Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಆದೇಶ ಖಂಡಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರ ನೇತೃತ್ವದಲ್ಲಿ ಪ್ರತಿಭಟನೆ ಗೆ ನಿರ್ಧಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ವಕ್ಫ್ ಆಸ್ತಿ ಖಾತೆ ಬದಲಾವಣೆ ಹಾಗೂ ಪ್ಲ್ಯಾಗಿಂಗ್ ಮಾಡುವಂತೆ ಅಧಿಕಾರಿಗಳ ಮೇಲೆ ಕೂಗಾಡಿ, ೪೫ ದಿನಗಳಲ್ಲಿ ಪೂರ್ಣಗೊಳಿಸುವಂತೆ ಒತ್ತಡ ಹಾಕಿರುವುದನ್ನು ಖಂಡಿಸಿ, ಕೇಂದ್ರದ ಮಾಜಿ ಸಚಿವರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರ ನೇತೃತ್ವದಲ್ಲಿ, ಅ.೧೫ ರ ಮಂಗಳವಾರ ಬೆಳಿಗ್ಗೆ ೧೦.೩೦ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ಚೌಕ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ, ಪ್ರಧಾನಮಂತ್ರಿ, ಕೇಂದ್ರ ಕಾನೂನು ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು.ದೇಶಕ್ಕೆ ಮಾರಕವಾದ ಮತ್ತು ಅವೈಜ್ಞಾನಿಕ ವಕ್ಫ್ ಮಸೂದೆ ತಿದ್ದುಪಡಿಗೆ ಕೇಂದ್ರ ಸರ್ಕಾರ ಈಗಾಗಲೇ ಮುಂದಾಗಿದ್ದು, ಅದಕ್ಕಾಗಿ ವಕ್ಫ್ ತಿದ್ದುಪಡಿ ಮಸೂದೆ ಜಂಟಿ ಸಂಸತ್…
ಉದಯರಶ್ಮಿ ದಿನಪತ್ರಿಕೆ ಇಂಡಿ: ಶಾಸಕ ಯಶವಂತರಾಯಗೌಡರ ಹುಟ್ಟುಹಬ್ಬ ಆಚರಣೆಯ ನೆಪದಲ್ಲಿ ಹಬ್ಬದೂಟ ಮಾಡಲು ನಾವೆಲ್ಲಾ ಸೇರಿಲ್ಲ. ಈ ನೆಪದಲ್ಲಿ ತಾಲ್ಲೂಕಿನ ಬಡವರ ಸೇವೆ ಮಾಡಲು ಸೇರಿದ್ದೇವೆ ಎಂದು ಇಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ್ ಹೇಳಿದರು.ಗುರುವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ, ಉಚಿತ ಆರೋಗ್ಯ ತಪಾಸಭೆ ಹಾಗೂ ಸಸಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕಳೆದ ೨ ವರ್ಷಗಳ ಹಿಂದೆ ಶಾಸಕರ ಹುಟ್ಟುಹಬ್ಬದ ನಿಮಿತ್ಯ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರದ ಮೂಲಕ ತಾಲ್ಲೂಕಿನ ೨೨ ಜನ ಹೃದಯ ರೋಗಿಗಳಿಗೆ ಉಚಿತವಾಗಿ ಹೃದಯ ರೋಗ ಶಸ್ತ್ರ ಚಿಕಿತ್ಸೆ ಮಾಡಿಸಿದ್ದೇವೆ. ಈ ಸಲ ರಕ್ತ ಸಂಗ್ರಹಣೆ ನಮ್ಮ ಉದ್ದೇಶವಾಗಿದ್ದು, ಶಾಸಕರ ೫೭ನೇ ಹುಟ್ಟುಹಬ್ಬಕ್ಕೆ ೫೭ ಜನ ಯುವಕರು ರಕ್ತದಾನ ಮಾಡಲು ಕಾಯುತ್ತಿದ್ದಾರೆ. ನೂರಾರು ಜನ ತಮ್ಮ ರೋಗ ತಪಾಸಣೆಗೆ ಬಂದಿದ್ದಾರೆ. ಅವರೆಲ್ಲರಿಗೂ ರೋಗ ತಪಾಸಣೆ ಮಾಡಿಸುವದಲ್ಲದೇ ಅವರಿಗೆ ಅಗತ್ಯ ಔಷಧೋಪಚಾರ ನೀಡಲಾಗುವದು ಎಂದರು. ಕಾರ್ಯಕ್ರಮದಲ್ಲಿ ಶಾಸಕರ ೫೭ ನೇ ಹುಟ್ಟುಹಬ್ಬದ ನಿಮಿತ್ಯ ೫೭…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸಂಸಾರವೆಂಬ ಈ ಭವಸಾಗರದಲ್ಲಿ ಬೀಸುವ ಗಾಳಿಯ ಸೊಡರಿನಲ್ಲಿ ಈಜಿ ದಡಸೇರುವದು ಅಷ್ಟು ಸುಲಭದ ಮಾತಲ್ಲ ಕುಟುಂಬ ವ್ಯವಸ್ಥೆಯ ತೇರನ್ನು ಎಳೆಯುತ್ತಾ ಸಮಾಜದಲ್ಲಿ ಸಮಾಜಮುಖಿಯಾಗಿ ಕೆಲಸಮಾಡುವ ಪರಿಕಲ್ಪನೆ ಹೊಂದಿದ ವ್ಯಕ್ತಿಗಳು ಅಪರೂಪ ಅಂತಹ ವ್ಯಕ್ತಿಗಳು ಬಡತನವಿರಲಿ ಸಿರಿತನವಿರಲಿ ಸಾಧನೆಯ ಶಿಖರ ಏರುವ ಗುರಿಯನ್ನು ಹೊಂದಿರುತ್ತಾರೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಪಟ್ಟಣದಲ್ಲಿ ನಡೆದ ಅಧ್ಯಾತ್ಮಿಕ ಮತ್ತು ಸಂಸಾರ ವ್ಯವಸ್ಥೆ ಎನ್ನುವ ವಿವಿಧ ಕಾರ್ಯಕ್ರಮಗಳಲ್ಲಿ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಿದ್ದರು.ಮಾನವ ತನ್ನ ಜೀವಿತಾವಧಿಯ ಕೊನೆಯ ದಿನಗಳವರೆಗೂ ಧರ್ಮವಂತನಾಗಿ ಆಧ್ಯಾತ್ಮಿಕ ನೆಲೆಗಟ್ಟಿನ ಮೇಲೆ ತಂದೆ ತಾಯಿ ಗುರುವಿನ ಹಿರಿಯರ ಮಾಗದರ್ಶನದಲ್ಲಿ ನಡೆದದ್ದೇ ಆದರೆ ಎಂಥಹ ಕಷ್ಟಕರ ಪರಿಸ್ಥಿತಿಯನ್ನು ಎದುರಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಕುಟುಂಬಕ್ಕೆ ಆಧಾರ ಸ್ಥಂಭವಾಗಿ ನಿರ್ವಹಣೆ ಮಾಡುವ ಜವಬ್ದಾರಿಯಿಂದ ತನ್ನದೇ ಆದ ಛಾಪನ್ನು ವಿವಿಧ ಕ್ಷೇತ್ರಗಳಲ್ಲಿ ಮೂಡಿಸುವ ನಾಯಕನಾಗುತ್ತಾನೆ ಎಂದರು.ಜೆಡಿಎಸ್ ಮುಖಂಡ ಸೋಮನಗೌಡ ಬ ಪಾಟೀಲ ಮಾತನಾಡಿ, ಮನುಷ್ಯನ ಮಾತುಗಳು ಕಠೋರವಾಗಿದ್ದರೂ ಮೃದುವಾದ ಮನಸ್ಸಿನಿಂದ ಗಂಡ ಹೆಂಡತಿಯರ ಪರಸ್ಪರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನ ವ್ಯಾಪ್ತಿಯಲ್ಲಿ ಬರುವ ವಿಜಯಪುರ ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ನಿಲಯಾರ್ಥಿಗಳ ವಾಸಕ್ಕಾಗಿ ಬಾಡಿಗೆ ಕಟ್ಟಡಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಕನಿಷ್ಠ ೨೦೦ ವಿದ್ಯಾರ್ಥಿಗಳ ವಸತಿ, ಊಟ ಉಪಚಾರ ಮಾಡಲು ಸೌಲಭ್ಯವುಳ್ಳ ಹಾಗೂ ಸರ್ಕಾರದ ನಿಯಮಾನುಸಾರದ ಪ್ರಕಾರ ವಿಸ್ತೀರ್ಣವುಳ್ಳ ಬಾಡಿಗೆ ಕೊಡುವ ಕಟ್ಟಡ ಮಾಲೀಕರು, ಸಂಘಸAಸ್ಥೆಯ ಪದಾಧಿಕಾರಿಗಳು ದಿನಾಂಕ ೨೧-೧೦-೨೦೨೪ ರ ಸಂಜೆ ೫ ಗಂಟೆಯೊಳಗಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ತಾಳಿಕೋಟಿ: ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರ 67ನೇ ಜನ್ಮದಿನವನ್ನು ಸರಳ ಹಾಗೂ ಅರ್ಥಪೂರ್ಣವಾದ ರೀತಿಯಲ್ಲಿ ಆಚರಿಸಲು ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಜನ್ಮದಿನವಾದ ಅಕ್ಟೋಬರ್ 11ರಂದು ಮುಂಜಾನೆ ಏಳು ಗಂಟೆಗೆ ಶ್ರೀ ಖಾಸ್ಗತೇಶ್ವರ ಮಠದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕವನ್ನು ನಡೆಸಲಾಗುವುದು, 10: 00 ಗಂಟೆಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಒನ್ನೊಳಗೊಂಡು ವಿವಿಧ ಆಸ್ಪತ್ರೆಗಳಲ್ಲಿಯ ಒಳ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಲಾಗುವುದು. ಸಂಜೆ 6: 00 ಗಂಟೆಗೆ ಮುದ್ದೇಬಿಹಾಳ ಪಟ್ಟಣದಲ್ಲಿ ಜನ್ಮದಿನದ ಅಂಗವಾಗಿ ನಡೆಯುವ ವಿಶೇಷ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವುದು ಎಂದು ತೀರ್ಮಾನಿಸಲಾಯಿತು.ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ಚೋರಗಸ್ತಿ, ಜಿಲ್ಲಾ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ ನಾವದಗಿ, ಪ್ರಭುಗೌಡ ಮದರಕಲ್ಲ, ಶರಣ ಭೂಪಾಲ ದೇಶಮುಖ, ಸಂಗನಗೌಡ ಅಸ್ಕಿ, ಮುನ್ನಾ ಅರ್ಜುಣಗಿ,…
ಜಾತಿ ಗಣತಿ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ ಬಿಜೆಪಿ | ರಾಜ್ಯವ್ಯಾಪಿ ಜನಾಂದೋಲನ ನಡೆಸಲು ನಿರ್ಧಾರ | ಮುಡಾ ಹಗರಣ ಮರೆ ಮಾಚಲು ಜಾತಿಗಣತಿ ಮುನ್ನಲೆಗೆ ಆರೋಪ ಬೆಂಗಳೂರು: ಮುಡಾ ಹಗರಣ ಮರೆ ಮಾಚಲು ಜಾತಿಗಣತಿ ಮುನ್ನಲೆಗೆ ತಂದಿದ್ದಾರೆಂದು ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿರುವ ಬಿಜೆಪಿ ಇದೀಗ ಬ್ರಹ್ಮಾಸ್ತ್ರವೊಂದನ್ನು ಪ್ರಯೋಗಿಸಲು ಮುಂದಾಗಿದೆ.ಜಾತಿಗಣತಿ ವರದಿ ಮಂಡನೆ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇದೇ ವೇಳೆ ಒಳ ಮೀಸಲಾತಿ ಜಾರಿ ತರುವಂತೆ ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನ ನಡೆಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ಸಿಗರು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ, ಯಾರೂ ಮನೆಗೆ ಬಂದೇ ಇಲ್ಲ ಎಂಬುದಾಗಿ ಲಿಂಗಾಯತ, ಒಕ್ಕಲಿಗ ಸೇರಿದಂತೆ ಇತರೆ ಸಮುದಾಯದವರು ತಿಳಿಸಿದ್ದಾರೆ. ಕೆಲವೇ ಜಾತಿಗಳ ವೈಭವೀಕರಣ ಮತ್ತು ಇನ್ನೂ ಕೆಲವು ಜಾತಿಗಳ ಮೇಲೆ ದ್ವೇಷ ಮತ್ತು ಅವೈಜ್ಞಾನಿಕತೆ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ಹೂವಿನಹಳ್ಳಿ ಗ್ರಾಮದ ಭಾಗಮ್ಮ ಗುರುಶಾಂತಗೌಡ ಬಿರಾದಾರ ದಂಪತಿ ತಮಗೆ ಬಂದಂತ ೧೨ ತಿಂಗಳ ಗ್ರಹಲಕ್ಷ್ಮಿ ಹಣವನ್ನು ಕೂಡಿಟ್ಟು ನವರಾತ್ರಿ ನಿಮಿತ್ಯ ಗ್ರಾಮದಲ್ಲಿ ಪ್ರತಿಷ್ಠಾಪಿಸಿರುವ ದೇವಿ ಮೂರ್ತಿಗೆ ೨೫೦ ಗ್ರಾಮ (೨೫ ತೊಲಿ) ಬೆಳ್ಳಿ ಕೀರಿಟ ಮಾಡಿಸಿ ಮಾದರಿಯಾಗಿದ್ದಾರೆ.ಈ ವಿಷಯ ತಿಳಿದು ಗ್ರಾಮಕ್ಕೆ ಬೇಟಿ ನೀಡಿದ ಶಾಸಕ ಅಶೊಕ ಮನಗೂಳಿ ದಂಪತಿಯನ್ನು ಸನ್ಮಾನಿಸಿ ಗೌರವಿಸಿದರು.ನಂತರ ಶಾಸಕ ಅಶೋಕ ಮನಗೂಳಿ ಮಾತನಾಡಿ, ಕಾಂಗ್ರೇಸ್ ಪಕ್ಷ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಯ ಲಾಭವನ್ನು ರಾಜ್ಯದ ೧.೬೦ ಕೋಟಿ ಫಲಾನುಭವಿಗಳು ಪಡೆದುಕೊಂಡಿದ್ದಾರೆ ಈ ಯೋಜನೆ ಯಾವುದೆ ಕಾರಣಕ್ಕೂ ನಿಲ್ಲುವುದಿಲ್ಲ ಎಂದರು.ಹುವಿನಹಳ್ಳಿ ಗ್ರಾಮದ ಭಾಗಮ್ಮ ದಂಪತಿ ತಮಗೆ ಬಂದಂತ ಗ್ರಹಲಕ್ಷ್ಮಿ ಹಣದಿಂದ ನವರಾತ್ರಿ ನಿಮಿತ್ಯ ಪ್ರತಿಷ್ಠಾಪಿಸಿರುವ ದೇವಿ ಮೂರ್ತಿಗೆ ೨೫೦ ಗ್ರಾಮ ಬೆಳ್ಳಿ ಕೀರಿಟ ಅರ್ಪಿಸಿದ್ದು ಅವರ ಈ ಕಾರ್ಯವನ್ನು ರಾಜ್ಯದ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿ ಉಳಿಯಲಿದೆ. ಹಾಗೂ ಭಾಗಮ್ಮ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಜಯದಶಮಿಯ ಪ್ರಯುಕ್ತ ಬಸವನ ಬಾಗೇವಾಡಿ ಮತಕ್ಷೇತ್ರದ ಮತದಾರ ಬಂಧುಗಳ ಹಾಗೂ ಸಾರ್ವಜನಿಕರ ಸಂಪರ್ಕದೊಂದಿಗೆ ನಡೆಯುವ ಪರಸ್ಪರ ಬನ್ನಿ ವಿನಿಮಯ ಕಾರ್ಯಕ್ರಮವು ಇದೇ ಅ.೧೩ ರವಿವಾರ ದಿವಸ ಕೊಲ್ಹಾರ ಪಟ್ಟಣದ ಸ್ವಗೃಹದಲ್ಲಿ ನಡೆಯಲಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ತಿಳಿಸಿದರು.ಈ ಕುರಿತು ಪತ್ರಿಕಾಗೋಷ್ಟಿ ನಡೆಸಿದ ಅವರು ಎಂದಿನಂತೆ ದಶಕಗಳಿಂದ ನಡೆದುಕೊಂಡು ಬಂದ ಮೈದುಂಬಿ ಹರಿಯುವ ಕೃಷ್ಣಾ ನದಿ ಮಾತೆಗೆ ಗಂಗಾ ಪೂಜೆಯನ್ನು ನೆರವೇರಿಸಲಾಗುವದು ಅಂದು ಗಂಗಾ ಮಾತೆಯ ಭಾವಚಿತ್ರದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊರ್ತಿ ಕೊಲ್ಹಾರ ಸೇತುವೆಯ ದಡದಲ್ಲಿ ಸುಮಂಗಲೆಯರ ಆರತಿ ಬೆಳಗುವದರೊಂದಿಗೆ ನದಿಗೆ ಬಾಗೀನ ಅರ್ಪಿಸಲಾಗುವದು ಎಂದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತ್ತ ಗುಣಾರಿ ಜಾಥಾಕೆ ಚಾಲನೆ ನೀಡಿದರು. ಜಾಥಾವು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಮಾರುಕಟ್ಟೆ ರಸ್ತೆ ಮಾರ್ಗವಾಗಿ, ಗಾಂಧಿ ವೃತ್ತ, ಶಿವಾಜಿ ವೃತ್ತದ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಯವರೆಗೆ ನಡೆಯಿತು.ಈ ವೇಳೆ ತಾಲೂಕಾ ಆರೋಗ್ಯಾಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ.ಎಂ.ಕೊಲುರ, ಸುರೇಶ ಹೊಸಮನಿ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಸಿಬ್ಬಂದಿ, ಆಶಾಕಾರ್ಯಕರ್ತೆಯರು ಸೇರಿದಂತೆ ತುಳಜಾಭವಾನಿ ನರ್ಸಿಂಗ್ ಕಾಲೇಜ, ಅಶ್ವಿನಿ ನರ್ಸಿಂಗ ಕಾಲೇಜ, ಬಾಂಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾನ್ಯ ಸರ್ವೋಚ್ಛ ನ್ಯಾಯಾಲಯ ಮತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ನಿರ್ದೇಶನದಂತೆ ಅಪಘಾತಕ್ಕೆ ಸಂಬಂಧಿಸಿದ ವಿವರವನ್ನು ಎಲ್ಲಾ ಆಸ್ಪತ್ರೆಗಳು e-ಆಂಖ ತಂತ್ರಾಂಶದಲ್ಲಿ (eಟeಛಿಣಡಿoಟಿiಛಿ ಆeಣಚಿiಟeಜ ಂಛಿಛಿiಜeಟಿಣ ಖeಠಿoಡಿಣs) ವರದಿ ಮಾಡುವುದು ಕಡ್ಡಾಯವಾಗಿರುತ್ತದೆ. ಈ ಕುರಿತು ಜಿಲ್ಲಾ ಮಾಹಿತಿ ಕೇಂದ್ರ ವಿಜಯಪುರ ವತಿಯಿಂದ ರಸ್ತೆ ಸಂಚಾರ ಅಪಘಾತಗಳನ್ನು ನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರು, ವೈದ್ಯರು ಸಿಬ್ಬಂದಿಗಳಿಗೆ e-ಆಂಖ ತಂತ್ರಾಂಶದ ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾ ಭವನದಲ್ಲಿ ೧೫-೧೦-೨೦೨೪ರಂದು ವಿಜಯಪುರ ನಗರ ಹಾಗೂ ವಿಜಯಪುರ ತಾಲೂಕು ವ್ಯಾಪ್ತಿಗೆ ಒಳಪಡುವ ಖಾಸಗಿ ಆಸ್ಪತ್ರೆಗಳು, ೧೬-೧೦-೨೦೨೪ರಂದು ಬಸವನ ಬಾಗೇವಾಡಿ, ಮುದ್ದೇಬಿಹಾಳ, ಇಂಡಿ ಹಾಗೂ ಸಿಂದಗಿ ತಾಲೂಕು ವ್ಯಾಪ್ತಿಗೆ ಒಳಪಡುವ ಖಾಸಗಿ ಆಸ್ಪತ್ರೆಗಳ ವೈದ್ಯರು ಸಿಬ್ಬಂದಿಗಳಿಗೆ ಬೆಳಿಗ್ಗೆ ೧೦ ಗಂಟೆಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ತರಬೇತಿಗೆ ರಸ್ತೆ ಸಂಚಾರ ಅಪಘಾತ ನಿರ್ವಹಿಸುವ ಎಲ್ಲಾ ಖಾಸಗಿ ಆಸ್ಪತ್ರೆಗಳ ಮಾಲೀಕರು, ವೈದ್ಯರು ಸಿಬ್ಬಂದಿಗಳು ಕಡ್ಡಾಯವಾಗಿ…
