Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಯುದ್ದದಲ್ಲಿ ಗೆಲುವು ಸಾಧಿಸಿದ ೨೦೦ ನೇ ವಿಜಯೋತ್ಸವದ ಅಂಗವಾಗಿ ರಾಜ್ಯದ ಎಲ್ಲೆಡೆ ಸಂಚರಿಸುತ್ತಿರುವ ವಿಜಯ ಜ್ಯೋತಿ ರಥಯಾತ್ರೆಯನ್ನು ಮಂಗಳವಾರ ತಾಲ್ಲೂಕಾ ಆಡಳಿತ ದಿಂದ ಸ್ವಾಗತಿಸಿ ಮೆರವಣಿಗೆ ಮಾಡಲಾಯಿತು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡ ಐತಿಹಾಸಿಕ ಕಿತ್ತೂರು ಉತ್ಸವ -೨೦೨೪ ರ ೨೦೦ ನೇ ವಿಜಯೋತ್ಸವದ ವಿಜಯ ಜ್ಯೋತಿ ರಥ ಯಾತ್ರೆಯು ತಾಲೂಕಿನ ಹೊನಗನಹಳ್ಳಿ ಮಂಗಮ್ಮದೇವಿ ದೇವಸ್ಥಾನದ ಬಳಿ ತಹಶೀಲ್ದಾರ ಎಸ್ ಎಸ್ ನಾಯಕಲಮಠ ವೀರರಾಣಿ ಕಿತ್ತೂರು ಚೆನ್ನಮ್ಮಾಜಿಯ ಪುತ್ಥಳಿಗೆ ಪುಷ್ಪಹಾರ ಹಾಕಿ ಪೂಜೆ ಸಲ್ಲಿಸಿ ಭವ್ಯವಾಗಿ ಸ್ವಾಗತವನ್ನು ಕೋರಿ ವಿಜಯ ಜ್ಯೋತಿ ಯಾತ್ರಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ತಾಲೂಕಿನ ಗುರುಹಿರಿಯರು ಮುಖಂಡರು ವೀರಮಾತೆ ಕಿತ್ತೂರು ಚೆನ್ನಮ್ಮಳ ರಥಕ್ಕೆ ಮಾಲಾರ್ಪಣೆ ಮಾಡಿ ,ಪೂಜೆ ಸಲ್ಲಿಸಿ ಜಯ ಘೋಷ ಹಾಕಿದರು. ನಂತರ ೨೧೮ ರಾಷ್ಟ್ರೀಯ ಹೆದ್ದಾರಿ ಮೂಲಕ ವಿಜಯ ಜ್ಯೋತಿ ಯಾತ್ರೆ ರಥವು ಮಲಘಾಣ ಕ್ರಾಸ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಕೊಡಮಾಡುವ ರಾಜ್ಯ ಮಟ್ಟದ “ಜಾನಪದ ಪ್ರಪಂಚ ” ಪ್ರಶಸ್ತಿಗೆ ರಾಜ್ಯದ ಜನಪದ ಕಲಾವಿದರಿಂದ ಅರ್ಜಿ ಅಹ್ವಾನಿಸಲಾಗಿದೆ.ಇದೆ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಜಿಲ್ಲೆಗೆ ಒಬ್ಬರನ್ನು ಆಯ್ಕೆಮಾಡಲಾಗುವುದು. 5000 ರೂ ನಗದು,ಪ್ರಶಸ್ತಿ ಪತ್ರ, ನೆನಪಿನ ಸ್ಮರಣಿಕೆಯೊಂದಿಗೆ ಗೌರವಿಸಲಾಗುವುದು.ಜನಪದ ಮೂಲ ಕಲಾವಿದರು 55 ವರ್ಷ ತುಂಬಿರಬೇಕು. ತಮ್ಮ ಸೇವಾವದಿಯ ಫೋಟೊ, ಪ್ರಮಾಣಪತ್ರ, ಪತ್ರಿಕಾ ವರದಿ , ಶಿಫಾರಸ್ಸು ಪತ್ರ ಮತ್ತು ಆಧಾರ್ ಕಾರ್ಡ ಇತ್ಯಾದಿಗಳೊಂದಿಗೆ ದಿನಾಂಕ 20.10.2024 ರ ಒಳಗಾಗಿ ಜಿಲ್ಲಾಧ್ಯಕ್ಷರಿಗೆ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು.ಅರ್ಜಿ ಕಳಿಸುವ ವಿಳಾಸ: ಜಿಲ್ಲಾಧ್ಯಕ್ಷರು, ಕನ್ನಡ ಜಾನಪದ ಪರಿಷತ್ ವಿಜಯಪುರ.