Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಶುಪಾಲನ ಮತ್ತು ಪಶುವೈದ್ಯ ಇಲಾಖೆಯ ವತಿಯಿಂದ ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ವಿಜಯಪುರ ತಾಲೂಕಿನಲ್ಲಿ ದಿನಾಂಕ ೨೧-೧೦-೨೦೨೪ ರಿಂದ ೨೦-೧೧-೨೦೨೪ರ ವರೆಗೆ ೬ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ವಿಜಯಪುರ ತಾಲೂಕಿನ ರೈತರು ಲಸಿಕಾ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳಬೇಕು ಎಂದು ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ಬಿ.ಎಸ್. ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನಾಟಕ ಸರ್ಕಾರವು ಶ್ರೇಷ್ಠ ಸಹಕಾರಿಗಳನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸಹಕಾರಿ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಆಸಕ್ತರು ತಮ್ಮ ವ್ಯಯಕ್ತಿಕ ಪರಿಚಯ, ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಿವರಗಳ ಅಗತ್ಯ ದಾಖಲೆಗಳನ್ನು ದಿನಾಂಕ ೧೮-೧೦-೨೦೨೪ರ ಬೆಳಿಗ್ಗೆ ೧೧ ಗಂಟೆಯೊಳಗಾಗಿ ಸಹಕಾರ ಸಂಘಗಳ ಉಪ ನಿಬಂಧಕರು ವಿಜಯಪುರ ಕಚೇರಿಗೆ ಸಲ್ಲಿಸಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರ ಪ್ರಕಟಣೆ ತಿಳಿಸಿದೆ.
’ವಚನ ದರ್ಶನ’ ಕೃತಿ ಮತ್ತು ’ಶರಣರ ಶಕ್ತಿ’ ಚಲನಚಿತ್ರ ನಿಷೇಧಿಸಲು ಆಗ್ರಹಿಸಿ ಬಸವ ಭಕ್ತರಿಂದ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವ ಭಕ್ತರ ಭಾವನೆಗೆ ಧಕ್ಕೆ ತರುವ ’ವಚನ ದರ್ಶನ’ ಕೃತಿಯನ್ನು ಸರಕಾರ ಮುಟ್ಟುಗೋಲು ಹಾಕಬೇಕು ಹಾಗೂ ಶರಣ ಸಂಸ್ಕೃತಿಗೆ ಅಪಮಾನ ಮಾಡುವಂತಹ ’ಶರಣರ ಶಕ್ತಿ’ ಚಲನಚಿತ್ರವನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಮತ್ತು ಕಲ್ಬುರ್ಗಿ ಫೌಂಡೇಶನ್ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಹಾಗೂ ಗಂಗಾಧರ ಸಾಲಕ್ಕಿ ಮಾತನಾಡಿ, ಶರಣರ ಅನುಭವ ಮಂಟಪ ಪರಿಕಲ್ಪನೆಯನ್ನು ಬುಡಮೇಲು ಮಾಡುವ ರೀತಿಯಲ್ಲಿ ಕೆಲ ಸಂಪ್ರದಾಯವಾದಿಗಳು