Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಲ್ಲ ತರಹದ ಸಂಧಿ ನೋವುಗಳಾದ ಮೋಣಕಾಲು ನೊವು, ಸೋಂಟ ನೊವು ಕುತ್ತಿಗೆ ನೊವು, ಭುಜ ನೋವು, ಹಿಮ್ಮಡಿ ನೋವು ಮತ್ತು ಇನ್ನಿತರಹದ ಧೀರ್ಘಕಾಲಿನ ವಾತ ರೋಗಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಅಯುರ್ವೆದ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 21 ರಿಂದ 23ರ ವರೆಗೆ ನಡೆಯಲಿದೆ.ಆಸ್ಪತ್ರೆಯ ಕಾಯಚಿಕಿತ್ಸಾ ವಿಭಾಗದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಈ ಉಚಿತ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 9513397413, 7483278348 ನ್ನು ಸಂಪರ್ಕಿಸಬಹುದಾಗಿದೆ.

Read More

ಕಲಕೇರಿಯ ಶ್ರೀ ಬಸವೇಶ್ವರ ಪ್ರೌಡಶಾಲೆಯಲ್ಲಿ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಶ್ರೀ ಬಸವೇಶ್ವರ ಪ್ರೌಢಶಾಲೆಯಲ್ಲಿ ೨೦೧೪-೧೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿಧ್ಯಾರ್ಥಿ ಗೆಳೆಯರ ಬಳಗದಿಂದ ಸ್ನೇಹ ಸಮ್ಮಿಲನ ಮತ್ತು ಗುರು ವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮ ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರೌಢಶಾಲೆಯ ಮುಖ್ಯಗುರು ಜೆ.ಬಿ.ಗುಮಶೆಟ್ಟಿ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು ಹಾಗೂ ಗುರು ಹಿರಿಯರಿಗೆ ವಿಧೇಯರಾಗಿ ಜಗತ್ತಿಗೆ ಸಂಸ್ಕಾರ ಕಲಿಸಿಕೊಟ್ಟ ನಮ್ಮ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿ ಬೆಳೆದು ನಿಲ್ಲುವ ಸ್ವಾವಲಂಬಿ ಪ್ರಜೆಗಳಾಗಿ ಬೆಳೆಯಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳೆಲ್ಲ ಒಟ್ಟಾಗಿ ಸೇರಿ ಗುರುಗಳಿಗೆ ವಂದಿಸುವ ಗೌರವಿಸುವ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.ಪ್ರಾಥನಾಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು ಶಿಕ್ಷಕರಾದ ಎಸ್.ಆರ್.ಹರಿಜನ ಮತ್ತು ರಾಕೇಶ ಅವರ ಸುಂದರ ಹಾಡುಗಳಿಂದ ಎಲ್ಲರನ್ನು ಮನರಂಜಿಸಿದರು.ಶಿಕ್ಷಕರಾದ ಎಸ್.ಪಿ.ರಾಣಗಟ್ಟಿ ಅವರು ಶಿಕ್ಷಕ ಎಂಬ ಪದದ ಅರ್ಥವನ್ನು ತಿಳಿಸಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮದ್ಯ…

