Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಿಮಾ ಯೋಜನೆಗಳ ಕುರಿತ ಪ್ರಗತಿ ಪರಿಶೀಲನೆ ಹಾಗೂ ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಬಿಮಾ ಸುರಕ್ಷಾ ಯೋಜನೆ ಹಾಗೂ ಪ್ರಧಾನಮಂತ್ರಿ ಜೀವನಜ್ಯೋತಿ ಬಿಮಾ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಸಿ ನಿಗದಿತ ಗುರಿ ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪ್ರಧಾನಮಂತ್ರಿ ಸುರಕ್ಷಾ, ಪ್ರಧಾನಮಂತ್ರಿ ಜೀವನಜ್ಯೊತಿ ಸೇರಿದಂತೆ ವಿವಿಧ ಬಿಮಾ ಯೋಜನೆಗಳ ಕುರಿತ ಪ್ರಗತಿ ಪರಿಶೀಲನೆ ಹಾಗೂ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕೇಂದ್ರ ಸರ್ಕಾರದ ಬಿಮಾ ಯೋಜನೆಗಳು ಯಾವುದೇ ನಿಗದಿತ ವರ್ಗಗಳಿಗೆ ಮೀಸಲಾಗದೇ, ಸರ್ಕಾರಿ ನೌಕರರು ಸೇರಿದಂತೆ ಎಲ್ಲ ವರ್ಗದ ಜನರನ್ನು ಈ ಯೋಜನೆಯಡಿ ನೊಂದಣಿಗೆ ಅವಕಾಶವಿದ್ದು, ಜಿಲ್ಲೆಗೆ ಬಿಮಾ ಯೋಜನೆಯಡಿ ೧೦.೨೫ ಲಕ್ಷ ಗುರಿ ಎದುರು, ೨.೭೫ ಲಕ್ಷ ನೊಂದಣಿ ಮಾಡಿಸಲಾಗಿದೆ. ಎಲ್ಲ ಇಲಾಖೆ ಜಿಲ್ಲಾ ಮಟ್ಟದ, ತಾಲೂಕಾ ಮಟ್ಟದ ಅಧಿಕಾರಿ, ಸಿಬ್ಬಂದಿಗಳ ನೊಂದಣಿ ಮಾಡಿಸಿ ನಿಗದಿತ ಗುರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಲೆಮಾರಿ-ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಅರ್ಹ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ಗಳಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೩೧-೧೦-೨೦೨೪ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ – ಶಿವಕುಮಾರ್ ಉಪ್ಪಿನ(ಆಲಮೇಲ) ಈ ದಂಪತಿಗೆ ಬಸವಾದಿ ಶರಣರೆಂದರೆ ಪ್ರಾಣ. ಮಂಡ್ಯದಂತಹ ಒಕ್ಕಲಿಗರ ಬಿರು ನೆಲದಲ್ಲಿ ಬಸಣ್ಣನವರು ಬೆಳಗಿದ ಜ್ಯೋತಿಯನ್ನು ಹಚ್ಚಿ ಅದು ಆರದಂತೆ ತಮ್ಮ ಕೈಗಳನ್ನು ಗಟ್ಟಿಯಾಗಿ ಅಡ್ಡ ಹಿಡಿದ ಅಪರೂಪದ ಜೋಡಿ ಎಂ. ಶಿವಕುಮಾರ್ ಹಾಗೂ ಅಪರ್ಣಾ ಅವರು.