ಈ ’ವಚನ ದರ್ಶನ’ ಕೃತಿ ರಚಿಸಿದ್ದು, ಇದು ಲಿಂಗಾಯತ ಸಮಾಜ ಮತ್ತು ಬಸವ ಭಕ್ತರನ್ನು ದಿಕ್ಕು ತಪ್ಪಿಸುವ ಕೃತಿಯಾಗಿದೆ. ಇದರಿಂದ ಬಸವ ಭಕ್ತರಿಗೆ ನೋವಾಗಿದ್ದು, ಕಾರಣ ಶರಣರ ಅಭಿವ್ಯಕ್ತಿಗೆ ಕಳಂಕ ತರುವ ಈ ಕೃತಿಯನ್ನು ಕೂಡಲೇ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ನಿನ್ನೆ ನಡೆದ ವಕ್ಫ್ ಬೋರ್ಡ್ ವಿರುದ್ಧದ ಹೋರಾಟವು ರಾಜಕೀಯ ಪ್ರೇರಿತವಾಗಿದ್ದು, ಜನರನ್ನು ದಿಕ್ಕು ತಪ್ಪಿಸುವುದಾಗಿದೆ ಎಂದು ಕಾಂಗ್ರೆಸ್ ಮುಖಂಡರು ಗುಡುಗಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ್ ಮುಷರಿಫ್ ಹಾಗೂ ಅಬ್ದುಲ್ ರಜಾಕ ಹೊರ್ತಿ ಅವರು,ಹತ್ತು ಸಾವಿರ ಎಕರೆಭೂಮಿ ಫ್ಲಾಗಿಂಗ್ ಮಾಡಿ ಸರ್ವೆ ಮಾಡಲು ನಮ್ಮ ವಕ್ಸ್ ಮಂತ್ರಿ ಜಮೀರ ಅಹಮದ್ಖಾನ್ ರವರು ಹೇಳಿದ್ದಾರೆ. ಆದರೆ ಇದನ್ನೇ ಒಂದು ನೆಪವಾಗಿ ಇಟ್ಟುಕೊಂಡು ನಗರದ ಬಿಜೆಪಿ ಶಾಸಕ ಯತ್ನಾಳ್ ಇದನ್ನು ಸಾರ್ವಜನಿಕರಲ್ಲಿ ತಪ್ಪಾಗಿ ಬಿಂಬಿಸುತ್ತಿರುವುದು ಖಂಡನಿಯ. ಅವರ ಭಾಷೆ ನಡೆ-ನುಡಿ ನೋಡಿದರೆ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹುನ್ನಾರಮಾಡುತ್ತಿದ್ದಾರೆ ಎಂದೆನಿಸುತ್ತಿದೆ ಎಂದರು.ವಕ್ಸ್ ಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಿರುವ ಸರ್ವೆ ವಿಷಯದಲ್ಲಿ ಶೇಕಡ 98% ರಷ್ಟು ನಮ್ಮ ಮುಸ್ಲಿಂ ಸಮಾಜದ 2 ಗುಂಪುಗಳ ಅಥವಾ ಇಬ್ಬರು ಮುತುವಲ್ಲಿಗಳಲ್ಲಿ ತಂಟೆತಕರಾರುಗಳಿವೆ ಅವುಗಳನ್ನು ಕ್ಲಿಯರ್ ಮಾಡಬೇಕಾಗಿದೆ. ಈ ವಿಷಯವಾಗಿ ಸಚಿವರು ನಿರ್ದೇಶನ ನೀಡಿದ್ದಾರೆ. ಆದರೆ ಶಾಸಕ ಯತ್ನಾಳ್ ಇದರಲ್ಲಿಮುಸ್ಲಿಂ ಮಂತ್ರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಅಧಿನಿಯಮ ೨೦೦೫ ಅಡಿ ( ನರೇಗಾ ) ೨೦೨೫-೨೦೨೬ನೇ ಸಾಲಿನ ಕ್ರಿಯಾ ಯೋಜನೆ ಅಕ್ಟೋಬರ್ ೨ ರಿಂದ ಒಂದು ತಿಂಗಳುಗಳ ಕಾಲ ಸಿದ್ಧಪಡಿಸಲಾಗುತ್ತಿದ್ದು ಸಿಂದಗಿ ತಾಲೂಕಿನ ರೈತಾಪಿ ವರ್ಗ, ಮತ್ತು ಕೂಲಿ ಕಾರ್ಮಿಕರು ಇದರ ಸದುಪಯೋಗ ಪಡೆಯಬೇಕೆಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮು. ಈ. ಅಗ್ನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಾಹಿತಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮ ದಡಿ (Iಇಅ) ಉದ್ಯೋಗ ಖಾತ್ರಿ ನಡೆಗೆ ಸಬಲತೆಯಡಿಗೆ ಅಭಿಯಾನದ ಮೂಲಕ ಮುಂಚಿತವಾಗಿ ಆರ್ಥಿಕ ವರ್ಷದ ಕ್ರಿಯಾಯೋಜನೆಯನ್ನು ಈಗಾಗಲೇ ಸಿದ್ಧಪಡಿಸಲಾಗುತ್ತಿದ್ದು, ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ವಾರ್ಡ್ ಸಭೆ ನಂತರ ಗ್ರಾಮ ಸಭೆಯಲ್ಲಿ ಅನುಮೋದಿಸಿದ ವಾರ್ಷಿಕ ಕ್ರಿಯಾ ಯೋಜನೆಯನ್ನು ಡಿಸೆಂಬರ್ ೫ರೊಳಗೆ ತಾಲೂಕು ಪಂಚಾಯಿತಿಗೆ ಸಲ್ಲಿಸುವಂತೆ ತಾಲೂಕಿನ ಎಲ್ಲಾ ೧೬ ಗ್ರಾಮ ಪಂಚಾಯತಗಳಿಗೆ ಈ ಮೂಲಕ ತಿಳಿಸಲಾಗುವುದು ಹಾಗೂ ಕ್ರೂಡಿಕೃತ ಕ್ರಿಯಾಯೋಜನೆಯನ್ನು ಜಿಲ್ಲಾ ಪಂಚಾಯತಿಗೆ ಡಿಸೆಂಬರ್ ೨೦ರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೩-೨೪ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ(ಅಧಿಕಾರಿಗಳನ್ನು ಹೊರತು ಪಡಿಸಿ) ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಗಳನ್ನು ಉಪ ನಿರ್ದೇಶಕರ ಕಾರ್ಯಲಯ, ಸೈನಿಕ ಕಲ್ಯಾಣ ಮತ್ತು ಪುನವರ್ಸತಿ ಇಲಾಖೆಯಿಂದ ಪಡೆದುಕೊಂಡು ದಿನಾಂಕ ೩೧-೧೦-೨೦೨೪ರೊಳಗಾಗಿ ತ್ರಿಪ್ರತಿಯಲ್ಲಿ ಸಲ್ಲಿಸಬೇಕು ಎಂದು ಸೈನಿಕ ಕಲ್ಯಾಣ ಮತ್ತು ಪುನವರ್ಸತಿ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಅರ್ಕಟಶಾಹ ದರ್ಗಾ ಇವರ ಸಹಯೋಗದಲ್ಲಿ ದಿನಾಂಕ ೧೯-೧೦-೨೦೨೪ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ನಗರದ ಜೆ.ಎಂ.ರಸ್ತೆಯಲ್ಲಿರುವ ಅರ್ಕಟಶಾಹ ದರ್ಗಾದ ಆವರಣದಲ್ಲಿ ಸ್ಥಳೀಯ ಖಾಸಗಿ ಕಂಪನಿಗಳಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ.ಈ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಐ.ಟಿ.