Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಶ್ರೀ ಭವಾನಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಶ್ರೀ ದೇವಿಯ ಮೂರ್ತಿಗೆ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಯಿತು.ಇದೇ ವೇಳೆ ದೇವಸ್ಥಾನದ ಕಮೀಟಿ ಮತ್ತು ದೇವಿ ಉಪಾಸಕರಾದ ಮೋತಿಲಾಲ ಕುಲಕರ್ಣಿ ಅವರ ಸಂಕಲ್ಪದಂತೆ ೧೦೦೧ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಹಿರೂರ ಹಿರೇಮಠದ ಜಯಸಿದ್ಧೇಶ್ವರ ಶಿವಾಚಾರ್ಯರ ಸಮ್ಮುಖದಲ್ಲಿ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ಕೆ ಚಾಲನೆ ನೀಡಲಾಯಿತು ಮತ್ತು ಸುಮಂಗಲೆಯರಿಗೆ ವಿಶೇಷವಾದ ಪ್ರಸಾದದ ವ್ಯವಸ್ಥೆ ಮಾಡಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಅಲ್ಪ ಸಂಖ್ಯಾತರ ಹಿತ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗ್ರಾಮದಲ್ಲಿ ಮಂಜೂರಾದ ಶಾದಿಮಹಲ್ ಕಟ್ಟಡಕ್ಕೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಚುನಾವಣೆ ಸಂದರ್ಭದಲ್ಲಿ ಈ ಭಾಗದಲ್ಲಿ ಶಾದಿಮಹಲ್ ನಿರ್ಮಿಸಿಕೊಡುವುದಾಗಿ ಆಶ್ವಾಸನೆ ನೀಡಲಾಗಿತ್ತು. ಕೊಟ್ಟ ಮಾತಿನಂತೆ ನಡೆದುಕೊಂಡು ಸಿಂದಗಿ ಮತಕ್ಷೇತ್ರದ ಮಲಘಾಣ ಹಾಗೂ ಮೋರಟಗಿ ಗ್ರಾಮಗಳಲ್ಲಿ ಶಾದಿಮಹಲ್ ನಿರ್ಮಾಣಕ್ಕೆ ವಿಶೇಷ ಕಾಳಜಿ ವಹಿಸಿ ಅನುದಾನ ತರಲಾಗಿದೆ. ಪ್ರಸಕ್ತ ವರ್ಷ ರಾಜ್ಯದ ೨೨೪ ಮತಕ್ಷೇತ್ರಗಳ ಪೈಕಿ ಸಿಂದಗಿ ಮತಕ್ಷೇತ್ರದಲ್ಲಿ ಮಾತ್ರ ಎರಡು ಶಾದಿಮಹಲ್ ಗಳನ್ನು ಮಂಜೂರು ಮಾಡಲಾಗಿದ್ದು, ನಾವೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಜಮೀರ್ ಅಹ್ಮದ್ ಅವರಿಗೆ ಋಣಿಯಾಗಿರಬೇಕು ಎಂದರು.ಸಿಂದಗಿ ಮತಕ್ಷೇತ್ರ ವ್ಯಾಪ್ತಿಯ ಯರಗಲ್ ಬಿ.ಕೆ., ರಾಂಪುರ ಹಾಗೂ ಚಟ್ಟರಕಿ ಗ್ರಾಮಗಳಲ್ಲೂ ಶಾದಿಮಹಲ್ ಮಂಜೂರು ಹಂತದಲ್ಲಿವೆ. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬದ್ಧವಾದ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ೫ ಕೋಟಿ…

