಕು. ಅಕ್ಟೋಬರ್ ೩೧ರ ನಂತರ ಕನ್ನಡ ಭಾಷೆ ಒಳಗೊಳ್ಳದ ನಾಮಫಲಕಗಳನ್ನು ಮುಟ್ಟುಗೊಲು…
ತೋಂಟದಾರ್ಯ ಸ್ವಾಮೀಜಿ ಸಂಸ್ಕರಣಾ ದಿನ ಪ್ರಯುಕ್ತ ಹೆಜ್ಜೆ ಗುರುತುಗಳ ಒಂದು ಮೆಲುಕು ಉದಯರಶ್ಮಿ ದಿನಪತ್ರಿಕೆ – ಗುಲಾಬಚಂದ ಜಾದವವಿಜಯಪುರ: ಗಟ್ಟಿ ಛಾತಿ,ಮೃದು ಹೃದಯದ ತೋಂಟದ ಲಿಂ, ಡಾ. ಸಿದ್ದಲಿಂಗ ಪೂಜ್ಯರು ಜಗಮನದಲ್ಲಿ ಸದಾ ಆಜರಾಮರು ! ಅದಕ್ಕೆ ಕಾರಣ ಶ್ರೀಗಳು ತಮ್ಮ ಜೀವಿತಾವಧಿಯಲ್ಲಿ ಬಸವ ತತ್ವದಡಿಯಲ್ಲಿ ಗೈದ ಸಮಾಜಪರ ಎಂದು ಮರೆಯಲಾಗದ ಅಭೂತಮಯ ಕಾಯಕಗಳು ! ಪದಗುಚ್ಛಗಳ ಮೂಲಕ ಈ ಕನ್ನಡ ಕುಲಗುರುವಿನ ವೈವಿಧ್ಯಮಯ ಕಾಯಕ ಪ್ರಜ್ಞೆಗಳನ್ನು ಸ್ಮರಿಸೋಣ ಬನ್ನಿ..!ಶಿಕ್ಷಣ, ಆರೋಗ್ಯ ಸೇರಿದಂತೆ ಐದು ದಶಕಗಳಷ್ಟು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ತೋಂಟದಾರ್ಯ ಮಠದ ಶ್ರೀ ಡಾ.ಸಿದ್ದಲಿಂಗ ಸ್ವಾಮೀಜಿಯವರ ಸಂಸ್ಮರಣಾ ದಿನವಿದು. ಅಕ್ಟೋಬರ್. ೨೦ , ೨೦೧೮ರಂದು ಈ ಲೋಕವನ್ನಗಲಿದ ಸ್ವಾಮೀಜಿ ಅವರು ೭೬ ವರ್ಷ ಈ ಲೋಕದಲ್ಲಿ ನಡೆದಾಡಿದ್ದರು.ಶ್ರೀಗಳು ಹಲವಾರು ದಶಕಗಳಿಂದ ಅನ್ನದಾಸೋಹ ನಡೆಸಿಕೊಂಡು ಬಡ ಮಕ್ಕಳ ಶ್ರೇಯೋಭಿವೃದ್ದಿಗೆ ಹೆಸರಾಗಿದ್ದರು. ತಾವು ಪೀಠಾಧಿಪತಿಗಳಾದ ನಂತರ ಗದಗ, ಹಾವೇರಿ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿದ್ದರು. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಹಿಡಿದು,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಘಟಕದ ಸಹಯೋಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ‘ಪ್ರಸ್ತುತ ಸಾಮಾಜಿಕ ನೆಲೆಯಲ್ಲಿ ವಾಲ್ಮೀಕಿ ರಾಮಾಯಣ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಇದೇ ದಿ.೨೨ ರಂದು ಮಧ್ಯಾಹ್ನ ೦೩:೦೦ ಗಂಟೆಗೆ ಕನ್ನಡ ಅಧ್ಯಯನ ವಿಭಾಗದ ಸಭಾಭವನದಲ್ಲಿ ಜರುಗಲಿದೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗೋಪಾಲ್ ಎನ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಯೋಜಕ ಸಂದೀಪ್ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಘಟಕದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಎಲ್ಲರು ಮಹಾತ್ಮರ ಸ್ಮರಣೆ ಮಾಡಬೇಕು. ಇದರಿಂದ ಎಂತಹ ಕಷ್ಟಗಳು ಬಂದರೂ ಪರಿಹಾರವಾಗುತ್ತವೆ ಎಂದು ಕಾಶಿ ಪೀಠದ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ವಾರರು ಹೇಳಿದರು.ಶನಿವಾರ ತಾಲೂಕಿನ ಹಲಸಂಗಿ ಗ್ರಾಮದ ಶ್ರೀ ದೇವಿ ಉತ್ಸವ ಹಾಗೂ ಅಡ್ಡ ಪಲ್ಲಕ್ಕಿ ಮಹೋತ್ಸವ, ಧರ್ಮ ಸಭೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ಕರ್ಮದ ಹಾದಿ ಬಿಟ್ಟು, ಧರ್ಮದ ಹಾದಿ ಹಿಡಿಯುವುದರಿಂದ ಧರ್ಮ ನಮ್ಮನ್ನು ಕಾಯುತ್ತದೆ. ಮೂಲ ಪುರುಷನನ್ನು ನಂಬಿದವರು ಯಾರೂ ಕೆಟ್ಟಿಲ್ಲ. ಸತ್ಯದ ಮಂತ್ರವನ್ನು ಬಿಟ್ಟು ಮಿಕ್ಕಿದ ಮಂತ್ರವನ್ನು ನಂಬಿದವರು ಯಾರಿಗೂ ಒಳ್ಳೆಯದಾಗಿಲ್ಲ ಎಂದರು.ಅತಿಯಾದ ಆಶೆ ಮನುಷ್ಯನನ್ನ ಹಾಳು ಮಾಡುತ್ತದೆ. ಇರುವುದರಲ್ಲಿಯೇ ಬದುಕು ನಡೆಸುವ ಕಲೆಯನ್ನ ನಾವುಗಳು ಕಲಿಯಬೇಕು. ಶರಣರು ದೊಡ್ಡ ದೊಡ್ಡ ಕಟ್ಟಡಗಳನ್ನ ನಿರ್ಮಾಣ ಮಾಡಲಿಲ್ಲ ಅವರಿಂದ ಸಣ್ಣ ಸಣ್ಣ ಮನೆಗಳಲ್ಲಿಯೇ ದೊಡ್ಡ ದೊಡ್ಡ ಧರ್ಮದ ಕಾರ್ಯಗಳನ್ನ ಮಾಡಿ ತೋರಿಸಿದವರು. ಆದರೆ ನಾವುಗಳು ದೊಡ್ಡ ದೊಡ್ಡ ಮನೆಗಳಲ್ಲಿ ಇದ್ದೇವೆ, ಆದರೆ ಧರ್ಮದ ಕಾರ್ಯಗಳಿಗೆ ತನು ಮನ ಧನದಿಂದ ಸೇವೆ ಮಾಡುವುದನ್ನ ಮರೆತು…
