Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ಮತಕ್ಷೇತ್ರದಲ್ಲಿ ನೀರಾವರಿ ಜೊತೆಗೆ ಮೂಲಭೂತ ಸೌಕರ್ಯ, ಶಿಕ್ಷಣ, ಗುಣಮಟ್ಟದ ವಿದ್ಯುತ್ ಪೂರೈಕೆ, ಕೈಗಾರಿಕೆಗೆ ಉತ್ತೇಜನಕ್ಕೆ ಒತ್ತು ನೀಡಲಾಗಿದೆ ಎಂದು ವಿಧಾನಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶನಿವಾರ ಹೊನವಾಡ ಗ್ರಾಮದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಅವರು, ನಂತರ ತಿಕೋಟಾ ಪಟ್ಟಣ ಪಂಚಾಯಿತಿ ಕಾರ್ಯಾಲಯದ ಬಳಿ ನಡೆದ ಕಾರ್ಯಕ್ರಮದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ತಲಾ ರೂ. 50 ಲಕ್ಷ ವೆಚ್ಚದಲ್ಲಿ ಪಟ್ಟಣದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಮತ್ತು ಗೈರಾಣ ಕಾಲನಿಯ ಅಲ್ಪಸಂಖ್ಯಾತರ ಪ್ರದೇಶದಲ್ಲಿ ಸಿಸಿ ರಸ್ತೆ ಕಾಮಗಾರಿ ಹಾಗೂ ಪ. ಪಂ. ವತಿಯಿಂದ ರೂ 112.23 ಲಕ್ಷ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.ತಿಕೋಟಾದಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ವಾರ್ಡವಾರು ಬೇಡಿಕೆಗಳನ್ನು ಕ್ರೂಢಿಕರಿಸಿ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ವರದಿ ನೀಡಬೇಕು ಎಂದು ಪ.ಪಂ ಅಧಿಕಾರಿಗಳಿಗೆ ಸೂಚನೆ…
ವಿಜಯಪುರದ ಅರ್ಕಾಟ್ ದರ್ಗಾದಲ್ಲಿ ಉದ್ಯೋಗ ಮೇಳದ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉದ್ಯೋಗ ಒದಗಿಸುವ ವೇದಿಕೆಯಾಗುವುದು ಒಂದು ಪುಣ್ಯದ ಕಾರ್ಯ ಎಂದು ಸಮಾಜ ಸೇವಕ ಅಬ್ದುಲ್ ರಜಾಕ್ ಹೊರ್ತಿ ಹೇಳಿದರು.ವಿಜಯಪುರದ ಐತಿಹಾಸಿಕ ಹಜರತ್ ಸುಲ್ತಾನ ಸೈಯ್ಯದ್ ಷಹಾ ಅಬ್ದುಲ್ ರೆಹಮಾನ್ ಖಾದ್ರಿ ದರ್ಗಾದ ಆವರಣದಲ್ಲಿ ನಡೆದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯೋಗ ಒದಗಿಸಿದರೆ ಉದ್ಯೋಗ ಪಡೆದ ಕುಟುಂಬವೇ ಉದ್ಧಾರವಾಗುತ್ತದೆ, ಹೀಗಾಗಿ ಉದ್ಯೋಗ ಒದಗಿಸುವ ಉದ್ದೇಶದಿಂದ ಈ ಉದ್ಯೋಗ ಮೇಳ ಆಯೋಜಿಸಿರುವುದು ಸಂತೋಷ ತಂದಿದೆ ಎಂದರು.ಐತಿಹಾಸಿಕ ಅರ್ಕಾಟ್ ದರ್ಗಾ ಆಧ್ಯಾತ್ಮಿಕತೆ ಹಾಗೂ ಭಾವೈಕ್ಯತೆ ಸಂಗಮ. ದರ್ಗಾ ಉರುಸು ಅಂಗವಾಗಿ ಉದ್ಯೋಗ ಮೇಳ ಆಯೋಜಿಸಿರುವುದು ಅರ್ಥಪೂರ್ಣ ಎಂದರು.ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರ ವಾಸುದೇವ ಹೆರಕಲ್ಲ ಮಾತನಾಡಿ, ಅರ್ಕಾಟ್ ದರ್ಗಾ ದವಾ ಹಾಗೂ ದುವಾ ಹೆಸರುವಾಸಿ. ಉದ್ಯೋಗದಾತರು ಉದ್ಯೋಗಿಯ ಸ್ವಭಾವ, ಹಾವಭಾವ ಎಲ್ಲವನ್ನೂ ವೀಕ್ಷಿಸುತ್ತಾರೆ, ಹೀಗಾಗಿ ಶ್ರೇಷ್ಠವ್ಯಕ್ತಿತ್ವ, ಕೌಶಲ್ಯ ರೂಪಿಸಿಕೊಂಡು ಮುನ್ನಡೆಯಬೇಕು ಎಂದರು.ಸನ್ಮಾನ ಸ್ವೀಕರಿಸಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ…
