Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಹತ್ತರಕಿಹಾಳ ಗ್ರಾಮದ ಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಅ. ೧೨ ರಂದು ಬೆಳಗ್ಗೆ ೧೦.೩೦ ಗಂಟೆಗೆ ಶ್ರೀರಾಮ, ಲಕ್ಷ್ಮಣ, ಸೀತಾ, ಹನುಮ ಮತ್ತು ವಶಿಷ್ಠ, ವಾಲ್ಮೀಕಿ ಮಹರ್ಷಿ ದೇವರುಗಳ ನೂತನ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ನಾಡದೇವಿಯ ಆರಾಧನೆಯಂಗವಾಗಿ ಧರ್ಮ ಸಭೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಮಸಬಿನಾಳದ ಸಿದ್ದರಾಮ ಸ್ವಾಮೀಜಿ, ಮನಗೂಳಿಯ ಅಭಿನವ ಸಂಗನಬಸವ ಸ್ವಾಮೀಜಿ, ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಪ್ರವಚನಕಾರ ಕಲಬುರ್ಗಿಯ ಶಂಕ್ರೆಮ್ಮ ತಾಯಿಯವರು ವಹಿಸುವರು. ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಹಿಸುವರು. ಸಚಿವ ಶಿವಾನಂದ ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸೋಮನಗೌಡ ಪಾಟೀಲ ಮನಗೂಳಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಕಲ್ಲು ದೇಸಾಯಿ ಆಗಮಿಸುವರು.ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀರಾಮ, ಲಕ್ಷ್ಮಣ, ಸೀತಾ ಹನುಮ, ವಶಿಷ್ಠ, ವಾಲ್ಮೀಕಿ ಮಹರ್ಷಿ ದೇವರುಗಳ ನೂತನ ಮೂರ್ತಿಗಳ ಮೆರವಣಿಗೆ ಕಾರ್ಯಕ್ರಮಕ್ಕೂ ಮುನ್ನ ಪೂರ್ಣಕುಂಭ ಮೇಳದೊಂದಿಗೆ ನಡೆಯಲಿದೆ ಎಂದು ಗ್ರಾಮದ ಈರಣ್ಣ ಕಲ್ಯಾಣಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ೧೨ ನೇ ಶತಮಾನದ ಅವಿರಳಜ್ಞಾನಿ ಚನ್ನಬಸವಣ್ಣನವರ ಕರಣ ಹಸಿಗೆಯಲ್ಲಿ ನಮ್ಮ ದೇಹದ ಪ್ರತಿಯೊಂದು ಅಂಗಗಳ ಬಗ್ಗೆ ವೈಜ್ಞಾನಿಕವಾಗಿ ನಿರೂಪಿಸಲಾಗಿದೆ. ಎಲ್ಲ ಧರ್ಮದವರಿಗೂ ಅನ್ವಯವಾಗುವ ಕರಣ ಹಸಿಗೆ ಅರಿತುಕೊಂಡರೆ ಎಲ್ಲರೂ ಆರೋಗ್ಯಕರವಾದ ಜೀವನ ನಡೆಸಲು ಪೂರಕವಾಗುತ್ತದೆ ಎಂದು ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ಸಮೀಪವಿರುವ ಐತಿಹಾಸಿಕ ಹೋರಿಮಟ್ಟಿ ಗುಡ್ಡದಲ್ಲಿ ಇಂಗಳೇಶ್ವರ ಗ್ರಾಮದ ವಚನ ಶಿಲಾ ಮಂಟಪದ ಚನ್ನಬಸವ ಸ್ವಾಮೀಜಿಗಳಿಂದ ಹನ್ನೊಂದು ದಿನಗಳ ಕಾಲ ಜರುಗಿದ ಚನ್ನಬಸವಣ್ಣನವರ ಕರಣ ಹಸಿಗೆ ಪ್ರವಚನದ ಮುಕ್ತಾಯ ಸಮಾರೋಪದಂಗವಾಗಿ ಸೋಮವಾರ ಜರುಗಿದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಕರಣ ಹಸಿಗೆ ಯಾವುದೇ ಜನಾಂಗ, ಯಾವುದೇ ಧರ್ಮಕ್ಕೆ ಸಿಮೀತವಾಗಿರದೇ ಎಲ್ಲ ಧರ್ಮ, ಜನಾಂಗದವರಿಗೆ ಅನ್ವಯವಾಗುತ್ತದೆ. ಇದು ಇಂದಿನ ವೈದ್ಯಕೀಯ, ವಿಜ್ಞಾನ ಲೋಕಕ್ಕೆ ಇಂದಿಗೂ ಸವಾಲಾಗಿದೆ ನಿಂತಿದೆ. ದೇಹದ ಪ್ರತಿಯೊಂದು ಭಾಗಗಳನ್ನು ವೈಜ್ಞಾನಿಕ ಹಿನ್ನೆಲೆಯಲ್ಲಿ ಕರಣ ಹಸಿಗೆಯಲ್ಲಿ ನಿರೂಪಿಸಲ್ಪಟ್ಟಿವೆ. ಇಂತಹ ಕರಣ ಹಸಿಗೆಯನ್ನು ಸಾಮಾನ್ಯ ಜನರಿಗೂ ತಿಳಿಯುವ ರೀತಿಯಲ್ಲಿ ಪ್ರವನಚನಗೈದಿರುವ ಹಿರಿಯ ಸ್ವಾಮೀಜಿಗಳಾದ ಚನ್ನಬಸವ…

Read More

ಚಡಚಣ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ರಾಜ್ಯಾದ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಲ್ಲೂ ಮಹಿಳೆಯರ ಸಬಲಿಕರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಜಿಲ್ಲಾ ನಿರ್ದೇಶಕರಾದ ಸಂತೋಷ ಕುಮಾರ ರೈ. ಅವರು ಹೇಳಿದರು.ಚಡಚಣ ಪಟ್ಟಣದ ಗೋಡಿಹಾಳ ರಸ್ತೆಯಲ್ಲಿರುವ ಶ್ರೀ ಗುರು ಕೃಪಾ ಮಂಗಲ ಕಾರ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ(ರಿ) ಇಂಡಿ ಇವರು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಬಡತನ ರೇಖೆಯಲ್ಲಿರುವ ಗ್ರಾಮೀಣ ಭಾಗದ ಮಹಿಳೆಯರ ಜೀವನ ಮಟ್ಟವನ್ನು ಸುಧಾರಿಸುತ್ತಿದೆ. ಮಹಿಳೆಯರು ಸಂಘದಿಂದ ಸಾಲ-ಸೌಲಭ್ಯವನ್ನು ಪಡೆದು ಕಾಲಮಿತಿಯಲ್ಲೇ ಸರಿಯಾಗಿ ಸಾಲ ಮರುಪಾವತಿಸುವ ಮೂಲಕ ಹೆಚ್ಚಿನ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿದ ಕಾಶೀಬಾಯಿ ವಾಲಿಕಾರ ಅವರು, ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರಾದ ಮೇಲೆ ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಇದರಿಂದ ಸಮಾಜದ ಮುಖ್ಯ ವಾಹಿನಿಗೆ ಮಹಿಳೆಯರು ಬರಲು ಸಾದ್ಯವಾಗುತ್ತಿದೆ ಎಂದರು.ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಂಬರುವ ಹಿಂದೂಗಳ ಪವಿತ್ರ ವಿಜಯ ದಶಮಿ, ದೀಪಾವಳಿ ಮತ್ತಿತರೆ ಹಬ್ಬಗಳ ಪಾವಿತ್ರ್ಯತೆಯನ್ನು ಕಾಪಾಡುವ ಮಹತ್ತರ ಉದ್ದೇಶದಿಂದ ಹಿಂದೂ ದೇವರನ್ನು ಆರಾಧಿಸುವ ಹಿಂದೂಗಳ ಹತ್ತಿರವೇ ಹೂ, ಹಣ್ಣು, ಕಾಯಿ, ಕರ್ಪೂರ, ಕುಂಕುಮ ಮತ್ತಿತರೆ ಪೂಜಾ ಸಾಮಾಗ್ರಿಗಳನ್ನು ಖರೀದಿಸಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕರೆ ನೀಡಿದ್ದಾರೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಿಂದೂ ವ್ಯಾಪಾರಿಗಳು ಕೂಡ ಹಿಂದೂಗಳ ಪ್ರತಿಯೊಂದು ಹಬ್ಬಗಳನ್ನು ಮಡಿವಂತಿಕೆ, ಭಕ್ತಿಯಿಂದ ಪೂಜೆ ಸಲ್ಲಿಸಿ, ನಮ್ಮ ದೇವರುಗಳನ್ನು ಆರಾಧಿಸುತ್ತಾರೆ. ಈ ರೀತಿ ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ, ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ.ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ, ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ ಬುತ್ತಿಯಲ್ಲಿ ಮಾಂಸಾಹಾರ ತಂದು ತಿಂದು ಅಥವಾ ಮನೆಯಲ್ಲಿ ಮಾಂಸಾಹಾರ ತಿಂದು ಬಂದು,…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇಂದು ಪಟ್ಟಣಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.ಪಟ್ಟಣದ ಅಂಬೇಡ್ಕರ್ ವೃತ್ತಕ್ಕೆ ಬುಧವಾರ ಸಾಯಂಕಾಲ ಆಗಮಿಸಿದ ಕನ್ನಡ ಜ್ಯೋತಿರಥಯಾತ್ರೆಗೆ ತಾಲ್ಲೂಕು ಆಡಳಿತ, ಪಟ್ಟಣ ಹಾಗೂ ತಾಲ್ಲೂಕು ಪಂಚಾಯಿತಿ, ಕಸಾಪ, ಕರವೇ, ಜಯಕರ್ನಾಟಕ, ದಸಂಸ, ಶಿಕ್ಷಕರ ಸಂಘ, ಶರಣ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಿ ಭುವನೇಶ್ವರಿ ಪ್ರತಿಮೆಗೆ ಪೂಜೆ ಸಲ್ಲಿಸಿ, ಆರತಿ ಎತ್ತಿ ಮಾಲಾರ್ಪಣೆ ಮಾಡಲಾಯಿತು.ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಸಿಂಪೀರ್ ವಾಲಿಕಾರ ಮಾತನಾಡಿ, ಕನ್ನಡ ನೆಲ, ಜಲ, ಭಾಷೆಯ ಜಾಗೃತಿಗಾಗಿ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಜನರಲ್ಲಿ ಸಾಹಿತ್ಯಕ ಅಭಿಮಾನವನ್ನು ಮೂಡಿಸುವ ಅಂಗವಾಗಿ ರಾಜ್ಯಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸುತ್ತಿದೆ ಎಂದರು.ತಹಶೀಲ್ದಾರ ಪ್ರಕಾಶ ಸಿಂದಗಿ, ವಿಜಯಪುರ ಅನುಗ್ರಹ ಆಸ್ಪತ್ರೆಯ ನೇತ್ರ ತಜ್ಞ ಪ್ರಭುಗೌಡ ಬಿ.ಎಲ್ (ಚಬನೂರ), ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ, ಸಿಂದಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕನ್ನಡ ನಾಡು, ನುಡಿ, ಭಾಷೆ, ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಬುಧವಾರ ಪಟ್ಟಣದ ಹಂಜಗಿ ಕ್ರಾಸ್ ಹತ್ತಿರ ಹೊರ್ತಿಯಿಂದ ಆಗಮಿಸಿದ ಕನ್ನಡ ರಥಕ್ಕೆ ತಾಲೂಕಾ ಆಡಳಿತ ಮತ್ತು ಸಮಸ್ತ ಕನ್ನಡ ಪರ ಸಂಘಟನೆ ವತಿಯಿಂದ ಸ್ವಾಗತಿಸಿ ಅವರು ಮಾತನಾಡಿದರು.