ರೇನಬೋ ಫೋಟೊ ಸ್ಟುಡಿಯೋ. ವಿಠ್ಠಲ ಮಂದಿರ ರಸ್ತೆ. ಕೆನರಾ ಬ್ಯಾಂಕ್ ಎದುರು. ಮಿಲನ ಬಾರ್ ಹಿಂದೆ, ವಿಜಯಪುರ ಇಲ್ಲಿಗೆ ಕಳಿಸಲು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಎಸ್ ಪಾಟೀಲ (ಪಡಗಾನೂರ) ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಹಿಕ್ಕನಗುತ್ತಿ ಗ್ರಾಮದ ಲಿಂಗಾಯತ ಮಠದಲ್ಲಿ ಅ.೧೭ರಂದು ನಡೆಯುವ ಹುಣ್ಣಿಮೆ ೮ನೆಯ ಮಾಸಿಕ ಶರಣಾನುಭವ ಹಾಗೂ ಘನ ಶರಣ ಹರಳಯ್ಯ-ಮಧುರಸ ಶೀಲವಂತ ಶರಣರ ಹುತಾತ್ಮರಾದ ದಿನ ಕಲ್ಯಾಣ ಕ್ರಾಂತಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಶಿಕ್ಷಕ, ಸಾಹಿತಿ ಕನ್ನಡ ಜನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಪಡಗಾನೂರ ಅವರಿಗೆ ಬಸವ ಶ್ರೀರಕ್ಷೆ ನೀಡಿ ಗೌರವಿಸಿ ಸನ್ಮಾನಿಸಲಾಗುವುದು ಎಂದು ಶ್ರೀಮಠದ ಪ್ರಭುಲಿಂಗ ಶರಣರು ತಿಳಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಸಾರಂಗಮಠದಲ್ಲಿ ಅ.೧೭ರಂದು ಸಾಯಂಕಾಲ ೬:೩೦ಗಂಟೆಗೆ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನದ ೩೩೫ನೆಯ ಸದ್ವೀಚಾರ ಗೋಷ್ಠಿ ಜರುಗಲಿದೆ.ಸಾನಿಧ್ಯವನ್ನು ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳುವರು. ಬ್ಯಾಕೋಡ ಗ್ರಾಮದ ನಿವೃತ್ತ ಜಿಲ್ಲಾ ಸಾಂಖಿಕಾಧಿಕಾರಿ ಹಾಗೂ ಶರಣ ಸಾಹಿತ್ಯ ಪರಿಷತ್ ಮಾಜಿ ತಾಲೂಕಾಧ್ಯಕ್ಷ ಚನ್ನಪ್ಪ ಕತ್ತಿ ಅತಿಥಿ ಲಲಿತ ಸಹಸ್ರನಾಮ ಜಪದ ಮಹತ್ವ ಕುರಿತು ಉಪನ್ಯಾಸ ನೀಡಲಿದ್ದಾರೆ.ಈ ವೇಳೆ ನೂತನವಾಗಿ ಅಖಿಲ ಭಾರತ ವೀರಶೈವ ಮಹಸಭಾ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು. ಮಲ್ಲಿಕಾರ್ಜುನ ಗಂಗಾಧರ ವಾರದ, ಕಮಲಾ ಮಲ್ಲಿಕಾರ್ಜುನ ಉಪ್ಪಿನ, ವಿಜಯಲಕ್ಷ್ಮಿ ಶಶಿಧರ ಮಠ ಹಾಗೂ ಬ್ಯಾಕೋಡ ಕತ್ತಿ ಪರಿವಾರದವರಿಂದ ದಾಸೋಹ ಸೇವೆ ನಡೆಯಲಿದೆ ಎಂದು ಚನ್ನವೀರ ಸ್ವಾಮೀಜಿ ಪ್ರತಿಷ್ಠಾನದ ಸಂಚಾಲಕರು ಪ್ರಕಟಣೆಯ ಮೂಲಕ ತಿಳಸಿದ್ದಾರೆ.

