Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮನುಷ್ಯನಿಗೆ ಭಕ್ತಿ ವಿನಯ ಕಲಿಸುತ್ತದೆ. ಭಕ್ತಿಯಿದ್ದರೆ ದೇವರು ಒಲಿಯುತ್ತಾನೆ. ಭಕ್ತಿಯಿದ್ದರೆ ಶ್ರೀಮಂತರಾಗಲು ಸಾಧ್ಯ. ಇದಕ್ಕಾಗಿ ಪ್ರತಿಯೊಬ್ಬರಲ್ಲಿ ಭಕ್ತಿ ಇರಬೇಕೆಂದು ಹುಬ್ಬಳ್ಳಿಯ ಮೂರುಸಾವಿರ ಮಠದ ಜಗದ್ಗುರು ಡಾ.ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಅಗಸಿ ಆವರಣದಲ್ಲಿ ಗ್ರಾಮದ ಹಿರೇಮಠದ ಆನಂದದೇವರು ನೇತೃತ್ವದಲ್ಲಿ ಹನ್ನೆರಡು ದಿನಗಳ ಕಾಲ ಹಮ್ಮಿಕೊಂಡಿರುವ ಬಸವನಾಡ ನವರಾತ್ರೋತ್ಸವ ಕಾರ್ಯಕ್ರಮದಲ್ಲಿ ಸೋಮವಾರ ಕಾರ್ಯಕ್ರಮ ಮುನ್ನ ಹಾನಗಲ್ಲ ಗುರು ಕುಮಾರೇಶ್ವರ ಶಿವಯೋಗಾಶ್ರಮದ ಅಡಿಗಲ್ಲು ನೆರವೇರಿಸಿದ ನಂತರ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಹಾನಗಲ್ಲ ಗುರು ಕುಮಾರೇಶ್ವರರು ಸಮಾಜಕ್ಕೆ ದಿಕ್ಕು ತೋರಿಸಿದರು. ಅವರು ಅಖಿಲ ಭಾರತ ವೀರಶೈವ ಮಹಾಸಭಾ ಸ್ಥಾಪನೆ ಮಾಡುವ ಮೂಲಕ ಸಮಾಜದ ಏಳ್ಗೆಗೆ ಶ್ರಮಿಸಿದರು. ಅವರ ಹೆಸರಿನಲ್ಲಿ ಈ ಗ್ರಾಮದಲ್ಲಿ ಶಿವಯೋಗಾಶ್ರಮ ಆರಂಭವಾಗುತ್ತಿರುವದು ಈ ನಾಡಿಗೆ ಒಳಿತಾಗುವದರಲ್ಲಿ ಸಂದೇಹವಿಲ್ಲ. ಈ ಗ್ರಾಮದ ಹಿರೇಮಠದ ಚಿಕ್ಕವಯಸ್ಸಿನ ಆನಂದದೇವರು ಕ್ರಿಯಾಶೀಲ ಸಾಧಕರಾಗಿದ್ದಾರೆ. ಅವರು ಸಮಾಜ ಅಭಿವೃದ್ಧಿಗೆ ಸದಾ ಬದ್ಧರಾಗಿರುವದು ಅವರ ಸೇವಾ ಕೈಂಕರ್ಯ ತೋರಿಸುತ್ತಿದೆ. ಸಮಾಜಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನವದೆಹಲಿಯ ಎಂಎಂಟಿಸಿಸಿ ಕಾಲ್ಸ್ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನ್ಯಾಕ್ ಸಮಿತಿ, ಮಹಿಳಾ ಘಟಕದ ಸಹಯೋಗದಲ್ಲಿ ಮಂಗಳವಾರ ಕ್ಯಾನ್ಸರ್ ರೋಗದ ಅರಿವು-ಜಾಗೃತಿ ಮೂಡಿಸುವ ಕಾರ್ಯಕ್ರಮ ಜರುಗಿತು.ಈ ಕಾರ್ಯಕ್ರಮದಲ್ಲಿ ತಾಲೂಕು ಆಸ್ಪತ್ರೆಯ ಪ್ರಸೂತಿ ಮತ್ತು ಹೆರಿಗೆ ತಜ್ಞ ವೈದ್ಯರಾದ ಡಾ. ಭಾಗ್ಯಲಕ್ಷ್ಮೀ ಗೋನಾಳ ಅವರು ಸ್ತನ್ ಕ್ಯಾನ್ಸರ್ ಮತ್ತು ಗರ್ಭಕಂಠ ಕ್ಯಾನ್ಸರ್ ಕುರಿತು ಮಾತನಾಡಿ, ಕ್ಯಾನ್ಸರ್ ಪ್ರಪಂಚದಾದ್ಯಂತ ಸಾವಿಗೆ ಪ್ರಮುಖ ಕಾರಣವಾಗಿದೆ. ಹೆಚ್ಚಿನ ಜೀವಗಳನ್ನು ತೆಗೆದುಕೊಳ್ಳುತ್ತದೆ. ರೋಗನಿರ್ಣಯ ಮತ್ತು ಚಿಕಿತ್ಸೆಯಲ್ಲಿ ಪ್ರಗತಿಗಳ ಹೊರತಾಗಿಯೂ ವಿಶ್ವಾದ್ಯಂತ ಕ್ಯಾನ್ಸರ್ ಪ್ರಮಾಣ ಮತ್ತು ವರ್ಷಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದು ವಿಷಾದಕರ ಸಂಗತಿ. ಕ್ಯಾನ್ಸರ್ ಗಂಭೀರ ಸಮಸ್ಯೆಯಾಗಿದೆ. ಚಿಕಿತ್ಸೆ ನೀಡದೇ ಬಿಟ್ಟರೆ ಸಾವಿಗೆ ಕಾರಣವಾಗಬಹುದು. ಕ್ಯಾನ್ಸರ್ ಅಪಾಯವಿದ್ದರೆ ನಿಯಮಿತವಾಗಿ ಪರೀಕ್ಷೆಗೆ ಒಳಗಾಗುವುದು ಬಹುಮುಖ್ಯವಾಗಿದೆ ಎಂದರು.ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ನೀಲಪ್ಪ ಹೊಸಮನಿ ವಹಿಸಿದ್ದರು.ಕಾರ್ಯಕ್ರಮದಲ್ಲಿ ನ್ಯಾಕ್ ಸಂಚಾಲಕ ಅಮಿತ ಮಿರ್ಜಿ, ಮಹಿಳಾ ಘಟಕದ ಸಂಚಾಲಕಿ ವಿಜಯಲಕ್ಷ್ಮೀ, ವಾಣಿಜ್ಯಶಾಸ್ತ್ರ ಉಪನ್ಯಾಸಕಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮಂಡ್ಯದಲ್ಲಿ ಡಿ.೨೦,೨೧,೨೨ ರಂದು ನಡೆಯಲಿರುವ ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಹಾಗೂ ಪ್ರೇರಣೆ ಮೂಡಿಸುವ ನಿಟ್ಟಿನಲ್ಲಿ ಕನ್ನಡ ಜ್ಯೋತಿ ರಥ ಯಾತ್ರೆಯು ನಿಡಗುಂದಿ ಪಟ್ಟಣದಿಂದ ಮಂಗಳವಾರ ಪಟ್ಟಣದ ತೆಲಗಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಆಗಮಿಸುತ್ತಿದ್ದಂತೆ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ಕನ್ನಡಾಂಬೆಗೆ ಪೂಜೆ ಸಲ್ಲಿಸುವ ಮೂಲಕ ತಾಲೂಕಾಡಳಿತ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ವೃತ್ತದಲ್ಲಿ ಜಮಾಯಿಸಿದ ಕನ್ನಡಾಭಿಮಾನಿಗಳು ಭವ್ಯವಾಗಿ ಸ್ವಾಗತಿಸಿಕೊಂಡರು.ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭವಾದ ಮೆರವಣಿಗೆ ಗಣಪತಿ ಚೌಕ್ ಮಾರ್ಗವಾಗಿ ಪಟ್ಟಣದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತಕ್ಕೆ ಆಗಮಿಸಿತು.ಈ ಸಂದರ್ಭದಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಉದ್ದೇಶಿಸಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಇಂದಿನ ಯುವಜನಾಂಗಕ್ಕೆ ಕನ್ನಡ ನಾಡು-ನುಡಿಯ ಬಗ್ಗೆ ಜಾಗೃತಿ ಮೂಡಿಸಲು ಈ ರಥಯಾತ್ರೆಯು ನಾಡಿನಲ್ಲಿ ಸಂಚರಿಸುತ್ತಿದೆ. ಆಡಳಿತ ಭಾಷೆಯಾಗಿರುವ ಕನ್ನಡ ಸಂರಕ್ಷಣೆ ಮಾಡುವ ಜೊತೆಗೆ ಅದನ್ನು ಬೆಳೆಸುವ ಅಗತ್ಯವಿದೆ ಎಂದರು.ಜಿಲ್ಲಾ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರಕ್ತದಾನದಿಂದ ಮನುಕುಲ ಉಳಿಯಲಿಕ್ಕೆ ಸಾಧ್ಯ. ಆರೋಗ್ಯವಂತ ಯುವಕರು ರಕ್ತದಾನ ಮಾಡಲಿಕ್ಕೆ ಮುಂದೆ ಬರಬೇಕು ಎಂದು ಜಗದಂಬಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿಕುಮಾರ ಚವ್ಹಾಣ ಹೇಳಿದರು.