Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಾನವನಿಗೆ ಆಕಸ್ಮಿಕ ಸಮಯದಲ್ಲಿ ತುರ್ತಾಗಿ ಅವಶ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುವ ವಸ್ತುವಾಗಿದೆ ಎಂದು ಯಂಕಂಚಿ ಶ್ರೀಮಠ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.ಸಿಂದಗಿ ಮತಕ್ಷೇತ್ರದ ಮಂಗಳೂರು ಗ್ರಾಮದಲ್ಲಿ ಸಮರ್ಥ ಸದ್ಗುರು ಶ್ರೀ ಭೀಮಾಶಂಕರ ಮಹಾರಾಜರ ೭೧ನೇ ಜಾತ್ರಾ ಮಹೋತ್ಸವದ ನಿಮಿತ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರಕ್ಕೆ ಚಾಲನೆ ಮಾತನಾಡಿದ ಅವರು, ಸಾಮಾಜದ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು. ರಕ್ತದಾನ ಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಯಾಗಲಿದೆ ಎಂದರು.ಇದೇ ಸಂದರ್ಭದಲ್ಲಿ ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರ, ಬಮ್ಮನಹಳ್ಳಿ ಶ್ರೀಮಠದ ಶ್ರೀ ಸದ್ಗುರು ನರಸಿಂಹ ಮಹಾರಾಜರು, ಐನಾಪುರ ಶ್ರೀಮಠದ ಉಪಮನ್ಯು ಶಿವಾಚಾರ್ಯರ ಸಮ್ಮುಖದಲ್ಲಿ ಮುತೈದೆಯರ ಉಡಿ ತುಂಬುವ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ಸಿಂದಗಿ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ತಾಲೂಕಾಧ್ಯಕ್ಷರಾಗಿ ಆಯ್ಕೆಯಾದ ಮಹಾಂತೇಶ ನೂಲಾನವರ ಹಾಗೂ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾದ ಸಿದ್ದಣ್ಣ ಕಡಗಂಚಿ ಅವರಿಗೆ ಯಂಕಂಚಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಶ್ರೀನಿವಾಸ್ ನಂದಶೆಟ್ಟಿ ಇತನು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಜರುಗಿದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ರಾಜ್ಯಮಟ್ಟದ ಹ್ಯಾಂಡ್‌ಬಾಲ್ ಆಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿಗಳಾದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಇಂದು ನಮ್ಮ ದೇಶದ ಹಳ್ಳಿಗಳಲ್ಲಿ ಮಾತ್ರ ಧರ್ಮ, ಸಂಸ್ಕೃತಿ ಮತ್ತು ಸಂಪ್ರದಾಯ ಉಳಿದಿವೆ. ಅದನ್ನು ಮತ್ತಷ್ಟು ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಚೌಡಾಪುರ ಮಹಾಂತೇಶ ಮಠದ ವೀರ ಮಹಾಂತ ಶ್ರೀಗಳು ಹೇಳಿದರು.ಪಟ್ಟಣದ ಶಿರಶ್ಯಾಡ ಶಾಖಾ ಮಠದಲ್ಲಿ ನಿರ್ಮಾಣಗಿಳ್ಳುತ್ತಿರುವ ಬಡ ಮಕ್ಕಳ ಶಿಕ್ಷಣ ಉಚಿತ ಪ್ರಸಾದ ನಿಲಯ ಹೊಸ್ತಿಲ ಪೂಜಾ ಕಾರ್ಯಕ್ರಮ ಸಮಾರಂಭದಲ್ಲಿ ಮಾತನಾಡಿದರು.