Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪೋಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ ೩ ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಮನೋಶಾಸ್ತç ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಪ್ರತಿ ಪ್ರಕರಣಕ್ಕೆ ರೂ.೩೦೦೦/- ಸಂಭಾವನೆ ನಿಗದಿಗೊಳಿಸಲಾಗಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಭೇತಿ ನೀಡಲಾಗುತ್ತದೆ.ಅರ್ಜಿ ನಮೂನೆಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪಡೆದುಕೊಂದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ ೨೯-೧೦-೨೦೨೪ರ ಸಂಜೆ ೫.೩೦ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ೪/೩, ಬಿ.ಎಮ್. ಪಾಟೀಲ್ ಶಾಲೆ ಹತ್ತಿರ, ವಿವೇಕ ನಗರ ವಿಜಯಪುರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ತಾಲೂಕು ಹೆಸ್ಕಾಂನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪವಿಭಾಗದ ವತಿಯಿಂದ ಅಕ್ಟೋಬರ್ ೧೯ರಂದು ಮಧ್ಯಾಹ್ನ ೪ ಗಂಟೆಗೆ ರೈತರು ಹಾಗೂ ಗ್ರಾಹಕರೊಂದಿಗೆ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆ ಹಮ್ಮಿಕೊಳ್ಳಲಾಗಿದೆ. ಹೆಸ್ಕಾಂ ಗ್ರಾಮೀಣ ಉಪ ವಿಭಾಗಕ್ಕೆ ಒಳಪಡುವ ಗ್ರಾಮಗಳ ಗ್ರಾಹಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳುವಂತೆ ವಿಜಯಪುರ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2024-25 ನೇ ಸಾಲಿನ ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತಿನ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರು ಆಯ್ಕೆಯಾಗಿದ್ದಾರೆ. ಅವರ ಮುಂದಿನ ಪ್ರಯತ್ನಗಳು. ಅಧ್ಯಕ್ಷರು ಮತ್ತು ಎಲ್ಲಾ ಅಧಿಕಾರಿಗಳು ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತು, ಕಲ್ಬುರ್ಗಿ ರಾಜ್ಯಾಧ್ಯಕ್ಷ ಗುರಯ್ಯ ಸ್ವಾಮಿ ಹಾಗೂ ಕಾರ್ಯದರ್ಶಿ ಪ್ರಭಾಕರ್ ಸಲಗರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿಎಲ್ಡಿಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ ಎಂ ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಮಹಾವಿದ್ಯಾಲಯದ ಐಕ್ಯೂ ಎಸಿ ಸಹಭಾಗಿತ್ವದಲ್ಲಿ ಯೂತ್ ಕ್ರಾಸ್ ವಿಭಾಗ ಮತ್ತು ಎನ್ಎಸ್ಎಸ್ ಘಟಕ ಒಂದು ಮತ್ತು ಎರಡು ಎಂ ಬಿ ಪಾಟೀಲ್ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಶಿಬಿರವನ್ನು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಆರ್.ಎಂ.ಮಿರ್ದೇ ರಿಬ್ಬನ್ ಕತ್ತರಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಕಣ್ಣಿನ ತಪಾಸಣೆ, ಸಾಮಾನ್ಯ ತಪಾಸಣೆ ಮಾಡಿದರು. ವಿದ್ಯಾರ್ಥಿಗಳ ಅಗತ್ಯ ಔಷಧಿ ಬರೆದು ಕೊಟ್ಟರು. ಕೆಲವ್ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರೀಕ್ಷೆ ಮತ್ತು ಚಿಕಿತ್ಸೆಯ ಅಗತ್ಯವಿರುವವರಿಗೆ ಬಿ ಎಲ್ ಡಿ ಇ ಆಸ್ಪತ್ರೆಗೆ ಭೇಟಿ ನೀಡುವಂತೆ ಸೂಚಿಸಿದರು.ಶಿಬಿರದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಎನ್ಎಸ್ಎಸ್ ಮುಖ್ಯಸ್ಥ ತರುಣಮ ಜಬೀನ್ ಖಾನ್, ಮಿಲನ್ ರಾಟೋಡ್, ಹಾಗೂ ಯೂತ್ ರೆಡ್ ಕ್ರಾಸ್ ವಿಭಾಗದ ಮುಖ್ಯಸ್ಥ ಅನಿಲ್ ಪಾಟೀಲ್, ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಬೆಂಗಳೂರು ಹಾಗೂ ಗ್ರಾಪಂ ಬರಟಗಿ ಸಹಕಾರದೊಂದಿಗೆ “೧೦ ದಿನಗಳ ಬಂಜಾರ ಆಭರಣ ತಯಾರಿಕಾ ಕಾರ್ಯಾಗಾರ” (ಅ.೧೮ರಿಂದ ೨೭ವರೆಗೆ)ದ ಉದ್ಘಾಟನಾ ಸಮಾರಂಭವನ್ನು ಬರಟಗಿ ಗ್ರಾಪಂ ಅಧ್ಯಕ್ಷೆ ಕವಿತಾ ರಜಪೂತ ಉದ್ಘಾಟಿಸಿದರು.ಈ ವೇಳೆ ಮಾತನಾಡಿದ ಅವರು, ಎಲ್ಲ ಬಂಜಾರ ಶಿಬಿರಾರ್ಥಿಗಳು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ಜೀವನ ಉನ್ನತ ಮಟ್ಟಕ್ಕೆ ತಗೆದುಕೊಂಡು ಹೋಗಬೇಕು ಎಂದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಮನಗೌಡ ಎನ್ ಬಿರಾದಾರ ಅವರು, ಬಂಜಾರರಿಗೆ ಇಂತಹ ತರಬೇತಿ ನೀಡುತ್ತಿರುವುದು ಇದೇ ಮೊದಲು. ಈ ಹಿಂದೆ ಯಾರು ಕೂಡ ಆಲೋಚನೆ ಮಾಡಿರಲಿಲ್ಲ. ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ಅದ್ಬುತವಾದ ಕಾರ್ಯವನ್ನು ಮಾಡುತ್ತಿದೆ. ತಾಂಡಾದಲ್ಲಿಯೇ ಇಂತಹ ಕಾರ್ಯಾಗಾರವನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.ಕಲ್ಯಾಣಶಿಂಗ್ ಎಸ್ ಹಜೇರಿ ಆಭರಣಗಳ ಹೊಸ ವಿನ್ಯಾಸ ಕುರಿತು ಮಾತನಾಡಿದರು.ಖ್ಯಾತ ಬಂಜಾರ ಗಾಯಕ ಆರ್ ಬಿ ನಾಯಕ್ ಮಾತನಾಡಿ, ಇಂದಿನ ಯುವ ಪೀಳಿಗೆಯು ಆಭರಣ ತಯಾರಿಕೆಯನ್ನು ಕಲಿತುಕೊಳ್ಳುವುದರ ಜೊತೆಗೆ ಹೊಸ ಹೊಸ ವಿನ್ಯಾಸದ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಮಠ ಮಾನ್ಯಗಳು, ಪುಣ್ಯ ಕ್ಷೇತ್ರಗಳು, ಮಾನವ ಜನ್ಮದ ಭವಬಂಧನ ಕಳೆಯುವ ಆಧ್ಯಾತ್ಮಿಕ ಕೇಂದ್ರಗಳು ಎಂದು ಸಾಹಿತಿ, ಶಿಕ್ಷಕ ಶಿವರುದ್ರಪ್ಪ ಬೊಮ್ಮನಹಳ್ಳಿ ಹೇಳಿದರು.ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ಗುರುವಾರ ಸಂಜೆ ಜರುಗಿದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಮತ್ತು ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದ ಅವರು, ‌ಸತ್ಯಾಸತ್ಯತೆಯ ನಿಜ ಸ್ವರೂಪ ಅರಿತು ಬೆರೆತು ಬಾಳಲು ಕಲಿಸುವ ಸತ್ಸಂಗ, ಶಿವಾನುಭವ ಗೋಷ್ಠಿಯ ಅತ್ಯಾವಶ್ಯಕ. ನರನು ಹರನಾಗಿಸಿ, ಮಾನವ ಮಹಾದೇವನಾಗಿಸುವ ಶಕ್ತಿ ಸತ್ಸಂಗಕ್ಕಿದೆ ಎಂದವರು. ಮಾಸಿಕ ಹುಣ್ಣಿಮೆಯ ಗೋಷ್ಠಿಯಲ್ಲಿ ಜ್ಞಾನಾಮೃತ ಉಣಬಡಿಸುವ ಶ್ರೀಮಠದ ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಕಾರ್ಯ ಸಾರ್ಥಕ ಎಂದರು.ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಚನ್ನಬಸವ ಶಿವಾಚಾರ್ಯರು ಆದಿಕವಿ ಮಹರ್ಷಿ ವಾಲ್ಮೀಕಿ ಬರೆದಿಟ್ಟ ಮಹಾಕಾವ್ಯವನ್ನು ಚೆನ್ನಾಗಿ ಅರಿತಾಗ ಬದುಕು ಸುಂದರವಾಗಿ ರೂಪುಗೊಂಡು, ಸದಾ ಪ್ರಜ್ವಲಿಸುತ್ತದೆ ಎಂದು ಆಶಿಸಿದರು.ಶರಣಕುಮಾರ ಯಾಳಗಿ, ಯಮನೇಶ ಯಾಳಗಿ ಇವರಿಂದ ಸಂಗೀತ ಕಾರ್ಯಕ್ರಮ ಅದ್ಭುತವಾಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ಅ.೧೯ರಂದು ಶನಿವಾರ ಹೊನವಾಡ ಮತ್ತು ತಿಕೋಟಾ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.ಬೆ.೮ಗಂಟೆಗೆ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ.೨೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.ಬಳಿಕ ಬೆ.೯ ಗಂಟೆಗೆ ತಿಕೋಟಾ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ತಲಾ ರೂ.೫೦ ಲಕ್ಷ ವೆಚ್ಚದಲ್ಲಿ ಪಟ್ಟಣದ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಮತ್ತು ಗೈರಾಣ ಕಾಲನಿಯ ಅಲ್ಪಸಂಖ್ಯಾತರ ಪ್ರದೇಶದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.ಅಲ್ಲದೇ, ಪಟ್ಟಣ ಪಂಚಾಯಿತಿ ವತಿಯಿಂದ ರೂ.೧೧೨.೨೩ ಲಕ್ಷ ವೆಚ್ಚದಲ್ಲಿ ಪ.ಪಂ ವ್ಯಾಪ್ತಿಯ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕರ ಕಚೇರಿ ಮಾಧ್ಯಮ ಪ್ರಕಟಣೆಯಲ್ಲಿ ನೀಡಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆಯಲ್ಲಿ 38 ವರ್ಷ ಸೇವೆ ಸಲ್ಲಿಸಿ ಸ್ವಚ್ಛತಾ ನಿರೀಕ್ಷಕರಾಗಿ ಸೇವಾ ನಿವೃತ್ತಿ ಹೊಂದಿದ ಶಂಕರ ಪುಕಳೆ ಅವರನ್ನು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳಾದ ಮಹಾವೀರ ಬೋರಣ್ಣವರ, ಶಿವಾನಂದ ಅಂಬಿಗರ, ಅಶೋಕ ಸಜ್ಜನ್, ಪೌರಸೇವಾ ಸಂಘದ ಅಧ್ಯಕ್ಷ ರವಿಂದ್ರ ಶಿರಷ್ಯಾಡ, ರಾಜೇಶ್ವರಿ ಚಲವಾದಿ ಸೇರಿದಂತೆ ಹಲವರು ಇದ್ದರು.

Read More

ವಿಜಯಪುರದ ’ವಿವಾ ಫಿಟ್ನೆಸ್ ಕೇಂದ್ರ’ ದಲ್ಲಿ ನಡೆದ 35 ನೇ ’ವಿವಾ ಡೇ’ ಸಮಾರಂಭದಲ್ಲಿ ಮಹಿಳೆಯರ ಕಲರವ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆಯರು ನಿಯಮಿತವಾಗಿ ಫಿಟ್ನೆಸ್ ಕೇಂದ್ರಗಳಿಗೆ (ಜಿಮ್) ತೆರಳಿ ವ್ಯಾಯಾಮ ಮಾಡುವುದನ್ನು ತಮ್ಮ ದೈನಂದಿನ ಭಾಗವಾಗಿಸಿಕೊಂಡರೆ ಆರೋಗ್ಯದಲ್ಲಿ ಸ್ಥಿರತೆ ಕಾಣಲು ಸಾಧ್ಯ ಎಂದು ’ಉದಯರಶ್ಮಿ’ ದಿನಪತ್ರಿಕೆ ಪ್ರಕಾಶಕಿ ಶ್ರೀಮತಿ ಶೈಲಾ ಮಣೂರ ಅಭಿಪ್ರಾಯಪಟ್ಟರು.ಗುರುವಾರ ಸಂಜೆ ನಗರದ ’ವಿವಾ ಫಿಟ್ನೆಸ್’ ಕೇಂದ್ರದಲ್ಲಿ ನಡೆದ ’ವಿವಾ ಡೇ’ ಸಮಾರಂಭದಲ್ಲಿ ಅವರು ಮಾತನಾಡಿದರು.ನಾನೂ ಸೇರಿದಂತೆ ಇಲ್ಲಿಗೆ ಬರುವ ಅನೇಕ ಮಹಿಳೆಯರ ದೈಹಿಕ ಮತ್ತು ಮಾನಸಿಕ ಫಿಟ್ನೆಸ್ ಹೆಚ್ಚಲು ಕಾರಣಿಭೂತರು ಈ ಫಿಟ್ನೆಸ್ ಕೇಂದ್ರದ ಮುಖ್ಯಸ್ಥೆ ವಿಜಯಲಕ್ಷ್ಮಿ ಗಿರಗಾಂವಕರ ಮೇಡಂ ಅವರು. ಅವರಿಲ್ಲಿ ಹಿರಿಯರೊಂದಿಗೆ ಹಿರಿಯರಾಗಿ, ಕಿರಿಯರೊಂದಿಗೆ ಕಿರಿಯರಾಗಿ, ನಮ್ಮೊಂದಿಗೆ ಸ್ನೇಹದಿಂದ ಬೆರೆತು, ವ್ಯಾಯಾಮ ಮತ್ತು ಆರೋಗ್ಯದ ಬಗ್ಗೆ ಉಪಯುಕ್ತ ಟಿಪ್ಸ್ ಗಳನ್ನು ಹೇಳುತ್ತ ನಮ್ಮನ್ನು ಹುರಿದುಂಬಿಸುತ್ತಾರೆ. ನಮಗೆ ಎಕ್ಸರಸೈಜ್ ಮಾಡಲು ಪ್ರೇರೇಪಿಸುತ್ತಾರೆ. ಮೇಡಂ ಗೆ ಮತ್ತು ನನ್ನನ್ನು ಈ ವಾತಾವರಣಕ್ಕೆ ಪರಿಚಯಿಸಿದ ಗೆಳತಿ ಸವಿತಾ…

Read More