Read More

ನವದೆಹಲಿಯ ಕರ್ನಾಟಕ ವಾರ್ತಾ ಕೇಂದ್ರದ ವಾಹನ ಚಾಲಕರಾದ ವಿಜಯಕುಮಾರ್ ತೋರಗಲ್ ಅವರಿಗೆ ಆತ್ಮೀಯ ಬಿಳ್ಕೋಡುಗೆ ಉದಯರಶ್ಮಿ ದಿನಪತ್ರಿಕೆ ನವದೆಹಲಿ: ನವದೆಹಲಿಯ ಕರ್ನಾಟಕ ವಾರ್ತಾ ಕೇಂದ್ರದಲ್ಲಿ ಕಳೆದ ೧೨ ವರ್ಷಗಳಿಂದ ವಾಹನ ಚಾಲಕರಾಗಿ ಕಾರ್ಯನಿರ್ವಹಿಸಿ, ಬೆಳಗಾವಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕರ ಕಛೇರಿಗೆ ವರ್ಗಾವಣೆ ಹೊಂದಿರುವ ವಿಜಯಕುಮಾರ ತೋರಗಲ್ ಅವರನ್ನು ಆತ್ಮೀಯವಾಗಿ ಬಿಳ್ಕೋಡಲಾಯಿತು.ನಂ-೬ ಸರ್ದಾರ ಪಟೇಲ್ ಮಾರ್ಗದಲ್ಲಿರುವ ಕರ್ನಾಟಕ ಭವನದಲ್ಲಿನ ಕರ್ನಾಟಕ ವಾರ್ತಾ ಕೇಂದ್ರದ ಕಛೇರಿಯಲ್ಲಿ ಬುಧವಾರ ನಡೆದ ಬಿಳ್ಕೋಡುಗೆ ಕಾರ್ಯಕ್ರಮದಲ್ಲಿ ಪ್ರಭಾರ ಉಪ ನಿರ್ದೇಶಕಿ ಶ್ರೀಮತಿ ಎಂ ಶಾಲಿನಿ ಅವರು ಮಾತನಾಡಿ, ವಿಜಯ್ ಕುಮಾರ್ ಅವರು ಎಲ್ಲರೊಂದಿಗೆ ಅತ್ಯಂತ ಅತ್ಮೀಯತೆ ಹೊಂದಿದ್ದು, ಸಮಯ ಪರಿಪಾಲನೆಯೊಂದಿಗೆ ಶ್ರದ್ಧೆಯಿಂದ ಕಾರ್ಯನಿರ್ವಹಿಸುವ ಮೂಲಕ ಇತರ ಚಾಲಕರಿಗೆ ಮಾದರಿಯಾಗಿದ್ದು, ಇವರ ಮುಂದಿನ ವೃತ್ತಿ ಜೀವನ ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಅನ್ಯ ಕರ್ತವ್ಯದ ಮೇಲೆ ನವದೆಹಲಿಯಲ್ಲಿದ್ದ ವಿಜಯಪುರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿ ಅಮರೇಶ್ ದೊಡಮನಿ, ಕರ್ನಾಟಕ ಭವನದ…

