Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ೨೧ ಹಾಗೂ ೨೨ನೇ ವಾರ್ಡಿಗೆ ಮೂಲಭೂತ ಸೌಕರ್ಯ ಒದಗಿಸದ ಹಿನ್ನಲೆ ಸ್ಥಳೀಯ ನಿವಾಸಿಗಳು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ವಾರ್ಡಿನ ಚರಂಡಿಗಳನ್ನು ಸ್ವಚ್ಚವಾಗಿಡದ ಹಿನ್ನಲೆ ದಿನಂಪ್ರತಿ ಸೊಳ್ಳೆಗಳ ಕಾಟ ಹಾಗೂ ಮೂಲಭೂತ ಸೌಕರ್ಯಗಳ ಕೊರೆತೆಯಿರುತ್ತದೆ. ೨೨ನೇ ವಾರ್ಡಿನ ಬೋರವೆಲ್ ಕೆಟ್ಟು ೩ ತಿಂಗಳು ಗತಿಸಿದೆ. ಪುರಸಭೆ ಅಧಿಕಾರಿಗಳಾಗಲಿ, ಸದಸ್ಯರಾಗಲಿ ಕ್ಯಾರೆ ಎನ್ನುತ್ತಿಲ್ಲ ಅಧಿಕಾರದ ನಶೆಯಲ್ಲಿ ತಿರುತ್ತಿದ್ದಾರೆ. ಹಲವು ಬಾರಿ ಪುರಸಭೆ ಸದಸ್ಯರಿಗೆ ಕರೆ ಮಾಡಿದ್ದೇವೆ, ನೂತನ ಅಧ್ಯಕ್ಷರಿಗೆ ಕರೆ ಮಾಡಿದ್ದೇವೆ ಯಾರೂ ಕೂಡಾ ಸ್ಪಂದನೆ ಮಾಡಿರುವುದಿಲ್ಲ. ತುಂಬಿದ ಚರಂಡಿ ಸ್ವಚ್ಚವಾಗಿಲ್ಲ ಹಲವು ಕಡೆ ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲಾಗುತ್ತಿದೆ. ಈ ಸಮಸ್ಯೆಗಳಿಗೆ ಪುರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಕಾರಣ ಕರ್ತವ್ಯಲೋಪದ ಅಡಿಯಲ್ಲಿ ಸಂಬಂಧಪಟ್ಟ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.ಈ ವೇಳೆ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಉಪಾಧ್ಯಕ್ಷ ರಾಜಣ್ಣ ನಾರಾಯಣಕ, ಬಿಜೆಪಿ ಎಸ್.ಟಿ.ಮೋರ್ಚಾ ಅಧ್ಯಕ್ಷ ಪ್ರಶಾಂತ…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನೆಲ್ಲೆಡೆ ಸಚಿವ ಎಂ.ಬಿ.ಪಾಟೀಲರ ಜನ್ಮ ದಿನಾಚರಣೆಯನ್ನು ಅಭಿಮಾನಿಗಳು, ಹಿತೈಷಿಗಳು, ಧುರಿಣರು, ಯುವಕರು ಕೇಕ್ ಕತ್ತರಿಸಿ ಗ್ರಾಮದ ದೇವರುಗಳಿಗೆ ಪೂಜೆ ಸಲ್ಲಿಸಿ ಅನ್ನ ಸಂತರ್ಪಣೆ ನೀಡಿ ಅದ್ದೂರಿಯಾಗಿ ಆಚರಿಸಿದರು.ತಾಲ್ಲೂಕಿನ ಘೋಣಸಗಿ ಗ್ರಾಮದಲ್ಲಿ ಅಮೋಘಸಿದ್ದೇಶ್ವರ ದೇವಸ್ಥಾನದಲ್ಲಿ ಸಚಿವರ ಹೆಸರಲ್ಲಿ ಯುವಕರೊಂದಿಗೆ ಪೂಜೆ ಸಲ್ಲಿಸಿ ಮಾತನಾಡಿದ ಎಂ.ಬಿ.