Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಭಕ್ತರಿಗಾಗಿ ಸದ್ಗುರು ವಿರೇಶ್ವರ ಶಿವಯೋಗಿಗಳು ತಮ್ಮ ಭಾಗದಲ್ಲಿ ಸಂಚರಿಸಿ ಸಾಮಾಜಿಕ ಪರಿವರ್ತನೆ ಮಾಡಿದ್ದಾರೆ. ಭಕ್ತರ ಏಳ್ಗೆಯೇ ಅವರ ಮುಖ್ಯ ಧ್ಯೇಯವಾಗಿತ್ತು. ಅವರ ತತ್ವಗಳು ಸರ್ವಕಾಲಿಕ ಸತ್ಯವಾಗಿವೆ ಎಂದುತಾಳಿಕೋಟಿ – ಹಿರೂರ ಶ್ರೀ ಅನ್ನದಾನೇಶ್ವರ ಸಂಸ್ಥಾನ ಹಿರೇಮಠದ ಪೀಠಾಪತಿ ಪ್ರವಚನಕಾರ ಜಯ ಸಿದ್ದೇಶ್ವರ ಶಿವಾಚಾರ್ಯರು ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಸದ್ಗುರು ವಿರೇಶ್ವರ ಮಹಾಶಿವಯೋಗಿಗಳ 84 ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡ 25 ನೇ ವರ್ಷದ ಪುರಾಣ – ಪ್ರವಚನ ಕಾರ್ಯಕ್ರಮದಲ್ಲಿ ಶ್ರೀ ಸದ್ಗುರು ವಿರೇಶ್ವರ ಮಹಾಶಿವಯೋಗಿಗಳ ಪುರಾಣ ಗ್ರಂಥ ಹಾಗೂ ಜೀವನ ಚರಿತ್ರೆ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಸತ್ವುರುಷರ ಜೀವನದ ಸಂದೇಶಗಳು ಆಲಿಸುವದರಿಂದ ಹಾಗೂ ಒಳ್ಳೆಯ ಗುಣಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸುಂದರ ಜೀವನ ನಡೆಸಬೇಕು ಎಂದರು.ಕೊಣ್ಣೂರು ಮಠದ ಡಾ.ವಿಶ್ವಪ್ರಕಾಶ ಶಿವಾಚಾರ್ಯರು ಮಾತನಾಡಿ, ರಾಮಾಯಣ ಮಹಾಕಾವ್ಯ ರಚಿಸಿದ ವಾಲ್ಮೀಕಿಯವರ ಜೀವನ ಸಂದೇಶಗಳ ಮೌಲ್ಯಗಳು ಮೂಲಕ ಧರ್ಮದ ದಾರಿಯಲ್ಲಿ ನಡೆಯುವ ಸತ್ಸಂಗದಿಂದ ಆದ್ಯಾತ್ಮೀಕ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ – ಗದಗ ಉದಯರಶ್ಮಿ ದಿನಪತ್ರಿಕೆ ಪುಟ್ಟ ಬಾಲಕಿಯ ತಲೆ ನೋವಿನಿಂದ ಸಿಡಿಯುತ್ತಿತ್ತು ಕಾರಣ ಸ್ಪಷ್ಟ.. ಕಳೆದೆರಡು ದಿನಗಳಿಂದ ಆಕೆ ಊಟ ಮಾಡಿರಲಿಲ್ಲ. ಹಸಿವಿನ ಸಂಕಟವು ತಲೆನೋವಿನ ರೂಪದಲ್ಲಿ ಕಾಣಿಸಿಕೊಂಡಿತ್ತು.ವೈಭವೋಪೇತ ಕಲ್ಯಾಣಮಂಟಪದ ಹಿಂದಿನ ಕಸದ ತೊಟ್ಟಿಯಲ್ಲಿ ಹಲವಾರು ನಾಯಿಗಳು ಉಂಡು ಎಸೆದ ಬಾಳೆ ಎಲೆಯಲ್ಲಿ ಉಳಿದ ಆಹಾರವನ್ನು ಸೇವಿಸುತ್ತಿದ್ದರೆ ಅಲ್ಲಿಯೇ ದೂರದ ಸ್ಲಂ ನ ಮಕ್ಕಳು ಆ ನಾಯಿಗಳನ್ನು ಓಡಿಸಿ ಅಲ್ಲಿ ಹಾಕಿದ್ದ ಇನ್ನಿತರ ಎಲೆಗಳಲ್ಲಿನ ಅಳಿದುಳಿದ ಆಹಾರವನ್ನು ಗಬಗಬನೆ ತಿನ್ನುತ್ತಿದ್ದ ದೃಶ್ಯ ಕರುಣಾಜನಕವಾಗಿತ್ತು. ಅವರಿವರ ಮನೆ ಕೆಲಸ ಮಾಡಿ ಹೊಟ್ಟೆ ಹೊರೆಯುತ್ತಿದ್ದ ಆ ವಿಧವೆ ತಾಯಿಗೆ ತನ್ನ ಎರಡು ಮಕ್ಕಳ ಶಾಲಾ ಫಿ ಕಟ್ಟಲು ಒದ್ದಾಡುತ್ತಿದ್ದಳು. ಹರಿದ ಅಂಗಿಗೆ ಪಿನ್ನು ಹಾಕಿಕೊಂಡು, ತೇಪೆ ಹಾಕಿದ ಲಂಗವನ್ನು ಧರಿಸಿದ ಮಕ್ಕಳ ಮುಖದಲ್ಲಿ ನೋವು ನಿರಾಶೆ ಮಡುಗಟ್ಟಿತ್ತು.