Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ. ಕೆ. ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಸತಿ ನಿಲಯಗಳು ಮಕ್ಕಳ ಭವಿಷ್ಯ ರೂಪಿಸುವ ಕಲಿಕಾ ಕೇಂದ್ರಗಳಾಗಿದ್ದು, ಈ ಕೇಂದ್ರಗಳಲ್ಲಿ ಮಕ್ಕಳ ಓದಿಗೆ ಪೂರಕವಾಗಿ ಅವರ ಉತ್ತಮ ವ್ಯಕ್ತಿತ್ವ ರೂಪಿಸಲು ಮನೆಯ ವಾತಾವರಣ ನಿರ್ಮಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಫರ್ಲ ಹೊಟೇಲ್ ಹಿಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ 2025-26ನೇ ಸಾಲಿನ ವಸತಿ ನಿಲಯ ವಾಸ್ತವ್ಯ ಹಾಗೂ ವಿವಿಧ ವಿನೂತನ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಹಾಗೂ ಕ್ರೀಡಾಕೂಟ- ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಈಗಾಗಲೇ ಜಿಲ್ಲಾಮಟ್ಟದ ಅಧಿಕಾರಿಗಳನ್ನುಹಾಸ್ಟೆಲ್ ಮೆಂಟರ್ ಗಳಾಗಿ ನೇಮಿಸಿ,ಬಿಡುವು ಮಾಡಿಕೊಂಡು ನಿಯೋಜಿಸಿದ ವಸತಿ ನಿಲಯಗಳಿಗೆ ಆಗಾಗ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: TMG ಸುನಿಧಿ ಫೌಂಡೇಶನ್ ಟ್ರಸ್ಟ್ ಮಣಿಪಾಲ, MPI ಪೇಮೆಂಟ್ ಮಣಿಪಾಲ , ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್, ಶ್ರೀ ಕಾಯಕ ರತ್ನ ಮಹಿಳಾ ಸೇವಾ ಸಂಸ್ಥೆ, ಜಮಖಂಡಿ, ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಬಾಗಲಕೋಟೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಲಕಿ ಕ್ರಾಸ್ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕಾದರೆ ಜೀವನೋಪಾಯ ಕೌಶಲ್ಯಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಸಿಗೆ ನೀರು ಹಾಕುವುದರ ಮೂಲಕ ಮುಖ್ಯ ವೈದ್ಯಾಧಿಕಾರಿ ಡಾ.ಮುಕುಂದ ಕಾಂಬಳೆ ಮಾಡಿದರು.ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಕಾಯಕರತ್ನ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಯಶೋಧಾ ಲಮಾಣಿಯವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಸುಧಾಕರ ಸಬಕಾಳೆ, ಗೋವಿಂದ ದಾಸರ, ಸೆಲ್ಕೊ ಸೋಲಾರ ಸಂಸ್ಥೆ ಬಾಗಲಕೋಟೆಯ ತರಬೇತಿ ಮುಖ್ಯ ವ್ಯವಸ್ಥಾಪಕ ಶಿವಕುಮಾರ ಕೆ. ಆನಂದ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಮ್ಮ ಜಮಖಂಡಿಯ ಅನೇಕ ಪ್ರತಿಭೆಗಳು ಇಂದು ರಾಜ್ಯಮಟ್ಟದಲ್ಲಿ ಉನ್ನತ ಹುದ್ದೆಯಲ್ಲಿ ವಿರಾಜಮಾನರಾಗಿದ್ದಾರೆ, ಕ್ರಮಬದ್ಧವಾದ ಅಭ್ಯಾಸದಿಂದ ಇದು ಸಾಧ್ಯವಾಗಿದೆ ವಿದ್ಯಾರ್ಥಿಗಳಾದ ನೀವು ಕ್ರಮಬದ್ಧವಾದ ಅಧ್ಯಯನದಿಂದ ನೂರಕ್ಕೆ ನೂರು ಅಂಕ ಪಡೆಯಬಹುದು ಎಂದು ಜಮಖಂಡಿ ಶಾಸಕ ನಾಡೋಜ ಜಗದೀಶ ಗುಡಗುಂಟಿ ಅಭಿಪ್ರಾಯಪಟ್ಟರು.ಅವರು ತಾಲೂಕಿನ ಕುಂಬಾರಹಳ್ಳದ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯ ವಾರ್ಷಿಕ ಸ್ನೇಹಸಮ್ಮೇಳನ, ಪಾಲಕ ಪೋಷಕರ ಸಭೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟಕರಾಗಿ ಮಾತನಾಡುತ್ತಾ, ಜ್ಞಾನವು ಮಾನವನಿಗೆ ಹಿರಿದಾದ ಬಲವನ್ನು ನೀಡುತ್ತದೆ ಅದನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ, ಮಕ್ಕಳಾದ ನೀವು ಪಠ್ಯದ ಜೊತೆ ಇತರೆ ಪುಸ್ತಕಗಳನ್ನು ಓದಿ ಜ್ಞಾನಿಗಳಾಗಿ, ಗ್ರಂಥಗಳಲ್ಲಿ ಬರುವ ಜೀವನ ತತ್ವ, ಸತ್ವಗಳನ್ನು ಬಾಳಿನಲ್ಲಿ ಅಳವಡಿಸಿಕೊಳ್ಳಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.ಸಾನಿಧ್ಯ ವಹಿಸಿದ ಜಮಖಂಡಿಯ ಓಲೆ ಮಠದ ಶ್ರೀ ಆನಂದ ದೇವರು ಮಾತನಾಡಿ, ಇಂದು ಯುವಜನರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ, ಎಲ್ಲರಿಗೂ ತೊಟ್ಟಿಲ ಕಟ್ಟು, ಬಾಸಿಂಗ ಕಟ್ಟು, ಚಟ್ಟದ ಕಟ್ಟು ಸಾಮಾನ್ಯವಾಗಿದೆ , ನೀವು ಅದನ್ನು ಮೀರಿ ಜೀವನವನ್ನು…
೧೧ ಅಂಗನವಾಡಿ ಕೇಂದ್ರಗಳು ಸೇರಿ ಆಚರಿಸಿದ ಸಂಭ್ರಮದ ಬಾಲಮೇಳ | ಪ್ರತಿಭಾ ಪುರಸ್ಕಾರ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಮಗುವಿಗೆ ಜನ್ಮ ಕೊಟ್ಟ ಒಬ್ಬ ತಾಯಿಯ ಜವಾಬ್ದಾರಿ ಎಷ್ಟಿರುತ್ತದೆಯೋ ಅಷ್ಟೇ ಜವಾಬ್ದಾರಿಯನ್ನು ಅಂಗನವಾಡಿಯಲ್ಲಿ ಕಾರ್ಯ ನಿರ್ವಹಿಸುವ ಮಾತೆಯರು ಹೊಂದಿದ್ದು, ಮಗು ಹುಟ್ಟಿದ ಎರಡು ವರ್ಷಗಳ ನಂತರ ತಾಯಿಗಿಂತ ಹೆಚ್ಚಿನ ಲಾಲನೆ ಪಾಲನೆ ಆರೈಕೆಗಳ ಜವಾಬ್ದಾರಿಯನ್ನು ಹೊತ್ತು ಮಗುವಿನ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಪೀಸ್ ಇಂಟರ್ನ್ಯಾಷನಲ್ ಶಾಲೆಯ ಮುಖ್ಯಗುರುಗಳಾದ ಚಾಂದಪಾಶಾ ಹವಾಲ್ದಾರ ಹೇಳಿದರು.