Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ತ್ರೀ ಮತ್ತು ಪ್ರಸೂತಿ ಚಿಕಿತ್ಸಾ, ಶಸ್ತ್ರಚಿಕಿತ್ಸಾ ಹಾಗೂ ಕಿವಿ, ಮೂಗು, ಗಂಟಲು ವಿಭಾಗದ ವತಿಯಿಂದ ಹುಬ್ಬಳ್ಳಿ ಎಚ್.ಸಿ.ಜಿ ಕ್ಯಾನ್ಸರ್ ಸೆಂಟರ್ ಸಹಯೋಗದಲ್ಲಿ ಅಕ್ಟೋಬರ್ 15 ರಂದು ಮಂಗಳವಾರ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಯಲಿದೆ.ಇಂದು ಬೆ.10 ಗಂಟೆಯಿಂದ ಸಂ.4 ಗಂಟೆವರೆಗೆ ನಡೆಯಲಿರುವ ಈ ಶಿಬಿರದಲ್ಲಿ ನುರಿತ ತಜ್ಞವೈದ್ಯರಾದ ಡಾ. ವಿಜಯಾ ಪಾಟೀಲ, ಡಾ. ರಾಜಶ್ರೀ ಯಳಿವಾಳ, ಡಾ. ಶ್ರೀಕಾಂತ ರವಿಚಂದ್ರನ, ಡಾ. ಸಂಜೀವ ಎಸ್. ರಾಠೋಡ, ಡಾ. ಶೈಲೇಶ ಕನ್ನೂರ ಮತ್ತು ಡಾ. ಶಿವಶಂಕರ ಆಜೂರ ಉಪಸ್ಥಿತರಿರಲಿದ್ದಾರೆ.ಸ್ತನ ಕ್ಯಾನ್ಸರ್ ತಡೆಗಟ್ಟುವ ಕುರಿತು ಮುನ್ನೆಚ್ಚರಿಕಾ ಕ್ರಮಗಳು, ಅಲ್ಲದೇ, ಗರ್ಭಾಶಯ, ಗರ್ಭಕಂಠ ಹಾಗೂ ಬಾಯಿಯ ಕ್ಯಾನ್ಸರಗಳ ಉಚಿತ ತಪಾಸಣೆ ನಡೆಸಲಿದ್ದಾರೆ. ವೈದ್ಯರ ಶಿಫಾರಸ್ಸಿನಂತೆ ಅಗತ್ಯವಿರುವ ರೋಗಿಗಳಿಗೆ ಮೆಮೋಗ್ರಾಮ, ಪ್ಯಾಪ್ ಸ್ಮೇರ್ ತಪಾಸಣೆಗಳನ್ನು ರಿಯಾಯಿತಿ ದರದಲ್ಲಿ ಮಾಡಲಿದ್ದಾರೆ.ಹೆಚ್ಚಿನ ಮಾಹಿತಿಗಾಗಿ 9591682224, 9845649354, 6366786003 ಸಂಪರ್ಕಿಸಬಹುದು ಎಂದು ಡಾ.…
ಐದು ಜನ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೋರ್ಸಿಗೆ ಅಗತ್ಯವಾಗಿರುವ ಸಂಪೂರ್ಣ ಆರ್ಥಿಕ ನೆರವು ನೀಡಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಶುಲ್ಕ ಭರಿಸಲಾಗದೆ ಹಣದ ಸಮಸ್ಯೆ ಎದುರಿಸುತ್ತಿದ್ದ ಐದು ಜನ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗ ಕೋರ್ಸಿಗೆ ಅಗತ್ಯವಾಗಿರುವ ಸಂಪೂರ್ಣ ಆರ್ಥಿಕ ನೆರವು ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ.ಸೋಮವಾರ ವಿಜಯಪುರದಲ್ಲಿರುವ ಗೃಹ ಕಚೇರಿಯಲ್ಲಿ ತಿಕೋಟಾ ತಾಲೂಕಿನ ಬಾಬಾನಗರದ ವಿಶಾಲ ರಾಯಗೊಂಡ ಕೋರೆಗಾಂವ, ಅರಕೇರಿಯ ಕರಣ ಪಂಡಿತ ಸಿಂಧೆ ಮತ್ತು ಯಶವಂತ ಮಾರುತಿ ಮೋಹಿತೆ, ಬಬಲೇಶ್ವರ ತಾಲೂಕಿನ ಕಾರಜೋಳ ತಾಂಡಾದ ಅಜೀತ ಪರಶುರಾಮ ರಾಠೋಡ ಹಾಗೂ ಕಂಬಾಗಿಯ ರಾಜಶ್ರೀ ಮಲ್ಲಿಕಾರ್ಜುನ ಮಠ ಅವರಿಗೆ ಸಚಿವರು ಮೊದಲ ಕಂತಾಗಿ ಎಂ. ಬಿ. ಬಿ. ಎಸ್. ಕೋರ್ಸಿನ ಮೊದಲ ವರ್ಷದ ಬೋಧನೆ ಶುಲ್ಕ, ಹಾಸ್ಟೆಲ್ ಶುಲ್ಕ…
ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಹಾಗೂ ಕಲ್ಬುರ್ಗಿ ಫೌಂಡೇಶನ್ ದ ಶಿವಲಿಂಗಪ್ಪ ಕಲಬುರ್ಗಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಲಿಂಗಾಯತ ಸಮಾಜ ಮತ್ತು ಬಸವ ಭಕ್ತರನ್ನು ದಿಕ್ಕು ತಪ್ಪಿಸುವ ’ವಚನ ದರ್ಶನ’ ಕೃತಿಯ ಮುಟ್ಟುಗೋಲಿಗೆ ಹಾಗೂ ವಿವಾದಿತ ಶರಣರ ಚರಿತ್ರೆಗೆ ಮಸಿ ಬಳೆಯುವ ರೀತಿಯಲ್ಲಿ ನಿರ್ಮಿಸಿದ ’ಶರಣರ ಶಕ್ತಿ’ ಚಲನಚಿತ್ರ ನಿಷೇಧಕ್ಕೆ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಸಿಂದಗಿ-ವಿಜಯಪುರದ ಕಲ್ಬುರ್ಗಿ ಫೌಂಡೇಶನ್ ಆಗ್ರಹಿಸಿವೆ.ಈ ಕುರಿತು ಸೋಮವಾರ ಜಂಟಿ ಪ್ರಕಟಣೆಯಲ್ಲಿ ತಿಳಿಸಿರುವ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಹಾಗೂ ಕಲ್ಬುರ್ಗಿ ಫೌಂಡೇಶನ್ ದ ಶಿವಲಿಂಗಪ್ಪ ಕಲಬುರ್ಗಿ ಅವರು, ಅಯೋಧ್ಯಾ ಪ್ರಕಾಶನದವರು ಸದಾಶಿವ ಸ್ವಾಮಿಗಳ ಪ್ರಧಾನ ಸಂಪಾದಕತ್ವದಲ್ಲಿ ಹೊರ ತಂದ ’ವಚನ ದರ್ಶನ’ ಎಂಬ ಕೃತಿಯಲ್ಲಿ ಕೆಲ ಸಂಪ್ರದಾಯವಾದಿ ಶಕ್ತಿಗಳು ಇಂದು ವಚನ ಸಾಹಿತ್ಯವನ್ನು ತಮ್ಮ ಅನಕೂಲಕ್ಕೆ ತಕ್ಕಂತೆ ಖೋಟಾ ವಚನ ಪ್ರಕ್ಷಿಪ್ತ ವಚನ ಮತ್ತು ಸಂಸ್ಕೃತ ಉಕ್ತಿಗಳನ್ನು…
ಲೇಖನ:- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆ, ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಇಡೀ ವಿಶ್ವವೇ ಕೊರೋನಾ ಮಹಾಮಾರಿಗೆ ತತ್ತರಿಸಿ ಈಗಷ್ಟೇ ಈ ಜಾಡ್ಯದಿಂದ ನಿಧಾನವಾಗಿ ಹೊರಗೆ ಬರುತ್ತಿದೆ. ಇಂದು ಜನರ ಜೀವನ ಶೈಲಿಯಲ್ಲಿ ಬಹಳಷ್ಟು ಕೊರೋನಾ ಕಾರಣದಿಂದ ಬದಲಾವಣೆಗಳಾಗಿದ್ದು, ಇದುವರೆಗೂ ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ರಾಜಾರೋಷವಾಗಿ ಅಲೆದಾಡುತ್ತಿದ್ದ ಮಂದಿ ಇಂದು ಮನೆಯಿಂದ ಹೊರಗೆ ಕಾಲಿಡುವ ಮೊದಲು ಹಲವು ಬಾರಿ ಯೋಚಿಸುವಂತೆ ಆಗಿದೆ. ಮನೆಯೊಳಗೆ ಕುಳಿತು ಉಂಟಾಗುವ ಏಕತಾನತೆಯನ್ನು ಕಳೆಯಲು ಈ ಎಲ್ಲಾ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬಹುದು.ವಿವಿಧ ಜರ್ನಲ್ ಹಾಗೂ ಬ್ಲಾಗ್ಗಳನ್ನು ಪ್ರಾರಂಭಿಸಬಹುದು: ನಿಮಗೆ ಬರವಣಿಗೆಯ ಕ್ಷೇತ್ರದಲ್ಲಿ ಆಸಕ್ತಿಯಿದ್ದರೆ, ನಿಮ್ಮ ಜೀವನದ ಸವಿನೆನಪುಗಳು, ಅಜ್ಜಿ ಹೇಳಿದ ಹಳೆಯ ಕಥೆಗಳು ಮತ್ತು ವಿಶೇಷ ಸನ್ನಿವೇಶಗಳು, ವಿಶೇಷ ಸಾಧನೆಗಳು, ಬಾಲ್ಯದ ಅನುಭವಗಳು ಮತ್ತು ರೋಚಕ ಸಂದರ್ಭಗಳನ್ನು ಬರೆದು ಅವುಗಳನ್ನು ನಿಮ್ಮದೇ ಆದ ಜರ್ನಲ್ ಯಾ ಬ್ಲಾಗ್ಗಳಲ್ಲಿ ಆನ್ಲೈನ್ ಮೂಲಕ ಮತ್ತು ಕೂ ಅಪ್ಲಿಕೇಶನ್ ಮೂಲಕ ಸಂಚಿಕೆಗಳಂತೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಾಡಿನಾದ್ಯಂತ ದಸರಾ ಹಬ್ಬವೂ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ ಎಂದು ಪಿಎಸ್ಐ ಆರೀಫ್ ಮುಷಾಪುರಿ ಹೇಳಿದರು,ಪಟ್ಟಣದ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಆಯುಧ ಪೂಜೆ ಜರುಗಿಸಿ ಮಾತನಾಡಿದ ಅವರು, ನವರಾತ್ರಿ ಹಬ್ಬದ ೯ನೆಯ ದಿನದಂದು ಆಯುಧಗಳಿಗೆ ಪ್ರಜೆ ಮತ್ತು ಗೌರವವನ್ನು ಸಲ್ಲಿಸುವುದಕ್ಕೆ ಆಯುಧ ಪೂಜೆಯನ್ನು ನೇರವೇರಿಸಲಾಗಿತ್ತದೆ ಎಂದು ಹೇಳಿದರು.ಯಾವಾಗಲೂ ಜನಜಂಗುಳಿ, ಕೇಸ್, ತಕರಾರು ಎಂದಿರುವ ಪೊಲೀಸ್ ಠಾಣೆ ಬನ್ನಿ, ಬಂಗಾರದ ಕಡ್ಡಿ, ಬಲೂನ್, ಮಾಲೆ ಸೇರಿದಂತೆ ವಿವಿಧ ಅಲಂಕಾರಗಳಿಂದ ಕಂಗೊಳಿಸಿತು.ಇದೇ ಸಂದರ್ಭದಲ್ಲಿ ವಾಹನ, ಶಸ್ತಾçಸ್ತç, ಕೈಕೋಳ, ಗಣಕಯಂತ್ರ ಹೀಗೆ ಠಾಣೆಯಲ್ಲಿರುವ ಆಯುಧಗಳಿಗೆ ಸಿಪಿಐ ನಾನಾಗೌಡ ಪೊಲೀಸಪಾಟೀಲ, ಪಿಎಸ್ಐ ಆರೀಫ್ ಮುಷಾಪುರಿ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಪೂಜೆ ಸಲ್ಲಿಸಿ ಸಂಭ್ರಮಿಸಿದರು.