ಉಪ್ಪು ಸಂಸ್ಕರಣೆ ಮಾಡುತ್ತಿರುವ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆ ಕೆಲಸಗಾರರಲ್ಲಿ ಶೂ ಗಳನ್ನು ಕೊಳ್ಳುವ ಆರ್ಥಿಕ ಅನುಕೂಲವಿಲ್ಲದ ಕಾರಣ ಯಾರೊಬ್ಬರೂ ಕಾಲಿಗೆ…
ಬಾಬಾನಗರ ಗ್ರಾಮದಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಬಾಬಾನಗರ ಗ್ರಾಮದಲ್ಲಿ ಮನರೇಗಾ ಯೋಜನೆಯ ಮಾಹಿತಿ, ಶಿಕ್ಷಣ & ಸಂವಹನ (ಐಇಸಿ) ಕಾರ್ಯಕ್ರಮದಡಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನದ ಅಂಗವಾಗಿ ಮನೆ-ನೆಗೆ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರೇಣುಕಾ ಸೋಲಾಪುರ ಅವರು ಮಾತನಾಡಿದರು.ಸರಕಾರದ ನಿರ್ದೇಶನದಂತೆ ೨೦೨೪-೨೫ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ನಿಟ್ಟಿನಲ್ಲಿ ಅಕ್ಟೋಬರ್ ೦೨ ರಿಂದ ಒಂದು ತಿಂಗಳುಗಳ ಕಾಲ ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಹಮ್ಮಿಕೊಳ್ಳಲಾಗುವುದು. ಈ ಅಭಿಯಾನದ ಭಾಗವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಪ್ರತಿ ಮನೆ-ಮನೆಗೆ ಭೇಟಿ ನೀಡಿ ಕರಪತ್ರಗಳನ್ನು ನೀಡುವದರ ಜೊತೆಗೆ ಯೋಜನೆಯ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದರು.ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ ಮಾತನಾಡಿ, ಈ ತಾಂತ್ರಿಕ ಯುಗದಲ್ಲಿ ಎಲ್ಲರೂ ಪತ್ರರಹಿತ ಕೆಲಸ ಮಾಡಲು ಹೆಚ್ಚು ಒಲವು ತೋರುತ್ತಾರೆ. ಅದರಂತೆ ನಮ್ಮ ಮನರೇಗಾ…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಬಸವೇಶ್ವರ ಪ್ರೌಡಶಾಲೆ, ಬಸವೇಶ್ವರ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪದವಿ ಮಹಾವಿಧ್ಯಾಲಯದ ಸಂಯುಕ್ತಾಶ್ರಯದಲ್ಲಿ ಗುರುವಾರ ಕಾಲೇಜಿನ ಸಂಭಾಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವವನ್ನು ಆಚರಣೆಮಾಡಲಾಯಿತು.