ಗ್ರಾಮದ ಸರಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯಪುರ, ಶಿಶು ಅಭಿವೃದ್ಧಿ ಯೋಜನೆ ಸಿಂದಗಿ ಹಾಗೂ ಅಜೀಂ ಪ್ರೇಮ್ಜಿ ಫೌಂಡೇಶನ್ ವಿಜಯಪುರ ಅವರ ಸಹಯೋಗದಲ್ಲಿ ಕಲಕೇರಿ ವಲಯ ಮಟ್ಟದ ಬಾಲಮೇಳ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗ್ರಾಪಂ ಸದಸ್ಯರಾದ ನಬಿಲಾಲ ನಾಯ್ಕೋಡಿ ಮತ್ತು ಸುಧಾಕರ ಅಡಕಿ ಅವರು ಮಾತನಾಡಿ ಪ್ರತಿಯೊಂದು ಮಗುವಿಗೆ ಆಟದೊಂದಿಗೆ ಪಾಠವನ್ನು ಕಲಿಸುತ್ತಾ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನೊಲವೆ..ಪ್ರೀತಿ ಪ್ರೇಮದ ವಿಷಯದಲ್ಲಿ ತಿರಸ್ಕರಿಸಲ್ಪಟ್ಟರೆ ಅದೆಂಥ ಭಯಂಕರ ನೋವು ಆಗುತ್ತದೆ ಅನ್ನೋದು ಅನುಭವಿಸಿದರಿಗೆ ಗೊತ್ತು. ಅದೊಂಥರ ಹಲ್ಲು ನೋವಿದ್ದ ಹಾಗೆ. ಎಂಥ ಹುಲಿಯಂಥ ಮನುಷ್ಯನನ್ನೂ ನರಮ್ ಮಾಡಿಬಿಡುತ್ತದೆ. ಈ ಸಾಲುಗಳು ನಿನ್ನ ಭಾವ ಪ್ರಪಂಚವನ್ನು ತಟ್ಟುತ್ತವೆ ಅಂದುಕೊಂಡಿದಿನಿ. ಇವು ಕೇವಲ ಪದಗಳಲ್ಲ. ನಿನಗಾಗಿ ಬರೆದ ಮೌನ ಮಿಲನದ ಮುದ್ದು ಮನವಿ ಪತ್ರ. ಪ್ರೀತಿಯ ಭಾವದಲ್ಲಿ ವಿರಹದ ಉರಿ ಸಣ್ಣಗೆ ಮನಸ್ಸನ್ನು ಸುಡುತ್ತಿದೆ. ಒಂದೇ ಒಂದು ಸಾರಿ ಎದೆಗವಚಿಕೊಂಡು ಸಾಲು ಸಾಲು ಮುತ್ತಿಕ್ಕಿದರೆ ಸಾಕು. ಹೃದಯದಲ್ಲಿ ನೀ ಮಾಡಿದ ಆಳವಾದ ಗಾಯ ಮಾಯ. ಹರಿಯುವ ನೀರಿನಂತೆ ಸುಡುವ ಬೆಂಕಿಯಂತೆ ಅರಳಿದ ಪ್ರೀತಿಯನ್ನು ಬಚ್ಚಿಡುವುದು ಅಸಾಧ್ಯ. ಪ್ರೀತಿಯಲ್ಲಿ ಸಾವು ಬಂದರೂ ಲೆಕ್ಕಕ್ಕಿಲ್ಲ. ಸಾವಿನ ಭಯವೂ ನನಗಿಲ್ಲ.ಭಯದ ನೆರಳಲ್ಲಿ ಬದುಕುವುದು ಒಂದು ಬದುಕೇ? ಪ್ರೀತಿಯಿಲ್ಲದ ಜೀವನ, ಜೀವನವೂ ಅಲ್ಲ. ನೀನು ಒಲಿದಾಗ ಇಷ್ಟಿಷ್ಟೇ ಬದಲಾಗಿದ್ದೆ. ತಡೆ ಹಿಡಿದ ಮನದ ಎಲ್ಲ ಬಯಕೆಗಳನು ಮೆರವಣಿಗೆಗೆ ಸಜ್ಜುಗೊಳಿಸಿದ್ದೆ. ನಾನು…
ಲೇಖನ- ಅವಿನಾಶ ಸೆರೆಮನಉಪನ್ಯಾಸಕರುಬೈಲಹೊಂಗಲಬೆಳಗಾವಿ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಕಷ್ಟಗಳ ಬೆಂಕಿಯಲ್ಲಿ ಬೆಂದು ಕಣ್ಣೀರಿನ ನದಿಯಲಿ ಮಿಂದು ಎಂದಿಗೂ ನೋವು ತೋರಿಸೊಕೊಳ್ಳದೆ ಒಳಗೊಳಗೆ ನುಂಗಿಮನೆತನದ ಪ್ರತಿ ಸದಸ್ಯರ ಕೊಂಕು, ಪ್ರೀತಿ, ಕೋಪ ರೋಷಭರಿತ ಮಾತುಗಳನ್ನು ಸಹಿಸಿ ತಾನು ಉಪವಾಸವಿದ್ದರೂ ಚಿಂತೆಯಿಲ್ಲ ಮನೆಮಂದಿ ಮಕ್ಕಳು ಚೆನ್ನಾಗಿರಲಿ ಎಂದು ಬಯಸುತ ಹಿಂದೆ ಮುಂದೆ ಸಾವಿರಾರು ಜನ ಏನೇ ಅಂದರೂ ಕುಗ್ಗದೆ ಸವಾಲಾಗಿ ಸ್ವೀಕರಿಸಿ ತನ್ನೆಲ್ಲ ಬಯಕೆಗಳನ್ನು ನೋವು ನಲಿವುಗಳನ್ನು ಬದಿಗೊತ್ತಿ ಮಕ್ಕಳ ಖುಷಿಯಲ್ಲೇ ತನ್ನ ಖುಷಿಯ ಕಾಣುತ. ಮಕ್ಕಳ ಬಟ್ಟೆ ಹರಿದರೆ ಹೊಸದನ್ನು ಕೊಡಿಸಿ ತಾನು ಮಾತ್ರಸೀರೆ ಹರಿದರೂ ದಾರದಿಂದ ಹೊಲೆದುಕೊಂಡು ಜೀವನ ಸಾಗಿಸುತ ಮನೆಯಲ್ಲಿ ಎಲ್ಲರಿಗೂ ಬಿಸಿ ಬಿಸಿಯಾದ ಅಡುಗೆ ಮಾಡಿ ತಾನು ಹಿಂದಿನ ದಿನ ಅಥವಾ ಇತರ ಉಳಿದ ಆಹಾರ ಸೇವಿಸುತ ಮನೆಯಲ್ಲಿ ಮನದಲ್ಲಿ ಎಷ್ಟೇ ಸಮಸ್ಯೆಗಳಿದ್ದರೂಮೌನವಾಗಿಯೇ ಪರಿಹಾರ ಕಂಡುಕೊಳ್ಳುತ ಎಲ್ಲವನ್ನು ತನ್ನವರಿಗಾಗಿ ತ್ಯಾಗ ಮಾಡುವ ಏಕೈಕ ಜೀವವೆಂದರೆ ಹೆಸರಿಡಲಾಗದ ಹೆಸರಿಗೂ ನಿಲುಕದ ಉಸಿರಿಗೂ ಜೀವ ತುಂಬುವ ದೇವರ ಸ್ವರೂಪಿ ಕರುಣಾಮಯಿ ಮಹಿಳೆ.ಇಂದಿನ…
ಲೇಖನ- ಪ್ರಶಾಂತ ಕುಲಕರ್ಣಿ ಉಪನ್ಯಾಸಕರುಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯಸಿಂದಗಿಮೊ: 9845442237 ಉದಯರಶ್ಮಿ ದಿನಪತ್ರಿಕೆ ಮಾನವ ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕುಟುಂಬ, ಸಮಾಜ, ಸಂಸ್ಕೃತಿ ಹಾಗೂ ನಾಗರಿಕತೆಯ ಬೆಳವಣಿಗೆಯಲ್ಲಿ ಮಹಿಳೆಯರು ತಮ್ಮ ಶ್ರಮ, ಪ್ರೀತಿ, ಸಹನೆ ಮತ್ತು ಜ್ಞಾನದಿಂದ ಅಪಾರ ಕೊಡುಗೆ ನೀಡಿದ್ದಾರೆ. ಮಹಿಳೆ ಕೇವಲ ಕುಟುಂಬದ ನಿರ್ವಹಣೆಯಲ್ಲಿ ಮಾತ್ರವಲ್ಲದೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿರುವ ಶಕ್ತಿಯಾಗಿದೆ. ಆದಾಗ್ಯೂ ಇತಿಹಾಸದ ಹಲವು ಘಟ್ಟಗಳಲ್ಲಿ ಮಹಿಳೆಯರು ಸಮಾನ ಹಕ್ಕುಗಳಿಂದ ವಂಚಿತರಾಗಿದ್ದು ಅನೇಕ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಅಡೆತಡೆಗಳನ್ನು ಎದುರಿಸಿದ್ದಾರೆ. ಈ ಅಸಮಾನತೆಗಳ ವಿರುದ್ಧ ನಡೆದ ಹೋರಾಟದ ಸಂಕೇತವಾಗಿ ಪ್ರತಿ ವರ್ಷ ಮಾರ್ಚ್ 8 ರಂದು “ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ” ಆಚರಿಸಲಾಗುತ್ತದೆ.