Author: editor.udayarashmi@gmail.com

ದಿ.ವಿಜಯ ಸಿಂಧೂರ ರವರಿಗೆ ನಾಡಿನ ಕಲಾವಿದರಿಂದ “ಚಿತ್ರ ನಮನ ಕಲಾಶಿಬಿರ & ಕಲಾಕೃತಿಗಳ ಪ್ರದರ್ಶನ” ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರದ ಕ್ಯಾನವಾಸ್ ಆರ್ಟ್ ಫೌಂಡೇಷನ್ ಹಾಗೂ ಸಿದ್ದಲಿಂಗ ಫೈನ್ ಆರ್ಟ್ ಸೊಸೈಟಿ ಆಯೋಜಿಸಿದ ಇತ್ತೀಚಿಗೆ ನಿಧನರಾದ ಜಮಖಂಡಿಯ ಹೆಸರಾಂತ ಹಿರಿಯ ಕಲಾವಿದರಾಗಿದ್ದ ದಿ.ವಿಜಯ ಸಿಂಧೂರ ರವರಿಗೆ ನಾಡಿನ ಕಲಾವಿದರಿಂದ “ಚಿತ್ರ ನಮನ ಕಲಾಶಿಬಿರ ಹಾಗೂ ದಿ. ಶ್ರೀ ವಿಜಯ ಸಿಂಧೂರ ಅವರ ಮೂಲ ಕಲಾಕೃತಿಗಳ ಪ್ರದರ್ಶನ” ರವಿವಾರ ನಗರದ ಪ್ರವಾಸೋಧ್ಯಮ ಇಲಾಖೆಯ ಸರಕಾರಿ ಆರ್ಟಗ್ಯಾಲರಿಯಲ್ಲಿ ನಡೆಯಿತು.ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ವಿ.ವಿ. ಪ್ರಾಧ್ಯಾಪಕ ಡಾ.ವಿಷ್ಣು ಎಂ. ಶಿಂದೆ ಅವರು, ಕಲಾವಿದರು ನಾಡಿನ ಸಂಪತ್ತು. ಕಲಾವಿದರು ಹೋದರು ಕಲೆ ಅಜರಾಮರವಾಗಿರುತ್ತದೆ ವಿಜಯ ಸಿಂಧೂರ ಜಮಖಂಡಿಯ ಸಣ್ಣ ಊರಿನಲ್ಲೇ ಇದ್ದು ಇಡಿ ದೇಶದ ಕಲಾಸಕ್ತರ ಗಮನ ಸೆಳೆದವರು. ಜಮಖಂಡಿಯು ವಿಜಯ ಸಿಂಧೂರರ ಮೂಲಕ ದೃಶ್ಯಕಲಾ ಲೋಕದಲ್ಲಿ ತನ್ನ ಛಾಪು ಮೂಡಿಸಿದೆ. ಹಾಗೆ ನಾಡಿನ ಬಹುತೇಕ ಎಲ್ಲ ಪ್ರಶಸ್ತಿ ಗೌರವಗಳಿಗೆ ಭಾಜನರಾದ ಸಿಂಧೂರರವರು ಉತ್ತರ ಕರ್ನಾಟಕದ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಉತ್ತರ ವಲಯ ಬೆಳಗಾವಿಯಲ್ಲಿ ಜರುಗಿದ ವಲಯ ಮಟ್ಟದ ಪೋಲಿಸ ಕರ್ತವ್ಯ ಕೂಟದಲ್ಲಿ ಇಂಡಿ ಸಿ.ಪಿ.ಐ ಗ್ರಾಮಾಂತರ ಮಲ್ಲಿಕಾರ್ಜುನ ಡಪ್ಪಿನ ರವರಿಗೆ ಆರು ಚಿನ್ನದ ಪದಕಗಳು ಲಭಿಸಿವೆ.ಸ್ಪರ್ಧೇಯಲ್ಲಿ ವಿಜಯಪುರ, ಬಾಗಲಕೋಟ, ಧಾರವಾರ ಗದಗ ಮತ್ತು ಬೆಳಗಾವಿ ಜಿಲ್ಲೆ ಪೋಲಿಸ ಅಧಿಕಾರಿಗಳು ಭಾಗವಹಿಸಿದ್ದರು.ಕಳೆದ ವರ್ಷವೂ ಕೂಡ ಡಪ್ಪಿನ ರವರು ಆರು ಚಿನ್ನದ ಪಡೆದಿದ್ದರು. ಇದು ಎರಡನೆಯ ಬಾರಿ ಅವರಿಗೆ ಆರು ಚಿನ್ನದ ಪದಕ ಪಡೆದಿದ್ದಾರೆ.ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಪೋಲಿಸ್ ಡ್ಯೂಟಿ ಮೀಟ್ ಪೋಲಿಸರ ಶ್ರೇಷ್ಠತೆಗೆ ವೇಗವರ್ಧಕ, ಮತ್ತು ಪ್ರತಿಷ್ಠಿತ ಸ್ಪರ್ಧೇಯಾಗಿದೆ. ಈ ಸ್ಪರ್ಧೆ ಪೋಲಿಸ ಸಿಬ್ಬಂದಿಯನ್ನು ಒಟ್ಟುಗೂಡಿಸುತ್ತದೆ. ಮತ್ತು ಈ ವಾರ್ಷೀಕ ಕಾರ್ಯಕ್ರಮವು ಅಧಿಕಾರಿಗಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಜ್ಞಾನ ವಿನಿಮಯ ಮತ್ತು ಸೌಹಾರ್ಧತೆ ಯನ್ನು ಬೆಳೆಸಲು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಸ್ಪರ್ಧೇ ಕಾರ್ಯಾಚರಣೆ ಹೆಚ್ಚಿಸುವದಲ್ಲದೆ ಭಾರತೀಯ ಪೋಲಿಸ ಪಡೆಯೊಳಗೆಗ ಬಾಂದವ್ಯ ಹೆಚ್ಚಿಸುತ್ತದೆ.ದೈಹಿಕ ಸಾಮರ್ಥ್ಯ, ಮಾಕ್ಸಮನ್ ಶೀಫ್,ಅಡೆತಡೆ ಕೋರ್ಸು, ಜ್ಞಾನ ವಿನಿಮಯ,ವೃತ್ತಿಪರ ಅಭಿವೃದ್ದಿ, ಸ್ಥೈರ್ಯ ವರ್ಧಕ, ಸಾರ್ವಜನಿಕ ಇಮೇಜ ವರ್ಧನೆ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಗಣಪತಿ ಚೌಕ್ ದಲ್ಲಿರುವ ಗಣೇಶ ದೇವಸ್ಥಾನದ ಗಾಜಿಗೆ ಕಲ್ಲೆಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿ, ಈ ಕೃತ್ಯದ ಹಿಂದಿರುವ ಶಕ್ತಿಗಳನ್ನು ಬಯಲಿಗೆ ಎಳೆಯಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಾಂತವಾಗಿರುವ ನಮ್ಮ ವಿಜಯಪುರ ನಗರದಲ್ಲಿ ಶಾಂತಿ ಕದಡಬೇಕು, ಕೋಮು ಗಲಭೆ ಸೃಷ್ಟಿಸಲೆಂದೆ ನಗರದ ಗಣಪತಿ ಚೌಕ್ ದಲ್ಲಿರುವ ಹಿಂದೂಗಳ ಆರಾಧ್ಯದೈವ ಗಣೇಶ ದೇವಸ್ಥಾನಕ್ಕೆ ಕಲ್ಲೆಸೆದು, ಗಾಜು ಒಡೆದು ಹಾಕುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಿರುವುದು ಖಂಡನೀಯ.ದೇವಸ್ಥಾನಕ್ಕೆ ಕಲ್ಲೆಸೆದ ಆರೋಪಿಗಳು ಅಪ್ರಾಪ್ತರಾಗಿದ್ದರೆ, ಇವರ ಹಿಂದಿನ ಶಕ್ತಿಗಳು ಯಾವವು? ರಾಜಕೀಯ ವ್ಯಕ್ತಿಗಳ ಕೈವಾಡವಿದೆಯೇ? ಗಲಭೆ ಸೃಷ್ಟಿಸುವ ಸಂಘಟನೆಗಳ ಕುಮ್ಮಕ್ಕು ಇದೆಯೇ? ಸತ್ಯ ಹೊರ ಬರಬೇಕೆಂದರೆ, ಬಂಧಿತ ಆರೋಪಿಗಳನ್ನು ಮಂಪರು ಪರೀಕ್ಷೆ ನಡೆಸಬೇಕು. ಇವರ, ಇವರ ಸಂಬಂಧಿಗಳು, ಗೆಳೆಯರು ಮತ್ತು ಇವರು ವಾಸಿಸುವ ಟಕ್ಕೆಯಲ್ಲಿ ಯಾರ ಯಾರ ಜೊತೆ ಸಂಪರ್ಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಣಿಯಾದ ಫಲಾನುಔನಿಗಳಿಗೆ ಮೇಷನ್ ಕಿಟ್, ರೋಡ ನಿರ್ಮಾಣ ಮತ್ತು ಟೈಲ್ಸ್ ಲೇಯರ್ ಟೂಲ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.