Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಕುರಿತು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಪುಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ವಿವಿಧ ಬೆಳೆಗಳಿಗೆ ರೈತರು ಬೆಳೆ ವಿಮೆ ಮಾಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ತಾಲ್ಲೂಕುವಾರು ಹಾಗೂ ಗ್ರಾಮ ಪಂಚಾಯಿತಿವಾರು ಅಧಿಸೂಚಿಸಲಾಗಿರುವ ವಿವಿಧ ಬೆಳೆಗಳ ವಿಮಾ ಮೊತ್ತ ವಿಮಾ ಕಂತು ಮತ್ತು ನೋಂದಣಿಯ ಅಂತಿಮ ದಿನಾಂಕದ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಲು ವಿನಂತಿಸಲಾಗಿದೆ. ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ, ಬೆಳೆ ಸಾಲ ಪಡೆದ ರೈತರು, ಸಾಲ ನೀಡಿದ ಬ್ಯಾಂಕ್ ಗಳಲ್ಲಿ ವಿಮೆ ನೋಂದಾಯಿಸಬೇಕು ಎಂದವರು ತಿಳಿಸಿದ್ದಾರೆ. ಬೆಳೆ ಸಾಲ ಪಡೆಯದ ರೈತರು ನೋಂದಣಿಗಾಗಿ ಅರ್ಜಿಯೊಂದಿಗೆ ರೈತರು ಕೃಷಿ ಸಾಲ ಪಡೆಯದಿರುವ ಕುರಿತು ಕಡ್ಡಾಯವಾಗಿ ಸ್ವಯಂ ಘೋಷಣೆ ಪತ್ರ ಹಾಗೂ ಭೂಮಿ ಹೊಂದಿರುವುದಕ್ಕೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಕುರಿತು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ಸರಕಾರ ಅಧಿಸೂಚನೆ ಹೊರಡಿಸಿದ್ದು, ಜಿಲ್ಲೆಯಲ್ಲಿ ವಿವಿಧ ಬೆಳೆಗಳಿಗೆ ರೈತರು ಬೆಳೆ ವಿಮೆ ಮಾಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ.ಅವರು ತಿಳಿಸಿದ್ದಾರೆ.ತಾಲ್ಲೂಕುವಾರು ಹಾಗೂ ಗ್ರಾಮ ಪಂಚಾಯಿತಿವಾರು ಅಧಿಸೂಚಿಸಲಾಗಿರುವ ವಿವಿಧ ಬೆಳೆಗಳ ವಿಮಾ ಮೊತ್ತ, ವಿಮಾ ಕಂತು ಮತ್ತು ನೋಂದಣಿಯ ಅಂತಿಮ ದಿನಾಂಕದ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಕಚೇರಿಗಳಿಗೆ ಸಂಪರ್ಕಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ.ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ, ಬೆಳೆ ಸಾಲ ಪಡೆದ ರೈತರು, ಸಾಲ ನೀಡಿದ ಬ್ಯಾಂಕ್ ಗಳಲ್ಲಿ ವಿಮೆ ನೋಂದಾಯಿಸಬೇಕು. ಜೊತೆಗೆ ಬೆಳೆ ಸಾಲ ಪಡೆಯದ ರೈತರು ನೋಂದಣಿಗಾಗಿ ಅರ್ಜಿ ಜೊತೆ ಕೃಷಿ ಸಾಲ ಪಡೆಯದಿರುವ ಕುರಿತು ಕಡ್ಡಾಯವಾಗಿ ಸ್ವಯಂ ಘೋಷಣೆ ಪತ್ರ ಲಗತ್ತಿಸಬೇಕು.ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ ಸಂಖ್ಯೆ ಜೋಡಿಸಿದ ಬ್ಯಾಂಕ್ ಪಾಸ್ ಬುಕ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರದಲ್ಲಿ ೨೦೨೬-೨೭ನೇ ಸಾಲಿನ ವಿವಿಧ ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿ ಪ್ರಾರಂಭವಾಗಿವೆ.ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತಿತಿತಿ.ಞsoumಥಿsuಡಿu.ಚಿಛಿ.iಟಿ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿದೆ.ಬಿಪಿಎಲ್ ಮಹಿಳೆಯರು, ಮಾಜಿ ಸೈನಿಕರು, ಆಟೋ ಕ್ಯಾಬ್ ಚಾಲಕರು ಹಾಗೂ ಕೆಎಸ್ಆರ್ಟಿಸಿ ನೌಕರರಿಗೆ ಶುಲ್ಕ ರಿಯಾಯಿತಿ ನೀಡಲಾಗಿದ್ದು, ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳು, ತೃತೀಯ ಲಿಂಗದವರು ಹಾಗೂ ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಸೌಲಭ್ಯವಿದೆ.ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಅಥವಾ ಮೊಬೈಲ್ ಸಂಖ್ಯೆ ೯೪೮೩೯೨೦೦೬೫, ೯೧೧೦೨೫೬೭೩೮ ಹಾಗೂ ೭೮೯೨೫೫೦೦೫೩ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬರಪರಿಹಾರ ಕುರಿತು ಕೇಂದ್ರಕ್ಕೆ ಪತ್ರ ಬರೆಯುತ್ತಿರುವ ರಾಜ್ಯದ ವಿರುದ್ಧ ಸಂಸದ ರಮೇಶ ಜಿಗಜಿಣಗಿ ವಾಗ್ದಾಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದಲ್ಲಿ ತೀವ್ರ ಬರಪರಿಸ್ಥಿತಿ ಎದುರಾಗಿದ್ದು ಬರಘೋಷಣೆಯಾಗದೆ, ಸಮೀಕ್ಷೆ ನಡೆಸದೇ, ಪ್ರಸ್ತಾವನೆ ಸಲ್ಲಿಸದೇ ಪರಿಹಾರಕ್ಕಾಗಿ ನಿರಂತರವಾಗಿ ಕೇಂದ್ರದತ್ತ ಬೊಟ್ಟು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ಸಂಸದ ರಮೇಶ ಜಿಗಜಿಣಗಿ ಹರಿಹಾಯ್ದಿದ್ದಾರೆ.”ಬರಪರಿಹಾರಕ್ಕಾಗಿ ಈಗ ಕೇಂದ್ರಕ್ಕೆ ಪತ್ರ ಬರೆಯುವ ಕುರಿತು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು, ಮೊದಲು ತಮ್ಮ ಜವಾಬ್ದಾರಿ ಏನು ಅಂತ ಯೋಚಿಸಬೇಕು. ಎಲ್ಲದಕ್ಕೂ ಕೇಂದ್ರವೇ ಮಾಡಬೇಕು ಅಂದ್ರೆ ರಾಜ್ಯ ಸರ್ಕಾರದ ಪಾತ್ರವೇನು?” ಎಂದು ಪ್ರಶ್ನಿಸಿದ್ದಾರೆ.”NDRF ಮಾರ್ಗಸೂಚಿ ಪ್ರಕಾರ ರಾಜ್ಯ ತನ್ನ SDRF ನಿಧಿಯಿಂದ ಮೊದಲು ಪರಿಹಾರ ನೀಡಬೇಕು. ನಂತರ ಕೇಂದ್ರದಿಂದ ಹೆಚ್ಚುವರಿ ನೆರವು ಕೇಳಬೇಕು. ಆದರೆ ಇಲ್ಲಿ ರಾಜ್ಯ ಸರ್ಕಾರ ಯಾವುದೇ ಕೆಲಸ ಮಾಡದೇ ನೇರವಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತಿದೆ. ಇದು ಜನರನ್ನು ದಾರಿ ತಪ್ಪಿಸುವ ಕೆಲಸ” ಎಂದು ಅವರು ಕಿಡಿಕಾರಿದ್ದಾರೆ.ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ,…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣ ಪಂಚಾಯತಿ ಅಧ್ಯಕ್ಷ ಕಾಂಗ್ರೆಸ್ ಪಕ್ಷದ ಸದಸ್ಯ ಸಾಧಿಕ ಫರಿದಾಸಬ ಸುಂಬಡ ಅವರನ್ನು ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿಲುವಳಿ ಮಂಡಿಸಲು ೧೨ ಸದಸ್ಯರು ಸಹಿ ಮಾಡಿ ಮುಖ್ಯಾಧಿಕಾರಿ ರವಿ ಸಿರಗುಪ್ಪಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ಒಟ್ಟು ೧೯ ಸಂಖ್ಯಾಬಲದ ಸದಸ್ಯರನ್ನು ಹೊಂದಿರುವ ಆಲಮೇಲ ಪಟ್ಟಣ ಪಂಚಾಯತಿ ಜಿಲ್ಲೆಯಲ್ಲಿಯೇ ದೊಡ್ಡ ಪಟ್ಟಣಪಂಚಾಯತಿ ಆಗಿದೆ , ೧೦ ಸದಸ್ಯರು ಬೆಂಬಲ ಬೇಕಿರುವ ಈಗಿನ ಅಧ್ಯಕ್ಷರಿಗೆ ೧೨ ಸದಸ್ಯರು ಬೆಂಬಲ ಹಿಂಪಡೆದುಕೊಂಡಿದ್ದಾರೆ. ಬಿಜೆಪಿ, ಕಾಂಗ್ರೆಸ್ ನಿಂದ ತಲಾ ಎಂಟು ಸದಸ್ಯರು ಚುನಾಯಿತರಾಗಿದ್ದು ಮೂವರು ಪಕ್ಷೇತರರು ಆಯ್ಕೆಯಾಗಿದ್ದರು. ಈಗ ಅವಿಶ್ವಾಸ ನಿಲುವಳಿ ಸಭೆ ನಡೆಸುವಂತೆ ಆಗ್ರಹಿಸಿದ. ಅಧ್ಯಕ್ಷ ಸಾದಿಕ ಸುಂಬಡ ಅವಧಿಯಲ್ಲಿನ ಅಕ್ರಮಗಳ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಸದಸ್ಯ ಸಂಜೀವಕುಮಾರ ಯಂಟಮಾನ ‘ ಅಧ್ಯಕ್ಷರು ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದಾರೆ, ಸದಸ್ಯರ ಗಮನಕ್ಕೂ ತರದೆ ತೀರ್ಮಾನ ಮಾಡುತ್ತಿದ್ದು, ಸರಿಯಾದ ಕ್ರಮವಲ್ಲ , ಕೆ.ಪಿ.ಆರ್ ಸಕ್ಕರೆ ಕಾರ್ಖಾನೆ ತೆರಿಗೆ, ತರಕಾರಿ ಮಾರುಕಟ್ಟೆಯ ಲಿಲಾವಿನಿಂದ ಬಂದ…
ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಸಭೆ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬ್ಯಾಂಕರ್ಸ್ಗಳಿಗೆ ಜಿ.ಪಂ. ಸಿಇಓ ರಿಷಿ ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಹಕರು ಬ್ಯಾಂಕಿಗೆ ಕಾರ್ಯ ನಿಮಿತ್ತ ಆಗಮಿಸಿದ ಸಂದರ್ಭದಲ್ಲಿ ಅವರ ಕುಂದು ಕೊರತೆ ಆಲಿಸುವ ಮೂಲಕ ಅವರಿಗೆ ಸರಿಯಾಗಿ ಸ್ಪಂದನೆ ಮಾಡಬೇಕು. ಬ್ಯಾಂಕುಗಳಿಗೆ ಆಗಮಿಸುವ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಬೇಕು. ಸಕಾರಾತ್ಮಕ ಮನೋಭಾವದೊಂದಿಗೆ ಅವರ ಸಮಸ್ಯೆಗಳಿಗೆ ಕಿವಿಯಾಗಬೇಕು. ಆರ್.ಬಿ.