ಪಾಟೀಲ ಪೌಂಡೇಶನ್ ಕಾರ್ಯದರ್ಶಿ ಯಾಕುಬ ಜತ್ತಿ, ಸಚಿವರು ಮಾಡಿದ ನೀರಾವರಿ ಕ್ರಾಂತಿ, ಶೈಕ್ಷಣಿಕ ಕ್ರಾಂತಿ, ಕೋಟಿ ವೃಕ್ಷ ಅಭಿಯಾನ ನಮ್ಮ ಜೀವಿತಾವಧಿ ಅಷ್ಟೆ ಅಲ್ಲದೇ ಮುಂದಿನ ತಲೆಮಾರಿನ ಪಿಳಿಗೆಗಳಿಗೆ ಅನೂಕೂಲವಾಗಲಿದೆ. ಈಗ ಕೈಗಾರಿಕಾ ಕ್ರಾಂತಿಯ ಮೂಲಕ ಅವರ ಸಾಧನೆಯ ಹಾದಿ ಸಾಗುತ್ತಿದೆ. ಇನ್ನೂ ಹೆಚ್ಚಿನ ಹುದ್ದೆ ಅಲಂಕರಿಸಿ ನಾಡಿನ ಜನರ ಒಳಿತಿಗಾಗಿ ಶ್ರಮಿಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಸಾಮರ್ಥ್ಯ ದೇವರು ಒದಗಿಸಲಿ ಎಂದು ಶುಭ ಹಾರೈಸಿದರು.ಈ ಭಾಗದ ರೈತರಿಗೆ ನೀರಾವರಿ ಯೋಜನೆಗಳು ಕನಸಿನ ಮಾತಾಗಿದ್ದವು. ಈ ಭಾಗದತ್ತ ನೀರಾವರಿ ಮಾಡಲು ಸಾಧ್ಯವೇ ಇಲ್ಲ ಎಂಬ ಮಾತುಗಳಿದ್ದವು. ಅದನ್ನೆ ಸವಾಲಾಗಿ ಸ್ವೀಕರಿಸಿ ಅತಿ ಎತ್ತರ…
ಯುವಕರನ್ನು ರೋಗಗ್ರಸ್ತರನ್ನಾಗಿಸುತ್ತಿರುವ ವಾಟ್ಸ್ ಆಪ್, ಫೇಸ್ಬುಕ್ ಮಹಾಂತೇಶ ಬಿರಾದಾರ ರ ‘ಮುಖಪುಸ್ತಕದ ಮರೆಯದ ಮುಖಗಳು’ ಕೃತಿ ಲೋಕಾರ್ಪಣೆಗೊಳಿಸಿದ ಡಾ.ಸಿದ್ದರಾಮಯ್ಯ ಅಭಿಮತ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಾಟ್ಸ್ ಆಪ್, ಫೇಸ್ ಬುಕ್ ವಿಶ್ವವಿದ್ಯಾಲಯಗಳು ದುರ್ಬಳಕೆ ಆಗುತ್ತಿರುವ ಸಂದರ್ಭದಲ್ಲಿ ಡಾ.ಮಹಾಂತೇಶ ಬಿರಾದಾರ ಅವರ ‘ಮುಖಪುಸ್ತಕದ ಮರೆಯದ ಮುಖಗಳು’ ಕೃತಿ ಮಾರ್ಗದರ್ಶಕವಾಗಿದೆ ಎಂದು ಹಿರಿಯ ಲೇಖಕ ಡಾ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.ನಗರದ ಬಸವ ಸಮಿತಿಯಲ್ಲಿ ಮೈಸೂರಿನ ಕವಿತಾ ಪ್ರಕಾಶನ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.ವಾಟ್ಸ್ ಆಪ್, ಫೇಸ್ ಬುಕ್ ವಿಶ್ವವಿದ್ಯಾಲಯಗಳು ಯುವಕರನ್ನು ರೋಗಗ್ರಸ್ತರನ್ನಾಗಿ ಮಾಡುತ್ತಿವೆ. ಇದರಿಂದ ಸಾಮಾಜಿಕ ವಾತಾವರಣ ಹಾಳಾಗುವ ಹಾಗೆ ಯುವಕರ ನಡವಳಿಕೆಗಳು ಇರುತ್ತವೆ. ಇಂಥ ಸಂದರ್ಭದಲ್ಲಿ ಮಹಾಂತೇಶ ಬಿರಾದಾರ ಅವರು ಫೇಸ್ ಬುಕ್ ಮೂಲಕ ಬರೆದ ಲೇಖನಗಳು ಮಾದರಿಯಾಗಿವೆ ಎಂದು ಹೇಳಿದರು.ವಾಟ್ಸ್ ಆಪ್, ಫೇಸ್ ಬುಕ್ ಮೂಲಕ ಸುಳ್ಳಿನ ಚರಿತ್ರೆ ಬೋಧನೆಯಾಗುತ್ತಿದೆ. ಇದರಿಂದ ಚಾರಿತ್ರಿಕ ಪ್ರಜ್ಞೆ ಕಳೆದುಕೊಂಡಿದ್ದೇವೆ ಜೊತೆಗೆ ವರ್ತಮಾನ ನಮಗೆ ಅರ್ಥವಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.