Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗಾಗಿ ಇದೇ ತಿಂಗಳ ಅಕ್ಟೋಬರ್ ೨೩ರಂದು ಬೆಳಿಗ್ಗೆ ೧೧ ಗಂಟೆಗೆ “ವಿಕಸಿತ ಭಾರತ- ಯುವಜನರ ಪಾತ್ರ” ಕುರಿತ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.ಪದವಿ ಕಾಲೇಜುಗಳಲ್ಲಿ ಬಿ.ಎ., ಬಿ.ಕಾಂ, ಬಿಎಸ್‌ಸಿ, ಬಿಸಿಎ, ಬಿಬಿಎಂ ಮುಂತಾದ ಕೋರ್ಸ್ಗಳಲ್ಲಿ ಒಂದರಿಂದ ಆರನೆಯ ಸೆಮಿಸ್ಟರ್ ವರೆಗೆ ಓದುತ್ತಿರುವ ಅಥವಾ ಈ ವರ್ಷ ೬ನೆಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿನಿಯರು ಈ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಬಹುದು.ಈ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ- ರೂ.೧೫೦೦, ದ್ವಿತೀಯ ಬಹುಮಾನ- ರೂ.೧೦೦೦ ಮತ್ತು ತೃತೀಯ ಬಹುಮಾನ- ರೂ.೫೦೦ ರೂಪಾಯಿಗಳ ನಗದು ನೀಡಲಾಗುವುದು. ಅಲ್ಲದೇ ಐದು ಸಮಾಧಾನಕರ ಬಹುಮಾನಗಳನ್ನು ಕೂಡಾ ನೀಡಲಾಗುತ್ತದೆ.ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿನಿಯರು ಈ ಲಿಂಕ್ https://forms.gle/NsUC12WZ7MpbNQvy7 ಬಳಸಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಂದೀಪ್ ಮೊಬೈಲ್ ಸಂಖ್ಯೆ ೯೮೪೪೬೮೧೩೯೮ ಸಂಪರ್ಕಿಸಬಹುದು. ಇಲ್ಲವೇ ನೇರವಾಗಿ ಅಕ್ಟೋಬರ್ ೨೩ರಂದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಂದಿನ ಪೀಳಿಗೆಗೆ ದೈಹಿಕ ಆರೋಗ್ಯದ ಕುರಿತು ಅರಿವು ಮೂಡಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಡಾ. ವಿ. ಎಸ್. ಬಗಲಿ ಹೇಳಿದ್ದಾರೆ.ಬುಧವಾರ ಬಿ. ಎಲ್. ಡಿ. ಇ ಸಂಸ್ಥೆಯ ಜೆ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿಜಯಪುರ ನಗರ ವಲಯ ಬಿ.ಎಡ್ ಕಾಲೇಜುಗಳ ಅಂತರ್ ಕಾಲೇಜು ವ್ಹಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.ಬಿ.ಎಡ್ ವಿದ್ಯಾರ್ಥಿಗಳು ಶಿಕ್ಷಕ ವೃತ್ತಿಯ ಕಡೆಗೆ ಗಮನ ಹರಿಸುವುದರ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕವಾಗಿ ಸದೃಢರಾಗಲು ಇಂಥ ಪಂದ್ಯಾವಳಿಗಳಲ್ಲಿ ಭಾಗವಹಿಸಬೇಕು. ಆದರೆ, ಇತ್ತೀಚಿನ ದಿನಗಳಲ್ಲಿ ಇದು ಕಡಿಮೆಯಾಗುತ್ತಿದೆ ಎಂದು ಹೇಳಿದರು.ಬಿ. ಎಲ್. ಡಿ. ಇ ಸಂಸ್ಥೆಯ ನಿರ್ದೇಶಕ ಮತ್ತು ದೈಹಿಕ ಶಿಕ್ಷಣ ಆಡಳಿತಾಧಿಕಾರಿ ಡಾ. ಎಸ್. ಎಸ್. ಕೋರಿ ಮಾತನಾಡಿ, ಇಂದಿನ ಯಾಂತ್ರಿಕ ಯುಗದಲ್ಲಿ ಜನರು ದೈಹಿಕ ಚಟುವಟಿಕೆಗಳ ಅಭಾವವನ್ನು ಎದುರಿಸುತ್ತಿದ್ದಾರೆ. ಕ್ರೀಡೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯವಾಗಿದೆ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಕ್ರೀಡಾ ಮನೋಭಾವ ಮತ್ತು ಉತ್ತಮ ವ್ಯಕ್ತಿತ್ವ…