Read More

ಅಂತಾರಾಷ್ಟ್ರೀಯ ಗ್ರಾಮೀಣ ಮಹಿಳೆಯರ ದಿನಾಚರಣೆಯಲ್ಲಿ ಮಹಿಳಾ ವಿವಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಹಾರ ಸರಪಳಿಯಲ್ಲಿ ಮತ್ತು ಆಹಾರ ಭದ್ರತೆಯನ್ನು ಒದಗಿಸುವಲ್ಲಿ ಮಹಿಳೆಯರ ಕೊಡುಗೆ ಗಣನೀಯವಾಗಿದೆ. ಕೃಷಿ ಮಹಿಳಾ ಪ್ರಧಾನವಾಗಿದೆ. ಆದರೆ ಕೃಷಿಯ ಮೇಲಿನ ಅಧಿಕಾರ ಮಾತ್ರ ಪುರುಷರ ಪ್ರಾಬಲ್ಯದಲ್ಲಿದೆ. ಇದನ್ನು ಮೀರಿ ಮಹಿಳೆಯರು ಕೃಷಿ ಉದ್ಯಮಶೀಲತೆ ಬೆಳೆಸಿಕೊಳ್ಳಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಗ್ರಾಮೀಣ ಮಹಿಳೆಯರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದ ಅವರು, ಮಹಿಳೆಯರು ಉದ್ಯಮಶೀಲತೆ ಬೆಳೆಸಿಕೊಳ್ಳಲು ಮತ್ತು ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ವಿಶ್ವವಿದ್ಯಾಲಯಗಳು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿಯಲ್ಲಿ ಹೆಚ್ಚು ತೊಡಗಿದ್ದಾರೆ. ಪ್ರತಿ ಕೃಷಿ ಸಂಬಂಧಿ ಚಟುವಟಿಕೆಯ ಹಿಂದೆ ಮಹಿಳೆಯ ಕೊಡುಗೆ ಇದೆ. ಆದ್ದರಿಂದ ವಿಶ್ವಸಂಸ್ಥೆ ಗ್ರಾಮೀಣ ಮಹಿಳೆಯರ ದಿನಾಚರಣೆಯ ಅಂಗವಾಗಿ ಗ್ರಾಮೀಣ ಮಹಿಳೆಯರು ಎಲ್ಲರಿಗಾಗಿ ಉತ್ತಮ…

Read More

ಜೆಎಸ್‌ಎಸ್ ಹಾಸ್ಪಿಟಲ್ಸ್ ವತಿಯಿಂದ ಪ್ಲಾಸ್ಟಿಕ್ ಮುಕ್ತ ಪರಿಸರ ಜಾಗೃತಿ ಜಾಥಾ ಹಾಗೂ ಯೋಗ ಶಿಬಿರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ಲಾಸ್ಟಿಕ್ ಇಂದು ಮಾನವನನ್ನು ಸಾವಿನ ಮನೆ ಬಾಗಿಲಿನಲ್ಲಿ ನಿಲ್ಲಿಸುತ್ತಿದೆ. ನಿತ್ಯ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆ ಇಲ್ಲದೆ ಬದುಕುವುದಕ್ಕೆ ಸಾಧ್ಯವೇ ಇಲ್ಲ ಎನ್ನುವ ಮಟ್ಟದಲ್ಲಿ ಇಂದು ಪ್ಲಾಸ್ಟಿಕ್ ಮಾನವನ ಜೀವನದೊಂದಿಗೆ ಬೆರೆತು ಹೋಗಿದ್ದು ಪ್ಲಾಸ್ಟಿಕ್ ನಮ್ಮನ್ನು ಕೊಲ್ಲುವ ಮೊದಲು ನಾವು ಪ್ಲಾಸ್ಟಿಕ್‌ನ್ನು ನಿರ್ಮೂಲ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಜೆಎಸ್‌ಎಸ್ ಆಸ್ಪತ್ರೆಯ ನರರೋಗ ವಿಭಾಗದ ಮುಖ್ಯಸ್ಥ ಅಂತರಾಷ್ಟ್ರೀಯ ಖ್ಯಾತಿಯ ಯೋಗಿಕ್ ನ್ಯೂರೋ ಸರ್ಜನ್ ಡಾ.ಮಯೂರ್ ಕಾಕು ಹೇಳಿದರು.ವಿಶ್ವ ಬೆನ್ನುಹುರಿ ದಿನದ ಅಂಗವಾಗಿ ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಆಯೋಜಿಸಲಾಗಿದ್ದ ಯೋಗಶಿಬಿರ ಹಾಗೂ ವಾಕೇಥಾನ್ ಉದ್ಧೇಶಿಸಿ ಮಾತನಾಡಿದ ಅವರು; ಪ್ರತಿ ವರ್ಷವೂ ಜಾಗತಿಕವಾಗಿ ೪೬೦ ಮಿಲಿಯನ್ ಮೆಟ್ರಿಕ್‌ಟನ್ ಪ್ಲಾಸ್ಟಿಕ್‌ನ್ನು ಉತ್ಪಾದಿಸಲಾಗುತ್ತಿದೆ. ಸುಮಾರು ೨೦ ಮಿಲಿಯನ್ ಮೆಟ್ರಿಕ್‌ಟನ್ ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ…