Read More

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ಬದ್ಧ :ಶಾಸಕ ಮನಗೂಳಿ ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಅಲ್ಪ ಸಂಖ್ಯಾತರ ಹಿತ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗ್ರಾಮದಲ್ಲಿ ಮಂಜೂರಾದ ಶಾದಿಮಹಲ್ ಕಟ್ಟಡಕ್ಕೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಚುನಾವಣೆ ಸಂದರ್ಭದಲ್ಲಿ ಈ ಭಾಗದಲ್ಲಿ ಶಾದಿಮಹಲ್ ನಿರ್ಮಿಸಿಕೊಡುವುದಾಗಿ ಆಶ್ವಾಸನೆ ನೀಡಲಾಗಿತ್ತು. ಕೊಟ್ಟ ಮಾತಿನಂತೆ ನಡೆದುಕೊಂಡು ಸಿಂದಗಿ ಮತಕ್ಷೇತ್ರದ ಮಲಘಾಣ ಹಾಗೂ ಮೋರಟಗಿ ಗ್ರಾಮಗಳಲ್ಲಿ ಶಾದಿಮಹಲ್ ನಿರ್ಮಾಣಕ್ಕೆ ವಿಶೇಷ ಕಾಳಜಿ ವಹಿಸಿ ಅನುದಾನ ತರಲಾಗಿದೆ. ಪ್ರಸಕ್ತ ವರ್ಷ ರಾಜ್ಯದ ೨೨೪ ಮತಕ್ಷೇತ್ರಗಳ ಪೈಕಿ ಸಿಂದಗಿ ಮತಕ್ಷೇತ್ರದಲ್ಲಿ ಮಾತ್ರ ಎರಡು ಶಾದಿಮಹಲ್ ಗಳನ್ನು ಮಂಜೂರು ಮಾಡಲಾಗಿದ್ದು, ನಾವೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಜಮೀರ್ ಅಹ್ಮದ್ ಅವರಿಗೆ ಋಣಿಯಾಗಿರಬೇಕು ಎಂದರು.ಸಿಂದಗಿ ಮತಕ್ಷೇತ್ರ ವ್ಯಾಪ್ತಿಯ ಯರಗಲ್ ಬಿ.ಕೆ., ರಾಂಪುರ ಹಾಗೂ ಚಟ್ಟರಕಿ ಗ್ರಾಮಗಳಲ್ಲೂ ಶಾದಿಮಹಲ್ ಮಂಜೂರು ಹಂತದಲ್ಲಿವೆ. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬದ್ಧವಾದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಲ, ವೃಕ್ಷ, ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಪಂಚ ತತ್ವಗಳಡಿ ಸರ್ವಾಂಗೀಣ ಅಭಿವೃದ್ಧಿಗೆ ಸಚಿವ ಎಂ.ಬಿ.ಪಾಟೀಲ ಶ್ರಮಿಸುತ್ತಿದ್ದಾರೆ ಎಂದು ಬಿ.ಎಲ್.ಡಿ.ಇ ಸಂಸ್ಥೆ ಆಡಳಿತಾಧಿಕಾರಿ ಐ.ಎಸ್. ಕಾಳಪ್ಪನವರ ಹೇಳಿದ್ದಾರೆ.ಸೋಮವಾರ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ಸಚಿವ ಎಂ.ಬಿ.ಪಾಟೀಲರ ಜನ್ಮದಿನದ ಅಂಗವಾಗಿ ಸಸಿ ನೆಡುವ ಮತ್ತು ಸಸಿ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಜಲಕ್ರಾಂತಿಯ ಮೂಲಕ ಅರಣ್ಯೀಕರಣಕ್ಕೂ ಮುನ್ನುಡಿ ಬರೆದಿರುವ ಸಚಿವರು, ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಕೈಗಾರಿಕೆ ಕ್ರಾಂತಿಯ ಕಡೆಗೆ ದೃಷ್ಟಿಯನ್ನು ಕೇಂದ್ರೀಕರಿಸಿದ್ದಾರೆ ಎಂದು ಹೇಳಿದರು.ಕಾಲೇಜಿನ ಪ್ರಾಚಾರ್ಯ ಡಾ. ವೈ. ತಮ್ಮಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಬಿ. ವೈ. ಖಾಸನಿಸ್, ಎಸ್.ಎಸ್.ಹೈಸ್ಕೂಲ್ ಬ ಶಾಲೆಯ ಪ್ರಾಚಾರ್ಯ ವೀರಣ್ಣ ಪಾಟೀಲ, ಸಿಪಿಇಡಿ ಕಾಲೇಜಿನ ಪ್ರಾಚಾರ್ಯ ಮಲ್ಲನಗೌಡ ಕುಪ್ಪಿ, ಬಾಲಕಿಯರ ಪ್ರೌಢ ಶಾಲೆ ಮುಖ್ಯಾಧ್ಯಾಪಕಿ ವಿ.ಪಿ.ನಿಡೋಣಿ, ಸಮನ್ವಯ ಶಾಲೆ ಮುಖ್ಯೋಪಾಧ್ಯಾಯ ಸಿದ್ದು ಬಿರಾದಾರ, ಸಿ. ಟಿ.…