ಅತಿ ವಿರಳ “ಅಪ್ಲ್ಯಾಸ್ಟಿಕ್” ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲಕ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ “ಅಪ್ಲ್ಯಾಸ್ಟಿಕ್” ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದೆ.ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ.ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲಕ 16 ವರ್ಷದ ಮೈಕೆಲ್ ಎಂಬ ಬಾಲಕನು ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು, ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ…
ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಉದ್ಘಾಟಿಸಿದ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಹೆಣ್ಣು ಮಕ್ಕಳನ್ನು ಕಾಪಾಡುವ ಹಾಗೂ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ವಿಶೇಷ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಎಲ್ಲ ಕಾನೂನುಗಳ ಬಗ್ಗೆ ದೇಶದ ಪ್ರತಿಯೊಬ್ಬ ಹೆಣ್ಣು ಮಗು ತಿಳಿದುಕೊಂಡಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುವ ಶೋಷಣೆ ಅಂತ್ಯವಾಗಲಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ಇತರೆ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಿಂದಿನ ಕಾಲದಲ್ಲಿ ಬಾಲ್ಯ ವಿವಾಹ ಪದ್ಧತಿ, ವರದಕ್ಷಿಣೆ ಪಿಡುಗು, ಸತಿ ಸಹಗಮನ ಪದ್ಧತಿಯಂತಹ ಅನೇಕ ಪಿಡುಗುಗಳು ಮಹಾಮಾರಿಯಾಗಿ ಸಮಾಜದ ವ್ಯವಸ್ಥೆಯನ್ನು ಹಾಳು ಮಾಡಿದ್ದವು. ಇದರಿಂದ ಹೊರಬರಲು…
ಉದಯರಶ್ಮಿ ದಿನಪತ್ರಿಕೆ ಇಂಡಿ: ಸತ್ಸಂಗದಿಂದ ಜೀವನ ಪಾವನವಾಗುತ್ತದೆ ಎಂದು ಬ.ಬಾಗೇವಾಡಿ ತಾಲೂಕಿನ ಇಂಗಳೇಶ್ವರದ ಪ್ರವಚನಕಾರ ಜಕ್ಕಣ್ಣ ಶಾಸ್ತ್ರಿಗಳು ಹೇಳಿದರು.ಗುರುವಾರ ತಾಲೂಕಿನ ಹಿರೇಬೇವನೂರ ಗ್ರಾಮದ ಶ್ರೀ ಶಿವಸಿದ್ದ ಭೀರಲಿಂಗೇಶ್ವರ ದೊಡ್ಡಬ್ಬದ ನಿಮಿತ್ಯ ಭೀರಲಿಂಗೇಶ್ವರ ಮಹಾಪುರಾಣ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು.ಸತ್ಸಂಗಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸು ಶಾಂತವಾಗುತ್ತದೆ, ಭಕ್ತಿ ಮಾರ್ಗಗಳನ್ನು ಕಲಿಸಿಕೊಡುತ್ತದೆ ಎಂದ ಅವರು, ಹಿರೇಬೇವನೂರ ಗ್ರಾಮದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಆದರೆ ಈ ರೀತಿಯ ಭೀರಲಿಂಗೇಶ್ವರ ಮಹಾಪುರಾಣ, ಭೀರದೇವರ ಜೀವನ ಚರಿತ್ರೆ, ಹಾಲುಮತದ ಮೂಲ ಬೆಳವಣಿಗೆ ಅವರು ಮಾಡಿದ ಪವಾಡಗಳನ್ನು ಸುಮಾರು ೧೦ ದಿನಗಳ ಕಾಲ ಮಹಾಪುರಾಣವನ್ನು ನಿರ್ಮಲ ಮನಸ್ಸಿನಿಂದ ತಾವುಗಳು ಕೇಳಿ ಪುನೀತರಾಗಿ ಎಂದರು.ನಿವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡ, ಸಾಹಿತಿ, ಶಿಕ್ಷಕ ದಶರಥ ಕೋರಿ, ಶಿಕ್ಷಕ ಪುಂಡಲಿಕ ಕಲ್ಮನಿ ಮಾತನಾಡಿ, ಹಾಲುಮತ ಸಂಪ್ರದಾಯ ಬಹಳ ವಿಶಿಷ್ಟವಾದುದು. ಯಾರ ಜತೆಗೂ ಜಗಳ, ವಿರೋಧ ಕಟ್ಟಿಕೊಳ್ಳುವ ಜನ ಹಾಲುಮತದವರಲ್ಲ. ಗುಡ್ಡಗಾಡಿನಲ್ಲಿದ್ದ ಜನ ನಾಡಿಗೆ ಬಂದು ಎಲ್ಲರೊಂದಿಗೆ ಹೊಂದಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಈ ಸಮುದಾಯವು ಸಮಾಜಕ್ಕೆ ಹಾಲು,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ವಿಜಯಪುರದ ಸ್ನಾತಕ, ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಮತ್ತು ಮಂಡ್ಯ, ಸಿಂಧನೂರು, ಬೀದರ ಹಾಗೂ ಉಡುತಡಿ ಸ್ನಾತಕೋತ್ತರ ಕೇಂದ್ರಗಳಿಗೆ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನವನ್ನು ಇದೇ ದಿ. ೨೪ ಮತ್ತು ೨೫ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಇಲ್ಲಿಯ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ಏರ್ಪಡಿಸಲಾಗಿದೆ.ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಬಿಜೆಪಿ ನಗರ ಮಂಡಲದ ಪ್ರಕೋಷ್ಟಕ ಸಂಯೋಜಕರಾಗಿ ಅರವಿಂದ ರಾಮಸಿಂಗ್ ಲಮಾಣಿ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳನ್ನಾಗಿ ದೇವೇಂದ್ರ ಜಗದೇವ ಹಡ್ಲಗಿ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ. ಭಾರತಿ ಶಿವಾನಂದ ಬೂಯ್ಯಾರ ಅವರನ್ನು ಜಿಲ್ಲಾ ಪ್ರಕೋಷ್ಟಕ ಸದಸ್ಯರನ್ನಾಗಿ ನಿಯುಕ್ತಿಗೊಳಿಸಲು ನಗರ ಮಂಡಲದಿಂದ ಜಿಲ್ಲಾ ಘಟಕಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ನಗರ ಮಂಡಲ ಅಧ್ಯಕ್ಷರಾದ ಶಂಕರ ಹೂಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸತತ ಐದು ದಿನಗಳಿಂದ ನಡೆದ ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆ ನಾಡಿನ ಮೂಲೆಗಳಿಂದ ಬಂದ ಸಹಸ್ರಾರು ಭಕ್ತರ ಮದ್ಯೆ ಶುಕ್ರವಾರ ಸಂಪನ್ನವಾಯಿತು.ಪಟ್ಟಣದ ಹೊರವಲಯದಲ್ಲಿರುವ ಮಲ್ಲಯ್ಯನ ದೇವಸ್ಥಾನಕ್ಕೆ ಕಳೆದ ಸೋಮವಾರದಂದು ತೆರಳಿದ್ದ ರಾವುತರಾಯನನ್ನು ತೆರೆದ ಬಂಡಿಯಲ್ಲಿ ಸಹಸ್ರಾರು ಭಕ್ತಾಧಿಗಳ ಜಯಘೋಷದ ಮದ್ಯೆ ಮೂಲ ದೇವಸ್ಥಾನಕ್ಕೆ ಕರೆ ತರಲಾಯಿತು. ನಾಡಿನ ಹಾಗು ಮಹಾರಾಷ್ಟç, ಆಂಧ್ರ, ಗೋವಾ ರಾಜ್ಯಗಳಿಂದ ಆಗಮಿಸಿದ ಭಕ್ತ ಸಮೂಹ ವಾಸ್ತವ್ಯ ಹೂಡಿ ವಿವಿಧ ಪೂಜಾ ಕರ್ಯಕ್ರಮಗಳಲ್ಲಿ ಪಾಲ್ಗೊಂಡು ಪುನೀತರಾದರು. ಬೆಳಿಗ್ಗೆ ೭.