ಐ. ಹಾಗೂ ಯಾವುದೇ ಪದವಿ ಪಾಸಾದಂತಹ ೩೫ ವರ್ಷ ವಯಸ್ಸಿನೊಳಗಿನ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಶಾಲಾ ದಾಖಲಾತಿಗಳು, ಆಧಾರ ಕಾರ್ಡ, ಬಯೋಡೆಟಾಗಳ ೪ಸೆಟ್ ಝರಾಕ್ಸನೊಂದಿಗೆ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ: ೯೭೩೯೬೧೯೬೯೪, ೯೯೪೫೦೦೦೭೯೩ ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ | ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾರ್ವಜನಿಕ ಉಪಯೋಗಕ್ಕಾಗಿ ಕಾಯ್ದಿರಿಸಿದ ನಿವೇಶನಗಳನ್ನು ಸ್ವಂತ ಕಟ್ಟಡ ಕಟ್ಟಲು ಜಾಗದ ಸಮಸ್ಯೆ ಇರುವ ಸರ್ಕಾರಿ ಶಾಲೆ, ಕಚೇರಿ, ಆಸ್ಪತ್ರೆಗಳನ್ನು ಗುರುತಿಸಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಹಂಚಿಕೆ ಮಾಡಲು ಪ್ರಥಮಾದ್ಯತೆ ನೀಡಬೇಕು ಎಂದು ಬೃಹತ್ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ,ಪಾಟೀಲ ಅವರು ಸೂಚಿಸಿದರು.ಸೋಮವಾರ ನಗಾರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದಲ್ಲಿ ಹಲವಾರು ಇಲಾಖೆಗಳಿಗೆ ಕಟ್ಟಡ ಕಟ್ಟಲು ಸ್ವಂತ ಜಾಗದ ಕೊರತೆಯಿದ್ದು, ಅವುಗಳನ್ನು ಗುರುತಿಸಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆ ಮಾಡಲು ಪ್ರಥಮಾಧ್ಯತೆ ನೀಡಬೇಕು. ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ ಸಂಘ-ಸಂಸ್ಥೆಗಳು ಯಾವ ಉದ್ದೇಶಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂಬುದನ್ನು ಖಚಿತ ಪಡಿಸಿಕೊಂಡು, ನಿವೇಶನವನ್ನು ಬೇರೆ ಕಾರಣಕ್ಕಾಗಿ ಬಳಸಿಕೊಳ್ಳದಂತೆ ನಿಯಮಾನುಸಾರ ಉದ್ದೇಶಕ್ಕಾಗಿ ನಿವೇಶನ ಬಳಸುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.ವಿಜಯಪುರ ನಗರಕ್ಕೆ…
ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ಐತಿಹಾಸಿಕ ಹಿನ್ನೆಲೆಯ ರಾವುತರಾಯ-ಮಲ್ಲಯ್ಯರ ಜಾತ್ರಾ ಮಹೋತ್ಸವ ಸೋಮವಾರ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭಕ್ತಿ ಭಾವದೊಂದಿಗೆ ಆರಂಭವಾಯಿತು.