ಈ ದಿನವು ಮಹಿಳೆಯರ ಸಾಧನೆಗಳನ್ನು ಸ್ಮರಿಸುವುದಕ್ಕೂ, ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದಕ್ಕೂ ಮತ್ತು ಸಮಾನತೆಗಾಗಿ ಸಮಾಜವನ್ನು ಪ್ರೇರೇಪಿಸುವುದಕ್ಕೂ ಮಹತ್ವದ ದಿನವಾಗಿದೆ. ಮಹಿಳೆಯರ ಶಕ್ತಿ, ಸಹನೆ ಮತ್ತು ಸಾಧನೆಗಳನ್ನು ಗೌರವಿಸುವ ಈ ದಿನವು ಕೇವಲ ಆಚರಣೆಯ…
ಬಜೆಟ್ನಲ್ಲಿ ‘ಜೀವ ವಿಮೆ’ ಭದ್ರತೆ ಮಿಸ್: ರಾಷ್ಟ್ರೀಯ ಮೀನುಗಾರರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಗೌತಮ್ ಚೌಧರಿ ಬೇಸರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ನಲ್ಲಿ ಘೋಷಿಸಿರುವ ಯೋಜನೆಗಳನ್ನು ‘ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತಿಸುತ್ತದೆ. ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಎಕ್ಸಲೆನ್ಸ್’ ಸ್ಥಾಪನೆ, ಹಾಗೂ ಹೊಸ ‘ಮತ್ಸ್ಯದರ್ಶಿನಿ’ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ ಸರ್ಕಾರದ ಕ್ರಮ ಶ್ಲಾಘನೀಯ. ಈ ಯೋಜನೆಗಳು ಮೀನುಗಾರಿಕೆ ಮಾರುಕಟ್ಟೆ ವಿಸ್ತರಣೆಗೆ ವರದಾನವಾಗಲಿವೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ಅವರು ತಿಳಿಸಿದ್ದಾರೆ.ಆದರೆ, ಕಡಲಿಗೆ ಇಳಿಯುವ ಮೀನುಗಾರರ ಬದುಕಿನ ಅತ್ಯಂತ ಸೂಕ್ಷ್ಮ ಹಾಗೂ ಜರೂರತ್ತಿನ ಬೇಡಿಕೆಗಳನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ಮೀನುಗಾರರ ಕಲ್ಯಾಣ ಎಂದರೆ ಕೇವಲ ಮಾರುಕಟ್ಟೆ ನಿರ್ಮಾಣವಲ್ಲ. ಪ್ರತಿದಿನ ಪ್ರಾಣದ ಹಂಗು ತೊರೆದು ಸಮುದ್ರಕ್ಕಿಳಿಯುವ ಮೀನುಗಾರನಿಗೆ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ತೆಲಗಿ ಬಳಿ ರೈಲ್ವೆ ಅಂಡರ್ ಪಾಸ್ ಹತ್ತಿರ ಹಾಕಿದ ಎತ್ತರ ನಿಯಂತ್ರಣ ಕಂಬ (ಓವರ್ ಹೈಟ್ ಗೇಜ್) ಗುರುವಾರ ಮುರಿದು ಬಿದ್ದ ಪರಿಣಾಮ ಭಾರಿ ಅನಾಹುತ ತಪ್ಪಿದೆ.