ಆಡಳಿತದಲ್ಲಿ ಕನ್ನಡ ಹೆಚ್ಚು ಬಳಕೆ ಮಾಡಿ ಕನ್ನಡದ ಬೆಳವಣೆಗೆ ಮಾಡಬೇಕಾಗಿದೆ. ಬಳಕೆಯಲ್ಲಿ ಇದ್ದದ್ದು ಹೆಚ್ಚು ಉಳಿಯುತ್ತದೆ ಎಂದರು.ವಿಜಯಪುರ ಜಿಲ್ಲಾ ಕಸಾಪ ಅಧ್ಯಕ್ಷ ಹಾಸೀಂಪೀರ ವಾಲಿಕಾರ ಮಾತನಾಡಿ, ಕರ್ನಾಟಕ ರಾಜ್ಯ ಜನಪದ, ಕಲೆ, ಸಾಹಿತ್ಯ ಮತ್ತು ಪ್ರಕೃತಿ ಸೌಂದರ್ಯದಲ್ಲಿ ಅಡಗಿದೆ. ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಲನ ನಡೆಯಲಿದ್ದು ಅದರ ಪ್ರಚಾರಾರ್ಥ ಮತ್ತು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ ೫೦ ವರ್ಷ ಆಗುತ್ತಿದ್ದು ಈ ದಿಶೆಯಲ್ಲಿ ರಥ ಸಾಗುತ್ತಿದ್ದು ಅದಕ್ಕೆ ಹೆಚ್ಚಿನ ಪ್ರಚಾರ ನೀಡಬೇಕಾಗಿದೆ ಎಂದರು.ಕ್ಷೇತ್ರಶಿಕ್ಷಣಾದಿಕಾರಿ ಟಿ.ಎಸ್. ಅಲಗೂರ, ಕಸಾಪ ಇಂಡಿ ಘಟಕದ ಅಧ್ಯಕ್ಷ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಪಂ ಹಾಗೂ ಜಿಲ್ಲಾ ಯೋಜನಾ ಪ್ರಾಧಿಕಾರ ಸ್ವಚ್ಚ ಭಾರತ ಯೋಜನೆಯಡಿಯಲ್ಲಿ ಬಯಲು ಮುಕ್ತ ಶೌಚಾಲಯ ನಿರ್ಮಾಣಕ್ಕೆ ಸಾರ್ವಜನಿಕರಿಗೆ ಹಾಗೂ ಸರಿಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶೌಚಾಲಯಗಳನ್ನು ಕಟ್ಟಿಸಿ ಬಯಲು ಶೌಚಾಲಯ ಮುಕ್ತ ಸಮಾಜ ನಿರ್ಮಾಣಕ್ಕೆ ಹಲವಾರು ಯೋಜನೆಗಳನ್ನು ರೂಪಿಸುತ್ತದೆ ಅದನ್ನು ಜಾಗೃತಿ ಮೂಡಿಸುವ ಕೊರತೆಯಿಂದ ಅದು ಸಫಲತೆ ಕಾಣುತ್ತಿಲ್ಲ ಎಂದು ಲೋಕಾಯುಕ್ತ ಎಸ್‌ಪಿ ಟಿ.ಮಲ್ಲೇಶ ಏಚ್ಚರಿಕೆ ನೀಡಿದರು.ಪಟ್ಟಣದ ತಾಪಂ ಕಾರ್ಯಾಲಯದ ಸಭಾ ಭವನದಲ್ಲಿ ಲೋಕಾಯುಕ್ತರು ಸಾರ್ವಜನಿಕರ ಅಹವಾಲ ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸರಕಾರ ಸಾರ್ವಜನಿಕರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ ಅದು ಪಾರದರ್ಶಕ ಹಾಗೂ ಸಮಪರ್ಕವಾಗಿ ಭ್ರಷ್ಠಾಚಾರ ರಹಿತ ಸೌಲಭ್ಯಗಳು ಮುಟ್ಟಿದೆ ಅಥವಾ ಇಲ್ಲವೋ ಎಂಬದನ್ನು ನಿಗಾ ವಹಿಸಲು ಲೋಕಾಯುಕ್ತ ಇಲಾಖೆಗೆ ಅಧಿಕಾರವಿದೆ ಕಾರಣ ಸೌಲಭ್ಯಗಳು ಸಮರ್ಪಕವಾಗಿ ಮುಟ್ಟಿಸುವಲ್ಲಿ ಲೋಪವಾದರೆ ಕರ್ತವ್ಯ ನಿರ್ಲಕ್ಷ್ಯ ಕಾಯ್ದೆಯಡಿ ಪ್ರಕರಣ ದಾಖಲಾಗುತ್ತದೆ. ಕಾರಣ ಶಾಲೆಗಳಲ್ಲಿ ಮಕ್ಕಳಿಗೆ ಬಿಇಓ, ಶಿಶು ಅಭಿವೃದ್ದಿ ಇಲಾಖೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮದ ಅರಿವು ಮೂಡಬೇಕು, ಅಲ್ಲದೆ ವಯಕ್ತಿಕ ಶೌಚಾಲಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲೆಯ ಇಂಡಿ, ಚಡಚಣ, ಸಿಂದಗಿ, ವಿಜಯಪುರ(ಗ್ರಾ), ವಿಜಯಪುರ(ನ), ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿನ ಖಾಲಿ ಇರುವ ಅಂಗನವಾಡಿ ಕಾಯಕರ್ತೆ ಹಾಗೂ ಸಹಾಯಕಿಯರ ಗೌರವಧನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಖಾಲಿಯಿರುವ ೩೧೩ ಅಂಗನವಾಡಿ ಕಾರ್ಯಕರ್ತೆ ಹಾಗೂ ೮೫೭ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ೦೯-೧೧-೨೦೨೪ ಕೊನೆಯ ದಿನವಾಗಿದ್ದು, ಅಂಗನವಾಡಿ ಕಾರ್ಯಕತೆಯರ ಹುದ್ದೆಗೆ ಕನಿಷ್ಠ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/ಮೂಲಕ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ಮಾಡಿದರು.ಈ ವೇಳೆ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೊಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಆಶಾಪೂರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಜಿ.ಎನ್. ಮಲಜಿ, ಜಿಲ್ಲಾ ಆಸ್ಪತ್ರೆಯ ಸಹಾಯಕ ಆಡಳಿತ ಅಧಿಕಾರಿ ಸಿಂದಗಿಕರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದಿಂದ ಕಾಯಕ ಸ್ಪೂರ್ತಿ(ಮಹಿಳೆಯರಿಗೆ) ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ಚರ್ಮಕಾರರ ಕಿರು ಆರ್ಥಿಕ ನೇರ ಸಾಲ ಯೋಜನೆ, ನೇರ/ಸಂಚಾರಿ ಮಾರಾಟ ಯೋಜನೆ ಸೌಲಭ್ಯಗಳನ್ನು ಪಡೆಯಲು ಆನ್‌ಲೈನ್ ಅರ್ಜಿ ಅಹ್ವಾನಿಸಲಾಗಿದೆ.ಸೇವಾ ಸಿಂಧೂ, ಗ್ರಾಮ ಒನ್, ಕರ್ನಾಟಕ ಒನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ೩೦-೧೦-೨೦೨೪ ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಿದವರು ಆನ್‌ಲೈನ್ ಅರ್ಜಿಯ ರಶೀದಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ಲಿಡ್ಕರ್ ಕಚೇರಿಗೆ ಸಲ್ಲಿಸಬಹುದು ಎಂದು ವಿಜಯಪುರದ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮಮದ ಜಿಲ್ಲಾ ಸಂಯೋಜಕರ ಪ್ರಕಟಣೆ ತಿಳಿಸಿದೆ.

Read More