ಬರಹಕ್ಕೆ ಬೇಕಾದ ಸಾರ ಸಂಗ್ರಹ ಎಲ್ಲರಿಗೂ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಕ್ತದಾನ ಶ್ರೇಷ್ಠದಾನವಾಗಿದ್ದು, ಕಷ್ಟದಲ್ಲಿರುವವರಿಗೆ ಮರುಜೀವ ನೀಡುತ್ತದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಸಹಾಯಕ ಕಾನೂನು ಸಲಹೆಗಾರ ಸೂರ್ಯಕಾಂತ ಬಿರಾದಾರ ಹೇಳಿದ್ದಾರೆ.ಸೋಮವಾರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯ ರಕ್ತ ಭಂಡಾರದಲ್ಲಿ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ರಕ್ತದಾನದಿಂದ ಕೇವಲ ರೋಗಿಗೆ ಮರುಜೀವ ನೀಡುವುದು ಮಾತ್ರವಲ್ಲ, ದಾನಿಯೂ ಆರೋಗ್ಯದಿಂದ ಇರಲು ಸಹಾಯವಾಗುತ್ತದೆ. ರಕ್ತದಲ್ಲಿರುವ ಕೆಟ್ಟ ಕೊಬ್ಬನ್ನು ಹೊರಗೆ ಹಾಕಲು ಇದು ಸಹಕಾರಿಯಾಗಿದೆ. ಒಬ್ಬ ಆರೋಗ್ಯವಂತ ವ್ಯಕ್ತಿ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವ ಮೂಲಕ ಆರೋಗ್ಯದಿಂದ ಇರಬಹುದಾಗಿದೆ ಎಂದು ಅವರು ಹೇಳಿದರು.ಈ ಶಿಬಿರದಲ್ಲಿ 20 ಜನರು ರಕ್ತದಾನ ಮಾಡಿದರು.ಈ ಸಂದರ್ಭದಲ್ಲಿ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ, ಡಾ. ಪ್ರಕಾಶ ಪಾಟೀಲ, ಸಂತೋಷ ಮಸಳಿ, ಚಂದ್ರಕಾಂತ ಡಾ. ಅಪ್ಪನಗೌಡ…
ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ಆಲಮಟ್ಟಿ ಡ್ಯಾಂ ಸೈಟ್ ಜವಾಹರ ನವೋದಯ ವಿದ್ಯಾಲಯದ ವತಿಯಿಂದ ವಿದ್ಯಾರ್ಥಿಗಳಿಗೆ ಸೋಮವಾರ ಆಲಮಟ್ಟಿ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ರಹಿತ ದಿನ’ ಆಚರಿಸಲಾಯಿತು.ಈ ವೇಳೆ ವಿದ್ಯಾಲಯದ ಶಿಕ್ಷಕರು ವಿದ್ಯಾರ್ಥಿಗಳಿಗೆ ರೈಲ್ವೆ ನಿಲ್ದಾಣದಲ್ಲಿ ನಡೆಯುವ ಚಟುವಟಿಕೆಗಳು, ರೈಲ್ವೇ ಸಿಬ್ಬಂದಿಯ ಕಾರ್ಯವೈಖರಿ ಹಾಗೂ ರೈಲ್ವೆ ಪ್ರಯಾಣದಲ್ಲಿ ಅನುಸರಿಸಬೇಕಾದ ನಿಯಮಗಳು ಮತ್ತು ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿ ನೀಡಿದರು.ಈ ವೇಳೆ ’ಉದಯರಶ್ಮಿ’ ಪತ್ರಿಕೆಯೊಂದಿಗೆ ಮಾತನಾಡಿದ ನವೋದಯ ವಿದ್ಯಾಲಯದ ಪ್ರಭಾರಿ ಪ್ರಾಚಾರ್ಯ ಡಿ.ಪಿ.