Read More

– ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ – ಗದಗ್ ಉದಯರಶ್ಮಿ ದಿನಪತ್ರಿಕೆ ಯಶಸ್ ಮೂರು ವರ್ಷದ ಪುಟ್ಟ ಮಗುವಾಗಿದ್ದಾಗ ಆತನನ್ನು ಹಿಡಿಯುವುದು ಆತನ ತಾಯಿ ತಂದೆಯರಿಗೆ ಅತಿ ದೊಡ್ಡ ಸವಾಲಾಗಿತ್ತು. ಸಾಮಾನ್ಯವಾಗಿ ಚುರುಕಾಗಿರುವ ಮಕ್ಕಳಿಗೆ ಹೋಲಿಸಿದರೆ ಈತನದ್ದು ತುಸು ಅತಿರೇಕವೇ ಎನ್ನಿಸುವಂತಹ ವರ್ತನೆ. ಮನೆಗೆ ಯಾರಾದರೂ ಅತಿಥಿಗಳು ಬಂದರೆ ತುಸು ಹೆಚ್ಚೇ ಉದ್ವೇಗಕ್ಕೆ ಒಳಗಾಗುತ್ತಿದ್ದ ಆತ ಮನೆಯ ಎಲ್ಲ ಸಾಮಾನುಗಳನ್ನು ಕಿತ್ತು ಹಾಕುತ್ತಿದ್ದ. ಒಂದೇ ಒಂದು ಕ್ಷಣವೂ ಆತನನ್ನು ಸುಮ್ಮನಿರಿಸಲು ಸಾಧ್ಯವಾಗುತ್ತಿರಲಿಲ್ಲ ಆತನ ಪಾಲಕರಿಗೆ.ಮೂರು ವರ್ಷದವನಾದ ಯಶಸ್ ನನ್ನು ಪ್ಲೇ ಹೋಮ್ ಗೆ ಕಳಿಸೋಣವೆಂದು ಯೋಚಿಸಿದ ಪಾಲಕರು ಆತನನ್ನು ಪ್ಲೇ ಹೋಂಗೆ ದಾಖಲು ಮಾಡಿದರೆ ಅಲ್ಲಿಯೂ ಕೂಡ ಆತನನ್ನು ಒಂದೆಡೆ ಕೂಡಿಸಲು ಸಾಧ್ಯವಾಗದೆ ಕೈ ಚೆಲ್ಲುತ್ತಿದ್ದರು ಶಿಕ್ಷಕರು. ಉಳಿದ ಮಕ್ಕಳಿಗೆ ತೊಂದರೆ ಮಾಡದಿದ್ದರೂ ಆಟದ ಸಾಮಾನುಗಳನ್ನು ಕಿತ್ತುವ, ಕೆಡವುವ, ಸರಿದಾಡಿಸುವ ಆಟದ ಜಾರು ಬಂಡೆಯ ನಟ್ಟು ಬೋಲ್ಟ್ ಗಳನ್ನು ಬಿಚ್ಚುವ ಆತನ ಕೃತ್ಯ ಗಳಿಂದ ಆತನನ್ನು ಹಿಡಿಯುವುದರಲ್ಲಿ ಅಲ್ಲಿನ ಸಿಬ್ಬಂದಿಗೆ ಸಾಕಾಗಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಸೇರಿದಂತೆ ತಾಲೂಕಿನ ಹಲವೆಡೆ ಅಪಘಾತಗಳು ಹೆಚ್ಚುತ್ತಿದ್ದು ಇವುಗಳ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆಯಿಂದ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಿ ಜಾಗೃತಿ ಮೂಡಿಸಿದರು.ಅತೀ ವೇಗ, ತ್ರಿಬಲ್ ರೈಡರ್, ಮಧ್ಯದ ಅಮಲಿನಲ್ಲಿ ವಾಹನ ಚಲಾಯಿಸುವವರಿಗೆ ಎಚ್ಚರಿಸಲು ನಿಂತಿರುವ ಭಂಗಿಯಲ್ಲಿನ ಪೊಲೀಸ್ ಪೇದೆಯ ಕಟೌಟ್ಗಳನ್ನು ರಸ್ತೆಗಳ ತಿರುವು, ಅಪಘಾತ ವಲಯಗಳಲ್ಲಿ ಅಳವಡಿಸಲಾಗಿದೆ. ರಿಕ್ಷಾವಾಲಾ ಗಳು ಅತಿಯಾದ ವೇಗದಲ್ಲಿ ಚಲಿಸದಂತೆ, ಹೆಚ್ಚಿನ ಗ್ರಾಹಕರನ್ನು ಅಟೋದಲ್ಲಿ ಕೂಡಿಸದಂತೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜೀವ ತಿಪರೆಡ್ಡಿ, ಕ್ರೈಂ ಪಿಎಸ್‌ಐ ಆರ್‌ಎಲ್ ಮನ್ನಾಬಾಯಿ ಅಟೋ ಸ್ಟ್ಯಾಂಡ್ ಗೆ ತೆರಳಿ ತಿಳಿ ಹೇಳಿದರು.ಅಟೋಗಳನ್ನು ಬೇಗನೆ ಗುರುತಿಸಲು ಎಲ್ಲ ಅಟೋಗಳಿಗೆ ನಂಬರ್ ಗಳನ್ನು ಅಳವಡಿಸಿದರು. ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡದ ಬಿಸಿ ಮುಟ್ಟಿಸಿದರು. ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: 12 ನೇ ಶತಮಾನದ ಬಸವಾದಿ ಶರಣರ ಬಗ್ಗೆ ಅವಮಾನಕಾರಿಯಾಗಿ ಚಿತ್ರಿಸಿ ಬಿಡುಗಡೆಗೆ ಸಜ್ಜಾಗಿರುವ ಶರಣರ ಶಕ್ತಿ ಚಲನಚಿತ್ರವನ್ನು ಬಿಡುಗಡೆ ಮಾಡಬಾರದು ಎಂದು ಬೆಂಗಳೂರಿನಲ್ಲಿ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಬಾ. ಮಾ. ಗಿರೀಶ ಅವರಿಗೆ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹಾಗೂ ನ್ಯಾಯವಾದಿ ರವಿ ರಾಠೋಡ ಅವರು ದೂರನ್ನು ಸಲ್ಲಿಸಿ ವಿವಾದಾತ್ಮಕ ಶರಣರ ಶಕ್ತಿ ಚಲನಚಿತ್ರವನ್ನು ಯಾವುದೇ ಕಾರಣಕ್ಕೂ ಬಿಡುಗಡೆಗೊಳಿಸಬಾರದು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.