ಶಿವಕುಮಾರ್ ಮೂಲತಃ ಪತ್ರಕರ್ತರು. ಕಳೆದ ಎರಡು ದಶಕಗಳಿಂದ ವೃತ್ತಿ ಪತ್ರಿಕೋದ್ಯಮದಲ್ಲಿದ್ದು, ಒಂದೂವರೆ ದಶಕಗಳ ಹಿಂದೆ ಕಾಯಕಯೋಗಿ ಪ್ರಾತಿಷ್ಠಾನವನ್ನು ಆರಂಭಿಸಿ ಅನೇಕ ಸಮಾಜಮುಖಿ ಕೆಲಸಗಳಿಂದ ಪರಿಚಿತರಾಗಿದ್ದಾರೆ. ಮಂಡ್ಯ ನಗರದ ಮೈಸೂರು-ಬೆಂಗಳೂರು ಹೆದ್ದಾರಿ ಪಕ್ಕವೇ ಒಂದು ದೊಡ್ಡ ಉದ್ಯಾನವನ್ನು ನಗರಸಭೆಯಿಂದ ದತ್ತು ಪಡೆದು ಅದಕ್ಕೆ ತುಮಕೂರಿನ ಜ್ಞಾನ ದಾಸೋಹಿ, ಶಾತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಯ ಹೆಸರನ್ನಿಟ್ಟು, ಅಚ್ಚಕುಟ್ಟಾಗಿ ನಿರ್ವಹಿಸುತ್ತಿದ್ದಾರೆ. ಹಿರಿಯ ಶ್ರೀಗಳಿದ್ದಾಗಿನಿಂದ ತುಮಕೂರು ಮಠಕ್ಕೆ ನೆಚ್ಚಿನ ಶಿಷ್ಯರಾಗಿದ್ದಾರೆ. ಹಾಗೆಯೇ ಎಲ್ಲೆಡೆ ಗಿಡಗಳನ್ನು ಸಹ ಹಚ್ಚಿ ಪರಿಸರ ಪ್ರೇಮ ಮೆರೆಯುತ್ತಿದ್ದಾರೆ. ಇಂತಹ ಕೆಲಸಗಳ ಜೊತೆ ಬಸವಾದಿ ಶರಣರ ವಿಚಾರಗಳನ್ನು ಮಂಡ್ಯದ ಪರಿಸರದಲ್ಲಿ ತಮ್ಮ ಧರ್ಮಪತ್ನಿ ಅಪರ್ಣಾ ಅವರ ಜೊತೆ ಬಿತ್ತುತ್ತಿದ್ದಾರೆ. ಸತಿಪತಿಗಳೊಂದಾದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪೊಲೀಸ್ ವತಿಯಿಂದ ಅಕ್ಟೋಬರ್ ೨೧ ರಂದು ಬೆಳಿಗ್ಗೆ ೮ ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭಾಗವಹಿಸಲಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರನ್ನು ಸನ್ಮಾನಿಸಲಾಗುತ್ತಿದ್ದು, ಜಿಲ್ಲೆಯ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಕಲೆ, ಸಾಹಿತ್ಯ, ರಂಗಭೂಮಿ, ಸುಗಮ ಸಂಗೀತ, ಜನಪದ ಸಂಗೀತ, ಶಿಲ್ಪಕಲೆ, ನೃತ್ಯ, ಚಿತ್ರಕಲೆ, ಸಮಾಜ ಸೇವೆ, ಕೃಷಿ, ವೈದ್ಯಕೀಯ, ಪತ್ರಿಕೋದ್ಯಮ, ಸಂಕೀರ್ಣ, ಇತರೆ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ವಿವರಗಳನ್ನೊಳಗೊಂಡಂತೆ ಸ್ವ-ಪರಿಚಯ ಮತ್ತು ದಾಖಲೆಗಳೊಂದಿಗೆ ದಿನಾಂಕ : ೨೫-೧೦-೨೦೨೪ರಂದು ಸಂಜೆ ೫ ಗಂಟೆಯೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಗೆ ಸಲ್ಲಿಸಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೫೧೨೬೧ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿಜಯಪುರ ಜಿಲ್ಲೆ ಕಡಣಿಯ ಬೆರಗು ಪ್ರಕಾಶನ ಸಂಸ್ಥೆಯು ನೀಡುವ ರಾಜ್ಯಮಟ್ಟದ ಪ್ರೊ.ಎಚ್.ಟಿ.ಪೋತೆ ಹಸ್ತಪ್ರತಿ ಪ್ರಶಸ್ತಿಗೆ ಕಥಾ ವಿಭಾಗದಲಿ ಡಾ.ಲಕ್ಷ್ಮಣ ವಿ.