ದೇಶದ ಪ್ರತಿ ಹಳ್ಳಿಯಲ್ಲೂ ಕನಿಷ್ಠ ೧೦ ರಿಂದ ೨೦ ದೇವಸ್ಥಾನಗಳು ಸಿಗುತ್ತವೆ. ಅದಕ್ಕೆ ಅವರದೇ ಆದ ಸಂಪ್ರದಾಯ ಮತ್ತು ಆಚರಣೆ ನಡೆಯುತ್ತಿರುತ್ತವೆ. ಆ ದೇವಸ್ಥಾನಗಳಿಗೆ ಉತ್ಸವ ಜಾತ್ರೆಗಳು ಸಹ ನಡೆಯುತ್ತವೆ. ಅದಕ್ಕೆಲ್ಲ ಅಪಾರ ಜನಸ್ತೋಮ ಸೇರುವದು. ದೇವರು ಧರ್ಮ ಸಂಪ್ರದಾಯದ ಮೇಲೆ ಇರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದರು.ಮಡಿವಾಳೇಶ್ವರ ಶ್ರೀಗಳು ಮಾತನಾಡಿ ದೇವರು ಹಲವು ದೈವತ್ವ ಒಂದೇ, ನಾಮಗಳು ಹಲವು ಅದರ ಹಿಂದೆ ಇರುವ ಭಕ್ತಿ ಒಂದೇ. ನಮ್ಮದೇ ಆದ ಸಂಸ್ಕೃತಿ ಸಂಪ್ರದಾಯ ಎಲ್ಲವೂ ನಮ್ಮವೇ,ನಾವೆಲ್ಲರೂ ಆಸ್ತಿಕರಾಗಿ ಬದುಕಬೇಕು ಎಂದರು.ಬಿಜೆಪಿ ಧುರೀಣ ಸುರೇಶ ಬಿರಾದಾರ ಮಾತನಾಡಿ…

Read More

ಕಾರ್ಯನಿರತ ಪತ್ರಕರ್ತರ ಸಂಘ ತಾಳಿಕೋಟಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಗಳ ನೇಮಕ ಮಾಡಲಾಯಿತು.ತಾಳಿಕೋಟಿ ಪ್ರವಾಸಿ ಮಂದಿರದಲ್ಲಿ ನಡೆದ ತಾಳಿಕೋಟಿ ತಾಲೂಕಿನ ೨೦೨೫-೨೮ರ ಸಾಲಿನ ಪದಾಧಿಕಾರಿಗಳ ಆಯ್ಕೆಯ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಚುನಾವಣಾಧಿಕಾರಿಯಾಗಿ ಉಸ್ತುವಾರಿಗಳಾಗಿ ಆಗಮಿಸಿದ ಕಾನಿಪ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮತ್ತು ಜಿಲ್ಲಾ ಖಜಾಂಚಿ ರಾಹುಲ ಆಪ್ಟೆ ಅವರ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ತಾಳಿಕೋಟಿ ತಾಲೂಕಿನ ಅಧ್ಯಕ್ಷರನ್ನಾಗಿ ಉದಯವಾಣಿ ವರದಿಗಾರ ಮೈಬೂಬಸುಬಾನಿ ಸಿರಸಗಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ಶಿವಾನಂದ ಎಮ್. ಸಜ್ಜನ ಮತ್ತು ಉಪಾಧ್ಯಕ್ಷರಾಗಿ ಸಂಜಯಸಿಂಗ್ ರಜಪೂತ, ಕಾರ್ಯದರ್ಶಿಯಾಗಿ ಯಲಗೂರಪ್ಪ ವಡವಡಗಿ ಹಾಗೂ ಖಜಾಂಚಿಯಾಗಿ ಸಂತೋಷ ಶಹಾಪೂರ ಅವರನ್ನು ಎಲ್ಲ ಕಾನಿಪ ಸದಸ್ಯರ ಸಹಮತದೊಂದಿಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಈ ವೇಳೆ ಕಾನಿಪ ಸದಸ್ಯರಾದ ಶ್ರೀಶೈಲ ಬಿರಾದಾರ,…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ೨೦೦೦-೨೦೦೭ ರವರೆಗೆ ಇಲ್ಲಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ಆರನೇ ವರ್ಗದಿಂದ ಪಿಯುಸಿ ವರೆಗೆ ಕಲಿತಿದ ವಿದ್ಯಾರ್ಥಿಗಳು ಪ್ರವೇಶ ಪಡೆದು ೨೫ ವರ್ಷದ ಸ್ಮರಣೆಗಾಗಿ ಎಲ್ಲಾ ಹಳೆ ವಿದ್ಯಾರ್ಥಿಗಳು “ಸ್ನೇಹಯಾನ ೨ಕೆ೨೫’ ಎಂಬ ಬೆಳ್ಳಿ ಹಬ್ಬ ಆಚರಿಸಿ ಸಂಭ್ರಮಿಸಿದರು.ಭಾನುವಾರ ನಡೆದ ಈ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ದೇಶದ ನಾನಾ ಕಡೆ ಕಾರ್ಯನಿರ್ವಹಿಸುತ್ತಿರುವ ಆ ಬ್ಯಾಚ್ ನ ೭೦ ಕ್ಕೂ ಅಧಿಕ ವಿದ್ಯಾರ್ಥಿಗಳು ಅಲ್ಲಿ ಸೇರಿದ್ದರು.ಈ ವಿದ್ಯಾಲಯದ ನಿವೃತ್ತ ಪ್ರಾಚಾರ್ಯ ರಾಘವನ್ ಕಾವಲನ್, ನಿವೃತ್ತ ಉಪಪ್ರಾಚಾರ್ಯ ಎಸ್.ಆರ್. ಅಂಗಡಿ ಮತ್ತೀತರರು ಮಾತನಾಡಿ ಈಚೆಗೆ ಮನುಷ್ಯನಲ್ಲಿ ಸ್ವಾರ್ಥ ಭಾವನೆ ಹೆಚ್ಚಾಗುತ್ತಿದ್ದು, ಸಂಬಂಧಗಳು ಮಹತ್ವ ಕಳೆದುಕೊಳ್ಳುತ್ತಿವೆ. ಜಂಜಾಟಮಯದ ಬದುಕಿನಲ್ಲಿ ಯಾರಿಗೂ ಪುರಸೊತ್ತಿಲ್ಲ ಎಲ್ಲರೂ ಒಂದೊಂದು ಕಾಯಕದಲ್ಲಿ ತಲ್ಲೀನರಾಗಿದ್ದಾರೆ. ಆಧುನಿಕತೆಯ ಸ್ಪರ್ಶದ ಸೋಗಿನಲ್ಲಿ ಯುವಜನತೆ ಮಮತೆ, ಸಹಾನುಭೂತಿ, ದಯೆ, ಕರುಣೆ, ಕನಿಕರ, ಸುವಿಚಾರ, ಸೌಜನ್ಯ ಮಾನವೀಯತೆ ಮರೆಯುತ್ತಲಿದ್ದಾರೆ. ಇಂಥ ವಾತಾರಣದಲ್ಲಿ ೨೫ ವರ್ಷಗಳ ಹಿಂದೆ ಕಲಿತ ವಿದ್ಯಾರ್ಥಿಗಳೆಲ್ಲಾ ಸೇರಿ ಕಲಿಸಿದ ಶಿಕ್ಷಕರನ್ನು ಕರೆಯಿಸಿ ಸನ್ಮಾನಿಸಿದ್ದು…

Read More

ಅಧ್ಯಕ್ಷರಾಗಿ ಮಹಾಂತೇಶ ನೂಲಾನವರ, ಪ್ರ.ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಶೇಖ ಅವಿರೋಧ ಆಯ್ಕೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಮಹಾಂತೇಶ ನೂಲಾನವರ, ಉಪಾಧ್ಯಕ್ಷರಾಗಿ ಭೀಮು ಕೆಂಭಾವಿ, ಅಂಬರೀಷ ಸುಣಗಾರ, ಪ್ರಧಾನ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಶೇಖ ಅವಿರೋಧವಾಗಿ ಆಯ್ಕೆಯಾದರು.ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕಾನಿಪ ಸಂಘ ಹಾಗೂ ತಾಲೂಕು ಘಟಕದ ಆಶ್ರಯದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಜರುಗಿತು.ಕಳೆದ ತಿಂಗಳು ಜಿಲ್ಲಾ ಘಟಕದ ಕಾನಿಪ ಚುನಾವಣೆ ಜರುಗಿದ ಬಳಿಕ ಜಿಲ್ಲೆಯ ಎಲ್ಲ ತಾಲೂಕುಗಳ ಪದಾಧಿಕಾರಿಗಳ ಆಯ್ಕೆಗೆ ಚಾಲನೆ ನೀಡಲಾಗಿತ್ತು. ಇದರಂತೆ ಡಿ.೧೦ರಂದು ಸಿಂದಗಿ ಘಟಕದ ಕಾನಿಪ ಪತ್ರಕರ್ತರ ಚುನಾವಣೆ ನಿಗದಿಯಾಗಿತ್ತು.ಈ ಚುನಾವಣೆಯಲ್ಲಿ ನೂತನ ಘಟಕದ ಪದಾಧಿಕಾರಿಗಳಾಗಿ ಮಹಾಂತೇಶ ನೂಲಾನವರ (ಅಧ್ಯಕ್ಷ), ಭೀಮರಾಯ ಕೆಂಭಾವಿ, ಅಂಬರೀಷ ಸುಣಗಾರ (ಉಪಾಧ್ಯಕ್ಷ), ಇಸ್ಮಾಯಿಲ್ ಶೇಖ್ (ಪ್ರಧಾನ ಕಾರ್ಯದರ್ಶಿ), ವಿಕಯಕುಮಾರ ಪತ್ತಾರ (ಖಜಾಂಚಿ), ನವೀನ ಶೆಳ್ಳಗಿ (ಕಾರ್ಯದರ್ಶಿ) ಕಾರ್ಯಕಾರಿಯಾಗಿ ಸಿದ್ದಣ್ಣ ಕಡಗಂಚಿ, ರಣಜೀತಸಿಂಗ್ ರಜಪೂತ, ವಿನಯಕುಮಾರ ಅಗಸರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಿಕೋಟಾ ಮತ್ತು ಬಬಲೇಶ್ವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-28 ಅವಧಿಗೆ ನಡೆದ ಚುನಾವಣೆಯಲ್ಲಿ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬುಧವಾರ ಮುಸ್ಸಂಜೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಾತಲಿಂಗಯ್ಯ ಶಂ. ಸಾಲಿಮಠ, ಉಪಾಧ್ಯಕ್ಷೆಯಾಗಿ ಲಕ್ಷ್ಮಿ ಚಂ. ಹಿರೇಮಠ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಹಡಲಗೇರಿ, ನಿಂಗಪ್ಪ ಮಲ್ಲಪ್ಪ ಸಂಗಾಪುರವರು ಖಜಾಂಚಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿ ಮಹೇಶ ವಿ. ಶಟಗಾರ, ಶರಣಬಸಪ್ಪ ಮಸಳಿ ಹಾಗೂ ಶಶಿಕಾಂತ ಮೆಂಡೆಗಾರ ಕಾರ್ಯ ನಿರ್ವಹಿಸಿದರು. ಅಲ್ಲದೇ, ನೂತನವಾಗಿ‌ ಅವಿರೋಧವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಘೋಷಣೆ ಪತ್ರ ವಿತರಿಸಿ ಶುಭ ಕೋರಿದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾದರ ಚೆನ್ನಯ್ಯನವರ ವಚನಗಳ ಚಿಂತನೆಗಳು ಸಾಮಾಜಿಕ ಸಮಾನತೆ, ಕಾಯಕದ ಮಹತ್ವ, ಪರಿಸರ ಪ್ರಜ್ಞೆ ಮತ್ತು ಆಧ್ಯಾತ್ಮಿಕ ಪ್ರಜಾಪ್ರಭುತ್ವದ ಮೇಲೆ ಬೆಳಕು ಚೆಲ್ಲಿವೆ. ಅವರು ನಡೆ-ನುಡಿ ಸಾಮರಸ್ಯಕ್ಕೆ ಆದ್ಯತೆ ನೀಡಿದ್ದರು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಮಂಗಳವಾರದಂದು ನಗರದ ಬಸವೇಶ್ವರ ಪಿಯು ಕಾಲೇಜಿನಲ್ಲಿ ತಾಲೂಕ ಶರಣ ಸಾಹಿತ್ಯ ಪರಿಷತ್ತು ಹಾಗೂಬಸವೇಶ್ವರ ಪಿಯು ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾದರ ಚೆನ್ನಯ್ಯನವರ ಕುರಿತು ಉಪನ್ಯಾಸ ನೀಡುತ್ತಾ ಅವರು ಮಾತನಾಡಿದರು.’ಜಾತಿ, ಲಿಂಗ, ವರ್ಗ ಬೇಧಗಳಿಲ್ಲದೆ ಎಲ್ಲರೂ ಸಮಾನರು ಎಂದು ತಿಳಿಸಿದ ಚೆನ್ನಯ್ಯನವರು ಕಾಯಕದ ಜತೆಗೆ ಪಾರಮಾರ್ಥಿಕ ಚಿಂತನೆ ಮಾಡಿದ ಅಪರೂಪದ ವಚನಕಾರರಾಗಿದ್ದಾರೆ. ಸತ್ಯ ಶುದ್ಧ ಕಾಯಕಕ್ಕೆ ಹೆಸರಾದ ಅವರ ವಚನಗಳು ಇಂದಿನ ಬದುಕಿನ ತಲ್ಲಣಗಳಿಗೆ ದಿವ್ಯ ಔಷಧಿಯಾಗಿವೆ’ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಎಸ್ ಆರ್ ಕುಲಕರ್ಣಿ, ‘ದಯೆ ಮತ್ತು ಧರ್ಮದ ಪರಿಕಲ್ಪನೆ, ಅಸ್ಪೃಶ್ಯತೆ, ಅನುಭಾವ, ಕಲ್ಯಾಣ ಸಮಾಜದ ನಿರ್ಮಾಣದಂತಹ ವೈಶಿಷ್ಟ್ಯಪೂರ್ಣ ಜೀವನ ಮೌಲ್ಯ ಪರಿಕಲ್ಪನೆಗಳನ್ನು ಇಡೀ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಹೃದಯ ಭಾಗ ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಆವರಣದಲ್ಲಿನ ವೀರರಾಣಿ ಕಿತ್ತೂರ ಚೆನ್ನಮ್ಮಳ ಮೂರ್ತಿ ಅನಾವರಣ ಮಹೂರ್ತ ಫಿಕ್ಸ ಆಗಿದೆ. ಬರುವ 2026ರ ಜನೇವರಿ 4 ರಂದು ಅನಾವರಣಗೊಳಸಲಾಗುವದು ಎಂದು ವೀರರಾಣಿ ಕಿತ್ತೂರ ಚೆನ್ನಮ್ಮ ಮೂರ್ತಿ ನಿರ್ಮಾಣ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಉಮೇಶ ಕೊಳಕೂರ ತಿಳಿಸಿದರು.