ಮುಖ್ಯಗುರು ಜಗದೀಶ ಗುಮಶೆಟ್ಟಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿದರು,ಪದವಿ ಕಾಲೇಜಿನ ಪ್ರಾಚಾರ್ಯ ಜಗದೀಶ ಕಾದಳ್ಳಿ ಮಹರ್ಷಿ ವಾಲ್ಮೀಕಿ ಕುರಿತು ಮಾತನಾಡಿದರು.ಈ ಸಂದರ್ಬದಲ್ಲಿ ನಿಂಗನಗೌಡ ಗುಂಡಕನಾಳ,ರವಿ ಕುಲಕರ್ಣಿ,ವಿರೇಶ ಝಳಕಿ ಸೇರಿದಂತೆ ಅನೇಕರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸಮಾಜದಲ್ಲಿ ಒಬ್ಬ ಬೇಟೆಗಾರ ಬದಲಾಗಿ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡ ಮಾದರಿ ವ್ಯಕ್ತಿ ರಾಮನಾಮ ಜಪದಿಂದ ರಾಮಾಯಣದಂತಹ ಮಹಾಕಾವ್ಯವನ್ನು ವಿಶ್ವಕ್ಕೆ ಪರಿಚಯಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ ಮಹನೀಯರಲ್ಲಿ ಮಹರ್ಷಿ ವಾಲ್ಮೀಕಿಯವರಾಗಿದ್ದಾರೆ ಎಂದು ತಹಶೀಲ್ದಾರ ಎಸ್ ಎಸ್ ನಾಯಕಲಮಠ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲ್ಲೂಕಾ ಆಡಳಿತ ಹಾಗೂ ವಾಲ್ಮೀಕಿ ಸಮುದಾಯದ ಸಹಭಾಗಿತ್ವದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಯದಲ್ಲಿ ಮಾತನಾಡಿದರು.ರಾಮಾಯಣ ಎಂದರೆ ರಾಮನಲ್ಲಿರುವ ಶ್ರೇಷ್ಠ ಮೌಲ್ಯಗಳ ಪ್ರತಿಪಾದನೆಯ ಗ್ರಂಥವಾಗಿದೆ ಎಂದರು.ಪ್ರಾಸ್ತಾವಿಕವಾಗಿ ಮನು ಪತ್ತಾರ ಮಾತನಾಡಿದರು.ಮಂಜುನಾಥ ಅರೇಶಂಕರ ಮಾತನಾಡಿ, ವಾಲ್ಮೀಕಿ ಸಮಾಜ ಗುರುಭಕ್ತಿಗೆ ಹೆಬ್ಬೆರಳು, ದೇಶಭಕ್ತಿಗೆ ಪ್ರಾಣ, ದೈವಭಕ್ತಿಗೆ ಕಣ್ಣು, ಧರ್ಮ ಪತ್ನಿಯರಿಗೆ ರಾಮಾಯಣ ಗ್ರಂಥ ನೀಡಿದ ಸಮಾಜ ಇದಾಗಿದೆ. ಮಹರ್ಷಿ ವಾಲ್ಮೀಕಿ ಹಿಂದೂ ಸಮಾಜ ನೆಲೆಯಾಗಿ ನಿಂತಿರುವ ಈ ಗ್ರಂಥ ನೀಡಿದ ನಮ್ಮ ಸಮಾಜದ ಕೊಡುಗೆ ಎಂದರು.ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮಾಜದ ಅಧ್ಯಕ್ಷ ಭೀಮಸಿ ದಳವಾಯಿ, ತೆಲಗಿ ಗ್ರಾಂ.ಪಂ.ಅಧ್ಯಕ್ಷ ಅರವಿಂದ ಕೊಪ್ಪದ, ಪಶುವೈದ್ಯಾಧಿಕಾರಿ ಡಾ.