ತಯಡೆ ಮಾತನಾಡಿ, ಕಳೆದ ೨೦೨೦ ರಿಂದ ವಾರಕ್ಕೊಮ್ಮೆ ವಿದ್ಯಾರ್ಥಿಗಳಿಗೆ ’ಬ್ಯಾಗಲೆಸ್ ಡೇ’ ಅನುಕೂಲ ಕಲ್ಪಿಸಿದ್ದು, ಈ ದಿನ ತರಗತಿವಾರು ವಿದ್ಯಾರ್ಥಿಗಳನ್ನು ಸರಕಾರಿ ಕಚೇರಿಗಳಿಗೆ ಕರೆದುಕೊಂಡು ಹೋಗಿ ಆಯಾ ಇಲಾಖೆಯ ಸಮಗ್ರ ಪರಿಚಯ ಮಾಡಿಕೊಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದ ಆಯಾ ಇಲಾಖೆಗಳ ಕಾರ್ಯವ್ಯಾಪ್ತಿ ಹಾಗೂ ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ವಿವರಿಸಿದರು.ಈ ಕಾರ್ಯದಲ್ಲಿ ವಿದ್ಯಾಲಯದ ಶಿಕ್ಷಕರಾದ ಉತ್ಕರ್ಷ ತ್ರಿಪಾಠಿ, ಎಮ್.ತಿಪ್ಪೇಸ್ವಾಮಿ, ಮೀನು ರಾವತ್, ಉಷಾ ಕಲಾಲರ ಮತ್ತು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಚಿವ ಎಂ.ಬಿ.ಪಾಟೀಲ ಅವರು ಶಾಲೆಗಳು ಮತ್ತು ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯ ಒದಗಿಸುವ ಮೂಲಕ ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ಚ. ದೇಸಾಯಿ ಹೇಳಿದ್ದಾರೆ.ಸೋಮವಾರ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದಲ್ಲಿ ಎಂ. ಬಿ. ಪಾಟೀಲ ಫೌಂಡೇಶನ್ ವತಿಯಿಂದ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಸರಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಐದು ಮತ್ತು ಆರನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಚಿವರು ಜನಪರ ಕಾರ್ಯಕ್ರಮಗಳ ಮೂಲಕ ಈ ಭಾಗದಲ್ಲಿ ಹೆಚ್ಚೆಚ್ಚು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಸರ್ವಜನರ ಏಳಿಗೆಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.ಸಚಿವರ ಆಪ್ತ ಸಹಾಯಕ ದಶರಥ ಭೋಸ್ಲೆ ಮಾತನಾಡಿ, ಜಲಸಂಪನ್ಮೂಲ ಸಚಿವರಾಗಿ ನೀರಾವರಿ ಕ್ರಾಂತಿ ಮಾಡಿರುವ ಎಂ. ಬಿ. ಪಾಟೀಲರು, ಈಗ ಕೈಗಾರಿಕೆ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ – ಗದಗ್ ಉದಯರಶ್ಮಿ ದಿನಪತ್ರಿಕೆ ದಾಂಪತ್ಯ ಎಂಬುದು ಒಂದು ಗಂಡು ಮತ್ತು ಹೆಣ್ಣು ಸಮಾಜಸಮ್ಮತವಾದ ರೀತಿಯಲ್ಲಿ ವಿವಾಹವಾಗಿ ಕಷ್ಟ ಸುಖಗಳನ್ನು ಹಂಚಿಕೊಂಡು, ಪ್ರೀತಿ ಮತ್ತು ಸೌಹಾರ್ದಯುತ ಬಾಳ್ವೆಯನ್ನು ಮಾಡಿ ಈ ಸಮಾಜಕ್ಕೆ ಒಳ್ಳೆಯ ಮಕ್ಕಳನ್ನು ಕೊಡುಗೆಯಾಗಿ ನೀಡುವ ಕ್ರಿಯೆ. ದಾಂಪತ್ಯದಲ್ಲಿ ಗಂಡು-ಹೆಣ್ಣುಸರಿಸಮಾನರು, ಒಬ್ಬರಿಗೊಬ್ಬರು ಪೂರಕವಾಗಿ ಇರಬೇಕು ಎಂಬುದು ಸರ್ವ ಸಮ್ಮತವಾಗಿದ್ದರೂ ಅನಾದಿಕಾಲದಿಂದಲೂ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಹೆಣ್ಣುಮಕ್ಕಳು ನಲುಗುವುದೇ ಹೆಚ್ಚು. ಇತ್ತೀಚಿಗಿನ ದಿನಗಳಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ಕ್ಷುಲ್ಲಕ ಕಾರಣಗಳಿಗಾಗಿ ಜಗಳ, ಕಿರಿಕಿರಿಗಳು ಹೆಚ್ಚಾಗಿದ್ದು ಸುಖಕರ ದಾಂಪತ್ಯ ಎಂಬುದು ಕನಸಿನ ಮಾತಾಗಿದೆ.ಪತಿ-ಪತ್ನಿಯರಿಬ್ಬರೂ ತುಸು ಪ್ರಯತ್ನ ಪಟ್ಟರೆ ಸುಖಕರ ದಾಂಪತ್ಯ ಜೀವನಕ್ಕೆ ನಾಂದಿ ಹಾಡಲು ಕೆಲ ಸಲಹೆಗಳು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರೌಢ ಶಾಲೆ ಹಾಗೂ ಬಸವೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಧಾರವಾಢದ ಮಲ್ಲಸಜ್ಜನ ಶಾಲಾ ಆವರಣದಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರೌಢ ಶಾಲಾ ಹಂತದ ಬಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ರಾಜ್ಯ ಮಟ್ಟದ ಬಾಸ್ಕೆಟ್ ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಜಿಲ್ಲೆಯ ಹಾಗೂ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳ ಈ ಸಾಧನೆಗೆ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷ ಕೆ.ಜಿ.ರಾಠೋಡ, ಕಾರ್ಯದರ್ಶಿ ರಾಜಶೇಖರ ಚವ್ಹಾಣ್, ಶಾಲಾ ಮುಖ್ಯ ಗುರು ಇ.ಡಿ.ಲಮಾಣಿ, ಬಸವೇಶ್ವರ ಪ್ರೌಢ ಶಾಲೆಯ ಮುಖ್ಯ ಗುರು ಪರಶುರಾಮ ಲಮಾಣಿ, ದೈಹಿಕ ಶಿಕ್ಷಣ ಶಿಕ್ಷಕ ಎಸ್.ಎಲ್.ದೊಡಮನಿ ಹಾಗೂ ಬಾಬುರಾಯ ಹಂಚನಾಳ, ಟೀಮ್ ಕೋಚ್ ಎಂ.ಬಿ.ಪಾಟೀಲ, ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಂ.೨೪ ಹಾಗೂ ಆಂಗ್ಲ ಮಾಧ್ಯಮ ಬಂಜಾರಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಧಾರವಾಢದ ಮಲ್ಲಸಜ್ಜನ ಶಾಲಾ ಆವರಣದಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರಾಥಮಿಕ ಶಾಲಾ ಹಂತದ ‘ಬಾಸ್ಕೆಟ್ ಬಾಲ್’ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ರಾಜ್ಯ ಮಟ್ಟದ ಬಾಸ್ಕೆಟ್ ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷರಾದ ಕೆ.