ನೋಂದಾಯಿಸಿ ಒಂದು ವರ್ಷ ಪೂರ್ಣಗೊಂಡಿರುವ ಕಟ್ಟಡ ಕಾರ್ಮಿಕರು ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ್ ಕಾರ್ಡ್, ಮತ್ತು ಫಲಾನುಭವಿಯ ಭಾವಚಿತ್ರ, ಸದರಿ ದಾಖಲೆಗಳನ್ನು ದಿನಾಂಕ ೨೧-೧೦-೨೦೨೪ರ ಒಳಗಾಗಿ ಕಾರ್ಮಿಕ ನಿರೀಕ್ಷಕರ ಕಚೇರಿ, ಬಂದಾಳ ರಸ್ತೆ, ಬಮ್ಮಣ್ಣಿ ಬಿಲ್ಡಿಂಗ್ ಸಿಂದಗಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇಲೆ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಸಿಂದಗಿಯ ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ ೩೦ ದಿನಗಳ ಉಚಿತ ತರಬೇತಿಯು ನವೆಂಬರ್ ೦೫ ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.ಆಸಕ್ತರು ೧೮ ರಿಂದ ೪೫ ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ ೧೮ ಕೊನೆಯ ದಿನವಾಗಿದೆತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: ೯೩೮೦೧೬೨೦೪೨,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯ ೧೩ ಗ್ರಾಮ ಪಂಚಾಯತನಲ್ಲಿ ಅಕ್ಟೋಬರ್ ೧೯ರಂದು ಬೆಳಿಗ್ಗೆ ೧೧ಗಂಟೆಗೆ ಪಿಂಚಣಿ ದಿನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.ವಿಜಯಪುರ ಗ್ರೇಡ್ ೨ ತಹಶೀಲ್ದಾರ್ ಅವರು ಶಿವಣಗಿಯ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ, ಬಬಲೇಶ್ವರ ಗ್ರೇಡ್ ೨ ತಹಶೀಲ್ದಾರರಿಂದ ಗ್ರಾಮ ಪಂಚಾಯತ್ ಕಾರ್ಯಾಲಯ ಹೊಸುರು(ಕೃಷ್ಣಾ ನಗರ), ತಿಕೋಟಾ ಗ್ರೇಡ್ ೨ ತಹಶೀಲ್ದಾರರಿಂದ ಸಿದ್ದಾಪೂರ ಕೆ ಗ್ರಾಮ ಪಂಚಾಯತ್ ಕಾರ್ಯಾಲಯದ ಸಮುದಾಯ ಭವನ, ಬಸವನ ಬಾಗೇವಾಡಿ ಗ್ರೇಡ್ ೨ ತಹಶೀಲ್ದಾರರಿಂದ ಮುತ್ತಗಿ ಗ್ರಾಮ ಪಂಚಾಯತ್ ಕಾರ್ಯಾಲಯ, ನಿಡಗುಂದಿ ಗ್ರೇಡ್ ೨ ತಹಶೀಲ್ದಾರರಿಂದ ಯಲಗೂರ ಗ್ರಾಮ ಪಂಚಾಯತ್ ಕಾರ್ಯಾಲಯದ ಸಭಾಭವನ, ಕೋಲಾರ ತಹಶೀಲ್ದಾರರಿಂದ ತೆಲಗಿ ಗ್ರಾಮ ಪಂಚಾಯತ್ ಕಾರ್ಯಾಲಯದ ಸಭಾ ಭವನದಲ್ಲಿ ಪಿಂಚಣಿ ದಿನ ನಡೆಯಲಿದೆ.