Author: editor.udayarashmi@gmail.com

ಬಾಬಾನಗರ ಗ್ರಾಮದಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಬಾಬಾನಗರ ಗ್ರಾಮದಲ್ಲಿ ಮನರೇಗಾ ಯೋಜನೆಯ ಮಾಹಿತಿ, ಶಿಕ್ಷಣ & ಸಂವಹನ (ಐಇಸಿ) ಕಾರ್ಯಕ್ರಮದಡಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನದ ಅಂಗವಾಗಿ ಮನೆ-ನೆಗೆ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರೇಣುಕಾ ಸೋಲಾಪುರ ಅವರು ಮಾತನಾಡಿದರು.ಸರಕಾರದ ನಿರ್ದೇಶನದಂತೆ ೨೦೨೪-೨೫ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ನಿಟ್ಟಿನಲ್ಲಿ ಅಕ್ಟೋಬರ್ ೦೨ ರಿಂದ ಒಂದು ತಿಂಗಳುಗಳ ಕಾಲ ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಹಮ್ಮಿಕೊಳ್ಳಲಾಗುವುದು. ಈ ಅಭಿಯಾನದ ಭಾಗವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಪ್ರತಿ ಮನೆ-ಮನೆಗೆ ಭೇಟಿ ನೀಡಿ ಕರಪತ್ರಗಳನ್ನು ನೀಡುವದರ ಜೊತೆಗೆ ಯೋಜನೆಯ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದರು.ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ ಮಾತನಾಡಿ, ಈ ತಾಂತ್ರಿಕ ಯುಗದಲ್ಲಿ ಎಲ್ಲರೂ ಪತ್ರರಹಿತ ಕೆಲಸ ಮಾಡಲು ಹೆಚ್ಚು ಒಲವು ತೋರುತ್ತಾರೆ. ಅದರಂತೆ ನಮ್ಮ ಮನರೇಗಾ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು.ನಂತರ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿಯು ಸಾಮಾನ್ಯ ಸ್ಥಿತಿಯಿಂದ ಬೆಳೆದು ಮಹಾನ್ ಕವಿಯಾಗಿ ಜಗತ್ತಿಗೆ ಸರ್ವಶ್ರೇಷ್ಠ ಮಹಾಕಾವ್ಯ ರಾಮಾಯಣವನ್ನು ನೀಡುವ ಮೂಲಕ ಮಹಾನ್ ದಾರ್ಶನಿಕರಾಗಿದ್ದಾರೆ. ಸಮಾಜಕ್ಕೆ ಆದರ್ಶಪ್ರಾಯವಾಗಬೇಕಾದರೆ ಇಂತಹ ಮಹಾನ್ ನಾಯಕರ ಜೀವನ ಸಂದೇಶ ಅರಿತುಕೊಂಡು ಮುನ್ನೆಡೆಯಬೇಕೆಂದರು.ಈ ಸಂದರ್ಭದಲ್ಲಿ ಡಾ.ವೈ.ಬಿ.ನಾಯಕ, ಡಾ.ಬಿ.ಎನ್.ಸಾಲವಾಡಗಿ, ಪ್ರೊ.ಎಂ.ಕೆ.ಯಾದವ, ಪ್ರೊ.ದಿಲೀಪಕುಮಾರ, ಪ್ರೊ.ಪಿ.ಎಸ್.ನಾಟೀಕಾರ, ಡಾ.ಶ್ರೀನಿವಾಸ ದೊಡಮನಿ, ಪ್ರೊ.ಜಯರಾಂ ರೆಡ್ಡಿ, ಪ್ರೊ.ಎಂ.ಆರ್.ಮಮದಾಪುರ, ಡಾ.ಎಸ್.ಬಿ.