ಮಂಗಳವಾರ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಅಂಬಾಭವಾನಿ ಎಜುಕೇಶನ್ ಟ್ರಸ್ಟ ಹಾಗೂ ಜಗದಂಬಾ ವಿದ್ಯಾವರ್ಧಕ ಸಂಘ ಹಮ್ಮಿಕೊಂಡ ನಾಡದೇವಿ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆ, ತಾಲೂಕ ಆಸ್ಪತ್ರೆ ಮತ್ತು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಏರ್ಪಡಿಸಿದ ಉಚಿತ ರಕ್ತದಾನ ಶಿಬಿರ, ಆರೋಗ್ಯ ಶಿಬಿರ ಮತ್ತು ಕಣ್ಣಿನ ತಪಾಸಣೆ ಶಿಬಿರದಲ್ಲಿ ಮಾತನಾಡಿದ ಅವರು.ರಕ್ತ ಕೊಡವದರಿಂದ ಹೊಸ ರಕ್ತವನ್ನು ಉತ್ಪತ್ತಿಯಾಗಿ ಮರಣಾಂತಿತ ರಕ್ತ ಹೀನತೆಯಲ್ಲಿರುವ ಎಷ್ಟೋ ಜನರಿಗೆ ಜೀವ ಉಳಿವುದರ ಜೊತೆಗೆ ಒಬ್ಬ ಆರೋಗ್ಯವಂತ ವ್ಯಕ್ತಿಯಾಗಿ ಇರುವುದಕ್ಕೆ ಸಾಧ್ಯವಾಗುತ್ತದೆ. ದಿನನಿತ್ಯ ಅತ್ಯವಶ್ಯಕ ಬೇಕಾದ ಆಹಾರ, ವಸ್ತು ಉತ್ಪಾದನೆ ಮಾಡಬಹುದು ಆದರೆ ರಕ್ತ ಮಾತ್ರ ಕೃತಕವಾಗಿ ಉತ್ಪಾದನೆ ಮಾಡಲು ಸಾಧ್ಯವಿಲ್ಲ. ದಾನಿಯ ದೇಹದಿಂದ ಮಾತ್ರ ರಕ್ತ ಪಡೆಯಲು ಸಾಧ್ಯ. ಆದರಿಂದ ಆರೋಗ್ಯವಂತ ವ್ಯಕ್ತಿಗಳನ್ನು ಮಾಡುವ ರಕ್ತದಾನ ಮತ್ತೋಬ್ಬರಿಗೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಂಡ್ಯ ಜಿಲ್ಲೆಯಲ್ಲಿ ಮುಂಬರುವ ಡಿಸೆಂಬರ್ ತಿಂಗಳ ೨೦,೨೧,೨೨ನೇ ದಿನಾಂಕಗಳಂದು ಜರುಗುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇಂದು ಪಟ್ಟಣಕ್ಕೆ ಕನ್ನಡ ಜ್ಯೋತಿ ರಥಯಾತ್ರೆ ಆಗಮಿಸಲಿದೆ.ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಜನರಲ್ಲಿ ಸಾಹಿತ್ಯಕ ಅಭಿಮಾನವನ್ನು ಮೂಡಿಸುವ ಅಂಗವಾಗಿ ಇಂದು ಮಧ್ಯಾನ್ಹ ೩ ಗಂಟೆಗೆ ಅಂಬೇಡ್ಕರ್ ವೃತ್ತಕ್ಕೆ ಆಗಮಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯ ಸ್ವಾಗತ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳು ಸೇರಿದಂತೆ ಪಟ್ಟಣದ ಎಲ್ಲ ಪ್ರಗತಿಪರ ಸಂಘ ಸಂಸ್ಥೆಗಳು, ಸಂಘಟನೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬದಲಾಗುತ್ತಿರುವ ಹವಾಮಾನ, ಹೆಚ್ಚುತ್ತಿರುವ ಕೃಷಿ ವೆಚ್ಚ, ಕುಂಠಿತವಾಗುತ್ತಿರುವ ಉತ್ಪಾದನೆ ಮತ್ತು ಅನಿಶ್ಚಿತವಾಗಿರುವ ಮಾರುಕಟ್ಟೆಯಂತಹ ಜ್ವಲಂತ ಸಮಸ್ಯೆಗಳಿಂದ ಬಸವಳಿದು ಅಸ್ತಿತ್ವ ಕಳೆದುಕೊಳ್ಳುವ ಅಪಾಯದಂಚಿನಲ್ಲಿರುವ ಕೃಷಿ ಕ್ಷೇತ್ರದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಹಾಗೂ ಸಹ ಸಂಶೋಧನಾ ನಿರ್ದೇಶಕ ಡಾ. ಅಶೋಕ ಸಜ್ಜನ ಕರೆ ನೀಡಿದರು.