ವೆಂಕಟೇಶ ವಾಲಿಕಾರ,…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಗಾಣಿಗ ಸಮಾಜ ಬಾಂಧವರು ಎಂದಿಗೂ ಯಾರಿಗೂ ಕೆಡಕು ಬಯಸುವವರಲ್ಲ. ಗಾಣಿಗ ಸಮುದಾಯದವರು ಹೃದಯ ವಿಶಾಲತೆಯನ್ನು ಹೊಂದಿದ್ದಾರೆ. ನಮ್ಮ ಸಮಾಜ ಬಾಂಧವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಸಂಘಟಿತರಾಗುವದು ಅಗತ್ಯವಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಪಟ್ಟಣದ ಗಣೇಶ ನಗರದಲ್ಲಿರುವ ಯಲ್ಲಾಲಿಂಗೇಶ್ವರ ಮಠದ ಕಲ್ಯಾಣ ಮಂಟಪದಲ್ಲಿ ತಾಲೂಕು ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ, ಗಾಣಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ನಗರ ಘಟಕ ಹಾಗೂ ಸಮಾಜದ ಮಹಿಳಾ ಘಟಕದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸ ಓದಿದವರು ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ. ಸಮಾಜದ ಪ್ರತಿಯೊಬ್ಬರೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಸಮಾಜದ ಸಭೆಗಳು ನಿರಂತರವಾಗಿ ನಡೆಯುವಂತಾಗಬೇಕು. ಸಮಾಜ ಬಾಂಧವರು ಒಂದಾಗಿ ಸಮಾಜದ ಅಭಿವೃದ್ಧಿಗ ಶ್ರಮಿಸಲು ಮುಂದಾಗಬೇಕು. ಸಂಕ್ರಮಣದ ನಂತರ ಎಲ್ಲರೂ ಒಂದಾಗಿ ಬೃಹತ್…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕೇಂದ್ರ ಮತ್ತು ರಾಜ್ಯ ಸರ್ಕಾರ ರಾಜ್ಯದ ವಿವಿಧ ನೋಂದಾಯಿತ ಕಂಪನಿಗಳಲ್ಲಿ ತಯಾರಿಸಿದ ಸ್ಪ್ರಿಂಕ್ಲರ್ ಪೈಪುಗಳನ್ನು ರೈತ ಬಾಂಧವರಿಗೆ ರಿಯಾಯತಿ ದರದಲ್ಲಿ ವಿತರಿಸಿದ ಈ ಸ್ಪ್ರಿಂಕ್ಲರ್ ಪೈಪುಗಳು ಕಳಪೆ ಗುಣಮಟ್ಟದಾಗಿವೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಸ್ ಅವರಿಗೆ ಈಚೆಗೆ ಅಖಂಡ ಕರ್ನಾಟಕ ರೈತ ಸಂಘದಿಂದ ಮುಖಂಡ ಅರವಿಂದ ಕುಲಕರ್ಣಿ ಅವರು ಬೆಂಗಳೂರಿನಲ್ಲಿ ಮುಖ್ಯಕಾರ್ಯದರ್ಶಿ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡ ಮೇರೆಗೆ ಬುಧವಾರ ಕೃಷಿ ಇಲಾಖೆಯ ಅಧಿಕಾರಿಗಳು ಹುಲಬೆಂಚಿ, ನಾಗರಾಳಹುಲಿ, ಶರಣಸೋಮನಾಳ ಗ್ರಾಮಗಳಿಗೆ ಭೇಟಿ ನೀಡಿ ರೈತರಿಗೆ ವಿತರಿಸಿದ ಸ್ಪ್ರಿಂಕ್ಲರ್ ಪೈಪುಗಳನ್ನು ಗುಣಮಟ್ಟ ಪರೀಕ್ಷೆಗೆ ಸಂಗ್ರಹಿಸಿದರು.ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ರೈತ ಸಂಘದ ಮನವಿಗೆ ಸ್ಪಂದಿಸಿ ಕೃಷಿ ಇಲಾಖೆಯ ಆಯುಕ್ತರಿಗೆ ರೈತರಿಗೆ ವಿತರಿಸಿದ ಸ್ಪ್ರಿಂಕ್ಲರ್ ಪೈಪುಗಳ ಬಗ್ಗೆ ಹದಿನೈದು ದಿನಗಳಲ್ಲಿ ಮಾಹಿತಿ ಸಂಗ್ರಹಿಸಿ ಕಳಪೆ ಸ್ಪ್ರಿಂಕ್ಲರ್ ಪೈಪುಗಳನ್ನು ವಿತರಿಸಿದ ಕಂಪನಿಗಳ ಮೇಲೆ ಕ್ರಮ ಕೈಗೊಳ್ಳಲು ಹಾಗೂ ಪೈಪುಗಳ ಗುಣಮಟ್ಟ ಪರೀಕ್ಷಿಸಲು ಕ್ರಮ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ರಾಜ್ಯ ಪೆಂಕಾಕ್ ಸಿಲತ್ ಸಂಸ್ಥೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕರಾಟೆ ತರಬೇತುದಾರ ಶಿವುಕುಮಾರ ಶಾರದಳ್ಳಿ ಅವರಿಗೆ ಏಕಲವ್ಯ ಅಕಾಡೆಮಿ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು.ಈ ವೇಳೆ ಪಾಲಕರ ಮುಖಂಡ ಅರವಿಂದ ಕೊಪ್ಪ ಅವರು ಮಾತನಾಡಿ, ಬಡತನದಲ್ಲಿದ್ದರೂ ವಿಶಾಲ ಹೃದಯ ಹೊಂದಿದ ಶಿವುಕುಮಾರರಂಥ ಶಿಕ್ಷಕರನ್ನು ಪಡೆದದ್ದು ಈ ಭಾಗದ ಜನತೆಯ ಭಾಗ್ಯ. ತಮ್ಮಲ್ಲಿರುವ ಕಲೆಯನ್ನು ನಿಸ್ವಾರ್ಥದಿಂದ ಇತರರಿಗೆ ಧಾರೆ ಎರೆಯುತ್ತಿರುವ ಅವರ ಸೇವೆಗೆ ಮೆಚ್ಚಿ ಈ ಹುದ್ದೆ ಅವರಿಗೆ ನೀಡಿದ್ದು ಸಂತಸ ತಂದಿದೆ. ನಮ್ಮ ಭಾಗದ ಮಕ್ಕಳು ರಾಜ್ಯ ರಾಷ್ಟç ಮಟ್ಟದಲ್ಲಿ ಮಿಂಚುವಷ್ಟು ಎತ್ತರಕ್ಕೆ ಏಕಲವ್ಯ ಅಕಾಡಮಿ ಬೆಳೆಯಲಿ. ಇನ್ನಷ್ಟು ಹುದ್ದೆಗಳು ಶಾರದಳ್ಳಿ ಅವರನ್ನ ಹುಡುಕಿಕೊಂಡು ಬರಲಿ ಎಂದರು.ಈ ವೇಳೆ ವಿದ್ಯಾರ್ಥಿಗಳ ಪಾಲಕರಾದ ನಾಗೇಂದ್ರ ಶಿವಶಿಂಪಿ, ಮಹಾಂತೇಶ ಬೂದಿಹಾಳಮಠ, ಬಸವರಾಜ ನಾಗೂರ, ವಿಜಯಕುಮಾರ ಸೋನಾರ, ಮಲ್ಲನಗೌಡ ಕಡಕಲ್ಲ ಸೇರಿದಂತೆ ಮತ್ತೀತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಗದಗ: ಪಂ.ಪುಟ್ಟರಾಜ ಗುರುವರ್ಯರ ಸಾಹಿತ್ಯ ಸಾಧನೆಯನ್ನು ಸ್ಮರಿಸಿಕೊಳ್ಳುವ ಉದ್ದೇಶದಿಂದ ಸುಮಾರು ೨೪ ವರ್ಷಗಳಿಂದ ರಾಜ್ಯದ ರಾಜಧಾನಿ ಬೆಂಗಳೂರನ್ನೂ ಒಳಗೊಂಡಂತೆ ರಾಜ್ಯದ ಬೇರೆ ಬೇರೆ ನಗರಗಳಲ್ಲಿ ಹಮ್ಮಿಕೊಳ್ಳುತ್ತಾ ಬಂದಿರುವ ಪಂ. ಪುಟ್ಟರಾಜ ಸಾಹಿತ್ಯೋತ್ಸವವು, ಎರಡನೆಯ ಬಾರಿ ಮತ್ತೆ ಧಾರವಾಡದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ ೨೦ ಭಾನುವಾರ ಅಕ್ಟೋಬರ್ ೨೦೨೪ ರಂದು ಬೆಳಿಗ್ಗೆ ೧೦ ಗಂಟೆಯಿಂದ ರಾತ್ರಿ ೮ ಗಂಟೆವರೆಗೆ ದಾರವಾಡದ ರಂಗಾಯಣದಲ್ಲಿ ಇಡೀ ದಿನ ನಡೆಯುವುದು. ಮುಂಜಾನೆ: ೧೦.