ಐ ಮಾರ್ಗಸೂಚಿ ಪ್ರಕಾರ ಬ್ಯಾಂಕ್ ಯೋಜನೆಗಳ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸಬೇಕು ಮತ್ತು ಸೌಲಭ್ಯಗಳ ಕುರಿತು ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಹೇಳಿದರು ಅವರು, ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಗ್ರಣೀಯ (ಲೀಡ್) ಬ್ಯಾಂಕ್ ವತಿಯಿಂದ ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಸಭೆ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.ಸಾಲ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು…
ಬೆಳಗಾವಿಯಲ್ಲಿ ನಡೆದ ಅನುಭಾವ ಗೋಷ್ಠಿಯಲ್ಲಿ ಸಾಹಿತಿ ಪ್ರೋ.ಜಯಶ್ರೀ ಅಬ್ಬಿಗೇರಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಬೆಳಗಾವಿ: ‘12ನೇ ಶತಮಾನದ ಶರಣರ ವಚನಗಳು ಸಮಾಜಕ್ಕೆ ನೈತಿಕ ಶಿಕ್ಷಣ ನೀಡುತ್ತವೆ. ಮನದ ಕಲ್ಮಶವನ್ನು ನಿವಾರಿಸಿ ಜ್ಞಾನವನ್ನು ಹರಡುವಲ್ಲಿ ವಚನಗಳ ಕೊಡುಗೆ ಅನನ್ಯವಾಗಿದೆ’ ಎಂದು ಸಾಹಿತ್ಯ ಪ್ರೋ. ಜಯಶ್ರೀ ಅಬ್ಬಿಗೇರಿ ಹೇಳಿದರು.ಇಲ್ಲಿನ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಹಮ್ಮಿಕೊಂಡಿದ್ದ ಅಮಾವಾಸ್ಯೆ ಅನುಭಾವ ಗೋಷ್ಠಿಯಲ್ಲಿ ‘ವಚನಗಳಲ್ಲಿ ವ್ಯಕ್ತಿತ್ವ ವಿಕಸನ ಪರಿಕಲ್ಪನೆ’ ವಿಷಯ ಕುರಿತು ಅವರು ಮಾತನಾಡಿದರು.‘ಶರಣರ ವಚನಗಳಲ್ಲಿ ಜೀವನ ಮೌಲ್ಯ ಅಡಗಿದೆ. ಅತ್ಯಂತ ಸರಳವಾಗಿ ಬದುಕಿನ ಸೂತ್ರಗಳನ್ನು ಸೂತ್ರೀಕರಿಸಿದವರು ಶರಣರು. ಬಸವಣ್ಣನವರ “ಕಳಬೇಡ ಕೊಲಬೇಡ..” ಎಂಬ ವಚನವು ಮಾನವನ ಸುಂದರ ಬದುಕಿಗೆ ಬಹು ದೊಡ್ಡ ವ್ಯಾಖ್ಯಾನವಾಗಿದೆ. ನಮ್ಮ ಅಂತರಂಗ ಶುದ್ಧಿ, ಬಹಿರಂಗ ಶುದ್ಧಿಗೆ ಇನ್ನೇನು ಬೇಕು ಎಂದರು.ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ಮಹಾದೇವಿ ಪಾಟೀಲ ವಚನ ಪ್ರಾರ್ಥನೆ ಮಾಡಿದರು.…
ಸರ್ಕಾರಿ ಶಾಲೆಯಂಗಳಕ್ಕೆ ಹಸಿರುಹೊದಿಕೆ ತೊಡಿಸಿದ ಶಿಕ್ಷಕ | ಬೇಡರ ಬೂದಿಹಾಳ ಶಾಲೆಯ ಮುಖ್ಯಗುರು ಕಾರ್ಯಕ್ಕೆ ಗ್ರಾಮಸ್ಥರ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಶೇಷ ವರದಿ: ಕೃಷ್ಣಾ ಪೂಜಾರಿಬದಾಮಿ: ಸರ್ಕಾರಿ ಶಾಲೆಯೆಂದರೆ ಹೀಗಳೆಯುವವರೇ ಹೆಚ್ಚು ಜನ. ಹೀಗಿರುವಾಗ ಕೇವಲ ಎರಡೂವರೆ ವರ್ಷದ ಹಿಂದೆ ಬೇರೆ ಶಾಲೆಯಿಂದ ವರ್ಗಾವಣೆಗೊಂಡು ಬಂದ ಶಿಕ್ವಕರೊಬ್ಬರು ತಾವಿರುವ ಶಾಲೆಯ ಆವರಣವನ್ನು ಹಸಿರಿನಿಂದ ಕಂಗೊಳಿಸುವಂತೆ ಮಾಡಿ ಪರಿಸರ ಕಾಳಜಿ ಮೆರೆದು ಎಲ್ಲರೂ ತಲೆಎತ್ತಿ ನೋಡುವಂತೆ ಮಾಡಿದ್ದಾರೆ.ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಬೇಡರ ಬೂದೀಹಾಳ ಶಾಲೆಯ ಮುಖ್ಯ ಗುರು ವೈ.ಎನ್.ಅಮರಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುತ್ತಿರುವ ಶಿಕ್ಷಕರು.ಗ್ರಾಮದ ಎಲ್ಲ ಗುರು ಹಿರಿಯರ ಹಾಗೂ ಎಸ್.ಡಿ.ಎಮ್.ಸಿ ಯವರ ವಿಶ್ವಾಸ ಗಳಿಸಿ, ಸರಕಾರದಿಂದ ಬರುವ ಅನುದಾನವಲ್ಲದೇ ತಮ್ಮ ಸಹೋದ್ಯೋಗಿ ಶಿಕ್ಷಕರ ಸಹಾಯ ಪಡೆದು ತಮ್ಮ ಸ್ವಂತ ಹಣವನ್ನು ವಿನಿಯೋಗಿಸಿ ಇಡೀ ಶಾಲೆಯ ಆವರಣವನ್ನು ಒಂದು ಸುಂದರ ತೋಟವನ್ನಾಗಿಸಿ, ಹಸಿರು ಹೊದಿಕೆ ತೊಡಿಸುವಲ್ಲಿ ಸಫಲರಾಗಿದ್ದಾರೆ.ಶಾಲೆಯಲ್ಲಿ ಮಕ್ಕಳಿಗೆ ಕೇವಲ ಪಾಠ ಮಾಡಿದರೆ ಸಾಲದು, ಅವರಿಗೆ ಶಿಕ್ಷಣಕ್ಕೆ ಪೂರಕ ವಾತಾವರಣವನ್ನು…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ.ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರವಾಸ.. ಅದರಲ್ಲೂ ಧಾರ್ಮಿಕ ಪ್ರವಾಸ ಮನುಷ್ಯ ಜೀವನದ ಅತ್ಯುತ್ತಮಿಕೆಯನ್ನು ನಮಗೆ ಕೊಡಮಾಡುತ್ತದೆ. ಇತ್ತೀಚಿಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ಮಂದಿರದ ಗರ್ಭಗುಡಿಯಲ್ಲಿ ಪುಟ್ಟ ಬಾಲರಾಮನ ಮೂರ್ತಿಯನ್ನು ಸಾವಿರಾರು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಪ್ರತಿಷ್ಠಾಪಿಸಲಾಯಿತು. ಜಗತ್ತಿನಾದ್ಯಂತ ಈ ದೃಶ್ಯವನ್ನು ಲೈವ್ ನಲ್ಲಿ ನೋಡಿದ ಜನರು ಭಕ್ತಿ ಪರವಶರಾದರೆ, ಭಾರತೀಯರ ಪಾಲಿಗೆ ಇದು ಅವರ ಜೀವನದ ಮಹೋನ್ನತ ಘಳಿಗೆ. ಕಳೆದ ಐದು ಶತಮಾನಗಳಿಂದ ರಾಮನಿಲ್ಲದ ಅಯೋಧ್ಯೆಯಲ್ಲಿ ಅಖಂಡ ಪೂಜೆ ಜಪ ತಪ ಭಜನೆ ಪಾರಾಯಣಗಳು ನಡೆಯುತ್ತಿದ್ದರೂ ರಾಮ ಭಕ್ತರಿಗೆ ಮಂದಿರವಿಲ್ಲದೆ ಹೋಗಿದ್ದು ಅತೀವ ನೋವನ್ನು ಉಂಟು ಮಾಡಿತ್ತು. ಇದೀಗ ಆ ಎಲ್ಲ ನೋವಿಗೆ ಮುಕ್ತಿ ಹಾಡುವಂತೆ ಅಯೋಧ್ಯೆಯ ಭವ್ಯವಾದ ರಾಮ ಮಂದಿರ ನಿರ್ಮಾಣವಾಗಿದ್ದು ಪುಟ್ಟ ಬಾಲ ರಾಮನ ಮೂರ್ತಿಯ ಪ್ರತಿಷ್ಠಾಪನೆಯಾಗಿ ನಮ್ಮೆಲ್ಲರ ಭಕ್ತಿಯ ಶಕ್ತಿಯ ಪ್ರತೀಕವಾಗಿ ಮುದ್ದು ರಾಮ ನಗುತ್ತಾ ನಿಂತಿದ್ದಾನೆ. ಮುಂದಿನ ದಿನಮಾನಗಳಲ್ಲಿ ಅತಿ ಹೆಚ್ಚಿನ ವಾಣಿಜ್ಯೋದ್ಯಮವಾಗಿ ಧಾರ್ಮಿಕ ಪ್ರವಾಸ ತಾಣವಾಗಿ ಅಯೋಧ್ಯೆ…