Read More

ಮುತವಲ್ಲಿಗಳ ಸಮ್ಮೇಳನ-ವಕ್ಫ್ ಅದಾಲತ್ ಕಾರ್ಯಕ್ರಮ | ಸಚಿವ ಜಮೀರ ಅಹ್ಮದ್‌ಖಾನ್ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ನಮಗೆ ಒದಗಿಸಿದ ಸಂವಿಧಾನದಿಂದಲೇ ಇಂದು ನಾವು ಅತ್ಯಂತ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಪ್ರತಿಯೊಬ್ಬರಿಗೂ ತಮ್ಮ ಹಕ್ಕು ಪ್ರತಿಪಾದನೆಗೆ ಸಂವಿಧಾನ ಅವಕಾಶ ಒದಗಿಸಿದ್ದು, ವಕ್ಫ್ ಆಸ್ತಿ ಯಾವುದೇ ವೈಯಕ್ತಿಕ ಸ್ವತ್ತಲ್ಲ, ಇದು ದೇವರ ಆಸ್ತಿ ಇದರ ಸಂರಕ್ಷಣೆ ನಮ್ಮ ಹಕ್ಕು ಹಾಗೂ ಜವಾಬ್ದಾರಿಯಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಜೆಡ್.ಜಮೀರ್‌ಅಹ್ಮದ ಖಾನ್ ಹೇಳಿದರು.ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ವಕ್ಫ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸಹಯೋಗದಲ್ಲಿ ಜಿಲ್ಲೆಯ ಮುತ್ತವಲ್ಲಿಗಳ ಸಮ್ಮೇಳನ ಹಾಗೂ ವಕ್ಫ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ವಕ್ಫ ಆಸ್ತಿ ಸಂರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಈವರೆಗೆ ರಾಜ್ಯದಾದ್ಯಂತೆ ೧೦ ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಇಂದು…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪ್ರತಿ ವರ್ಷ ದಂತೆ ಈ ವರ್ಷವೂ ಕೂಡಾ ಅ.೧೩ ರಂದು ಭಾನುವಾರ ದಿನ ವಿಜಯಪುರ ನಗರದ ಜಮಖಂಡಿ ರಸ್ತೆಯ ರಿಂಗ ರೋಡನಲ್ಲಿರುವ ತಮ್ಮ ತೋಟದ ಮನೆಯಲ್ಲಿ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆದ್ದರಿಂದ ಬಸವನಬಾಗೇವಾಡಿ ಮತಕ್ಷೇತ್ರದ ಜನತೆ ಹಾಗೂ ಎಲ್ಲ ಹಿತೈಷಿಗಳು ಈ ಬನ್ನಿ ವಿನಿಮಯ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜವಳಿ, ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಹುಟ್ಟು-ಸಾವುಗಳ ಮಧ್ಯೆ ನಾವು ಹೇಗೆ ಜೀವನ ಮಾಡುತ್ತೇವೆ ಎಂಬುವದು ಬಹಳ ಮುಖ್ಯವಾಗಿದೆ. ಜೀವನದಲ್ಲಿ ಉತ್ತಮ ಜೀವನ ಮಾಡಿದರೆ ಸಮಾಜದಲ್ಲಿ ಶಾಶ್ವತವಾಗಿ ಇರಲು ಸಾಧ್ಯ. ಈ ನಿಟ್ಟಿನಲ್ಲಿ ಸಮಾಜಪರ ಕಳಕಳಿ ಹೊಂದಿರುವ ಭೂತಲ-ಪಾಟೀಲ ಉಭಯ ಶಿಕ್ಷಕ ದಂಪತಿಗಳು ತಮ್ಮ ನಿವೃತ್ತ ಜೀವನದ ನಂತರವೂ ಸಾಮಾಜಿಕ ಸೇವೆಯಲ್ಲಿ ತೊಡಗುವಂತಾಗಿ ಅವರ ನಿವೃತ್ತಿ ಜೀವನ ಸುಖಕರವಾಗಲೆಂದು ದೇವರಹಿಪ್ಪರಗಿ ಶಾಸಕ ಭೀಮನಗೌಡ(ರಾಜುಗೌಡ) ಪಾಟೀಲ ಕುದರಿಸಾಲವಾಡಗಿ ಹೇಳಿದರು.ಪಟ್ಟಣದ ವೀರಭದ್ರೇಶ್ವರ ನಗರದಲ್ಲಿರುವ ಸಿದ್ರಾಮೇಶ್ವರ ನಿವಾಸದ ಮುಂಭಾಗ ಶನಿವಾರ ಹಮ್ಮಿಕೊಂಡಿದ್ದ ಉಮಾದೇವಿ ಭೂತಲ (ಪಾಟೀಲ) ಅವರ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಮಾದೇವಿ ಭೂತಲ ಅವರ ಪತಿ ನಿವೃತ್ತ ಶಿಕ್ಷಕ ಎಸ್.ಜಿ.ಪಾಟೀಲ ಅವರು ಸಮಾಜದಲ್ಲಿ ಹೇಗೆ ಬದುಕಬೇಕೆಂಬದನ್ನು ತೋರಿಸಿಕೊಟ್ಟಿದ್ದಾರೆ. ಅವರು ತಮ್ಮ ಪತ್ನಿ ಉಮಾದೇವಿ ಅವರನ್ನು ಸಹ ಸಮಾಜಪರ ಚಟುವಟಿಕೆಯಲ್ಲಿ ಭಾಗವಹಿಸುವಂತೆ ಮಾಡುವ ಮೂಲಕ ಅವರಿಂದ ಸಮಾಜಕ್ಕೆ ಸೇವೆ ಸಲ್ಲಿಸುವಂತೆ ಮಾಡಿದ್ದಾರೆ. ಇರ್ವರು ಶಿಕ್ಷಕ ವೃತ್ತಿಯಲ್ಲಿ ಉತ್ತಮ ಸೇವೆ ಮಾಡುವ ಮೂಲಕ ಮಕ್ಕಳಿಗೆ ಜ್ಞಾನರ್ಜನೆ…