ಎ ಅವರ ‘ಜಿರಿ ಮಳೆಯ ಕಣ್ಣು’ ಹಾಗೂ ಕಾವ್ಯಹಸ್ತಪ್ರತಿ ಬೆಂಗಳೂರಿನ ಭಾಗ್ಯವಸು ಅವರ ‘ರೆಪ್ಪೆಗಂಬದ ಮೇಲೆ ಕೂತ ಮರಿ ಹಕ್ಕಿ’ ಆಯ್ಕೆಯಾಗಿದೆ ಹಾಗೂ ದಿ.ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ೨೦೨೩ರ ಸಾಲಿನ ಪುಸ್ತಕ ಪ್ರಶಸ್ತಿಗೆ ದಾವಣಗೆರೆಯ ಮಲ್ಲಿಕಾರ್ಜುನ ಕಡಕೋಳ ಅವರ ಪರಿಮಳದ ಹಾದಿಯ ಪಯಣಿಗರು ಕೃತಿಯು ಆಯ್ಕೆಯಾಗಿದೆ ಎಂದು ಬೆರಗು ಪ್ರಕಾಶನದ ಪ್ರಕಾಶಕಿ ವಿಜಯಲಕ್ಷ್ಮಿ ಆರ್.ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಯುವಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಯುವ ಕಾವ್ಯ ಪುರಸ್ಕಾರ ನೀಡಲು ಇದೇ ವರ್ಷದಿಂದ ನಿರ್ಧರಿಸಿದ್ದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಪಿ. ನಂದಕುಮಾರ ಅವರ “ಹಂಗಿನ ಕಿರೀಟಕ್ಕೆ ಜೋತು ಬಿದ್ದ ನಾಲಿಗೆ’ಹಸ್ತಪ್ರತಿ ಆಯ್ಕೆಯಾಗಿದೆ.ಬೆರಗು ಪ್ರಕಾಶನವು ಕಳೆದ ಐದು ವರ್ಷಗಳಿಂದಲೂ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದು. ಪ್ರಸಕ್ತ ವರ್ಷದ ಪ್ರಶಸ್ತಿಗೆ ೧೫೭ ಪುಸ್ತಕಗಳು, ಹಾಗೂ ಹಸ್ತಪ್ರತಿ ಸ್ಪರ್ಧೆಗೆ ೭೪ ಹಸ್ತಪ್ರತಿಗಳು ನಾಡಿನ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವು ರೋಗಿಗಳ ಸೇವೆಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದು, ಇದನ್ನು ಬೇಗನೆ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುವುದು. ಡಯಾಲಿಸಿಸ್ ಕೇಂದ್ರವು ಬಡವರಿಗೆ ಅನುಕೂಲವಾಗಿದ್ದು, ೨೪ ಗಂಟೆಗಳ ಸೇವೆ ನೀಡಲಾಗುವುದು ಎಂದು ಶಾಸಕ ವಿಠ್ಠಲ ಕಟಕಧೊಂಡ ಹೇಳಿದರು.ಸಮುದಾಯ ಆರೋಗ್ಯ ಕೇಂದ್ರದಲ್ಲಿ ಫಂಗಸ್ ಚಿಕಿತ್ಸೆ ಹಾಗೂ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತ, ಪಟ್ಟಣಕ್ಕೆ ಹದಿನಾರುವರೆ ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧವು ನಿರ್ಮಾಣವಾಗುವುದು. ಈಗಾಗಲೇ ಎಂಟುವರೆ ಕೋಟಿ ಹಣ ಬಿಡುಗಡೆಯಾಗಿದ್ದು, ಬೇಗನೆ ಕಾಮಗಾರಿ ಪ್ರಾರಂಭಿಸಲಾಗುವುದು. ಪಟ್ಟಣದ ಮೂಲಭೂತ ಸೌಕರ್ಯದ ಅಭಿವೃದ್ಧಿಗೆ ಶ್ರಮಿಸುವೆನು. ವೈದ್ಯರು ರೋಗಿಗಳನ್ನು ದೇವರಂತೆ ಕಂಡು ಚಿಕಿತ್ಸೆ ನೀಡಬೇಕು ಎಂದರು.