Read More

ವೈಚಾರಿಕ ಸಂತನ ಪುಣ್ಯ ಸ್ಮರಣೆಗೆ ಅಪಾರ ಭಕ್ತಗಣ | ಗೊರುಚಗೆ ಸಿದ್ದಲಿಂಗ ಶ್ರೀ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಂಥಗಳು ಲೋಕಾರ್ಪಣೆ ಉದಯರಶ್ಮಿ ದಿನಪತ್ರಿಕೆ ಗದಗ: ಕರುನಾಡು ಕಂಡ ಅಪರೂಪದ ಸಂತ ಲಿಂ, ತೋಂಟದ ಸಿದ್ದಲಿಂಗ ಶ್ರೀಗಳು ವೈಚಾರಿಕತೆ ಭಾವದ ಮೇರು ಪರ್ವತಕರು.ಅವರ ಮೌಲ್ಯಾಧಾರಿತ ನೇರ ನಡೆ,ನುಡಿಗಳು ಜನಮಾನಸದ ಹೃದಯದಲ್ಲಿಂದು ನೆಲೆಗೊಂಡಿವೆ. ಬಸವತತ್ವಕ್ಕೆ ತಮ್ಮ ಬದುಕನ್ನು ಮೀಸಲಿರಿಸಿ ಸ್ವಾಮಿತ್ವ ಪದಕ್ಕೆ ಘನತೆ,ಗೌರವ ತಂದುಕೊಟ್ಟಿದ್ದಾರೆ.ಪವಿತ್ರ ಕಾವಿಲೋಕದ ಶ್ರೇಷ್ಠತೆ ಹೆಚ್ಚಿಸಿದ್ದಾರೆ.ಸಿದ್ದಲಿಂಗ ಶ್ರೀಗಳು ಸೂರ್ಯನಂತೆ ಪ್ರಕಾಶಿಸುವ ಮಹಾನ ದಾರ್ಶನಿಕರು ಎಂದು ನಾಡೋಜ ಸಾಹಿತಿ ಡಾ.ಗೊ.ರು.ಚನ್ನಬಸಪ್ಪ ಹೇಳಿದರು.ಗದಗ ನಗರದ ತೋಂಟದಾರ್ಯ ಮಠದ ಆವರಣದಲ್ಲಿ ಸಿದ್ದಲಿಂಗ ಪೂಜ್ಯರ ಹೆಸರಿನಲ್ಲಿರುವ ಶಿವಾನುಭವ ಮಂಟಪದಲ್ಲಿ ಸೋಮವಾರ ಜರುಗಿದ ಲಿಂ,ತೋಂಟದ ಡಾ.ಸಿದ್ದಲಿಂಗ ಮಹಾಸ್ವಾಮಿಗಳವರ 6 ನೇ ಪುಣ್ಯಸ್ಮರಣೋತ್ಸವ,ಮರಣವೇ ಮಹಾನವಮಿ ಆಚರಣೆ, ಪ್ರಶಸ್ತಿ ಪ್ರದಾನ, ಗ್ರಂಥಗಳ ಬಿಡುಗಡೆ ಸಮಾರಂಭದಲ್ಲಿ 5 ಲಕ್ಷ ರೂಪಾಯಿ ನಗದು ಹಾಗೂ ಫಲಕ ಒಳಗೊಂಡ “ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ” ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಪೂಜ್ಯ…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ ಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಬದಲಾದ ನಮ್ಮ ಜೀವನಶೈಲಿಯಲ್ಲಿ ಮೊದಲೆಲ್ಲ ಸಾಮಾನ್ಯವಾಗಿದ್ದ ಸಂಸ್ಕೃತಿ ಸಂಸ್ಕಾರಗಳು ಅಪರೂಪವೆನಿಸುತ್ತಿವೆ. ಯಾವುದೇ ಒಂದು ವಸ್ತು, ವ್ಯಕ್ತಿ, ನಿತ್ಯ ಜೀವನದಲ್ಲಿ ಬಳಕೆಯಲ್ಲಿದ್ದರೆ ಮಾತ್ರ ಅವು ಜೀವಂತಿಕೆಯನ್ನು ಉಳಿಸಿಕೊಳ್ಳುತ್ತವೆ. ಇಲ್ಲದಿದ್ದರೆ, ಅವು ತಮ್ಮ ನೈಜತೆಯನ್ನು ಕಳೆದುಕೊಳ್ಳುತ್ತವೆ. ಬರಬರುತ್ತ ತಮ್ಮ ಪ್ರಾಮುಖ್ಯತೆಯನ್ನು ಕಳೆದುಕೊಂಡು ಚರಿತ್ರೆಯ ಪುಟಗಳನ್ನು ಸೇರಿಕೊಳ್ಳುತ್ತವೆ. ಕೆಲವೊಮ್ಮೆಯಂತೂ ಹೇಳ ಹೆಸರಿಲ್ಲದಂತೆ ಕಾಲಗರ್ಭದಲ್ಲಿ ಅಡಗಿ ಹೋಗುತ್ತವೆ. ಹಾಗೆಯೇ ಚೆಂದದ, ಗೆಲುವಿನ, ಸರಳ ಜೀವನವೆನ್ನುವುದು ಕೂಡ ತನ್ನ ಅರ್ಥವನ್ನು ಕಳೆದುಕೊಂಡು ಕೇವಲ ದಂತ ಕಥೆಗಳಲ್ಲಿ ಪಠ್ಯ ಪುಸ್ತಕಗಳಲ್ಲಿ ಬರುವ ಕಥೆಗಳಿಗೆ ಮಾತ್ರ ಸೀಮಿತವಾಗಿವೆ ಎಂಬುದು ನಮ್ಮ ಹಿರಿಯರ ಅಂಬೋಣ. ಇತ್ತೀಚಿಗಂತೂ ಗೊಣುಗುವುದೇ ಜೀವನದ ಪಾಡಾಗಿದೆ. ನಮ್ಮ ಬದುಕಿನಲ್ಲಿ ಅದು ಇಲ್ಲ ಇದು ಇಲ್ಲ. ಇದ್ದರೆ ಸಾಲುವುದಿಲ್ಲ. ಇಲ್ಲದ್ದು ಬೇಕಾಗುತ್ತದೆ. ಇದ್ದದ್ದು ಬೇಡವೆಂದು ಎಸೆಯಬೇಕೆನಿಸುತ್ತದೆ. ಒಟ್ಟಿನಲ್ಲಿ ಯಾವುದಕ್ಕೂ ಸಂತಸವಿಲ್ಲ. ಬೇಕು ಬೇಡಗಳ ಸಂತೆಯಲ್ಲಿ ದಿನವೂ ಅಳುವುದೇ ಬಾಳು ಎನಿಸಿದೆ. ನಮ್ಮ ಹಿರಿಯರೆಲ್ಲ ಇದ್ದುದ್ದರಲ್ಲೇ ಆನಂದದ ಸುದೀರ್ಘ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ೮ನೇ ವಾರ್ಡಿನ ತಡಪಟ್ಟಿ ನಿವೇಶನದಲ್ಲಿ ನೂತನವಾಗಿ ಪ್ರತಿಷ್ಠಾಪನೆಗೊಂಡ ಲಕ್ಷ್ಮೀದೇವಿಯ ಜಾತ್ರೆಯನ್ನು ಭಕ್ತಿ, ಭಾವದಿಂದ ಆಚರಿಸಲಾಯಿತು.ಪಟ್ಟಣದಲ್ಲಿ ಬುಧವಾರ ಸಾಂಪ್ರದಾಯಿಕ ಲಕ್ಷ್ಮೀ ದೇವಿಯ ಜಾತ್ರೆಯ ಅಂಗವಾಗಿ ಬೆಳಿಗ್ಗೆಯಿಂದಲೇ ಶಾಸ್ತ್ರೋಕ್ತ ಪೂಜೆ ಆರಂಭಗೊಂಡಿತು. ನಂತರ ದೇವಿಯ ಮೆರವಣಿಗೆ ದೇವಸ್ಥಾನದಿಂದ ಆರಂಭಗೊಂಡು ಮೇನ್ ಬಜಾರ್, ತೇರು, ಗದ್ದಿಗೆಮಠ ರಸ್ತೆ ಮೂಲಕ ಮೂಲ ದೇವಸ್ಥಾನ ತಲುಪಿತು. ನಂತರ ಮಹಾಪ್ರಸಾದ ಜರುಗಿತು.ಜಾತ್ರೆಯಲ್ಲಿ ಗುರುಪಾದ ಬುದ್ನಿ, ಗುರುರಾಜ್ ದೇಸಾಯಿ, ರಾಜಶೇಖರ ಅತನೂರ, ರಮೇಶ ಈಳಗೇರ, ಶ್ರೀನಿವಾಸ ಪಾಟೀಲ(ವರ್ಕಾನಳ್ಳಿ), ಸದಾನಂದ ಮಣೂರ ನೇತೃತ್ವ ವಹಿಸಿದ್ದರು.ಶ್ರೀಶೈಲ ದೇಸಾಯಿ, ಅಭಿಜಿತ ತಡಪಟ್ಟಿ, ಸೀಮಾ ಬುದ್ನಿ, ಲತಾ ತಟಪಟ್ಟಿ ಸ್ಮೀತಾ ಈಳಗೇರ, ಪ್ರೀತಿ ಅತನೂರ, ಪ್ರೀತಿ ಪಾಟೀಲ, ಮಂಜುಳಾ ಮಣೂರ, ರೇಖಾ ಅತನೂರ, ಕಸ್ತೂರಿ ದೇಸಾಯಿ, ಸೇರಿದಂತೆ ಮಕ್ಕಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಿತ್ತೂರು ರಾಣಿ ಚನ್ನöಮ್ಮಳ ೨೦೦ನೇ ವಿಜಯೋತ್ಸವದ ಅಂಗವಾಗಿ ರಾಜ್ಯದೆಲ್ಲೆಡೆ ಸಂಚರಿಸುತ್ತಿರುವ ವಿಜಯಜ್ಯೋತಿ ರಥಯಾತ್ರೆಯನ್ನು ಮಂಗಳವಾರ ರಾತ್ರಿ ತಾಲ್ಲೂಕು ಆಡಳಿತ ಹಾಗೂ ಸಮುದಾಯದ ಪ್ರಮುಖರು ಸ್ವಾಗತಿಸಿ, ಬಿಳ್ಕೋಟ್ಟರು.