Read More

ವಿಜಯಪುರ ಮಹಾನಗರ ಪಾಲಿಕೆ ಸದಸ್ಯರಿಂದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತೀಯ ಪುರಾತತ್ವ ಇಲಾಖೆಗೆ, ಮಹಾನಗರ ಪಾಲಿಕೆ ಹಾಗೂ ಕಂದಾಯ ಇಲಾಖೆಗೆ ಸೇರಿರುವ ಆಸ್ತಿಗಳನ್ನು ಕಂದಾಯ ದಾಖಲೆಗಳಲ್ಲಿ ಕಾನೂನು ಬಾಹಿರವಾಗಿ ವಕ್ಫ್ ಸೊತ್ತು ಎಂದು ದಾಖಲಿಸಿದ್ದನ್ನು ತೆರವುಗೊಳಿಸಲು ಒತ್ತಾಯಿಸಿ ವಿಜಯಪುರ ಮಹಾನಗರ ಪಾಲಿಕೆ ಸದಸ್ಯರು ಸೋಮವಾರ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ಮನವಿ ಸಲ್ಲಿಸಿದರು.ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ವಿಜಯಪುರ ಜಿಲ್ಲೆಯ ಮುತ್ತಾವಲ್ಲಿಗಳ ಸಮ್ಮೇಳನ ಮತ್ತು ವಕ್ಫ್ ಅದಾಲತ್ ದಲ್ಲಿ ಭಾಗವಹಿಸಿದ್ದ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿ, ನಗರ ಮತ್ತು ವಿಜಯಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ವಕ್ಫ್ ಆಸ್ತಿಯನ್ನಾಗಿ ದಾಖಲು ಮಾಡಿರುವುದನ್ನು ದಾಖಲೆ ಸಹಿತ ಮನವರಿಕೆ ಮಾಡಿ, ವಕ್ಫ್ ಸೊತ್ತು ಮಾಡಿರುವುದನ್ನು ತೆರವುಗೊಳಿಸಲು ಒತ್ತಾಯಿಸಿದರು.ಅಲ್ಲದೆ, ಇದೀಗ ಜಿಲ್ಲಾಡಳಿತ ತಯಾರಿಸಿದ ಯಾದಿ ಪ್ರಕಾರ ವಿಜಯಪುರ…

Read More

ಅ.18 ರಂದು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಎಂದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ಜಾತಿ ಗಣತಿ ಎಂದು ಜನಪ್ರಿಯವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಜಾರಿಗೊಳಿಸುವ ಬಗ್ಗೆ ಅ.18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.ಜಾತಿ ಗಣತಿ ವರದಿ ಕುರಿತು ಇಂದು ಹಿಂದುಳಿದ ವರ್ಗಗಳ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ನಂತರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಸದರಿಗೂ ಈ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಯಾರೂ ಬಂದಿಲ್ಲ. ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಸುಮಾರು 30 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು ಮತ್ತು ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ ಎಂದರು.ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ…

Read More