ಜನಗೊಂಡ, ಬೋಧಕೇತರ ಸಿಬ್ಬಂದಿ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣ ಕಾವ್ಯದಲ್ಲಿ ಮೂಡಿಬಂದಿರುವ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸುಂದರ ಜೀವನ ನಮ್ಮದಾಗಿಸಿಕೊಳ್ಳಬೇಕೆಂದು ವಿಜಯಪುರ ಎಸ್ಬಿ ಕಲಾ ಮತ್ತು ಕೆಸಿಪಿ ವಿeನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಶ್ರೀನಿವಾಸ ದೊಡಮನಿ ಹೇಳಿದರು.ಪಟ್ಟಣದ ಬಸವಭವನದಲ್ಲಿ ತಾಲೂಕಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ರಾಮಾಯಣ ಕಾವ್ಯದಲ್ಲಿರುವ ಜೀವನದ ಮೌಲ್ಯಗಳಾದ ರಾಮನ ಆದರ್ಶ, ಸೀತೆಯ ಪತಿವೃತ್ತ, ಕರುಣೆ, ದಯಾಗುಣ, ಭಕ್ತಿ ಮೌಲ್ಯ, ದೌರ್ಜನ್ಯ ತಡೆ ಗಟ್ಟುವಿಕೆ, ನಿಸರ್ಗದ ಪ್ರೇಮ ಸೇರಿದಂತೆ ಅನೇಕ ಮೌಲ್ಯಗಳನ್ನು ಕಾಣುತ್ತೇವೆ. ಇಂತಹ ರಾಮಾಯಣ ಕಾವ್ಯವು ಪ್ರತಿಯೊಂದು ಮನೆಯಲ್ಲಿ ಇರುವ ಜೊತೆಗೆ ಅದರಲ್ಲಿರುವ ಶಾಶ್ವತ ಮೌಲ್ಯಗಳನ್ನು ನಾವು ಅರಿತುಕೊಂಡು ಜೀವನ ಸಾಗಿಸಬೇಕಿದೆ ಎಂದರು.ಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಮಾತನಾಡಿ, ಗುರುವಿನ ಕಾರುಣ್ಯವಿದ್ದರೆ ಜೀವನ ಪಾವನವಾಗುತ್ತದೆ. ವಾಲ್ಮೀಕಿ ರಚಿಸಿರುವ ರಾಮಾಯಣದಲ್ಲಿರುವ ಜೀವನ ಸಂದೇಶ ಅರಿತುಕೊಳ್ಳುವ ಅಗತ್ಯವಿದೆ ಎಂದರು.ಕರವೇ ಮುಖಂಡ ಅಶೋಕ ಹಾರಿವಾಳ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಗುರುವಾರ ಸೈಬರ್ ಕ್ರೈಂ ವಂಚನೆ ಆಧಾರಿತ ’ಢಣ ಢಣ ಕಾಂಚಾಣ’ ವೆಬ್ ಸೀರಿಸ್‌ನ ಪೋಸ್ಟರ್‌ನ್ನು ಪ್ರಶಾಂತ ಕದ್ದರಕಿ ಬಿಡುಗಡೆಗೊಳಿಸಿದರು.ಈ ವೇಳೆ ನಿರ್ಮಾಪಕ ಗುರುರಾಜ ಮಠ ಮಾತನಾಡಿ, ನಿರ್ದೇಶಕ ರಘುಚಂದ್ರ ಬಿರಾದಾರ ಸೈಬರ್ ವಂಚನೆಯ ಕಥಾ ಹಂದರವನ್ನು ಹೆಣೆದು ಈ ವೆಬ್ ಸೀರಿಸ್ ರಚಿಸಿದ್ದಾರೆ. ಬಹುತೇಕ ವಿಜಯಪುರ ಜಿಲ್ಲೆ ಹಾಗೂ ಗ್ರಾಮೀಣ ಭಾಗದಲ್ಲಿ ಶೂಟಿಂಗ್ ಮಾಡಲಾಗಿದ್ದು. ಇಡೀ ವೆಬ್ ಸೀರಿಸ್ ಉತ್ತರ ಕರ್ನಾಟಕ ಭಾಷೆಯನ್ನು ಒಳಗೊಂಡಿದೆ. ಉತ್ತರ ಕರ್ನಾಟಕದ ಕಲಾವಿದರ ನಟನೆಯನ್ನು ಉತ್ತರ ಕರ್ನಾಟಕದ ಸೊಗಡಿನಲ್ಲಿಯೇ ನೋಡಬಹುದಾಗಿದೆ. ಶಿವು ಕುಂಬಾರ, ಶೃತಿ ಪೂಜಾರ, ಸಂತೋಷ ಉಪ್ಪಿನ, ಯಶವಂತ ಕೊಚಬಾಳ, ಪ್ರವೀಣ ಬಿರಾದಾರ ಈ ೬ಜನ ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಶೀಘ್ರದಲ್ಲೇ ೭ ಎಪಿಸೋಡ್‌ಗಳು ಓಟಿಟಿಯ ಮೂಲಕ ತೆರೆಗೆ ಬರಲಿದೆ ಎಂದರು.