Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಧ್ಯದ ಪರಿಸ್ಥಿತಿಯಲ್ಲಿ ನಾವೆಲ್ಲರೂ ಪ್ರಶಸ್ತಿ, ಹೆಸರು, ಕೀರ್ತಿ ಪಡೆಯಲು ವಶೀಲಿ, ಪ್ರಭಾವ ಬೀರುವಂತಹ ಹರ ಸಾಹಸ ಮಾಡಲು ಮುಂದಾಗುತ್ತೇವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕೆಲಸ ಮಾಡಿದರೆ ಸಿಗುವ ತೃಪ್ತಿ ದೊಡ್ಡದು ಎಂದು ತಾಲ್ಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು.ಪಟ್ಟಣದ ಹುಡ್ಕೋ ಬಡಾವಣೆಯ ಹಸಿರು ತೋರಣ ಉದ್ಯಾನವನದಲ್ಲಿ ಹುಬ್ಬಳ್ಳಿಯ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾಗಿ ನೇಮಕಗೊಂಡ ಅಶೋಕ ರೇವಡಿ ಹಾಗೂ ಬಿದರಕುಂದಿ ಎನ್.ಎಲ್.ನಾಯ್ಕೋಡಿ ಪ್ರತಿಷ್ಠಾನ ಕೊಡಮಾಡಿದ “ಗುರುಶ್ರೇಷ್ಠ” ಪ್ರಶಸ್ತಿ ಪಡೆದ ಬಿ.ಎಚ್.ಬಳಬಟ್ಟಿ ಅವರುಗಳನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹುಬ್ಬಳ್ಳಿಯ ವಾಣಿಜ್ಯೋದ್ಯಮ ಸಂಸ್ಥೆಯ ಸದಸ್ಯತ್ವ ಪಡೆಯುವುದು ಗೌರವದ ಸಂಗತಿಯಾಗಿದೆ. ಅದರಲ್ಲೂ ಆಡಳಿತ ಮಂಡಳಿಯ ಸದಸ್ಯರಾಗಿ ನೇಮಕಗೊಳ್ಳುವುದು ಇನ್ನೂ ಹೆಚ್ಚಿನ ಗೌರವದ ಸಂಗತಿ. ವ್ಯಾಪಾರ, ವಾಣಿಜ್ಯ, ಸಮಾಜ ಸೇವೆಯನ್ನು ಗುರುತಿಸಿ ಈ ನೇಮಕ ಮಾಡಲಾಗುತ್ತದೆ. ಇದೇ ರೀತಿ ಬಿದರಕುಂದಿ ನಾಯ್ಕೋಡಿ ಪ್ರತಿಷ್ಠಾನ ಸಹ ಅತ್ಯಂತ ಯೋಗ್ಯರಾದ ನಿವೃತ್ತ ಶಿಕ್ಷಕರನ್ನು ಗುರುತಿಸಿ ಗೌರವಿಸುತ್ತದೆ. ಪ್ರಶಸ್ತಿಗಳ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟಕಾ ಜೂಜಾಟವಾಡುತ್ತಿದ್ದ ಇಬ್ಬರ ಮೇಲೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.ಪಟ್ಟಣದ ಆಶ್ರಯ ಕಾಲೋನಿಯ ಅಬ್ದುಲ ರಹೆಮಾನ ಮನಿಯಾರ ಮತ್ತು ಮಾರುತಿ ನಗರದ ಚಂದ್ರಾಮಪ್ಪ ಧನಗೊಂಡ ಇವರು ಸಾರ್ವಜನಿಕ ಸ್ಥಳದಲ್ಲಿ ನಿಂತು ೧ರೂಪಾಯಿಗೆ ೮೦ ರೂಪಾಯಿ ಕೊಡುವ ಕರಾರಿನ ಮೇಲೆ ಓಸಿ ಮಟಕಾ ಜೂಜಾಟದ ಸಂಖ್ಯೆಯನ್ನು ಬರೆದುಕೊಳ್ಳುವಾಗ ಪೊಲೀಸರ ಕೈಗೆ ಸಿಕ್ಕಿದ್ದು ಆರೋಪಿತರಿಂದ ಪೆನ್ನು, ಹಣ ಮತ್ತು ಓಸಿ ಚೀಟಿಯನ್ನು ಜಪ್ತು ಪಡಿಸಿಕೊಳ್ಳಲಾಗಿದೆ.ಈ ಬಗ್ಗೆ ಪಿಎಸ್‌ಐ ಸಂಜಯ ತಿಪರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣಗಳು ದಾಖಲಾಗಿವೆ.

Read More

ಪ್ರವಾಹ ತಡೆಗೆ ಪ್ರಾಥಮಿಕ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕ್ರೀಯಾಯೋಜನೆ ಸಿದ್ಧಪಡಿಸಲು ಡಿಸಿ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ತಡೆಯಲು ತಾತ್ಕಾಲಿಕವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಕ್ತ ಕ್ರೀಯಾಯೋಜನೆಯನ್ನು ಸಿದ್ಧಪಡಿಸುವಂತೆ ಸಂಬಂಧಿಸಿದ ಆಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗಳಲ್ಲಿ ಹೂಳು ತುಂಬಿಕೊಂಡು ಸೇತುವೆಯ ಎತ್ತರ ಕಡಿಮೆಯಾಗಿ ನೀರಿನ ಶೇಖರಣೆ ಸಾಧ್ಯವಾಗದೇ ಇರುವುದರಿಂದ ನದಿಯಲ್ಲಿ ಹರಿಯುವ ನೀರಿನ ಒತ್ತಡ ಹೆಚ್ಚಾಗಿ ನೀರು ತನ್ನ ಪಥ ಬದಲಿಸಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಲಿರುವುದರಿಂದ ಡೋಣಿಗೆ ಸೇರುವ ಕಾಲುವೆಗಳನ್ನು ಪರಿಶೀಲನೆ ಹಾಗೂ ಡೋಣಿ ವ್ಯಾಪ್ತಿಯ ವಿವಿಧೆಡೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಯುವಕರು ಶೆರೆ ಸಹವಾಸ ಮಾಡಿದರೆ ಅದರಿಂದ ಹೆಂಡತಿ, ಕುಟುಂಬ, ಸಮಾಜದಿಂದ ವಂಚಿತನಾಗುವದಲ್ಲದೆ ಶೆರೆ ಯುವಕರ ಆಯುಷ್ಯವನ್ನು ಕಡಿಮೆ ಮಾಡುತ್ತದೆ ಎಂದು ಗುರುದೇವ ಆಶ್ರಮ ಕಾತ್ರಾಳದ ಅಮೃತಾನಂದ ಶ್ರೀಗಳು ಹೇಳಿದರು.ಪಟ್ಟಣದ ಕಾಳಿಕಾ ಮಂದಿರದಲ್ಲಿ ತಾಲೂಕಾ ಆಡಳಿತ, ಅಬಕಾರಿ ಇಲಾಖೆ, ಪುರಸಭೆ ಇಂಡಿ ಮತ್ತು ಗ್ರಾ.ಪಂ ರೂಗಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ದಿ ಯೋಜನೆ ಸಹಯೋಗದಲ್ಲಿ ನಡೆದ ತಾಲೂಕಿನ ಬೊಳೆಗಾಂವ ಗ್ರಾಮ ವ್ಯಸನ ಮುಕ್ತ ಗ್ರಾಮ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಇಂದು ಮಹಿಳೆಯರಲ್ಲಿ ಹೆಚ್ಚು ಸಂಸ್ಕೃತಿ ಕಾಣುತ್ತಿದ್ದೇವೆ. ಬೊಳೆಗಾಂವ ಗ್ರಾಮವನ್ನು ವ್ಯಸನ ಮುಕ್ತ ಮಾಡಲು ಸರಕಾರದ ಸಹಭಾಗಿತ್ವದಲ್ಲಿ ಎಸಿ ಅಬೀದ ಗದ್ಯಾಳರವರು ಮಾಡುತ್ತಿರುವ ಪ್ರಯೋಗ ಜಿಲ್ಲೆಯಲ್ಲಿಯೆ ಮೊದಲನೆಯದು. ಇಲ್ಲಿ ೭೦ ಜನ ಒಂದು ವಾರದಿಂದ ಭಾಗವಹಿಸಿ ವ್ಯಸನ ಮುಕ್ತರಾಗಿದ್ದು ಮತ್ತು ಮುಂಬರುವ ದಿನಗಳಲ್ಲಿ ಬೊಳೆಗಾಂವ ಗ್ರಾಮ ವ್ಯಸನ ಮುಕ್ತ ರಾಗುತ್ತಿರುವದು ಇದು ನಾವು ಗಾಂಧೀಜಿಗೆ ನೀಡುತ್ತಿರುವ ದೊಡ್ಡ ಕಾಣಿಕೆ ಎಂದರು.ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಧರ್ಮಸ್ಥಳದ ಗ್ರಾಮಾಭಿವೃದ್ದಿಯವರ ಪ್ರಯತ್ನದಿಂದ ೭೦…

Read More

ಪತ್ರಿಕಾ ಗೋಷ್ಠಿಯಲ್ಲಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರಿಂದ ಮಾಹಿತಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಸಾರಂಗಮಠದ ಕಾಯಕಯೋಗಿ ಲಿಂ. ಚೆನ್ನವೀರ ಮಹಾಸ್ವಾಮಿಗಳ ೧೩೦ ನೇ ಜಯಂತ್ಯೋತ್ಸವ ನಿಮಿತ್ಯ ನ.೧೩ ರಿಂದ ಡಿ.೦೩ರ ವರೆಗೆ ಸುಮಾರು ೨೧ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಜರುಗುವವು ಎಂದು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ರವಿವಾರ ಹಮ್ಮಿಕೊಂಡ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.ಪ್ರತಿನಿತ್ಯ ಸಂಜೆ ೬.೩೦ಗಂಟೆಗೆ ಉಜ್ಜಯನಿಯ ಲಿಂ.ಶ್ರೀ.ಸಿದ್ದಲಿಂಗ ಶಿವಾಚಾರ್ಯರ ಪುರಾಣ-ಪ್ರವಚನವನ್ನು ಶಾಹಪೂರದ ಶ್ರೀ ಸೂಗೂರೇಶ್ವರ ಶ್ರೀಗಳಿಂದ ನೆರವೇರುವುದು. ಲಿಂ ಶ್ರೀ ಚನ್ನವೀರ ಮಹಾಸ್ವಾಮಿಗಳ ಜಯಂತಿ ದಿನವಾದ ನ.೧೮ ರಂದು ತಾಲೂಕಿನ ಶ್ರೇಷ್ಠ ಕೃಷಿಕರಿಗೆ ನೀಡುವ ಸಾರಂಗಶ್ರೀ ಕೃಷಿ ಪ್ರಶಸ್ತಿಯನ್ನು ಆಲಮೇಲದ ಸಾವಯವ ಕೃಷಿಕ ಸುನೀಲ ನಾರಾಯಣಕರ ಅವರಿಗೆ ಪ್ರಶಸ್ತಿ ಫಲಕ ಮತ್ತು ೧೧ ಸಾವಿರ ನಗದನ್ನು ನೀಡಿ ಗೌರವಿಸಲಾಗುವುದು.ಖ್ಯಾತ ಖಗೋಳಶಾಸ್ತ್ರಜ್ಞ ಭಾಸ್ಕರಾಚಾರ್ಯ-೨ ಅವರ ಸ್ಮರಣೆಗಾಗಿ ನೀಡುವ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿಯನ್ನು ಈ ಬಾರಿ ಅಂತರಾಷ್ಟ್ರೀಯ ಕೃಷಿ ತಜ್ಞ, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಾಜಿ ಪ್ರಧಾನ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇವಲ ೧೭ ತಿಂಗಳಲ್ಲಿ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿ ಸಿಂದಗಿ ನಗರದ ಅಭಿವೃದ್ಧಿಗಾಗಿ ರೂ.