೦೦ ಗಂಟೆ ಈ ಉತ್ಸವದ ಉದ್ಘಾಟನಾ ಸಮಾರಂಭ ನಡೆಯಲಿದೆ.ಈ ಸಮಾರಂಭದ ಸಾನಿಧ್ಯವನ್ನು ಮನ್ಸೂರಿನ ರೇವಣಸಿದ್ಧೇಶ್ವರ ಮಠದ ಡಾ. ಬಸವರಾಜ ದೇವರು ವಹಿಸಿಕೊಳ್ಳುವರು. ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಗೌರವ ಅಧ್ಯಕ್ಷರಾದ ಕೆಂಬಾವಿ ಸಂಸ್ಥಾನ ಹಿರೇಮಠದ ಚನ್ನಬಸವ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿಕೊಳ್ಳುವರು. ಪುಟ್ಟರಾಜ ಗುರುಗಳ ಶಿಷ್ಯರಾದ ಕಡಣಿ ಸಂಸ್ಠಾನ ಹಿರೇಮಠದ ಚನ್ನವೀರಸ್ವಾಮಿಗಳು, ಗದಗ ಉದ್ಘಾಟನೆ ಮಾಡಲಿದ್ದಾರೆ. ಕ.ವಿ.ವಿ.ಲಲಿತಕಲಾ ಹಾಗೂ ಸಂಗೀತ ಮಹಾವಿದ್ಯಾಲಯದ ಸಹಾಯಕ ಉಪನ್ಯಾಸಕರು, ಸಾಹಿತಿಗಳಾದ ಡಾ, ಎ. ಎಲ್. ದೇಸಾಯಿ ದಾರವಾಡ…
ಹಿಕ್ಕನಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಹಮ್ಮಿಕೊಂಡ ೮ನೇ ಶರಣಾನುಭವ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿದೇಶಗಳಲ್ಲಿ ಬುದ್ಧಿಗೆ ಮಹತ್ವ ನೀಡಿದರೆ, ನಮ್ಮ ಭಾರತದಲ್ಲಿ ಹೃದಯವಂತಿಕೆಗೆ ಮೊದಲು ಆದ್ಯತೆ ನೀಡಲಾಗುತ್ತದೆ. ಇದು ನಮ್ಮ ದೇಶದ ಸಂಸ್ಕೃತಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಹೇಳಿದರು.ತಾಲೂಕಿನ ಹಿಕ್ಕನಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಹಮ್ಮಿಕೊಂಡ ಮಾಸಿಕ ೮ ನೇ ಶರಣಾನುಭವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮಾನವನಿಗೆ ವೈಭವದ ಜೀವನಕ್ಕೆ ಬೇಕಾಗುವ ಎಲ್ಲ ಸಂಪತ್ತಿದೆ. ಆದರೆ ಬದುಕಿನಲ್ಲಿ ನೆಮ್ಮದಿಯಿಲ್ಲ. ಏಕೆಂದರೆ ಮಠ-ಮಂದಿರದ ಪರಂಪರೆಯನ್ನು ನಾವು ಮರೆಯುತ್ತಿದ್ದೇವೆ. ಅದಕ್ಕೆ ಎಷ್ಟೇ ಆಸ್ತಿ ಇದ್ದರೂ ಸಮಸ್ಯೆಯಿಂದ ಮುಕ್ತಿ ಹೊಂದಲು ಸಾಧ್ಯವಾಗುತ್ತಿಲ್ಲ. ಮಾನವನಿಗೆ ಸಂಸ್ಕೃತಿ, ಸಂಸ್ಕಾರ ಬರಬೇಕಾದರೆ ಮಠ, ಮಂದಿರಕ್ಕೆ ಹೋಗಬೇಕು ಎಂದರು.ಈ ವೇಳೆ ತಾಲೂಕು ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಸಾಹಿತಿ ಶಂಕರ ಬೈಚಬಾಳ ಮಾತನಾಡಿ, ಶ್ರೀಮಠವು ಪ್ರಶಸ್ತಿಯನ್ನು ಆಶೀರ್ವಾದ ರೂಪದಲ್ಲಿ ನೀಡಿ ತಾಯಿ ಮತ್ತು ಮಕ್ಕಳ ಅನುಭವ ಉಂಟುಮಾಡುತ್ತಿದೆ. ಮನೆಗಳೇ ಮಠಗಳಾಗಬೇಕು ಎಂದು ಶರಣರು ಕಂಡ…