ನಗರದ ಬೆಂಗಳೂರು ರೆಸ್ಟಾರೆಂಟ್‌ನಲ್ಲಿ ಗುರುವಾರದಂದು ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವಿದಾನ ಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರನ್ನು ಭೇಟಿಯಾಗಿ ಆಹ್ವಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಆಗಮಿಸುವ ಭರವಸೆ ನೀಡಿದ್ದಾರೆ. ಇದಲ್ಲದೆ ಜಿಲ್ಲೆಯ ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಜಿಲ್ಲೆಯ ಎಲ್ಲ ಶಾಸಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.100 ಅಡಿ ಸುತ್ತಳತೆಯ ಸರ್ಕಾರಿ ಜಾಗೆಯಲ್ಲಿ ಸುಮಾರು 22 ಅಡಿ ಎತ್ತರದ 12 ಅಡಿ ಅಗಲದ ಭವ್ಯವಾದ ಈ ಮೂರ್ತಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: 6 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಲ್ಲಿನ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯ ಕಿರಿಯ ಎಂಜಿನಿಯರ್ ವಿಷ್ಣು ಪೋಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬುಧವಾರ ನಡೆದಿದೆ.ಇಲ್ಲಿನ ಕಿರಿಯ ಎಂಜಿನಿಯರ್ ವಿಷ್ಣು ಪೋಳ, ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ 2023-24ನೇ ಸಾಲಿನ ಅನುದಾನದಲ್ಲಿ ವಿಜಯಪುರ ತಾಲೂಕಿನ ಕೃತಕನಹಳ್ಳಿ ಗ್ರಾಮದ ಮರಗಮ್ಮ ದೇವಸ್ಥಾನ ಬಳಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಬಿಲ್ ಮಂಜೂರಾತಿಗಾಗಿ ಕಾಮಗಾರಿಯ ದಾಖಲಾತಿಗಳಿಗೆ ಸಹಿ ಮಾಡಿ ಕೊಡಲು 6 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ದೂರಿನ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು, ಆರೋಪಿ ಲಂಚದ ಹಣ ಪಡೆಯುತ್ತಿದ್ದಾಗ ಆತನನ್ನು ಬಂಧಿಸಿ, ಲಂಚದ ಹಣವನ್ನು ವಶಕ್ಕೆ ಪಡೆದಿದ್ದಾರೆ.ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಮಲ್ಲಿಕಾರ್ಜುನ ತುಳಸಿಗೇರಿ ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆನಂದ ಟಕ್ಕನ್ನವರ್, ಆನಂದ ಡೋಣಿ, ನಿಂಗಪ್ಪ ಪೂಜೇರಿ…

Read More