ಕರ್ನಾಟಕ ಸರ್ಕಾರ ಇತ್ತೀಚೆಗೆ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಕೆಲವು ಜನರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದಾಗಿ ಬಸವಾದಿ ಶರಣರ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಚಲನಚಿತ್ರದಲ್ಲಿ ಬಸವಣ್ಣನವರ ಅಕ್ಕ ಅಕ್ಕನಾಗಮ್ಮ ಅವರ ವೈವಾಹಿಕ ಜೀವನದ ಬಗ್ಗೆ ಅಸಭ್ಯವಾಗಿ ತೋರಿಸಿದ್ದಾರೆ. ಚಲನಚಿತ್ರದಲ್ಲಿ ಜಾತಿ ಜಾತಿಗಳ ಮಧ್ಯೆ ದ್ವೇಷ ಬರುವ ಸನ್ನಿವೇಶವನ್ನು ಸೃಷ್ಟಿಸಿದ್ದಾರೆ. ಒಟ್ಟಾರೆ ಚಲನಚಿತ್ರದಲ್ಲಿ ಶರಣರ ನೈಜ ಜೀವನದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ವ್ಯಾಜ್ಯ ಮತ್ತು ಇತರೆ ವ್ಯಾಜ್ಯಗಳಲ್ಲಿ ಕಾನೂನು ಸಲಹೆ ನೀಡಲು ಗುತ್ತಿಗೆ ಆಧಾರದ ಮೇಲೆ ಕಾನೂನು ಸಲಹೆಗಾರ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೧೯-೧೦-೨೦೨೪ರವರೆಗೆ ವಿಸ್ತರಿಸಲಾಗಿದೆ.ಆಸಕ್ತರು ನಿಗದಿತ ಅವಧಿಯ ಒಳಗೆ ಸ್ವವಿವರವುಳ್ಳ ಬಯೋಡಾಟಾವನ್ನು ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: ೯೪೮೨೯೪೫೧೦೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವಿಜಯಪುರ ವತಿಯಿಂದ ೨೦೨೪-೨೫ನೇ ಸಾಲಿನ ಆಯವ್ಯಯ ಕಂಡಿಕೆ ೨೫(೩)ರಲ್ಲಿ ಘೋಷಿಸಿರುವ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ವಿಜಯಪುರ ಜಿಲ್ಲೆಯಲ್ಲಿರುವ ಕನಿಷ್ಠ ೨೦ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿರುವ ಅರ್ಹ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಸದರಿ ಯೋಜನೆಯ ಸೌಲಭ್ಯ ಪಡೆಯಲು ಸಂಚಾರಿ ಕುರಿಗಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಪಶು ಚಿಕಿತ್ಸಾಲಯ, ಪಶು ವೈದ್ಯಾಧಿಕಾರಿಗನ್ನು ಸಂಪರ್ಕಿಸಿ ನಿಗಧಿತ ನಮೂನೆಯನ್ನು ಪಡೆದು ವಲಸೆ ಹೋಗುವುದಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರು ಪ್ರಮಾಣ ಪತ್ರ ಪಡೆದು ಸಂಬಂಧಿಸಿದ ಪಶು ವೈದ್ಯಾಧಿಕಾರಿಗಳಿಂದ ಕನಿಷ್ಠ ೨೦ ಕುರಿ/ಮೇಕೆ ಹೊಂದಿರುವ ಧೃಡೀಕರಣ ಪತ್ರ ಪಡೆದು ಸೂಕ್ತ ದಾಖಲೆಗಳೊಂದಿಗೆ ಪಶು ಚಿಕಿತ್ಸಾಲಯ, ಕಚೇರಿಗೆ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಸಹಾಯಕ ನಿರ್ದೇಶಕರ ಕಚೇರಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಅಥವಾ ದೂರವಾಣಿ ಸಂಖ್ಯೆ : ೦೮೩೫೨-೨೦೦೦೭೯ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ…