೮೬ ಕೋಟಿಗೂ ಅಧಿಕ ರೂಪಾಯಿಗಳನ್ನು ಮಂಜೂರು ಮಾಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವುದು ನನಗೆ ಸಂತಸ ತಂದಿದೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದ ಬಳಿ ರವಿವಾರ ಲೋಕೋಪಯೋಗಿ ಇಲಾಖೆ ವಿಜಯಪುರ ಆಯೋಜಿಸಿರುವ ೨೦೨೩-೨೪ನೇ ಸಾಲಿನ ಅಪೆಂಡಿಕ್ಸ್- ಇ ಯೋಜನೆ ಅಡಿಯಲ್ಲಿ ಸುಮಾರು ೫ಕೋಟಿ ರೂ. ಅನುದಾನದಲ್ಲಿ ರಾಷ್ಟ್ರೀಯ ಹೆದ್ದಾರಿ ೫೦ರ ವರ್ತುಲ ರಸ್ತೆಯಿಂದ ಡೋಹರ್ ಕಕ್ಕಯ್ಯ ವೃತ್ತ, ಟಿಪ್ಪುಸುಲ್ತಾನ್ ವೃತ್ತದವರೆಗೆ ಮತ್ತು ರಾಜ್ಯ ಹೆದ್ದಾರಿ ೧೬ ರಿಂದ ಶ್ರೀ ಬಸವೇಶ್ವರ ವೃತ್ತ, ಶ್ರೀ ಕನಕದಾಸ ವೃತ್ತ ರಾಷ್ಟ್ರೀಯ ಹೆದ್ದಾರಿ ೫೦ರವರೆಗೆ ಸುಮಾರು ೬.೫೦ ಕಿ.ಮೀ. ವರೆಗೆ ಅಲಂಕಾರಿಕ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಅಮೃತ್-೨ ಯೋಜನೆಯ ಅಡಿಯಲ್ಲಿ ಸುಮಾರು ೩೬ ಕೋಟಿ ಅನುದಾನದಲ್ಲಿ ಸಿಂದಗಿ ನಗರಕ್ಕೆ ೨೪*೭ ಕುಡಿಯುವ ನೀರಿನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬುದ್ಧ ಬಸವ ಗಾಂಧಿ ಟ್ರಸ್ಟ್ ರಿ ಸಿದ್ಧನಹಳ್ಳಿ ಬೆಂಗಳೂರು ಇವರು ಆಯೋಜಿಸಿದ್ದ ರಾಜ್ಯಮಟ್ಟದ ೧೫ನೇ ಕನ್ನಡ ಸಾಹಿತ್ಯ ಸಂಸ್ಕೃತಿ ಸಮಾವೇಶದಲ್ಲಿ, ೨೦೨೩-೨೪ ರ ಹಿರಿಯ ಸಾಹಿತಿ ವಿಜಯಾ ನಾಗೇಶ್ ದತ್ತಿ ಪುಸ್ತಕ ಬಹುಮಾನಕ್ಕೆ ವಿಜಯಪುರದ ಯುವ ಸಂಶೋಧಕಿ ಡಾ.ಚೈತನಾ ಸಂಕೊಂಡರ ಬಯಲು ಬೊಂಬೆ ಕೃತಿ ಆಯ್ಕೆಯಾಗಿದೆ.ಈ ಪ್ರಯುಕ್ತ ರವಿವಾರ ಬೆಂಗಳೂರಿನಲ್ಲಿ ಶೇಷಾದ್ರಿಪುರಂ ನಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಸಂಶೋಧಕಿ ಡಾ.ಚೈತನಾ ಅವರಿಗೆ ಪುಸ್ತಕ ಬಹುಮಾನ ನೀಡಿ ಗೌರವಿಸಲಾಯಿತು.ಬಯಲು ಬೊಂಬೆ ಇದೊಂದು ಸಂಶೋಧನಾ ಕೃತಿಯಾಗಿದ್ದು, ಯುವ ಸಂಶೋಧಕಿಯ ಕೃತಿಗೆ ದತ್ತಿ ಪುಸ್ತಕ ಬಹುಮಾನ ಲಭಿಸಿದ್ದಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪುರಸಭೆಯ ನೌಕರರು ಸದಸ್ಯರಿಗೆ ಮಾಹಿತಿ ನೀಡುತ್ತಿಲ್ಲ. ಸದಸ್ಯರಾದಾಗಿನಿಂದ ಅವಧಿ ಮುಗಿಯಲು ಬಂದರೂ ವಾರ್ಡವೊಂದರ ಸ್ವಚ್ಛತೆಗೆ ಆಗಮಿಸಿಲ್ಲ. ಕಸದ ವಾಹನ ಸರಿಯಾಗಿ ಬರೋದಿಲ್ಲ. ಕೆಲವೆಡೆ ಚರಂಡಿ ಸ್ವಚ್ಛಗೊಳಿಸಿ ಬೇಗನೆ ತುಂಬಿಕೊಂಡು ಹೋಗೋದಿಲ್ಲ ಸೇರಿದಂತೆ ಹಲವು ಪುರಸಭೆಯ ಸದಸ್ಯರುಗಳ ದೂರು ಒಂದೆಡೆಯಾದರೆ, ಹಮಾಲರ ಕಾಲೋನಿ ಮತ್ತು ಆಶ್ರಯ ಕಾಲೋನಿಗಳ ಕಾರ್ನರ್ ಪ್ಲಾಟ್‌ಗಳ ತೆರವಿಗೆ ಕ್ರಮ. ೧೭ ನೇ ವಾರ್ಡನಲ್ಲಿ ಕಟ್ಟಲಾದ ಟಾಯಿಲೆಟ್‌ಗಳ ಓಪನಿಂಗ್. ರಸ್ತೆ ಕಾಮಗಾರಿ ಮಾಡದೇ ಕಾಗದದಲ್ಲಿ ಮುಕ್ತಾಯ. ಕೆರೆ ಅಭಿವೃದ್ಧಿ, ಕೊಳಚೆ ನಿವಾಸಿಗಳಿಗೆ ನೀಡಿದ ಜಾಗೆ ಪರಿಶೀಲನೆ, ಸಿಟಿ ವ್ಯಾಪ್ತಿಯಲ್ಲಿ ೮ ಬಸ್ ನಿಲ್ದಾಣ ನಿರ್ಮಾಣ ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆಯಾಗಿದ್ದು ಪುರಸಭೆಯ ಸಾಮಾನ್ಯ ಸಭೆಯಲ್ಲಿ.