ಚಲನಚಿತ್ರ ನಟ ಸಂತೋಷ ಉಪ್ಪಿನ ಮಾತನಾಡಿ, ನಿರ್ದೇಶಕ ರಘುಚಂದ್ರ ಬಿರಾದಾರರವರ ಉತ್ತರ ಕರ್ನಾಟಕದ ಶೈಲಿಯ ನಿರ್ದೇಶನವು ವಿಭಿನ್ನವಾಗಿ ಮೂಡಿಬಂದಿದೆ. ಈ ಭಾಗದ ಕಲಾವಿದರಿಗೆ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಹೊಲದ ಭಾವಿಯೊಂದರಲ್ಲಿ ಬಿದ್ದಿರುವ ಹಸುವನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಸಫಲರಾಗಿದ್ದಾರೆ.ತಾಲೂಕಿನ ಅಗಸಬಾಳ ಗ್ರಾಮದ ಜಮೀನೊಂದರ ಅಂದಾಜು ೬೦ ಅಡಿ ಭಾವಿಯೊಳಗೆ ರಾತ್ರಿ ವೇಳೆ ಹಸು ಬಿದ್ದು ಒದ್ದಾಡುತ್ತಿದ್ದು. ಈ ವಿಷಯ ತಿಳಿದ ಕೆಲ ಗ್ರಾಮಸ್ಥರು ಅದನ್ನು ಹೊರತೆಗೆಯಲು ಪಯತ್ನಪಟ್ಟು ಸಫಲವಾಗದಿದ್ದಾಗ, ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಠಾಣಾಧಿಕಾರಿ ಪ್ರಮೋದ ಸುಂಕದ ಸಿಬ್ಬಂದಿಗಳಾದ ಸಿದ್ದಣ್ಣ ಪೊಲೇಶಿ, ಸಂತೋಷ ಲಮಾಣಿ, ಮಹೇಶ ಕರಡ್ಡಿ, ಮಂಜುನಾಥ ಬಳಿಗಾರ, ರವೀಂದ್ರ ರತ್ನಾಕರ, ಸುನೀಲ ನಾಯಕ ಕಾರ್ಯಾಚರಣೆ ನಡೆಸಿ ಹಸುವನ್ನು ರಕ್ಷಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹರ್ಷಿ ವಾಲ್ಮೀಕಿ ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಹರ್ಷಿ ವಾಲ್ಮೀಕಿ ಪೀಠದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾಲ್ಮೀಕಿ ಅವರ ಜೀವನಾದರ್ಶಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.ಇದೇ ಸಂದರ್ಭದಲ್ಲಿ ಕುಲಪತಿಗಳು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಕಾರ್ಯಕ್ರಮದ ಸಂಯೋಜಕ ಸಂದೀಪ್, ಡಾ.ಹನುಮಂತಯ್ಯ ಪೂಜಾರ, ಡಾ.ನಟರಾಜ ದುರ್ಗಣ್ಣನವರ, ಡಾ.ದೀಪಕ್ ಶಿಂದೆ, ಡಾ.ಪ್ರಕಾಶ ಸಣ್ಣಕ್ಕನವರ, ಡಾ.ರಮೇಶ ಸೋನಕಾಂಬಳೆ, ಡಾ.ಗುಲಾಬ್ ರಾಠೋಡ, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಬಸವೇಶ್ವರ ವೃತ್ತದಿಂದ ಇಂದಿರಾ ವೃತ್ತದವರೆಗೆ ಬೀದಿ ಬದಿ ವ್ಯಾಪರಸ್ಥರು ತಮಗೆ ನಿಗದಿಪಡಿಸಿದ ಜಾಗೆಯಲ್ಲಿ ಮಾತ್ರ ವ್ಯಾಪಾರ ನಡೆಸಬೇಕು. ಅ೧೭ ರಿಂದ ತಳ್ಳುಗಾಡಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿರ್ಣಯ ಮೀರಿ ನಡೆದವರ ವಿರುದ್ಧ ಕ್ರಮ ಕೈಗೊಳ್ಳಲಾಗುವದು ಎಂದು ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಹೇಳಿದರು.ಪಟ್ಟಣದ ಪುರಸಭೆ ಸಬಾಭವನದಲ್ಲಿ ಟ್ರಾಫಿಕ್ ಸಮಸ್ಯೆ ಮುಕ್ತಿಗಾಗಿ ಪುರಸಭೆ ವತಿಯಿಂದ ಆಯೋಜಿಸಲಾಗಿದ್ದ ಬೀದಿ ಬದಿ ವ್ಯಾಪಾರಸ್ಥರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬಸವೇಶ್ವರ ವೃತ್ತದಿಂದ ಸಿದ್ರಾಮೇಶ್ವರ ವೃತ್ತದವರೆಗೆ ಸಾಕಷ್ಟು ಟ್ರಾಫಿಕ್ ಸಮಸ್ಯೆಯಾಗುತ್ತಿರುವದರಿಂದ ಎಲ್ಲ ವ್ಯಾಪಾರಿಗಳಿಗೆ ಒಂದೆಡೆ ಸ್ಥಳ ನಿಗದಿ ಮಾಡಲಾಗಿತ್ತು. ವ್ಯಾಪಾರಸ್ಥರು ದೀಪಾವಳಿಯವರೆಗೆ ಅವಕಾಶ ಕೇಳಿದ್ದರಿಂದ ಗಾಡಿಗಳಿಲ್ಲದೇ ಫುಟ್‌ಪಾತ್ ಮೇಲೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದೇವೆ. ತಮಗೆ ನಿಗದಿಪಡಿಸಿದ ಜಾಗೆಗಿಂತ ಮುಂದೆ ಬಂದರೆ ದಂಡ ವಿಧಿಸಲಾಗುವದು. ವಾಹನ ಸವಾರರು ತಮ್ಮ ವಾಹನಗಳನ್ನು ನಿಲ್ಲಿಸಲು ಹಳೆಯ ನ್ಯಾಯಾಲಯದ ಬಳಿ ಮತ್ತು ಹಳೆಯ ಪೊಲೀಸ್ ಕ್ವಾರ್ಟರ್ಸ ಜಾಗೆಯನ್ನು ನಿಗದಿಪಡಿಸಿದ್ದೇವೆ. ಅಲ್ಲಿಯೇ ಪಾರ್ಕ ಮಾಡಬೇಕು. ದೀಪಾವಳಿಯ ಬಳಿಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಒಟ್ಟು ೨೦೮೫ ಮತಗಟ್ಟೆಗಳಿದ್ದು, ಅವುಗಳಲ್ಲಿ ಒಂದೇ ಆವರಣದ ಒಂದೇ ಕಟ್ಟಡದಲ್ಲಿರುವ ಮತಗಟ್ಟೆಯ ಮತದಾರರನ್ನು ಪಕ್ಕದಲ್ಲಿರುವ ಬೇರೆ ಕೋಣೆಯಲ್ಲಿರುವ ಮತಗಟ್ಟೆಗೆ ವಿಲೀನಗೊಳಿಸಲು ೧ ಮತಗಟ್ಟೆಯನ್ನು ಪಕ್ಕದ ಕಟ್ಟಡಕ್ಕೆ ಅಂದರೆ ಅದೇ ಆವರಣದ ಬೇರೆ ಕೊಣೆಯಲ್ಲಿರುವ ಮತಗಟ್ಟೆಗೆ ವಿಲೀನಗೊಳಿಸಲು ಹಾಗೂ ೮ ಮತಗಟ್ಟೆಗಳಲ್ಲಿ ೧,೫೦೦ಕ್ಕಿಂತ ಹೆಚ್ಚಿಗೆ ಮತದಾರರಿರುವ ಮತಗಟ್ಟೆಗಳಲ್ಲಿ ಹೊಸದಾಗಿ ಮತಗಟ್ಟೆ ಸ್ಥಾಪಿಸಲು ಭಾರತ ಚುನಾವಣೆ ಆಯೋಗಕ್ಕೆ ಪ್ರಸ್ತಾನನೆ ಸಲ್ಲಿಸಲಾಗಿತ್ತು. ಅದರಂತೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ ೦೧-೦೧-೨೦೨೫ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು ೨,೦೯೨ ಮತಗಟ್ಟೆಗಳು ಅಸ್ತಿತ್ವದಲ್ಲಿರುತ್ತವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.