ಪೂಜಾ ಕಾರ್ಯಕ್ರಮದಲ್ಲಿ ಸಿಪಿಐ, ಪಿಎಸ್ಐ ಸಿಬ್ಬಂದಿಗಳು ಕುಟುಂಬವು ಸಹ ಭಾಗವಹಿಸಿದ್ದು ವಿಶೇಷವಾಗಿತ್ತು. ಸುರೇಶ ಕೊಂಡಿ, ಗೊಲ್ಲಾಳ ಈಜೇರಿ, ಪರಶುರಾಮ ಹಂಡರಗಲ್ಲ, ಪ್ರಭುಗೌಡ, ಶೈಲಶ್ರೀ ನ್ಯಾಮಣ್ಣವರ, ಬಸವರಾಜ ಪಟೇದ ಸೇರಿದಂತೆ ಅನೇಕರಿದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗೊಲ್ಲರ ಸಮುದಾಯದಲ್ಲಿ ಶಿಕ್ಷಣದ ಕೊರತೆ ಇರಬಹುದು. ಆದರೆ ಸಂಸ್ಕಾರ ಮತ್ತು ಸಂಸ್ಕೃತಿಯ ಕೊರತೆಯಿಲ್ಲ. ಧರ್ಮದ ಬಗ್ಗೆ ಅಪಾರ ಅಭಿಮಾನ ಮತ್ತ ನಂಬಿಕೆಯುಳ್ಳ ಸಮಾಜ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ರೇಣುಕಾ ನಗರದಲ್ಲಿ ಶುಕ್ರವಾರ ಸಾಯಂಕಾಲ ಹಮ್ಮಿಕೊಂಡ ರೇಣುಕಾದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭವನ್ನು ಶಾಸಕ ಅಶೋಕ ಮನಗೂಳಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಈ ಕೂಡ ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಷಯ. ಯಾದವ (ಗೊಲ್ಲರ) ಸಮಾಜವನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಯುವಕರ ಶ್ರಮ ಬಹಳವಿದೆ. ಜಾತ್ರೆ, ಪುರಾಣ, ಪ್ರವಚನ ಇಂದು ನಿನ್ನೆಯದದಲ್ಲ ಹಿಂದಿನ ಕಾಲದಿಂದಲೂ ಬೆಳೆದು ಬಂದಿದೆ. ಈ ದೇಶದ ಸಂಸ್ಕೃತಿ ಸಂಸ್ಕಾರ ದೊಡ್ಡದು. ಧರ್ಮದ ಕಾರ್ಯಕ್ರಮಗಳು ಹಮ್ಮಿಕೊಳ್ಳಬೇಕು. ಈ ಸಮಾಜದ ಅಭಿವೃದ್ಧಿ ಮತ್ತು ಚಿಂತನೆಗೆ ಸದಾ ಸಿದ್ದ. ಹನುಮಾನ ದೇವಸ್ಥಾನಕ್ಕೆ ೧೦ಲಕ್ಷ ರೂ. ಅನುದಾನ ನೀಡುತ್ತೇನೆ ಎಂದು ಭರವಸೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದಿನ ವಿದ್ಯುನ್ಮಾನ ಯುಗದಲ್ಲಿ ಹಬ್ಬಗಳು ನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಗುತ್ತರಗಿ ಗ್ರಾಮದಲ್ಲಿ ನವರಾತ್ರಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಿರುವದು ಇತಿಹಾಸ ಸೃಷ್ಠಿಸುವಂತಿದೆ. ಅಂತೆಯೇ ದಕ್ಷಿಣ ಕರ್ನಾಟಕದಲ್ಲಿ ದಸರಾ ಉತ್ಸವ ಶ್ರೀ ಚಾಮುಂಡೇಶ್ವರಿ ಉತ್ಸವ ವಿಜೃಂಭಿಸುತ್ತಿರುವುದು ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದೆ. ಅದೇ ರೀತಿಯಲ್ಲಿ ಇಡೀ ಜಿಲ್ಲೆಯಲ್ಲಿ ಗುತ್ತರಗಿ ಗ್ರಾಮದ ಕಡೆ ಗಮನ ಹರಿಸುವ ಕಾರ್ಯ ಈ ಭುವನೇಶ್ವರಿ ದೇವಿ ಮಾಡಿದ್ದಾಳೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಅಭಿಮತ ವ್ಯಕ್ತಪಡಿಸಿದರು.