ಶುಕ್ರವಾರ ಮದ್ಯಾಹ್ನ ಪಟ್ಟಣದ ಪುರಸಭೆಯ ಸಭಾಭವನದಲ್ಲಿ ಶಾಸಕ ಸಿ.ಎಸ್.ನಾಡಗೌಡರ ಸಮ್ಮುಖದಲ್ಲಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಅಧ್ಯಕ್ಷತೆಯಲ್ಲಿ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾಜಿ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ, ಸದಸ್ಯರಾದ ವಿರೇಶ ಹಡಲಗೇರಿ, ರಿಯಾಜ ಢವಳಗಿ, ಬಸಪ್ಪ ತಟ್ಟಿ, ಸಂಗಮ್ಮ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪ್ರಪಂಚದ ಎಲ್ಲ ಭಾಷೆಗಳ ತಾಯಿ ಸಂಸ್ಕೃತ ಭಾಷೆ, ಇದು ದೇವಾನುದೇವತೆಗಳ ಭಾಷೆಯಾಗಿದು, ಖುಷಿ-ಮುನಿಗಳ ಮುಖಾಂತರ ಮನುಷ್ಯನ ಹತ್ತಿರ ಸಾಗಿ ಬಂದಿದೆ ಇದನ್ನು ಉಳಿಸಿ,ಬೆಳೆಸುವದು ನಮ್ಮೆಲ್ಲರ ಕರ್ತವ್ಯ ಎಂದು ಗುಂದಗಿಯ ಶ್ರೀಸ್ವಾಮಿ ವಿವೇಕಾನಂದ ಸಂಸ್ಕೃತ ಪಾಠ ಶಾಲೆಯ ಅಧ್ಯಕ್ಷ ರಾಜಕುಮಾರ ಕರಜಗಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ತಾಲೂಕಿನ ಗುಂದಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀಸ್ವಾಮಿ ವಿವೇಕಾನಂದ ಸಂಸ್ಕೃತ ಪಾಠ ಶಾಲೆ ಗುಂದಗಿ ಇವರ ಸಹಯೋಗದಲ್ಲಿ ಶನಿವಾರ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಸಂಸ್ಕೃತ ನಿರ್ದೇಶನಾಲಯ ಬೆಂಗಳೂರ ಇವರು ಆಯೋಜಿಸಿದ “ಆಸ್ಮಾಕಂ ಸಂಸ್ಕೃತ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಮಿ ವಿವೇಕಾನಂದರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನಿಡಿ ಮಾತನಾಡಿದ ಅವರು,ಸಂಸ್ಕೃತ ಕೇವಲ ಮಾತನಾಡುವ ಭಾಷೆ ಮಾತ್ರವಲ್ಲ. ಸನಾತನ ಪರಂಪರೆಯನ್ನು ಹಲವಾರು ಮೌಲಿಕ ಚಿಂತೆಗಳ ಪ್ರವಾಹಗಳು ಇದರಲ್ಲಿ ಅಡಗಿವೆ. ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಸಂಸ್ಕೃತ ನಿರ್ದೇಶನಾಲಯ ಬೆಂಗಳೂರ ಇವರು ಆಯೋಜಿಸಿದ ಆಸ್ಮಾಕಂ ಸಂಸ್ಕೃತ ಕಾರ್ಯಕ್ರಮ ಪಾಠ ಶಾಲೆಗಳಲ್ಲಿ…

Read More