ಮುದ್ದೇಬಿಹಾಳ ಗ್ರೇಡ್ ೨ ತಹಶೀಲ್ದಾರರಿಂದ ಮಡಿಕೇಶ್ವರ ಗ್ರಾಮಪಂಚಾಯತ್ ಆವರಣದಲ್ಲಿ, ತಾಳಿಕೋಟೆಯ ತಹಶೀಲ್ದಾರ್ ಅವರಿಂದ ಮೂಕಿಹಾಳ ಗ್ರಾಮ ಪಂಚಾಯತ್‌ನಲ್ಲಿ, ಇಂಡಿಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ೫,೦೦೦ರೂಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕದ ಮಾಲೀಕರು ಹಾಗೂ ಸದರಿ ಘಟಕಗಳಲ್ಲಿ ಕಾರ್ಯನಿರ್ವಹಿಸುತತಿರುವ ಅರ್ಹ ಕಾರ್ಯನಿರತ ವಿದ್ಯುತ್ ಮಗ್ಗ ನೇಕಾರರನ್ನು ಈಗಾಗಲೇ ಕಳೆದ ಸಾಲಿನಲ್ಲಿ ನೇಕಾರ ಸಮ್ಮಾನ್ (ವಿದ್ಯುತ್ ಮಗ್ಗ) ಯೋಜನೆಯಡಿ ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿದ ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಮದ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ ಜಿಲ್ಲೆಯ ನೇಕಾರರು ನಿಗಧಿತ ಅರ್ಜಿ ನಮೂನೆಯೊಂದಿಗೆ ಘಟಕದ ಮಾಲೀಕರಿಂದ ಮುಚ್ಚಳಿಕೆ ಪತ್ರ, ಘಟಕದ ಮಾಲೀಕರ/ನೇಕಾರರ ಆಧಾರ್ ಲಿಂಕ್ ಬ್ಯಾಂಕ್ ಪಾಸ್‌ಬುಕ್ ಪ್ರತಿ, ವಿದ್ಯುತ್ ಮಗ್ಗ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಲಾನುಭವಿಯ ಫೋಟೋ, ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್. ಸಂಖ್ಯೆಯ ಇತ್ತಿಚೀನ ವಿದ್ಯುತ್ ಬಿಲ್, ಘಟಕದ ಉದ್ಯೋಗ ಆಧಾರ್/ಪಿ.ಎಂ.ಟಿ ಉದ್ದಿಮೆದಾರರ ಪರವಾನಿಗೆ ಪತ್ರದ ಪ್ರತಿ, ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ನೇಕಾರರ ವಿವರಗಳನ್ನು ಒಳಗೊಂಡ ಮಜೂರಿಯ ಪಾವತಿಯ ಪ್ರತಿಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಎಸ್‌ಎಸ್‌ಎಲ್‌ಸಿ ಪಾಸ್, ಪೇಲ್ ಆದ ಕನಿಷ್ಠ ೧೮ ವರ್ಷ, ಗರಿಷ್ಠ ೪೦ ವರ್ಷ ವಯೋಮಿತಿಯ ಒಳಗಿನ ಯುವಕ ಯುವತಿಯರಿಂದ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಬೆಂಗಳುರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಶಿಬಿರ ನಡೆಯಲಿದ್ದು, ಹೊಲಿಗೆ ತರಬೇತಿ ಶಿಬಿರ ೦೭-೧೧-೨೦೨೪ರಿಂದ ೨೬-೧೧-೨೦೨೪ರವರೆಗೆ ೨೦ ದಿನಗಳ ಕಾಲ, ವಿಡಿಯೋಗ್ರಾಫಿ ತರಬೇತಿ ಶಿಬಿರ ೧೫-೧೧-೨೦೨೪ ರಿಂದ ೨೬-೧೧-೨೦೨೪ರವರೆಗೆ ೧೨ ದಿನಗಳ ಕಾಲ ನಡೆಯಲಿದೆ.