Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸರ್ಕಾರಿ ನೌಕರರಿಗಾಗಿ ಆಯೋಜಿಸಲಾಗಿದ್ದ `ಶಿರಸಂಗಿ ಲಿಂಗರಾಜ ಟ್ರೋಫಿ’ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿರಸಂಗಿ ಲಿಂಗರಾಜ ಮಹಾರಾಜರ ತ್ಯಾಗ, ಶೈಕ್ಷಣಿಕ ಪ್ರೇಮ ಎಲ್ಲರಿಗೂ ದಾರಿದೀಪ ಎಂದು ಕವಲಗಿಯ ಅಭಿನವ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಹೇಳಿದರು.ಲಿಂಗರಾಜ ಸಂಸ್ಥೆ, ಜಿಲ್ಲಾ ಆದರ್ಶ ಶಿಕ್ಷಕರ ವೇದಿಕೆ ವಿಜಯಪುರ ಹಾಗೂ ಬಸವನ ಬಾಗೇವಾಡಿ ಸಹಯೋಗದಲ್ಲಿ ಸರ್ಕಾರಿ ನೌಕರರಿಗಾಗಿ ಆಯೋಜಿಸಲಾಗಿದ್ದ `ಶಿರಸಂಗಿ ಲಿಂಗರಾಜ ಟ್ರೋಫಿ’ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಆಶೀವರ್ಚನ ನೀಡಿದ ಶ್ರೀಗಳು, ಶಿರಸಂಗಿ ಲಿಂಗರಾಜ ಮಹಾರಾಜರು ಶಿರಸಂಗಿ ಸಂಸ್ಥಾನದ ಕರ್ಣಧಾರತ್ವ ವಹಿಸಿದರು. ಪ್ರತಿಯೊಬ್ಬರಿಗೂ ಶಿಕ್ಷಣ ಎಂಬ ದಿವ್ಯ ಬೆಳಕು ಪ್ರಾಪ್ತವಾಗಬೇಕು ಎಂದು ಕನಸು ಕಂಡಿದ್ದ ಅವರು ಈ ಕನಸು ನನಸಾಗಿಸಲು ಹೇರಳವಾಗಿ ಶಿಕ್ಷಣ ಸಂಸ್ಥೆಗಳಿಗೆ ದಾನ ಧರ್ಮ ಮಾಡಿದರು. ಅವರ ಬದುಕು ಪ್ರತಿಯೊಬ್ಬರಿಗೂ ಆದರ್ಶಮಯ. ಅವರ ತತ್ವಾದರ್ಶಗಳನ್ನು ಅರಿತು ನಾವು ಮುನ್ನಡೆಯಬೇಕಿದೆ ಎಂದರು. ಆಡಳಿತದಲ್ಲಿ ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ, ಈ ನೌಕರರು ದಿನನಿತ್ಯ ಒತ್ತಡದಲ್ಲಿ ಕಾರ್ಯನಿರ್ವಹಿಸುವುದುಂಟು, ಅವರ ಒತ್ತಡ ನಿವಾರಣೆಗಾಗಾಗಿ…
ಲಿಂಗೈಕ್ಯ ತೋಂಟದ ಸಿದ್ದಲಿಂಗ ಮಹಾ ಸ್ವಾಮೀಜಿಯವರ ಪುಣ್ಯ ತಿಥಿ ನಿಮಿತ್ತ ಈ ವಿಶೇಷ ಲೇಖನ ’ವೀಣಾಂತರಂಗ’ ಲೇಖನ- ಶ್ರೀಮತಿ ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ – ಗದಗ ಉದಯರಶ್ಮಿ ದಿನಪತ್ರಿಕೆ ಮಧ್ಯರಾತ್ರಿ ಕಳೆದು ಒಂದು ತಾಸಾಗಿತ್ತು. ಅಂದು ಡಂಬಳದ ಮಠದ ಆವರಣದಲ್ಲಿ ಸಾವಿರಾರು ಜನ ಸೇರಿದ್ದರು. ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಆವರಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುವಂತೆ ಅನುವು ಮಾಡಿಕೊಟ್ಟ ಪುರುಷರು ಮಠದ ಹೊರ ಭಾಗದಲ್ಲಿ ಕಾಯುತ್ತಿದ್ದರು. ಮಠದ ಒಳಗೆ ಹೊರಗೆ ಎಲ್ಲೆಡೆ ನೀರವ ಮೌನ ತಾಂಡವವಾಡುತ್ತಿತ್ತು. ಪದೇ ಪದೇ ನಿಟ್ಟುಸಿರು, ಸಣ್ಣದಾಗಿ ಬಿಕ್ಕುವುದು ನಡೆದೇ ಇತ್ತು. ಎಲ್ಲರನ್ನೂ ಶೂನ್ಯ ಭಾವ ಆವರಿಸಿ ಮಂಕು ಕವಿದಿತ್ತು. ಕೊನೆಗೂ ಆ ಗಳಿಗೆ ಬಂದೇ ಬಿಟ್ಟಿತು. ಆ ಮಠದ ಪೀಠಾಧ್ಯಕ್ಷರಾದ ಜಗದ್ಗುರು ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳವರ ಪಾರ್ಥಿವ ಶರೀರವನ್ನು ಹೊತ್ತ ಭಕ್ತ ಸಮೂಹ ಮಠವನ್ನು ಪ್ರವೇಶಿಸಲು ಎಲ್ಲರ ಕಣ್ಣಲ್ಲೂ ನೀರು, ಮೂಕ ರೋಧನೆ. ಸಂಸಾರಿಯಲ್ಲದಿದ್ದರೂ ಆ ತಂದೆಗೆ ಸಾವಿರಾರು ಲಕ್ಷಾಂತರ ಮಕ್ಕಳು ಭಕ್ತರ ರೂಪದಲ್ಲಿ. ಸ್ವಲ್ಪ…
Udayarashmi kannada daily newspaper
ತಾಲೂಕಿನಲ್ಲಿ ಲಿಂಪಿಸ್ಕೀನ್ ಡಿಸಿಸ್ | ರೋಗ ಕಾಣಿಸಿಕೊಂಡ ಕರುಗಳಿಗೆ ರೈತರಿಂದ ಕ್ವರಂಟೈನ್ ಉದಯರಶ್ಮಿ ದಿನಪತ್ರಿಕೆ ಇಂಡಿ: ಹಸುವಿನ ಕರುಗಳಿಗೆ ಲಿಂಪಿಸ್ಕಿನ್ ಡಿಸಿಸ್ ಖಾಯಿಲೆ ಕಾಣಿಸಿಕೊಂಡಿದ್ದು ತಾಲೂಕಿನ ಎಂಟು ದನಗಳಿಗೆ ಮಾರಕ ಚರ್ಮಗಂಟು ರೋಗ ಖಾಯಿಲೆಯಿಂದ ಬಳಲುತ್ತಿವೆ.ಇಂಡಿ ಪಟ್ಟಣದ ಶ್ರೀ ಶಾಂತೇಶ್ವರ ದೇವರಿಗೆ ಬಿಟ್ಟಿರುವ ಕೆಲವು ದನಗಳಿಗೆ ಸೇರಿದಂತೆ ತಾಲೂಕಿನ ಕೆಲವು ಕಡೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದೆ.ಸಧ್ಯ ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನ ಎದುರು ದೇವರಿಗೆ ಬಿಟ್ಟ ಆಕಳಿಗೆ ಬಂದಿದ್ದು ಘಟನಾ ಸ್ಥಳಕ್ಕೆ ಎಸಿ ಅಬೀದ್ ಗದ್ಯಾಳ ಭೇಟಿ ನೀಡಿದ್ದು ಪಶು ವೈದ್ಯಾಧಿಕಾರಿ ತಮ್ಮ ತಂಡದೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡುತ್ತಿದ್ದಾರೆ.ಇದು ಕೆಲವು ವರ್ಷಗಳ ಹಿಂದೆ ಮನುಷ್ಯರಲ್ಲಿ ಕೊರೊನಾ ಬಂದತೆ ದನಗಳಿಗೆ ಚರ್ಮ ಗಂಟುರೋಗ ಕಾಣಿಸಿಕೊಳ್ಳುತ್ತಿದೆ.ಚರ್ಮಗಂಟು ರೋಗ ಕಾಣಿಸಿಕೊಂಡ ಕರುಗಳನ್ನು ಕ್ವಾರಂಟೈನ್ ಮಾಡಲಾಗಿದೆ. ರೈತರು ತಮ್ಮ ಜಮೀನಿನಲ್ಲೇ ಹಗ್ಗದ ದಾವಣಿ ಕಟ್ಟಿ ಖಾಯಿಲೆ ಕಾಣಿಸಿಕೊಂಡ ಕರುಗಳನ್ನು ದೂರ ದೂರ ಕಟ್ಟಿದ್ದಾರೆ.ಪಶು ವೈದ್ಯಾಧಿಕಾರಿಗಳು ಸೇರಿದಂತೆ ಪಶು ಇಲಾಖೆಯವರು ಗ್ರಾಮಗಳಿಗೆ ಭೇಟಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಟಾಟಾ ಸಮೂಹದ ಮುಖ್ಯಸ್ಥ ರತನ ಟಾಟಾ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸುವ ಮೂಲಕ ಮುಖಂಡರು ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಬಸವೇಶ್ವರ ಸೇವಾ ಸಮಿತಿ ಸದಸ್ಯ, ನಿವೃತ್ತ ಶಿಕ್ಷಕ ಎಂ.