ತಾಲೂಕಿನ ಮಡಿಕೇಶ್ವರ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮಂಗಲ ಭವನದಲ್ಲಿ ಕುಕ್ಕುಟ ಸಹಕಾರಿ ಮಹಾಮಂಡಳ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರ ವಿಜಯಪುರ, ಪರಪ್ಪ ಮಾಸ್ತರ ಸಾವಯವ ಕೃಷಿ ವಿದ್ಯಾಪೀಠ, ಬಸರಕೋಡ, ಶ್ರೀ ಪರಮಾನಂದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹರನಾಳ ಹಾಗೂ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿ ಇವುಗಳ ಸಂಯುಕ್ತಾಶ್ರಯದಲ್ಲಿ ಅಮೃತ ರೈತ ಉತ್ಪಾದಕ ಸಂಸ್ಥೆಗಳ ಯೋಜನೆ ಅನುದಾನದಲ್ಲಿ ಏರ್ಪಡಿಸಲಾಗಿದ್ದ ಕೋಳಿ ಸಾಕಾಣಿಕೆ, ಕೃಷಿ ಮತ್ತು ತೋಟಗಾರಿಕೆಯಲ್ಲಿ ಆಧುನಿಕತೆಗಳ ಅಳವಡಿಕೆಗಳ ಕುರಿತಾದ ಹೋಬಳಿ ಮಟ್ಟದ ರೈತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೃಷಿ ಸುಸ್ಥಿರತೆಯನ್ನು ಗಮನದಲ್ಲಿಟ್ಟುಕೊಂಡು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶಾಸಕ ಹಾಗೂ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ ನ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿಯವರ ೬೭ನೇ ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅ.೧೧ ರಂದು ಪಟ್ಟಣದಲ್ಲಿ ವಿವಿಧ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ.ಬೆಳಿಗ್ಗೆ ೧೦ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ, ೧೧ಕ್ಕೆ ಪಟ್ಟಣದ ಬಸ್ ನಿಲ್ದಾಣದ ಎದುರಿನ ಪಿಎಲ್‌ಡಿ ಬ್ಯಾಂಕ್ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣು ತಪಾಸಣೆ, ಮಧ್ಯಾಹ್ನ ೧೨ಕ್ಕೆ ನಿರ್ಗತಿಕರಿಗೆ ಹಾಸಿಗೆ ಕಿಟ್ ವಿತರಣೆ ಸಂಜೆ ೬ಕ್ಕೆ ಪಟ್ಟಣದ ಹುಡಕೋ ಕಾಲೋನಿಯ ಗ್ರಾಮದೇವತೆ ಕುಸ್ತಿ ಮೈದಾನದಲ್ಲಿ ಹುಟ್ಟು ಹಬ್ಬಕ್ಕೆ ಶುಭಕೋರುವ ಕಾರ್ಯಕ್ರಮ ಜರುಗಲಿದೆ.ಈ ಕಾರ್ಯಕ್ರಮದ ಸಾನಿಧ್ಯವನ್ನು ಇಂಗಳೇಶ್ವರದ ಚನ್ನಬಸವ ಮಹಾಸ್ವಾಮಿಗಳು, ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು, ತಾಳಿಕೋಟೆಯ ಖಾಸ್ಗತೇಶ್ವರಮಠದ ಬಾಲ ಶಿವಯೋಗಿ ಸಿದ್ಧಲಿಂಗದೇವರು ವಹಿಸುವರು.