ಪಟ್ಟಣದ ಮಲ್ಲಯ್ಯನ ದೇವಸ್ಥಾನದ ಮುಂಭಾಗದಲ್ಲಿ ರಾತ್ರಿ ೧೧ ಗಂಟೆಗೆ ಆಗಮಿಸಿದ ವಿಜಯಜ್ಯೋತಿ ರಥಯಾತ್ರೆಗೆ ತಹಶೀಲ್ದಾರ ಪ್ರಕಾಶ ಸಿಂದಗಿ ಹಾಗೂ ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ ಅವರ ನೇತೃತ್ವದಲ್ಲಿ ಸ್ವಾಗತಿಸಿ, ರಾಣಿ ಚನ್ನಮ್ಮಳ ಪ್ರತಿಮೆಗೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಲಾಯಿತು.ಗ್ರಾಮಾಡಳಿತಾಧಿಕಾರಿ ಅನೀಲ ರಾಠೋಡ, ಬಾಬುಗೌಡ ಪಾಟೀಲ(ಜಿಡ್ಡಿಮನಿ), ಶಂಕರಗೌಡ ಪಾಟೀಲ (ಯರನಾಳ), ಕೆ.ಜಿ.ಭಾವಿಮನಿ, ಪಂಚಾಕ್ಷರಿ ಮಿಂಚನಾಳ, ಗೊಲ್ಲಾಳ ಬಿರಾದಾರ(ಹಿಟ್ನಳ್ಳಿ), ವಿರೇಶ ಕುದರಿ, ಶಿವನಗೌಡ ಪಾಟೀಲ(ಯರನಾಳ), ರಾಮು ದೇಸಾಯಿ, ಅಪ್ಪುಗೌಡ ಪಾಟೀಲ, ಪವನ ಪಾಟೀಲ ಸಹಿತ ಇತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣಕ್ಕೆ ಆಗಮಿಸಿದ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬಿಜೆಪಿ ಕಾರ್ಯಕರ್ತರು ಹಾಗೂ ರಾವುತರಾಯ , ಮಲ್ಲಯ್ಯ ಜಾತ್ರಾ ಕಮೀಟಿ ಸದಸ್ಯರು ಸನ್ಮಾನಿಸಿ ಬೀಳ್ಕೊಟ್ಟರು.ಪಟ್ಟಣದ ಮೂಲಕ ವಿಜಯಪುರಕ್ಕೆ ಪ್ರಯಾಣ ಬೆಳೆಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಮಂಗಳವಾರ ಬಿಜೆಪಿ ಕಾರ್ಯಕರ್ತರು ಮಲ್ಲಯ್ಯ ದೇವಸ್ಥಾನದ ಮುಂದೆ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿ.ಟಿ.ರವಿ ಮಲ್ಲಯ್ಯ ದೇವಸ್ಥಾನಕ್ಕೆ ತೆರಳಿ ರಾವುತರಾಯ, ಮಲ್ಲಯ್ಯನ ದರ್ಶನ ಪಡೆದರು. ನಂತರ ಜಾತ್ರಾ ಕಮೀಟಿಯಿಂದ ಸನ್ಮಾನ ಸ್ವೀಕರಿಸಿದರು.ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಸಹ ವಿಜಯಪುರಕ್ಕೆ ತೆರಳುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಯುವಜನತೆ ಇವರನ್ನು ಮಲ್ಲಯ್ಯ ದೇವಸ್ಥಾನದ ಮುಂದೆ ಸ್ವಾಗತಿಸಿ ಸನ್ಮಾನಿಸಿದರು.ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ಬಸವಶರಣ ಸಂಗಮ ಸೇವಾ ಸಮಿತಿ ಅಧ್ಯಕ್ಷ ಸಂಗಪ್ಪಣ್ಣ ತಡವಲ್, ಜಾತ್ರಾ ಸಮಿತಿ ಅಧ್ಯಕ್ಷ ವಿನೋದ ಪಾಟೀಲ, ಉಪಾಧ್ಯಕ್ಷ…

