Author: editor.udayarashmi@gmail.com

ಆಲಮಟ್ಟಿ ಎಂಎಚ್ಎಂ ಕಾಲೇಜಿನಲ್ಲಿ ಗಾಂಧೀಜಿ-ಶಾಸ್ತ್ರೀಜಿ ಭಾವಚಿತ್ರಕ್ಕೆ ಪುಷ್ಪನಮನ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಮಹಾತ್ಮ ಗಾಂಧೀಜಿಯವರ ಜೀವನ ಭಾರತಾಂಬೆಯ ಮಡಿಲಿನಲ್ಲಿ ಒಂದು ರೋಚಕತೆಯಿಂದ ಸಾಗಿದೆ. ದೇಶದ ಸ್ವಾತಂತ್ರ್ಯಕಾಗಿ ಅವರು ಮೂಡಿಸಿದ ಹೆಜ್ಜೆ ಗುರುತುಗಳು ಅಪ್ರತಿಮವಾಗಿವೆ. ಆ ಸಮಯದಲ್ಲಿ ಪ್ರಚುರಪಡಿಸಿದ ಮೌಲ್ಯಾಧಾರಿತ ಸಂದೇಶಗಳು ಭಾರತೀಯರಿಗೆ ನವ್ಯಾಮೃತ ಕರುಣಿಸಿವೆ ಅಲ್ಲದೇ ಶಾಂತಿ,ನೆಮ್ಮದಿಯ ಸಂಜೀವಿನಿಯಾಗಿ ಕರಾಳತೆಯಿಂದ ನಿರಾಳತೆಯಡೆಗೆ ಅಸಂಖ್ಯಾತ ಜೀವಗಳನ್ನು ಕೊಂಡೊಯ್ದು ಸ್ವಾತಂತ್ರ್ಯದ ದಿವ್ಯಾನುಭೂತಿ ನೀಡಿವೆ ಎಂದು ಪ್ರಾಚಾರ್ಯ ಪ್ರಭುಸ್ವಾಮಿ ಹೇಮಗಿರಿಮಠ ಹೇಳಿದರು.ಇಲ್ಲಿನ ಮಂಜಪ್ಪ ಹಡೇ೯ಕರ ಸ್ಮಾರಕ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗಾಂಧೀಜಿಯವರ ಸತ್ಯಾನ್ಷೇಷಣೆ ಆದರ್ಶಪ್ರಾಯ ಜೀವನ ಇಡೀ ಜಗವೇ ಕಂಡಿದ್ದು ಅವರ ಆತ್ಮಸಾಕ್ಷಿಯ ನಡೆ ನುಡಿಯ ಅಹಿಂಸಾತ್ಮಕ ಚಳುವಳಿ, ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯಲಭಿಸಿದೆ. ವಿಶ್ವ ಕಂಡ ಶ್ರೇಷ್ಠ ಸಂತರಾಗಿರುವ ಗಾಂಧೀಜಿ ಅಪ್ರತಿಮ ಸಹನೆಯುಳ್ಳ ಶಾಂಚಿಧೂತರಾಗಿದ್ದಾರೆ.ದೇಶದ ಸ್ವಾತಂತ್ರ್ಯಕ್ಕೆ ಮಹನೀಯರ ಕೊಡುಗೆ ಅಪಾರವಾಗಿದೆ. ಅವರುಗಳ ತ್ಯಾಗ, ಬಲಿದಾನ ಎಂದೆಂದಿಗೂ ಮರೆಯಲಾಗದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ, ಕವಿ ಪ್ರಕಾಶನ ಮತ್ತು ಚಿತ್ತಾರ ಕಲಾ ಬಳಗ ಆಶ್ರಯದಲ್ಲಿ ಇದೇ ಭಾನುವಾರ, ಅಕ್ಟೋಬರ್ 6 ರಂದು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿರುವ “ಜನಕಲಾ ಸಾಂಸ್ಕೃತಿಕ ಮೇಳ”ಕ್ಕೆ ಪರಿಶಿಷ್ಡ ಜಾತಿ ಮತ್ತು ಪರಿಶಿಷ್ಟ‌ ಪಂಗಡಗಳ ನೌಕರರ ಸಮನ್ವಯ ಸಮಿತಿಯು ಬೆಂಬಲ ವ್ಯಕ್ತಪಡಿಸಿದೆ ಎಂದು ಸಮಿತಿಯ ಅಧ್ಯಕ್ಷರಾದ ಬಿ.