ಚಡಚಣ ಏತ ನೀರಾವರಿ ಯೋಜನೆ ಬೇಗನೆ ಪ್ರಾರಂಭಿಸಲಾಗಿ ೪ ತಿಂಗಳಲ್ಲಿ ನೀರು ಬರುವಂತೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸುವೆ. ಇಲ್ಲಿ ವೈದ್ಯರ ಕೊರತೆಯಿದ್ದು ತಜ್ಞ ವೈದ್ಯರನ್ನು ನೇಮಕ ಮಾಡಲಾಗುವುದು. ಸಿಬ್ಬಂದಿಯ ಕೊರತೆಯನ್ನು ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡುವೆನು. ಯಾವುದೇ ದೂರು ಬರದಂತೆ ಕಾರ್ಯ ನಿರ್ವಹಿಸಿರಿ ಎಂದು ಶಾಸಕ ಕಟಕಧೊಂಡ ಹೇಳಿದರು.ಪ್ರಾಸ್ತಾವಿಕವಾಗಿ…
ಉದಯರಶ್ಮಿ ದಿನಪತ್ರಿಕೆ ಕಾಡಿನಲ್ಲಿಒಂಟಿ ಬದುಕುಹೊಟ್ಟೆಗಾಗಿಬಣ್ಣ ಬದಲಿಸುತ್ತಿತ್ತುನಿರುಪದ್ರವ ಜೀವಿಊಸರವಳ್ಳಿಶ್ರೀಗಂಧ ಕಳ್ಳರುಕಾಡಿಗೆ ಬೆಂಕಿಗಣಿ ಲೂಟಿಮರಳು ದಂದೆಹುಲಿ ಚರ್ಮ ಆನೆ ಕೊಂಬಿನಭರ್ಜರಿ ಮಾರಾಟಕೆರೆ ಹಳ್ಳ ನದಿ ಅತಿಕ್ರಮಣಲೋಕಾಯುಕ್ತದಿಂದಎಸ ಆಯ್ ಟಿ ಯಿಂದಕ್ಲೀನ್ ಚಿಟ್ ಪ್ರಾಮಾಣಿಕರುಚುನಾವಣಾ ಬಂದಾಗಶ್ವೇತ ಶುಭ್ರ ಖಾದಿ ಜುಬ್ಬಬುದ್ಧ ಬಸವ ಗಾಂಧಿ ಹಬ್ಬಸಂವಿಧಾನ ಹೆಸರಲ್ಲಿಮಂತ್ರಿಯಾಗಿ ಪ್ರಮಾಣ ವಚನಬೇಸರಗೊಂಡಿತು ಊಸರವಳ್ಳಿಒಂದು ದಿನ ಬೆಳ್ಳಂಬೆಳಿಗ್ಗೆಮರಕ್ಕೆ ಹಗ್ಗ ಬಿಗಿದುಆತ್ಮಹತ್ಯೆ ಮಾಡಿಕೊಂಡಿತ್ತು .ಕೈಯಲ್ಲಿ ಏನೋ ಒಂದು ಚೀಟಿತೆಗೆದು ನೋಡಿದರೆದುಷ್ಟ ರಾಜಕಾರಣಿಗಳೇನಿಮ್ಮಷ್ಟು ನನಗೆ ಬರಲಿಲ್ಲಬಣ್ಣ ಬದಲಾಯಿಸಲುನನ್ನ ಸಾವಿಗೆ ನಾನೇ ಕಾರಣಓದಿದ ನಾವು ನಗಬೇಕೋಇಲ್ಲ ಅಳಬೇಕೊ ?ಗೊತ್ತಾಗಲೊಲ್ಲದು – ಡಾ.ಶಶಿಕಾಂತ ಪಟ್ಟಣರಾಮದುರ್ಗ
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಇಂದಿರಾನಗರದ ಶಿರೋಳ ರಸ್ತೆಯಲ್ಲಿರುವ ಕೊಳಚೆ ಮಂಡಳಿಯವರು ನೀಡಿದ್ದರು ಎನ್ನಲಾದ ಜಾಗೆಯಲ್ಲಿನ ಶಡ್ಗಳನ್ನು ಪುರಸಭೆಯವರು ಶುಕ್ರವಾರ ತೆರವುಗೊಳಿಸಿದರು.ಕಳೆದ ಕೆಲವು ದಿನಗಳ ಹಿಂದೆ ಇಲ್ಲಿರುವ ಶಡ್ಗಳನ್ನು ತೆರವುಗೊಳಿಸುವದಾಗಿ ಪುರಸಭೆಯವರು ತಿಳಿಸಿದ್ದರು. ಈ ಬಗ್ಗೆ ಕೆಲವರು ಕೊಳಚೆ ಮಂಡಳಿಯವರು ಮತ್ತು ಪುರಸಭೆಯವರು ಜಂಟಿಯಾಗಿ ಸರ್ವೇ ಮಾಡಿ ಈ ಜಾಗೆಯನ್ನು ನಮಗೆ ನೀಡಿದ್ದಾರೆ. ನಮಗೆ ಈ ಜಾಗೆಯಿಲ್ಲದೇ ವಾಸ್ತವಕ್ಕೆ ಬೇರೆ ಜಾಗೆಗಳಿಲ್ಲ. ದಯವಿಟ್ಟು ನಮ್ಮ ಮನೆಗಳನ್ನು