Read More

ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ಶರಣರ ನಾಡಿನ ನಾಡದೇವಿಯ ೭ನೇ ವರ್ಷದ ಉತ್ಸವದ ಅಂಗವಾಗಿ ದೇವಿಯ ಮೆರವಣಿಗೆ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು.ಪಟ್ಟಣದ ಬುದ್ನಿ ಓಣಿಯಲ್ಲಿ ದಿ:೦೮ ರಿಂದ ೧೨ ರವರೆಗೆ ಪ್ರತಿಷ್ಠಾಪನೆಗೊಳ್ಳುತ್ತಿರುವ ನಾಡದೇವಿ ಮಹೋತ್ಸವದ ಅಂಗವಾಗಿ ದೇವಿಯ ಮೆರವಣಿಗೆ ಮಂಗಳವಾರ ಸಾಯಂಕಾಲ ಇಂಡಿ ರಸ್ತೆಯ ಕೆ.ಇ.ಬಿಯಿಂದ ಪ್ರಾರಂಭಗೊಂಡು, ಅಂಬೇಡ್ಕರ ವೃತ್ತ, ಮೊಹರೆ ವೃತ್ತ ಮಾರ್ಗವಾಗಿ ಮೇನ್ ಬಜಾರ್, ಪತ್ತಾರಕಟ್ಟೆಯ ಮೂಲಕ ಪ್ರತಿಷ್ಠಾಪನೆಯ ಸ್ಥಳ ರಾತ್ರಿ ತಲುಪಿತು. ಉತ್ಸವದಲ್ಲಿ ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರ ತಜ್ಞ ಪ್ರಭುಗೌಡ ಬಿ.ಎಲ್.(ಚಬನೂರ) ಪಾಲ್ಗೊಂಡು ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.ಮೆರವಣಿಗೆಯಲ್ಲಿ ಹಲಗೆ, ಡೋಳ್ಳು ವಾಧ್ಯಗಳ ತಂಡಗಳು ಹಾಗೂ ಅಬ್ಬರ ಸಂಗೀತದ ನಡುವೆ ಯುವಕರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನೋಡುಗರ ಗಮನ ಸೆಳೆದರು.ಉತ್ಸವ ಸಮೀತಿ ಅಧ್ಯಕ್ಷ ಕಲ್ಮೇಶ ಬುದ್ನಿ, ಪರದೇಶಿಮಠಶ್ರೀ, ಸೋಮಶೇಖರ ಹಿರೇಮಠ, ಸೋಮು ದೇವೂರ, ಕಾಶೀನಾಥ ಕೋರಿ, ಪ್ರಕಾಶ ಮಲ್ಲಾರಿ, ಕಾಶೀನಾಥ ಹಿರೇಮಠ, ಶ್ರೀಶೈಲ ಯಂಭತ್ನಾಳ, ವೀರೇಶ ಬುದ್ನಿ, ದತ್ತಾತ್ರೇಯ ಕುಲಕರ್ಣಿ,…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜ್ಞಾನ ಮತ್ತು ವಿಜ್ಞಾನ ಸಹಿತವಾಗಿರುವ ಭಗವದ್ಗೀತೆ ನಮಗಷ್ಟೆ ಅಲ್ಲದೆ ನಮ್ಮ ಮುಂದಿನ ತಲೆಮಾರಿಗೆ ಬೇಕಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನಾಧಿಕಾರಿ ಪಿ. ನಾಗೇಶ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಶಿರಸಿ ಸೋಂದಾ ಸ್ವರ್ಣವಲ್ಲೀ ಸಂಸ್ಥಾನ ಯತಿವರೇಣ್ಯರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಆಯೋಜಿಸಿರುವ ಭಗವದ್ಗೀತಾ ಅಭಿಯಾನವನ್ನು ಸಂಘಟಿಸುವ ಉದ್ದೇಶದಿಮದ ಹಮ್ಮಿಕೊಳ್ಳಲಾದ ಪ್ರಶಿಕ್ಷಣ ವರ್ಗದಲ್ಲಿ ಅವರು ಮಾತನಾಡಿದರು.