Read More

ರಾಜಕಾಲುವೆ ಒತ್ತುವರಿ ತೆರವಿಗೆ ಡಿಸಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಬಲೇಶ್ವರ ನಾಕಾದ ಹತ್ತಿರವಿರುವ ಮುಜಾವರ ಗಲ್ಲಿ, ಬಾಗವಾನ ಕಾಲೋನಿ ಸೇರಿದಂತೆ ವಿವಿಧೆಡೆ ರಾಜಕಾಲುವೆ ಒತ್ತುವರಿ ತೆರವಿಗೆ ಪ್ರಾಚ್ಯವಸ್ತು ಇಲಾಖೆ, ಭೂಮಾಪನ ಹಾಗೂ ಮಹಾನಗರ ಪಾಲಿಕೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.ಮಂಗಳವಾರ ನಗರದ ರಹೀಮನಗರಕ್ಕೆ ಭೇಟಿ ನೀಡಿ ಪರಿಶೀಲಿಸಿದರ ಅವರು, ರಾಜಕಾಲುವೆ ಒತ್ತುವರಿಯಿಂದ ಮಳೆಯ ನೀರು ಸರಾಗವಾಗಿ ಹರಿಯದೇ ರಸ್ತೆ, ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಒತ್ತುವರಿ ತೆರವಿಗೆ ಮುಂದಾಗಬೇಕು. ಇಬ್ರಾಹಿಂರೋಜಾದಿದ ಬಬಲೇಶ್ವರ ನಾಕದವರೆಗೆ ರಾಜಕಾಲುವೆಯ ಅಕ್ಕಪಕ್ಕ ಅತಿಕ್ರಮಣ ಮಾಡಿದವರನ್ನು ತೆರವುಗೊಳಿಸಬೇಕು. ಅತಿಕ್ರಮಣ ಮಾಡಿದವರಿಗೆ ಬೇರೆ ಕಡೆ ಸ್ಥಳಾಂತರ ಮಾಡಿಸುವಲ್ಲಿ ಅಧಿಕಾರಿಗಳು ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.ಈ ಸಂದರ್ಭ ಮಹಾನಗರಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಪ್ರಾಚ್ಯವಸ್ತು ಇಲಾಖೆ, ಭೂಮಾಪನ ಇಲಾಖೆ, ಡಿಡಿಎಲ್‌ಆರ್, ಎಡಿಎಲ್‌ಆರ್ ಅಧಿಕಾರಿ, ಸಿಬ್ಬಂದಿಗಳು ಇದ್ದರು.