೦೦ ಗಂಟೆಗೆ ಪ್ರಾರಂಭವಾದ ಭವ್ಯ ಬಂಡಿ ಮೆರವಣಿಗೆಯಲ್ಲಿ ವಿರಾಜಮಾನನಾಗಿ ಕಂಗೊಳಿಸಿದ ರಾವುತರಾಯನನ್ನು ಭಕ್ತಾಧಿಗಳು ಭಕ್ತಿಯೊಂದಿಗೆ ಭಂಡಾರ ಎಸೆದು ಏಳು ಕೋಟಿ-ಏಳು ಕೋಟಿ ಗೇ ಎಂಬ ಜಯಕಾರದೊಂದಿಗೆ ಭಕ್ತಿ ಸಮರ್ಪಿಸಿದರು.ಜಾತ್ರೆಯಲ್ಲಿ ವಿಶೇಷವಾಗಿ ಮಹಿಳಾ ಮತ್ತು ಪುರುಷ ವಗ್ಗೆಗಳು ಹೆಗಲ ಮೇಲೆ ಕಂಬಳಿ ಹೊತ್ತು, ಕೈಯಲ್ಲಿ ತ್ರಿಶೂಲ ಹಿಡಿದು ಹಣೆ ತುಂಬ ಭಂಡಾರ ಬಡಿದುಕೊಂಡು ರಾವುತರಾಯನ ಬಂಡಿ ಮುಂದೆ ಮೈದುಂಬಿ ಕುಣಿಯುತ್ತ ಜನರ ಗಮನ ಸೆಳೆದರು. ಪಟ್ಟಣದ ಜನರು ಐದು…
ರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣ ಆಚರಣೆಗೆ ನಿರ್ಧಾರ | ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಲು ಸೂಚನೆ | ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತದಿಂದ ಇದೇ ನ.೧ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯೊಂದಿಗೆ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಾಡಿನ ಅತಿ ಮುಖ್ಯವಾದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು, ವಿವಿಧ ಕನ್ನಡ ಪರ ಸಂಘಟನೆಗಳು, ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು. ರಾಜ್ಯೋತ್ಸವ ಕಾರ್ಯಕ್ರಮದ ವಿವಿಧ ಸಿದ್ಧತೆಗಳ ವ್ಯವಸ್ಥೆಗೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ರಾಜ್ಯೋತ್ಸವ ಸಂದೇಶ ತಯಾರಿಗಾಗಿ ವಿವಿಧ ಇಲಾಖೆಗಳ ಪ್ರಗತಿ ವರದಿಯನ್ನು ಅಕ್ಟೋಬರ್ ೨೫ರೊಳಗಾಗಿ ಸಲ್ಲಿಸುವಂತೆ ಅವರು ಸೂಚನೆ…
ಕರ್ನಾಟಕ ಸಹಕಾರ ಸಂಘಗಳ ನಿಬಂಧಕರಿಗೆ ಮನವಿ | ವೈಜ್ಞಾನಿಕವಾಗಿ ಸಿಬ್ಬಂದಿ ಬಲ ಪುನರ್ಘಟಿಸಲು ಒತ್ತಾಯ | ಬ್ಯಾಂಕಿನ ಆರ್ಥಿಕ ಪರಿಸ್ಥಿತಿ ಇಳಿಕೆಯ ಆತಂಕ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯು ಈಗ ತೆರವಾಗಿರುವ ೧೧೭ ಹುದ್ದೆಗಳಲ್ಲಿ ೪೮ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುತ್ತಿರುವ ಪ್ರಕ್ರಿಯೆಯನ್ನು ಕೂಡಲೇ ತಡೆಹಿಡಿಯಬೇಕೆಂದು ಆಗ್ರಹಿಸಿ ಬ್ಯಾಂಕಿನ ಸದಸ್ಯರ ಗುಂಪೊಂದು ಕರ್ನಾಟಕ ಸಹಕಾರ ಸಂಘಗಳ ನಿಬಂಧಕರಿಗೆ ಮನವಿ ಸಲ್ಲಿಸಿದ ಘಟನೆ ಕೊಂಚ ತಡವಾಗಿ ಬೆಳಕಿಗೆ ಬಂದಿದೆ.ಕಳೆದ ವಾರದಂದು (೮/೧೦/೨೦೨೪) ಬೆಂಗಳೂರಿಗೆ ತೆರಳಿ ಅಗತ್ಯ ದಾಖಲೆಗಳೊಂದಿಗೆ ಮನವಿ ಸಲ್ಲಿಸಿದ “ಅ” ವರ್ಗದ ಕೆಲ ಸದಸ್ಯರು ಸಿದ್ದೇಶ್ವರ ಬ್ಯಾಂಕಿಗೆ ಈ ಹಿಂದೆ ಅವೈಜ್ಞಾನಿಕವಾಗಿ ಮಂಜೂರಾಗಿರುವ ೨೬೮ ಸಿಬ್ಬಂದಿ ಬಲವನ್ನು ರದ್ದುಪಡಿಸಿ ಬ್ಯಾಂಕಿನ ಈಗಿನ ಕಾರ್ಯಭಾರ ಮತ್ತು ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರಿ ಸಂಘಗಳ ಕಾಯ್ದೆ (೧೯೫೯ & ೧೯೬೦ ರ ಉಪನಿಯಮ ೧೭(೧) & ೧೭(೧)C ) ಪ್ರಕಾರ ವೈಜ್ಞಾನಿಕವಾಗಿ…