ಜಿ.ರಾಠೋಡ, ಕಾರ್ಯದರ್ಶಿ ರಾಜಶೇಖರ ಚವ್ಹಾಣ್, ಶಾಲಾ ಮುಖ್ಯ ಗುರು ಸಂದೀಪ ರಾಠೋಡ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ವಿ.ಆರ್.ಹಾಲವರ, ಟೀಮ್ ವರ್ಕರ್ ಬಾಬುರಾಯ ಹಂಚನಾಳ, ಎಸ್.ಎಲ್.ದೊಡಮನಿ, ಟೀಮ್ ಕೋಚ್ ಎಂ.ಬಿ.ಪಾಟೀಲರು ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ.
ಇಂಡಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಮಾಸಿಕ ಸಭೆ ಉದಯರಶ್ಮಿ ದಿನಪತ್ರಿಕೆ ಇಂಡಿ: ವಿಶೇಷಚೇತನರು ತಮ್ಮಿಂದಾಗುವ ಕೆಲಸವನ್ನು ಆಯ್ಕೆ ಮಾಡಿಕೊಂಡು ಅದನ್ನು ಮಾಡುವ ಮೂಲಕ ಸ್ವಾವಲಂಬನೆಯ ಬದುಕು ನಡೆಸಬೇಕು. ಪುನರ್ವಸತಿ ಕಾರ್ಯಕರ್ತರು ವಿಶೇಷ ಚೇತನರ ಪುನಶ್ಚೇತನ ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಾಮಾಣಿಕ ಸೇವೆ ಸಲ್ಲಿಸಬೇಕು ಎಂದು ಜಿಲ್ಲಾ ವಿಶೇಷ ಚೇತನ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಸವಿತಾ ಕಾಳೆ ಹೇಳಿದರು.ಇಂಡಿ ತಾಲೂಕಾ ಪಂಚಾಯತ ಸಭಾಂಗಣದಲ್ಲಿ ನಡೆದ ಚಡಚಣ ಹಾಗೂ ಇಂಡಿ ತಾಲೂಕಾ ‘ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಮಾಸಿಕ ಸಭೆ’ಯ ಅಧ್ಯಕ್ಷತೆ ವಹಿಸಿ ಮತನಾಡಿದ ಅವರು, ವಿಶೇಷ ಚೇತನರು ಕೀಳರಿಮೆ ತೊರೆದು ಸ್ವಾವಲಂಭನೆ ಬದುಕು ನಡೆಸಬೇಕು. ಮಾರ್ಗದರ್ಶಿ ಕಾರ್ಯಕ್ರಮಗಳ ಸದ್ಬಳಕೆ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಸರ್ಕಾರಗಳ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ತನಗಿಂತ ಹೆಚ್ಚು ನ್ಯೂನತೆ ಉಳ್ಳವರಿಗೆ ಸಹಾಯ ಮಾಡುವ ಮನಸ್ಸುಳ್ಳವರಾಗಬೇಕು ಎಂದರು.ಈ ವೇಳೆಯಲ್ಲಿ ಇಂಡಿ ತಾಲೂಕಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಪರಶುರಾಮ ಬೋಸಲೆ, ಚಡಚಣ ತಾಲೂಕಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಚಂದ್ರಕಾಂತ ಸೂರ್ಯಗಾಂವ ಚಡಚಣ ಹಾಗೂ…