ಎಚ್. ನಾಡಗಿರಿ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಜಯಪುರ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಹೋರಾಟದ ಹಾಡುಗಳು ರಿಂಗಣಿಸಲಿದ್ದು, ಜೊತೆಗೆ ಕೋಮುವಾದಿ ಹಂತಕರ ಗುಂಡಿಗೆ ಬಲಿಯಾದ ಡಾ. ಎಂ.ಎಂ. ಕಲಬುರ್ಗಿಯವರ ಜೀವನಾಧಾರಿತ ನಾಟಕ ಪ್ರದರ್ಶನಗೊಳ್ಳಲಿದೆ.ದಲಿತ ಚಳುವಳಿಗೆ 50 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ‌ ಈ ಜನಕಲಾ ಮೇಳವನ್ನು ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಸಮನ್ವಯ ಸಮಿತಿಯ ಜಿಲ್ಲಾ ಮತ್ತು ತಾಲೂಕಾ ಪದಾಧಿಕಾರಿಗಳು, ಎಲ್ಲ ಸದಸ್ಯರು ಈ‌ ಕಾರ್ಯಕ್ರಮದಲ್ಲಿ ಭಾವಹಿಸಿ ಯಶಸ್ವಿಗೊಳಿಸಬೇಕು ಎಂದು ಬಿ.ಎಚ್. ನಾಡಗಿರಿ ಅವರು ಕೋರಿದ್ದಾರೆ

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಶ್ರೀ ಅಂಬಾಭವಾನಿ ನವ ತರುಣ ಮಂಡಳಿ ಚವಡಿ ಓಣಿ, ಶ್ರೀ ದುರ್ಗಾ ಪರಮೇಶ್ವರಿ ಮಿತ್ರ ಮಂಡಳಿಭೀರಪ್ಪ ನಗರ, ಶ್ರೀ ಭುವನೇಶ್ವರಿ ಯುವಕ ಮಂಡಳಿ ಕುಂಬಾರ ಓಣಿ ಮತ್ತು ಶ್ರೀ ಅಂಬಾಭವಾನಿ ನವ ತರುಣ ಮಂಡಳಿ ಹೂಗಾರ ಇವರಿಂದ ಸಂಭ್ರಮದ ದೇವಿಯ ಮೆರವಣೆಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.ಕುಂಬಾರ ಓಣಿಯ ದೇವಿಯ ಮೆರವಣೆಗೆಗೆ ಇಂಡಿಯ ಶಾಸಕ ಯಶವಂತರಾಯಗೌಡ ಪಾಟೀಲರು ಚಾಲನೆ ನೀಡಿದರು.ಡೊಳ್ಳು ಕುಣಿತ, ಕೋಲಾಟ, ಲೇಜಿಮ್, ಭಜನೆ,ಗೊಂದಳಿ ಭಜನೆ, ಮೆರವಣೆಗೆಯ ಆಕರ್ಷಣೆಯಾಗಿತ್ತು. ಎಲ್ಲೆಡೆ ಅಂಬಾಭವಾನಿ ಉಧೋ ಉಧೋ ಇಂಡಿಯ ತಾಯಿಗೆ ಉಧೋ ಉಧೋ ಜಯಘೋಷ ಮೊಳಗಿದವು.ಭಕ್ತರು ಕೇಸರಿ ಟೋಪಿ ಧರಿಸಿ ಕೊರಳಲ್ಲಿ ಕೇಸರಿ ಶಲ್ಯ ಹಾಕಿಕೊಂಡಿದ್ದರು.ಮೆರವಣೆಗೆ ಉದ್ದಕ್ಕೂ ಭಕ್ತರು ತಮ್ಮ ಮನೆಯ ಮುಂದೆ ದೇವಿಯ ಮೆರವಣೆಗೆ ಬಂದಾಗ ನೀರು ಹಾಕಿ ಪೂಜೆ ಸಲ್ಲಿಸುವದು ಸಾಮಾನ್ಯವಾಗಿತ್ತು.ಮೆರವಣೆಗೆಯಲ್ಲಿ ಯುವಪಡೆ ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಆಕರ್ಷಣೆಯಾಗಿತ್ತು.

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ತಾಲೂಕು ೭ ನೇ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್ ೨೧ ರಂದು ಪಟ್ಟಣದ ಶ್ರೀ ಗುರು ಮಳೇಂದ್ರ ಮಠದ ಕಲ್ಯಾಣ ಮಂಟಪದಲ್ಲಿ ಜರುಗಲಿದ್ದರು. ಸಮ್ಮೇಳನದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುತ್ತಿದೆ. ಕಸಾಪ ಗೌರವ ಕಾರ್ಯದರ್ಶಿ ಡಾ.ಸಂಗಣ್ಣ ಎಂ.ಸಿಂಗೆ ಅವರು ಸ್ಮರಣ ಸಂಚಿಕೆಯ ಸಂಪಾದಕರಾಗಿರಲಿದ್ದಾರೆ ಪ್ರಯುಕ್ತ ಸ್ವರಚಿತ ಕವನ ಹಾಗೂ ಲೇಖನಗಳನ್ನು ಕಳುಹಿಸಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ಪ್ರಭು ಫುಲಾರಿ ಮನವಿ ಮಾಡಿದ್ದಾರೆ.ಪಟ್ಟಣದಲ್ಲಿ ಮಾತನಾಡಿದ ಅವರು ೭ ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಹೀಗಾಗಿ ಸ್ಮರಣ ಸಂಚಿಕೆಗೆ ಲೇಖನಗಳು ವಿಶೇಷವಾಗಿ ಅಫಜಲಪುರ ತಾಲೂಕಿನ ಐತಿಹಾಸಿಕ ಹಿನ್ನೆಲೆ, ಸಾಹಿತ್ಯ, ಕೃಷಿ, ನೆಲ-ಜಲ ಸೇರಿ ವಿವಿಧ ಕ್ಷೇತ್ರಗಳ ಕುರಿತಾಗಿರಬೇಕು ಮತ್ತು ಎಲ್ಲಾ ಲೇಖನಗಳು ಮತ್ತು ಕವನಗಳನ್ನು ಕಡ್ಡಾಯವಾಗಿ ನುಡಿ ತಂತ್ರಾಂಶದಲ್ಲಿ ಸಿಮೀತ ಪದಗಳಲ್ಲಿ ಬರೆದು afzalpurkasapa@gmail.comಈ ಮೇಲ್ ವಿಳಾಸಕ್ಕೆ ನ. ೫ ರ ಒಳಗಾಗಿ ಕಳುಹಿಸಬೇಕು ಎಂದು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ೯೯೦೦೭೯೫೬೪೪, ೭೦೨೨೭೮೩೬೪೩, ೯೯೭೨೬೫೯೦೬೯,…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಭಾರತವನ್ನು ಬ್ರೀಟಿಷರ ದಾಸ್ಯದಿಂದ ಬಿಡಿಸಲು ಶಾಂತಿ ಮಾರ್ಗವನ್ನು ಆರಿಸಿಕೊಂಡ ಗಾಂಧಿಜೀ ಶಾಂತಿಯ ಸಂಕೇತವಾದರೆ, ಭಾರತವನ್ನು ಸಮರ್ಥವಾಗಿ ಮುನ್ನಡೆಸಲು ಪ್ರಾಮಾಣಿಕತೆಯ ಮಾರ್ಗ ಆರಿಸಿಕೊಂಡ ಲಾಲ್ ಬಹಾದ್ದೂರ ಶಾಸ್ತ್ರೀಜೀ ಅವರು ಪ್ರೀತಿಯ ಸಂಕೇತವಾಗಿದ್ದಾರೆ ಎಂದು ಜ್ಞಾನಭಾರತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಪಾಟೀಲ್ ಸೊನ್ನ ಹೇಳಿದರು.ಅವರು ತಾಲೂಕಿನ ತಾಲೂಕಿನ ಮಲ್ಲಾಬಾದ ಗ್ರಾಮದ ಜ್ಞಾನ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಗಾಂಧಿಜೀ, ಲಾಲ್ ಬಹಾದ್ದೂರ ಶಾಸ್ತ್ರೀಜೀ ಜಯಂತಿ ಹಾಗೂ ನಿವೃತ್ತ ಶಿಕ್ಷಕ ದೇವಣ್ಣ ಕಿರಸಾವಳಗಿ ಅವರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಗಾಂಧಿಜೀ, ಶಾಸ್ತ್ರೀಜೀ ಅವರ ಆದರ್ಶಗಳನ್ನು ಪಾಲನೆ ಮಾಡಬೇಕು ಎಂದು ಕರೆ ನೀಡಿದರು.