Read More

ವಿಜಯಪುರ ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ | ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಮಾಯಣ ಮಹಾಕಾವ್ಯ ರಚಿಸಿದ ವಾಲ್ಮೀಕಿಯವರ ಜೀವನ ಸಂದೇಶಗಳ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳಿಗೆ ಮಹರ್ಷಿ ವಾಲ್ಮೀಕಿಯವರ ಜೀವನ ಚರಿತ್ರೆಯನ್ನು ತಿಳಿಸಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರು ಪಾಲಕರು ಮುತುವರ್ಜಿವಹಿಸಬೇಕು ಎಂದು ಹೇಳಿದರು.ಸಾಹಿತಿ ಅಶೋಕ ಹಂಚಲಿ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಿ.ಎಸ್.ರಾಠೋಡ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ್, ಮಹಾನಗರ ಪಾಲಿಕೆಯ ಉಪ…

Read More

ಹಿಂದೂ ಮುಸ್ಲಿಂ‌ ಭಾವೈಕ್ಯ ಬೆಸೆದ ಬಾಬಾನಗರ ಪಾನಿಸಾಹೇಬ್ ಉರುಸ್ ಉದಯರಶ್ಮಿ ದಿನಪತ್ರಿಕೆ – ರೇಖಾ ಪಿ.ಗದ್ಯಾಳತಿಕೋಟಾ: ಭೂಮಿ ಅದ್ಬುತ ಉಣ್ಣಾಕ, ಉಡಾಕ, ಕುಡಿಯಾಕ ಜೀವಿ ಹುಟ್ಟಿ ಬದುಕಬೇಕಾದದ್ದು ಎಲ್ಲವೂ ಭೂಮಿ ಮೇಲೆ ಇದೆ. ಅದ್ಬುತವಾದ ಭೂಮಿ ಮೇಲೆ ಎಲ್ಲರನ್ನು ಪ್ರೀತಿಸಿ ಸಂತೋಷದ ಬದುಕು ಕಟ್ಟಿಕೊಂಡು ಬದುಕುವುದೇ ಧರ್ಮ ಎಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಬಾಬಾನಗರ ಗ್ರಾಮದಲ್ಲಿ ಬುಧವಾರ ನಡೆದ ಹಜರತ್ ಬಾಬಾ ಪಾಣಿಸಾಹೇಬ ಉರುಸ್ ಹಾಗೂ ಸರ್ವಧರ್ಮ ಭಾವೈಕ್ಯತಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಚಿಗರಹಳ್ಳಿ ಮರುಳ ಶಂಕರದೇವರ ಗುರುಪೀಠದ ಶ್ರೀ ಸಿದ್ದ ಬಸವ ಕಬೀರ ಮಹಾಸ್ವಾಮೀಜಿ ಮಾತನಾಡಿ, ನಮ್ಮ ಭಾರತದಲ್ಲಿ ಭಿನ್ನ ಮಾಡುವ ಕಿಡಿಗೇಡಿಗಳಿಗೆ ಹಿಂದೂ ಮುಸ್ಲಿಂ ಐಕ್ಯತೆ ಭಾವದಿಂದ ಬದುಕುತ್ತಿರುವದನ್ನು ತೋರಿಸಬೇಕು. ವಿಷ ಬೀಜ ಬಿತ್ತುವದರಿಂದ ದೇಶಕ್ಕೆ ಆಪತ್ತು ಬರತ್ತದೆ. ಧರ್ಮಗಳು ಯಾವವು ಜಗಳ ಹಚ್ಚುವದಿಲ್ಲ. ನಾವು ಭಾರತೀಯರು ಅನ್ನೋ‌ಭಾವ ಇಟ್ಟಕೊಂಡು ಭಾತೃತ್ವದಿಂದ ಬಂದಿವಿ. ಎಲ್ಲ ಮುಸ್ಲಿಂರು ನಮ್ಮ ಅಣ್ಣ ತಮ್ಮವರು, ಯಾರೇ ಬಂದರೂ ಒಂದಾಗಿ…

Read More