ಆಸಕ್ತಿಯುಳ್ಳ ಯುವಕ ಯುವತಿಯರು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆ ವಿಜಯಪುರ ಕಾರ್ಯಾಲಯದಿಂದ ಅರ್ಜಿಗಳನ್ನು ಪಡೆದುಕೊಂಡು ದಿನಾಂಕ ೨೮-೧೦-೨೦೨೪ರಂದು ಸಾಯಂಕಾಲ ೫ ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ ೦೮೩೫೨-೨೫೧೦೮೫ ಮೊಬೈಲ್ ನಂ :೮೭೯೨೧೮೫೧೪೧ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಜಯಪುರದಲ್ಲಿ ೨೦೨೪-೨೫ ನೇ ಸಾಲಿನಲ್ಲಿ ಕರ್ನಾಟಕ ಐ.ಟಿ.ಐ ಉದ್ಯೋಗ ಸೊಸೈಟಿ ಮೂಲಕ ಅಒಏಏಙ ಅಡಿಯಲ್ಲಿ ೧.Junior Robot Operator & Programmer Arc Welding 2.Battery electric vehicle junior technician 3. Helper Electrician 4.TV repair technician 5. Manual Soldering Technician 6. Fitter Mechanical Assembly 7. Manual Metal arc welding/Shielded Metal arc welding 8. Operator Conventional Turnin g ವೃತ್ತಿಗಳಲ್ಲಿ ಅಲ್ಪಾವಧಿ ಕೋರ್ಸಗಳನ್ನು ದಿನಾಂಕ :೨೧-೧೦-೨೦೨೪ ರಿಂದ ಪ್ರಾರಂಭಿಸಲಾಗುವುದು.ಈ ತರಬೇತಿಗಳು ಉದ್ಯಮದಲ್ಲಿ ಉದ್ಯೋಗ ಪಡೆದುಕೊಳ್ಳಲು Finishing Courseಆಗಿರುತ್ತವೆ ಹಾಗೂ ಈ ಕೋರ್ಸಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸಂಬAಧಿಸಿದ ಕ್ಷೇತ್ರಗಳಲ್ಲಿ ವ್ಯಾಪಕ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಈ ಕೋರ್ಸಗಳಿಗಾಗಿ ರೂ.೧೧೦೦೦/- ಶುಲ್ಕವನ್ನು ನಿಗದಿ ಮಾಡಿದ್ದು, ಮತ್ತು ೮ನೇ ತರಗತಿ ಪಾಸಾದ ಅಭ್ಯರ್ಥಿಗಳು ಪ್ರವೇಶಾತಿಗಾಗಿ ಅರ್ಹತೆಯನ್ನು ಹೊಂದಿರುತ್ತಾರೆ. ಗರಿಷ್ಠ ಪ್ರವೇಶಾತಿಯ ಪ್ರತಿಶತ ೩೦ ರಷ್ಟು ಅರ್ಹತೆ ಹೊಂದಿದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಗೋಲಗೇರಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರಿಗೆ ಸನ್ಮಾನಿಸಿ ಅಭಿನಂದಿಸಿದರು.ಇದೇ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಬಸವರಾಜ ಮಾರಲಭಾವಿ, ಯುವ ಮುಖಂಡರಾದ ಮಡಿವಾಳ ನಾಯ್ಕೋಡಿ, ಶಂಕರ ಬೋರಗಿ, ಶರಣಗೌಡ ಬಿರಾದಾರ, ಶ್ರೀಶೈಲ ಹಿಪ್ಪರಗಿ ಬಸವರಾಜ ಜಂಬಗಿ ಶಾಂತಗೌಡ ಬಿರಾದಾರ ಸೇರಿದಂತೆ ಮತ್ತಿತ್ತರು ಇದ್ದರು.

Read More