ಶಿಕ್ಷಕಿ ಅರ್ಚನಾ ಜೈನ್ ಉದ್ಘಾಟಿಸಿ ಮಾತನಾಡುತ್ತಾ ಶಿಕ್ಷಕ ವೃತ್ತಿಯು ಬಹಳ ಶ್ರೇಷ್ಠವಾದ ವೃತ್ತಿಯಾಗಿದೆ. ಇಂತಹ ಶ್ರೇಷ್ಠ ವೃತ್ತಿಯನ್ನು ಮಾಡಿ ನಿವೃತ್ತರಾದ ದೇವಣ್ಣ ಕಿರಸಾವಳಗಿ ಅವರ ಕೈ ಕೆಳಗೆ ನಾನು ಕೆಲಸ ಮಾಡಿದ್ದು ನನಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.ಪ್ರಾಚಾರ್ಯ ಡಾ. ಸಂಗಣ್ಣ ಸಿಂಗೆ ಪ್ರಾಸ್ತಾವಿಕವಾಗಿ…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಇಲ್ಲಿನ ಗ್ರಾಮ ಪಂಚಾಯತಿ ಆಶ್ರಯದಲ್ಲಿ ಮಹಾತ್ಮಾ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದುರ ಶಾಸ್ತಿç ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಮಹಾತ್ಮಾ ಗಾಂಧಿಜಿ ಹಾಗೂ ಲಾಲ್ ಬಹಾದ್ದುರ ಶಾಸ್ತಿçಯವರ ಭಾವ ಚಿತ್ರಗಳಿಗೆ ಪೂಜೆ ಸಲ್ಲಿಸುವ ಮೂಲಕ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಗ್ರಾಮದ ಪಂಚಾಯತಿ ಹಾಗೂ ಬಸ್ ನಿಒಲ್ದಾಣದ ಆವರಣವನ್ನು ಕಸ ಗುಡಿಸುವ ಮೂಲಕ “ನನ್ನ ನಡಿಗೆ ಸ್ವಚ್ಛತೆಯ ಕಡೆಗೆ” ಘೋಷವಾಕ್ಯದ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆಗೊಳಿಸಲಾಯಿತು.ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಾಲಾ ಆಶೋಕ ಮೋಟಗಿ, ಉಪಾಧ್ಯಕ್ಷೆ ಪ್ರೇಮಾ ಪ್ರಭು ಗೋವಿಂದಗೋಳ, ಗ್ರಾ,ಪಂ. ಅಭಿವೃದ್ದಿ ಅಧಿಕಾರಿ ಶಿವಾನಂದ ಬಿರಾದರ, ಮಾಜಿ ಅಧ್ಯಕ್ಷ ಆನಂದ ಕವಟಿ, ಪ್ರಭು ಮುಧೋಳ, ಅಶೋಕ ಮೋಟಗಿ, ನಾಗಪ್ಪಾ ಆಲಕನೂರ, ಹಾಗೂ ಸಿಬ್ಬಂದಿ ಸಿಆರ್‌ಸಿ ಶ್ರೀಮತಿ ದ್ರಾಕ್ಷಾಯಿಣಿ ಮಂಡಿ, ಎಸ್.ವೈ. ಬಿರಾದರ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಹಲವಾರು ಜನ ಪಾಲ್ಗೊಂಡಿದ್ದರು.ಇದೇ ಸಂದರ್ಭದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಕ್ವಿಜ್ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ‌: ಉಪನಿರ್ದೇಶಕರ ಕಛೇರಿ (ಆಡಳಿತ) ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಇವರ ಆಶ್ರಯದಲ್ಲಿ ನಡೆದ ವಿಜಯಪುರ ಜಿಲ್ಲೆ ಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ೨೦೨೪-೨೫ ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಗೀತಾಂಜಲಿ ಮಾದರಿ ಶಾಲೆಯ ವಿದ್ಯಾರ್ಥಿ ಓಂ ಶಶಿಕಾಂತ ಹೊನ್ನಕಾಂಬಳೆ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾನೆ.ಈ ಪ್ರಶಸ್ತಿಯನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಎಸ್.ಲಾಳಸೇರಿ ಅವರು ವಿತರಣೆ ಮಾಡಿದರು.ಪ್ರಶಸ್ತಿಯನ್ನು ಪಡೆದ ವಿದ್ಯಾರ್ಥಿಯನ್ನು ಶಾಲಾ ಅಧ್ಯಕ್ಷೆ ಶ್ರೀಮತಿ ಮಲ್ಲಮ್ಮ.ಯಾಳವಾರ, ಶಾಲಾ ನಿರ್ದೇಶಕ ಶಿವಾನಂದ ಯಾಳವಾರ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ.ಸುನಂದಾ.ಕೊಂಡಗುಳಿ, ದೈಹಿಕ ಶಿಕ್ಷಕ ಇಸ್ಮಯಿಲ, ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿಯವರು ವಿದ್ಯಾರ್ಥಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿರುವ ಅಕ್ರಮ ನಳಗಳನ್ನು ಸಕ್ರಮಗೊಳಿಸಲು ಸಾರ್ವಜನಿಕರಿಗೆ ೧ತಿಂಗಳ ಕಾಲಾವಕಾಶ ನೀಡಲಾಗುವುದು. ಸಾರ್ವಜನಿಕರು ಅಕ್ರಮ ನಳಗಳನ್ನು ಸಕ್ರಮಗೊಳಿಸಿಕೊಳ್ಳಬೇಕು ಎಂದು ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು.ಪಟ್ಟಣದ ಪುರಸಭೆಯ ಸಭಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರು ಅಕ್ರಮವಾಗಿ ನಳಗಳನ್ನು ಮಾಡಿಕೊಂಡಿದ್ದಾರೆ ಅಂತಹವರು ಪುರಸಭೆಗೆ ಬಂದು ೩೦೦೦ರೂ. ಹಣವನ್ನು ಭರಣ ಮಾಡಿ ಸಕ್ರಮಗೊಳಿಸಿಕೊಳ್ಳಬೇಕು ಒಂದು ವೇಳೆ ಮಾಡಿಕೊಳ್ಳದೇ ಹೋದರೆ ಅಂತಹವರ ಆಸ್ತಿಯ ಮೇಲೆ ಬೋಜ ಏರಿಸಲಾಗುವುದು. ರಿ.ಸ.ನಂ ೪೭೩ ಮತ್ತು ೪೭೪ರ ಆಶ್ರಯ ವಸತಿ ಯೋಜನೆಯ ಹಂಚಿಕೆಯಾದ ಮನೆಗಳಿಗೆ ಕೆಲಸದ ಆದೇಶ ನೀಡಲಾಗಿದೆ. ೧೦ಸಾವಿರ ಮೇಲ್ಪಟ್ಟು ಇರುವ ಬಿಲ್‌ಗಾಗಿ ೧೧ಜನರ ಉಪಸಮಿತಿಯನ್ನು ಸ್ಥಾಪನೆ ಮಾಡಿ ಅವರ ಸಮ್ಮುಖದಲ್ಲಿಯೇ ಪಾಸ ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದರು.ಪಟ್ಟಣದಲ್ಲಿರುವ ಎನ್‌ಎ ಲೇಔಟ್ ಮಾಲೀಕರು ಕಡ್ಡಾಯವಾಗಿ ಉದ್ಯಾನವನ ಮತ್ತು ನಾಗರಿಕ ಸೌಲಭ್ಯ ಜಾಗಗಳಿಗೆ ಕಂಪೌಂಡ್ ನಿರ್ಮಿಸಿ ಕೊಡಬೇಕೆಂದು ನೋಟಿಸ್ ನೀಡಲು ಪ್ರಾರಂಭಿಸಲಾಗಿದೆ. ಪುರಸಭೆಯ ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಲು ಸಹಕಾರ, ಸಹಾಯ ನೀಡಿದರೆ ಅವರು ತಿಳಿಸಿದವರ ಹೆಸರನ್ನು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಲಿಂಗಾಯತ ನೌಕರರ ಸಂಘದ ಸ್ಥಾಪನೆಯ ದ್ಯೇಯ ಉದ್ದೇಶಗಳನ್ನು ಹಾಗೂ ಬಸವ ತತ್ವವನ್ನು ಒಪ್ಪಿಕೊಂಡು ಬಂದವರೆಲ್ಲ ಲಿಂಗಾಯತರು. ಈ ಸಂಘವು ಯಾವುದೇ ರಾಜಕೀಯ, ಬೇರೆ ಸಂಘಗಳ ಪರ ಹಾಗೂ ವಿರೋಧಿ ಸಂಘವಲ್ಲ ಎಂದು ಲಿಂ.