Read More

ವಕ್ಫ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ | ವಕ್ಫ್ ಆಸ್ತಿ ಖಾತೆ ಬದಲಾವಣೆ | ಫ್ಲ್ಯಾಗಿಂಗ್ ಕಾರ್ಯ ೪೫ ದಿನಗಳಲ್ಲಿ ಪೂರ್ಣಗೊಳಿಸಲು ಸಚಿವರ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಕ್ಫ್ ಆಸ್ತಿ ಖಾತೆ ಬದಲಾವಣೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಜಿಲ್ಲೆಯ ಪ್ರಗತಿ ಕುಂಠಿತವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಮುಂದಿನ ಒಂದು ತಿಂಗಳೊಳಗಾಗಿ ವಕ್ಫ್ ಖಾತೆ ಬದಲಾವಣೆ, ಫ್ಲ್ಯಾಗಿಂಗ್ ಸೇರಿದಂತೆ ಸೂಕ್ತ ಪ್ರಗತಿ ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಬಿ.ಜೆಡ್.ಜಮೀರ್‌ಅಹ್ಮದ ಖಾನ್ ಸೂಚಿಸಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ವಕ್ಫ್ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಾದ್ಯಂತ ವಿರುವ ೨೧೪೮ ಆಸ್ತಿಗಳ ಪೈಕಿ ೧೦೯ ಆಸ್ತಿಗೆ ಸಂಬಂಧಿಸಿದಂತೆ ಮಾತ್ರ ಖಾತೆ ಬದಲಾವಣೆ ಮಾಡಲಾಗಿದ್ದು, ೨೦೩೯ ಖಾತೆ ಬದಲಾವಣೆ ಬಾಕಿ ಇದೆ. ಶೇ.೫.೦೭ ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಈ ಪ್ರಮಾಣ ಹೆಚ್ಚಾಗಿದೆ. ವಿಜಯಪುರ…

Read More

ಸಮುದಾಯ ಭವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಅಶೋಕ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗ್ರಾಮೀಣ ಪ್ರದೇಶಗಳ ರಸ್ತೆಗಳು, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಿದಾಗ ಗ್ರಾಮೀಣ ಪ್ರದೇಶಗಳು ಅಭಿವೃದ್ದಿಯಾಗುವುದರೊಂದಿಗೆ ದೇಶದ ಉನ್ನತಿಗೂ ಕಾರಣವಾಗುತ್ತವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಜಿಲ್ಲಾಪಂಚಾಯತ ವಿಜಯಪುರ ಪಂಚಾಯತ ರಾಜ್ಯ ಇಂಡಿ ಉಪ ವಿಭಾಗ ಸಿಂದಗಿ ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಗ್ರಾಮದ ವಾರ್ಡ ೪ ರಲ್ಲಿ ರೂ ೪೦ ಲಕ್ಷದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ೨೦೨೩-೨೪ ನೇ ಸಾಲಿನ ಸ್ಥಳಿಯ ಶಾಸಕರ ಪ್ರದೇಶ ಅಭಿವೃದ್ದಿ ಯೋಜನೆಯಡಿಯಲ್ಲಿ ಜಟ್ಟಿಂಗರಾಯ ದೇವಸ್ಥಾನದ ಹತ್ತಿರ ರೂ ೪ ಲಕ್ಷದಲ್ಲಿ ಸಮುದಾಯ ಭವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ಮೂಲಬೂತ ಸೌಕರ್ಯಗಳಿಂದ ವಂಚಿತರಾಗಬಾರದು. ಈ ದೇಶ ಹಳ್ಳಿಗಳಿಂದ ಕೂಡಿದ ದೇಶ. ಮತ ಕ್ಷೇತ್ರದ ಪ್ರತಿ ಹಳ್ಳಿಗಳು ಎಲ್ಲ ಮೂಲಭೂತ…

Read More