ಪಟ್ಟಣದ ರಾವುತರಾಯ ಅಶ್ವಾರೂಢನಾಗಿ ತೆರೆದ ಬಂಡಿಯಲ್ಲಿ ಆಸೀನನಾಗಿ ನಸುಕಿನ ಐದು ಗಂಟೆಗೆ ಮೂಲ ದೇವಸ್ಥಾನದಿಂದ ಹೊರಟು ಬೆಳಗಿನ ೮ ಗಂಟೆಗೆ ಮಾನೆದೊಡ್ಡಿ ಎಂದೇ ಕರೆಯಲಾಗುವ ಸ್ಥಳದಲ್ಲಿ ನೂರಾರು ಭಕ್ತರು ಕಾಲ್ನಡಿಯಿಂದ ಹೊತ್ತು ತಂದ ವಿವಿಧ ಬಗೆಯ ಹೂ,ಹಾರಗಳಿಂದ ಪುಷ್ಪಾಲಂಕಾರಗೊಂಡನು. ಇದನ್ನು ಹೂ ಮುಡಿಯುವುದು ಎಂದೇ ಕರೆಯಲಾಗುತ್ತದೆ. ನಂತರ ಶೀಡಗಟ್ಟಿ ಎಂಬ ಸ್ಥಳದಲ್ಲಿ ಕಾರಣಿಕರು ಮುಂಬರುವ ಭವಿಷ್ಯದ ಕುರಿತಾಗಿ ಹೇಳಿಕೆಗಳು ಹೇಳಲ್ಪಟ್ಟವು.ನಂತರ ರಾವುತರಾಯನ ಬಂಡಿ ಮೆರವಣಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬನ್ನಿ ಮಹಾಕಾಳಿ ವೃಕ್ಷಕ್ಕೆ ತೆರಳಿ ಬನ್ನಿ ಮುಡಿದು ಮಲ್ಲಯ್ಯನ ದೇವಸ್ಥಾನ ತಲುಪಿತು. ಆನಂತರ ರಾವುತರಾಯ-ಗಂಗಿಮಾಳಮ್ಮರ ಸಾಂಪ್ರದಾಯಿಕ ಮದುವೆಯ ರೂಪಕ ಜರುಗಿತು. ಸತತ ಐದು ದಿನಗಳ ಕಾಲ ಜರುಗುವ ಜಾತ್ರಾ ಮಹೋತ್ಸವದ ಮೊದಲ ದಿನ ರಾವುತರಾಯನು ಮಲ್ಲಯ್ಯನ ದೇವಸ್ಥಾನದಲ್ಲಿ ಆಸೀನನಾಗುವುದರೊಡನೆ ಜಾತ್ರೆಗೆ ಚಾಲನೆ ದೊರಕಿತು. ಜಾತ್ರೆಯ ಮೊದಲ ದಿನ ಆಗಮಿಸಿದ ಅಸಂಖ್ಯಾತ ಭಕ್ತರಿಗೆ…
ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಹಾಗೂ ಕಲ್ಬುರ್ಗಿ ಫೌಂಡೇಶನ್ ದ ಶಿವಲಿಂಗಪ್ಪ ಕಲಬುರ್ಗಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಲಿಂಗಾಯತ ಸಮಾಜ ಮತ್ತು ಬಸವ ಭಕ್ತರನ್ನು ದಿಕ್ಕು ತಪ್ಪಿಸುವ ’ವಚನ ದರ್ಶನ’ ಕೃತಿಯ ಮುಟ್ಟುಗೋಲಿಗೆ ಹಾಗೂ ವಿವಾದಿತ ಶರಣರ ಚರಿತ್ರೆಗೆ ಮಸಿ ಬಳೆಯುವ ರೀತಿಯಲ್ಲಿ ನಿರ್ಮಿಸಿದ ’ಶರಣರ ಶಕ್ತಿ’ ಚಲನಚಿತ್ರ ನಿಷೇಧಕ್ಕೆ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಸಿಂದಗಿ-ವಿಜಯಪುರದ ಕಲ್ಬುರ್ಗಿ ಫೌಂಡೇಶನ್ ಆಗ್ರಹಿಸಿವೆ.ಈ ಕುರಿತು ಸೋಮವಾರ ಜಂಟಿ ಪ್ರಕಟಣೆಯಲ್ಲಿ ತಿಳಿಸಿರುವ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಹಾಗೂ ಕಲ್ಬುರ್ಗಿ ಫೌಂಡೇಶನ್ ದ ಶಿವಲಿಂಗಪ್ಪ ಕಲಬುರ್ಗಿ ಅವರು, ಅಯೋಧ್ಯಾ ಪ್ರಕಾಶನದವರು ಸದಾಶಿವ ಸ್ವಾಮಿಗಳ ಪ್ರಧಾನ ಸಂಪಾದಕತ್ವದಲ್ಲಿ ಹೊರ ತಂದ ’ವಚನ ದರ್ಶನ’ ಎಂಬ ಕೃತಿಯಲ್ಲಿ ಕೆಲ ಸಂಪ್ರದಾಯವಾದಿ ಶಕ್ತಿಗಳು ಇಂದು ವಚನ ಸಾಹಿತ್ಯವನ್ನು ತಮ್ಮ ಅನಕೂಲಕ್ಕೆ ತಕ್ಕಂತೆ ಖೋಟಾ ವಚನ ಪ್ರಕ್ಷಿಪ್ತ ವಚನ ಮತ್ತು ಸಂಸ್ಕೃತ ಉಕ್ತಿಗಳನ್ನು…