ಜಿ.ಆದಿಗೊಂಡ ಮಾತನಾಡಿ, ಭಾರತದ ಹೆಮ್ಮೆಯ ಪುತ್ರರಲ್ಲಿ ಒಬ್ಬರಾಗಿದ್ದ ರತನ ಟಾಟಾ ಅವರು ಮಧ್ಯಮ ವರ್ಗದ ಜನರ ಆಶಾಕಿರಣವಾಗಿದ್ದರು. ದೇಶದ ಕಲ್ಯಾಣಕ್ಕಾಗಿ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ಇವರು ತಮ್ಮ ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಜೊತೆಗೆ ದೇಶದ ಉದ್ಯಮ ವಲಯವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರವಾಗಿದ್ದಾರೆ. ಇವರ ನಿಧನದಿಂದ ದೇಶಕ್ಕೆ ತುಂಬಾ ನಷ್ಟವಾಗಿದೆ ಎಂದರು. ಈ ಸಂದರ್ಭದಲ್ಲಿ ಸಂಗಣ್ಣ ಕಲ್ಲೂರ, ಬಸವರಾಜ ಕೋಟಿ, ಶೇಖರ ಗೊಳಸಂಗಿ, ಬಬಲಕಿಶೋರ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸಮಾಜಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡ ಮಹನೀಯರನ್ನು, ಮಹಾತ್ಮರನ್ನು ಸದಾ ಸಮಾಜವು ಸ್ಮರಿಸಬೇಕು. ಅವರು ನೀಡಿರುವ ಸಂದೇಶಗಳನ್ನು ಅರಿತುಕೊಂಡು ಉತ್ತಮ ಸಂಸ್ಕಾರ ಅಳವಡಿಸಿಕೊಂಡು ಉತ್ತಮ ಜೀವನ ಸಾಗಿಸುವದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಗದಗದ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು.ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಅಗಸಿ ಆವರಣದಲ್ಲಿ ಹಮ್ಮಿಕೊಂಡಿರುವ ಬಸವನಾಡ ನವರಾತ್ರೋತ್ಸವ ಕಾರ್ಯಕ್ರಮದಲ್ಲಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಗುರು ಕುಮಾರೇಶ್ವರ ಶಿವಯೋಗಾಶ್ರಮ ನೀಲನಕ್ಷೆ ಬಿಡುಗಡೆ, ಸಾಹಿತ್ಯ ಬಳಗ ಮತ್ತು ಕ್ರಿಯಾಶೀಲ ಸಾಧಕ ಬಳದ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಸಮಾಜವನ್ನು ಕಟ್ಟಿ ಬೆಳೆಸಿದ ಧೀಮಂತರಲ್ಲಿ ಹಾನಗಲ್ ಕುಮಾರಸ್ವಾಮೀಜಿ ಒಬ್ಬರಾಗಿದ್ದಾರೆ. ಬಸವೇಶ್ವರರರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದ ಅವರು ಸಮಾಜ ಸುಧಾರಣೆಗೆ ಶ್ರಮಿಸಿದ್ದರು. ಅನೇಕ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಪ್ರೇರಣೆಯಾಗಿದ್ದಾರೆ. ಮಠಗಳಲ್ಲಿ ಪ್ರಸಾದ ನಿಲಯ ತೆರೆದು ದಾಸೋಹ ವ್ಯವಸ್ಥೆಯನ್ನು ಆರಂಭಿಸಿದರು. ಅವರಿಂದ ಪ್ರೇರಣೆಗೊಂಡ ಅನೇಕ ಮಠಗಳು ಶಿಕ್ಷಣ ಸಂಸ್ಥೆ ಆರಂಭಿಸುವ ಮೂಲಕ ಅನೇಕ ಬಡ ವಿದ್ಯಾರ್ಥಿಗಳಿಗೆ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತ, ಮೆಗಾ ಮಾರುಕಟ್ಟೆ ಹತ್ತಿರ, ರಾಣಿ ಚನ್ನಮ್ಮ ವೃತ್ತದಲ್ಲಿರುವ ಅಂಗಡಿಯವರು ಪಾದಚಾರಿ(ಪುಟ್ಪಾತ್) ರಸ್ತೆ ಮೇಲೆ ಅತಿಕ್ರಮಿಸಿದ ಜಾಗೆಯನ್ನು ತೆರವು ಗೊಳಿಸುವ ಕಾರ್ಯಾಚರಣೆಯು ಪುರಸಭೆಯಿಂದ ಗುರುವಾರ ಬೆಳ್ಳಂಬೆಳಗ್ಗೆ ೭ ಗಂಟೆಗೆ ಆರಂಭವಾಗಿ ಮಧ್ಯಾನ್ಹ ಸುಮಾರು ೧ ಗಂಟೆಯವರೆಗೂ ನಡೆಯಿತು.ಈ ತೆರವು ಕಾರ್ಯಾಚರಣೆಯ ನಡೆಯುವ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತೆರವು ಕಾರ್ಯಾಚರಣೆ ವೀಕ್ಷಿಸಿ ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ ಮಾಹಿತಿ ಪಡೆದುಕೊಂಡು ರಸ್ತೆಯಲ್ಲಿ ಅತಿಕ್ರಮಿಸಿದ ಜಾಗೆಯನ್ನು ಕಟ್ಟುನಿಟ್ಟಾಗಿ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸೂಚಿಸಿದರು.ಪಟ್ಟಣದ ಬಸವೇಶ್ವರ ವೃತ್ತ, ಮೆಗಾ ಮಾರುಕಟ್ಟೆ ಹತ್ತಿರ, ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಕೆಲ ಅಂಗಡಿಕಾರರು ಪಾದಚಾರಿ(ಪುಟ್ಪಾತ್) ರಸ್ತೆ ಮೇಲೆ ಮೆಟ್ಟಿಲು ನಿರ್ಮಿಸಿದ್ದನ್ನು, ಅಂಗಡಿಗಳ ಮುಂಭಾಗ ಹಾಕಲಾಗಿದ್ದ ಪತ್ರಾಸ್, ಕೆಲ ಅಂಗಡಿಗಳ ಬೋರ್ಡ್ಗಳನ್ನು ತೆರವು ಗೊಳಿಸಲಾಯಿತು. ತೆರವು ಕಾರ್ಯಾಚರಣೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಕೆಲವರಿಂದ ವಿರೋಧ ವ್ಯಕ್ತವಾದಾಗ, ಪಾದಚಾರಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಂದಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆಯ ವ್ಯಾಪ್ತಿಯಲ್ಲಿನ ಖಾಲಿಯಿರುವ ಅಂಗನವಾಡಿ ಕಾಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಖಾಲಿಯಿರುವ ೫೨ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೧೨೯ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ೦೯-೧೧-೨೦೨೪ ಕೊನೆಯ ದಿನವಾಗಿರುತ್ತದೆ. ಅಂಗನವಾಡಿ ಕಾರ್ಯಕತೆಯರ ಹುದ್ದೆಗೆ ಕನಿಷ್ಠ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ಸೈಟ್ https://karnemakaone.kar.nic.in/abcd/ ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಮಾತೃಭಾಷೆಯಲ್ಲಿ ಮಾತನಾಡುವುದನ್ನು ಕಲಿಯುವುದು ಅತ್ಯಗತ್ಯ. ಮಾತೃಭಾಷೆಯನ್ನು ಸಾಮಾನ್ಯವಾಗಿ ಆತ್ಮದ ಭಾಷೆ ಎಂದು ಪರಿಗಣಿಸಲಾಗುತ್ತದೆ. ಒಬ್ಬರ ಸಂಸ್ಕೃತಿ, ಪರಂಪರೆ ಮತ್ತು ವೈಯಕ್ತಿಕ ಅನುಭವಗಳ ಸಾರವನ್ನು ಒಳಗೊಂಡಿದೆ ಎಂದು ಶಿಲ್ಪಾ ಕುದರಗೊಂಡ ಹೇಳಿದರು.ಪಟ್ಟಣದ ಹೂಗಾರ ಲೇಔಟ್ನಲ್ಲಿರುವ ವಿದ್ಯಾಚೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ಸಿಂದಗಿ ಹಾಗೂ ವಿದ್ಯಾಚೇತನ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ನವರಾತ್ರಿ ಉತ್ಸವ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಮಾತೃಭಾಷೆ ನಮ್ಮ ತುಟಿಗಳಲ್ಲಿ ನೃತ್ಯ ಮಾಡುವ ಮೊಟ್ಟ ಮೊದಲ ಭಾಷೆ. ನಮ್ಮ ಅಸ್ಮಿತೆಗೆ ಆಂತರಿಕವಾಗಿ ನಂಟು ಹೊಂದಿದೆ ಎಂದರು.ಈ ವೇಳೆ ಜನಪದ ವಿದ್ವಾಂಸೆ ಶಿವಲೀಲಾ ಮುರಾಳ ಮಾತನಾಡಿ, ಮಾತೃ ಭಾಷೆ ಎಂದರೆ ಮಗು ಜನನದಿಂದಲೇ ಕಲಿಯುವ ಮೊದಲ ಭಾಷೆ. ಶಿಕ್ಷಕರು ಮತ್ತು ಪೋಷಕರು ಮಕ್ಕಳೊಂದಿಗೆ ಮಾತೃಭಾಷೆಯಲ್ಲಿಯೇ ಮಾತನಾಡುವ, ಕಥೆ ಹೇಳುವ ಮತ್ತು ಪದ್ಯ ಕಲಿಸುವ ವ್ಯವಧಾನವನ್ನು ಕಲ್ಪಿಸಿಕೊಳ್ಳಬೇಕು. ಸಂಸ್ಕೃತಿಯೊಂದಿಗೆ ಬೆರೆತಿರುವ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.ಪೀರಪ್ಪ ಮುದನೂರ(33), ಶರಣಪ್ಪ ಪರಸನಹಳ್ಳಿ (30) ಸಾವಿಗೀಡಾದ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಬೈಕ್ ಹಿಂಬದಿ ಸವಾರ ಸಹ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಪಟ್ಟಣದಲ್ಲಿ ಹಾದುಹೋಗಿರುವ ಸುರಪುರ – ಹುನಗುಂದ ರಾಜ್ಯ ಹೆದ್ದಾರಿಯಲ್ಲಿ ಪರಸನಹಳ್ಳಿ ಕಡೆ ಹೋಗುತ್ತಿದ್ದ ಬೈಕ್ ಹಾಗೂ ಅದರ ಎದುರು ಬದಿಯಿಂದ ಬರುತ್ತಿದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಉಭಯ ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