ರೈಲ್ವೇ ಅಂಡರ್ ಪಾಸ್ ಮೂಲಕ ಹಾದು ಹೋಗುವ ಎತ್ತರದ ಭಾರಿ ವಾಹನಗಳಿಗೆ ರೈಲ್ವೆ ಇಲಾಖೆಯವರು ಎತ್ತರದ ಮೀತಿಯನ್ನು ಸೂಚಿಸುವ ಓವರ್ ಹೈಟ್ ಗೇಜ್ ಗೆ ಅಡ್ಡಲಾಗಿ ಹಾಕಿದ ಭಾರಿ ತೂಕದ ಕಬ್ಬಿಣದ ಕಂಬವೊಂದು ಏಕಾಏಕಿ ಮುರಿದು ಬಿದ್ದಿದೆ. ಇದರಿಂದ ಎರಡು ಗಂಟೆ ಟ್ರಾಪಿಕ್ ಜಾಮ್ ಸಂಭವಿಸಿ ಪ್ರಯಾಣಿಕರು ಬಹಳಷ್ಟು ತೊಂದರೆ ಅನುಭವಿಸಿದ ಪ್ರಸಂಗ ಜರುಗಿದೆ. ಕೊಲ್ಹಾರ ಕಡೆಯಿಂದ ಬಸವನಬಾಗೇವಾಡಿ ಕಡೆಗೆ ಹೋಗುವ ಮಾರ್ಗದಲ್ಲಿ ತೆಲಗಿ ರೈಲ್ವೆ ಅಂಡರ ಪಾಸ್ ಬಳಿ ಕುಲಕರ್ಣಿಯವರ ಮನೆಯ ಹತ್ತಿರ ಈ ಘಟನೆ ಸಂಭವಿಸಿದೆ. ಈ ವೇಳೆ ಯಾವ ವಾಹನಗಳು ಸಂಚರಿಸದ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಭಾರಿ ಅನಾಹುತ ಒಂದು ತಪ್ಪಿದೆ. ಈ ದೃಶ್ಯ ಕಂಡ ವಾಹನ ಚಾಲಕರು ಹಾಗೂ ಪ್ರಯಾಣಿಕರು ಒಂದು ಕ್ಷಣ ಗಾಬರಿಯಾಗಿದ್ದಾರೆ.…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಸರ್ವ ಜನಾಂಗದ ಶ್ರೇಯೋಭಿವೃದ್ದಿಗೆ ಪೂರಕವಾಗಿರುವ ಡಬಲ್ ಗ್ಯಾರಂಟಿ ಬಜೆಟ್ ಇದಾಗಿದೆ ಎಂದು ಆಲಮೇಲ ಬ್ಲಾಕ್ ಕಾಂಗ್ರೆಸ್ ಡಾಕ್ಟರ್ಸ್ ಸೆಲ್ ಅಧ್ಯಕ್ಷ ಡಾ ಸಮೀರ ಹಾದಿಮನಿ ಅಭಿಪ್ರಾಯ ಪಟ್ಟರು.ಶುಕ್ರವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡಣೆಯ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಶಿಕ್ಷಣ, ಆರೋಗ್ಯ, ನೀರಾವರಿ, ಕೃಷಿ, ಸೇರಿದಂತೆ ಸರ್ವ ಇಲಾಖೆಗಳ ಅಭಿವೃದ್ಧಿಗೆ ಗ್ಯಾರಂಟಿ ನೀಡಿದ ಬಜೆಟ್ ಇದಾಗಿದೆ ಎಂದು ಹೇಳಿದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17817 ಕೋಟಿ ರೂಪಾಯಿ ಮೀಸಲು. ಕಲಬುರಗಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐವಿಎಫ್ ಕೇಂದ್ರ, ಇಲಾಖೆಯ ಖಾಲಿ ಹುದ್ದೆಗಳ ಭರ್ತಿ.ಮನ್ರೇಗಾದ ಹೆಸರು ಕೇಂದ್ರ ಸರ್ಕಾರ ಬದಲಿಸಿದ್ದಕ್ಕೆ ರಾಜ್ಯದ ಎಲ್ಲ ಗ್ರಾಮಪಂಚಾಯತ ಗಳಿಗೆ ಮಹಾತ್ಮಾಗಾಂಧಿ ಗ್ರಾಮ ಪಂಚಾಯತಿ ಎಂದು ನಾಮಕರಣ ಮಾಡಿ ಮಹಾತ್ಮರಿಗೆ ಸಿದ್ಧರಾಮಯ್ಯನವರು ಗೌರವಸಲ್ಲಿಸಿದ್ದಾರೆ.16 ವರ್ಷದ ಕೆಳಗಿನ ಮಕ್ಕಳಿಗೆ ಮೊಬೈಲ್/ ಸಾಮಾಜಿಕ ಜಾಲತಾಣಗಳ ನಿಷೇಧ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯ ಮಹತ್ವದ ಅರಿವಿಗೆ, ನಾಯಕತ್ವ ಗುಣ ಬೆಳೆಸಿಕೊಳ್ಳಲು ಕಾಲೇಜುಗಳಲ್ಲಿ…