ತೆವುಗೊಳಿಸಬೇಡಿ ಎಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದರು. ಇದಾದ ಬಳಿಕ ಪುರಸಭೆ ಸಾಮಾನ್ಯ ಸಭೆಯಲ್ಲಿ ಕೊಳಚೆ ಮಂಡಳಿ ನೀಡಿದ ಜಾಗೆ ಬೇರೆ ಈ ಷಡ್ ನಿರ್ಮಿಸಿದ ಜಾಗೆ ಬೇರೆ. ಇಲ್ಲಿ ಜಾಗೆ ಕೊಡಿಸುವದಾಗಿ ಸುಳ್ಳು ಹೇಳಿ ಬಡವರ ಬಳಿ ಮತ್ತು ನಮ್ಮೂರಿನವರಲ್ಲದವರ ಬಳಿ ಕೆಲವರು ದುಡ್ಡು ಪಡೆದು ಮೋಸ ಮಾಡಿದ್ದಾರೆ ಎಂದು ಪುರಸಭೆ ಸದಸ್ಯ ಹಣಮಂತ ಭೋವಿ ಆರೋಪಿಸಿದ್ದರು. ಸಭೆಯಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚೆಯಾಗಿ ಮತ್ತೊಮ್ಮೆ ಸರ್ವೇ ಮಾಡಿ ಅನಧಿಕೃತವಾಗಿದ್ದರೆ ಶಡ್ಗಳನ್ನು ತೆರವುಗೊಳಿಸಬೇಕೆಂದು ಶಾಸಕ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರರ ಹೆಸರನ್ನು ನಾಮಕರಣ ಮಾಡುವುದರ ಜೊತೆಗೆ ನಡೆದಾಡುವ ದೇವರು ಸಿದ್ದೇಶ್ವರ ಅಪ್ಪನವರ ಹೆಸರನ್ನು ವಿಜಯಪುರ ರೇಲ್ವೆ ನಿಲ್ದಾಣಕ್ಕೆ ಮರು ನಾಮಕರಣ ಮಾಡಬೇಕು ಎಂದು ಜಿಲ್ಲಾ ಜೈಕರ್ನಾಟಕ ಸಂಘಟನೆ ಅಧ್ಯಕ್ಷ ಸಂಗಮೇಶ ದಾಶ್ಯಾಳಗೌಡ, ಹೋರಾಟ ಸಮಿತಿ ಅಧ್ಯಕ್ಷ ಸಿದ್ದರಾಜ ಹೊಳಿ ಆಗ್ರಹಿಸಿದರು.ಶನಿವಾರ ನಗರದ ಖಾಸಗಿ ಹೋಟೇಲನಲ್ಲಿ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡುತ್ತ, ಈ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಸಂಸದ ರಮೇಶ ಜಿಗಜಿಣಗಿ ಅವರು ಪ್ರಧಾನ ಮಂತ್ರಿ ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ನಮ್ಮ ಜಿಲ್ಲೆಯ ಜನರ ಭಾವನೆಗಳೊಂದಿಗೆ ಸ್ಪಂದಿಸಬೇಕು ಎಂದರು.ಜೊತೆಗೆ ವಿಜಯಪುರದ ಮಹಾತ್ಮಾ ಗಾಂಧಿ ವೃತ್ತವನ್ನು ನವೀಕರಣಗೊಳಿಸಿ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಲ್ಲಿ ನಗರಕ್ಕೆ ಸೌಂದರ್ಯ ಬರುವದರ ಜೊತೆಗೆ ರಾಷ್ಟ್ರಪಿತರಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಹಾಗೂ ನಗರ ಕಿತ್ತೂರ ಚೆನ್ನಮ್ಮ ರಂಗಮಂದಿರವನ್ನು ಮಹಾನಗರ ಪಾಲಿಕೆ ಸುಪರ್ಧಿಗೆ ಪಡೆದು ನವೀಕರಣಗೊಳಿಸಿ ರಂಗಭೂಮಿ ಕಲಾವಿದರಿಗೆ ದಿನನಿತ್ಯ ನಾಟಕ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು. ಜಿಲ್ಲೆಯ ಉಸ್ತುವಾರಿ ಸಚಿವ…