Read More

ಮುಡಾ ಅಧ್ಯಕ್ಷ ಕೆ.ಮರಿಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ | ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಭಾಗಿ? | ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯದ ತನಿಖೆ ಉದಯರಶ್ಮಿ ದಿನಪತ್ರಿಕೆ ನವದೆಹಲಿ: ಕೆ ಮರಿಗೌಡ ಅವರು ಮುಡಾ ಅಧ್ಯಕ್ಷ ಸ್ಥಾನದಿಂದ ಬುಧವಾರ ಕೆಳಗಿಳಿದ ಬೆನ್ನಲ್ಲೇ, ಭೂ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂರ್ಯ ಮುಳುಗುದರೊಳಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರಿಗೆ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಅಧ್ಯಕ್ಷ ಕೆ ಮರಿಗೌಡ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಮುಡಾ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ನಿಮ್ಮಲ್ಲಿ ಕಿಂಚಿತ್ತೂ ನೈತಿಕತೆ ಉಳಿದಿದ್ದರೆ ಕೂಡಲೇ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ. ಇಂದು ಸೂರ್ಯಾಸ್ತದೊಳಗೆ ರಾಜೀನಾಮೆ ನೀಡಿ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ, ಸಂಸದ ಸಂಬಿತ್ ಪಾತ್ರಾ ಒತ್ತಾಯಿಸಿದ್ದಾರೆ.ಮರಿಗೌಡ ಅವರ ರಾಜೀನಾಮೆ ಮತ್ತು ಸಿದ್ದರಾಮಯ್ಯ ಅವರ ಪತ್ನಿ ಅವರಿಗೆ ಮಂಜೂರು…

Read More

ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: 2024 ರಿಂದ 2029 ಅವಧಿಗೆ ನಡೆಯುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ ಪ್ರಯುಕ್ತ ಯಡ್ರಾಮಿ ತಾಲೂಕು ಶಾಖೆ ಕಾರ್ಯಕಾರಿ ಸಮಿತಿ ನಿರ್ದೇಶಕ ಸ್ಥಾನಕ್ಕೆ ಕಣಮೇಶ್ವರ ಪ್ರೌಡ ಶಾಲೆಯ ಶಿಕ್ಷಕ ನಿಂಗಣ್ಣ ದೊಡಮನಿ ಬುಧವಾರ ಪಟ್ಟಣದ ನೌಕರರ ಸಂಘದ ತಾಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಈ ವೇಳೆ ಶಿಕ್ಷಕರಾದ ಬಲವಂತ್ರಾಯ ಹಿರೇಗೌಡರ, ಪ್ರಭುಗೌಡ ದೇಸಾಯಿ, ಪ್ರಭು ಯಾಳಗಿ, ಉದಂಡಪ್ಪ ರತ್ನಾಕರ, ಸುಭಾಸ ಸಿಂಗ್ ರಜಪೂತ್, ಮಹೇಶ ಹಾವರೆಡ್ಡಿ, ಪ್ರವೀಣ ಬಿರಾದಾರ ಇದ್ದರು.

Read More