Read More

ವಿಜಯಪುರ: ನಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 33 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 186 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿವಿಧ ಕಾರಣಗಳಿಂದ ನಗರದ ವಿವಿಧೆಡೆ ಖಾಲಿ ಆಗಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್‌ 9 ಕೊನೆಯ ದಿನವಾಗಿದೆ. ಕಾರಣ ನ.9 ರೊಳಗಾಗಿ http:\karnemakaone.kar.nic.in\abcd\ ಈ ವೆಬ್ ಸೈಟ್ ದಲ್ಲಿ ಆನ್ ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ, ಅರ್ಜಿಸಿ, ಉದ್ಯೋಗ ಪಡೆದುಕೊಳ್ಳಬೇಕು. ಈ ವಿಷಯವನ್ನು ತಮ್ಮ ಸಂಬಂಧಿಕರು, ನೆರೆ-ಹೊರೆ ಯವರಿಗೆ ತಿಳಿಸುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ೫,೦೦೦ರೂಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕದ ಮಾಲೀಕರು ಹಾಗೂ ಸದರಿ ಘಟಕಗಳಲ್ಲಿ ಕಾರ್ಯನಿರ್ವಹಿಸುತತಿರುವ ಅರ್ಹ ಕಾರ್ಯನಿರತ ವಿದ್ಯುತ್ ಮಗ್ಗ ನೇಕಾರರನ್ನು ಈಗಾಗಲೇ ಕಳೆದ ಸಾಲಿನಲ್ಲಿ ನೇಕಾರ ಸಮ್ಮಾನ್ (ವಿದ್ಯುತ್ ಮಗ್ಗ) ಯೋಜನೆಯಡಿ ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿದ ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಮದ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ ಜಿಲ್ಲೆಯ ನೇಕಾರರು ನಿಗಧಿತ ಅರ್ಜಿ ನಮೂನೆಯೊಂದಿಗೆ ಘಟಕದ ಮಾಲೀಕರಿಂದ ಮುಚ್ಚಳಿಕೆ ಪತ್ರ, ಘಟಕದ ಮಾಲೀಕರ/ನೇಕಾರರ ಆಧಾರ್ ಲಿಂಕ್ ಬ್ಯಾಂಕ್ ಪಾಸ್‌ಬುಕ್ ಪ್ರತಿ, ವಿದ್ಯುತ್ ಮಗ್ಗ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಲಾನುಭವಿಯ ಫೋಟೋ, ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್. ಸಂಖ್ಯೆಯ ಇತ್ತಿಚೀನ ವಿದ್ಯುತ್ ಬಿಲ್, ಘಟಕದ ಉದ್ಯೋಗ ಆಧಾರ್/ಪಿ.ಎಂ.ಟಿ ಉದ್ದಿಮೆದಾರರ ಪರವಾನಿಗೆ ಪತ್ರದ ಪ್ರತಿ, ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ನೇಕಾರರ ವಿವರಗಳನ್ನು ಒಳಗೊಂಡ ಮಜೂರಿಯ ಪಾವತಿಯ ಪ್ರತಿಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಬುಧವಾರ ವಿಜಯಪುರ ಕಕರಸಾ ನಿಗಮದಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಶಕ್ತಿ ಯೋಜನೆಯಡಿಯಲ್ಲಿ ಉಚಿತವಾಗಿ ಪ್ರಯಾಣ ಮಾಡುವ ಕುರಿತು ಚಾಲಕ, ನಿರ್ವಾಹಕರಿಗೆ ಹಾಗೂ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮ ಹಾಗೂ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಸಾರಿಗೆ ಅಧಿಕಾರಿ ಡಿ.ಎ.ಬಿರಾದಾರ, ಸಹಾಯಕ ಸಂಚಾರ ವ್ಯವಸ್ಥಾಪಕರಾದ ಜೆ.ಕೆ.ಹುಗ್ಗೆಣ್ಣವರ, ಕೇಂದ್ರ ಬಸ್ ನಿಲ್ದಾಣ ವಿಜಯಪುರ ವಿಭಾಗದ ಸಿಬ್ಬಂದಿ ವರ್ಗದವರು ಹಾಗೂ ನವಸ್ಪೂರ್ತಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

Read More