ಜ್ಞಾನವಿದ್ದಲ್ಲಿ ವಿಜ್ಞಾನವನ್ನು ವಿಶ್ಲೇಷಣೆ ಮಾಡಬಹುದಾಗಿದೆ. ವಿಜ್ಞಾನವನ್ನು ಅಧ್ಯಯನ ಮಾಡಬೇಕಾದರೆ ಜ್ಞಾನದ ಅರಿವು ಇರಬೇಕಾಗುತ್ತದೆ. ಅಂತಹ ಜ್ಞಾನ, ವಿಜ್ಞಾನ, ಮನೋವಿಜ್ಞಾನ ಅಲ್ಲದೆ ಸರ್ವಜ್ಞಾನ ಸದೃಶ ಗ್ರಂಥ ಭಗವದ್ಗೀತೆಯಾಗಿದೆ. ಆದುದರಿಂದ ಇದನ್ನು ಅಭ್ಯಸಿಸಿ ಅನ್ವಯಿಸಿಕೊಳ್ಳಲೇಬೇಕಾಗಿದೆ. ಈ ರೀತಿ ಪ್ರಶಿಕ್ಷಣ ವರ್ಗಕ್ಕೆ ಬರುವಾಗ ನಾವು ನಮ್ಮ ಮಕ್ಕಳನ್ನ, ಮನೆಯ ಸದದ್ಯರುಗಳನ್ನ, ಪರಿಚಿತರೊಂದಿಗೆ ಜೊತೆಗೂಡಿ ಬಂದಲ್ಲಿ ಅನೂಕೂಲವಾಗುತ್ತದೆ. ಅಲ್ಲದೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಅಡಗಿರುವ ಜ್ಞಾನ ನಿರಂತರವಾಗಿ ಹರಿಯಲು ಸಾಧ್ಯವಾಗುತ್ತದೆ ಎಂದರು.ಅಭಿಯಾನ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರೀತಿ ದೇಗಿನಾಳ, ಅಭಿಯಾನ…

Read More

ಸಚಿವ ಜಮೀರ್ ಅಹ್ಮದ್ ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿರುಗೇಟು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಮೀರ್ ಅಹ್ಮದ್ ಅವರೇ, ಅಪ್ಪನಿಂದ ಬಂದ ಆಸ್ತಿ ಕಾನೂನು ಬದ್ಧವಾಗಿರುತ್ತದೆ. ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ ಪರಿಕಲ್ಪನೆ/ಕಾನೂನು ಅಸಂವಿಧಾನಿಕ ಹಾಗೂ ಕಾನೂನು ಬಾಹಿರ ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ತಿರುಗೇಟು ನೀಡಿದ್ದಾರೆ.ಈ ಕುರಿತಂತೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, ಜಮೀರ್ ಅವರೇ, ದೇಣಿಗೆ ಪಡೆದು ಇಂದು ವಕ್ಫ್ ಭಾರತದ ಮೂರನೇ ಅತಿದೊಡ್ಡ ಭೂ ಒಡೆಯ ಆಗಿದೆಯಾ? ಇದನ್ನು ನಂಬುವುದಕ್ಕೆ ಸಾಧ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ.ವಕ್ಫ್ ನಿಂದ ಆರ್ಥಿಕ ಸಮಾನತೆ ಸಾಧ್ಯವಿದೆಯೇ? ಅಸಲಿಗೆ, ವಕ್ಫ್ ನಂತ ಕಾಯ್ದೆ ಮುಸ್ಲಿಂ ಬಾಹುಳ್ಯ ದೇಶಗಳಲ್ಲೇ ಇಲ್ಲ, ಇನ್ನು ಜಾತ್ಯತೀತ ದೇಶವಾದ ಭಾರತದಲ್ಲಿ ಏಕೆ ಬೇಕು? ರೋಷಾವೇಶದಿಂದ ಟೀಕೆ ಮಾಡುವ ಮುನ್ನ ಸತ್ಯಾಸತ್ಯತೆಯನ್ನು ಪರಾಮರ್ಶಿಸಿ, ಜಾತ್ಯತೀತ ರಾಷ್ಟ್ರದಲ್ಲಿ ವಕ್ಫ್ ಕಾನೂನುಗಳು ಅರಾಜಕತೆ ಉಂಟುಮಾಡುತ್ತದೆ ಎಂಬುದನ್ನು ತಿಳಿಯಿರಿ.ಸಿಕ್ಕ ಸಿಕ್ಕ ಭೂಮಿ ನಮ್ಮದು…

Read More