ನೌ.ಸಂಘದ ಸಂಸ್ಥಾಪಕ ಅಧ್ಯಕ್ಷ ಶೀವರಾಜ ಕಪಲಾಪುರೆ ಹೇಳಿದರು.ಪಟ್ಟಣದ ಬಸವಮಂಟಪದಲ್ಲಿ ಹಮ್ಮಿಕೊಂಡ ಲಿಂಗಾಯತ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಜಿಲ್ಲಾ ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘದ ಚಟುವಟಿಕೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು. ಸಂಘವನ್ನು ಕಟ್ಟಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಸಹಭಾಗಿತ್ವದಿಂದ ಕೂಡಿ ದುಡಿಯಬೇಕು. ಇದರ ಯಶಸ್ವಿಗಾಗಿ ಎಲ್ಲರೂ ಶ್ರಮಿಸೋಣ ಎಂದರು.ಈ ವೇಳೆ ಸರಕಾರಿ ನೌಕರರ ಲಿಂಗಾಯತ ಸಂಘ ವಿಜಯಪುರ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಸಿಂದಗಿ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಮಾದರಿಯ ಪ್ರಾಥಮಿಕ ಶಾಲೆಯ ಪದನ್ನೋತಿ ಮುಖ್ಯಗುರು ಶರಣಬಸವ ಲಂಗೋಟಿ, ಹುಣಶ್ಯಾಳ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಆರ್.ಆರ್. ನಿಂಬಾಳಕರ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಹಾಗೂ ಸುಧಾಕರ ಬಿರಾದಾರ ಅವರನ್ನು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಹಾಗೂ ಕಲಕೇರಿಯ ಎ.ಕೆ.ಸಿರಸಗಿ ಪದವಿ ಪೂರ್ವ ಕಾಲೇಜು ಇವುಗಳ ಸಹಯೋಗದಲ್ಲಿ ಜರುಗಿದ ೨೦೨೪-೨೫ ನೇ ಸಾಲಿನ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಕುಸ್ತಿ ಸ್ಪರ್ಧೆಯಲ್ಲಿ ಸಿಂದಗಿಯ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಸಾಧನೆಗೈದಿದ್ದಾರೆ. ೭೯ ಕೆಜಿ ವಿಭಾಗದ ಫ್ರೀ ಸ್ಟೆöÊಲ್ ಕುಸ್ತಿಯಲ್ಲಿ ಯಲ್ಲಾಲಿಂಗ ಪೂಜಾರಿ ೬೮ ಕೆಜಿ ವಿಭಾಗದ ಕುಸ್ತಿಯಲ್ಲಿ ಜ್ಯೋತಿ ನಾಯಕ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಬಂದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ೭೭ ಕೆಜಿಯ ಗ್ರೀಕೋ ರೋಮನ ಕುಸ್ತಿಯಲ್ಲಿ ವಿನಯ ವಿಶ್ವಕರ್ಮ ದ್ವಿತೀಯ ಸ್ಥಾನ, ೬೦ ಕೆಜಿಯ ಫ್ರೀ ಸ್ಟೆöÊಲ್ ವಿಭಾಗದಲ್ಲಿ ಅರ್ಪಿತಾ ಅಂಕಲಗಿ, ೬೩ ಕೆಜಿಯ ವಿಭಾಗದಲ್ಲಿ ಅಮೋಗಿ ಇಬ್ರಾಹಿಂಪೂರ ದ್ವೀತಿಯ, ೪೦ ಕೆಜಿ ವಿಭಾಗದಲ್ಲಿ ಯಶೋಧಾ ಗುಡಿಮನಿ ತೃತೀಯ ಸ್ಥಾನ, ೫೦ ಕೆಜಿ ವಿಭಾಗದಲ್ಲಿ…

Read More