ತಾಲೂಕಿನ ಗುತ್ತರಗಿ ಗ್ರಾಮದಲ್ಲಿ ನಡೆದ ನಾಡದೇವತೆ ಶ್ರೀ ಭುವನೇಶ್ವರ ದೇವಿ ಉತ್ಸವದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿ, ನವರಾತ್ರಿ ಉತ್ಸವ ಎಂದರೆ ೯ ದಿನಗಳ ಕಾಲ ಮೈಸಾಸೂರನ ನಡುವೆ ನವದುರ್ಗಿಯರಿಂದ ಯುದ್ಧವಾಗಿ ಮೈಸಾಸೂರನ ಮರ್ಧನವಾಗಿದ್ದರಿಂದ ವಿಜಯದಶಮಿಯನ್ನು ಎಲ್ಲೆಡೆ ಆಚರಿಸುವ ಪದ್ದತಿ ರೂಢಿಯಲ್ಲಿ ಬಂದಿದೆ. ಗುತ್ತರಗಿ ಗ್ರಾಮದಲ್ಲಿ ನಿವೃತ್ತ ಆಯ್.ಎ.ಎಸ್ ಅಧಿಕಾರಿ ಪಿ.ಜಿ.ನಾಯಕ ಅವರ ತೋಟದಲ್ಲಿ ತಮ್ಮ ಸ್ವಂತ ಹಣದಲ್ಲಿ ಭುವನೇಶ್ವರಿ ದೇವಿಯ ದೇವಸ್ಥಾನವನ್ನು ನಿರ್ಮಿಸಿ ನಾಡಹಬ್ಬಕ್ಕೆ ಮೆರಗು…
ಉದಯರಶ್ಮಿ ದಿನಪತ್ರಿಕೆ ಮೈಸೂರು: ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ದೊರೆಯಿತು.ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರೆತಿದ್ದು, ಕೋಟ್ಯಾಂತರ ಭಕ್ತರು ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಾದ ನಾಡದೇವಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡರು.ಅಭಿಮನ್ಯು ಆನೆ ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಹೆಜ್ಜೆ ಹಾಕಿತು. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಿತು. ರಸ್ತೆಯ ಇಕ್ಕೆಲಗಳಲ್ಲೂ ಕಿಕ್ಕಿರಿದು ನೆರೆದ ಜನತೆ ದಸರಾ ವೈಭವವನ್ನು ಕಣ್ತುಂಬಿಕೊಂಡರು.ಜಂಬೂಸವಾರಿ ಪೂರ್ಣಗೊಂಡ ನಂತರ ಬನ್ನಿಮಂಟಪದ ಮೈದಾನದಲ್ಲಿ ದಸರಾ ಪಂಜಿನ ಕವಾಯತು ನಡೆಯಿತು. ತಡವಾಗಿ ನೆರವೇರಿದ ಪುಷ್ಪಾರ್ಚನೆ ನಿಗದಿತ ಸಮಯಕ್ಕಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ ನೆರವೇರಿತು. 4.40 ರಿಂದ 5 ಗಂಟೆಯ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು. ಆದರೆ 9 ನಿಮಿಷಗಳು ತಡವಾಗಿದೆ.
ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ | ಈ ಅನ್ಯಾಯದ ವಿರುದ್ದ ಜಾತಿ-ಧರ್ಮ, ಪಕ್ಷ-ಪಂಥದ ಭೇದವಿಲ್ಲದೆ ದನಿ ಎತ್ತಿ | ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ‘ಕರ್ನಾಟಕವು ಒಕ್ಕೂಟ ವ್ಯವಸ್ಥೆಯೆಡೆಗೆ ತನಗಿರುವ ಎಲ್ಲ ಗೌರವವನ್ನು ಉಳಿಸಿಕೊಂಡೇ, ತನ್ನ ನ್ಯಾಯಯುತ ಪಾಲನ್ನು ಪಡೆಯಲು ಹೇಗೆ ಮುಂದುವರೆಯಬೇಕೆನ್ನುವ ಚರ್ಚೆ ಸಾರ್ವಜನಿಕವಾಗಿ ನಡೆಯಬೇಕಿದೆ. ಇಂತಹ ರಚನಾತ್ಮಕ ಚರ್ಚೆ ವಿಜಯದಶಮಿಯ ಶುಭದಿನದಿಂದಲೇ ಶುರುವಾಗಲಿ. ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಕನ್ನಡಿಗರೆಲ್ಲರೂ ದನಿ ಎತ್ತಬೇಕಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಕರೆ ನೀಡಿದ್ದಾರೆ.ಶನಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕೇಂದ್ರದ ಎನ್ಡಿಎ ಸರಕಾರ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಾ ಬಂದಿರುವ ಅನ್ಯಾಯಕ್ಕೆ ಇತ್ತೀಚಿನ ತೆರಿಗೆ ಪಾಲಿನ ಹಂಚಿಕೆಯ ವಿವರಗಳೇ ಸಾಕ್ಷಿ. 28ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂ.ಬಿಡುಗಡೆಗೊಳಿಸಿರುವ ಕೇಂದ್ರ ಸರಕಾರ ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ. ಈ ಅನ್ಯಾಯದ ವಿರುದ್ದ ಜಾತಿ-ಧರ್ಮ, ಪಕ್ಷ-ಪಂಥದ ಭೇದವಿಲ್ಲದೆ ದನಿ ಎತ್ತುವ ಶಪಥವನ್ನು…
ಉದಯರಶ್ಮಿ ದಿನಪತ್ರಿಕೆ ಢವಳಗಿ: ಸಮೀಪದ ಗುಂಡಕರ್ಜಗಿ ಗ್ರಾಮದ ಶ್ರೀ ಮಹಿಬೂಬಸುಬಹಾನಿ ಜಾತ್ರಾ ಮಹೋತ್ಸವವು ಅಕ್ಟೋಬರ್ 14 ರಿಂದ ಅಕ್ಟೋಬರ್ 16ರ ವರೆಗೆ ಹಣಮಂತ ಶರಣರ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯುವುದು.14 ಸೋಮವಾರದಂದು ರಾತ್ರಿ 10 ಗಂಟೆಗೆ ಶ್ರೀ ಮಹಿಬೂಬಸುಬಹಾನಿ ದೇವರಿಗೆ ಕುದುರೆಯ ಮುಖಾಂತರ ಗಂಧ ಒಯ್ಯುವುದು. ನಂತರ ಗ್ರಾಮದ ಸಮಸ್ತ ದೈವ ಮಂಡಳಿಯಿಂದ ಗಂಧ ಏರುವುದು ಮತ್ತು ಮದ್ದು ಸುಡುವುದು. ನಂತರ ಸುತ್ತ ಮುತ್ತಲಿನ ಗ್ರಾಮಸ್ಥರಿಂದ ಶಿವಭಜನೆ ನಡೆಯುವುದು.15 ಮಂಗಳವಾರದಂದು ಮುಂಜಾನೆ 6 ಗಂಟೆಗೆ ಗ್ರಾಮದ ಶ್ರೀ ಕಾಶಿಲಿಂಗೇಶ್ವರ ದೇವರಿಗೆ ಅಭಿಷೇಕ ನಂತರ ಶ್ರೀ ಮಹಿಬೂಬಸುಬಹಾನಿ ಉರುಸು ನಡೆಯುವುದು. ನಂತರ ಮುಂಜಾನೆ 11 ಗಂಟೆಗೆ ಎತ್ತಿನಗಾಡಿ ರೇಸ್ ಇರುವುದು.ಒಂದನೇ ಬಹುಮಾನ 15001, ಎರಡನೇ 10001, ಮೂರನೇ 7001, ನಾಲ್ಕನೇ 5001, ಐದನೇ ಬಹುಮಾನ 2001 ಇರುವುದು.ಅಂದೇ ರಾತ್ರಿ 10 ಗಂಟೆಗೆ ಜಮಖಂಡಿ ತಾಲ್ಲೂಕಿನ ಬಂಡಿಗಣಿ ಗ್ರಾಮದ ಬಸವೇಶ್ವರ ನಾಟ್ಯ ಸಂಘದಿಂದ ಅಪ್ಪ ಚಿಂತ್ಯಾಗ ಮಗಳು ಸಂತ್ಯಾಗ ಎಂಬ ಸುಂದರ ಸಾಮಾಜಿಕ…
